ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿರ್ದೇಶಕರುಗಳಾಗಿ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ, ಪ್ರಕಾಶ ದೇವಾಡಿಗ, ರಾಮ ಗಾಂಧಿನಗರ, ಭೋಜ ನಾಯ್ಕ್ ಆಯ್ಕೆಯಾಗಿದ್ದು, ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸತತ ಹತ್ತನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ ಕಳೆದ 25 ವರ್ಷಗಳಲ್ಲಿ ಹಲವರು ಒಗ್ಗಟ್ಟಾಗಿ ಶ್ರಮಿಸಿದ್ದರಿಂದ ಸಂಸ್ಥೆ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಭವಿಷ್ಯದಲ್ಲಿಯೂ ಹಲವಾರು ಯೋಜನೆಗಳು ನಮ್ಮ ಮುಂದಿದ್ದು, ಎಲ್ಲಾ ನಿರ್ದೇಶಕರುಗಳ ಸಹಕಾರದೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದ ಅವರು ಆಯ್ಕೆಯಾಗುವಲ್ಲಿ ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಚುನಾವಣಾ ಅಧಿಕಾರಿಯಾಗಿದ್ದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ಜ.26: ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ 2020ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ದೇಶದಲ್ಲಿ 40ಕೋಟಿ ಜನರು ತಿನ್ನಲು ಅನ್ನ ಸಿಗದೆ ನರಳುತ್ತಿದ್ದಾರೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು. ಪುತ್ತಿಗೆಯ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ’ಗಣರಾಜ್ಯೋತ್ಸವ ಆಚರಿಸುವುದು ನಮ್ಮ ಕರ್ತವ್ಯಗಳನ್ನು ತಿಳಿಯಲು. ದೊಡ್ಡ ಮಟ್ಟಿನ ದೇಶ ಸೇವೆ ಸಾಧ್ಯವಾಗದಿದ್ದರೂ ನಮ್ಮ ಊರಿನಲ್ಲಿ ಪರಿಸರಕ್ಕಾಗಿ ಅಥವಾ ಜನರಿಗಾಗಿ ಮಾಡುವ ಸೇವೆಗಳು ದೇಶಕ್ಕಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಡಳಿತ, ಕುಂದಾಪುರ ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ನಮ್ಮ ದೇಶದಲ್ಲಿ ಮೂರುವರೆ ಸಾವಿರ ಜಾತಿಗಳಿದ್ದರೂ ಎಲ್ಲಾ ಜಾತಿ-ಧರ್ಮಗಳ ಜನರು ಸಮಾನವಾಗಿ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದ್ದು, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ನಮ್ಮೊಳಗೆ ಐಕ್ಯತೆ, ಒಗ್ಗಟ್ಟನ್ನು ಬೆಳೆಸಬೇಕು. ನಾವೆಲ್ಲರೂ ತಾಯಿ ಭಾರತಾಂಬೆಯ ಮಕ್ಕಳೆಂಬ ಹೆಮ್ಮೆ ಹೆಚ್ಚಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ತಿಪ್ಪೇಸ್ವಾಮಿ, ಎಎಸ್ಪಿ ಹರಿರಾಮ್ ಶಂಕರ್, ಪುರಸಭೆ ಸದಸ್ಯರಾದ ಶ್ರೀಧರ್ ಶೇರುಗಾರ್, ಪ್ರಭಾಕರ ವಿ, ವೃತ್ತ ನಿರೀಕ್ಷಕ ಗೋಪಿಕೃಷ್ಣ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ಅಧಿಕಾರಿ ಕುಸುಮಾಕರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಪುರಸಭೆ ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ರಿ. ಕುಂದಾಪುರ ತಾಲೂಕು ಘಟಕ ಹಾಗೂ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಘಟಕದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ರಘುನಂದನ್ ಭಟ್ ಮಾತನಾಡಿ ಭಾರತ ಜಗತ್ತಿಗೆ ಎಲ್ಲವನ್ನೂ ನೀಡಿದೆ. ಇಲ್ಲಿನ ಮಣ್ಣಿಗೆ ವಿಶೇಷ ಶಕ್ತಿಯಿದ್ದು, ತಪಸ್ಸಿನಂತೆ ತೊಡಗಿ ರಚಿಸಿದ ಸಾಹಿತ್ಯ ಬಹುಕಾಲ ಉಳಿಯುತ್ತದೆ. ಅದಕ್ಕೆ ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳೇ ಸಾಕ್ಷಿ. ಯಾವುದೇ ತಾಂತ್ರಿಕ ಸೌಕಲ್ಯಗಳಿಲ್ಲದ ಕಾಲದಲ್ಲಿಯೂ ಅದು ಜಗತ್ತನ್ನು ವ್ಯಾಪಿಸಿತ್ತು. ಎಂದರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣುವ ಸಂಸ್ಥೆ. ಯುವ ಸಮುದಾಯಲ್ಲಿ ಭಾಷೆ, ಸಾಹಿತ್ಯದ ಕುರಿತು ಅಭಿರುಚಿ ಮೂಡಿಸುವ ಸಲುವಾಗಿ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ…
ಸುನಿಲ್ ಹೆಚ್. ಜಿ., | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರದ ಕೋಡಿ ಕಡಲ ಕಿನಾರೆ ಬಣ್ಣಗಳಿಂದ ಕಳೆಗಟ್ಟಿತ್ತು. ಕಲಾವಿದನ ಕೈಚಳಕ, ಕಸುಬುದಾರನ ಉತ್ಪನ್ನ, ರುಚಿಯಾದ ಖಾದ್ಯ, ವಿಹಾರ – ಅರಿವಿನೊಂದಿಗೆ, ಸಾಂಸ್ಕೃತಿಕ ಲೋಕದ ಅನಾವರಣ. ಅಲ್ಲೊಂದು ವಿಶೇಷ; ಘನ ಉದ್ದೇಶದೊಂದಿಗೆ ಜೊತೆಯಾಗಿತ್ತು. ಇವೆಲ್ಲವೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ನೇತೃತ್ವದಲ್ಲಿ ಎಸ್ಎಫ್ಎಲ್ ಇಂಡಿಯಾ, ಗೀತಾನಂದ ಫೌಂಡೇಶನ್ ಮಣೂರು, ಮಾತಾ ಅಮೃತಾನಂದಮಯಿ ಸಂಸ್ಥೆ, ಸಾಧನ ಕಲಾಸಂಗಮ ಕುಂದಾಪುರ, ಎನ್.ಹೆಚ್-66 ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಕ್ಲೀನ್ ಕುಂದಾಪುರ ಪ್ರೊಜೆಕ್ಟ್ ೫೦ನೇ ವಾರ ಪೂರೈಸಿದ ನಿಮಿತ್ತ ಶನಿವಾರ ಕೋಡಿ ಕಡಲ ಕಿನಾರೆಯಲ್ಲಿ ಆಯೋಜಿಸಲಾದ ಪ್ಲಾಸ್ಟಿಕ್ ಮುಕ್ತ ಬೀಚ್ ಉತ್ಸವ ನಿರ್ವಾಣ 2020ರಲ್ಲಿ ಕಂಡ ದೃಶ್ಯಕಾವ್ಯಗಳು. ಅಲ್ಲಿ ಪ್ಲಾಸ್ಟಿಕ್ ಬಳಸದೇ ತಯಾರಿಸಿದ ಡಿಸೈನ್ ಡಿಸೈನ್ನಲ್ಲಿ ಹಾಳೆ ತಟ್ಟೆಗಳು, ಪ್ಲೇಟ್, ಹೂಕುಂಡ, ಪೆನ್, ಪೆನ್ಸಿಲ್, ಮನೆ ಅಲಂಕಾರಿಕಾ ವಸ್ತುಗಳು, ಪರಿಸರ ಸ್ನೇಹಿ ಬ್ಯಾಗ್, ಖಾದಿ ಬಟ್ಟೆಗಳು, ಮೊಬೈಲ್ ಕವರ್, ಪಾಕೇಟ್, ಬೆತ್ತ-ಬಿದಿರಿನಿಂದ ತಯಾರಿಸಿ ವಿವಿಧ ಕರಕುಶಲ ವಸ್ತುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಛಂದೋಬದ್ಧವಾಗಿ ಬರೆಯುವವರೆ ವಿರಳರಾದ ಈ ಕಾಲಘಟ್ಟದಲ್ಲಿ ನೀತಿಬೋಧೆಯಂತಿರುವ ಸುಮಾರು 250 ಕುಸುಮ ಷಟ್ಪದಿಯ ಪದ್ಯಗಳನ್ನು ಒಳಗೊಂಡ ಪುಸ್ತಕವನ್ನು ಬರೆದಿರುವುದು ನಿಜಕ್ಕೂ ಶ್ಲಾಘನೀಯ ಎಂದು ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಸಂಯೋಜಕರಾದ ಡಾ. ಮಹಾಬಲೇಶ್ವರ ರಾವ್ ಹೇಳಿದರು. ಅವರು ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಾಗರಾಜ ಖಾರ್ವಿ ಅವರು ಬರೆದ ಕಮಲತನಯನ ಷಟ್ಪದಿ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಬೈಂದೂರಿನ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಪುಸ್ತಕದ ಪರಿಚಯ ಮಾಡಿದರು. ಶಿಕ್ಷಕ, ಯಕ್ಷಗಾನ ಪ್ರಸಂಗಕರ್ತ ಪಿ.ವಿ.ಆನಂದ ಸಾಲಿಗ್ರಾಮ ಆಯ್ದ ಕುಸುಮ ಷಟ್ಪದಿಯ ಪದ್ಯಗಳನ್ನು ಗಮಕ ಮತ್ತು ಯಕ್ಷಗಾನ ಶೈಲಿಯಲ್ಲಿ ಹಾಡಿದರು. ಅನ್ನಪೂರ್ಣ ಬಿ.ಎಂ. ಕವಿ ಪರಿಚಯ ಮಾಡಿದರು. ವಿದ್ಯಾರ್ಥಿನಿ ಅಶ್ವಿನಿ ಶಾಸ್ತ್ರಿ ಸ್ವಾಗತಿಸಿ, ನಾಗರಾಜ ಖಾರ್ವಿ ವಂದಿಸಿದರು. ಅನುಷ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ನಿರ್ದಿಷ್ಟ ವಿಷಯದ ಆಯ್ಕೆ ಹಾಗೂ ನಿರಂತರ ಓದುವಿಕೆ ಐಎಎಸ್ ಪರೀಕ್ಷೆಯಲ್ಲಿ ಸಫಲರಾಗಲೂ ಪ್ರಮುಖ ಪಾತ್ರ ವಹಿಸುತ್ತವೆ ಎಂದು ದಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ ಸೆಲ್ವಮಣಿ ಆರ್ ತಿಳಿಸಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆಳ್ವಾಸ್ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ‘ನಾಯಕತ್ವ-ಯುವಜನಾಂಗ ಹಾಗೂ ರಾಷ್ಟ್ರ ನಿರ್ಮಾಣ’ ಎಂಬ ಶಿಬಿರದಲ್ಲಿ ಮಾತನಾಡಿ ಐಎಎಸ್ ಪರೀಕ್ಷೆಗೆ ಸತತ ಪ್ರಯತ್ನ ಅಗತ್ಯ. ಪರೀಕ್ಷೆಯಲ್ಲಿ ವಿಷಯದ ಕುರಿತು ಜ್ಞಾನದ ಜತೆಗೆ ಸಂಧರ್ಭಕ್ಕನುಗುಣವಾಗಿ ಓದಿದ ವಿಷಯವನ್ನು ಉಪಯೋಗಿಸಿಕೊಳ್ಳುವ ಕಲೆ ಅಗತ್ಯ ಎಂದರು. ಇದೇ ಸಂಧರ್ಭದಲ್ಲಿ ಉಪಸ್ಥಿತರಿದ್ದ ಇನೋರ್ವ ಅತಿಥಿ ಪ್ರೋಬೇಶನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಐಎಎಸ್ ಪರೀಕ್ಷೆಗೆ ಆಯ್ಕೆ ಮಾಡುವ ವಿಷಯಗಳು, ಪ್ರಸ್ತುತ ದಿನಗಳಿಗೆ ಅನುಗುಣವಾದ ಪರೀಕ್ಷಾ ತಯಾರಿಯ ಬಗ್ಗೆ ವಿವರಿಸಿದರು. ಅಧಿವೇಶನದಲ್ಲಿ ಭಾರತದ ಕಲ್ಪನೆ ಎಂಬ ವಿಷಯದ ಕುರಿತು ಮಾತನಾಡಿದ ತುಮಕೂರು ವಿವಿಯ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಜನರಲ್ಲಿ ಸಾಮರಸ್ಯ ಹೆಚ್ಚಿಸುವ ನಿಟ್ಟಿನಲ್ಲಿ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಾಟ ಒಂದು ಉತ್ತಮ ಸಂದೇಶವನ್ನು ರಾಜ್ಯಕ್ಕೆ ನೀಡುತ್ತಿದೆ. ಅತಿ ಸೂಕ್ಷ್ಮ ಪ್ರದೇಶವೆಂಬ ಹಣೆ ಪಟ್ಟಿಯನ್ನು ತೆಗೆದು ಹಾಕಿ ಜನರು ಅನ್ಯೋನ್ಯವಾಗಿ, ಪ್ರೀತಿಯಿಂದ ಸಂತೋಷವಾಗಿ ಜೀವನ ನಡೆಸುವಂತಾಗಬೇಕು. ಪೊಲೀಸ್ ಇಲಾಖೆ ಇಂತಹ ಒಂದು ಉತ್ತಮ ಉದ್ದೇಶವನ್ನಿಟ್ಟುಕೊಂಡು ಗಂಗೊಳ್ಳಿಯ ಎಲ್ಲರನ್ನು ಒಂದುಗೂಡಿಸಿ ಆಯೋಜಿಸಿರುವ ಕ್ರೀಡಾಕೂಟ ಜನರ ಮನಸ್ಸಿನಲ್ಲಿರುವ ಭಯವನ್ನು ತೊಡೆದು ಹಾಕಿ ಗಂಗೊಳ್ಳಿಯಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಸಹಕಾರಿಯಾಗಲಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಸೌಹಾರ್ದ ಕ್ರೀಡಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಟೆನ್ನಿಸ್ ಬಾಲ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಗಂಗೊಳ್ಳಿ ಪ್ರೀಮಿಯರ್ ಲೀಗ್ ’ಪಂಚಗಂಗಾವಳಿ ಸೌಹಾರ್ದ ಟ್ರೋಫಿ – ೨೦೨೦’ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಿಂದ ಆನಗಳ್ಳಿ ದತ್ತಾಶ್ರಮದವರೆಗೆ ಹಮ್ಮಿಕೊಂಡ ಪುರ ಮೆರವಣಿಗೆಗೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ಕೌಟ್ ಲೀಡರ್ ಹಾಗೂ ರ್ಯಾಲಿಯ ನಾಯಕ ಪ್ರವೀಣ್ ಮೊಗವೀರ ಗಂಗೊಳ್ಳಿ ಚಾಲನೆ ನೀಡಿದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ, ಕುಂದಾಪುರದ ಅಧ್ಯಕ್ಷರಾದ ಗುಣರತ್ನ, ಕಾರ್ಯದರ್ಶಿ ರೇಖಾ, ಖಜಾಂಚಿ ಶ್ರೀ ವಿರೇಂದ್ರ ಹಾಗೂ ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಡಾ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಪಂಚಾಯತ್ 19ನೇ ಸಾಮಾನ್ಯ ಸಭೆ ಆಡಳಿತ ಪಕ್ಷದ ಸದಸ್ಯರು ಹಾಗೂ ಅಧ್ಯಕ್ಷರ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಗಲಾಟೆ-ಗದ್ದಲದಲ್ಲೇ ಮುಗಿಯಿತು. ಸಾಮಾನ್ಯ ಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳ ಅಸಮರ್ಪಕ ಉತ್ತರ, ಕುಂದಾಪುರ ತಾಲೂಕು ಆಸ್ಪತ್ರೆ ಆರೋಗ್ಯಾಧಿಕಾರಿ ವಿರುದ್ಧದ ನಿರ್ಣಯ ಜಿಪಂಗೆ ಕಳುಹಿಸದ್ದಕ್ಕೆ ಅಸಮಾಧಾನ, ತಾಪಂ ಸಾಮಾನ್ಯ ಸಭೆಯ ಕಾರ್ಯಸೂಚಿ ವಿಳಂಬಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಮೊದಲ್ಗೊಂಡು ಎಲ್ಲವೂ ಅಪೂರ್ಣ ಚರ್ಚೆಯೊಂದಿಗೆ ಕೊನೆಗೊಂಡಿತು. ತಾಲೂಕು ಪಂಚಾಯತಿಯನ್ನು ಶಾಸಕರಿಗೆ ಅಡವಿಟ್ಟಿದ್ದೀರಾ? ತಾಪಂ ಅಧ್ಯಕ್ಷೆ ಶ್ಯಾಮಲಾಕುಂದರ್, ಸರ್ಕಾರಿ ಆಸ್ಪತ್ರೆಯ ಬಗ್ಗೆ ನಿರ್ಣಯವನ್ನು ಜಿಪಂ ಹಾಗೂ ಆರೋಗ್ಯ ಸಚಿವರಿಗೆ ಕಳುಹಿಸುವ ಬಗ್ಗೆ ಶಾಸಕರ ಅಭಿಪ್ರಾಯ ಕೇಳಲಾಗಿತ್ತು. ಅವರು ಮೌಖಿಕವಾಗಿ ನಿರ್ಣಯ ಕಳುಹಿಸುವುದು ಬೇಡ ಎಂದಿದ್ದರಿಂದ ಕಳುಹಿಸಿರಲಿಲ್ಲ ಎಂದರು. ಇದರಿಂದ ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರ ವಿರುದ್ಧ ತಿರುಗಿಬಿದ್ದರು.…
