Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಆಲೂರು ಗ್ರಾಮದ ಕಳಿ ಎಂಬಲ್ಲಿನ ನದಿಯಲ್ಲಿ ಆಮೆ ಹಾಗೂ ಕೂಮಾಗಳನ್ನು ಹಿಡಿದು ಕೊಲ್ಲಲು ಪ್ರಯತ್ನ ನಡೆಸುತ್ತಿರುವಾಗ ದಾಳಿ ನಡೆಸಿದ್ದ ಕೊಲ್ಲೂರು ವನ್ಯಜೀವಿ ಇಲಾಖೆಯ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 50 ಕೂಮಾ ಮತ್ತು ಆಮೆಗಳನ್ನು ವಶಪಡಿಸಿಕೊಂಡಿದ್ದು ಆ ಪೈಕಿ 25 ಕೂಮಾ ಹಾಗೂ 9 ಆಮೆಗಳನ್ನು ಸಂರಕ್ಷಿಸಲಾಗಿದೆ. ಆರೋಪಿಗಳನ್ನು ಕೊಲ್ಲೂರು ನಿವಾಸಿಗಳಾದ ಶೀನ ಕೊರಗ, ಚಂದ್ರ ಹಾಗೂ ಗಣೇಶ್ ಎಂದು ಗುರುತಿಸಲಾಗಿದ್ದು, ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಮೂವರ ವಿರುದ್ಧ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿಕೊಂಡ ದ್ವಿಚಕ್ರ ವಾಹನ, ಕತ್ತಿ, ಕೊಲ್ಲಲಾದ 15 ಆಮೆಗಳ ಚಿಪ್ಪು ಹಾಗೂ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ರಾತ್ರಿ ಗಸ್ತು ನಡೆಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಂಗಳವಾರ ಮುಂಜಾನೆ ಆರೋಪಿಗಳು ನಡೆಸುತ್ತಿದ್ದ ಕೃತ್ಯದ ಮಾಹಿತಿ ದೊರೆತು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಗಣಪತಿ ನಾಯ್ಕ್ ಅವರ ನಿರ್ದೇಶನದಂತೆ, ಉಪ ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರಿನ ಕುಸುಮಾ ಫೌಂಡೇಶನ್‌ನ ಬ್ಲಾಸಂ ಸಂಗೀತ ನೃತ್ಯಶಾಲೆಯ ಆಶ್ರಯದಲ್ಲಿ ತಿಂಗಳ ಸಂಗೀತ ಕಾರ್ಯಕ್ರಮ ’ಗಾನಯಾನ-3’ ಅಲ್ಲಿನ ಕೆಎಎಸ್ ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಸ್ತಾವಿಕ ನುಡಿಗಳನ್ನಾಡಿದ ಫೌಂಡೇಶನ್‌ನ ಕಾರ್ಯನಿರ್ವಾಹಕ ವಿಶ್ವಸ್ಥ ನಳಿನ್‌ಕುಮಾರ ಶೆಟ್ಟಿ ಪರಿಸರದ ಕಲಾಸಕ್ತ ಮಕ್ಕಳಿಗೆ ಪರಿಣತರಿಂದ ಸಂಗೀತ, ನೃತ್ಯ ತರಗತಿಗಳನ್ನು ನಡೆಸಲಾಗುತ್ತಿದೆ. ಅದರೊಂದಿಗೆ ಪರಿಸರದ ಜನರಲ್ಲಿ ಲಲಿತ ಕಲೆಗಳತ್ತ ಒಲವು ಮೂಡಿಸಲು ಪ್ರತಿ ತಿಂಗಳು ಸಂಗೀತ, ನೃತ್ಯ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಇದಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು. ಆ ಬಳಿಕ ನಡೆದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಚೇರಿಯಲ್ಲಿ ಭಟ್ಕಳ ಮಾರುಕೇರಿಯ ವಿದ್ವಾನ್ ಅನಂತ ಹೆಬ್ಬಾರ್ ಗಾಯನ ಪ್ರಸ್ತುತಪಡಿಸಿದರು. ಶಿರಾಲಿಯ ಮಹಾಬಲೇಶ್ವರ ಹೆಗಡೆ ಹಾರ್ಮೋನಿಯಂ ಮತ್ತು ಭಟ್ಕಳ ಕೊಣಾರದ ಬಾಲಚಂದ್ರ ಹೆಬ್ಬಾರ್ ತಬಲಾ ಸಹವಾದನ ನೀಡಿದರು. ಸಂಗೀತ ಶಿಕ್ಷಕಿ ಶ್ವೇತಾ ಮತ್ತು ಸುಬ್ರಹ್ಮಣ್ಯ ತಾನಪುರಾದಲ್ಲಿ ಸಹಕರಿಸಿದರು. ಕಿರಿಮಂಜೇಶ್ವರದ ಸುಮಾ-ಅರುಣ್‌ಕುಮಾರ್ ಶ್ಯಾನುಭೋಗ್ ದಂಪತಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು. ಕಲಾವಿದರನ್ನು ಮತ್ತು ಪ್ರಾಯೋಜಕರನ್ನು ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಡಾ. ಬಾಲಚಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮದುಮಗನೊಂದಿಗೆ ಹಸೆಮಣೆ ಏರಬೇಕಿದ್ದ ವಧವೊಬ್ಬಳು ಪ್ರಿಯಕರನೊಂದಿಗೆ ಪರಾರಿಯಾಗಿ ಮದುವೆಯಾದ ಘಟನೆ ಮರವಂತೆಯಲ್ಲಿ ನಡೆದಿದೆ. ಮುಹೂರ್ತದ ಸಮಯವಾದರೂ ಮದುಮಗಳು ಬಾರದಿದ್ದರಿಂದ ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ನಡೆಯಬೇಕಿದ್ದ ಮದುವೆ ನಿಂತುಹೋಗಿದೆ. ತಾಲೂಕಿನ ಮರವಂತೆಯ ಯುವತಿಯೊಂದಿಗೆ ತ್ರಾಸಿ ಯುವಕನ ಮದುವೆ ನಿಶ್ಚಿತಾರ್ಥವಾಗಿ ಇಂದು ಮದುವೆ ನಡೆಯುವುದಿತ್ತು. ಮದುಮಗಳ ಮನೆಯಲ್ಲಿ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವೂ ನಡೆದಿತ್ತು. ಆದರೆ ಬೆಳಗಾಗುತ್ತಿದ್ದಂತೆ ಮದುಮಗಳು ಮಾತ್ರ ಕಾಣೆಯಾಗಿದ್ದಳು. ಮದುವೆ ತಯಾರಿಯಲ್ಲಿದ್ದ ಕುಟುಂಬ ಬೆಳಿಗ್ಗೆ ಐದು ಗಂಟೆಗೆ ಎದ್ದು ನೋಡಿದಾಗ ಯುವತಿ ಕಾಣೆಯಾಗಿರುವುದು ಗೊತ್ತಾಗಿತ್ತು. (ಕುಂದಾಪ್ರ ಡಾಟ್ ಕಾಂ) ಬೆಳಿಗ್ಗೆ ಮದುವೆಗೆ ತಯಾರಾಗಿ ಸಭಾಭವನಕ್ಕೆ ಬಂದಿದ್ದ ವರನ ಕಡೆಯವರಿಗೆ ವಧು ನಾಪತ್ತೆಯಾಗಿರುವ ಬಗ್ಗೆ ತಿಳಿದು ದಿಕ್ಕುತೋಚದಂತಾಗಿದ್ದರು. ಮದುವೆಗೆ ಬಂದಿದ್ದ ಯುವತಿಯೋರ್ವಳು ಆತನನ್ನು ಮದುವೆಯಾಗುವುದಾಗಿ ತಿಳಿಸಿದ್ದಾಳೆ ಎನ್ನಲಾಗುತ್ತಿದೆ. ಪ್ರಿಯಕರನೊಂದಿಗೆ ಮದುವೆ? ಬೆಳಿಗ್ಗೆಯೇ ನಾಪತ್ತೆಯಾಗಿದ್ದ ಯುವತಿ ಗಂಗೊಳ್ಳಿಯ ತನ್ನ ಪ್ರಿಯಕರನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾಳೆ ಎನ್ನಲಾಗಿದೆ. ಈ ಮೊದಲೇ ಅವರು ಪ್ರೀತಿಸುತ್ತಿದ್ದ ವಿಚಾರ ಮನೆಯವರಿಗೆ ತಿಳಿದಿತ್ತು. ಅದನ್ನು ವಿರೋಧಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಗ್ರಾಮದ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು ಸೋಮವಾರ ಭೇಟಿ ನೀಡಿ ಸಂಸ್ಥೆಗೆ ದೇಣಿಗೆ ಹಸ್ತಾಂತರಿಸಿದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ ಅವರು ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಅವರಿಗೆ ರೂ. 25,000ದ ಚೆಕ್ ಹಸ್ತಾಂತರಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್ ವಿತರಿಸಿದರಲ್ಲದೇ ಮಧ್ಯಾಹ್ನದ ಭೊಜನ ವ್ಯವಸ್ಥೆಯನ್ನು ಮಾಡಿಸಿದ್ದರು. ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಮಾಲತಿ ಗೋವಿಂದ ಪೂಜಾರಿ, ರಾಮ ಬಿಜೂರು, ಸದಸ್ಯರಾದ ಸುಧಾಕರ ಪೂಜಾರಿ, ರಾಘವೇಂದ್ರ ಪೂಜಾರಿ, ನರಸಿಂಹ ಬಿ. ನಾಯಕ್, ಪಾರ್ವತಿ ಪೂಜಾರಿ, ನಾಗರಾಜ್, ವಿಲಿಯಂ, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ ಮನೊರಮಾ ತಲ್ಲೂರು ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮುಖ ಮಂಟಪದ ಹತ್ತಿರ ಶ್ರೀ ಮಾತಾ ಫರ್ನಿಚರ‍್ಸ್ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲಯನ್ಸ್‌ಸಸ್ ಇದರ ನವೀಕೃತ ಶೋರೂಮ್‌ನ್ನು ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಸಾಹಿತಿ ಓಂ ಗಣೇಶ್ ಉಪ್ಪುಂದ, ಜಿಪಂ ಸದಸ್ಯರಾದ ಕೆ. ಬಾಬು ಶೆಟ್ಟಿ, ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ತಾ.ಪಂ ಸದಸ್ಯರಾದ ಪ್ರಮೀಳಾ ದೇವಾಡಿಗ, ಜಗದೀಶ ದೇವಾಡಿಗ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಸುಮುಖ ಗ್ರೂಪ್‌ನ ಬಿ. ಎಸ್. ಸುರೇಶ್ ಶೆಟ್ಟಿ, ನಾಗೂರು ಸಂದೀಪನ್ ಶಾಲೆಯ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ, ಜಿ.ಪಂ ಮಾಜಿ ಸದಸ್ಯ ಮದನಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಮಾತಾ ಫರ್ನಿಚರ‍್ಸ್‌ನ ಆನಂದ ಪೂಜಾರಿ ಹಾಗೂ ದೀಪಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘಟಿತ ಪ್ರಯತ್ನ ಹಾಗೂ ಜನರ ಪಾಲ್ಗೊಳ್ಳುವಿಕೆಯಲ್ಲಿ ಸಹಕಾರಿ ಸಂಸ್ಥೆಗಳ ಯಶಸ್ಸು ಅಡಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಭಾನುವಾರ ಶಿರೂರು ಕೆಳಪೇಟೆಯ ಎಸ್‌ಡಿಪಿ ಕಾಂಪೆಕ್ಸ್‌ನಲ್ಲಿ ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಶಿರೂರು ಶಾಖೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಂಸ್ಥೆ ಲಾಭ ಗಳಿಸುವುದರ ಜೊತೆಗೆ ಮೂರ್ತೆದಾರರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಹಂತ ಹಂತವಾಗಿ ಬೆಳೆದ ಈ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು. ಬ್ರಹ್ಮಾವರ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಕೊರಗ ಪೂಜಾರಿ ದೀಪ ಬೆಳಗಿ ಉದ್ಘಾಟಿಸಿದರು. ಕರ್ನಾಟಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಗಣಕಯಂತ್ರ ಉದ್ಘಾಟಿಸಿದರು. ಸಹಕಾರಿ ಸಂಘಗಳ ಉಪನಿಬಂಧಕಿ ಚಂದ್ರಪ್ರತಿಮಾ ಎಂ. ಜೆ ಸಂಘದ ಗಣಕೀಕೃತ ಪಾಸ್‌ಬುಕ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಅತಿಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ವರದಿ. ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನ ಮತ್ತು ಭಾರತ ಜ್ಞಾನ ವಿಜ್ಞಾನ ಸಮಿತಿ ಜೊತೆಯಾಗಿ ರಾಜ್ಯದ ೬೨೩ ಕ್ಲಸ್ಟರ್ ಗಳಲ್ಲಿ ಮಕ್ಕಳ ವಿಜ್ಞಾನ ಹಬ್ಬವನ್ನು ಸಂಘಟಿಸುತ್ತಿವೆ. ಉಡುಪಿ ಜಿಲ್ಲೆಯಲ್ಲಿಯೂ ಈ ಹಬ್ಬ ಈಗ ಆರಂಭವಾಗಿದೆ. ಕ್ಲಸ್ಟರ್ ಮಟ್ಟದ ಹಬ್ಬವು ಎರಡು ದಿನಗಳ ಕಾಲ ನಡೆಯುತ್ತದೆ. ಆಯಾ ಕ್ಲಸ್ಟರ್ ನ ಸರಕಾರಿ ಶಾಲೆಗಳ ೬, ೭ ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳನ್ನು ಒಂದು ಶಾಲೆಯಲ್ಲಿ ಸೇರಿಸಲಾಗುತ್ತದೆ. ಈ ಎಲ್ಲ ಮಕ್ಕಳು ವಿವಿಧ ಚಟುವಟಿಕೆ ಕಾರ್ನರ್ ಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ವಹಿಸಲು ಸಾಧ್ಯವಾಗುವಂತೆ ವಿಭಜನೆಯಾಗುತ್ತಾರೆ. ಪ್ರತಿ ಕಾರ್ನರ್‌ನಲ್ಲಿ ಚಟುವಟಿಕೆಗಳನ್ನು ನಿರ್ವಹಿಸುತ್ತಾ ಎರಡುವವರೆ ಗಂಟೆಗಳಷ್ಟು ಸಮಯವನ್ನು ಮಕ್ಕಳು ಕಳೆಯುತ್ತಾರೆ. ಆ ಕಾರ್ನರ್ ನಲ್ಲಿನ ಚಟುವಟಿಕೆ ಮುಗಿದ ನಂತರ ಮಕ್ಕಳು ಇನ್ನೊಂದು ಕಾರ್ನರ್ ಗೆ ತೆರಳುತ್ತಾರೆ. ಅಲ್ಲಿ ಇನ್ನೂ ಭಿನ್ನವಾದ ಚಟುವಟಿಕೆಗಳಿರುತ್ತವೆ. ಹೀಗೆ ಎರಡು ದಿನಗಳಲ್ಲಿ ಹಬ್ಬಕ್ಕಾಗಿ ವಿನ್ಯಾಸಗೊಳಿಸಲಾದ ಎಲ್ಲಾ ಚಟುವಟಿಕೆಗಳನ್ನು ಮಕ್ಕಳು ನಿರ್ವಹಿಸುತ್ತಾರೆ. ಭಾಷೆ, ಸಮಾಜ ವಿಜ್ಞಾನ, ಪರಿಸರ ವಿಜ್ಞಾನ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲ್ಯಾಣಪುರದ ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯಿಂದ ಸಾಂಸ್ಥಿಕ ಸಾಮಾಜಿಕ ಜವಾಜ್ದಾರಿ ಕಾರ್ಯಕ್ರಮದಡಿಯಲ್ಲಿ ಶನಿವಾರ ಅಗತ್ಯ ಸಲಕರಣೆಗಳನ್ನು ವಿತರಿಸಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಬೋಸಾಫ್ಟ್ ಪ್ರತಿನಿಧಿ ನಿರಂಜನ್ ಭಟ್ ಕ್ರೀಡಾ ಸಾಮಾಗ್ರಿ, ಪ್ರಿಂಟರ್, ಮಿಕ್ಸಿ, ಚಿಕ್ಕ ಯುಪಿಎಸ್‌ನ್ನು ಹಸ್ತಾಂತರಿಸಿದರು. ಬೇಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯೆ ಪ್ರಭಾವತಿ ಶೆಟ್ಟಿ, ಪ್ರಭಾವತಿ ಟಿ. ಶೆಟ್ಟಿ, ಉಷಾ ಕೊಠಾರಿ, ಊರಿನ ಪ್ರಮುಖರಾದ ಸುರೇಶ್ ಮೊಗವೀರ, ಸತೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ವಿನಯ ಹೆಗ್ಡೆ, ರೇಣುಕಾ ಶೆಟ್ಟಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ, ಸದಸ್ಯೆ ದಯಾಮತಿ, ಕೇದೂರು ಕ್ಲಸ್ಟರ್‌ನ ಸಂಗೀತಾ, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಧ್ಯಾಯಿನಿ ಉಷಾ ಸ್ವಾಗತಿಸಿದರು. ಶಿಕ್ಷಕ ರಮೇಶ್ ಶೆಟ್ಟಿ ವಂದಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ro

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಎಪಿಎಂಸಿ ಮಾರ್ಕೆಟ್ ಯಾರ್ಡಿನ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ವೇಳೆ ಹೆದ್ದಾರಿಯ ಬದಿಯ ಎರಡು ಕಡೆಗಳಲ್ಲಿ ವಿಭಜಕಕ್ಕೆ ಅಳವಡಿಸಿರುವ ಕಬ್ಬಿಣದ ತಡೆ ಬೇಲಿಯಿಂದಾಗಿ ಜನರಿಗೆ ಸಮಸ್ಯೆ ಆಗುತ್ತಿದ್ದು, ಕೂಡಲೇ ತೆರವು ಮಾಡುವಂತೆ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಶರತ್ಕುಮಾರ ಶೆಟ್ಟಿ, ಕುಂದಾಪುರ ಭಾಗದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ಅವ್ಯವಸ್ಥೆ ಬಗ್ಗೆ ಅಧಿಕಾರಿ ಗಮನಕ್ಕೆ ತಂದರೂ ಯಾವುದೇ ಸ್ಪಂದನ ಸಿಗುತ್ತಿಲ್ಲ. ಎಪಿಎಂಸಿ ಮಾರ್ಕೆಟ್ ಯಾರ್ಡ್ ಎದುರು ನಡೆವ ಕಾಮಗಾರಿಯಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಮಾರ್ಕೆಟ್ ಯಾರ್ಡ್ ಎದುರಿನ ಹೆದ್ದಾರಿ ದಾಟಲು ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕು. ಕುಂದಾಪುರ ಸಂತೆ ಹೋಗುವುದಕ್ಕೂ ಜನ ಪರದಾಟ ನಡೆಸುವಂತಾಗಿದೆ ಎಂದು ಅವರು ಆರೋಪಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ವಿಕಾಸ ಹೆಗ್ಡೆ, ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಜನರ ಸಮಸ್ಯೆಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಲ್ಲಿ ಮದುವೆ ಎಲ್ಲಾ ರೀತಿಯ ತಯಾರಿ ನಡೆದಿತ್ತು. ಇನ್ನೇನು ನಾಳೆ ಎಂದರೆ ಮದುವೆ. ಆದರೆ ಮದುವೆಗಾಗಿ ಬೆಂಗಳೂರಿನಿಂದ ಬರಬೇಕಿದ್ದ ಮಧುಮಗನ ಮಾತ್ರ ನಾಟ್ ರೀಚೆಬಲ್ ಆಗಿದ್ದ. ವಿಷಯ ತಿಳಿಯುತ್ತಿದ್ದಂತೆ ಬೈಂದೂರಿನ ಜೆಎನ್‌ಆರ್ ಸಭಾಭವನದಲ್ಲಿ ನಡೆಯಬೇಕಿದ್ದ ಮದುವೆಯೂ ನಿಂತು ಹೋಗಿದೆ. ತಾಲೂಕಿನ ಬಳ್ಕೂರಿನ ಪ್ರವೀಣ ಕುಮಾರ್ ನಾಪತ್ತೆಯಾದ ವ್ಯಕ್ತಿ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಉದ್ಯೋಗಿಯಾಗಿರುವ, ಬಳ್ಕೂರು ನಡುಮನೆ ರಾಮಚಂದ್ರ ಎಂಬುವವರ ಪುತ್ರ ಪ್ರವೀಣ ಕುಮಾರನ ಮದುವೆ ನ.29ರಂದು ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯೊಂದಿಗೆ ನಿಗದಿಯಾಗಿತ್ತು. ನಾಲ್ಕು ತಿಂಗಳ ಹಿಂದೆಯೇ ಮದುವೆ ನಿಶ್ಚಿತಾರ್ಥವೂ ನಡೆದಿತ್ತು. ಇತ್ತ ಹುಡುಗಿ ಮನೆಯವರು ಮದುವೆಗೆ ಸಂಪೂರ್ಣ ತಯಾರಿ ನಡೆಸಿದ್ದರು. ಆದರೆ ನ.26ರಂದು ಬೆಂಗಳೂರಿನಿಂದ ಬಳ್ಕೂರಿಗೆ ಬರುವುದಾಗಿ ತಿಳಿಸಿದ್ದ ಹುಡುಗ ಮಾತ್ರ ಬಂದಿರಲಿಲ್ಲ. ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. (ಕುಂದಾಪ್ರ ಡಾಟ್ ಕಾಂ) ಈ ಮೊದಲೇ ಮದುವೆಯಾಗಿತ್ತೇ? ಮಗ ನಾಪತ್ತೆಯಾಗಿರುವ ಬಗ್ಗೆ ತಂದೆ ರಾಮಚಂದ್ರ…

Read More