Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್ ಅವರಿಗೆ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್: ಡಾ. ಮಹೇಂದ್ರ ಭಟ್ ಅವರು ಮೂಲತಃ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆಯವರಾಗಿದ್ದು, ಬಾಲ್ಯದಿಂದಲೇ ಅಜ್ಜನಾದ ದಿ. ವಾಸುದೇವ ಭಟ್ ಅವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದ್ದರು. ಪಿಯುಸಿ ತನಕದ ಶಿಕ್ಷಣವನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೂ, ಪದವಿ ಶಿಕ್ಷಣವನ್ನು ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಯೂ, ಎಂಬಿಎ ಪದವಿಯನ್ನು ಸಿಕ್ಕಿಂ ಮಣಿಪಾಲ್ ಒಪನ್ ಯುನಿವರ್ಸಿಟಿಯಲ್ಲಿಯೂ ಹಾಗೂ ಬೆಂಗಳೂರಿನ ಇಂದಿಯಾ ಪ್ರಿಯದರ್ಶಿನಿ ಕಾಲೇಜ್ ಆಫ್ ಲಾ ಇಲ್ಲಿ ಎಲ್‌ಎಲ್‌ಬಿ ಪದವಿಯನ್ನು ಪಡೆದಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಆಸಕ್ತರಾಗಿದ್ದ ಮಹೇಂದ್ರ ಭಟ್ ಅವರು ಜ್ಯೋತಿಷ್ಯದಲ್ಲಿ ಬಿ.ಎ ಪದವಿ ಪಡೆದಿರುವುದಲ್ಲದೇ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದ ಕುರಿತಾಗಿಯೂ ಅಧ್ಯಯನ ನಡೆಸಿದ್ದಾರೆ. ಲಾಯಲ್ ಅಕಾಡೆಮಿ ಆಫ್ ಗ್ಲೋಬಲ್ ಪೀಸ್ ಸಂಸ್ಥೆಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಉತ್ತಮ ನಾಯಕರನ್ನು ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿಯ ಬಗೆಗೆ ಹಲವು ಯೋಜನೆಗಳಿದ್ದು, ನನ್ನ ಅಧಿಕಾರಾವಧಿಯೊಳಗೆ ಎಲ್ಲವನ್ನು ಅನುಷ್ಠಾನಗೊಳಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಎಸ್. ರಾಜು ಪೂಜಾರಿ ಹಾಗೂ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಡಾ. ಮಹೇಂದ್ರ ಭಟ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ಮಣಿಕಂಠ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಪ್ರಗತಿ ಕ್ರೆಡಿಟ್ ಕೋ-ಆಪರೇಟಿವ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತುಳುನಾಡ ಪರಂಪರೆಯ ವೀರ ಪುರುಷರಾದ ಕೋಟಿ ಚೆನ್ನಯ್ಯರು ತಮ್ಮ ಮೌಲ್ಯಯತ ಬದುಕಿನ ಮೂಲಕ ಸಮಾಜಕ್ಕೆ ಸಂದೇಶವನ್ನು ನೀಡಿದ ವೀರ ಪುರುಷರು. ಅವರ ಕೊನೆಯ ಗರಡಿ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದ್ದು ಎಲ್ಲರೂ ಭಕ್ತಿಪೂರ್ವಕವಾಗಿ ಕೈಜೋಡಿಸಬೇಕಿದೆ ಎಂದು ವೇದಮೂರ್ತಿ ಕೇಂಜ ಶ್ರೀಧರ ತಂತ್ರಿ ಹೇಳಿದರು. ಭಾನುವಾರ ಅವರು ಜೀರ್ಣೋದ್ಧಾರಗೊಳ್ಳುತ್ತಿರುವ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಶೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ದಿನ ನಿಗದಿಪಡಿಸಿ ಬಳಿಕ ಮಾತನಾಡಿದರು. 2020ರ ಎಪ್ರಿಲ್ 5 ರಿಂದ 12ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಎ.5ರಂದು ವಿಗ್ರಹ ತರುವುದು, ಎ.6ರಂದು ಆಚಾರಿ ಸೇವೆ, ವಾಸ್ತು, ಹೊರೆಕಾಣಿಕೆ, ಎ.7ರಂದು ಶಯ್ಯಾಧಿವಾಸ, ಎ.8ರಂದು ಪ್ರತಿಷ್ಠೆ, ಎ.9ರಂದು ಬ್ರಹ್ಮಕಲಶೋತ್ಸವ, ಎ.10ರಂದು ಅಗೆಲು ಸೇವೆ, ಎ.11 ಗೆಂಡ ಸೇವೆ, ಪಂಜುರ್ಲಿ ಕೋಲ, ಎ.12ರಂದು ಬ್ರಹ್ಮಬೈದರ್ಕಳ ಕೋಲ ನಡೆಯುವ ಬಗ್ಗೆ ದಿನ ನಿಗದಿಪಡಿಸಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಶಾಸಕ ಕೆ. ಗೋಪಾಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಹೆದ್ದಾರಿ ಜಾಗೃತ ಸಮಿತಿ ನೇತೃತ್ವದಲ್ಲಿ ಶನಿವಾರ ಕುಂದಾಪುರದ ನಾಗರಿಕರು ಸಭೆ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವ್ಯವಸ್ಥೆಯ ಆಗರವಾಗಿರುವ ನಗ್ಗೆ ಅಸಮಾಧಾನ ವ್ಯಕ್ತಪಡಿದ್ದಲ್ಲದೇ, ಸಂಘಟಿತ ಹೋರಾಟದ ಮೂಲಕ ಜನಪ್ರತಿನಿಧಿಗಳು, ಗುತ್ತಿಗೆದಾರರು ಹಾಗೂ ಸರಕಾರದ ಗಮನ ಸೆಳೆಯುವುದು, ಕಾಮಗಾರಿಯ ಅವ್ಯವಸ್ಥೆ ಹಾಗೂ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. Video ಸಭೆಯಲ್ಲಿ ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡ ಕಳೆದ 10 ವರ್ಷಗಳಲ್ಲಿ ಓರ್ವ ಅಧಿಕಾರಿಯೂ ಈ ಭಾಗಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ. ಸುರತ್ಕಲ್‌ನಿಂದ ಕುಂದಾಪುರದ ತನಕ 76ಕಿ.ಮೀ ಉದ್ದದ ಹೆದ್ದಾರಿ ಚತುಷ್ಪಥ ಕಾಮಗಾರಿ ಶೇ.90ರಷ್ಟು ಮುಗಿದೆದೆ ಎಂದು ಹೇಳುತ್ತಾರೆ ಆದರೆ ಕಾಮಗಾರಿಯ ಸಮರ್ಪಕ ಬ್ಲೂಪ್ರಿಂಟ್ ಯಾರ ಬಳಿಯೂ ಇಲ್ಲ. ಈ ಭಾಗದ ಯಾವೊಬ್ಬ ಜನಪ್ರನಿಧಿಗಳಿಗೂ ಇದರ ಸಮರ್ಪಕ ಮಾಹಿತಿ ಇಲ್ಲ. ರಸ್ತೆ ಮಧ್ಯದಲ್ಲಿ ನೀರು ನಿಲ್ಲುವುದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಚಪ್ಪರಿಕೆ ಪಾಯಪ್ಪ ಶೆಟ್ಟಿ(80) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಬೆಂಗಳೂರಿನ ಮಗನ ಮನೆಯಲ್ಲಿ ಸೋಮವಾರ ನಿಧನರಾದರು. ನಾಗೂರಿನಲ್ಲಿ ದೀರ್ಘಕಾಲ ಹೋಟೆಲ್ ಉದ್ಯಮ ನಡೆಸಿ ಜನಾನುರಾಗಿ ಆಗಿದ್ದ ಅವರು 30ವರ್ಷ ಚಪ್ಪರಿಕೆಯ ಹೊಸಾಡು ಎಂಬಲ್ಲಿನ ಶ್ರೀ ನಂದಿಕೇಶ್ವರ ದೈವಸ್ಥಾನದ ನೇತೃತ್ವ ವಹಿಸಿ, ಅದರ ಜೀರ್ಣೋದ್ಧಾರ ನಡೆಸಿದ್ದರು. ಅವರು ಪತ್ನಿ, ಖ್ಯಾತ ಪತ್ರಕರ್ತ ಹಾಗೂ ಲೇಖಕ ಆಗಿರುವ ಪುತ್ರ ಸತೀಶ ಚಪ್ಪರಿಕೆ ಅವರನ್ನು ಅಗಲಿದ್ದಾರೆ. ಪಾಯಪ್ಪ ಶೆಟ್ಟಿ ಅವರ ಅಪೇಕ್ಷೆಯಂತೆ ದೇಹವನ್ನು ಶಿಕ್ಷಣ ಹಾಗೂ ಸಂಶೋಧನೆಗೆ ಬಳಸಿಕೊಳ್ಳಲು ಬೆಂಗಳೂರು ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಧ್ಯಮ ಕ್ಷೇತ್ರವನ್ನು ವೃತ್ತಿಯಾಗಿ ನೋಡಿದರೆ ಅದು ಓದುಗನ ಋಣದಲ್ಲಿಯೂ ಇಲ್ಲ. ಉದ್ಯಮವಾಗಿ ಪರಿಗಣಿಸಿದರೆ ಅದು ಬಳಕೆದಾರನ ಋಣದಲ್ಲಿಯೂ ಇಲ್ಲ. ಬಂಡವಾಳ ಹೂಡಿ ಲಾಭ ತೆಗೆಯುವ ಮಾಧ್ಯಮ ಕ್ಷೇತ್ರದಲ್ಲಿ ಒಡೆಯ ಮತ್ತು ಓದುಗನ ನಡುವೆ ಪತ್ರಕರ್ತ ದಿಕ್ಕೆಟ್ಟು ನಿಂತಿದ್ದಾನೆ ಎಂದು ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಹೇಳಿದರು. ಅವರು ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ ಕವಲು ದಾರಿಯಲ್ಲಿ ಪತ್ರಕರ್ತ ವಿಷಯದ ಕುರಿತು ಅವರು ಮಾತನಾಡಿದರು. ಜಗತ್ತಿನಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಏಕೈಕ ವಸ್ತು ಪತ್ರಿಕೆ ಮಾತ್ರ. ಆದರೆ ಓದುಗ ಕೊಡುವ ಹಣದಿಂದ ಪತ್ರಿಕೆಯೂ ನಡೆಯುತ್ತಿಲ್ಲ. ಬಂಡವಾಳವಿಲ್ಲದೇ ಏನು ನಡೆಯುವುದೂ ಇಲ್ಲ. ಇಂತಹ ವ್ಯವಹಾರ ಮಾದರಿಯನ್ನು ಬದಲಾವಣೆ ಮಾಡುವವರೆಗೆ ಈ ಮಾಧ್ಯಮ ಕವಲು ದಾರಿಯಲ್ಲಿರುತ್ತದೆ. ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲಿ ಪತ್ರಿಕೆಗಳಿಗೆ ಹತ್ತರಿಂದ ಹದಿನೈದು ರೂಪಾಯಿ ಇದೆ. ಭಾರತದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ತಜ್ನ, ರಾಷ್ಟೀಯ ಶಿಕ್ಷಕ ಪ್ರಸ್ತಿ ಪುರಸ್ಕೃತ, ಯಕ್ಷಗಾನ ಸವ್ಯಸಾಚಿ, ಯಕ್ಷಗಾನ ಕಲಾಕೇಂದ್ರ ಸಂಸ್ಥಾಪಕ ದಿವಂಗತ ಐರೋಡಿ ಸದಾನಂದ ಹೆಬ್ಬಾರರ ಪುಣ್ಯ ಸ್ಮರಣಾರ್ತ ಕಲಾಕೇಂದ್ರವು ಅವರ ಹೆಸರಿನಲ್ಲಿ ಪ್ರತೀ ವರ್ಷವೂ ಸದಾನಂದ ಪ್ರಶಸ್ಥಿಯನ್ನು ನೀಡುತ್ತಾ ಬಂದಿದ್ದು ಶಿಕ್ಷಣ, ಸಮುದಾಯಾಭಿವೃದ್ದಿ, ಸ್ಥಳಿಯಾಡಳಿತ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕಳೆದ ಐದು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ನಿವೃತ್ತ ಉಪನ್ಯಾಸಕರಾದ ಮರವಂತೆಯ ಎಸ್ ಜನಾರ್ದನ ಇವರನ್ನು 2019 ರ ಸದಾನಂದ ಶಶಸ್ಥಿಗೆ ಆಯ್ಕೆ ಮಾಡಲಾಗಿದೆ. ಬೈಂದೂರು ವಲಯದ ಪತ್ರಕರ್ತ ಸಂಘದ ಅಧ್ಯಕ್ಷರಾಗಿರುವ ಮರವಂತೆ ಜನಾರ್ದನರವರು ರಾಜ್ಯದ ಪಂಚಾಯತ್‌ರಾಜ್ ವಿಷಯದಲ್ಲಿ ಪರಿಣತಲ್ಲೊಬ್ಬರು. ದೇಶದ ಯೋಜನಾ ಆಯೋಗ ನಡೆಸಿದ ವಿವಿಧ ಅಧ್ಯಯನ, ಬೋಧನೆ, ತರಬೇತಿ ಮತ್ತು ಸಂವಹನ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತರಬೇತಿದಾರರಾಗಿ ಪಠ್ಯಕ್ರಮ ಮತ್ತು ಪಠ್ಯ ಸಿದ್ದತೆಯಲ್ಲಿ ದುಡಿದಿದ್ದಾರೆ. ಮರವಂತೆಯ ಪಂಚಾಯತ್ನ ಅಧ್ಯಕ್ಷರಾಗಿ,ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆಯ ಸ್ಥಾಪಕರಾಗಿ ಊರಿನ ಆರೋಗ್ಯ, ಶೈಕ್ಷಣಿಕ, ಸಾಮಾಜಿಕ, ಸಾಸ್ಕೃತಿಕ ಅಭಿವೃದ್ದಿಯ ಹರಿಕಾರರಾಗಿದ್ದಾರೆ. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎನ್‌ಸಿಸಿ ಜ್ಯೂನಿಯರ್ ಅಂಡರ್ ಆಫೀಸರ್, ಆಳ್ವಾಸ್ ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿ ವೈಷ್ಣವಿ ಗೋಪಾಲ್ ರಾಜ್ಯಮಟ್ಟದ ಉತ್ತಮ ಎನ್‌ಸಿಸಿ ಕೆಡೆಟ್- ಚಿನ್ನದ ಪದಕವನ್ನು ಪಡೆದಿರುತ್ತಾರೆ. ದೆಹಲಿಯಲ್ಲಿ 2020ರ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಆಯ್ಕೆ ಶಿಬಿರದ ಹಿರಿಯ ವಿಭಾಗದಲ್ಲಿ ಬೆಸ್ಟ್ ಕೆಡೆಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾರೆ. ಮೂಡುಬಿದಿರೆಯಲ್ಲಿ ನಡೆದ ಮೂರು ಹಂತದ ಶಿಬಿರದಲ್ಲಿ ಪ್ರಥಮ ಸ್ಥಾನ ಪಡೆದು, ಬೆಂಗಳೂರಿನ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗಿದ್ದರು. ಈಕೆ ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ಈಕೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಎನ್‌ಸಿಸಿ ಅಧಿಕಾರಿ ಕ್ಯಾ.ಡಾ.ರಾಜೇಶ್ ಆಭಿನಂದಿಸಿದ್ದಾರೆ. ಕುಂದಾಪುರ ತಾಲೂಕು ಗಂಗೊಳ್ಳಿಯವರಾದ ವೈಷ್ಣವಿ ಗೋಪಾಲ್ ಅವರು ಕಲಾವಿದ ಗೋಪಾಲ ಚಂದನ್ ಹಾಗೂ ವೈದ್ಯೆ ಡಾ. ವೀಣಾ ಕಾರಂತ್ ಅವರ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸುಲಭವಾಗಿ ಹಾಗೂ ಕಡಿಮೆ ದರದಲ್ಲಿ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಎಂದು ತಿಳಿಸಿರುವ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ನೂತನ ಅಧಿಕೃತ ದರಪಟ್ಟಿಯನ್ನೂ ಬಿಡುಗಡೆಗೊಳಿಸಿದ್ದಾರೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಿಂದ ನಿಗಧಿಪಡಿಸಿದ ದರಕ್ಕಿಂತ ಹೆಚ್ಚುವರಿ ದರಕ್ಕೆ ಮಾರಾಟ ಮಾಡುವ ಮರಳು ಪರವಾನಿಗೆದಾರರು/ ವಾಹನ ಮಾಲೀಕರ ವಿವರ ಸಾರ್ವಜನಿಕರು ನೀಡಿದ್ದಲ್ಲಿ, ಅಂತಹ ಪರವಾನಿಗೆದಾರರ ಹಾಗೂ ಮರಳು ಸಾಗಾಟ ವಾಹನಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಮರಳು ಪಡೆಯುವವರು ಮರಳಿನ ಸಾಗಾಟ ಪರವಾನಿಗೆಯನ್ನು (MDP) ಸಾಗಾಣಿಕೆದಾರರಿಂದ ಕಡ್ಡಾಯವಾಗಿ ಪಡೆದು ತಮ್ಮ ಬಳಿ ಇಟ್ಟುಕೊಳ್ಳತಕ್ಕದ್ದು. ಇಲ್ಲದಿದ್ದಲ್ಲಿ ಸದರಿ ಮರಳನ್ನು ಅನಧಿಕೃತ ಮರಳು ಎಂದು ಪರಿಗಣಿಸಿ ನಿಯಮಾನುಸಾರವಾಗಿ ಮುಂದಿನ ಕ್ರಮ ಜರುಗಿಸಲಾಗುವುದು. ಜಿಲ್ಲಾ ಮರಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮಾಂತರ ಪ್ರದೇಶದಲ್ಲಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಲೆಗಳ ಅಭಿರುಚಿ, ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ನಾಗೂರಿನಲ್ಲಿ ಬ್ಲಾಸಂ ಸಂಗೀತ ಮತ್ತು ನೃತ್ಯ ಶಾಲೆಯನ್ನು ನಡೆಸಲಾಗುತ್ತಿದೆ. ಅದರ ಆಶ್ರಯದಲ್ಲಿ ಪ್ರತಿ ತಿಂಗಳು ’ಗಾನಯಾನ’ ಎಂಬ ಶಾಸ್ತ್ರೀಯ ಸಂಗೀತ ಕಚೇರಿ ನಡೆಯುತ್ತದೆ ಎಂದು ಕುಸುಮ ಫೌಂಡೇಶನ್ ಅಧ್ಯಕ್ಷ ನಳಿನ್‌ಕುಮಾರ ಶೆಟ್ಟಿ ಹೇಳಿದರು. ನಾಗೂರಿನ ಎಕೆಎಸ್ ಆಡಿಟೋರಿಯಮ್‌ನಲ್ಲಿ ಭಾನುವಾರ ನಡೆದ ಎರಡನೆ ತಿಂಗಳ ಗಾನಯಾನ ಕಾರ್ಯಕ್ರಮದ ಆರಂಭದಲ್ಲಿ ಅವರು ಮಾತನಾಡಿದರು. ಕಚೇರಿಯನ್ನು ಪ್ರತಿ ತಿಂಗಳು ನಡೆಸುವುದರಿಂದ ಸಂಗೀತಾಸಕ್ತರು ಅವುಗಳ ಪ್ರಾಯೋಜಕತ್ವ ವಹಿಸುವ ಮೂಲಕ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ವಿನಂತಿಸಿದರು. ಆ ಬಳಿಕ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಗೀತ ಶಿಕ್ಷಕರಾಗಿರುವ ಬಿಜೂರು ಬವುಳಾಡಿಯ ವಿದ್ವಾನ್ ರಾಘವೇಂದ್ರ ಉಪಾಧ್ಯಾಯರ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ಇಡಗುಂಜಿಯ ಮಾರುತಿ ನಾಯ್ಕ್ ಹಾರ್ಮೋನಿಯಂ ನುಡಿಸಿದರು. ಹೊನ್ನಾವರದ ಗಣಪತಿ ಹೆಗಡೆ ಹೆರಿಕೇರಿ ತಬ್ಲಾ ಸಾಥ್ ನೀಡಿದರು. ಕಲಾವಿದರನ್ನು ಹಾಗೂ ಕಚೇರಿಯನ್ನು…

Read More