ಕುಂದಾಪ್ರ ಡಾಟ್ ಕಾಂ ವರದಿ. ಕೋಟ: ಡಾ|| ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಕಾರಂತ ಟ್ರಸ್ಟ್(ರಿ) ಕೋಟ ಇವರ ಆಶ್ರಯದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿ ನಡೆಯುತ್ತಿರುವ ಡಾ|| ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಡಾ|| ಕಾರಂತ ಜನ್ಮ ದಿನೋತ್ಸವ ಸಂಭ್ರಮ ಸಾಹಿತ್ಯಿಕ-ಸಾಂಸ್ಕೃತಿಕ ಸುಗ್ಗಿ ಪುನರ್ವಸು-2019 (ಮಳೆಬಿಲ್ಲಿನ ಕನವರಿಕೆ) ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿದೆ. ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ ಹಾಗೂ ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ(ರಿ) ಕೋಟ ಇವರು ತರಬೇತಿ ನೀಡಿರುವ ಒಟ್ಟು 200 ವಿದ್ಯಾರ್ಥಿಗಳು ರಚಿಸಿದ ಬೇಸಿಕ್ ಆರ್ಟ್, ಈಝಿ ಫ್ರೀ ಹ್ಯಾಂಡ್ ಸ್ಕೆಚ್ ಮತ್ತು ಆರ್ಟ್, ಪೆನ್ಸಿಲ್ ಆರ್ಟ್ ಮತ್ತು ಶೇಡಿಂಗ್ ಆರ್ಟ್, ಲ್ಯಾಂಡ್ ಸ್ಕೇಪ್ (ಪ್ರಕೃತಿ ಚಿತ್ರಣ), ಕ್ರಾಫ್ಟ್ ವರ್ಕ್ಸ್ ಮತ್ತು ಮಾಡೆಲ್ ಆರ್ಟ್, ಮಾಡರ್ನ್ ಆರ್ಟ್ ಮತ್ತು ಕ್ಯಾನ್ವಾಸ್ ಪೈಂಟಿಂಗ್ ಕಲಾತ್ಮಕ ವಿವಿಧ ಕಲಾಚಿತ್ರಗಳು ಪ್ರದರ್ಶನಕ್ಕೆ ಇದೆ. ಬಣ್ಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ನೇತೃತ್ವದಲ್ಲಿ ನಡೆದ ಪ್ರಸಕ್ತ ಬ್ಯಾಂಕುಗಳ ಸನ್ನಿವೇಶ ಎನ್ನುವ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಸ್ತುತ ಬ್ಯಾಂಕಿನ ವ್ಯವಹಾರದ ಬಗ್ಗೆ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ, ಬ್ಯಾಂಕುಗಳ ಸ್ಥಾಪನೆ, ಅದರ ಕಾರ್ಯನಿರ್ವಹಣೆ, ಇತ್ತೀಚೆಗೆ ಸರ್ಕಾರಿ ಬ್ಯಾಂಕುಗಳ ವಿಲೀನಗೊಳಿಸಿದ್ದರ ಬಗ್ಗೆ ಅಭಿಪ್ರಾಯವನ್ನು ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿವೃತ್ತ ಬ್ಯಾಂಕ್ ಅಧಿಕಾರಿ ಕೆ. ವೆಂಕಟರಮಣ ಹೆಗ್ಡೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧಾಕರ್ ಪಿ. ಸ್ವಾಗತಿಸಿದರು. ವಿದ್ಯಾರ್ಥಿನಿ ಸುಜಾತ ಖಾರ್ವಿ ಪ್ರಾರ್ಥಿಸಿ, ಆಯಿಷಾ ನಮಿರಾ ಅತಿಥಿಗಳನ್ನು ಪರಿಚಯಿಸಿ, ಮೆಲಿಟಾ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಮೊಗವೀರ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾ ಎಸ್ಜಿಎಸ್ ಇನ್ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ &ರಿಸರ್ಚ್ ಸೆಂಟರ್ನಲ್ಲಿ ನಡೆದ ಟ್ರ್ಯಾಕ್ಸ್ ಇಂಟರ್ನ್ಯಾಶನಲ್ ಯೋಗದಲ್ಲಿ ಅಥ್ಲೆಟಿಕ್ ಯೋಗ ಚಾಂಪಿಯನ್ಶಿಪ್ ವಿಭಾಗದಲ್ಲಿ ಮೊದಲ ಸ್ಥಾನ ಹಾಗೂ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಯೋಗ ಚಾಂಪಿಯನ್ಶಿಪ್ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದು ಮರಳಿದ ಮರವಂತೆ ಧನ್ವಿ ಪೂಜಾರಿಗೆ ಗುರುವಾರ ಕುಂದಾಪುರ ತಾಲೂಕು ಬಿಲ್ಲವ ಸಂಘ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಧನ್ವಿ ಪೂಜಾರಿಗೆ ಅದ್ದೂರಿ ಸ್ವಾಗತ ನೀಡಿ ತೆರದ ವಾಹನದಲ್ಲಿ ಮರವಂತೆಯವರೆಗೆ ಮೆರವಣಿಗೆ ಮೂಲಕ ಕರೆದೊಯ್ದರು. ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಬಿಲ್ಲವ ಮುಖಂಡರಾದ ಮಂಜು ಬಿಲ್ಲವ, ಭಾಸ್ಕರ ಬಿಲ್ಲವ, ಮಹಿಳಾ ಸಾಂತ್ವಾನ ಕೇಂದ್ರದ ಅಧ್ಯಕ್ಷೆ ರಾಧಾದಾಸ್, ನಾರಾಯಣಗುರು ಯುವಕ ಮಂಡಲ, ಮೈಲಾರೇಶ್ವರ ಯುವಕ ಮಂಡಲ, ರಾಯಲ್ ಕ್ಲಬ್, ಕುಂದಾಪುರ ಜೆಸಿಐ, ಸಂಗಮ್ ಫ್ರೆಂಡ್ಸ್ ಕುಂದಾಪುರ, ಕುಂದಾಪುರ ಪುರಸಭೆಯ ಸದಸ್ಯರುಗಳು, ಮಿರಾಕಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಂಬದಕೋಣೆ ಗ್ರಾಮದ ಎಡಮಾವಿನಹೊಳೆ ಬೊಬ್ಬರ್ಯಗುಂಡಿ ಹೊಳೆಯಲ್ಲಿ ಆಟವಾಡಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ದಾರುಣ ಘಟನೆ ನಡೆದಿದೆ. ಕಂಬದಕೋಣೆಯ ದೊಡ್ಮನೆ ಹಳಗೇರಿ ನಿವಾಸಿ ವೆಂಕಪ್ಪ ಶೆಟ್ಟಿ ಅವರ ಪುತ್ರ ವಂಶಿತ್ ಶೆಟ್ಟಿ (12) ಹಾಗೂ ಹಳಗೇರಿ ಪಟೇಲರಮನೆ ನಿವಾಸಿ ರತ್ನಾಕರ ಶೆಟ್ಟಿ ಅವರ ಪುತ್ರ ರಿತೇಶ್ ಶೆಟ್ಟಿ (12) ನೀರುಪಾಲದ ದುರ್ದೈವಿ ಬಾಲಕರು. ಕಂಬದಕೋಣೆ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ೭ ತರಗತಿ ಕಲಿಯುತ್ತಿರುವ ಈರ್ವರು ಶಾಲೆಗೆ ರಜೆ ಇದ್ದ ಕಾರಣ ಆಟವಾಡಲು ಗೆಳೆಯರೊಂದಿಗೆ ತೆರಳಿದ್ದರು. ಈ ವೇಳೆ ಕಾಲು ತೊಳೆಯಲು ಹೊಳೆಯ ನೀರಿಗಿಳಿದ ಓರ್ವನ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು, ಇದೇ ಸಂದರ್ಭ ಆತನ ರಕ್ಷಣೆಗೆ ಬಂದ ಇನ್ನೊರ್ವನೂ ಮುಳುಗಿದ್ದಾನೆ. ಸಂಜೆಯ ತನಕ ಶೋಧಕಾರ್ಯ ನಡೆಸಿ ವಂಶಿಕ್ ಶೆಟ್ಟಿಯ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ನಾಪತ್ತೆಯಾಗಿರುವ ಇನ್ನೊರ್ವನಿಗಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಆಗಮಿಸಿ ಘಟನೆಯ ಬಗೆಗೆ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶಿರೂರು ಹತ್ತಿರದ ಸುಂಕದಗುಂಡಿ ಸೇತುವೆ ಸಮೀಪ ಗುರುವಾರ ನಡೆದ ಲಾರಿ ಹಾಗೂ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಾವಿಗೀಡಾದ ಚಾಲಕನನ್ನು ವಂಡ್ಸೆ ನಿವಾಸಿ ನಿತೇಶ್ ಮೊಗವೀರ(23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸಂತೋಷ ಶೆಟ್ಟಿ (20 )ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವರ್ಷದಿಂದ ಬಾಗಲಕೋಟೆಯಲ್ಲಿ ಹೊಟೇಲ್ ನಡೆಸುತ್ತಿದ್ದು, ಮನೆಯಲ್ಲಿ ಪೂಜೆ ಇದ್ದ ಕಾರಣ ಊರಿಗೆ ಬರುತಿದ್ದರು. ಈ ಸಮಯದಲ್ಲಿ ಸ್ನೇಹಿತ ಸಂತೋಷ ಶೆಟ್ಟಿ ಕೂಡ ಜತೆಯಲ್ಲಿ ಹೊರಟಿದ್ದರು. ಸಂಜೆ ವೇಳೆಗೆ ವಿಪರೀತ ಮಳೆ ಬಂದ ಕಾರಣ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾದುದು ಸರಕಾರದ ಕರ್ತವ್ಯ. ಶಾಲಾ ಕೊಠಡಿಗಳಿಲ್ಲದ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ತರಗತಿ ಕೋಣೆ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಶಾಲಾ ಕಟ್ಟಡದ ದುರಸ್ಥಿಗೂ ಅನುದಾನ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತರಗತಿ ಕೋಣೆಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ.ಗುಜ್ಜಾಡಿ, ರಾಜು ದೇವಾಡಿಗ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಡಾ| ಶಿವರಾಮ ಕಾರಂತರು ಸಾಹಿತ್ಯ ಲೋಕದ ಮುತ್ತು, ಅವರ ಸಾಹಿತ್ಯ ಲೋಕದ ಕೊಡುಗೆ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದಿದೆ, ಅವರ ಈ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಪಸರಿಸುವ ಉದ್ದೇಶದಿಂದ ಕಾರಂತ ಥೀಮ್ ಪಾರ್ಕ್ನ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ಬ್ಯಾಂಕ್ ಕೋಟ ಶಾಖೆಯ ಪ್ರಬಂಧಕ ಗಣೇಶ್ ಹೊಳ್ಳ ತಿಳಿಸಿದರು. ಅವರು ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುತ್ತಿರುವ ಕಾರಂತೋತ್ಸವ ಪುನರ್ವಸು-೨೦೧೯ (ಮಳೆಬಿಲ್ಲಿನ ಕನವರಿಕೆ) ಕಾರ್ಯಕ್ರಮದ ಎರಡನೇ ದಿನ ರಾಜ್ಯಮಟ್ಟದ ಚಲನಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವೈದ್ಯ ಭಾಸ್ಕರ್ ಆಚಾರ್ಯ ಮಾತಾನಾಡಿ ಕಾರಂತರ ಬದುಕು ಬರಹ ಯುವ ಜನಾಂಗಕ್ಕೆ ಪ್ರೇರಕವಾಗಿದ್ದು,ನಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಲು ಪ್ರಯತಿಸಬೇಕು ಎಂದರು. ಕ.ಸಾ.ಪ ಕೋಟ ಹೋಬಳಿ ಘಟಕದ ಅಧ್ಯಕ್ಷ ಶ್ರೀ ಸತೀಶ್ ವಡ್ಡರ್ಸೆ ಮಾತನಾಡಿ ಕಾರಂತರ ಕಾದಂಬರಿಗಳು ಪ್ರಕೃತಿ ಮತ್ತು ಮಾನವ ಸಂಬಂಧಗಳ ಒಳಸುಳಿಗಳನ್ನು ಬಿಚ್ಚಿಡುತ್ತಾ ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳುವ ಅಗತ್ಯತೆ ತಿಳಿಸುತ್ತಾ ಸರ್ವಕಾಲಕ್ಕೂ ಸಲ್ಲುವಂತವುಗಳು ಎಂದು ಹೇಳಿದರು. ಕೋಟತಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ಹೊಂದಿರಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಗವರ್ನರ್ ನ್ಯಾ. ಕೆ.ಎನ್. ಫಣೀಂದ್ರ ಹೇಳಿದ್ದಾರೆ. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ನ್ಯಾಯಂಗ ಅಕಾಡೆಮಿ ಬೆಂಗಳೂರು, ಉಡುಪಿ ಜಿಲ್ಲಾ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ , ಜಿಲ್ಲೆಯ ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು , ವಕೀಲರು ಮತ್ತು ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳಿಗೆ ನಡೆದ ಎಲೆಕ್ಟ್ರಾನಿಕ್ಸ್ ಪುರಾವೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ೨೦೦೦ ಇಸವಿಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಇದುವರೆಗೆ ಈ ಕುರಿತು ಸೂಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಹೊಸ ಬಸ್ ನಿಲ್ದಾಣದ ಸಮೀಪ ನೂತನವಾಗಿ ಪ್ರಾರಂಭಗೊಂಡ ನಮ್ಮನೆ ಮಾಂಸಾಹಾರಿ ಊಟದ ಹೋಟೆಲ್ನ್ನು ಮುಂಬೈ ಉದ್ಯಮಿ, ಹಂಗಳೂರು ಪ್ರಸನ್ನ ಆಂಜನೇಯ ದೇವಸ್ಥಾನದ ಸ್ಥಾಪಕರಾದ ಸುರೇಶ ಡಿ ಪಡುಕೋಣೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರದ ತಹಶೀಲ್ದಾರ್ ತಿಪ್ಪೇಸ್ವಾಮಿ, ಕಟ್ಟಡದ ಮಾಲೀಕರದ ಪ್ರೇಮಾನಂದ ಶೆಟ್ಟಿ, ಕುಂದಾಪುರ ವಲಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಾಜಾ ಮಠದ ಬೆಟ್ಟು, ದತ್ತಾತ್ರೆಯ ದೇವಾಡಿಗ, ಚಂದ್ರಶೇಖರ ದೇವಾಡಿಗ, ಆನಂದ್ ಕೆ ಏನ್, ದಿನೇಶ್ ವಿ ದೇವಾಡಿಗ, ಉದಯ ಹೇರಿಕೇರಿ, ರಾಮ ದೇವಾಡಿಗ, ಸಂಸ್ಥೆಯ ಪಾಲುದಾರರಾದ ನಾಗರಾಜ್ ರಾಯಪ್ಪನಮಠ, ನವೀನ್, ಚಂದ್ರ ರಾಯಪ್ಪನಮಠ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾದ ಕೌಲಾಲಂಪುರದಲ್ಲಿರುವ ಎಸ್ಜಿಎಸ್ ಇನ್ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ ಎಂಡ್ ರಿಸರ್ಚ್ ಸೆಂಟರ್ನಲ್ಲಿ ಅ. ೧೨, ೧೩ರಂದು ನಡೆದ ಟ್ರ್ಯಾಕ್ಸ್ ಇಂಟರ್ನ್ಯಾಶನಲ್ ಯೋಗ ಕಾರ್ನಿವಲ್ನಲ್ಲಿ ಮರವಂತೆಯ 11ರ ಹರೆಯದ ಚುರುಕಿನ ಬಾಲೆ ಧನ್ವಿ ಪೂಜಾರಿ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ವಿಕ್ರಮ ಮೆರೆದಿದ್ದಾಳೆ. ಅಥ್ಲೆಟಿಕ್ ಯೋಗ ಚಾಂಪಿಯನ್ಶಿಪ್ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಯೋಗ ಚಾಂಪಿಯನ್ಶಿಪ್ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಹತ್ತಾರು ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ, ಪ್ರಶಸ್ತಿ ಗಳಿಸಿರುವ ಧನ್ವಿ ಕಳೆದ ತಿಂಗಳ ೧೮ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್ನಲ್ಲಿ ನಡೆದ ಐದನೆಯ ರಾಷ್ಟ್ರೀಯ ಅಥ್ಲೆಟಿಕ್ಸ್ ಯೋಗಾಸನ ಸ್ಫರ್ಧೆಯ ೧೦-೧೨ ವಯೋವಿಭಾಗದಲ್ಲಿ ಅರ್ಹತಾ ಪತ್ರ ಗಳಿಸಿದ್ದಳು. ೨೪, ೨೫ರಂದು ಚೆನ್ನೈನಲ್ಲಿ ನಡೆದ ಜಾಗತಿಕ ಯೋಗೋತ್ಸವದಲ್ಲಿ ನಾಲ್ಕನೆಯ ಸ್ಥಾನ ಗಳಿಸುವುದರ ಜತೆಗೆ ಜಾಗತಿಕ ದಾಖಲೆ ಪ್ರಯತ್ನದಲ್ಲಿ ಒಂದೂವರೆ ನಿಮಿಷ ಕಾಲ ವೀರಭದ್ರಾಸನ…
