ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ರೈತರು ಬೆಳೆದ ಬೆಳೆಗೆ ಹಾಪ್ಕಾಮ್ಸ್ ಮಾರಾಟ ಮಳಿಗೆಯಲ್ಲಿ ಲಾಭದಾಯಕ ಧಾರಣೆ ದೊರೆಯಬೇಕು. ಜಿಲ್ಲೆಯ ಹೊರಗಿನ ಉತ್ಪನ್ನ ಮತ್ತು ಇಲ್ಲಿನ ಬೆಳೆಗಳ ದರಗಳಲ್ಲಿ ವ್ಯತಾಸವಿದ್ದು, ಸ್ಥಳೀಯ ರೈತರಿಗೆ ಯಾವುದೇ ಕಾರಣಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಮಂಗಳೂರಿನ ಜಿಲ್ಲಾ ಹಾಪ್ಕಾಮ್ಸ್ ಮಾರುಕಟ್ಟೆ, ರಾಜ್ಯ ತೋಟಗಾರಿಕಾ ಮಾರಾಟ ಮಹಾಮಂಡಲ ವತಿಯಿಂದ 2014–15ನೇ ಸಾಲಿನ ರಾಜ್ಯವಲಯ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಿಂದ ಉಪ್ಪುಂದ ಪೇಟೆಯಲ್ಲಿ ನಿರ್ಮಿಸಿರುವ ನೂತನ ಹಾಪ್ಕಾಮ್ಸ್ ಮಾರಾಟ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಇಂದು ಸಾವಯವ ಮತ್ತು ರಸಗೊಬ್ಬರ ನಡುವೆ ಸಮತೋಲನ ಕಾಪಾಡುವ ಅಗತ್ಯವಿದೆ. ಸಾಧ್ಯವಾದಷ್ಟೂ ಸಾವಯವ ಕೃಷಿಗೆ ಮರಳುವುದು ಅನಿವಾರ್ಯವೆನಿಸಿದೆ. ರೈತರಿಗೆ ತರಬೇತಿ ನೀಡಬೇಕು. ಕೃಷಿಯೊಂದಿಗೆ ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಣೆ ನಡೆಸುವುದಲ್ಲದೇ, ಕಡಿಮೆ ವೆಚ್ಚದಲ್ಲಿ ಆರೋಗ್ಯ ನೀಡುವ ಪಪ್ಪಾಯಿ, ನುಗ್ಗೆ, ಬಸಳೆ, ತೊಂಡೆ, ಸೌತೆ, ಬಾಳೆ ಬೆಳೆಸಿ ಮನೆಯ ಖರ್ಚಿಗೆ ಬಳಸಿಕೊಂಡು ಸ್ವಾವಲಂಬನೆ ಸಾಧಿಸಬೇಕು’ ಎಂದರು. ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷ ಲಕ್ಷ್ಮೀನಾರಾಯಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಗೀತ, ಕಲೆ, ಸಂಸ್ಕೃತಿಯ ಉಪಾಸನೆ ಇದ್ದಲ್ಲಿ ಮನುಷ್ಯ ಮನುಷ್ಯನಾಗಿರುತ್ತಾನೆ. ಅಂತಹದ್ದೊಂದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದು ಪ್ರಜ್ಞಾವಂತ ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವ ಎರಡನೇ ದಿನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್, ಬೈಂದೂರು ಶಿಶುಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಬೈಂದೂರು ಡಾ. ಬಿ.ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಬೈಂದೂರು ಮಾದರಿ ಶಾಲೆ ಎಸ್ಡಿಎಂಸಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್, ಉದ್ಯಮಿ ಕೆ.ಎ ಸತೀಶ್ ಉಡುಪಿ, ಸುರಭಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ ವೈ. ಕೊರಗ ಉಪಸ್ಥಿತರಿದ್ದರು. ಗಾಯಕಿ ಗೀತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಆತ್ಮವಿಶ್ವಾಸವನ್ನು ಮೂಡಿಸಬೇಕು ನಿಮ್ಮೊಳಗೆ ಅದ್ಬುತವಾದ ಒಂದು ಶಕ್ತಿ ಅದನ್ನು ಬಳಸಿಕೊಂಡು ಎನು ಬೇಕಾದರೂ ಮಾಡಬಹುದು ಎನ್ನುವುದನ್ನು ಹೇಳಿಕೊಡಿ, ಆಗ ಅವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ಪತ್ರಕರ್ತ ರವಿಬೆಳಗೆರೆ ತಿಳಿಸಿದರು. ಅವರು ಕೋಟ ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ಮೂಡುಗಿಳಿಯಾರು ಶಾಲಾ ಮೈದಾನದಲ್ಲಿ ಜರಗಿದ ಅದ್ದೂರಿಯ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮ ‘ಅಭಿಮತ ಸಂಭ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೀರ್ತಿ ಕಲಶ ಪ್ರಶಸ್ತಿಗೆ ಭಾಜನರಾದ ಯೋಗರಾಜ್ ಭಟ್ಟರು ಕನ್ನಡ ಚಿತ್ರರಂಗದ ಮಾಂತ್ರಿಕ ಸ್ವರೂಪಿ ಸಾಹಿತಿ. ಸ್ವಂತ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಿದ ಸಾಧಕ. ಇವರ ಪ್ರತಿಯೊಂದು ಸಾಲುಗಳು ಜೀವನೋತ್ಸಹವನ್ನು ತುಂಬುತ್ತದೆ ಎಂದರು. ಹುಟ್ಟೂರ ಗೌರವ ಸಂತಸ ತಂದಿದೆ: ಈ ಸಂದರ್ಭ ಚಿತ್ರ ಸಾಹಿತಿ ಯೋಗರಾಜ್ ಭಟ್ ಅವರಿಗೆ ಜನಸೇವಾ ಟ್ರಸ್ಟ್ನ ಕೀರ್ತಿ ಕಳಸ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಭಟ್ಟರು, ನಾನು ಮೂಲತಃ ಮಂದಾರ್ತಿಯವನು ಹೀಗಾಗಿ ಈ ಪ್ರದೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಿ ಅದು ಬಹುಕಾಲ ಉಳಿಯುವಂತೆ ಮಾಡುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಮಾಜಿ ಜಿಲ್ಲಾ ರೋಟರಿ ಗವರ್ನರ್ ಎ. ಅಭಿನಂದನ್ ಶೆಟ್ಟಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವಕ್ಕೆ ಡೋಲು ಭಾರಿಸಿ ಚಾಲನೆ ನೀಡಿ ಮಾತನಾಡಿ ಕಲೆ ಹಾಗೂ ಕಲಾಕಾರರಿಗೆ ಯಾವುದಾದರೂ ವೇದಿಕೆ ಅಥವಾ ಸಮೂಹದ ಮೂಲಕ ಜೀವ ಕೊಡದಿದ್ದರೆ ಅದು ನಶಿಸುವುದಲ್ಲದೇ ಒಂದು ಪರಂಪರೆಯೂ ಮಾಯವಾಗುತ್ತದೆ ಎಂದು ಹೇಳಿದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯಕ್ರಮ ಆಯೋಜನೆ ಸುಲಭ ಸಾಧ್ಯವಲ್ಲ. ವೇದಿಕೆ ಸೃಷ್ಟಿಸುವ ಮೂಲಕ ಕಲಾವಿದರಿಗೊಂದು ಅವಕಾಶ ಹಾಗೂ ಪ್ರೇಕ್ಷಕರಿಗೆ ಮನೋರಂಜನೆ ಏಕಕಾಲದಲ್ಲಿ ದೊರೆತಂತಾಗುವುದು ಎಂದರು. ಬೈಂದೂರು ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಮಣಿಕಂಠ ಎಸ್., ಉದ್ಯಮಿ ಪ್ರಸಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ, ಪ್ರತಿಭಾವಂತ ಕಲಾವಿದ ಗೌತಮ್ ಕೆ. ಅವರ ಎಲ್ಲಿರುವ ನಾನು ಆಲ್ಬಂ ಸಾಂಗ್ ಫೆ. 11ರ ಬೆಳಿಗ್ಗೆ 10ಗಂಟೆಗೆ ಬಿಡುಗಡೆಗೊಳ್ಳಲಿದೆ. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಆಲ್ಬಂ ಸಾಂಗ್ ಬಿಡುಗಡೆಗೊಳಿಸಲಿದ್ದಾರೆ. ಆಲ್ಬಂ ಸಾಂಗ್ ನಿರ್ದೇಶನ, ನಟನೆ ಹಾಗೂ ಹಾಡುಗಾರಿಕೆಯಲ್ಲಿ ಗೌತಮ್ ಕೆ. ಇದ್ದರೇ, ದಿಲೀಪ್ ಮರೀಚಿ ಸಾಹಿತ್ಯ ಬರೆದಿದ್ದು, ರಾಜೇಶ್ ನಾಯ್ಕ್ ಹಾಗೂ ಭರತ್ ಕ್ಯಾಮರಾದಲ್ಲಿ ಸಹಕರಿಸಿದ್ದಾರೆ. ನಿತೀಶ್ ಚಿತ್ರಕಥೆಯಲ್ಲಿ ಸಹಕರಿಸಿದ್ದರೆ, ರೆಲ್ವಿನ್ ಮೆಲ್ರಿನ್ ಸಂಕಲನ ಮಾಡಿದ್ದಾರೆ. ಸಹಕಲಾವಿದರಾದ ಶ್ರೇಯಾ ಗೌತಮ್ ನಟಿಸಿದ್ದಾರೆ. ಬಿಡುಗಡೆಯಾದ ಬಳಿಕ ಉಷಾಕಾಮ್ಯ ಪ್ರೊಡಕ್ಷನ್ಸ್ ಯುಟ್ಯೂಬ್ ಚಾನೆಲ್ನಲ್ಲಿ (https://www.youtube.com/channel/UCfRKolvXC7K9Wt_a4eIYn6w/videos) ಲಭ್ಯವಾಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುಜರಾತಿನ ವಡೋದರದಲ್ಲಿ ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ ನಾಗರಾಜ ಖಾರ್ವಿ ಇವರು 200ಮೀ ಬ್ರೆಷ್ಟ್ ಸ್ಟ್ರೋಕ್ನಲ್ಲಿ ಚಿನ್ನದ ಪದಕ, 100ಮೀ ಬ್ರೆಷ್ಟ್ ಸ್ಟ್ರೋಕ್ನಲ್ಲಿ ಚಿನ್ನದ ಪದಕ, 50ಮೀ. ಬ್ರೆಷ್ಟ್ ಸ್ಟ್ರೋಕ್ನಲ್ಲಿ ಕಂಚಿನ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ನಾಗರಾಜ ಖಾರ್ವಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು ಮತ್ತು ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆ ವಿದ್ಯಾರ್ಥಿ. ಇವರಿಗೆ ರೇಷ್ಮೆ ಇಲಾಖೆಯ ನಿರೀಕ್ಷಕ ಬಿ. ಕೆ. ನಾಯ್ಕ್, ಈಜು ತರಬೇತುದಾರ ಶಿವಾನಂದ ಗಟ್ಟಿ, ಲೋಕರಾಜ್ ವಿಟ್ಲ ಈಜು ತರಬೇತಿ ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮರವಂತೆ ಮೂಲದ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಅವರ ’ಇನ್ನೂನು ಬೇಕಾಗಿದೆ’ ಹಾಡಿಗೆ ಬೆಂಗಳೂರಿನಲ್ಲಿ ಜರುಗಿದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಅವರು ಮುಂದಿನ ನಿಲ್ದಾಣ ಚಿತ್ರಕ್ಕಾಗಿ ’ಇನ್ನೂನು ಬೇಕಾಗಿದೆ’ ಹಾಡು ರಚಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಭಾಷೆ ಬಳಕೆ ಹೆಚ್ಚಾದರೆ ಕನ್ನಡ ಉಳಿಯುತ್ತದೆಯೇ ಹೊರತು ಹೋರಾಟದಿಂದಲ್ಲ. ಕನ್ನಡ ಬಳಕೆ ಹೆಚ್ಚು ಮಾಡುವುದರಿಂದ ಕನ್ನಡ ಉಳಿಸಲು ಸಾಧ್ಯ, ಸಾಮಾಜಿಕ ಜಾಲತಾಣದಿಂದ ಓದು ಕಡಿಮೆ ಆಗುತ್ತದೆ ಎನ್ನುವ ಆರೋಪದ ನಡುವೆ ಜಾಲತಾಣ ಕೂಡಾ ಬರವಣಿಗೆ ವೇದಿಕೆ ಆಗುತ್ತದೆ. ಜಂಗಮವಾಣಿಲ್ಲಿ ಕನ್ನಡ ಅಕ್ಷರ ಜೋಡಣೆ ಮಾಡುವ ಮೂಲಕ ಕನ್ನಡ ಉಳಿಸುವ ಕೆಲಸ ಮಾಡೋಣ ಎಂದು ಜಿಲ್ಲಾ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಭಾವನಾ ಆರ್. ಭಟ್ ಕೆರೆಮಠ ಹೇಳಿದರು. ಕೋಟ ಕಲಾ ಸೌರಭ ಸಂಸ್ಕೃತಿಕ ಸಂಘಟನೆ, ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಕಾಲೇಜ್ ವೇದಿಕೆಯಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ಪದವಿ ಮತ್ತು ಪದವಿಪೂರ್ವ ಕಾಲೇಜ್ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿ ಅಮ್ಮ ಹೇಳುವ ಶೋಭಾನೆ, ಅಪ್ಪ ಹೇಳುವ ಗಾದೆ, ಅಜ್ಜಿ ಹೇಳುವ ನೀತಿಪಾಠ, ಅಜ್ಜ ಹೇಳುವ ಕತೆ ಇವೆಲ್ಲವೂ ಸಾಹಿತ್ಯದ ಪ್ರಕಾರಗಳಾಗಿದ್ದು, ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಕಲಾ ಸೌರಭ ಸಂಸ್ಕೃತಿಕ ಸಂಘಟನೆ, ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜು ಆಶ್ರಯದಲ್ಲಿ ಕಾಲೇಜು ವೇದಿಕೆಯಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ಪದವಿ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಾಹಿತಿ ಎಸ್. ಜನಾರ್ದನ ಮರವಂತೆ ಮಾತನಾಡಿ ಸಾಹಿತ್ಯ, ಶಿಲ್ಪ ಕಲೆಗೆ ಸಾಮ್ಯತೆ ಇದೆ. ಶಿಲ್ಪಿ ತುಂಡುಕಲ್ಲಿಗೆ ಪ್ರತಿಭೆ, ಧ್ಯಾನದ ಮೂಲಕ ಸುಂದರ ಮೂರ್ತಿ ಕೊಟ್ಟರೆ ಸಾಹಿತಿ ತನಗೆ ಸಿಕ್ಕ ವಸ್ತುವಿಗೆ ತನಗೆ ಬೇಕಾದ ಹಾಗೆ ರೂಪ ಕೊಡಲು ಭಾಷೆ, ಜ್ಞಾನ ಬಳಸುತ್ತಾನೆ. ಸಾಹಿತ್ಯ ಕ್ಷೇತ್ರಕ್ಕೆ ಬರುವ ಎಲ್ಲರಿಗೂ ಭಾಷೆ ಬಳಕೆ, ನಿರೂಪಿಸುವ ತಾಕತ್ತು ಇರಬೇಕಾಗುತ್ತದೆ. ಭಾಷೆ ಹೇಗೆ ಬಳಸಬೇಕು ಹೇಗೆ ಪ್ರಸ್ತುತ ಪಡಿಸಬೇಕು ಎನ್ನುವುದು ಕೊರತೆಯಾಗಿದ್ದು, ಅಧ್ಯಯನದ ಮೂಲಕ ಕೊರೆತೆ ನೀಗಿಸಿಕೊಳ್ಳಬೇಕು ಎಂದರು. ಭಾಷಾ ಜ್ಞಾನ ಹಿಡಿತ ಇಲ್ಲದಿದ್ದಾಗ ನಾವು ಹೇಳಬೇಕಾದ ಸಂಗತಿ ಹೊರಗಿಡಲು ಆಗದು. ಭಾಷೆ ಮತ್ತು ಜ್ಞಾನದ ಸಂಪಾದನೆಗೆ ತಕ್ಕಮಟ್ಟಿಗಿನ ಅಧ್ಯಯನ ಬೇಕು. ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಥಾಯ್ಲೆಂಡ್ ಫುಕೆಟ್ ರವಾಯ್ ಬಾಕ್ಸಿಂಗ್ ಸ್ಟೇಡಿಯಂನಲ್ಲಿ ಈಚೆಗೆ ನಡೆದ ಅಂತರ ರಾಷ್ಟ್ರ ಮಟ್ಟದ 65 ಕೆ ಜಿ ವಿಭಾಗದ ಮುಯಿಥಾಯ್ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಥಾಯ್ಲೆಂಡ್ ಕಿಕ್ ಬಾಕ್ಸರ್ ನ್ಯುವ್ಲಿಕಿಟ್ ವಿರುದ್ಧ ಕುಂದಾಪುರದ ಕ್ರೀಡಾಪಟು ಅನೀಶ್ ಶೆಟ್ಟಿ ಗೆಲುವು ದಾಖಲಿಸಿದ್ದಾರೆ. ಬಾಕ್ಸಿಂಗ್ ರಿಂಕ್ನಲ್ಲಿ ಎದುರಾಳಿ ಸೋಲಿಸಿ ಅಂತರ ರಾಷ್ಟ್ರ ಮಟ್ಟದ ಚಾಂಪಿಯನ್ ಷಿಪ್ ಪಟ್ಟ ದಾಖಲಿಸಿದ ಅನೀಶ್ ಶೆಟ್ಟಿ ಈಗ ಎಲ್ಲರ ಗಮನ ಸೆಳೆದಿದ್ದಾರೆ. ಅನೀಶ್ ಗೆಲುವು ದಾಖಲಿಸಲು ‘ಫ್ಲೈಯಿಂಗ್ ನೀ’ (ಹಾರು ಮುಂಗಾಲು) ಹೊಡೆತವು ಪ್ರಮುಖ ಕಾರಣವಾಯಿತು. 65 ಕೆಜಿ ವಿಭಾಗದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಾಂಪಿಯನ್ ಷಿಪ್ ಪಡೆದ 30ರ ಹರೆಯದ ಅನೀಶ್ ಶೆಟ್ಟಿ ಕುಂದಾಪುರ ತಾಲ್ಲೂಕಿನ ಕಟ್ಕೆರೆ ಶಂಕರ ಶೆಟ್ಟಿ ಹಾಗೂ ತಾಯಿ – ಉಷಾ ಶೆಟ್ಟಿ ದಂಪತಿ ಪುತ್ರ. ಬೆಂಗಳೂರಿನಲ್ಲಿ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದಾರೆ. ಕಾಲೇಜು ದಿನಗಳಲ್ಲಿ ಉತ್ತಮ ವಾಲಿಬಾಲ್ ಆಟಗಾರರಾಗಿದ್ದರು. ಫಿಟ್ನೆಸ್ಗಾಗಿ ಜಿಮ್ ಸೇರಿಕೊಂಡಿದ್ದರು. ಅವರಿಗೆ…
