ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ನಡೆದ ಜಾಗ ಮತ್ತು ಮನೆ ಧ್ವಂಸ ಪ್ರಕರಣದ ಸಂತ್ರಸ್ಥೆ ಗಂಗೆ ಕೊರಗರವರ ಕುಟುಂಬಕ್ಕೆ ಪುನರ್ವಸತಿಗಾಗಿ ಹತ್ತು ಸೆಂಟ್ಸ್ ಜಾಗದ ಹಕ್ಕು ಪತ್ರ ಮತ್ತು ಮನೆ ಮಂಜೂರಾತಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ವಿತರಿಸಿದರು. ಸಮಾರಂಭದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯಿತ್ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಮುದಾಯದ ಬೆಂಬಲವಾಗಿ ಕೊರಗ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಒಕ್ಕೂಟದ ಸಂಯೋಜಕರಾದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೋಭಾ ನಾಡ ಮತ್ತು ಶುಭ ನಾಡ ಭಾಗವಹಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದ 4ರಿಂದ 5ಸಾವಿರ ಅಂಗನವಾಡಿಗಳಲ್ಲಿ ಶೀಘ್ರವೇ ಎಲ್ಕೆಜಿ/ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಅವರು ಶುಕ್ರವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಲ್ಕೆಜಿ/ಯುಕೆಜಿ ತರಗತಿ ನಡೆಸಲು 10,000 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಜಿ/ಯುಕೆಜಿ ತರಗತಿಗಳನ್ನು ಎಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುವುದು ಎಂದರು. ಪಂಚ ಗ್ಯಾರಂಟಿ ಯೋಜನೆಯಿಂದ ನಾಡ ಜನರ ಕಷ್ಟ ಕಾರ್ಪಣ್ಯ ತಗ್ಗಿದೆ. ಘನತೆಯ ಬದುಕು ಕಟ್ಟಿಕೊಳ್ಳಲು ಆಸರೆಯಾಗಿದೆ. ಪ್ರತಿಯೊಬ್ಬ ನಾಗರಿಕನೂ ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಯಾರ ಮುಂದೆಯೂ ಕೈಚಾಚದಂತೆ ಬದುಕಿನ ಪ್ರಾಥಮಿಕ ಅಗತ್ಯವನ್ನು ಪೂರೈಸುತ್ತಿದೆ ಎಂದು ಅವರು ಹೇಳಿದರು. ಭೂ ಕುಸಿತ ತಡೆಗೆ ಶಾಶ್ವತ ತಡೆಗೋಡೆ ನಿರ್ಮಿಸಲು ಎನ್ಡಿಆರ್ಎಫ್ ಮಿಟಿ ಗೇಶನ್ ಯೋಜನೆಯಡಿ 30 ಕೋಟಿ ರೂ. ಕಾಮಗಾರಿ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಸಮುದ್ರ ಕೊರೆತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿಟಿವಿ ಅಳವಡಿಕೆ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿ, ಸಿಸಿಟಿವಿ ಅಳವಡಿಕೆಯಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟಬಹುದು ಎಂದರು. ಜಿಲ್ಲೆಯ 207 ಜಂಕ್ಷನ್ಗಳಲ್ಲಿ 621 ನೈಟ್ ವಿಸನ್ ಕ್ಯಾಮೆರಾಗಳು ಮತ್ತು 10 ಜಿಲ್ಲಾ ಗಡಿ ರಸ್ತೆಗಳಲ್ಲಿ 20 ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಯೋಜನೆಗೆ ಸುಮಾರು 2.50 ರಿಂದ 3 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದನ್ನು ಸಂಪೂರ್ಣವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶ ಸೇವೆಗೆ ಹಲವು ದಾರಿಗಳಿರಬಹುದು ಆದರೆ ಸೇನೆಗೆ ಸೇರಿಕೊಳ್ಳುವ ಮೂಲಕ ಯುವ ಜನತೆ ದೇಶದ ಭದ್ರತೆಗೆ ಮುನ್ನುಡಿ ಬರಯಬೇಕು ಎಂದು ವಾಯುಸೇನೆಯ ನಿವೃತ್ತ ಅಧಿಕಾರಿ ಗುಂಡ್ಮಿ ಚಂದ್ರಶೇಖರ ನಾಯರಿ ಕರೆ ನೀಡಿದರು. ಅವರು 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಂಚವರ್ಣ ಯುವಕ ಮಂಡಲ ರಿ. ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಕೋಟ ಇವರ ನೇತೃತ್ವದಲ್ಲಿ ವಾಯು ಸೇನಾಪಡೆಯ ನಿವೃತ್ತ ಅಧಿಕಾರಿ ಗುಂಡ್ಮಿ ಚಂದ್ರಶೇಖರ ನಾಯರಿ ಧ್ವಜಾರೋಹಣ ನೆರವೆರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಭಾರತ ಜನತೆ ನಿರಾಳವಾಗಿ ಜೀವನ ಸಾಗಿಸಲು ಸೇನೆ ಪಾತ್ರ ಗಣನೀಯವಾದದ್ದು ಈ ದೇಶದಲ್ಲಿ ಸೇನೆ ಬಲ ಅದರ ಕಾರ್ಯವೈಕರಿಯನ್ನು ಬಿಚ್ಚಿಟ್ಟರು.ದೇಶದ ಯುವ ಸಮೂಹ ಸೈನ್ಯದಲ್ಲಿ ಕಾರ್ಯನಿರ್ವಹಿಸಲು ಪೋಷಕರ ಸಹಕಾರವನ್ನು ಒತ್ತಿ ಹೇಳಿದರಲ್ಲ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯಗಳು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ; ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ; ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು. ಜನ ಸಮುದಾಯದಲ್ಲಿ ಒಗ್ಗಟ್ಟು ಇದ್ದಾಗ ದೇಶ ಮುಂದುವರಿಯುತ್ತದೆ. ಆಚರಣೆಗಳಲ್ಲಿ ವ್ಯತ್ಯಾಸ ಇರಬಹುದು. ಆದರೆ ನಾವೆಲ್ಲರೂ ಒಂದೇ ಎಂಬ ಭಾವ ಆಳವಾಗಿ ಇರಬೇಕು. ನಾನು ಎಂಬ ಅಹಂ ಭಾವಕ್ಕಿಂತ ನಾವು ಎಂಬ ಭಾವ ಬೆಳೆಸಿಕೊಳ್ಳಲು ಒತ್ತು ನೀಡಬೇಕು. ಬದುಕಿನಲ್ಲಿ ಎದುರಾಗುವ ಯಾವುದೇ ಸಮಸ್ಯೆ ನಮ್ಮೊಳಗೆ ಅಂತರ್ಗತವಾಗಿರುವ ಶಕ್ತಿಗಿಂತ ದೊಡ್ಡದಲ್ಲ. ಅಂಕಗಳಿಕೆಗೆ ಆದ್ಯತೆ ನೀಡುವುದಕ್ಕಿಂತ ಚೆಂದನೆಯ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಮುಖ್ಯ ಎಂದು ಕಿವಿಮಾತು ನುಡಿದರು. ಮೈದಾನದಲ್ಲಿ ಮೆಲ್ಲನೇ ಬೀಸುತ್ತಿದ್ದ ತಂಗಾಳಿಯ ವಾತಾವರಣದಲ್ಲಿ ವಿದ್ಯಾರ್ಥಿಗಳು ಮೊಳಗಿಸಿದ ’ವಂದೇ ಮಾತರಂ..’ ದೇಶಭಕ್ತಿಯನ್ನು ಉದ್ದೀಪಿಸಿತು. 2ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ. ಎಸ್ ಕಿರಣ್ ಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು ಜನಕೇಂದ್ರಿತ ಸೇವೆಯ ಸಂಕೇತವಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ ಸಿಟಿಒ ಮಹೇಶ್ ಆರ್. ಶೆಣೈ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹೊರಾಂಗಣ ವೇದಿಕೆಯಲ್ಲಿ ಧ್ವಜಾರೋಹಣ ಪುರಸ್ಸರವಾಗಿ ವಿಜೃಂಭಣೆಯಿಂದ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ದಂತ ವೈದ್ಯರು ಕಾಟಿಪಳ್ಳ ಡಾ. ಅರವಿಂದ ಭಟ್ ಕೆ. ಮತ್ತು ಶ್ರೀ ಎನ್ಎಸ್ಆರ್ ವಕೀಲರು, ಕುಂದಾಪುರ ಅವರನ್ನು ಶಾಲೆಯ ವಾದ್ಯಮೇಳದೊಂದಿಗೆ ಸ್ವಾಗತಿಸಲಾಯಿತು. ಅತಿಥಿಗಳು ಧ್ವಜಾರೋಹಣಗೈದು ಧ್ವಜವಂದನೆ ಸಲ್ಲಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ದೇಶಭಕ್ತಿಯ ಘೋಷವಾಕ್ಯಗಳನ್ನು ಬೋಧಿಸಿದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆಗೈದರು. ಡಾ. ಅರವಿಂದ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಾಲೆಯು ಉತ್ತಮ ಶಿಸ್ತನ್ನು ಹೊಂದಿದ್ದು, ಆ ಎಲ್ಲಾ ಶಿಸ್ತನ್ನು ಮಕ್ಕಳು ಜೀವನದಲ್ಲಿ ಸದಾ ಮೈಗೂಡಿಸಿಕೊಳ್ಳಬೇಕು. ದೇಶದ ಮುಂದಿನ ಪ್ರಜೆಗಳು ಇಂದಿನ ವಿದ್ಯಾರ್ಥಿಗಳಾದ ನೀವು. ಈ ಎಲ್ಲಾ ಶಿಸ್ತನ್ನು ಮೈಗೂಡಿಸಿಕೊಂಡರೆ ನಮ್ಮ ದೇಶ ಶಿಸ್ತಿನಲ್ಲೂ, ಸಂಯಮದಲ್ಲೂ ಸಾಧನೆಗೈಯ್ಯುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. ನಾವು ಬೇರೆಲ್ಲ ಹಬ್ಬಗಳನ್ನು ನಮ್ಮ ನಮ್ಮ ಮತ ಧರ್ಮಗಳಂತೆ ಆಚರಿಸಿದರೆ, ಈ ಸಂತೋಷವನ್ನು ಎಲ್ಲರೂ ಸೇರಿ ಆಚರಿಸಿಕೊಳ್ಳುತ್ತಿದ್ದೇವೆ. ಇದುವೇ ರಾಷ್ಟ್ರೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ಅವರು ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ಬಾರಿ ಕೂಡ ಮೀನಾಕ್ಷಿ ವಿಜಯಕುಮಾರ್ ಬೆಸ್ಕೂರ್ ಅವರು ರಥಬೀದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ತೋರಿಸಿದರು. ವೇದಿಕೆಯಲ್ಲಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್, ಕಮಲೇಶ್ ಬೆಸ್ಕೂರ್, ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಯದರ್ಶಿ ರಾಧಾಕೃಷ್ಣ, ಜೇಸಿ ಪುರುಷೋತ್ತಮ ದಾಸ್, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಗಂಗಾಧರ್ ದೇವಾಡಿಗ, ಅಶೋಕ್ ಪೂಜಾರಿ, ರವೀಂದ್ರ ಪ್ರಭು, ಜಯದುರ್ಗಾ ಕೆಟರರ್ಸ್ ಮಾಲಕರಾದ ಅಶೋಕ್ ಪೂಜಾರಿ, ಹಿರಿಯ ನಾಗರಿಕರಾದ ಪಾಂಡುರಂಗ ಖಾರ್ವಿ, ದುರ್ಗಯ್ಯ ಪೂಜಾರಿ, ಸಂಘದ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಗೌರವಾಧ್ಯಕ್ಷರಾದ ಶೇಖರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರರು ತಮ್ಮ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಕೆಲಸ ಕಾರ್ಯಗಳ ಜೊತೆಗೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮೀನುಗಾರಿಕೆಗೆ ತೆರಳುವ ಮೀನುಗಾರರ ಸುರಕ್ಷತೆಗೆ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಳೆಗಾಲದಲ್ಲಿ ಸಮುದ್ರ ಪ್ರತಿ ದಿನದಿಂದ ದಿನಕ್ಕೆ ಪ್ರಕ್ಷುಬ್ಧ ಗೊಂಡಿರುವ ಸಮಯದಲ್ಲಿ ಮೀನುಗಾರಿಕೆ ಚಟುವಟಿಕೆ ಗಳಿಗೆ ನಿರ್ಭಧ ಹೇರಿರುತ್ತೇವೆ. ಆದರೆ ಸಂಪ್ರದಾಯಿಕ ನಾಡ ದೋಣಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ. ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ, ಮುಂದೆ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನದಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ. ಈ ಬಾರಿ ಹೊಸತನ ಎಂಬಂತೆ…
