Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬದಲಾದ ಕಾಲಘಟ್ಟ ದಲ್ಲಿ ವಿದ್ಯಾರ್ಥಿಗಳು ಹೊಸತನದ ಕಲಿಕೆಯ ಸಾಧ್ಯತೆಗಳನ್ನು ಇರುವ ಅವಕಾಶಗಳಲ್ಲಿಯೇ ಸಂಪೂರ್ಣವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಬೇಕು. ನಮ್ಮ ವಿದ್ಯಾರ್ಥಿಗಳು ಕಲಿಯುವ ಯಾವುದೇ ಹೊಸ ಅವಕಾಶಗಳಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಈ ಆನ್ಲೈನ್ ತರಗತಿಗಳನ್ನು ನಾವು ಪ್ರಾರಂಭಿಸುತ್ತಿದ್ದೇವೆ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಷನ್ನಿನ ಅಧ್ಯಕ್ಷ ಡಾ. ಕಾಶೀನಾಥ್ ಪೈ ಅವರು ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಆನ್ಲೈನ್ ತರಗತಿಗಳ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ರಸಾಯನ ಶಾಸ್ತ್ರ ಉಪನ್ಯಾಸಕರಾದ ಆರ್.ಎನ್ ರೇವಣ್ಕರ್ ಪಾಠವನ್ನು ಆರಂಭಿಸುವುದರ ಮೂಲಕ ತರಗತಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ್ಯದರ್ಶಿ ಎನ್ ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಮ್ ಸಿ ಉಪಸ್ಥಿತರಿದ್ದರು. ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರ್ವಹಿಸಿದರು. ಹಿಂದಿ ಉಪನ್ಯಾಸಕ…

Read More

ಕುಂದಾಪುರ: ಐದನೇ ತರಗತಿಯ ತನಕದ ವಿಧ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಕ್ಲಾಸುಗಳನ್ನು ರದ್ದು ಮಾಡಿರುವ ರಾಜ್ಯದ ಯಡಿಯೂರಪ್ಪ ಸರ್ಕಾರದ ಕ್ರಮ ಸ್ವಾಗತಾರ್ಹ. ಹಾಗೆಯೇ ಅದರ ಮುಂದುವರಿಕೆಯಾಗಿ ಪಿಯುಸಿಯ ತನಕವೂ ಈ ಆನ್‌ಲೈನ್ ಕ್ಲಾಸುಗಳನ್ನು ರದ್ದು ಪಡಿಸುವ ಕುರಿತು ಸರ್ಕಾರ ತೀರ್ಮಾನಕ್ಕೆ ಬರಬೇಕೆಂದು ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಉಸ್ತುವಾರಿ ಕೆ. ಚಂದ್ರಶೇಖರ ಶೆಟ್ಟಿ ಆಗ್ರಹಿಸಿದ್ದಾರೆ. ಈ ನಾಡಿನ ಜನತೆ ಮೋದಿ ಸರ್ಕಾರದ ಅವೈಜ್ಞಾನಿಕವಾದ ನೋಟು ನಿಷೇಧ ಮತ್ತು ಇದೀಗ ಪೂರ್ವತಯಾರಿ ಇಲ್ಲದ ಲಾಕ್‌ಡೌನ್ ನಿಂದಾಗಿ ಕೆಲಸವಿಲ್ಲದೆ, ಆದಾಯವಿಲ್ಲದೆ ಆರ್ಥಿಕವಾಗಿ ಸಂಪೂರ್ಣವಾಗಿ ಕಂಗೆಟ್ಟಿದ್ದಾರೆ. ಇಂತಹ ಸಮಯದಲ್ಲಿ ಆನ್‌ಲೈನ್ ಶಿಕ್ಷಣದ ಹೆಸರಿನಲ್ಲಿ ಮಕ್ಕಳಿಗೆ ಕಂಪ್ಯೂಟರ್/ ಲ್ಯಾಪ್‌ಟಾಪ್, ಆಂಡ್ರಾಯ್ಡ್ ಮೊಬೈಲ್ ಕೊಡಿಸಲು ಆ ಹೆತ್ತವರಿಗೆ ಖಂಡೀತವಾಗಿಯೂ ಸಾಧ್ಯವಿಲ್ಲ. ಒಂದು ವೇಳೆ ಅವುಗಳನ್ನು ಕೊಡಿಸಿದರೂ ರಾಜ್ಯದ ಬಹುಭಾಗ ಗ್ರಾಮೀಣ ಪ್ರದೇಶವಾಗಿರುವ ಕಾರಣಕ್ಕಾಗಿ ಅಲ್ಲಿ ಇಂಟರ್‌ನೆಟ್ ಸೇವೆ ಇರಲಾರದು. ಇಂತಹ ಅವ್ಯವಸ್ಥೆಯಲ್ಲಿ ಆನ್‌ಲೈನ್ ಕ್ಲಾಸ್ ಗಳನ್ನು ಆರಂಭಿಸಿದರೆ ಖಂಡಿತವಾಗಿಯೂ ಗ್ರಾಮೀಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜೂನ್ 25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 14,034 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4,014 ಬಾಲಕರು ಮತ್ತು 3,295 ಬಾಲಕಿಯರು, ಇಂಗ್ಲೀಷ್ ಮಾಧ್ಯಮದಲ್ಲಿ 3,321 ಬಾಲಕರು ಮತ್ತು 3,404 ಬಾಲಕಿಯರು ಸೇರಿದಂತೆ ಒಟ್ಟು 7,335 ಬಾಲಕರು ಮತ್ತು 6,699 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷಾ ಕೆಂದ್ರ ಬದಲಾವಣೆ ಮಾಡಿಕೊಂಡು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು 507 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡು 82 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಸಿದ್ದತೆ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ 12 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಸುರಕ್ಷತಾ ಕ್ರಮ: ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸಂಪೂಣ್ ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ 2 ಮಸ್ಕ್’ಗಳನ್ನು ಉಚಿತವಾಗಿ ವಿತರಿಸಲಾಗಿದ್ದು, ಡಾ.ಜಿ. ಶಂಕರ್ ಟ್ರಸ್ಟ್ ವತಿಯಿಂದ 15000 ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.15ರ ಸೋಮವಾರ ಒಟ್ಟು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಈ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರ ಹಿಂದಿರುಗಿದವರಾಗಿದ್ದು, 29 ವರ್ಷದ ಮಹಿಳೆಗೆ ಪಿ-5451 ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಈವರೆಗೆ 819 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1028 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 819 ಮಂದಿ ಬಿಡುಗಡೆಯಾಗಿದ್ದು, 208 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಎಪಿಎಂಸಿ: ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಶೆಟ್ಟಿ ಆಯ್ಕೆ – https://kundapraa.com/?p=38639 . ► ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ. ಜಗದೀಶ್ – https://kundapraa.com/?p=38630 .

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ನೂತನ ಅಧ್ಯಕ್ಷರಾಗಿ ವೆಂಕಟ ಪೂಜಾರಿ ಸಸಿಹಿತ್ಲು, ಉಪಾಧ್ಯಕ್ಷರಾಗಿ ಹೆಚ್. ವಸಂತ ಕುಮಾರ್ ಶೆಟ್ಟಿ ಕೆದೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂ.15ರಂದು ನಡೆದ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ಒಟ್ಟು 16 ಸದಸ್ಯ ಬಲವನ್ನು ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಈಗ 10 ಬಿಜೆಪಿ, 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಸರ್ಕಾರ ಇತ್ತೀಚೆಗೆ ಮೂರು ಜನ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಇಂದು ನಡೆದ  ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಸಾಧಿಸಿದ್ದಾರೆ. ಈ ಹಿಂದೆ ಎಪಿಎಂಸಿ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. ಕುಂದಾಪುರ ತಹಶೀಲ್ದಾರ್ ಕೆ. ಆನಂದಪ್ಪ ನಾಯ್ಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, …

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮನುಷ್ಯನ ಶರೀರ ದೃಢವಾಗಿದ್ದರೆ ರೋಗ ಅಷ್ಟಾಗಿ ಬಾಧಿಸದು. ಭಾರತೀಯ ಪರಂಪರೆಯ ಅಯುರ್ವೇದ ಪದ್ಧತಿಯಲ್ಲಿ ಅಂತಹ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಮತ್ತು ಔಷಧಿಗಳು ರೂಢಿಯ್ಲವೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಆಲೂರಿನ ಚಿತ್ರಕೂಟ ಮತ್ತು ತೇಜಸ್ವೇದ ಸಂಸ್ಥೆಗಳು ಹೊರತಂದಿರುವ ’ರಕ್ಷಾ ಪಂಚಕ’ ಕಿಟ್ ಬಿಡುಗಡೆಗೊಳಿಸಿ ಮಾತನಾಡಿದರು. ಮನುಷ್ಯರನ್ನು ಬಾಧಿಸುವ ಕಾಯಿಲೆಗಳು ಕೊರೊನಾದೊಂದಿಗೆ ಅಂತ್ಯವಾಗುವುದಿಲ್ಲ. ಹೊಸ ಕಾಯಿಲೆಗಳು ಬರುತ್ತಲೇ ಇರುತ್ತವೆ ಮತ್ತು ಜಗತ್ತನ್ನು ಬದಲಾಯಿಸುತ್ತ ಹೋಗುತ್ತವೆ. ಅದಕ್ಕೆ ಮನುಷ್ಯ ಹೊಂದಿಕೊಳ್ಳಬೇಕಾಗುತ್ತದೆ. ಭಾರತೀಯ ಔಷಧ ಪದ್ಧತಿ ರೋಗ ಬಂದ ಮೇಲೆ ಅದನ್ನು ತಡೆಯುವ ಬದಲು ಅದು ಬರದಂತೆ ಪ್ರತಿರೋಧಿಸುವುದಕ್ಕೆ ಆದ್ಯತೆ ನೀಡುತ್ತದೆ. ಅದು ಆರೋಗ್ಯಪೂರ್ಣ ಆಹಾರ ವಿಹಾರಗಳಿಗೆ ಆದ್ಯತೆ ನೀಡಿ ಸ್ವಸ್ಥ ಜೀವನ ವಿಧಾನವನ್ನು ಪ್ರತಿಪಾದಿಸುತ್ತದೆ. ಈ ಕಾಲದಲ್ಲಿ ಭಾರತೀಯರು ತಮ್ಮ ಪರಂಪರೆಗೆ ಮರಳಬೇಕಾಗುತ್ತದೆ ಎಂದು ಅವರು ಹೇಳಿದರು. ಕೇದಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುವುದು, ಪ್ರತೀ ವಿದ್ಯಾರ್ಥಿಗಾಗಿ ಶಿಕ್ಷಣ ಇಲಾಖೆಯಿಂದ ಸ್ಯಾನಿಟೈಸ್ ಗಳ ಪೂರೈಕೆಯಾಗಿದ್ದು, ಪ್ರತೀ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್ ಗಳನ್ನು ವಿತರಿಸಲಾಗುತ್ತಿದೆ. ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರದೊಂದಿಗೆ ಪ್ರವೇಶ ನೀಡಲು, ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲು ಕ್ರಮ ಕೈಗೊಂಡಿದ್ದು, 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.14ರ ಭಾನುವಾರ ಒಟ್ಟು 21 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರ, ತಮಿಳುನಾಡು, ಉತ್ತರಪ್ರದೇಶದಿಂದ ಹಿಂದಿರುಗಿದವರಾಗಿದ್ದು, ಓರ್ವ ಸ್ಥಳೀಯರ ಸಂಪರ್ಕ ಪತ್ತೆ ಹೆಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1026 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 789 ಮಂದಿ ಬಿಡುಗಡೆಯಾಗಿದ್ದು, 236 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಜೂನ್ 13ರಂದು ನಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಕರ್ಕುಂಜೆ ಗ್ರಾಮದ ಶೆಟ್ರಕಟ್ಟೆ ನಿವಾಸಿ ಲಕ್ಷ್ಮಣ ಪೂಜಾರಿ (38) ಮೃತ ಪಟ್ಟ ದುರ್ದೈವಿ. ಬಾವಿ ನಿರ್ಮಾಣ ಹಂತದಲ್ಲಿದ್ದು ರಿಂಗ್ ಇಳಿಸುವ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭ ಆಯಾ ತಪ್ಪಿ ಕಾಲು ಜಾರಿ ಲಕ್ಷ್ಮಣ ಪೂಜಾರಿ ಬಾವಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿ ಶಾಮಕದಳದ ಸಿಬ್ಬಂದಿಗಳು, ಗಂಗೊಳ್ಳಿ ಠಾಣೆಯ ಪೊಲೀಸರು, ಗಂಗೊಳ್ಳಿ 24*7 ಅಂಬ್ಯುಲೆನ್ಸ್, ಸ್ವಯಂಸೇವಕ ತಂಡದವರ ಸಹಕಾರದಿಂದ ಶವವನ್ನು ಮೇಲೆತ್ತಲಾಯಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 . ► ಉಡುಪಿ: ಶನಿವಾರ 15 ಕೊರೋನಾ ಪಾಸಿಟಿವ್ ದೃಢ. ಒಟ್ಟು 720 ಮಂದಿ ಡಿಸ್ಚಾರ್ಜ್ – https://kundapraa.com/?p=38608 .…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.13ರ ಶನಿವಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಹಾರಾಷ್ಟ್ರ ಮೂಲದ್ದಾಗಿವೆ.  ರಾಜ್ಯದ ಬುಲೆಟಿನಿನಲ್ಲಿ 14 ಪಾಸಿಟಿವ್ ಬಂದಿರುವ ಬಗ್ಗೆ ತಿಳಿಸಲಾಗಿದೆ. ಆದರೆ ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಒಟ್ಟು 15 ಪ್ರಕರಣಗಳು ವರದಿಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1006 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 720 ಮಂದಿ ಬಿಡುಗಡೆಯಾಗಿದ್ದು, 285 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 .

Read More