Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ 2020-21ನೇ ಸಾಲಿನ ವರ್ಗ 1ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.25ರ ಅನುದಾನದಲ್ಲಿ ವಿದ್ಯಾರ್ಥಿ ವೇತನ ವೈದ್ಯಕೀಯ ವೆಚ್ಚ ಮತ್ತು ಪುಸ್ತಕ ಇಡುವ ಕಪಾಟು ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಗೀತಾ ಉಪಾಧ್ಯಕ್ಷರಾದ ಶೇಖರ ಖಾರ್ವಿ, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಂತಹ ಅಭ್ಯಾಸಗಳನ್ನು ರೂಢಿಸಿಕೊಂಡಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಹೇಳಿದರು. ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚರೋಪಥಿ ಪುಣೆ ಹಾಗೂ ಮಿಜಾರಿನ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ & ಯೋಗಿಕ್ ಸೈನ್ಸ್‌ಸ್ ಹಾಗೂ ಆಸ್ಪತ್ರೆಯ ಸಹಯೋಗದಲ್ಲಿ ಆನಂದಮಯ ಆರೋಗ್ಯಧಾಮದಲ್ಲಿ ಬೃಹತ್ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಜೀವನಶೈಲಿಯ ಹಿನ್ನಲೆಯಿಂದ ಜನರು ಆರೋಗ್ಯದ ಕಡೆ ಗಮನಹರಿಸದೆ ಅನಾರೋಗ್ಯಕ್ಕೆ ತುತ್ತಾಗುತಿದ್ದಾರೆ. ಇವುಗಳಿಂದ ದೂರವಿರಬೇಕಾದರೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗದಂತಹ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವುಗಳನ್ನು ಕೇವಲ ಒಂದು ದಿನಕ್ಕೆ ಸೀಮಿತ ಗೊಳಿಸಿದರೆ ಯಾವುದೇ ಪ್ರಯೋಜನವಿಲ್ಲ, ನಿರಂತರವಾಗಿ ಈ ಅಭ್ಯಾಸಗಳನ್ನು ರೂಢಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ ಈ ಪ್ರಕೃತಿ ಚಿಕಿತ್ಸೆಗಳು ಜನ ಸಾಮಾನ್ಯರಿಗೆ ತಲುಪುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಕಾಲೇಜಿನ ನ್ಯಾಚುರೋಪಥಿ ಮತ್ತು ಯೋಗಿಕ ಸೈನ್ಸ್ ಪ್ರಾಂಶುಪಾಲೆ ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವರ್ಣರಂಜಿತ ವೇಷ, ಸಂಗೀತ, ನೃತ್ಯ, ಅಭಿನಯ, ಮಾತು ಮೇಳೈಸಿ ಪ್ರದರ್ಶನಗೊಳ್ಳುವ ಯಕ್ಷಗಾನ ಪರಿಪೂರ್ಣ ಕಲೆ. ಇದರಲ್ಲಿ ತೊಡಗುವವರಿಗೆ ದೈಹಿಕ, ಬೌದ್ಧಿಕ, ಆಂಗಿಕ ದೃಢತೆ ಮೈಗೂಡುತ್ತದೆ ಎಂದು ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಹೇಳಿದರು. ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ, ಸಂಘ ಸಾಧನಾ ಸಮಾಜ ಸೇವಾ ವೇದಿಕೆ ಸಹಭಾಗಿತ್ವದಲ್ಲಿ ನಡೆಸುವ ಯಕ್ಷಗಾನ ತರಬೇತಿ ಶಿಬಿರವನ್ನು ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಕ್ಷಗಾನ ಕಲಿಯುವುದರಿಂದ ಕಲೆ ಕರಗತ ಮಾಡಿಕೊಳ್ಳುವುದರೊಂದಿಗೆ ಧೈರ್ಯ, ಮಾತಿನ ಕಲೆ, ಏಕಾಗ್ರತೆ ಸಾಧಿಸುತ್ತಾರೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ರವಿ ಮಡಿವಾಳ ಸ್ವಾಗತಿಸಿದರು. ನಿರೂಪಿಸಿದ ಕರುಣಾಕರ ಆಚಾರ್ ವಂದಿಸಿದರು. ಕಲಾವಿದ ಉದಯ ಕಡಬಾಳ್, ಭಾಗವತ-ಗುರು ದೇವರಾಜ ದಾಸ್, ಉದಯ ಪೂಜಾರಿ, ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ಗ್ರಾಮದ ಹಳಗೇರಿಯ 30ಎಕ್ರೆ ವಿಸ್ತಾರದ ಸರ್ಕಾರಿ ಜಮೀನನ್ನು ಕೈಗಾರಿಕಾ ವಲಯವಾಗಿ ಪರಿವರ್ತಿಸುವುದನ್ನು ವಿರೋಧಿಸಿ ಅಲ್ಲಿನ ವನದುರ್ಗಾ ರೈತಶಕ್ತಿ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಸಾಮೂಹಿಕ ಮನವಿ ಸಲ್ಲಿಸಿದರು. ಹಳಗೇರಿಯ ಸರ್ವೆ ನಂಬರು 166ರ 69 ಎಕ್ರೆ ಸಾಮಾಜಿಕ ಅರಣ್ಯದಲ್ಲಿ 30 ಎಕ್ರೆಯನ್ನು ಕೈಗಾರಿಕಾ ವಲಯ ಪ್ರದೇಶವಾಗಿ ಗುರುತಿಸಲು ಖಂಬದಕೋಣೆ ಗ್ರಾಮ ಪಂಚಾಯಿತಿ ನಿರಾಕ್ಷೇಪಣಾ ಪತ್ರ ನೀಡಲು ನಿರ್ಣಯ ಕೈಗೊಂಡಿರುವುದಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮಾತನಾಡಿದ ರೈತಶಕ್ತಿ ಸಂಘದ ಸಂಯೋಜಕ ಪ್ರಭಾಕರ ಶೆಟ್ಟಿ ಈ ಪ್ರದೇಶದಲ್ಲಿ ಅರಣ್ಯ ಇಲಾಖೆ ವಿವಿಧ ಜಾತಿಯ ಮರ ಬೆಳೆಸಿದೆ. ಅನೇಕ ವನ್ಯ ಪ್ರಾಣಿಗಳಿಗೆ ಹಾಗೂ ಪಕ್ಷಿಗಳಿಗೆ ಆಶ್ರಯ ನೀಡಿದೆ. ಇದನ್ನು ಕೈಗಾರಿಕಾ ವಲಯ ಮಾಡಿದರೆ ಹಲವು ಕೈಗಾರಿಕೆಗಳು ಸ್ಥಾಪನೆಯಾಗಿ ಅರಣ್ಯ ಮತ್ತು ಜೀವರಾಶಿಗಳು ನಾಶವಾಗುತ್ತವೆ. ಈ ಪ್ರದೇಶಕ್ಕೆ ಹೊಂದಿಕೊಂಡು ಸುಮಾರು 500 ಎಕ್ರೆಗೂ ಮಿಕ್ಕಿ ಕೃಷಿ ಭೂಮಿ ಇದೆ. 150 ಕುಟುಂಬಗಳು ಅದನ್ನು ಅವಲಂಬಿಸಿಕೊಂಡಿವೆ. ಉದ್ದೇಶಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಕೇಂದ್ರ ಕೊಂಕಣಿ ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ವತಿಯಿಂದ ಮಣಿಪಾಲ್ ಆರ್.ಎಸ್.ಬಿ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ದ್ವಿಭಾಷಾ ಬರಹ ಗಾರ್ತಿ , ಕವಿಯತ್ರಿ ಹಾಗೂ ಲೇಖಕರಾದ ಶಿರೂರಿನ ಪುಷ್ಪಾ ರಘುರಾಮ್ ಮೇಸ್ತ ಇವರನ್ನು ಮೇಸ್ತ ಸಮಾಜದ ಶ್ರೇಷ್ಟ ಸಾಧಕಿ ಎಂಬ ಹೆಗ್ಗಳಿಕೆಯೊಂದಿಗೆ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ ಪೂರ್ಣಗೊಳಿಸಲು ಯಾವುದೇ ಹಣದ ಕೊರತೆಯಿಲ್ಲ. ಆದರೆ ಪುರಸಭೆಯಿಂದ ಝೋನ್-7 ಅನುಮತಿ ಹಾಗೂ ವೆಟ್ವೆಲ್ಗೆ ಜಾಗ, ಎಸ್ಟಿಪಿಗೆ ತೆರಳುವ ಜಾಗವನ್ನು ಒದಗಿಸಿಕೊಟ್ಟರೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ ನಿರ್ದೇಶಕಿ ಸುಲೋಚನಾ ಭಟ್ ತಿಳಿಸಿದ್ದಾರೆ. ಅವರು ಸೋಮವಾರ ಒಳಚರಂಡಿ ಯೋಜನೆ ಕಾಮಗಾರಿ ಪ್ರಗತಿ ಬಗ್ಗೆ ಕುಂದಾಪುರ ಪುರಸಭಾ ಸಭಾಂಗಣದಲ್ಲಿ ಕರೆಯಲಾಗಿದ್ದ ಪುರಸಭೆಯ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಮಗಾರಿ ನಡೆಯುವ ಸಂದರ್ಭ ಜನರಿಂದ ವಿರೋಧ ಭಾರದಂತೆ ಜಾಗ, ರಸ್ತೆಯ ಪೈಪ್ ಲೈನ್, ಸಿ.ಆರ್.ಝಡ್ ಅನುಮತಿ ಮೊದಲಾದವುಗಳನ್ನು ಪೂರ್ಣಗೊಳಿಸಿಕೊಟ್ಟರೆ ಒಳಚರಂಡಿ ಹಾಗೂ ನೀರು ಸರಬರಾಜು ಮಂಡಳಿಯಿಂದ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು. ಪುರಸಭಾ ಸದಸ್ಯರಾದ ಮೋಹನದಾಸ್ ಶೆಣೈ ಮಾತನಾಡಿ ಪುರಸಭೆಯ ಯುಜಿಡಿ ಕಾಮಗಾರಿಯಿಂದಾಗಿ ಜನರು ಜನಪ್ರತಿನಿಧಿಯನ್ನು ನೀಡಿ ಬೈಯುವಂತೆ ಆಗಿದೆ. ಪುರಸಭಾ ವ್ಯಾಪ್ತಿಯ ಯುಜಿಡಿ ಕಾಮಗಾರಿ ಕೆಲವೆಡೆ ಉತ್ತಮವಾಗಿದ್ದು ಇನ್ನು ಕೆಲವೆಡೆ ಕಳಪೆ ಮಟ್ಟದ್ದಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ವ್ಯವಹಾರ ನಿರ್ವಹಣೆ ಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಶಾಸ್ತ್ರ ಸಂಘ ಜಂಟಿಯಾಗಿ ’ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ’ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಿಜಿಟಲ್ ರಾಯ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕರಾದ ರಾಜೀವ ಶೆಟ್ಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್‌ನ ಮಹತ್ವ ಮತ್ತು ಅದರಿಂದ ಮುಂದಿನ ದಿನಗಳಲ್ಲಿ ಸಿಗುವ ಉದ್ಯೋಗಾವಕಾಶಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವೀಣಾ ವಾಸುದೇವ ಭಟ್, ವ್ಯವಹಾರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಾ ರೈ ಹಾಗೂ ಉಪನ್ಯಾಸಕರುಗಳಾದ ರಾಜೇಶ್ ಶೆಟ್ಟಿ ಮತ್ತು ಸ್ವಸ್ತಿ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಪ್ರೀತಾ ಶೆಟ್ಟಿ ವಂದಿಸಿ, ಆಯಿಷಾ ನಮಿರಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಕುದುರೆಮುಖ ಟ್ರೋಫಿಯ ಚೆಸ್ ಪಂದ್ಯಾಟದಲ್ಲಿ ಕುಂದಾಪುರ ಸಿದ್ದಿವಿನಾಯಕ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಾದ ಯಶಸ್ವಿ ಪ್ರಥಮ, ರಿತೇಶ್ ಪ್ರಥಮ, ವರ್ಣಿತ ದ್ವೀತಿಯ, ಸಾತ್ವಿಕ್ ತ್ರತಿಯ, ಪ್ರಗತಿ ತ್ರತಿ ಯ, ಅಮರ್ತ್ಯ ಚತುರ್ಥ, ಪ್ರಣೀತ ರಾಘವೇಂದ್ರ ಭಂಡಾರ್ಕರ್, ವಿಜೇತರಾಗಿದ್ದಾರೆ. ಅಕಾಡೆಮಿಯ ಕೋಚ್ ಬಾಬು ಜೆ. ಪೂಜಾರಿ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.  ಕುಂದಾಪುರ: ಮಂಗಳೂರಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕುದುರೆಮುಖ ಟ್ರೋಫಿಯ 15ರ ವಯೋಮಿತಿಯ ವಿಭಾಗದಲ್ಲಿ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಯಶಸ್ವಿ ಬಾಬು ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಕುಂದಾಪುರದ ಸಿದ್ದಿವಿನಾಯಕ ಚೆಸ್ ಅಕಾಡೆಮಿಯಲ್ಲಿ ಚದುರಂಗ ತರಬೇತಿ ಪಡೆಯುತ್ತಿದ್ದಾಳೆ ಇವಳ ಸಾಧನೆಗೆ ಶುಭದಾ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ವಿಜೃಂಭಣೆಯಿಂದ ಜರಗಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಉತ್ಸವದಲ್ಲಿ ಪಾಲ್ಗೊಂಡು…

Read More