Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಮನೆಗಳಲ್ಲಿ ಮಕ್ಕಳಿಗೆ ನೈತಿಕ ಹಾಗೂ ಮೌಲ್ಯಯುತವಾದ ಶಿಕ್ಷಣ ದೊರೆಯುತ್ತಿಲ್ಲ. ಧಾರಾವಾಹಿ, ಟಿವಿಗಳಿಂದ ಸಿಗುವಂತಹ ಸಂದೇಶಗಳು ಉತ್ತಮ ಮೌಲ್ಯಗಳಿಂದ ಕೂಡಿಲ್ಲ. ಬದಲಾದ ಇಂತಹ ಜೀವನ ಕ್ರಮದಿಮದಾಗಿ ಮೌಲ್ಯದಲ್ಲಿ ಕುಸಿತ ಕಾಣುತ್ತಿದೆ. ಮೌಲ್ಯಯುವ ಶಿಕ್ಷಣ ಪಠ್ಯಪುಸ್ತಕದಿಂದ ಹೊರತಾಗಿ ಸಮಾಜದಿಂದಲೂ ದೊರೆಯುತ್ತದೆ ಎಂದು ಹೋಲಿ ರೋಜರಿ ಚರ್ಚ್‌ನ ಧರ್ಮಗುರು ಸ್ಟಾನಿ ತಾವ್ರೋ ಹೇಳಿದರು. ಅವರು ಇಲ್ಲಿನ ಭಂಡಾರ್‌ಕಾರ‍್ಸ್ ಪದವಿ ಹಾಗೂ ಪದವಿಪೂರ್ವ ಕಾಲೇಜು, ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಉಡುಪಿ ಮತ್ತು ಕುಂದೇಶ್ವರ ದೇವಸ್ಥಾನ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೆಜಿನ ವಿಶ್ವಸ್ಥ ಮಂಡಳಿಯ ಸದಸ್ಯ ಕೆ.ಶಾಂತರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಿ.ಎಂ.ಗೊಂಡ, ಸಂಯೋಜಕ ಅರುಣ್ ಕುಮಾರ್ ಉಪಸ್ಥಿತರಿದ್ದರು. ಪ್ರೊ. ರಾಮಚಂದ್ರ ಸ್ವಾಗತಿಸಿದರು. ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಶುಭಕರ್ ಸದ್ಭಾವನಾ ದಿನಾಚರಣೆಯ ಪ್ರಮಾಣವಚನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ದೊಡ್ಡ ಸಂಕಷ್ಟ ತಂದೊಡ್ಡಿದ್ದ ಈ ವರ್ಷದ ಭಾರಿ ಮಳೆಯಿಂದ ಉಂಟಾದ ನೆರೆಯು ಹಲವಾರು ಕುಟುಂಬಗಳನ್ನು ಬೀದಿಗೆ ತಂದು ಲಕ್ಷಾಂತರ ಮಂದಿಯ ಬದುಕನ್ನೇ ಆಪೋಷನ ಮಾಡಿದ್ದು, ಈ ಸಂದರ್ಭದಲ್ಲಿ ತಮ್ಮಿಂದಾದ ಸಹಕಾರ ನೀಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಸಲುವಾಗಿ ಮತ್ತು ದುಃಖದಲ್ಲಿರುವವರ ಕಣ್ಣೀರೊರೆಸುವ ಕೆಲಸದಲ್ಲಿ ಅಳಿಲಸೇವೆ ಮಾಡುವುದಕ್ಕಾಗಿ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿನ ಎನ್.ಎಸ್.ಎಸ್ ಘಟಕಗಳು ಒಟ್ಟಾಗಿ ಕಾರ್ಯೋನ್ಮುಖರಾದರು. ಸ್ವಯಂಸೇವಕರು ತಮ್ಮಿಂದಾದ ಸಹಾಯ ಮಾಡೋಣವೆಂದು ಪಣತೊಟ್ಟಿದ್ದರು. ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಅಗತ್ಯ ವಸ್ತುಗಳನ್ನು ಪೂರೈಸಿದರೆ, ಇನ್ನು ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ನೆರೆಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಿದರು. ಮಂಗಳವಾರ ಸಾಂಕೇತಿಕವಾಗಿ ೨,೦೮,೭೪೩-೦೦ ರೂ. ಮೌಲ್ಯದ ಡಿಮಾಂಡ್ ಡ್ರಾಫ್ಟ್‌ನ್ನು ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಬ್ರಮ್ಮಣ್ಯ ಜೋಶಿಯವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎಡಿಸಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳ ಉಡುಪಿ ಜಿಲ್ಲಾ ಎನ್.ಎಸ್.ಎಸ್ ಅಧಿಕಾರಿ ಸವಿತಾ ಎರ್ಮಾಳ್, ವಿವಿಧ ಕಾಲೇಜುಗಳ ಎನ್.ಎಸ್.ಎಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ ಸಮಸ್ಯೆಗಳನ್ನು ಅರಿಯಬೇಕು ಮತ್ತು ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಬೇಕು ಹಾಗೂ ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಬೇಕು , ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಚೇರಿಗೆ ಸಮಯಕ್ಕೆ ಸರಿಯಗಿ ಆಗಮಿಸಿ, ತಮ್ಮ ಕೆಲಸ ಕಾರ್ಯಗಳನ್ನು ಮುಗಿಸುವಂತೆ ಹಾಗೂ ಕರ್ತವ್ಯದ ಅವಧಿಯಲ್ಲಿ ವೃಥಾ ಕಾಲ ಹರಣ ಮಾಡದೇ ನಿಗಧಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕು, ಎಲ್ಲಾ ಜಿಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಾನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ಕಚೇರಿಗೆ ಆಗಮಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಲಂಡನ್ ನಗರ ಕೆಲವು ದಶಕಗಳ ಹಿಂದಿದ್ದಂತೆ ಈಗಿಲ್ಲ. ತನ್ನ ಪರಂಪರೆಯ ಎಲ್ಲವನ್ನು ಉಳಿಸಿಕೊಳ್ಳುವುದರ ಜತೆಗೆ ಜಗತ್ತಿನ ಅತ್ಯಂತ ದಟ್ಟ ಚಟುವಟಿಕೆಗಳ ನಗರಗಳಲ್ಲಿ ಒಂದಾಗಿ ಬದಲಾಗಿದೆ. ಭಾರತೀಯರ ದೃಷ್ಟಿಯಿಂದ ಹೇಳುವುದಾದರೆ ಇಂಗ್ಲೆಂಡ್‌ನ ಎಲ್ಲ ಪ್ರಮುಖ ನಗರಗಳು ಈಗ ಮಿನಿ ಭಾರತದಂತೆ ಭಾಸವಾಗುತ್ತವೆ ಎಂದು ಯೋಗೀಂದ್ರ ಮರವಂತೆ ಹೇಳಿದರು. ವಿ. ಕೃ. ಗೋಕಾಕರು ಮೂವತ್ತರ ದಶಕದಲ್ಲಿ ಬರೆದಿರುವ ’ಲಂಡನ್ ನಗರ’ ಬರಹ 10ನೆ ತರಗತಿಯ ಪಠ್ಯ ಪುಸ್ತಕದಲ್ಲಿದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅದರ ಕುರಿತು ಪೂರಕ ಮಾಹಿತಿ ಒದಗಿಸುವ ಉದ್ದೇಶದಿಂದ ಇಂಗ್ಲಂಡ್‌ನಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವ, ಇತ್ತೀಚಿಗಷ್ಟೆ ’ಲಂಡನ್ ಡೈರಿ’ ಹೆಸರಿನ ತಮ್ಮ ಪುಸ್ತಕ ಹೊರತಂದಿರುವ ಯೋಗೀಂದ್ರ ಮರವಂತೆ ಅವರೊಡನೆ ಬುಧವಾರ ಶಾಲೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ ಮಾತುಕತೆ ಏರ್ಪಡಿಸಲಾಗಿತ್ತು. ಲಂಡನ್ ಸೇರಿದಂತೆ ಇಂಗ್ಲೆಂಡ್‌ನ ಎಲ್ಲ ಪ್ರಮುಖ ನಗರಗಳಲ್ಲಿ ಗಣನೀಯ ಸಂಖ್ಯೆಯ ಭಾರತೀಯರು ಉದ್ಯೋಗ ನಿರತರಾಗಿದ್ದಾರೆ. ಅಲ್ಲೆಲ್ಲ ಅವರು ರಾಜ್ಯ, ಭಾಷೆ, ಜಾತಿ ನೆಲೆಯಲ್ಲಿ ಸಂಘಟಿತರಾಗಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಯೋಗಭ್ಯಾಸದಿಂದ ಆರೋಗ್ಯ ವೃದ್ಧಿಸುವುದಲ್ಲದೇ ಮನಸ್ಸು ಉಲ್ಲಾಸಗೊಳ್ಳುತ್ತದೆ. ಆಧುನಿಕ ಜಗತ್ತಿನ ವೇಗದ ಬದುಕಿನಲ್ಲಿ ದೈಹಿಕ ಮಾನಸಿಕ ಸಮತೋಲಕ ಕಾಯ್ದುಕೊಳ್ಳಲು ನಿರಂತವಾಗಿ ಯೋಗಾಸನ ಮಾಡುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯೋಗ ಬಗೆಗೆ ಆಸಕ್ತಿ ಮೂಡಿಸಲು ಸ್ವರ್ಧೆ ಆಯೋಜಿಸಿರುವುದು ಶ್ಲಾಘನಾರ್ಹ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ರಮೇಶ್ ಗಾಣಿಗ ಹೇಳಿದರು. ಅವರು ಕೊಲ್ಲೂರು ಶ್ರೀ ಮುಕಾಂಬಿಕಾ ಸಭಾಭವನದಲ್ಲಿ ಬುಧವಾರ ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜು ಕೊಲ್ಲೂರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಯೋಗಾಸನ ಸ್ವರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕುಮಾರ್ ಪ್ರಾಸ್ತಾವಿಕ ಮಾತನಾಡಿ ಮಾಡುವ ಕೆಲಸವನ್ನು ಕೌಲಶ್ಯಯುತವಾಗಿ ಮಾಡಿದರೆ ಅದೇ ಯೋಗವೆಂದೆನಿಸಿಕೊಳ್ಳಲಿದೆ. ಯೋಗವು ಬದುಕಿನಲ್ಲಿ ದೈಹಿಕವಾಗಿ, ಭೌತಿಕವಾಗಿ ಹಾಗೂ ಮಾನಸಿಕವಾಗಿ ಸಮತ್ವವನ್ನು ಕಾಯ್ದುಕೊಳ್ಳಲು ಸಹಕಾರಿ. ವಿದ್ಯಾರ್ಥಿಗಳಲ್ಲಿ ನಿಯಮಿತ ಯೋಗಾಭ್ಯಾಸದಿಂದ ಮನಸ್ಸಿನ ಚಂಚಲತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯದಲ್ಲಿ ಕಂಡು ಕೇಳರಿಯದ ಪ್ರವಾಹ ಎದುರಾಗಿದ್ದರೂ ಈವರೆಗೆ ಕೇಂದ್ರದಿಂದ ಸೂಕ್ತ ಪರಿಹಾರ ದೊರೆತಿಲ್ಲ. ಅರ್ಧ ದೇಶವೇ ನೀರಿನಲ್ಲಿ ಮುಳುಗಿದ್ದರೂ ಇಂದಿನ ಪ್ರಧಾನಿಯವರು ವಿದೇಶ ಪ್ರವಾಸದ ಮೂಡಿನಲ್ಲಿರುವುದು ಖೇದಕರ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಬುಧವಾರ ಉಡುಪಿ ಜಿಲ್ಲೆಯಲ್ಲಾದ ಆಸ್ತಿ ಪಾಸ್ತಿ ನಷ್ಟದ ಸಮೀಕ್ಷೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಚಿಸಿದ ನಿಯೋಗದ ನೇತೃತ್ವ ವಹಿಸಿ ಕುಂದಾಪುರ ಹಾಗೂ ಬೈಂದೂರಿನಲ್ಲಿ ನೆರೆ ನಷ್ಟದ ಬಗೆಗೆ ಅಹವಾಲು ಸ್ವೀಕರಿಸಿ ಬಳಿಕ ಮಾತನಾಡಿದರು. ಈ ಹಿಂದೆಯೂ ಕೆಂದ್ರದಲ್ಲಿ ಯುಪಿಎ ಸರಕಾರವಿದ್ದಾಗ, ರಾಜ್ಯದಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭ ರಾಜ್ಯದಲ್ಲಿ ನೆರೆ ಪರಿಸ್ಥಿತಿ ಎದುರಾದಾಗ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ವೈಮಾನಿಕ ಸಮೀಕ್ಷೆ ನಡೆಸಿ ಸ್ಥಳದಲ್ಲಿಯೇ ರಾಜ್ಯಕ್ಕೆ ಪರಿಹಾರ ಘೋಷಿಸಿದ್ದರು. ಇಂದಿನ ಪ್ರಧಾನಿಗೆ ವೈಮಾನಿಕ ಸಮೀಕ್ಷೆ ನಡೆಸಲು ಸಮಯವಿಲ್ಲ ಎಂದರು. ಕರಾವಳಿಯ ಉಭಯ ಜಿಲ್ಲೆಯಳಲ್ಲಿಯೂ ಅಪಾರವಾದ ಮಳೆ ಹಾನಿಯಾಗಿದ್ದು, ಜಿಲ್ಲೆಯ ಬೈಂದೂರಿನಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಹಾಗಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಕುಂದಾಪುರ ಭಂಡಾರ್‌ಕರ‍್ಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ‘ರಂಗಕಲಾ ಸ್ಪರ್ಧೆ-ರಂಗೋತ್ಸವ 2019’’ಯಲ್ಲಿ ಆಳ್ವಾಸ್ ಕಾಲೇಜು ಸತತವಾಗಿ 12ನೇ ಬಾರಿಗೆ ಸಮಗ್ರ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು. ಬಹುಮಾನ ವಿತರಿಸಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಕ್ಷೇಮಪಾಲನಾ ನಿರ್ದೇಶನಾಲಯಇದರ ನಿದೇಶಕರಾದ ಪ್ರೊ. ಬಾರ್ಕೂರು ಉದಯ ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಂಗಭೂಮಿಯ ಬಗ್ಗೆ ಪಠ್ಯಕ್ರಮದಲ್ಲಿ ಅಧ್ಯಯನ ಮಾಡುವುದಕ್ಕೆ ಪೂರಕವಾಗಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್‌ನಲ್ಲಿ ವಿಷಯ ಮಂಡಿಸುತ್ತೇನೆ. ವಿದ್ಯಾರ್ಥಿ ಸ್ನೇಹಿ ಅಧ್ಯಯನವನ್ನುಕಾರ್ಯರೂಪಕ್ಕೆತರಲು ಪ್ರಯತ್ನಸುತ್ತೇನೆಎಂದು ಹೇಳಿದರು. ಅಧ್ಯಕ್ಷತೆಯನ್ನುಕಾಲೇಜಿನ ಪಾಂಶುಪಾಲರಾದ ಡಾ. ಎನ್. ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ರಂಗೋತ್ಸವದಕುರಿತು ನಿರ್ಣಾಯಕರಾಗಿ ಆಗಮಿಸಿದ್ದ ಬಾಸುಮ ಕೊಡಗು ಮತ್ತು ಸತೋಶ ಮರವಂತೆ ತಮ್ಮ್ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಿರ್ಣಾಯಕರಾಗಿ ಆಗಮಿಸಿದ್ದ ಪೂರ್ಣಿಮಾ ಸುರೇಶ್, ಸಂತೋಷ್ ಶೆಟ್ಟಿ ಹಿರಿಯಡ್ಕ, ಪ್ರವೀಣಕೊಡವೂರು, ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ರಂಗೋತ್ಸವ ಕಾರ್ಯಕ್ರಮ ಸಂಯೋಜಕರಾದ ಅರ್ಚನಾ ಅರವಿಂದ್ ಉಪಸ್ಥಿತರಿದ್ದರು. ರಂಗೋತ್ಸವದಲ್ಲಿ ಭಾಗವಹಿಸಿದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಪಂಚದಲ್ಲಿ ಯಾರು ಯಾರಿಗಿಂತಲೂ ಕಡಿಮೆಯೂ ಅಲ್ಲ. ಹೆಚ್ಚು ಅಲ್ಲ. ಜಾತಿ, ಧರ್ಮ, ಭಾಷೆಗಳ ಗಡಿಯನ್ನು ಮೀರಿ ಮನುಷ್ಯನನ್ನು ಮನುಷ್ಯನಂತೆ ಕಾಣುವುದು ಮುಖ್ಯವಾದುದೆಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರದೀಪ ಕುಮಾರ್ ಶೆಟ್ಟಿ ಕೆಂಚನೂರು ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ ಹಾಗೂ ಸುರಭಿ ರಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಮಂಗಳವಾರ ಜರುಗಿದ ಸದ್ಭಾವನಾ ದಿನಾಚರಣೆಯಲ್ಲಿ ಮಾತನಾಡಿ ಬಣ್ಣ, ತಿನಿಸು, ಪ್ರಕೃತಿ ಎಲ್ಲದರಲ್ಲಿಯೂ ಭಿನ್ನತೆ ಇರುವಾಗ ಪ್ರಕೃತಿಯ ಭಾಗವೇ ಆಗಿರುವ ಮನುಷ್ಯರೆಲ್ಲರೂ ಒಂದೇ ರೀತಿಯಾಗಿ ಬದುಕಬೇಕು ಎಂಬುದರಲ್ಲಿ ಅರ್ಥವಿಲ್ಲ. ವಿವಿಧತೆಯನ್ನು ಗೌರವಿಸುತ್ತಲೇ ಏಕತೆಯನ್ನು ಸಾರುವುದು ಅಗತ್ಯ ಎಂದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಭರತನಾಟ್ಯ ಗುರು ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಅತಿಥಿಗಳಾಗಿದ್ದರು. ನೆಹರು ಯುವ ಕೇಂದ್ರದ ಸ್ವಯಂಸೇವಕ ಸುನಿಲ್ ಹೆಚ್. ಜಿ. ಬೈಂದೂರು ಪ್ರಾಸ್ತಾವಿಕ ಮಾತನಾಡಿ ಬಳಿಕ ಸದ್ಭಾವನಾ ಪ್ರತಿಜ್ಞಾ ವಿಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕ್ರಾಂತಿಕಾರಿ ಹಾವನೂರು ಆಯೋಗದ ರಚನೆಯ ಮೂಲಕ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ರಾಜಕೀಯ ಪುನಶ್ಚೇತನಕ್ಕೆ ನಾಂದಿ ಹಾಡಿದವರು ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರು. ಉಳುವವನೇ ಹೊಲದೊಡೆಯ ಎಂಬ ಘೋಷ ವಾಕ್ಯದೊಂದಿಗೆ ಜಾರಿಗೆ ತಂದ ಭೂಸುಧಾರಣಾ ಖಾಯ್ದೆ ಬಡ, ಶೋಷಿತ ಗೇಣಿದಾರರ ಕುಟುಂಬದ ಭವಿಷ್ಯವನ್ನು ಉಜ್ವಲವಾಗಿಸಿತು. ಉಳ್ಳವರೇ ಅಧಿಕಾರಕ್ಕೆ ಬಂದು ದರ್ಪ ಪ್ರದರ್ಶಿಸುತ್ತಿದ್ದ ಕಾಲದಲ್ಲಿ ಸಮಾಜದ ದುರ್ಬಲ ವರ್ಗದ ಜನರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು ಜೀತ ಪದ್ಧತಿಯನ್ನು ನಿರ್ಮೂಲ ಮಾಡಿದ ಮಹಾನ್ ಪುರುಷ ಅರಸು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಮಾಣಿ ಗೋಪಾಲ ಹೇಳಿದ್ದಾರೆ. ಅವರು ಆ.20 ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾಹಿತಿ ತಂತ್ರಜ್ಞಾನವನ್ನು ಈ ದೇಶಕ್ಕೆ ಪರಿಚಯಿಸಿದ ಕೀರ್ತಿ ಮಾಜಿ ಪ್ರಧಾನಿ ರಾಜೀವ ಗಾಂಧಿಯವರಿಗೆ ಸಲ್ಲುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಭಾರಿಯೂ ಮಂತ್ರಿಗಿರಿಯ ಅವಕಾಶ ಕೈತಪ್ಪಿದ್ದು, ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಐದನೇ ಭಾರಿಗೆ ಕುಂದಾಪುರದ ಶಾಸಕರಾಗಿ ಅತ್ಯಧಿಕ ಅಂತರದಿಂದ ಗೆಲುವು ಸಾಧಿಸಿದ್ದ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಭಾರಿ ಮಂತ್ರಿ ಪದವಿ ಸಿಗಬಹುದೆಂದು ಹಲವರು ನಿರೀಕ್ಷಿಸಿದ್ದರು. ಆದರೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಿಜೆಪಿಯ ಗೆಲುವಿನ ಪತಾಕೆ ಹಾರಿಸಿದ್ದರೂ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ಓರ್ವರನ್ನು ಮಾತ್ರ ಮಂತ್ರಿ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಶೆಟ್ಟರ್ ಸಂಪುಟದಲ್ಲಿಯೂ ಕೈತಪ್ಪಿತ್ತು: 2012ರಲ್ಲಿ ಸಿಎಂ ಜಗದೀಶ ಶೆಟ್ಟರ್ ಅವರ ಸಂಪುಟದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊನೆಯ ಕ್ಷಣದಲ್ಲಿ ಮಂತ್ರಿಗಿರಿ ಕೈತಪ್ಪಿತ್ತು. ಇದು ಹಾಲಾಡಿ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿ ಪ್ರತಿಭಟನೆಗಳು ನಡೆದಿದ್ದವು, ಮಂದೆ ಹಾಲಾಡಿಯವರೇ ಬಿಜೆಪಿ ಪಕ್ಷಕ್ಕೆ ರಾಜಿನಾಮೆ ನೀಡಿ ಪಕ್ಷೇತರರಾಗಿ ಸ್ವಧರ್ಿಸಿ ಅತ್ಯಧಿಕ ಬಹುಮತದಿಂದಲೇ ಗೆದ್ದು ಬಂದಿದ್ದರು., ಗೆಲುವಿನ ಸರದಾರ: ಹಾಲಾಡಿ…

Read More