Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸೈಕ್ಯಾಟ್ರಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು, ನವೆಂಬರ್ 9 ರಂದು ಬೆಳಗ್ಗೆ 10.30 ರಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪುರಸಭೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ವೀಣಾ ಭಾಸ್ಕರ್ ಅಧ್ಯಕ್ಷರಾಗಿ, ಸಂದೀಪ್ ಖಾರ್ವಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.3ರಂದು ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆದು ಬಿಜೆಪಿಯ ಒಮ್ಮತದ ಅಭ್ಯರ್ಥಿಗಳಾಗಿ ಅಧ್ಯಕ್ಷ ಸ್ಥಾನಕ್ಕೆ ವೀಣಾ ಭಾಸ್ಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ್ ಖಾರ್ವಿ ಅವರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಎ’ ಪ್ರವರ್ಗಕ್ಕೆ ಮೀಸಲಾಗಿತ್ತು. ಒಟ್ಟು 23 ಸದಸ್ಯ  ಬಲ ಇರುವ ಪುರಸಭೆಯಲ್ಲಿ 14 ಬಿಜೆಪಿ, 8 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾದ ವೀಣಾ ಭಾಸ್ಕರ ಟಿ. ಟಿ ರೋಡ್ ವಾರ್ಡ್ ಪ್ರತಿನಿಧಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಂದೀಪ್ ಖಾರ್ವಿ ಬಹದ್ದೂರ್ ಷಾ ರೋಡ್ ವಾರ್ಡ್ ಪ್ರತಿನಿಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಲತಾ ಸುರೇಶ ಶೆಟ್ಟಿ, ಲಕ್ಷ್ಮೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ವಿದ್ಯಾಗಿರಿ, ಇದರ ಆಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಒಂದು ದಿನದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವನ್ನು ಮಂಗಳವಾರ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆಯಿತು. ಕಾರ‍್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಪೋಸ್ಟ್ ಕೋವಿಡ್ ಕೇರ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿರ್ತಾಡಿಯ ಖ್ಯಾತ ವೈದ್ಯಕೀಯ ತಜ್ಞರಾದ ಡಾ. ಕೃಷ್ಣರಾಜ್ ಭಟ್‌ರವರು ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಹೆಲ್ತ್ ಸೆಂಟರ್ ಆಡಳಿತ ನಿರ್ದೇಶಕ ಡಾ.ವಿನಯ್ ಆಳ್ವ ವಹಿಸಿದರು. ಈ ವೈದ್ಯಕೀಯ ಶಿಬಿರದಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ತಜ್ಞ ವೈದ್ಯರು ಉಚಿತ ತಪಾಸಣೆ, ಚಿಕಿತ್ಸೆ ಹಾಗೂ ಸೂಕ್ತ ಸಲಹೆಯನ್ನು ಸಾರ್ವಜನಿಕರಿಗೆ ನೀಡಿದರು. ಈ ಶಿಬಿರದಲ್ಲಿ ರಕ್ತದಲ್ಲಿನ ಸಕ್ಕರೆ ಅಂಶ ಹಾಗೂ ರಕ್ತದೋತ್ತಡದ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಯಿತು. ಸುಮಾರು200 ಕ್ಕೂ ಅಧಿಕ ಸಾರ್ವಜನಿಕರು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ 1868 ರೂ ದರದಲ್ಲಿ ಮತ್ತು ಗ್ರೇಡ್ ಎ ಭತ್ತವನ್ನು ಕ್ವಿಂಟಾಲ್ ಗೆ1888ರೂ ದರದಲ್ಲಿ ಖರೀದಿಸುವಂತೆ ತಿಳಿಸಿದರು. ಭತ್ತ ಖರೀದಿ ಕೇಂದ್ರಕ್ಕೆ ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಭತ್ತ ಖರೀದಿಗೆ ಅಗತ್ಯವಿರುವ ಮೊತ್ತವನ್ನು ಕೃಷಿ ಮಾರಾಟ ಇಲಾಖೆಯ ಆವರ್ತ ನಿಧಿಯಿಂದ ಭರಿಸಲು ಸೂಚಿಸಲಾಯಿತು. ಕೃಷಿ ಇಲಾಖೆ ವತಿಯಿಂದ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ ಸಿಬ್ಬಂದಿಯನ್ನು ನಿಯೋಜಿಸಲು ಮತ್ತು ಭತ್ತದ ತೇವಾಂಶ ಪರಿಶೀಲಿಸಲು ಮಾಯಿಶ್ಚರ್ ಮೀಟರ್ ಒದಗಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ರಾಜ್ಯ ಸರ್ಕಾರವು ಕ್ರೀಡಾ ಸಾಧಕರಿಗೆ ನೀಡಿದ ಏಕಲವ್ಯ ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಒಟ್ಟು ಎಂಟು ಕ್ರೀಡಾ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರೆಲ್ಲರೂ ಆಳ್ವಾಸ್‌ನ ದತ್ತು ಸ್ವೀಕಾರ ಯೋಜನೆಯಡಿ ತರಬೇತಿ ಪಡೆದು ಸಾಧನೆಗೈದ ಕ್ರೀಡಾಪಟುಗಳಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಭಿನಯ ಶೆಟ್ಟಿ, ಬಾಂಧವ್ಯ, ಅಭಿಷೇಕ್‌ಶೆಟ್ಟಿಯವರು ಏಕಲವ್ಯ ಪ್ರಶಸ್ತಿ ಹಾಗೂ ಜಯಲಕ್ಷ್ಮೀ ಜೆ ,ಲಾವಣ್ಯ ಬಿ. ಡಿ, ರಕ್ಷಿತ್ ಎಸ್, ಪಲ್ಲವಿ ಎಸ್ ಕೆ, ಮತ್ತು ಅನುಶ್ರೀ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಭಿಷೇಕ್ ಶೆಟ್ಟಿ ಅಥ್ಲೆಟಿಕ್‌ನಲ್ಲಿ2009ರ ಸಾಲಿನ ಪ್ರಶಸ್ತಿ ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರೀಡಾಪಟುವಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದಾರೆ. ಬಾಂಧವ್ಯ ಬಾಸ್ಕೆಟ್‌ಬಾಲ್‌ನಲ್ಲಿ 2008ರ ಏಕಲವ್ಯ ಪ್ರಶಸ್ತಿ ಗಳಿಸಿದ್ದು ಅಂತರಾಷ್ರ್ಟೀಯ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿದ್ದಾರೆ. ಪ್ರಸುತ್ತ ದಕ್ಷಿಣ ಪಶ್ಚಿಮ ರೈಲ್ವೆ ಉದ್ಯೋಗಿ. ಅಂತರಾಷ್ಟ್ರೀಯ ಕ್ರೀಡಾಪಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಝೀ ಕನ್ನಡ ಕುಟುಂಬದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಕುಂದಾಪುರದ ಸಂತೋಷ್ ಖಾರ್ವಿ ಅವರಿಗೆ ಲಭಿಸಿದೆ. ಕುಂದಾಪುರದ ಖಾರ್ವಿಕೇರಿಯವರಾದ ಸಂತೋಷ್ ಖಾರ್ವಿ ಅವರು, ಕುಂದಾಪುರದ ಸೈಂಟ್ ಮೇರಿಸ್ ಹೈಸ್ಕೂಲಿನಲ್ಲಿ ಶಿಕ್ಷಣ ಪೂರೈಸಿ ಬದುಕಿನ ಬುತ್ತಿ ಅರಸಿ ಬೆಂಗಳೂರಿಗೆ ತೆರಳಿದರು. ಕಾದಂಬರಿ ಧಾರವಾಹಿ ಮೂಲಕ ಛಾಯಾಗ್ರಾಹಕರಾಗಿ ಕಿರುತೆರೆ ಪ್ರವೇಶಿಸಿ, ಸಪ್ತಪದಿ, ಅಶ್ವಿನಿ ನಕ್ಷತ್ರ, ಅಮ್ಮ, ಇವಳೇ ವೀಣಾ ಪಾಣಿ ಸೇರಿದಂತೆ 12ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ಪ್ರಸ್ತುತ ಮಡದಿ ಶ್ರೀಲಕ್ಷ್ಮೀ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 74 ವರ್ಷಗಳ ಬಳಿಕವೂ ದಲಿತರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟದ ಮಾರ್ಗ ಹಿಡಿಯಬೇಕಾಗಿರುವುದು ಅವರ ದುರ್ದೈವ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ, ವಕೀಲ ಮಂಜುನಾಥ ಗಿಳಿಯಾರು ವಿಷಾದಿಸಿದರು. ದಲಿತ ಸಂಘರ್ಷ ಸಮಿತಿಯ ಬೈಂದೂರು ತಾಲ್ಲೂಕು ಘಟಕ, ತಾಲ್ಲೂಕು ಮಹಿಳಾ ಒಕ್ಕೂಟ ಮತ್ತು ಅಂಬೇಡ್ಕರ್ ಮಹಿಳಾ ಸಂಘ ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಅಂಗವಾಗಿ ನಡೆಸಿದ ಧರಣಿಯಲ್ಲಿ ಮಾತನಾಡಿದರು. ಸರ್ಕಾರಿ ದಾಖಲೆಯಂತೆ ಉಡುಪಿ ಜಿಲ್ಲೆಯಲ್ಲಿ 1108 ಎಕ್ರೆ ದಲಿತ ಮೀಸಲು ಭೂಮಿ ಇದೆ. ದಾಖಲೆಗೆ ಸೇರದ ಇನ್ನೂ 300 ಎಕ್ರೆ ಇದೆ ಎಂದು ಅಂದಾಜಿಸಲಾಗಿದೆ. ಅದರಲ್ಲಿ ಬಹುಭಾಗವನ್ನು ನಿಯಮ ಉಲ್ಲಂಘಿಸಿ ವಿವಿಧ ಯೋಜನೆಗಳ ಹೆಸರಿನಲ್ಲಿ ಬಲಾಢ್ಯರಿಗೆ ಹಂಚಲಾಗಿದೆ. ಅದರ ವಿರುದ್ಧ ಮತ್ತು ದಲಿತರ ಹಕ್ಕಿನ ಭೂಮಿಯನ್ನು ಅವರಿಗೆ ನೀಡಿ ಎಂದು ಸಂಘಟನೆ ಆರು ವರ್ಷಗಳಿಂದ ಹೋರಾಡುತ್ತಿದೆ. ಆ ನಿಟ್ಟಿನಲ್ಲಿ ಆಡಳಿತದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಬೈಂದೂರು ತಾಲೂಕಿನ ಪಂಚಾಯಿತಿ ಪ್ರಥಮ ಅಧ್ಯಕ್ಷ ಮಹೇಂದ್ರ ಪೂಜಾರಿ ಅಭಿಮಾನಿಗಳು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನಿಸಿ ಮಾತನಾಡಿದ ಬಂದರು, ಮೀನುಗಾರಿಕೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕೇಂದ್ರಿತವಾಗಿ ಹೊಸ ತಾಲೂಕು ರಚನೆಯ ಕನಸು ಕೈಗೂಡಿದೆ. ಈಗ ತಾಲ್ಲೂಕಿನ ಅಭಿವೃದ್ಧಿ ಕುರಿತಾಗಿ ಜನರ ನಿರೀಕ್ಷೆಗಳು ಗರಿಗೆದರಿರುವ ಕಾರಣ ಹೊಸತಾಗಿ ಅಸ್ತಿತ್ವ ಪಡೆದಿರುವ ತಾಲ್ಲೂಕು ಪಂಚಾಯಿತಿ ಮತ್ತು ಅದರ ಅಧ್ಯಕ್ಷ, ಸದಸ್ಯರ ಹೊಣೆ ಹೆಚ್ಚಿದೆ ಸ್ವಾತಂತ್ರ್ಯ ಗಳಿಸಿ 74 ವರ್ಷಗಳಾದರೂ ದೇಶದ ಸಂಪೂರ್ಣ ಪ್ರಗತಿ ಸಾಧ್ಯವಾಗಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಸತಿಯಂತಹ ಸಮಸ್ಯೆಗಳಿವೆ. ಕೇವಲ ರಸ್ತೆಗಳ ನಿರ್ಮಾಣ, ದುರಸ್ತಿಯಿಂದ ಅಭಿವೃದ್ದಿ ಆಗುವುದಿಲ್ಲ. ಮೊದಲು ಜನರ ಮೂಲ ಅಗತ್ಯಗಳನ್ನು ಒದಗಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ಹುಟ್ಟೂರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಹೇಂದ್ರ ಪೂಜಾರಿ, ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಹೋಟೆಲ್ ಅಂಬಿಕಾ ಇಂಟರ್‌ನ್ಯಾಶನಲ್ ಸಭಾಗಂಣದಲ್ಲಿ ಪ್ರಖಂಡದ ಅಭ್ಯಾಸ ವರ್ಗ ನಡೆಯಿತು. ಮಂಗಳೂರು ವಿಭಾಗದ ಕಾರ್ಯದರ್ಶಿ ಚರಣ ಪಂಪ್‌ವೆಲ್ ಅಭ್ಯಾಸ ವರ್ಗ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಮಹತ್ವ, ಉದ್ದೇಶ, ಜವಾಬ್ದಾರಿ ಕುರಿತು ಮಾಹಿತಿ ನೀಡಿದರು. ಉದ್ಯಮಿ ಭೀಮೇಶ್ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ ಹಾಗೂ ಸಂಘಟನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಮಾಡುವುದಾಗಿ ಹೇಳಿದರು. ಈ ಸಂದರ್ಭ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ಜಿಲ್ಲಾ ಧರ್ಮ ಪ್ರಚಾರಕ್ ಗುರುರಾಜ್, ಬೈಂದೂರು ತಾಲೂಕು ಕಾರ್ಯದರ್ಶಿ ಪ್ರಶಾಂತ್, ವಿಶ್ವ ಹಿಂದೂ ಪರಿಷತ್ ಸಂಘಟನ ಕಾರ್ಯದರ್ಶಿ ಜಗದೀಶ್ ಕೊಲ್ಲೂರು ಉಪಸ್ಥಿತರಿದ್ದರು. ಶ್ರೀನಿವಾಸ್ ಮುದೂರು ಸ್ವಾಗತಿಸಿದರು. ನಿತ್ಯಾನಂದ ಗೀತೆ ಹಾಡಿದರು ಶರತ್ ಮೊವಾಡಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್‌ನ ಪ್ರಾಯೋಜಕತ್ವದಲ್ಲಿ ಪ್ರಾರಂಭವಾದ ಜಿಲ್ಲೆಯ 103ನೇ ಇಂಜಿನಿಯರ್ಸ್ ಲಯನ್ಸ್ ಕ್ಲಬ್ ಉದ್ಘಾಟನೆ ನಡೆಯಿತು ಉದ್ಘಾಟಿಸಿ ಪ್ರಮಾಣ ವಚನ ಬೋದಿಸಿದ ಲಯನ್ಸ್ 317 ’ಸಿ’ ಯ ಜಿಲ್ಲಾ ಗವರ್ನರ್ ನೀಲಕಂಠ ಎಂ ಹೆಗಡೆ, ವೈಯಕ್ತಿಕವಾಗಿ ನೀಡುವ ಸೇವೆಗಿಂತಲೂ ಸಂಘಟನಾತ್ಮಕವಾಗಿ ನೀಡುವ ಸೇವೆಯು ತುಂಬಾ ಪರಿಣಾಮಾಕಾರಿಯಾದುದು. ವಿಶೇಷವಾಗಿ ಇಂಜಿನಿಯರ್‌ಗಳ ಒಗ್ಗೂಡೂವಿಕೆಯಿಂದ ಮೂಡಿಬರುವ ಕ್ಲಬ್ ಸಾಮಾಜಿಕ ಸೇವೆಯನ್ನು ಸಂಘಟನಾತ್ಮಕವಾಗಿ ಹಾಗೂ ಯೋಜನಾಬದ್ದವಾಗಿ ನೀಡಿ ಯಶಸ್ಸನ್ನು ಗಳಿಸುತ್ತದೆ  ಸೇವಾ ಮನೋಬಾವದಿಂದ ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಲ್ಲ ಶಕ್ತಿಯನ್ನು ಈ ಕ್ಲಬ್ ಹೊಂದಿದೆ ಹಾಗೂ ಈ ಕ್ಲಬ್‌ನಿಂದ ಮಹತ್ತರ ಕಾರ್ಯಗಳು ನಡೆಯಲಿ ಎಂದು ಹೇಳಿದರು. ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು ಅಧ್ಯಕ್ಷತೆ ವಹಿಸಿದ್ದರು, ಕ್ಲಬ್‌ನ ಪ್ರಾರಂಭಕ್ಕೆ ಕಾರಣೀಕರ್ತರಾದ ಇಂಜಿನಿರ್ ರಮಾನಂದ ಕೆ. ನೂತನ ಸದಸ್ಯರನ್ನು ಪರಿಚಯಿಸಿದರು, ಲಯನ್ಸ್ 317 ’ಸಿ’ ಯ ಪ್ರಥಮ ಉಪಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ಮಾಜಿ ಜಿಲ್ಲಾ ಗವರ್ನರ್‌ಗಳಾದ ಲಯನ್ ಪ್ರಕಾಶ್…

Read More