ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಗಣಿತ ವಿಭಾಗದ ಮುಖ್ಯಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ನಿರ್ಮಲಾ ಕುಮಾರಿ ಬಿ. ಅವರನ್ನು ನಿಯೋಜಿಸಲಾಗಿದೆ. ನಿರ್ಮಲಾ ಅವರು ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾಗಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಸಂಯೋಜಕರಾಗಿ ಸುದೀರ್ಘ 23 ವರ್ಷಗಳ ಸೇವಾ ಅನುಭವವನ್ನು ಹೊಂದಿರುತ್ತಾರೆ. ಅದರೊಂದಿಗೆ ಮಂಗಳೂರಿನ ಬೋಸ್ಕೋಸ್ ಕಾಲೇಜಿನಲ್ಲಿ ಇದೇ ಕಾಯಕದ 3 ವರ್ಷದ ಸೇವಾ ಅನುಭವ ಹೊಂದಿರುತ್ತಾರೆ. ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದು ಗಣಿತದ ಸಾಧನೆಗಾಗಿ ಹತ್ತು ಹಲವು ಪುರಸ್ಕಾರಗಳನ್ನ ಪಡೆದಿರುವ ಇವರು ಈ ಶೈಕ್ಷಣಿಕ ವರ್ಷದಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ ವಿಷಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರುದ್ರಭೂಮಿಯನ್ನು ಶಿವನ ಮೂರ್ತಿಯನ್ನು ನಿರ್ಮಿಸಿರುವುದು ದೇವಾಲಯ ನಿರ್ಮಿಸಿದಷ್ಟೇ ಪುಣ್ಯದ ಕೆಲಸ. ಶಿವನ ವಾಸಸ್ಥಾನವೇ ರುದ್ರಭೂಮಿ. ಹೀಗಾಗಿ ರುದ್ರಭೂಮಿಯ ಪಾವಿತ್ರ್ಯತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ರುದ್ರಭೂಮಿಯನ್ನು ನವೀಕರಣಗೊಳಿಸಿ ಶಿವನ ಮೂರ್ತಿಯನ್ನು ನಿರ್ಮಿಸಿರುವುದು ಅತ್ಯಂತ ಪವಿತ್ರವಾದ ಕೆಲಸ. ಈ ಮಹತ್ಕಾರ್ಯದಲ್ಲಿ ಕೈಜೋಡಿಸಿದ ಪ್ರತಿಯೊಬ್ಬರಿಗೂ ದೇವರು ಸನ್ಮಂಗಲವನ್ನುಂಟು ಮಾಡಲಿ ಎಂದು ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಿ. ರವೀಶ್ ಭಟ್ ಹೇಳಿದರು. ಶ್ರೀ ವೀರೇಶ್ವರ ಸೇವಾ ಟ್ರಸ್ಟ್ ಗಂಗೊಳ್ಳಿ ಮತ್ತು ವೀರ ಸಾವರ್ಕರ್ ಬಳಗ ಗಂಗೊಳ್ಳಿ ಇದರ ನೇತೃತ್ವದಲ್ಲಿ ಗಂಗೊಳ್ಳಿ ಗ್ರಾಮದ ದುರ್ಗಿಕೇರಿಯ ಸಾರ್ವಜನಿಕ ಹಿಂದು ರುದ್ರಭೂಮಿ ’ಮೋಕ್ಷ ಧಾಮʼ ದಲ್ಲಿ ನೂತನವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಇತ್ತಿಚಿಗೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಶಿಲ್ಪಿ ಕುಮಾರ್ ಶಿವಮೊಗ್ಗ ಅವರನ್ನು ಸನ್ಮಾನಿಸಲಾಯಿತು. ರುದ್ರಭೂಮಿಯ ನವೀಕರಣ ಹಾಗೂ ಶಿವನಮೂರ್ತಿ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳು, ಗುತ್ತಿಗೆದಾರರು ಹಾಗೂ ಸಹಕರಿಸಿದವರನ್ನು ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ನ ಪಿಡಿಒ ಉಮಾಶಂಕರ, ಗ್ರಾಪಂ.ನ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯ ವಿದ್ಯಾರ್ಥಿಗಳಿಗಾಗಿ ಜರುಗಿತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಂದಾಪುರ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ʼನ ಅಧ್ಯಕ್ಷ ಗೌತಮ್ ಶೆಟ್ಟಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಂ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಮೀಳಾ ವಂದಿಸಿದರು. ವಿದ್ಯಾರ್ಥಿನಿ ಖುಷಿ ಕಾರ್ಯಕ್ರಮ ನಿರೂಪಿಸಿದರು. ಐಪಿಎಲ್ ಮಾದರಿಯಲ್ಲಿ 150 ವಿದ್ಯಾರ್ಥಿ ಆಟಗಾರರನ್ನು 10 ತಂಡಗಳನ್ನಾಗಿ ರಚಿಸಿ 4 ಓವರ್ ಗಳ ಮ್ಯಾಚ್, 3 ದಿನಗಳ ಕಾಲ ನಡೆಯಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕರಾದ ರಿತಿನ್ ಎಸ್. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಘಟಕದ ಕಾರ್ಯಕ್ರಮಾಧಿಕಾರಿ ವಿದ್ಯಾರಾಣಿ ವಂದಿಸಿದರು. ಎನ್.ಸಿ.ಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತç ಉಪನ್ಯಾಸಕ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಉಪನ್ಯಾಸಕಿ ದೀಪಿಕಾ ಜಿ. ಉಪಸ್ಥಿತರಿದ್ದರು. ಅತ್ಯುತ್ತಮ ನಿರೂಪಣೆ ಶೃದ್ಧಾ, ದ್ವಿತೀಯ ಬಿಬಿಎ, ಅತ್ಯುತ್ತಮ ಗುಂಪು ನೃತ್ಯ ಬಹುಮಾನ ದ್ವಿತೀಯ ಬಿಸಿಎ (ಬಿ), ವೈಯಕ್ತಿಕ ಪ್ರತಿಭೆ – ಬ್ರಾಹ್ಮಿ ಪ್ರಥಮ ಬಿಸಿಎ (ಎ), ಒಟ್ಟು ಸಮಗ್ರ ಪುರಸ್ಕಾರವನ್ನು ಕ್ರಮವಾಗಿ ತೃತೀಯ ಬಿ.ಕಾಂ. (ಬಿ), ತೃತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಉಪ್ಪುಂದದಲ್ಲಿ ಸಮೃದ್ಧ ಹಸಿರು ಕಾರ್ಯಕ್ರಮದಡಿಯಲ್ಲಿಗಿಡಗಳನ್ನು ನೆಡಲಾಯಿತು. ಸಿದ್ಧಾಪುರದಲ್ಲಿ ಜರುಗಿದ ಸಮೃದ್ಧ ಹಸಿರು ಕಾರ್ಯಕ್ರಮದಲ್ಲಿ ಸ್ವತಃ ಶಾಸಕ ಗುರುರಾಜ ಗಂಟಿಹೊಳೆ ಅವರು ಪಾಲ್ಗೊಂಡರು. ಚಿತ್ತೂರು, ಆಲಂದೂರು, ವಂಡ್ಸೆ, ನೆಂಪು, ಯಡ್ತರೆ ಗುಲ್ವಾಡಿ, ತ್ರಾಸಿ ಮೊದಲಾದೆಡೆ ಗೀಡಗಳನ್ನು ನೆಡಲಾಯಿತು. ಬೈಂದೂರಿನಲ್ಲಿ ರಥೋತ್ಸವಕ್ಕೆ ತೆರಳುವ ಭಕ್ತಾಧಿಗಳಿಗೆ ತಂಪುಪಾನೀಯಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಕುಂದಾಪುರ ಚೈತನ್ಯ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಮಂಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿಯನ್ನು ಮಂಕಿಯ ಯುವಕರ ತಂಡ ಶ್ರಮದಾನದ ಮೂಲಕ ದುರಸ್ತಿ ಮಾಡಿತು. ವಸ್ರೆ ಭಾಗದಲ್ಲಿ ಯುವಕರ ತಂಡ ಬಡಕುಟುಂಬದ ಮನೆಯ ಮಾಡು ನಿರ್ಮಿಸಿಕೊಡಲು ಶ್ರಮಿಸಿತು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಭಾನುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ವೈಯಕ್ತಿಕ ಬದುಕನ್ನು ಸಮಾಜದಲ್ಲಿ ಅತ್ಯುತ್ತಮವಾಗಿ ಕಟ್ಟುಕೊಳ್ಳುವುದೇ ದೇಶ ಕಟ್ಟುವ ಕಾರ್ಯ’ ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್. ಶಶಿಕುಮಾರ್ ಹೇಳಿದರು. ಆಳ್ವಾಸ್ ಪದವಿ ಕಾಲೇಜು ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ವಿವಿಧ ವಿದ್ಯಾರ್ಥಿ ಘಟಕಗಳ ದಿನಾಚರಣೆ ’ಇನಾಮು – ೨೦೨೪’ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ಯುವಕರು ನಾವು ದೇಶ ಕಟ್ಟುತ್ತೇವೆ.. ಎಂಬಿತ್ಯಾದಿಯಾಗಿ ಉತ್ಪ್ರೇಕ್ಷೆಯಿಂದ ಹೇಳುತ್ತಾರೆ. ಒಂದೇ ಬಾರಿಗೆ ಭಾರಿ ಭಾರ ಹೊರಬೇಡಿ. ನಮ್ಮ ಬದುಕು, ಮನೆಯವರ ಬದುಕು, ಊರು- ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಮಾತ್ರ ದೇಶ ಕಟ್ಟಲು ಸಾಧ್ಯ. ಅದಕ್ಕೆ ಮೌಲ್ಯಾಧಾರಿತ ಬದುಕು ಕಟ್ಟಿಕೊಳ್ಳಿ ಎಂದರು. ವ್ಯಕ್ತಿತ್ವ ವಿಕಸನದಲ್ಲಿ ತರಗತಿ ಶಿಕ್ಷಣ ಎನ್ನುವುದು ಒಂದು ಭಾಗವ?. ಅದನ್ನು ಹೊರತುಪಡಿಸಿ ಪಠ್ಯೇತರ ಚಟುವಟಿಕೆಗಳು ಸಾಕಷ್ಟಿವೆ. ಇವುಗಳಲ್ಲಿ ತೊಡಗಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿಯುತ ಕಾರ್ಯವನ್ನು ಆಳ್ವಾಸ್ ಮಾಡುತ್ತಿದೆ ಎಂದು ಶ್ಲಾಘಿಸಿದರು. ಗುರಿ ಸ್ಪ?ವಿದ್ದಾಗ ಮಾತ್ರ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಮೂಡ್ಲಕಟ್ಟೆ ಸಾವಿಷ್ಕಾರ್ -24 ಅಂಗವಾಗಿ ಪ್ರಖ್ಯಾತ ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಕನ್ನಡ ರ್ಯಾಪ್ ಹಾಡುಗಳ ಮೂಲಕ ನೆರೆದ ಜನ ಸಮೂಹವನ್ನು ಮಂತ್ರ ಮುಗ್ಧರಾಗಿಸಿದರು. ತಮ್ಮ ಶೈಲಿಯಲ್ಲಿ ಉತ್ತಮ ಹಿಡಿತವಿರುವ ಅವರು ನೆರೆದಿದ್ದ ವಿದ್ಯಾರ್ಥಿವೃಂದಕ್ಕೆ ಹಾಡು, ನೃತ್ಯದ ಮೂಲಕ ಅವಿಸ್ಮರಣೀಯ ದಿನವಾಗುವಂತೆ ಮಾಡಿದರು. ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಸಿನಿಮಾಗಳಿಗೆ ಹಾಡಿದ ಸರಿಗಮಪ ಖ್ಯಾತಿಯಜ್ಯೂರಿ ಮೆಂಬರ್ ಶಶಿಕಲಾ ಸುನಿಲ್, ಸರಿಗಮಪ-20 ವಿನ್ನರ್ ದರ್ಶನ್ ನಾರಾಯಣ್ ರವರು ಪ್ರೇಕ್ಷಕರನ್ನು ರಂಜಿಸಿದರು. ಎರಡನೆಯ ದಿನದ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಜಾನಪದ ಶೈಲಿಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಹೆಸರಾಂತ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ತಂಡದವರು. ತಾವೇ ಬರೆದ ಗೀತೆಗಳನ್ನ ಕೂಡಾ ಹಾಡಿ ಜನರನ್ನು ರಂಜಿಸಿದರು. ಸಾವಿಷ್ಕಾರ್ -24 ರ ಎರಡು ದಿನದ ಸಂಜೆಯ ಕಾರ್ಯಕ್ರಮವು ರಂಜನೀಯವಾಗಿ ಮೂಡಿ ಬಂದಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ. 98.36 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 60 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 22 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 618 ಅಂಕಗಳನ್ನು ಪಡೆದಿರುವ ದೀಕ್ಷಾ ವಿ.ಕಾಮತ್ ಶಾಲೆಯಲ್ಲಿ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ದೀಕ್ಷಾ ವಿ.ಕಾಮತ್ (618), ವೈಷ್ಣವಿ (607), ಆದಿತ್ಯ ಪೂಜಾರಿ (605), ಸಿಂಚನಾ ದೇವಾಡಿಗ (588), ಮಾನ್ವಿ ಎಸ್.ಪೂಜಾರಿ (587), ಗೌತಮಿ ಜಿ.ನಾಯಕ್ (586), ಐಶ್ವರ್ಯ ಎ.ಪೂಜಾರಿ (575), ಪ್ರತೀಕ್ ಕೊಠಾರಿ (572), ಶ್ರೀನಿಧಿ ವಿ.ಖಾರ್ವಿ (571), ಧನ್ಯ (568), ಧನುಶ್ ಶೇರುಗಾರ್ (565), ಅಕ್ಷಯ್ ಬಿಲ್ಲವ (562), ಅರ್ಪಿತಾ ಕುಲಾಲ್ (555), ಶ್ರಾವ್ಯ (551) ಉತ್ತಮ ಸಾಧನೆ ಮಾಡಿದ್ದಾರೆ.
