ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ದೀಪಾವಳಿ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ದೀಪಾವಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಪ್ರದೇಶವಾರು ಅನನ್ಯತೆಯನ್ನು ಹೊಂದಿರುವ, ಕೃಷಿ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಹಬ್ಬ ದೀಪಾವಳಿ. ಜಾಗತೀಕರಣಕ್ಕೆ ತೆರೆದುಕೊಂಡ ಬಂಡವಾಳಶಾಹಿ ಮನಸ್ಸಿನ ಇಂದಿನ ಜಗತ್ತಿನಲ್ಲಿ ಹಬ್ಬಗಳು ತಮ್ಮ ನೈಜತೆಯನ್ನು ಕಳೆದುಕೊಳ್ಳುತ್ತಿರುವುದು ವಿಷಾಧನೀಯ. ವಿದ್ಯಾರ್ಥಿಗಳು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಹಬ್ಬಗಳನ್ನು ಸಂಭ್ರಮಿಸಬೇಕು ಎಂದು ಹೇಳಿದರು. ವಿಭಾಗದ ಮುಖ್ಯಸ್ಥ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಛೇರಿ ಸಿಬ್ಬಂದಿ ಸುಧೀಂದ್ರ ಕೆ. ಎಸ್. ದೀಪಾವಳಿ ಹಬ್ಬದ ಬಲೀಂದ್ರನನ್ನು ಕರೆಯುವ ಸೊಲ್ಲುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರವೀಣಾ ಮಹಾಬಲ ಪೂಜಾರಿ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ವ್ಯಾಪ್ತಿಗೊಳಪಡುವ 118-ಬೈಂದೂರು, 119 -ಕುಂದಾಪುರ, 120 -ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 18 ರಂದು ಚುನಾವಣಾ ಆಯೋಗದ ವೆಬ್ಸೈಟ್ https://www.ceokarnataka.kar.nic.in ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯ ಮತದಾರರು ಪ್ರಕಟಿಸಲಾದ ಕರಡು ಮತದಾರ ಪಟ್ಟಿಯನ್ನು ಸ್ವತಃ ಪರಿಶೀಲಿಸಿ, ಅವರವರ ಹೆಸರು ಇರುವುದನ್ನು ದೃಢಪಡಿಸಿಕೊಳ್ಳಬೇಕು. ಒಂದು ವೇಳೆ ತಮ್ಮ ವಾಸಸ್ಥಾನದ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಆಗದೆ ಇದ್ದಲ್ಲಿ ಜನವರಿ 1, 2021 ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವ ಅರ್ಹ ಭಾರತೀಯ ನಾಗರಿಕರು ನವೆಂಬರ್ 18 ರಿಂದ ಡಿಸೆಂಬರ್ 17 ರ ವರೆಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಅವಧಿಯಲ್ಲಿ ನಿಗದಿತ ನಮೂನೆ-6 ರಲ್ಲಿ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿ(ಬಿ.ಎಲ್.ಓ) ರವರಿಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು, ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಇತ್ಯಾದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ನೂತನ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ರೋಗಿಗಳನ್ನು ಹಾಗೂ ಸಂಪೂರ್ಣ ಉಪಕರಣಗಳನ್ನು ಸ್ಥಳಾಂತರಿಸುವುದು ಅಗತ್ಯವಿದ್ದು, ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವುದು ಅಗತ್ಯವಿದೆ ಎಂದು ಶಾಸಕ ರಘುಪತಿ ಭಟ್ ಮತ್ತು ಎಲ್ಲಾ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು, ಈ ಕುರಿತಂತೆ ಬ್ರಹ್ಮಾವರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಕೊಕ್ಕರ್ಣೆ ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಪುಣೆ ಮತ್ತು ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈಸ್ಸ್ ಸಹಯೋಗದಲ್ಲಿ ”ಸಂಘಟಿತವಾಗಿ ಪ್ರಕೃತಿ ಚಿಕಿತ್ಸೆಯ ಮೂಲಕ ಚೈತನ್ಯವನ್ನು ವರ್ಧಿಸುವುದು” ಎಂಬ ವಿಷಯವನ್ನು ಆದರಿಸಿ ಮೂರನೇ ನ್ಯಾಷನಲ್ ನ್ಯಾಚುರೋಪಥಿ ದಿನವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ಬೀಚ್ ಹೀಲಿಂಗ್ ಹೋಮ್ ಸಮಗ್ರ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಡಾ. ಮಹಮ್ಮದ್ ರಫೀಕ್ ಮಾತನಾಡಿ, ಪ್ರಕೃತಿ ಚಿಕಿತ್ಸೆಗೆ ನಮ್ಮ ದೇಶ ದೊಡ್ಡ ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯ. ಆದರೆ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್ ಕಾಯಿಲೆಗಳಲ್ಲಿ ನಮ್ಮ ದೇಶವೇ ದಾಪುಗಾಲು ಇಡುತ್ತಿರುವುದು ಬೇಸರದ ಸಂಗತಿ ಎಂದರು. ಹುರುಪು ಜೀವನಶಕ್ತಿ ಹಣಕೊಟ್ಟು ,ಮಾತ್ರೆ ತಿಂದು ಬರಲು ಸಾಧ್ಯವಿಲ್ಲ, ಅವು ಕೇವಲ ನಮ್ಮ ಜೀವನ ಶೈಲಿಯಿಂದ ಮಾತ್ರ ಕಾಪಡಿಕೊಳ್ಳಲು ಸಾಧ್ಯ. ನಾವು ಯಾವಾಗ ಸಂತೋಷವಾಗಿರುತ್ತೇವೆಯೋ ಆಗ ನಮ್ಮ ಚೈತನ್ಯ ಉತ್ಸಾಹ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಯೋಗ ಧ್ಯಾನ ಮಾಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜಿ.ವಿ ಅಶೋಕ ಸಂಪಾದಿಸಿದ ದಿ. ಜಿ. ವಾಸುದೇವ ಹೇರ್ಳೆ ಆತ್ಮಕಥನ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಲೋಕಾರ್ಪಣೆಗೊಳಿಸಿದರು. ಕೃತಿ ಆನಾವರಣಗೊಳಿಸಿ ಮಾತನಾಡಿದ ನೀಲಾವರ ಸುರೇಂದ್ರ ಅಡಿಗ, ಆತ್ಮಕಥನಗಳು ನಮ್ಮ ಬದುಕಿಗೆ ದಾರಿದೀಪವಾಗಿದ್ದು ನಮ್ಮನ್ನು ಅವಲೋಕನ ಮಾಡಿಕೊಳ್ಳಲು ಒಂದು ಅವಕಾಶ, ಇದರಿಂದ ಬದುಕಿನ ಪಾಠಗಳ ಬಗ್ಗೆ ಅಥವಾ ಬದುಕಿನ ಬಗ್ಗೆ ಇರುವ ಹೆಜ್ಜೆಗುರುತನ್ನು , ಸಾಧಕನು ಸಾಧಿಸಿದ ಸಾಧನೆ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆರಂಭಿಕ ಮಾತುಗಳನ್ನಾಡಿದ ಸಂಪಾದಕ ಜಿ.ವಿ ಹೇರ್ಳೆರವರು ತಂದೆಯವರ ಕುರಿತು ಮಾಡಿದ ಪುಸ್ತಕದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷರಾದ ನಾರಾಯಣ ಮಡಿ, ಕಾರ್ಕಳ ಕ.ಸಾ.ಪ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಹೆಬ್ರಿ ತಾಲೂಕು ಕ.ಸಾ.ಪ ಅಧ್ಯಕ್ಷರಾದ ಆನಂದ್ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಜಿ. ಅಶೋಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣಕಾಮತ್ರ ಹೆಸರಿನಲ್ಲಿ ನೀಡುವ 2020-21 ರ ಸಾಲಿನ ಪ್ರಶಸ್ತಿಯನ್ನು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು ಇದರ ಅರ್ಥಧಾರಿ ನಾರಾಯಣ ಬಿಲ್ಲವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಲಾಗಿದೆ 2021 ಜನವರಿಯಲ್ಲಿ ನಡೆಯುವ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾಗವಹಿಸುವ ವಿಶೇಷ ಗಣ್ಯರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು ವಿಭಾಗದಿಂದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸ್ಪಾಸು, ವಿಕಲಚೇತನರ ರಿಯಾಯಿತಿ ಬಸ್ಸ್ಪಾಸು, ಅಂಧರ ಉಚಿತ ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಉಚಿತ, ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಮತ್ತು ಅಪಘಾತ ಪರಿಹಾರ ನಿಧಿಗಳನ್ನು ಪಡೆಯಲುಸೇವಾಸಿಂಧು ಪೋರ್ಟಲ್ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಪ್ಲೋಡ್ ಮಾಡಿದ ಅರ್ಜಿ ಪ್ರತಿ ಹಾಗೂ ಪಾಸಿನ ಶುಲ್ಕವನ್ನು ವಿದ್ಯಾರ್ಥಿಗಳು ಶಾಲಾಕಾಲೇಜು ಮುಖಾಂತರ ಕರಾರಸಾ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ ನಲ್ಲಿ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಸೂಕ್ತ ದಾಖಲೆಗಳನ್ನು ಹಾಗೂ ಪಾಸ್ ಶುಲ್ಕವನ್ನು ನಿಗಮದ ಪಾಸ್ ಕೌಂಟರ್ ನಲ್ಲಿ ನೀಡಿ ಬಸ್ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ಕರಾರಸಾಂ ವಿಭಾಗದ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರಿನ ಹೆದ್ದಾರಿಯಲ್ಲಿ ನಿರ್ಮಿಸಿರುವ ಕೆಳಾಮನೆ ಅಬ್ಬಕ್ಕ ಶೀನಪ್ಪ ಶೆಟ್ಟಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಇತ್ತಿಚೆಗೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಬಿ. ರಾಜಾರಾಮ ಭಟ್, ರೋಟರಿ ಸದಸ್ಯರು ಸಮಾಜಸೇವೆಯಲ್ಲಿ ಸಂತಸ ತಾಳುತ್ತಾರೆ. ಕುಂದಾಪುರ ಮಿಡ್ಟೌನ್ ರೋಟರಿ ಕ್ಲಬ್ ಅಧ್ಯಕ್ಷ ನಳಿನ್ಕುಮಾರ ಶೆಟ್ಟಿ ಸಾರ್ವಜನಿಕರ ಉಪಯೋಗಕ್ಕಾಗಿ ನಾಗೂರಿನಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣ ಅದಕ್ಕೆ ಸಾಕ್ಷಿ, ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಲದಲ್ಲಿ ಹಿಂದಿದ್ದ ತಂಗುದಾಣಗಳನ್ನು ಗುತ್ತಿಗೆದಾರರು ಕೆಡವಿದರು. ಆದರೆ ಅಷ್ಟೇ ಸಂಖ್ಯೆಯ ತಂಗುದಾಣಗಳನ್ನು ಅವರು ನಿರ್ಮಿಸಲಿಲ್ಲ. ಇದರಿಂದ ಹಲವು ಕಡೆ ಬಸ್ ಪ್ರಯಾಣಿಕರು ಬಸ್ಗಾಗಿ ಕಾಯಲು ಬಿಸಿಲು, ಮಳೆಯಲ್ಲಿ ನಿಲ್ಲುವಂತಾಗಿದೆ. ನಳಿನ್ಕುಮಾರ ಶೆಟ್ಟಿ ಅವರನ್ನು ಇತರ ದಾನಿಗಳೂ ಅನುಸರಿಸಿದರೆ ಹೆದ್ದಾರಿಯಲ್ಲಿ ಆಗಿರುವ ತಂಗುದಾಣಗಳ ಕೊರತೆ ನೀಗಬಹುದು ಎಂದು ಹೇಳಿದರು. ನಳಿನ್ಕುಮಾರ ಶೆಟ್ಟಿ ಅವರ ಕುಸುಮ ಫೌಂಡೇಶನ್ ದತ್ತು ಸ್ವೀಕರಿಸಿ, ಅಭಿವೃದ್ಧಿ ಪಡಿಸಿರುವ ನಾಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಭಟ್, ನಳಿನ್ಕುಮಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ ಎನ್. ಅರ್ಸ್. ನಂದಿನಿ ಹೋಟೆಲ್ನಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಸಿಬ್ಬಂದಿಗಳು ಗ್ರಾಹಕರನ್ನು ಹೊರಕ್ಕೆ ಕಳುಹಿಸಿದ್ದರು. ಅಗ್ನಿಶಾಮಕದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರ ನಿವಾಸದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಪೂರ್ವ ತಯಾರಿ ಸಭೆಗೆ ಬಹುತೇಕ ಬೈಂದೂರು ತಾ.ಪಂ ಸದಸ್ಯರು ಗೈರಾಗಿರುವುದು ಬಿಜೆಪಿ ಪಕ್ಷದಲ್ಲಿ ಹೊಗೆಯಾಡುತ್ತಿದ್ದ ಭಿನ್ನಮತಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ. ಶಾಸಕರ ನೆಂಪು ನಿವಾಸದಲ್ಲಿ ನಡೆದ ಚುನಾವಣಾ ಪೂರ್ವ ತಯಾರಿ ಸಭೆಗೆ ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ ಸೇರಿದಂತೆ ಒಟ್ಟು ಒಂಭತ್ತು ಬಿಜೆಪಿ ಬೆಂಬಲಿತ ತಾ.ಪಂ ಸದಸ್ಯರ ಪೈಕಿ ಕೇವಲ ಈರ್ವರು ಮಹಿಳಾ ತಾ.ಪಂ ಸದಸ್ಯರು ಭಾಗವಹಿಸಿದ್ದು, ಉಳಿದ ಏಳು ಮಂದಿ ತಾ.ಪಂ ಸದಸ್ಯರು ಗೈರಾಗಿದ್ದಾರೆ. ಬೈಂದೂರು ಬಿಜೆಪಿಯ ಪ್ರಭಾವಿ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬು ಹೆಗ್ಡೆಯವರ ಗೈರು ಕೂಡ ಪಕ್ಷದೊಳಗೆ ನಾಯಕರ ಮಧ್ಯೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಬಹಿರಂಗಗೊಂಡಂತಾಗಿದೆ. ಪಕ್ಷದ ಎಲ್ಲಾ ಸಭೆಗಳನ್ನು ಶಾಸಕರ ಮನೆಯಲ್ಲಿ ನಡೆಸುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಯವರ ನಡೆಗೆ ಈ ಹಿಂದೆಯೂ ಸಾಕಷ್ಟು ಪ್ರತಿರೋಧಗಳು ವ್ಯಕ್ತವಾಗಿದ್ದವು. ಆದರೂ ಕೂಡ ಶಾಸಕರು…
