ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ. ಲಿ. ಕಂಪೆನಿ ವತಿಯಿಂದ ಕೇರಳದ ತಿರುವನಂತಪುರದಲ್ಲಿ ನಡೆದ ೧೭ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಪರೀಕ್ಷೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಕುಂದಾಪುರದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸ್ಪರ್ಧೆಯ ವಿವಿಧ ಭಾಗಗಳಲ್ಲಿ ಸ್ಪರ್ಧಿಸಿದ ೨೦ ವಿದ್ಯಾರ್ಥಿಗಳಲ್ಲಿ ೫ ಮಂದಿ ಪ್ರಥಮ, ನಾಲ್ವರು ದ್ವಿತೀಯ, ನಾಲ್ವರು ತೃತೀಯ ಹಾಗೂ ಉಳಿದ ೭ ಮಂದಿ ವಿದ್ಯಾರ್ಥಿಗಳು ಇನ್ನುಳಿದ ಸ್ಥಾನಗಳನ್ನು ಪಡೆದು ಪ್ರಶಸ್ತಿ ಗಳಿಸಿದ್ದಾರೆ. ದಿವ್ಯ, ಭುವನ್ ಬಿ. ಕಾಂಚನ್, ಪರ್ವದಿ ಪಿ.ಎಂ., ವೇದಿಕ್ ವಿ.ದೇವಾಡಿಗ, ಅರ್ಥವ್ ಕೊಠಾರಿ ಪ್ರಥಮ ಸ್ಥಾನ ಪಡೆದುಕೊಂಡರು. ತನ್ವಿ, ಪ್ರಕುಲ್ ಮೆಂಡನ್, ಅಕ್ಷೆಭ್ಯ ರೈ, ಹಂಶಿಕಾ ದ್ವಿತೀಯ, ಸರ್ವಶ್ರೀ, ಕ್ರಿಸ್ಟಿನ್ ಪಿಂಟೋ, ಶಿಖರ್ ಮೆಂಡನ್, ಆದ್ಯಾ ಎನ್.ಕಾಂಚನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಧನುಷ್ ಎಸ್. ಕಾವೇರಿ, ದಿಶಾಂತ್, ಪ್ರಶ್ವಿತ್, ಸ್ಕಂದನ ಆರ್. ಕಾಂಚನ್ ಚತುರ್ಥ ಸ್ಥಾನವನ್ನೂ, ಸ್ಟಾರೆಲ್, ಅಮೋಘ್ ಪೈ, ಹಾರ್ದಿಕ್ ಬಿಲ್ಲವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹಲವಾರು ಶೈಕ್ಷಣಿಕ ಯೋಜನೆಗಳ ಮೂಲಕ ಅವಕಾಶ ಮಡಿಕೊಟ್ಟಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು. ಉಡುಪಿ ಜಿಲ್ಲಾಡಳಿತ, ಜಿಪಂ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಬೈಂದೂರಿನಲ್ಲಿ ಸುಮಾರು 4.25 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಶಿಷ್ಠ ವರ್ಗ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಜೀವನದ ಮೌಲ್ಯಗಳನ್ನು ಹಾಗೂ ಸಾಧನೆಯ ದಾರಿಯನ್ನು ಕಂಡುಕೊಳ್ಳಬಹುದು. ಈ ವಿದ್ಯಾರ್ಥಿ ನಿಲಯದಲ್ಲಿ ಕಲಿಯುವ ಮಕ್ಕಳು ಅತ್ಯಂತ ಶ್ರದ್ಧೆಯಿಂದ ವ್ಯಾಸಾಂಗ ಮಾಡುವ ಮೂಲಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದರೆ ಯೋಜನೆಯ ಸಾರ್ಥಕತೆ ದೊರೆಯುತ್ತದೆ ಎಂದರು. ರಾಜ್ಯದಾದ್ಯಂತ 2,439 ವಿದ್ಯಾರ್ಥಿ ನಿಲಯಗಳಿದ್ದು, ಒಟ್ಟು 19,863 ಬಾಲಕ, ಬಾಲಕಿಯರು ಈ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾರಣಿಕ ಕ್ಷೇತ್ರ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ಸಮರ್ಪಣಾ ಹಾಗೂ ಉದ್ಘಾಟನಾ ಸಮಾರಂಭ ಮೇ.21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ಜರುಗಲಿದೆ ಎಂದು ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಯು.ಬಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಶಾಲಾ ಆವರಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಎಂಟು ವರ್ಷಗಳ ಹಿಂದೆ ತಾಯಿ ದುರ್ಗಾಪರಮೇಶ್ವರಿಗೆ ರಾಜಗೋಪುರ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡಿದ್ದೆ. ಮೂರು ವರ್ಷದ ಹಿಂದೆ ಸಂಕಲ್ಪ ಮಾಡಿ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ರಾಜಗೋಪುರವನ್ನು ಉದ್ಘಾಟಿಸಲಿದ್ದಾರೆ ಎಂದರು. ಧಾರ್ಮಿಕ ಸಭಾ ಕಾರ್ಯಕ್ರಮ:ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ರಾಜಗೋಪುರವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭವನ್ನು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮಾಜದಲ್ಲಿ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಿದ್ದು, ಇದಕ್ಕೆ ಪೂರಕವಾಗಿ ದಾನಿಗಳು ಅಗತ್ಯವುಳ್ಳವರಿಗೆ ಮನೆ, ಶೈಕ್ಷಣಿಕ ನೆರವು ಮೊದಲಾದ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನಾರ್ಹ ಎಂದು ಬೈಂದೂರು ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ಸೋಮವಾರ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ವತಿಯಿಂದ ಬಿಜೂರು ಭೂಮಿ ಶಂಕರನ ಮನೆ ಪದ್ಮಾವತಿ ಗೋಪಾಲ ಹಾಗೂ ಬೈಂದೂರು ತೊಡಳ್ಳಿ ಗಣಪತಿ ಶೇರುಗಾರ್ ಅವರಿಗೆ ಶ್ರೀ ರಾಮ ಗೃಹ ನಿರ್ಮಾಣ ಯೋಜನೆಯಡಿ ಉಚಿತವಾಗಿ ನಿರ್ಮಿಸಿಕೊಡಲಾದ ನೂತನ ಗೃಹಗಳ ಉದ್ಘಾಟನೆ ಬಳಿಕ ನಡೆದ ಟ್ರಸ್ಟಿನ ವಿಶೇಷ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಟ್ರಸ್ಟಿಗೆ ದಿನದಿಂದ ದಿನಕ್ಕೆ ನೆರವು ಯಾಚನೆ ಪ್ರಮಾಣ ಹೆಚ್ಚುತ್ತಿದೆ ಹಾಗೂ ಎಲ್ಲಾ ವಸ್ತುಗಳ ಬೆಲೆಯು ಹೆಚ್ಚಿದೆ. ಹಾಗಾಗಿ ಟ್ರಸ್ಟಿನಲ್ಲಿರುವ ಮೂಲ ದೇಣಿಗೆ ಹಾಗೂ ದಾನಿಗಳು ಟ್ರಸ್ಟಿಗೆ ನೀಡುವ ನೆರವಿನ ಪ್ರಮಾಣವೂ ಹೆಚ್ಚಬೇಕಿದೆ. ತೀರಾ ಅಗತ್ಯವುಳ್ಳ ಅರ್ಹರನ್ನು ಗುರುತಿಸಿ ನೆರವು ನೀಡುವ ಕಾರ್ಯ ಮುಂದುವರಿಯಲಿ ಎಂದು ಶುಭಹಾರೈಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾದಿಯರ ದಿನದ ಅಂಗವಾಗಿ ಗಿರಿಜಾ ಹೆಲ್ತ್ಕೇರ್ & ಸರ್ಜಿಕಲ್ಸ್ ಶಾಖೆಗಳಲ್ಲಿ ಹಿರಿಯ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ದಾದಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ 10 ಜನ ಹಿರಿಯ ಅದೇ ರೀತಿ ವಿವಿಧ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತಿರುವ ನರ್ಸ್ಗಳನ್ನು ಅಭಿನಂದಿಸಲಾಯಿತು. ಉಡುಪಿ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಹಾಗೂ ಎ.ವಿ. ಬಾಳಿಗ ಸಂಸ್ಥೆಯ ಖ್ಯಾತ ಮನೋವೈದ್ಯರಾದ ವಿರೂಪಾಕ್ಷ ದೇವರ ಮನೆ ಅತಿಥಿಗಳಾಗಿ ಭಾಗವಹಿಸಿದ್ದರು. ಸಿನಿಯರ್ ಜೆಸಿ ಉಡುಪಿ ಟೆಂಪಲ್ ಸಿಟಿ ಲಿಜನ್ನ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಗಿರಿಜಾ ಸರ್ಜಿಕಲ್ಸ್ ಪಾಲುದಾರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ 13: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು. ಸರಕಾರದ ಆದೇಶದಂತೆ ಮೇ 20ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಯ ಸದಸ್ಯರ ಹೆಸರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಮೇ.13 (ಕವಾ): ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ & ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ ಕಾರ್ಯಗಳ ವಿವಿಧ ಘಟಕಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಮೇ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವAತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ12: ಸಾಧಕರು, ದಾರ್ಶನಿಕರ ತತ್ವ, ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಭಗೀರಥ ಮಹರ್ಷಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ, ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಹೇಮರೆಡ್ಡಿ ಮಲ್ಲಮ್ಮ ಅಚಲವಾದ ವಿಶ್ವಾಸ, ತಾಳ್ಮೆಯಿಂದ ತಮ್ಮ ಕುಟುಂಬದವರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಅವರ ಮನ ಪರಿವರ್ತನೆ ಮಾಡುವುದರೊಂದಿಗೆ ಸಮಾಜದಲ್ಲಿ ಬದಲಾವಣೆಯನ್ನು ತರುವುದರ ಮೂಲಕ ಸಮಾಜ ಸುಧಾರಣೆಯನ್ನು ಮಾಡಿದರು. ತನ್ನ ಭಕ್ತಿ ಕಾಯಕದಿಂದ ಮನೆ ಮಾತಾಗಿದ್ದರು. ಕೌಟುಂಬಿಕ ಕಷ್ಟಗಳನ್ನು ಮೆಟ್ಟಿನಿಂತು ಆದರ್ಶ ಮೌಲ್ಯಗಳನ್ನು ಬದುಕಿನಲ್ಲಿ ರೂಢಿಸಿಕೊಂಡು, ಸಾಮಾಜಿಕ ಹಾಗೂ ಧಾರ್ಮಿಕ ಚಿಂತನೆಯಲ್ಲಿ ಸಾಧನೆಗೈದ ಶಿವಶರಣೆಯೇ ಹೇಮರೆಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೆ ಮಾದರಿ ಎಂದರು. ಭಗೀರಥ ಮಹರ್ಷಿಯು ತನ್ನ ಸತತ ಪ್ರಯತ್ನದಿಂದ ಶಿವನ ಜಟೆಯಲ್ಲಿದ್ದ ಗಂಗೆಯನ್ನು ಧರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ12: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ 75 ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡಲು ಅನೇಕ ಮಹಾನ್ ನಾಯಕರುಗಳು ತಮ್ಮ ಜೀವವನ್ನೇ ತ್ಯಾಗ ಮಾಡಿ, ಹೋರಾಟವನ್ನು ನಡೆಸಿದ್ದಾರೆ. ಇಂತಹ ಹೋರಾಟಗಾರರ ಜೀವನ ಕಥೆ, ಹೋರಾಟದ ವಿವಿಧ ಹಂತಗಳು ಸೇರಿದಂತೆ, ಸ್ವಾತಂತ್ರö್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆಯನ್ನು ಇಂದಿನ ಯುವಜನರಿಗೆ, ಸಾರ್ವಜನಿಕರಿಗೆ ಹಾಗೂ ಹೊರರಾಜ್ಯದವರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲೆಯಲ್ಲಿ ಮೇ 28 ರಂಧು ಬೆಳಗ್ಗೆ 10.30 ಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಹೊಸಾಡು ಕಾರ್ಯಕ್ಷೇತ್ರದ ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿರುವ ೨ ಲಕ್ಷ ರೂ. ಅನುದಾನದ ಡಿಡಿಯನ್ನು ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ ಅವರು ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮಂಗಳವಾರ ಹಸ್ತಾಂತರಿಸಿದರು. ಜನಜಾಗೃತಿ ವೇದಿಕೆ ಸದಸ್ಯ ರಮೇಶ ಆಚಾರ್ಯ, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
