ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಧಾರ್ಮಿಕ ಆಚರಣೆಗಳನ್ನು ನಡೆಯಬೇಕು ಎನ್ನುವುದರ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಆಚರಣೆಯ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಸ್ವಯಂ ನಿಯಂತ್ರಣ ಹಾಕಿಕೊಳ್ಳುವುದು ಅಗತ್ಯ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನಿಯಮವಳಿಗಳನ್ನು ರೂಪಿಸಿ ರಾಜ್ಯ ಸರಕಾರಗಳಿಗೆ ಸುತ್ತೊಲೆ ಕಳುಹಿಸಿದೆ. ಧಾರ್ಮಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ, ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಹಬ್ಬವನ್ನು ಆಚರಿಸುವುದು ಒಳ್ಳೆಯದು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಅಕಾಡೆಮಿಯಲ್ಲಿ ಹೊಸತನ ತರುವ ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಇಲಾಖೆಯ ನಿರ್ದೇಶಕರುಗಳೊಂದಿಗೆ ಸಭೆ ನಡೆಸಲಾಗಿದೆ. ಎಲ್ಲಾ ಅಕಾಡೆಮಿಗಳಿಗೆ ಜೀವ ತುಂಬುವ ಕಾರ್ಯವನ್ನು ಮಾಡುತ್ತೇನೆ ಎಂದರು. ಕೊಲ್ಲೂರು ಹಾಗೂ ಹಟ್ಟಿಯಂಗಡಿ ದೇವಸ್ಥಾನಳಿಗೆ ಕುಟುಂಬಿಕರೊಂದಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ಗ್ರಾಮದ ಕೊಮೆಯಲ್ಲಿರುವ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶನೇಶ್ವರ ಮಹಾಯಾಗದೊಂದಿಗೆ ಸಾಮೂಹಿಕ ಶನಿ ಶಾಂತಿ ಮತ್ತು ತುಲಾಭಾರ ಸೇವೆಗಳು ನಡೆಯಿತು. ವೇದಮೂರ್ತಿ ಎಮ್. ಮಧೂಸೂದನ ಬಾಯಿರಿ ನೇತೃತ್ವದಲ್ಲಿ ಸಕಲ ವೈದಿಕ ಧಾರ್ಮಿಕ ಕಾರ್ಯಕ್ರಮನಡೆಯಿತು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಕೆ.ಎಸ್, ಕಾರ್ಯದರ್ಶಿ ಉಮೇಶ್ ಮೆಂಡನ್, ದೇವರ ದರ್ಶನ ಪಾತ್ರಿ ನರಸಿಂಹ ಕಾಂಚನ್, ದೇವಳದ ನಿಕಟ ಪೂರ್ವಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಆರ್ಚಕರು ಮತ್ತು ಸಿಬ್ಬಂದಿ ವರ್ಗ, ದೇವಳದ ಭಕ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಿಂದು ಜಾಗರಣ ವೇದಿಕೆಯ ಆಹ್ವಾನದ ಮೇರೆಗೆ ಉಪ್ಪಿನಕುದ್ರು ರಾಮ ಭಜನಾ ಮಂದಿರದಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡರು. ಸಚಿವರನ್ನು ಗೌರವಿಸಿದ ಗಂಗೊಳ್ಳಿಯ ಜಾಗರಣ ವೇದಿಕೆಯ ಮುಖಂಡರು ಗಂಗೊಳ್ಳಿಯ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿದ ಸಚಿವರು ಪ್ರತಿ ಹಂತದಲ್ಲೂ ಹಿಂದು ಜಾಗರಣ ವೇದಿಕೆ ಸದಸ್ಯರ ಜೊತೆ ಇರುವುದಾಗಿ ಭರವಸೆ ನೀಡಿದರು. ಸದಾನಂದ ಉಪ್ಪಿನಕುದ್ರು, ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ರಾಮಪ್ಪ ಖಾರ್ವಿ, ಗಣೇಶ ಶೆಣೈ, ಮೋಹನ್ ಖಾರ್ವಿ, ರಾಘವೇಂದ್ರ ಗಾಣಿಗ, ನವೀನ್ ಗಂಗೊಳ್ಳಿ, ಯಶವಂತ್ ಗಂಗೊಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿಯ ಸಂಘ ಪರಿವಾರದ ಪ್ರಮುಖರು, ಹಿರಿಯರು, ಬೈಂದೂರು ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲಸೀಮಿಯಾ ಮೇಜರ್ ಕಾಯಿಲೆಯಿಂದ ಬಳಲುತ್ತಿರುವ ಬೈಂದೂರಿನ ಸುಶಾಂತ್ (4)ನ ಚಿಕಿತ್ಸೆಗಾಗಿ ಸಹೃದಯಿದಾನಿಗಳ ನೆರವಿನಿಂದ ಒಟ್ಟುಗೂಡಿಸಿದ ಒಟ್ಟು 42351 ರೂಪಾಯಿ (40351 ಚೆಕ್ ಮತ್ತು 2000 ನಗದು) ಹಣವನ್ನು ಕುಂದಾಪುರ ಪೋಲಿಸ್ ಠಾಣೆಯ ಠಾಣಾಧಿಕಾರಿಗಳಾದ ಸದಾಶಿವ್ ಗವರೋಜಿ ಅವರ ನೇತ್ರತ್ವದಲ್ಲಿ ಇಲ್ಲಿನ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಬಾಲನಕ ತಂದೆಗೆ ಹಸ್ತಾಂತರಿಸಲಾಯಿತು. ಹೆಲ್ಪಿಂಗ್ ಹ್ಯಾಂಡ್ಸ್ ಸಮಾಜಸೇವೆಯನ್ನು ಮೆಚ್ಚಿದ ಠಾಣಾಧಿಕಾರಿಗಳಾದ ಸದಾಶಿವ್ ಗೌರವಜಿ ಅವರು ಮುಂದಿನ ದಿನದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಆಗುವ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು. ಬಾಲಕನ ಚಿಕಿತ್ಸೆ ಫಲಕಾರಿಯಾಗಲೆಂದು ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಬಾಲಕನ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷರಾದ ಜಯಾನಂದ ಖಾರ್ವಿ, ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥಾಪಕ ಅಧ್ಯಕ್ಷರಾದ ಪ್ರದೀಪ್ ಮೊಗವೀರ, ಗೌರವ ಸಲಹೆಗಾರರಾದ ರವೀಂದ್ರ ರಟ್ಟಾಡಿ, ಕಾರ್ಯದರ್ಶಿಗಳಾದ ಗುರುಪ್ರಸಾದ್ ಖಾರ್ವಿ, ಕಾರ್ಯಾಧ್ಯಕ್ಷರಾದ ಚರಣ್ ಗಂಗೊಳ್ಳಿ ,ಜೊತೆ ಕಾರ್ಯದರ್ಶಿ ಪ್ರಶಾಂತ್ ತಲ್ಲೂರು, ಸದಸ್ಯರಾದ ಸುನೀಲ್ ತಲ್ಲೂರು ಹಾಗೂ ಸುಕೇಶ್ ನಾಯ್ಕ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಡಿಯಲ್ಲಿ ಮಹಿಳಾ ಸುರಕ್ಷತಾ ಅಭಿಯಾನದ ಅಂಗವಾಗಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ ಕುರಿತು ಜಾಗೃತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಪಣಂಬೂರು ಎಸಿಪಿ ಮಹೇಶ್ ಪ್ರಸಾದ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ, ಇಂತಹ ಸಂದರ್ಭಗಳಲ್ಲಿ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಪೋಲಿಸ್ ಇಲಾಖೆಯ ಸದಾ ಸಿದ್ಧವಾಗಿರುತ್ತದೆ. ಮಹಿಳೆಯರಿಗೆ ಯಾವುದೇ ರೀತಿಯ ಅಭದ್ರತೆಯ ಪರಿಸ್ಥಿತಿ ಬಂದೊದಗಿದರೆ ತುರ್ತು ಸಹಾಯವಾಣಿ ೧೧೨ಕ್ಕೆ ಕರೆ ಮಾಡುವ ಮೂಲಕ ಪೋಲಿಸ್ ಸಹಾಯವನ್ನು ಪಡೆಯಬಹುದು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮೂಡುಬಿದಿರೆ ಪೋಲಿಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್, ಎಸ್ಐಗಳಾದ ಸುದೀಪ್ ಹಾಗೂ ದಿವಾಕರ್ ರೈ, ಎಎಸ್ಐ ಕಾಂತಪ್ಪ ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕುಂಧಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ ಕೊಲ್ಲೂರು ಇವರ ಆಶ್ರಯದಲ್ಲಿ ಕೋವಿಡ್ 19 ಜನ ಜಾಗೃತಿ ಕಾರ್ಯಕ್ರಮ ಕೊಲ್ಲೂ ರಿನಲ್ಲಿ ನಡೆಯಿತು. ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾಸ್ಕ್, ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರ ಪಾಲಿಸಿ ಯಾವುದೇ ಆತಂಕ ಬೇಡ, ಧೈರ್ಯದಿಂದಿರಿ ಎಂದು ಸಲಹೆ ನೀಡಿದರು. ಇದೇ ಸಂದರ್ಭ ಕೋವಿಡ್ 19 ಜನ ಜಾಗೃತಿ ಕರಪತ್ರವನ್ನು ಸಂಘದ ಸದಸ್ಯರು ಕೊಲ್ಲೂರಿನ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಗ್ರಾಮದ ಸ್ಥಳೀಯರಿಗೆ ನೀಡಿ ಕೋವಿಡ್ 19 ಜನ ಜಾಗೃತಿ ಮೂಡಿಸಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮತ್ತು ಸಂಘದ ಸದಸ್ಯರಾದ ಸುಷ್ಮಾ, ಜಯಲಕ್ಷ್ಮಿ, ರತ್ನ, ಸುಗುಣ, ಗೌರಿ, ಉಷಾ, ಭವಾನಿ, ಮತ್ತು ಸ್ಥಳೀಯ ಅಂಗನವಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಸಿಟಿ ವತಿಯಿಂದ ಸೆಲ್ಯೂಟು ಸೈಲೆಂಟ್ ಎಂಬ ಕಾರ್ಯಕ್ರಮದಡಿಯಲ್ಲಿ ಸಮಾಜದ ಎಲೆಮರೆ ಕಾಯಿಯಂತೆ ಇದ್ದು ತಮ್ಮದೇ ಆದ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವವರನ್ನು ಗುರುತಿಸುವ ನಿಟ್ಟಿನಲ್ಲಿ ಬೈಂದೂರು ಭಾಗದ ಯುವ ಯೋಧ ಪ್ರಸ್ತುತ ಜಮ್ಮು-ಕಾಶ್ಮೀರದ ಪುಲ್ವಾಮದ ಗಡಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಾಜ ದೇವಾಡಿಗ ಅವರನ್ನು ಇಲ್ಲಿನ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಬೈಂದೂರು ಸಿಟಿ ವಲಯಾಧಿಕಾರಿ ಮಣಿಕಂಠ ದೇವಾಡಿಗ, ಘಟಕದ ಉಪಾಧ್ಯಕ್ಷೆ ಸೌಮ್ಯ ಬಿಕೆ, ಸಕ್ಕು ಕಲ್ಮಕ್ಕಿ, ಭಾನುಮತಿ ಬಿಕೆ, ಚೈತ್ರ, ದೀಪಿಕಾ ಆಚಾರ್ಯ, ಪ್ರೇಮ ವಿ ಶೆಟ್ಟಿ, ರಾಘವೇಂದ್ರ ಪೂಜಾರಿ, ರಾಘವೇಂದ್ರ ಹೊಳ್ಳ, ರಾಘವೇಂದ್ರ ದೀಕ್ಷಾ ಮೊಬೈಲ್, ಅಶ್ರಫ್, ಸ್ಥಾಪಕ ಕಾರ್ಯದರ್ಶಿ ಸುಶಾಂತ್ ಆಚಾರ್ಯ, ಉಪಸ್ಥಿತರಿದ್ದರು. ಪ್ರಾಜೆಕ್ಟ್ ಡೈರೆಕ್ಟರ್ ಸತೀಶ್ ದೇವಾಡಿಗ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಸವಿತಾ ಗಾಣಿಗ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇಲ್ಲಿನ ಜನ್ಮಭೂಮಿ ಫೌಂಡೇಶನ್ ರಿ. ಇವರ ವತಿಯಿಂದ ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚೆಫ್ಟಾಕ್ ಫುಡ್ & ಹಾಸ್ಪಿಟಾಲಿಟಿ ಪ್ರೈ ಲಿ. ಇದರ ವ್ಯವಸ್ಥಾಪಕ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಸಮಾರಂಭದಲ್ಲಿ ನಾಡಿನ ಖ್ಯಾತ ಸಾಹಿತಿ ಡಾ. ಕುಂ ವೀರಭದ್ರಪ್ಪ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್, ಎಸ್ ಹೊಸಮನಿ, ಬೆಂಗಳೂರು ಎಸಿಪಿ, ಸಿಸಿಬಿ ಹೆಚ್. ಎಸ್…
ಚಾಂದ್ರಮಾನ ಪಂಚಾಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಸೌರಮಾನ ಪಂಚಾಗ ರೀತ್ಯಾ ಸಿಂಹಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೇ ವರಾಹ ಪುರಾಣದ ಪ್ರಕಾರ ಶ್ರೀ ಕೃಷ್ಣ ಜನ್ಮವು ಆಷಾಢ ಮಾಸದ ಶುಕ್ಲಪಕ್ಷದ ದ್ವಾದಶಿಯಂದು ಆಯಿತು. ಆ ಸಂದರ್ಭದಲ್ಲಿ ಚಾಂದ್ರಮಾನದ ಶ್ರಾವಣ ಮಾಸವೇ ಸೌರಮಾನದ ಸಿಂಹಮಾಸವಾಗಿತ್ತು. ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿಯೇ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುವುದು ವಾಡಿಕೆ. ದೇಶದ ವಿವಿಧ ಪ್ರದೇಶಗಳಲ್ಲಿ ತಮ್ಮದೇ ವೈಖರಿಯಲ್ಲಿ ಶ್ರೀಕೃಷ್ಣನನ್ನು ಆರಾಧಿಸುವರು, ಪೂಜಿಸುವರು. ಇದೇ ದಿನವನ್ನು ಗೋಕುಲಾಷ್ಟಮಿಯೆಂದೂ, ಶ್ರೀ ಕೃಷ್ಣ ಜಯಂತಿಯೆಂದೂ, ಜನ್ಮಾಷ್ಟಮಿಯೆಂದೂ ಕರೆಯುವರು. ಶ್ರೀಮನ್ನಾರಾಯಣನ ದಶಾವತಾರಗಳಲ್ಲಿ ಒಂಭತ್ತನೆಯ ಅವತಾರವೇ ಶ್ರೀ ಕೃಷ್ಣ. ಮನುಷ್ಯರಂತೆ ವ್ಯವಹರಿಸಿದರೂ, ಕಾಲಕ್ಕೆ ತಕ್ಕ ಹಾಗೆ ತನ್ನ ಅಪ್ರತಿಮ ಮತ್ತು ಅಮೋಘವಾದ ಜ್ಞಾನ, ಬಲ, ಶಕ್ತಿ, ತೇಜಸ್ಸುಗಳನ್ನೂ ಮತ್ತು ಆತ್ಮ ಗುಣ ಸಂಪತ್ತನ್ನೂ ಪ್ರದರ್ಶಿಸಿದ ಪರಮ ಪುರುಷ. ವರಾಹ ಪುರಾಣದಲ್ಲಿ ಉಲ್ಲೇಖಿಸಿದಂತೆ, ಅಂದು ರಾತ್ರಿ ಸ್ತ್ರೀಯು ಪತಿಯೊಡನೆ ಉಪವಾಸವಿದ್ದು ವ್ರತವನ್ನಾಚರಿಸಿದರೆ ಅವಳ ಹೃದಯದಲ್ಲಿ ಭಗವಂತನು…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್ ಎಂ ಅವರನ್ನು ತಕ್ಷಣದಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ. ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ.
