Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕಲಬುರಗಿ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ಭಾಗ್ಯ ದೊರೆತಾಗ ಜೀವನ ಯಶಸ್ಸುಗೊಳ್ಳುತ್ತದೆ. ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ದೊರೆತಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಕಲಬುರಗಿ ಮಿನಿವಿಧಾನ ಸೌಧ ಆವರಣದಲ್ಲಿ ಕಲಬುರಗಿ ದಕ್ಷಿಣ ಕನ್ನಡ ಸಂಘ ಆಯೋಜಿಸಿದ್ದ ಮಾಸಿಕ ಸಭೆ ಹಾಗೂ ಚಿತ್ರಕಲಾ ಸ್ಪರ್ಧೆ ಮತ್ತು ಮಾಸ್ಕ್ ವಿತರಣೆ ಕಾರ್ಯಕ್ರಮವನ್ನುಕ್ಕೆ ಚಾಲನೆ ನೀಡಿ ಮಾತನಾಡಿ ಕರಾವಳಿಯಿಂದ ಬಯಲುಸೀಮೆಗೆ ಬಂದು ಒಗ್ಗಟ್ಟಿನಿಂದ ಪ್ರಶಂಸೆಗೆ ಪಾತ್ರರಾಗುವ ರೀತಿ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಮಕ್ಕಳು ಚಿತ್ರ ರಚನೆಯ ಮೂಲಕ ಕರೋನ ಜಾಗೃತಿ ಸಂದೇಶ ಬಿತ್ತರಿಸುತ್ತಿದ್ದಾರೆ. ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾತ ಹಾಗೂ ಶಿಕ್ಷಣ ನೀಡಿ ಉದ್ಯೋಗ ಲಭಿಸಿ ಸುಂದರ ಜೀವನ ಕಾಣುವತಾಗಬೇಕು ಎಂದರು. ಬೈಂದೂರು ಕ್ಷೇತ್ರದಲ್ಲಿ ಕನ್ನಡ ಶಾಲೆ ಆರಂಭಕ್ಕೆ ಚಿಂತನೆಯಿದೆ. ಕರೋನದಿಂದ ಕ್ಷೇತ್ರದಲ್ಲೂ 42000 ವಲಸೆ ಕಾರ್ಮಿಕರಿಗೆ ನೆರವು ನೀಡಲಾಗಿದೆ. ಇದರಲ್ಲಿ ನಮ್ಮ ಆಡಳಿತ ಸಂಸ್ಥೆಯ ಶಾಲೆಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾರಿಯೊಂದು (ಇಕೋಮೇಟ್) ನಿಯಂತ್ರಿಣ ತಪ್ಪಿ ಅಭಿಮುಖ ರಸ್ತೆಗೆ ಪಲ್ಟಿಯಾಗಿ, ಎದುರಿನಿಂದ ಬರುತ್ತಿದ್ದ ಇಕೋ ವಾಹನಕ್ಕೆ ಡಿಕ್ಕಿ ಹೊಡೆದ್ದು, ಘಟನೆಯಲ್ಲಿ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಂಬೈನಿಂದ ಕೇರಳ ಕಡೆಗೆ ತೆರಳುತ್ತಿದ್ದ ಬೇಕರಿ ಉತ್ಪನ್ನಗಳನ್ನು ತುಂಬಿದ್ದ ಲಾರಿಯು ಬೈಂದೂರು ತಾಲೂಕಿನ ಒತ್ತಿನಣೆಯ ರಾಷ್ಟ್ರೀಯ ಹೆದ್ದಾರಿ 66ರ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎದುರಿನ ರಸ್ತೆಗೆ ಬಿದ್ದಿದ್ದು, ಇದೇ ಸಂದರ್ಭ ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಇಕೋ ವಾಹನಕ್ಕೂ ಡಿಕ್ಕಿ ಹೊಡಿದಿದೆ. ಲಾರಿ ಮೇಲ್ಬಾಗದ ರಸ್ತೆಯಿಂದ ಕೆಳಕ್ಕೆ ಬಿದ್ದ ಕಾರಣ ಚಾಲಕನಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಕ್ಲೀನರ್‌ಗೆ ಕೂಡ ಗಂಭೀರ ಗಾಯಗಳಾಗಿದ್ದು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇಕೋ ವಾಹನವೂ  ಉರುಳಿ ಬಿದ್ದಿರುತ್ತದೆ. ಪರಿಣಾಮ ಇಕೋ ವಾಹನ ಚಾಲಕನಿಗೆ ಕುತ್ತಿಗೆಗೆ ಒಳಜಖಂ ಆಗಿದ್ದು, ಕಾರಿನಲ್ಲಿದ್ದ ಹೆಂಗಸಿಗೆ ತಲೆಯ ಹಿಂಭಾಗಕ್ಕೆ ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುತ್ತದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಮೀನುಗಾರಿಕಾ ಬೋಟ್‌ಗಳಿಗೆ ಈಗ ಬಳಸಲಾಗುತ್ತಿರುವ ಚೈನಾ ಮೇಡ್ ಯಂತ್ರಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆಯ ಆತ್ಮನಿರ್ಭರ ಭಾರತ ಹಾಗೂ ಮೇಕ್ ಇನ್ ಇಂಡಿಯ ಪರಿಕಲ್ಪನೆಯಂತೆ ದೇಶೀ ನಿರ್ಮಿತ ಯಂತ್ರಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ನಾವುಂದಕ್ಕೆ ಭೇಟಿನೀಡಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ 333 ಕಿಲೋಮೀಟರು ಉದ್ದದ ಕರಾವಳಿಯಲ್ಲಿ ಒಟ್ಟು 22,500 ಯಾಂತ್ರಿಕ ಮೀನುಗಾರಿಕಾ ಬೋಟ್‌ಗಳು ಕಾರ್ಯಾಚರಿಸುತ್ತಿವೆ. ಅವುಗಳಲ್ಲಿ 7,500 ಸಾಂಪ್ರದಾಯಿಕ ನಾಡದೋಣಿಗಳು 9 ಅಶ್ವಶಕ್ತಿಯ ಯಂತ್ರ ಅಳವಡಿಸಿಕೊಂಡಿವೆ. ದೊಡ್ಡ ಬೋಟ್‌ಗಳು 350 ಅಶ್ವಶಕ್ತಿಯ ವರೆಗಿನ ಯಂತ್ರಗಳನ್ನು ಹೊಂದಿವೆ. ಇವುಗಳಲ್ಲಿ ಶೇ 90ರಷ್ಟು ಚೀನಾನಿರ್ಮಿತವಾದುವುಗಳು. ಉಳಿದವು ಜಪಾನ್ ಮತ್ತಿತರ ದೇಶಗಳವು. ಮೀನುಗಾರರು ದೇಶೀಯ ಉತ್ಪನ್ನಗಳನ್ನು ಬಳಸಲು ಒಲವು ಹೊಂದಿದ್ದಾರೆ. ಬದಲಾವಣೆಗೆ ಚಾಲನೆ ನೀಡುವ ಗುರಿಯೊಂದಿಗೆ ಈಚೆಗೆ ವಿಕಾಸ ಸೌಧದಲ್ಲಿ ಮಹೇಂದ್ರ, ಕಿರ್ಲೋಸ್ಕರ ಮತ್ತಿತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣೆಯಲ್ಲಿ ಪಕ್ಷದತ್ತ ಬದ್ಧತೆಯಿಂದ ದುಡಿದ ಕಾರ್ಯಕರ್ತರನ್ನು ಸಂಘಟನೆಯಲ್ಲಿ ತೊಡಗಿಸಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ನಾವುಂದದ ಸ್ಕಂದ ಸಭಾಭವನದಲ್ಲಿ ಭಾನುವಾರ ನಡೆದ ಬೈಂದೂರು ವ್ಯಾಪ್ತಿಯ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಸ್ಪರ್ಧಾಳುಗಳ ಅಭಿನಂದನಾ ಸಭೆಯಲ್ಲಿ ಮಾತನಾಡಿ ರಾಜಕೀಯ ಹೋರಾಟದಲ್ಲಿ ಸೋಲು, ಗೆಲುವು ಸಹಜ. ಅವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಚುನಾವಣಾ ಪ್ರಚಾರದ ಆರಂಭದ ಹಂತದಲ್ಲಿ ಪಕ್ಷದೆಡೆಗೆ ಕಂಡುಬಂದ ಜನಬೆಂಬಲ, ಬಿಜೆಪಿಯ ಪೊಳ್ಳು ಆಶ್ವಾಸನೆಗಳ, ಹಣ, ಹೆಂಡ ಹಂಚಿಕೆಯ ಎದುರು ಕುಸಿಯತೊಡಗಿತು. ಶಾಸಕರು ಮತ್ತು ಇತರ ನಾಯಕರು ಕೂಡ ಪ್ರತ್ಯಕ್ಷ ಪ್ರಚಾರ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಇದರ ನಡುವೆ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಾಧನೆ ದೊಡ್ಡದು ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕಕುಮಾರ ಕೊಡವೂರು ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ ಈಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ರಂಗೇನಹಳ್ಳಿ ಗ್ರಾಮದ ಹಲಸೂರು ಕೆರೆ ಸಮೀಪ ಶನಿವಾರ ಮಧ್ಯಾಹ್ನ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದಂಪತಿ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಕಾರು ಚಾಲಾಯಿಸುತ್ತಿದ್ದ ಕುಂದಾಪುರ ಕೋಡಿಯ ವೆಂಕಟರಮಣ ಶೇರುಗಾರ್ ಅವರ ಪುತ್ರ ನಾಗೇಂದ್ರ ಶೇರುಗಾರ್ (28), ಕೋಟೇಶ್ವರ ನೇರಂಬಳ್ಳಿಯ ರಾಮಚಂದ್ರ ಶೇರುಗಾರ್ ಅವರ ಪುತ್ರ ಅನಿಲ್ ಕುಮಾರ್ (30), ಪತ್ನಿ ಸುಜಿತಾ (29) ಮೃತ ದುರ್ದೈವಿಗಳು. ಅನಿಲ್ ಕುಮಾರ್ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ದಲ್ಲಿರುವ ಅನಿಲ್ ಕುಮಾರ್ ಕುಟುಂಬವು ಇತ್ತೀಚೆಗೆ ಕುಂದಾಪುರಕ್ಕೆ ಬಂದಿದ್ದರು. ಬೆಂಗಳೂರಿಗೆ ರೈಲಿನ ಮೂಲಕ ವಾಪಸಾಗಲು ಅವರು ಮೊದಲು ನಿರ್ಧರಿಸಿದ್ದರು. ಕೊನೆಯ ಕ್ಷಣದಲ್ಲಿ ನಿರ್ಧಾರವನ್ನು ಬದಲಾಯಿಸಿ ಸಂಬಂಧಿಯಾಗಿದ್ದ ನಾಗೇಂದ್ರನ ಕಾರ್ನಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕುಂದಾಪುರದಿಂದ ಹೊರಟಿದ್ದರು. ರಂಗೇನಹಳ್ಳಿ ಬಳಿ ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಿಂದ ತೀರ್ಥಹಳ್ಳಿಗೆ ಹೊರಟಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಮತ್ತು 14ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭನದಲ್ಲಿ ನಡೆಯಿತು. ಕುಂದಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪಂಚಾಯತ್‌ನ ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ಸುಕುಮಾರ ಬಿ. ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಪಂ ಸದಸ್ಯರು, ಯೋಜನೆಯ ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು. ಪಿಡಿಒ ಚಂದ್ರಶೇಖರ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ ಶೇರುಗಾರ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಕುಂದಾಪುರ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಕೋಟೇಶ್ವರ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮವು ಶುಕ್ರವಾರ ಕೋಟೇಶ್ವರದಲ್ಲಿ ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಜಾಥಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಒಂದು ಗುಲಾಬಿ ಹೂ ನೀಡುವುದರ ಮೂಲಕ ಪ್ರತಿ ಅಂಗಡಿಯ ಮಾಲೀಕರಿಗೆ ತಂಬಾಕು ತ್ಯಜಿಸಿ, ಜೀವನವನ್ನು ಆಯ್ದಕೊಳ್ಳಿ ಮತ್ತು ತಂಬಾಕು ಮುಕ್ತ ನಾಡನ್ನು ನಿರ್ಮಿಸೋಣ ಎಂಬ ಘೋಷಣೆಯೊಂದಿಗೆ ಅರಿವು ಮೂಡಿಸಲಾಯಿತು. ಸಭಾ ಕಾರ್ಯಕ್ರಮವನ್ನು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಪ್ರಾಸ್ತವಿಕವಾಗಿ ಮಾತನಾಡಿ, ತಂಬಾಕು ಸೇವನೆಯು ಜೀವನಕ್ಕೆ ಮಾರಕವಾಗಿದ್ದು, ಅದರಿಂದ ವಿವಿಧ ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇದ್ದು, ಪ್ರಸ್ತುತ ಕೋವಿಡ್ -19 ಕೂಡ ಅತೀ ವೇಗವಾಗಿ ಹರಡಲು ಕಾರಣವಾಗಿದೆ ಎಂದರು. ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಾಖೆಯ ಆಶ್ರಯದಲ್ಲಿ ಜಿ.ನಾರಾಯಣ ಆಚಾರ್ಯ ಅವರ ನಿವಾಸದಲ್ಲಿ ‘ಜನರ ಬಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕಿನ ಗಂಗೊಳ್ಳಿ ಶಾಖಾ ಪ್ರಬಂಧಕ ರಾಘವೇಂದ್ರ ಉಡುಪ, ಜನರ ಬಳಿ ತೆರಳಿ ಬ್ಯಾಂಕಿನ ಅಗತ್ಯತೆಗಳನ್ನು ತಿಳಿಸಿ ಜನರಲ್ಲಿ ಆರ್ಥಿಕ ಶಕ್ತಿಯ ವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದ, ಆರ್ಥಿಕ ಸಂಕಷ್ಟದ ಕಾಲದಲ್ಲಿ ಜನರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಉಳಿತಾಯ ಖಾತೆ, ಠೇವಣಿ ಸಂಗ್ರಹ, ಸಾಲ ನೀಡಿಕೆ ಮುಂತಾದ ವಿಚಾರಗಳನ್ನು ಜನರಿಗೆ ತಲುಪಿಸುವ ‘ಜನರ ಬಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್’ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬ್ಯಾಂಕಿನ ಆಫೀಸರ ಗಣೇಶ ಭಟ್, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ಪುರೋಹಿತ ಜಿ.ರಾಘವೇಂದ್ರ ಆಚಾರ್ಯ, ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆದ ಅಂತರ ವಿಭಾಗ ಮಟ್ಟದ 2 ದಿನಗಳ ಟೆಕ್ ಸ್ಪರ್ಧೆ ‘ವಾರ್‌ಟೆಕ್ಸೊ’ ಕಾರ್ಯಕ್ರಮ ನಡೆಯಿತು. ಉದ್ಘಾಟಿಸಿ ಮಾತನಾಡಿದ ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವೀಸ್‌ನ ನಿರ್ದೇಶಕ ಶ್ರೀವತ್ಸ ನಾಗರಾಜಯ್ಯ, ಕಾಲೇಜು ವಾತಾವರಣದಲ್ಲಿ ಕಲಿತಂತಹ ವಿಚಾರಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳದೇ ಹೋದರೆ ಕಲಿತ ವಿಷಯಗಳ ಸದ್ಬಳಕೆ ಸಾಧ್ಯವಿಲ್ಲ. ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಇತರರಿಂದ ಹೇಗೆ ಭಿನ್ನವಾಗಿ ಕಾಣುತ್ತೇವೆ ಎನ್ನುವುದರ ಅರಿವಾಗುತ್ತದೆ ಎಂದು ಹೇಳಿದರು. ಯುದ್ಧದ ಮೊದಲು ಶಸ್ತ್ರಾಸ್ತ್ರಗಳ ಅಭ್ಯಾಸ ಎಷ್ಟು ಅಗತ್ಯವೋ, ಹಾಗೆಯೇ ಯಾವುದೇ ಕೆಲಸದ ಫಲಿತಾಂಶ ಉತ್ತಮವಾಗಬೇಕಾದರೆ ಅದಕ್ಕೆ ಪೂರಕವಾದ ತಯಾರಿ ಮುಖ್ಯವಾಗುತ್ತದೆ. ಕಲಿತ ವಿಷಯಗಳನ್ನು ಜ್ಞಾನವನ್ನಾಗಿ ಪರಿವರ್ತಿಸುವುದು ನಮ್ಮ ಕೈಯಲ್ಲೇ ಇದೆ. ಆದ್ದರಿಂದ ಪ್ರತಿಯೊಬ್ಬರು ವಿಭಿನ್ನ ಯೋಚನೆಗಳಿಂದ ಸದಾ ಕ್ರಿಯಾಶೀಲರಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಮಾತನಾಡಿ, ಕೊರೊನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯಲ್ಲಿCOTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಕೋಟೇಶ್ವರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 17 ಪ್ರಕರಣ ದಾಖಲಿಸಿ ರೂ. 1700/- ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಸದರಿ ದಾಳಿಯಲ್ಲಿ ವಿತರಿಸಲಾಯಿತು. ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಕುಂದಾಪುರ ತಾಲೂಕು ಕಾರ್ಮಿಕ ನಿರೀಕ್ಷಕ ಪ್ರಸನ್ನ, ಹಿರಿಯ ಆರೋಗ್ಯಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ…

Read More