Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿನ ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ. ಬಿಜೆಪಿಯ ಶಾಸಕರು ತಮ್ಮ ಅಧಿಕಾರ ಚಲಾಯಿಸಿವುದನ್ನು ಬಿಟ್ಟು ಕಾರ್ಯಾoಗವನ್ನು ಬೊಟ್ಟು ಮಾಡುವುದನ್ನು ನಿಲ್ಲಿಸಲಿ  ಎಂದು ಜಿಲ್ಲಾ ಕಾಂಗ್ರೆಸ್‍ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಯಲ್ಲಿನ ಸಮಸ್ಯೆಗಳಿಗೆ ಶಾಸಕರುಗಳ ನಿಷ್ಕ್ರೀಯತೆಯೇ ಕಾರಣ. ಗಾಣಿಗಾರಿಕೆ, ಅಗತ್ಯ ವಸ್ತುಗಳ ಪೂರೈಕೆಗೆ ನೀತಿ, ನಿಯಮ, ಕಾನೂನುಗಳನ್ನು ರೂಪಿಸುವವರು ಶಾಸನ ಸಭೆಯ ಸದಸ್ಯರು, ಇವರು ರೂಪಿಸಿದ ನೀತಿ, ನಿಯಮ, ಕಾನೂನಿನ ಅಡಿ ಕೆಲಸ ಮಾಡುವವರು ಕಾರ್ಯಾಂಗ. ಇವತ್ತು ಜಿಲ್ಲೆಯ ಶಾಸಕರುಗಳು ಕಾರ್ಯಾಂಗದ ಮೂಲಕ ಕೆಲಸ ಮಾಡಿಸಲು ಸಾಧ್ಯವಾಗದೆ ಇರುವುದು ಶಾಸಕರುಗಳ ನಿಷ್ಕ್ರೀಯತೆಯತೆ ಕಾರಣ ಎಂದರು. ಜನಸಾಮಾನ್ಯರ ಬೇಡಿಕೆ ಪೂರೈಸುವ ಹೊಣೆಗಾರರಾಗಿರುವ ಜನಪ್ರತಿನಿದಿನಗಳು ಅದನ್ನು ಬಿಟ್ಟು ಧರಣಿ ಕೂರುತ್ತೇವೆ ಎನ್ನುವುದು ಕೇವಲ ರಾಜಕಾರಣ ಬಿಟ್ಟರೆ ಬೇರೆ ಏನೂ ಅಲ್ಲ. ಸರ್ಕಾರದ ನೀತಿ, ನಿಯಮ, ಕಾನೂನು ಜನವಿರೋಧಿ ಇದೆ ಎಂದು ಕಂಡುಬಂದರೆ ಅದನ್ನು ಸಡಿಲೀಕರಣಗೊಳಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾ ಬಂಟರ ಸಂಘದ ವತಿಯಿಂದ  ಜ. 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಡಿ. 01 ರಂದು ನಡೆದ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು.  ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ನಿಕಟ ಪೂರ್ವ ಅಧ್ಯಕ್ಷರಾದ ಶಶಿಧರ ನಾಯ್ಕ್ , ಸಂಘದ ಮಾಜಿ ಉಪಾಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ, ಶಶಿಧರ ರೈ, ಮಾಜಿ ಕಾರ್ಯದರ್ಶಿ ಗಣೇಶ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಿರಿಯ ಉದ್ಯಮಿ ಹಾಗೂ ಕುಂದಾಪುರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಕೆ. ಕೇಶವ ಪ್ರಭು (86) ಶನಿವಾರ ರಾತ್ರಿ ನಿಧನರಾದರು. ಕುಂಭಾಸಿ ದಿ.ವೆಂಕಟರಮಣ ಪ್ರಭು ಮನೆತನದ ಹಿರಿಯರಾದ ಅವರು ಕುಂದಾಪುರದಲ್ಲಿ ಮೆ. ವೆಂಕಟರಮಣ ಪ್ರಭು ಸಂಸ್ಥೆ ಮೂಲಕ ಹಲವು ದಶಕಗಳಿಂದ ವ್ಯವಹಾರೋದ್ಯಮ ನಡೆಸುತ್ತಿದ್ದರು. ಅವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಎರಡು ದಶಕ ಸೇವೆ ಸಲ್ಲಿಸಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು . ಅವರು ಪತ್ನಿ , ಓರ್ವ ಪುತ್ರ , ಪುತ್ರಿ, ಸಹೋದರರು, ನಾಲ್ವರು ಸಹೋದರಿಯರಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯನ್ನು ಕ್ಷಯಮುಕ್ತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ನೂರು ದಿನಗಳ ಕ್ಷಯರೋಗ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕ್ಷಯಮುಕ್ತ ವಾತಾವರಣ ನಿರ್ಮಿಸಲು ಹಾಗೂ ಕ್ಷಯರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 100 ದಿನಗಳ ಅಭಿಯಾನ–ಕ್ಷಯರೋಗ ಉದ್ಘಾಟನಾ ಸಮಾರಂಭ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಾಗತಿಕ ಮಟ್ಟದಲ್ಲಿ ಹೊರೆಯಾಗುತ್ತಿರುವ ಹಾಗೂ ಜನರನ್ನು ಭಯಭೀತರನ್ನಾಗಿಸುವಲ್ಲಿ ಕ್ಷಯರೋಗವು ಒಂದಾಗಿದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಭಾರತಕ್ಕೆ ಸ್ವಾತಂತ್ರö್ಯ ದೊರಕಿನಿಂದಾಗಲೂ ಪ್ರಯತ್ನ ನಡೆಯುತ್ತಲೇ ಇದೆ ಎಂದ ಅವರು, ಸಮುದಾಯದಲ್ಲಿ ಕ್ಷಯರೋಗದ ಕುರಿತು ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್  ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯುತ್ ಹೊಂದಿಲ್ಲದ ಕುಟುಂಬದ ಮನೆಗಳಿಗೆ ಮೊದಲ ಆದ್ಯತೆ ನೀಡಿದಾಗ ಈ ಯೋಜನೆ ಯಶಸ್ವಿಯಾಗುತ್ತದೆ ಎಂದ ಅವರು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳು ಈ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಇದರ ಅಡಿಯಲ್ಲಿ ಒದಗಿಸಲಾಗುವ ಸಹಾಯಧನದ ಕುರಿತು ಮಾಹಿತಿ ನೀಡಬೇಕು ಎಂದರು. ಸೂರ್ಯ ಘರ್ ಯೋಜನೆಯಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ “ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ” ಕಾರ್ಯಾಗಾರ ನಡೆಯಿತು. ಮದರ್ ತೆರೇಸಾಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾರಾವ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಷ್ಟೀಯ ಪದವಿ ಪೂರ್ವ ವಿದ್ಯಾರ್ಥಿ,  ಶಿಕ್ಷಕರ ಮತ್ತುಪಾಲಕರ ಸಂಘ ಸ್ಥಾಪಕರಾದ ಮಿತೇಶ್ ಮೂಡುಕೊಣಾಜೆ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗಕೌಶಲ್ಯ ಮತ್ತು ವೃತ್ತಿ ಕೌಶಲ್ಯ ಅಗತ್ಯವಾಗಿದೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಬಹು ಕೌಶಲ್ಯ ಕಾರ್ಮಿಕರ ಬೇಡಿಕೆ ಹೆಚ್ಚಾಗಿದೆ. ಭಾರತದಂತಹ ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರದಲ್ಲಿ ಗುಣಮಟ್ಟದ ಕೌಶಲ್ಲ್ಯಾಭಿವೃದ್ಧಿ ಮತ್ತು ತರಬೇತಿ ಅಗತ್ಯ, ತಮ್ಮವೃತ್ತಿ ಆಯ್ಕೆಗಳನ್ನು ಗುರುತಿಸಲು ಮತ್ತು ಅಪೇಕ್ಷಿತ ವೃತ್ತಿಯನ್ನು ಆಯ್ಕೆಮಾಡಲು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಅತೀ ಅವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷಾಮಾಹಿತಿ, ಪರೀಕ್ಷಾದ್ವಂದ್ವಗಳು, ಭವಿಷ್ಯದಲ್ಲಿ ವೃತ್ತಿಯೋಜನೆ, ಕೋರ್ಸ್ಆಯ್ಕೆ, ವೃತ್ತಿಪರಿವರ್ತನೆ, ಸ್ವಯಂನಿರ್ಧಾರ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.07: ಇಲ್ಲಿನ ಕೋಡಿ ಬೀಚಿನಲ್ಲಿ ಈಜಾಡಲು ತೆರಳಿದ್ದ ಮೂವರು ಸಹೋದರರು ಸಮುದ್ರಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೊಡಿಯ ಸಮುದ್ರದಲ್ಲಿ ಈಜಾಡಲು ತೆರಳಿದ್ದು ಈ ವೇಳೆ ಅವಘಡ ನಡೆದಿದೆ. ಅಂಪಾರು ಗ್ರಾಮದ ಮೂಡುಬಗೆಯ ನಿವಾಸಿ ದಾಮೋದ‌ರ್ ಪ್ರಭು ಎಂಬುವರ ಪುತ್ರ ಧನರಾಜ್ (23) ಸಾವನ್ನಪ್ಪಿದ್ದರೆ, ಅವರ ಇನ್ನೊರ್ವ ಪುತ್ರ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದಾಮೋದರ್ ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು, ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್ ಎನ್‌ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಅವಘಡ ಗಮನಕ್ಕೆ ಬರುತ್ತಿದ್ದಂತೆ ಬೆಂಗಳೂರಿನ ಪ್ರವಾಸಿಗರು ತಕ್ಷಣ ಸಮುದ್ರಕ್ಕೆ ಹಾರಿ ರಕ್ಷಣೆಗೆ ಮುಂದಾದರು. ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ. ದರ್ಶನ…

Read More