ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾದರೆ, ಇನ್ನು ಕೆಲವು ಭಾಗಗಳಲ್ಲಿ ಮಕ್ಕಳ ಕೊರತೆ ಇದೆ. ಇಲಾಖೆಗೆ ಇದೊಂದು ವಿಚಿತ್ರ ಅಗ್ನಿಪರೀಕ್ಷೆ. ಇವೆರಡನ್ನೂ ಸಮತೋಲನಗೊಳಿಸಲು ಇರುವ ಉಪಾಯಗಳ ಬಗ್ಗೆ ಇಲಾಖೆ ಹಲವಾರು ರೀತಿಯ ಯೋಚನೆ ಮಾಡುತ್ತಿದೆ. ಗ್ರಾಮ ಪಂಚಾಯತಿಗೊಂದು ಮಾದರಿ ಶಾಲೆಯ ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಹೇಳಿದರು. ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋಟಿ ವೆಚ್ಚದಲ್ಲಿ ನೂತನ ನಿರ್ಮಾಣಗೊಂಡ ಆರು ತರಗತಿ ಕೋಣೆಗಳ ಸುಸಜ್ಜಿತ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಪ್ರಸ್ತುತ ಶೈಕ್ಷಣಿಕ ಕ್ಷೇತ್ರದಲ್ಲಿ ಕಟ್ಟ ಕಡೆಯ ಮಗುವಿಗೂ ಗುಣಾತ್ಮಕ ಶಿಕ್ಷಣ ದೊರೆಯ ಬೇಕೇಂಬ ನೆಲೆಯಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಸ್ಪಂದಿಸುತ್ತಿದೆ. ಕೋವಿಡ್ ನಂತರ ಹಣಕಾಸಿನ ಸ್ಥಿತಿ ಸ್ವಲ್ಪಮಟ್ಟಿನ ಸುಧಾರಣೆ ಇರುವುದರಿಂದ ಸರ್ಕಾರ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದರು. ಉತ್ತಮ ಶಿಕ್ಷಣ ಪಡೆದ ವ್ಯಕ್ತಿ ತನ್ನ ಬಗ್ಗೆ ಮಾತ್ರ ಯೋಚಿಸುವುದನ್ನು ಕೆಲವು ಕಡೆಗಳಲ್ಲಿ ಕಾಣಬಹುದಾಗಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವ್ಯಕ್ತಿಗಿಂತ ಸಂಘಟನೆ ದೊಡ್ಡದು ಎಂಬ ಸಿದ್ಧಾಂತ ಹೊಂದಿದ ಭಾರತೀಯ ಜನತಾ ಪಕ್ಷ, ಸಂಘಟನೆಯ ಉದ್ದೇಶವಿರಿಸಿಕೊಂಡು ಪರಿಶುದ್ಧ ರಾಜಕೀಯದ ಮೂಲಕ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಸಂಘಟನೆ ಬಲಿಷ್ಠವಾದರೆ ಇತಿಹಾಸ ಬದಲಿಸಲು ಸಾಧ್ಯ ಎಂಬ ಕಾರಣಕ್ಕೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಸೌಕರ್ಯಗಳನ್ನು ತಲುಪಿಸುವ ಜವಾಬ್ದಾರಿ ಸಂಘಟನೆಯದ್ದಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಉಪ್ಪುಂದ ಮಾತೃಶ್ರಿ ಸಭಾಭವನದಲ್ಲಿ ಬುಧವಾರ ಬಿಜೆಪಿ ಬಂದೂರು ಮಂಡಲದ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿ ಅವರು ಶ್ರೇಷ್ಠ ನಾಯಕರಾಗಿದ್ದು, ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ಒಂದು ವಾರಗಳ ಕಾಲ ಪಂಡಿತ ದೀನ್ದಯಾಳ್ ಅವರ ’ಅಂತ್ಯೋದಯವೇ ನಮ್ಮೆಲ್ಲರ ಜೀವನದ ಪರಮಗುರಿ’ ಎನ್ನುವ ಮಾತಿನಂತೆ ಸಂಘಟನೆಯು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಈ ಧ್ಯೇಯವನ್ನಾಧರಿಸಿ ಬಂದೂರು ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮರ್ಪಣಾ ಭಾವದಿಂದ ವಿವಿಧ ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಮಹಾಲಯ ಅಮಾವಾಸ್ಯೆಯ ಪರ್ವದಿನವಾದ ಬುಧವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿ ದೇವಿಗೆ ತುಲಾಭಾರ ಸೇವೆ ಸಲ್ಲಿಸಿದರು. ತುಲಾಭಾರದಲ್ಲಿ ತೂಗಿದ ತಮ್ಮ ತೂಕದ ಜೇನನ್ನು ದೇವಿಗೆ ಅರ್ಪಿಸಿದರು. ದೇವಾಲಯದ ಮುಂದೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ಕುಮಾರ ಶೆಟ್ಟಿ, ಬೈಂದೂರು ವಲಯಾಧ್ಯಕ್ಷ ನೆಲ್ಯಾಡಿ ದೀಪಕ್ಕುಮಾರ ಶೆಟ್ಟಿ ಮತ್ತು ಕಾರ್ಯಕರ್ತರ ಜತೆ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ನಿಮಿತ್ತ ಅವರಿಗೆ ಮತ್ತು ದೇಶಕ್ಕೆ ಒಳಿತಾಗಲೆಂದು ದೇವಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ನಿವೃತ್ತ ಯೋಧ ಯಳಜಿತ ಗಣಪತಿ ಗೌಡ ಅವರನ್ನು ಗೌರವಿಸಿದರು. ಯುವ ಮೋರ್ಚಾ ಹಮ್ಮಿಕೊಂಡಿದ್ದ ಅಗ್ನಿತೀರ್ಥ ನದಿಯ ಸ್ವಚ್ಛತಾ ಅಭಿಯಾನಕ್ಕ ಚಾಲನೆ ನೀಡಿದರು. ದೇವಾಲಯದ ಮೂರ್ತಿ ಕಾಳಿದಾಸ ಭಟ್ಟ ಆಶೀರ್ವಚನಗೈದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ ಅ.12ರಿಂದ ಅ.14ರ ತನಕ ನಡೆಯಲಿದೆ. ಅ.12ರ ಮಂಗಳವಾರ ಬೆಳಿಗ್ಗೆ ಶ್ರೀ ಶಾರದಾಂಬೆಯ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ದುರ್ಗಾ ಹೋಮ, ಪೂಜೆ, ರಾತ್ರಿ ಶ್ರೀ ತಿರುಮಲ ವೆಂಕಟರಮಣ ಭಜನಾ ಮಂಡಳಿ ನೇತೃತ್ವದಲ್ಲಿ ಆಹ್ವಾನಿತ ಭಜನಾ ತಂಡಗಳಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದ. ಅ.13ರ ಬುಧವಾರ ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 8.30ಕ್ಕೆ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.14ರ ಗುರುವಾರ ಮಧ್ಯಾಹ್ನ 12ರಿಂದ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ಶಾರದಾಂಬೆ ವಿಗ್ರಹ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಯಾವುದೇ ಕೆಲಸಕ್ಕೆ ನಿರ್ಬಂಧನೆ ಮಾಡಿದ್ದು, ನಿರ್ಬಂಧನೆ ಮೀರಿ ಕೆಲವು ಅಧಿಕಾರಿಗಳು ಕೆಲವೊಂದು ರಾಜಕೀಯ ಒತ್ತಡಕ್ಕೆ ಮಣಿದು ಹಣವನ್ನು ತೆಗೆದುಕೊಳ್ಳುತ್ತಿರುವುದಲ್ಲದೆ ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡಲು ಕಚೇರಿಗೆ ಅಲೆದಾಡಿಸುತ್ತಾರೆ. ಈ ವ್ಯವಸ್ಥೆಯನ್ನು ಮಹಿಳೆಯರು ತಮ್ಮ ಒಕ್ಕೂಟದ ಮೂಲಕ ಖಂಡಿಸಬೇಕು. ಎಲ್ಲರೂ ಕಾನೂನನ್ನು ಗೌರವಿಸಬೇಕಿದೆ. ಸರಕಾರದ ಸೌಲಭ್ಯ ಪಡೆಯಲು ಮೊಬೈಲ್ ಮೂಲಕ ಅಂತರ್ಜಾಲದಲ್ಲಿರುವ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅವರವರ ಕೆಲಸವನ್ನು ಅವರೇ ಮಾಡಿಕೊಂಡರೆ ದಲ್ಲಾಳಿಗಳ ಕಾಟವನ್ನು ತಪ್ಪಿಸಿಬಹುದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಬಿ.ಎಸ್. ಹೇಳಿದರು. ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ರೋಟರಿ ಕ್ಲಬ್ ಗಂಗೊಳ್ಳಿ, ಯುವ ಸ್ಪಂದನ ಕೇಂದ್ರ ಉಡುಪಿ, ಸಂಗಮ ಸಂಜೀವಿನಿ ಸ್ವಸಹಾಯ ಸಂಘ ಒಕ್ಕೂಟ, ನಾವುಂದ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಾವುಂದಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಂಪಿಗ್ ಯಾರ್ಡ್ನಂತೆ ಭಾಸವಾಗುತ್ತಿದ್ದ ಕೋಟೇಶ್ವರದ ಸರ್ವಿಸ್ ರಸ್ತೆಯ ಅಂಚಿನಲ್ಲಿಗ ಬಣ್ಣ ಬಣ್ಣದ ಗಿಡಗಳು ಕಂಗೊಳಿಸುತ್ತಿವೆ. ಅನಗತ್ಯವಾಗಿ ಕಸ ಎಸೆಯುದನ್ನು ತಡೆಯಲು ಅದೇ ಪ್ರದೇಶದಲ್ಲಿ ಸುಂದರ ಗಾರ್ಡನ್ ನಿರ್ಮಿಸಲಾಗಿದೆ. ಬೆಳೆಯುತ್ತಿರುವ ಪ್ರಮುಖ ಪಟ್ಟಣ ಪ್ರದೇಶ ಕೋಟೇಶ್ವರಕ್ಕೆ ಕಸ ವಿಲೇವಾರಿ ಬಹುದೊಡ್ಡ ತಲೆನೋವು. ಕೋಟೇಶ್ವರ ಹೆದ್ದಾರಿ, ಸರ್ವಿಸ್ ರಸ್ತೆ ಬದಿ ಕೊಳಚೆ ಗುಂಡಿಗಳಾಗಿ ಗೋಚರಿಸುತ್ತಿವೆ. ಕೋಟೇಶ್ವರದ ಎಂಬ್ಯಾಕ್ಮೆಂಟ್ ಸಂಧಿಸುವ ಸರ್ವಿಸ್ ರಸ್ತೆಯ ಅಂಚು ಇತ್ತೀಚಿನ ವರ್ಷಗಳಲ್ಲಿ ತ್ಯಾಜ್ಯ ಗುಂಡಿಯಾಗಿ ಮಾರ್ಪಟ್ಟಿತ್ತು. ರಸ್ತೆಯಂಚಿನ ಖಾಲಿ ನಿವೇಶನ ಡಂಪಿಂಗ್ ಯಾರ್ಡ್ ಆಗಿದ್ದವು. ದಾರಿಹೋಕರು ಎಸೆದು ಹೋಗುವ ತ್ಯಾಜ್ಯಗಳನ್ನು ಸುಟ್ಟು ಹಾಕುವುದು, ತೆರವುಗೊಳಿಸುವುದು ಪಂಚಾಯಿತಿಗೆ ಪ್ರತ್ಯೇಕ ಹೊರೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಂಡರೂ ಸಾರ್ವಜನಿಕರು ಸ್ಪಂದಿಸಿರಲಿಲ್ಲ ಇದೆಲ್ಲದಕ್ಕೂ ಈಗ ಬ್ರೇಕ್ ಹಾಕಲು ಸ್ಥಳೀಯಾಡಳಿತ ಕ್ರಮ ಕೈಗೊಂಡಿದೆ. ಕಸದ ಗುಂಡಿಯಲ್ಲಿ ಹೂತೋಟ:ಪ್ಲಾಸ್ಟಿಕ್, ಮಾಂಸ ಸಹಿತ ತ್ಯಾಜ್ಯ ಬೀಳುತ್ತಿದ್ದ ಸ್ಥಳದಲ್ಲೀಗ ಹೂಬನ ಕಂಗೊಳಿಸುತ್ತಿದೆ. ಅಲಂಕಾರಿಕ ಗಿಡಗಳು, ಗಾರ್ಡನ್ ಸೊಬಗು ಹೆಚ್ಚಿಸುವ ಆಕೃತಿಗಳು ಗಮನ ಸೆಳೆಯುತ್ತಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತವು ಅ.6ರಂದು 20 ವರ್ಷ ಪೂರೈಸಲಿದ್ದು, ಇದರ ಅಂಗವಾಗಿ ಯುವಮೋರ್ಚಾ ಉಡುಪಿ ಜಿಲ್ಲೆ ಹಾಗೂ ಯುವಮೋರ್ಚಾ ಬೈಂದೂರು ಇವರ ಸಹಭಾಗಿತ್ವದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸ್ನಾನ ಘಟ್ಟದ ನದಿಯ ತಟವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಇಂಧನ ಸಚಿವರಾದ ವಿ. ಸುನೀಲ್ ಕುಮಾರ್, ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಕ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಅನುರ್ ಮೆಂಡನ್ ಪಕ್ಷದ ಕಾರ್ಯಕರ್ತರು ಈ ವೇಳೆ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯೊಳಗಿನ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಂಸ್ಥೆಯು ಸಕ್ಷಮ ನೋಂದಾಣಾಧಿಕಾರಿಗಳಲ್ಲಿ ನೋಂದಣಿ ಹೊಂದಿರಬೇಕು ಮತ್ತು ಕನಿಷ್ಟ 3ವರ್ಷಗಳ ಅವಧಿಯಾಗಿರಬೇಕು. ಕಾಲಕಾಲಕ್ಕೆ ನವೀಕರಿಸಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಈ ಹಿಂದೆ ಇಂತಹ ಯಾವುದಾದರೂ ಸಮೀಕ್ಷೆ ನಡೆಸಿದ ಅನುಭವ ಹೊಂದಿದ್ದು, ಅನುಭವ ಪ್ರಮಾಣ ಪತ್ರ ಲಗತ್ತಿಸಿರಬೇಕು. ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ದೂ ಸಂ: 0820-2574977 ಅಥವಾ 8553141512ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪರಿಸರ ಸಂರಕ್ಷಣೆ ನಾಗರಿಕರ ಪ್ರಮುಖ ಹೊಣೆ: ಶಾಸಕ ಡಾ. ಭರತ್ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳ ಯೋಚನೆಗಳು ಪರಿಸರ ಸಂರಕ್ಷಣೆಯತ್ತ ಇರಲಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ಹಾಗೂ ಕುದೆರಮುಖ ವನ್ಯಜೀವಿ ಘಟಕದ ಸಹಯೋಗದಲ್ಲಿ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ವೇದಿಕೆಯಲ್ಲಿ ನಡೆದ ‘ಗ್ರೀನ್ ಪಾರ್ಲಿಮೆಂಟ್ -2021’ ಅಣಕು ಸಂಸತ್ತಿನ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶೈಕ್ಷಣಿಕ ವಿಚಾರಗಳಿಗೆ ಒತ್ತು ನೀಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಕಡಿಮೆಯಾಗಿದೆ. ಜನರ ದುರಾಸೆಯ ಸ್ವಭಾವದಿಂದ ಹೆಕ್ಟೇರ್ ಗಟ್ಟಲೆ ಅರಣ್ಯ ಪ್ರದೇಶ ಶೋಷಣೆಗೊಳಗಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ನೀತಿಗಳ ತಿಳುವಳಿಕೆ ವಿದ್ಯಾರ್ಥಿಗಳಲ್ಲಿ ಮೂಡಿಸಲು ಗ್ರೀನ್ ಪಾರ್ಲಿಮೆಂಟ್ ಕಾರ್ಯಕ್ರಮ ಬಹಳ ಅಗತ್ಯ ಎಂದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಕಾಶ್ ನೆತಾಲ್ಕರ್ ಮಾತನಾಡಿ, ಅರಣ್ಯ ನೀತಿ ಹಾಗೂ ಪರಿಸರ ಸೂಕ್ಶ್ಮ ಪ್ರದೇಶಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಅತ್ಯಂತ ವಿರಳವಾಗಿ ಕಾಣಸಿಗುವ ಶ್ರೇಷ್ಠ ಮತೀಯ ವ್ಯಕ್ತಿ, ಸಾಹಿತಿಯಾಗಿ ಚಿಂತಕರಾಗಿ ಕನ್ನಡ ಸಾಹಿತ್ಯದ ಹರಿವಿನ ವಿನ್ಯಾಸವನ್ನು ಬದಲಾಯಿಸಿದವರು. ಕನ್ನಡದ ಪ್ರಜ್ಞೆಯನ್ನು ಅಸಾಧರಣವಾಗಿ ವಿಸ್ತರಿಸಿದವರು. ಮುಖ್ಯವಾಗಿ ಕಾದಂಬರಿ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಾ ಬದುಕನ್ನು ಬೇರೆ ಬೇರೆ ಆಯಾಮಗಳಿಂದ ಬಗೆಯುವ ಆಲೋಚಿಸುವ ಮತ್ತು ಕಲಾತ್ಮಕವಾಗಿ ನಿರೂಪಿಸುವ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ಮಾಡಿಕೊಂಡು ಬಂದಿರುವ ಕಾರಂತರು ವ್ಯಕ್ತಿಯಲ್ಲ ಒಂದು ವಿದ್ಯಾಮಾನ ಎಂದು ಖ್ಯಾತ ವಾಗ್ಮಿ, ಚಿಂತಕರು ಕೃಷ್ಣೆಗೌಡ ಮೈಸೂರು ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಐದನೇ ದಿನದ ನುಡಿ ಚೇತನದಲ್ಲಿ ಮಾತನಾಡಿದರು. ಭಾಷೆ ಎನ್ನುವುದು ಕೇವಲ ತಮಗೆ ಅನ್ನಿಸುವುದನ್ನು ಹೇಳುವ ವಸ್ತುವಾಗಿರದೆ…
