ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕರ ಅಗತ್ಯವನ್ನು ಅರಿತುಕೊಂಡು ಅವರಿಗೆ ಸರಕಾರದ ಪರ್ಯಾಯವಾಗಿ ನೆರವಾಗುವುದೇ ರೆಡ್ಕ್ರಾಸ್ ಸಂಸ್ಥೆಯ ಗುರಿಯಾಗಿದ್ದು, ಇಲ್ಲಿ ಯಾವುದೇ ಜಾತಿ, ಮತ, ಧರ್ಮದ ಭೇದವಿಲ್ಲದೇ ಎಲ್ಲರೂ ಸಮಾನವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಹೇಳಿದರು ಅವರು ಯಡ್ತರೆ ಬಂಟರ ಭವನದಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಇದರ ಬೈಂದೂರು ತಾಲೂಕು ಘಟಕವನ್ನು ಉದ್ಘಾಟಿಸಿ, ಸಂಸ್ಥಾಪಕರ ಪೋಟೋಗೆ ಮಾಲಾರ್ಪಣೆಗೈದು ಬಳಿಕ ಮಾತನಾಡಿದರು. ಪ್ರಪಂಚದಾದ್ಯಂತ ರೆಡ್ಕ್ರಾಸ್ನ 700ಕ್ಕೂ ಅಧಿಕ ಶಾಖೆಗಳಿವೆ. ಪ್ರತಿ ವರ್ಷ ಜಿಲ್ಲೆಯಲ್ಲಿ ಶೆ.10ರಷ್ಟು ಜನಸಂಖ್ಯೆಯನ್ನು ಸರಕಾರದ ಕಾರ್ಯಕ್ರಮಗಳ ಮೂಲಕ ತಲುಪುವುದು, ಶೆ.2ರಷ್ಟು ಸದಸ್ಯರನ್ನು ಹೊಂದುವುದು, ಶೆ.1ರಷ್ಟು ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಪಡೆಯನ್ನು ರಚಿಸಿಕೊಳ್ಳುವ ಗುರಿಯನ್ನು ರೆಡ್ಕ್ರಾಸ್ ಹೊಂದಿದೆ ಎಂದರು. ವೇದಿಕೆಯಲ್ಲಿ ಬೈಂದೂರು ತಹಶೀಲ್ದಾರ್ ಬಿ. ಪಿ. ಪೂಜಾರ್, ಬೈಂದೂರು ತಾಲೂಕು ಹೋರಾಟ ಹಾಗೂ ಪುನರ್ರಚನಾ ಸಮಿತಿ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ, ಕುಂದಾಪುರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಕೋಟಿ ಚೆನ್ನಯ್ಯರ ಕೊನೆಯ ಗರಡಿ ಎನ್ನಲಾದ ನಾಕಟ್ಟೆಯ ಗರಡಿಯು ಸುಂದರವಾಗಿ, ಕಲಾತ್ಮಕವಾಗಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯ ಮುಜರಾಯಿ ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತರೆ ಗ್ರಾಮದ ನಾಕಟ್ಟೆಯಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ವೀಕ್ಷಿಸಿದ ಬಳಿಕ ಮಾತನಾಡಿ ಗರಡಿ ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಸರಕಾರದಿಂದ ಶೀಘ್ರವಾಗಿ ಏನೇನು ಸಹಾಯ ಮಾಡಬಹುದು ಎಂಬುದನ್ನು ಅರಿತು ಮೊದಲ ಹಂತದಲ್ಲಿಯೇ ಪಟ್ಟಿಯಲ್ಲಿ ಸ್ವಲ್ಪ ಅನುದಾನ ಪ್ರಕಟಿಸಿ, ಹೆಚ್ಚಿನ ಬೇಡಿಕೆಯನ್ನು ರಾಜ್ಯ ಸರಕಾರದ ಮುಂದಿರಿಸುವ ಕೆಲಸ ಮಾಡಲಾಗುವುದು ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಬಾಬು ಶೆಟ್ಟಿ ತಗ್ಗರ್ಸೆ, ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ಪುಪ್ಪರಾಜ ಶೆಟ್ಟಿ, ಮಾಲಿನಿ ಕೆ., ಮಹೇಂದ್ರ ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಗೋವಿಂದ ಬಾಬೂ ಪೂಜಾರಿ ಅವರ ಕಂಬದಕೋಣೆ ತೆಂಕಬೆಟ್ಟು ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿದರು. ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಕಂಬದಕೋಣ್ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮಧರ್ಶಿ ನರಸಿಂಹ ಹಳಗೇರಿ ಅಂಗನವಾಡಿ ಸಿಬ್ಬಂದಿ ವರ್ಗದವರು ಹಾಗು ಊರವರು ಮತ್ತು ಪುಟಾಣಿ ಮಕ್ಕಳ ಪೋಷಕ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2019-20ನೇ ಸಾಲಿನಲ್ಲಿ ನ್ಯಾಯಾಂಗ ಸೇವಾ ತರಬೇತಿಗೆ ಸಂಬಂಧಿಸಿದಂತೆ, ಸಿವಿಲ್/ ಸೆಷನ್ಸ್/ ಡಿಸ್ಟಿಕ್ಟ್ ಜಡ್ಜ್, ಪಬ್ಲಿಕ್ ಪ್ರಾಸಿಕ್ಯೂಟರ್ ಮೊದಲಾದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಅನುಷ್ಟಾನ ಮಾಡಲಾಗುತ್ತಿದೆ. 2019-20 ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ www.sw.kar.nic.in ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯ ವಯಸ್ಸು 18 ರಿಂದ 40 ವರ್ಷದೊಳಗಿರಬೇಕು. ಎಲ್.ಎಲ್.ಬಿ ಪದವಿಯಲ್ಲಿ ಕನಿಷ್ಟ ೫೦ % ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು ಹಾಗೂ ಬಾರ್ ಕೌನ್ಸಿಲ್ನಲ್ಲಿ ನೋಂದಣಿಯಾಗಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಪ.ಜಾತಿ ಮತ್ತು ಪ.ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು. ಒಬ್ಬ ಅಭ್ಯರ್ಥಿ ಒಂದು ಬಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಬಂಕೇಶ್ವರದ ಮಹಾಂಕಾಳಿ ದೇವಸ್ಥಾನದ ಸಭಾಭವನದಲ್ಲಿ ಮಾಸಿಕ ಕಾರ್ಯಕ್ರಮ ಜರುಗಿತು. ಕೃಷಿ ಅಧ್ಯಯನ ಪ್ರವಾಸಕ್ಕಾಗಿ ಇಸ್ರೆಲ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಭಾಗವಹಿಸಿದ ಖಂಬದಕೋಣೆ ರೈತ ಸೇವಾ ಸಹಕಾರಿ ಸಂಸ್ಥೆಯ ಅಧ್ಯಕ್ಷ, ಕೃಷಿಕ ಪ್ರಕಾಶ್ಚಂದ್ರ ಶೆಟ್ಟಿ ಅವರು ವೈಜ್ಞಾನಿಕ ಕೃಷಿಯ ಕುರಿತು ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅದಕ್ಕೆ ಪೂರಕವಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ ಮಿಶ್ರ ಬೆಳೆಗಳಿಗೂ ಆದ್ಯತೆಗೆ ಒತ್ತು ಕೊಡಬೇಕು ಆಗ ನಮಗೆ ಸಮತೋಲನವಾದ ಆದಾಯ ಮೂಲ ಸದಾ ಪಡೆಯಲು ಸಾಧ್ಯವಾಗುವುದು ಎಂದು ಅಭಿಪ್ರಾಯ ಪಟ್ಟರು. ವೇದಿಕೆಯ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕವಿ ಪ್ರಶಸ್ತಿ ಪುರಸ್ಕೃತ ಪುಂಡಲೀಕ ನಾಯಕ್ ರವರನ್ನು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ನಾಗರಿಕರ ವೇದಿಕೆಯ ಉಪಾಧ್ಯಕ್ಷ ಶ್ರೀನಿವಾಸ ಮದ್ದೋಡಿ, ಕಾರ್ಯದರ್ಶಿ ಸಂಜೀವ ಆಚಾರ್ಯ ಕಳವಾಡಿ, ನಿವೃತ್ತ ಮುಖ್ಯೋಪಾಧ್ಯಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೇಶದ ಸರ್ವೋಚ್ಛ ನ್ಯಾಯಾಲಯವು ಅಯೋಧ್ಯೆ ವಿವಾದಿತ ಪ್ರದೇಶದ ಬಗೆಗೆ ಅಂತಿಮ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರತಿಬಂದಕಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಸಾರ್ವಜನಿಕ ಶಾಂತಿ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನ.9ರ ಬೆಳಿಗ್ಗೆ 10ಗಂಟೆಯಿಂದ ನ.10ರ ಬೆಳಿಗ್ಗೆ 6 ಗಂಟೆಯ ತನಕ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮತ್ತು ಜೆಲ್ಲೆಯಲ್ಲಿನ ಎಲ್ಲಾ ಮದ್ಯದ ಅಂಗಡಿಗಳನ್ನು ನ.11ರ ಬೆಳಿಗ್ಗೆ 6ರ ತನಕ ಮುಚ್ಚುವಂತೆ ಆದೇಶಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪ್ರತಿವರ್ಷ ಕೋಟ ಪಂಚವರ್ಣ ಯುವಕ ಮಂಡಲದ ವತಿಯಿಂದ ನೀಡಲ್ಪಡುವ ಪಂಚವರ್ಣ ರಾಜೋತ್ಸವ ಪುರಸ್ಕಾರಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆ ಯಾಗಿದ್ದಾರೆ. ನವೆಂಬರ 16ರಂದು ಕೋಟ ವರುಣ ತೀರ್ಥ ಕೆರೆಯ ಸಮೀಪ ಅಮೃತೇಶ್ವರಿ ಪಾರ್ಕಿಂಗ್ ಸ್ಥಳದಲ್ಲಿ ನಡೆಯುವ ಅದ್ದೂರಿಯ ಕನ್ನಡ ರಾಜೋತ್ಸವ ಸಮಾರಂಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಲಿದ್ದಾರೆ. ಪಂಚವರ್ಣ ರಾಜೋತ್ಸವ ಪ್ರಶಸ್ತಿಯೊಂದಿಗೆ ಬೆಳ್ಳಿಯ ಸ್ಮರಣಿಕೆ ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ಕೋಡಿ ಕನ್ಯಾಣದ ಪ್ರಗತಿ ಯುವಕ ಮಂಡಲಕ್ಕೆ ಪಂಚವರ್ಣ ವಿಶೇಷ ಪುರಸ್ಕಾರ ಹಾಗೂ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆ ನೆರವೆರಲಿದೆ. ಪ್ರತಿಭಾ ಪುರಸ್ಕಾರ, ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ, ಮಣೂರು ಉದಯ ಪೂಜಾರಿ ಸ್ಮರಣಾರ್ಥ ಆರೋಗ್ಯ ನಿಧಿ ವಿತರಣೆ, ಸಾಂಸ್ಕ್ತಿಕ ಕಾರ್ಯಕ್ರಮದ ಸಲುವಾಯ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಪುಟಾಣಿಗಳ ನೃತ್ಯ,ರಾತ್ರಿ 9:30ಕ್ಕೆ ರಾಜ್ಯ ಪ್ರಶಸ್ತಿ ಪುರಸ್ಕ್ರತ ತೆಲಿಕದಬೋಳ್ಳಿ ದೇವದಾಸ ಕಾಪಿಕಾಡ್ ನೇತ್ರತ್ವದಲ್ಲಿ ನಮಸ್ತೆ ಮೇಸ್ಟ್ರೆ ನಾಟಕ ಪ್ರದರ್ಶನಗೊಳ್ಳಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, 10:42pm: ಅಯೋಧ್ಯಾ ಪ್ರಕರಣದ ತೀರ್ಪು ನವಂಬರ್ 09 ಶನಿವಾರ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಈ ತೀರ್ಪನ್ನು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬೀಗು ಬಂದೋವಸ್ತ್ ಏರ್ಪಡಿಸಲಾಗಿದ್ದು, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಶನಿವಾರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು ಅವರಿಗೆ ರಜೆ ನೀಡುವುದನ್ನು ಕುಲಪತಿಗಳ ವಿವೇಚನೆಗೆ ಬಿಡಲಾಗಿದೆ ಎಂದಿದ್ದಾರೆ. (ಈಗ ಕರ್ನಾಟಕ ರಾಜ್ಯ ಸರಕಾರವೇ ರಜೆ ಘೋಷಣೆ ಮಾಡಿದೆ.) ಕುಂದಾಪ್ರ ಡಾಟ್ ಕಾಂ ಸುದ್ದಿ. ಶತಮಾನಗಳಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಜನ್ಮಭೂಮಿ ವಿವಾದಕ್ಕೆ ಈ ತೀರ್ಪಿನ ಮೂಲಕ ತಾರ್ಕಿಕ ಅಂತ್ಯ ಸಿಗಬಹುದೇ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ. ಐತಿಹಾಸಿಕ ಅಯೋಧ್ಯಾ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ವಿವಾದದ ಕೇಂದ್ರಬಿಂದು ಅಯೋಧ್ಯೆಯಲ್ಲಿ ಅಕ್ಷರಶಃ ಭದ್ರತಾ ಚಕ್ರವ್ಯೂಹವನ್ನು ರಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಒರಿಸ್ಸಾದ ಬೆಹರಂಪುರದಲ್ಲಿ ಇತ್ತೀಚಿಗೆ ನಡೆದ ಅಂಚೆ ಇಲಾಖಾ ಮಟ್ಟದ ೩೫ನೇ ರಾಷ್ಟ್ರೀಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಎಂ. ಗುರುದೀಪಕ ಕಾಮತ್ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಇವರು ತ್ರಾಸಿ ಅಂಚೆ ಕಛೇರಿಯ ಉದ್ಯೋಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಧಿಕಾರಿಗಳು ಸಭೆಗೆ ಬಾರದಿದ್ದರೆ ಅವರು ಉಡುಪಿ ಜಿಲ್ಲೆಯನ್ನೇ ಬಿಟ್ಟುಹೋಗುವುದು ಒಳಿತು. ತಾಲೂಕಿನಲ್ಲಿ ಜನರಿಗೆ ನೂರಾರು ಸಮಸ್ಯೆಗಳಿವೆ. ಪ್ರತಿ ಇಲಾಖೆಯಲ್ಲಿಯೇ ಒಂದಿಲ್ಲೊಂದು ಸಮಸ್ಯೆ ಇದ್ದೇ ಇದೆ. ಇದರ ಬಗ್ಗೆ ಸರಿಯಾದ ಮಾಹಿತಿ ನೀಡಲು ಕೆಡಿಪಿ ಸಭೆಗೂ ಅಧಿಕಾರಿಗಳು ಸರಿಯಾಗಿ ಭಾಗವಹಿಸದಿದ್ದರೆ ಅವರ ಬಗ್ಗೆ ಸೂಕ್ತ ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ತಾಲೂಕು ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (ಕೆಡಿಪಿ) ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಅವರು ತಾಲೂಕಿನಲ್ಲಾಗುತ್ತಿರುವ ಮರಳು ಸಮಸ್ಯೆಗಳ ಬಗೆಗೆ ಪ್ರಸ್ತಾಪಿಸಿ, ಅದರ ಬಗೆಗೆ ಸ್ಪಷ್ಟನೆ ಕೇಳಲು ಅಧಿಕಾರಿಗಳೇ ಇಲ್ಲದಿರುವುದನ್ನು ಸಭೆಯ ಗಮನಕ್ಕೆ ತಂದ ಸಂದರ್ಭ ಅವರು ಹೀಗೆ ಹೇಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆಯ ಸಿಬ್ಬಂಧಿಗಳಿಂದ ರೋಗಿಗಳಿಗೆ…
