ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ ಎಂದು ಉಪ್ಪುಂದ ಓಂಗಣೇಶ್ ಕಾಮತ್ ಅಭಿಪ್ರಾಪಟ್ಟರು. ಬೈಂದೂರು ಶ್ರೀಸೇನೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. [quote bgcolor=”#ffffff” arrow=”yes” align=”right”]* ಜಾತಿ-ಧರ್ಮಗಳ ವಿಷಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯ ಕದಡುವ ಇಂದಿನ ದಿನಗಳಲ್ಲಿ ಇಂತಹ ಉತ್ಸವಗಳ ಮೂಲಕ ಸೌಹಾರ್ದತೆಯ ಸಂದೇಶ ನೀಡುವ ಮೂಲಕ ನಮ್ಮೊಳಗಿನ ಬಾಂದವ್ಯ ಗಟ್ಟಿಗೊಳಿಸಬೇಕು.- ರಂಗಕರ್ಮಿ ಬಿ. ಗಣೇಶ ಕಾರಂತ್ ಬೈಂದೂರು[/quote] ಮಾಗಿದ ಮೇಲೆ ಬಾಗುವುದು ಪ್ರಕೃತಿ ನಿಯಮ. ಆದರೆ ಈಗಿನ ಕಾಲಘಟ್ಟದಲ್ಲಿ ಮಾಗಿದ ಮೇಲೆ ಬೀಗುವುದನ್ನು ಕಾಣುತ್ತೇವೆ. ತ್ಯಾಗಕ್ಕೆ ಯಾರು ಆದರ್ಶ ಹಾಗೂ ಮಾದರಿಯಾಗಿರುವರೋ ಅವರು ’ಯಜಮಾನ’ ಅನ್ನಿಸಿಕೊಂಡರೆ ನಮ್ಮೊಳಗಿನ ಕೆಟ್ಟವಿಚಾರಗಳನ್ನು ಕಳೆದುಕೊಳ್ಳಲು ಮತ್ತು ಚಿಂತನೆಗಳನ್ನು ಹಂಚಿಕೊಳ್ಳಲು ಇರುವ ಸ್ಥಳ ’ದೇವಸ್ಥಾನ’ ಎಂದರು.…
Author: ನ್ಯೂಸ್ ಬ್ಯೂರೋ
ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಮಾತನಾಡಿ ಪುರುಷ ಪ್ರಧಾನ ಸಮಾಜದಲ್ಲಿ ಈಗ ಮಹಿಳೆಯರೂ ಅವರಿಗಿಂತ ಕಡಿಮೆ ಇಲ್ಲದ ರೀತಿಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮಹಿಳೆಯರು ಸಮಾಜ ಹಾಗೂ ಕುಟುಂಬದ ಎರಡು ಕಣ್ಣುಗಳಿದ್ದಂತೆ. ಆದರೆ ಈಗ ಸದಾ ದೌರ್ಜನ್ಯ, ಅತ್ಯಾಚಾರ, ಅಮಾನವೀಯ ಕೃತ್ಯಗಳಿಗೆ ಬಲಿಯಾಗುತ್ತಿರುವ ಮಹಿಳೆಯರು ಸಮಾಜದಲ್ಲಿ ಜಾಗೃತಗೊಂಡು ಸಂಘಟಿತರಾಗಿ ಹೋರಾಡಬೇಕಾಗಿದೆ ಎಂದರು. ತಾಪಂ ಸದಸ್ಯೆ ಗೌರಿ ದೇವಾಡಿಗ ಮಹಿಳೆ ಮತ್ತು ಕುಟುಂಬದ ವಿಷಯವಾಗಿ ಮಾತನಾಡಿದರು. ನಾಗರತ್ನ ಸುರೇಶ್ ದೇವಾಡಿಗ, ಅಕ್ಷತಾ ವೆಂಕಟರಮಣ ದೇವಾಡಿಗ, ಜ್ಯೋತಿ ವೆಂಕಟರಮಣ, ಸಮಿತಿ ಕಾರ್ಯದರ್ಶಿ ಅಂಬಿಕಾ ಶ್ರೀಧರ ದೇವಾಡಿಗ ಉಪಸ್ಥಿತರಿದ್ದರು. ವಿನೋದಾ ಎಂ.ದೇವಾಡಿಗ ಸ್ವಾಗತಿಸಿ, ಮೇನಕಾ ವಂದಿಸಿದರು. ಶ್ರೀಲತಾ ನಿರೂಪಿಸಿದರು. ಕಾರ್ಯಕ್ರಮದ ಮೊದಲು ಹಿಂದೂ ಸಂಪ್ರದಾಯದಂತೆ ಆಗಮಿಸಿದ ಮಹಿಳೆಯರಿಗೆ ಅರಸಿನ-ಕುಂಕುಮ ನೀಡಿ ಸ್ವಾಗತಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ…
ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ರಾಮ ಸೇವಾ ಸಂಘ ನಡೆಸುವ 56 ನೇ ಶ್ರೀ ಶಾರದಾ ಪೂಜಾ ಮಹೋತ್ಸವದ ಶ್ರೀ ಶಾರದಾ ದೇವಿಯ ವಿಗ್ರಹ.
ಕುಂದಾಪುರ: ಇಲ್ಲಿನ ಕೋಟೇಶ್ವರದ ಗೌಡ ಸಾರಸ್ವತ ಬ್ರಾಹ್ಮಣರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಚಾತುರ್ಮಾಸ ವೃತ ಆಚರಿಸುತ್ತಿರುವ ಶ್ರೀ ಕಾಶೀ ಮಠಾಧೀಶ ಶ್ರೀ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮಿಗಳಿಂದ ನವರಾತ್ರಿಯ ಪರ್ವಕಾಲದಲ್ಲಿ ಶ್ರೀ ವೇದವ್ಯಾಸ ದೇವರು (ವೇದವ್ಯಾಸ ರಘುಪತಿ ದೇವರು) ಪ್ರತಿದಿನ ವಿವಿಧ ಅಲಂಕಾರಗಳೊಂದಿಗೆ ಪೂಜಿಸಲ್ಪಟ್ಟಿತು. ನವರಾತ್ರಿ ಹಾಗೂ ಸ್ವಾಮಿಗಳ ಚಾತರ್ಮಾಸದ ಪ್ರಯುಕ್ತ ದೇವಳದಲ್ಲಿ ಪ್ರತಿನಿತ್ಯವೂ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಲಿದೆ. ಚಿತ್ರದಲ್ಲಿ ಐರಾವತ ವಾಹನ ಆರೂಢ, ಶೇಷ ವಾಹನ ಆರೂಢ, ಬೆಳ್ಳಿ ಗರುಡ ವಾಹನ ಆರೂಢ, ತೊಟ್ಟಿಲು ವಾಹನ ಆರೂಢ ಶ್ರೀ ವೇದವ್ಯಾಸ ದೇವರನ್ನು ಕಾಣಬಹುದು.
ಕುಂದಾಪುರ: ಭಾನುವಾರ ರಾತ್ರಿ ಶಿವಮೊಗ್ಗದ ಬಾಳೆಹೊನ್ನೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ತಾಲೂಕಿನ ಇಡೂರು-ಕುಜ್ಞಾಡಿಯ ಸುರೇಶ್ ಶೆಟ್ಟಿ ನೈಕಂಬ್ಳಿ (27) ಎಂಬುವವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆಯ ವಿವರ: ಇಡೂರು-ಕುಂಜ್ಞಾಡಿಯ ರಾಜು ಶೆಟ್ಟಿ ಎಂಬುವವರ ಮಗನಾದ ಸುರೇಶ್ ಶೆಟ್ಟಿ ಬಾಳೆಹೊನ್ನೂರಿನ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ರಜೆ ಇದ್ದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಅವರು ದೇವರ ದರ್ಶನ ಪಡೆದು ಬೇರೊಂದು ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಟ್ಯಾಕ್ಟರ್ ವೊಂದಕ್ಕೆ ಢಿಕ್ಕಿಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ಬೇರೊಂದು ನೌಕರಿ ಹುಡುಕಿದ್ದ ಅವರು ಒಂದೆರಡು ದಿನಗಳಲ್ಲಿ ಊರಿಗೆ ಹಿಂತಿರುಗುವವರಿದ್ದರು ಎನ್ನಲಾಗಿದೆ. ಸ್ನೇಹಜೀವಿಯಾಗಿದ್ದ ಸುರೇಶ್ ನಿಧನ ಸುದ್ದಿ ಕೇಳುತ್ತಿದ್ದಂತೆ ಅವರ ಕಂಪೆನಿಯ ಎಲ್ಲಾ ಸಹೋದ್ಯೋಗಿಗಳು ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ) ಇತ್ತಿಚಿಗಷ್ಟೇ ಮೃತ ಸುರೇಶ್ ಶೆಟ್ಟಿಯವರ ತಂದೆ ರಾಜು ಶೆಟ್ಟಿ ಅವರ ಇಡೂರಿನಲ್ಲಿರುವ ಅಂಗಡಿಗೆ ಬೆಂಕಿ ತಗಲಿ ಅಪಾರ ನಷ್ಟ ಸಂಭವಿಸಿತ್ತು. ಈಗ ಮಗನನ್ನು ಕಳೆದುಕೊಂಡ…
ಕುಂದಾಪುರ: ತಾಲೂಕಿನ ಕೋಮು ಸೂಕ್ಷ್ಮ ಪ್ರದೇಶವಾದ ಕಂಡ್ಲೂರು ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೆರೆಮರೆಯಲ್ಲಿ ಕೋಮು ಸಂಘರ್ಷ ಮುಂದುವರಿದಿದೆ. ಪೊಲೀಸರ ಶಾಂತಿ ಸಭೆಯ ಬಳಿಕವೂ ಯಾರೋ ಕಿಡಿಗೇಡಿಗಳು ಶಾರದೋತ್ಸವಕ್ಕಾಗಿ ಹಾಕಿದ್ದ ಹಿಂದೂ ಧರ್ಮದ ಭಗವಧ್ವಜಕ್ಕೆ ಭಾನುವಾರ ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯ ವಿವರ: ಕಂಡ್ಲೂರಿನಲ್ಲಿ ನಡೆಸಲುದ್ದೇಶಿಸಿರುವ 50ನೇ ವರ್ಷದ ಶಾರದೋತ್ಸದ ಪ್ರಯುಕ್ತ ಪೇಟೆಯ ಸುತ್ತಲೂ ಬಂಟಿಗ್ಸ್, ಬ್ಯಾನರ್, ಬಾವುಟಗಳನ್ನು ಹಾಕಲಾಗಿತ್ತು. ಯಾರೋ ಕಿಡಿಗೇಡಿಗಳು ಶಾಂತಿ ಕದಡುವ ಸಲುವಾಗಿ ಭಾನುವಾರ ರಾತ್ರಿ ವೇಳೆಗೆ ಕಂಡ್ಲೂರು ಸೇತುವೆಯ ಸಮೀಪ ರಸ್ತೆಯ ಮೇಲ್ಬಾಗದಲ್ಲಿ ಹಾಕಲಾಗಿದ್ದ ಕೇಸರಿ ಭಗವಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ) ಕಂಡ್ಲೂರಿನಲ್ಲಿ ವಾರದ ಹಿಂದಷ್ಟೇ ಶಾರದೋತ್ಸವದ ವಿಚಾರವಾಗಿಯೇ ಹಿಂದೂ ಯುವಕರ ಮೇಲೆ ಅನ್ಯಕೋಮಿನ ಹುಡುಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆ ಪೈಕಿ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿತ್ತು. ಕೋಮು ಸೂಕ್ಷ್ಮ ಪ್ರದೇವಾದ್ದರಿಂದ ಜಿಲ್ಲಾ ವರಿಷ್ಠಾಧಿಕಾರಿ ಅಣ್ಣಾಮಲೈ ಘಟನಾ ಸ್ಥಳಕ್ಕೆ ಭೇಟಿ ನೀಡಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಸಿದ್ದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ…
ಕುಂದಾಪುರ: ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಗೆ ಸೇರಿಸಲಾಗಿದೆ ಎನ್ನಲಾದ ಪ್ರದೇಶಗಳನ್ನು ಅಧಿಕಾರಿಗಳ ಮಟ್ಟದಲ್ಲಿ ಪ್ರಥಮವಾಗಿ ಗಡಿ ಗುರುತಿಸುವಿಕೆ, ಭೌಗೋಳಿಕ ಸಮೀಕ್ಷೆಯನ್ನು ಮಾಡಬೇಕಾಗಿತ್ತು. ಆ ಕೆಲಸ ಆಗದೇ ಇವತ್ತು ಗೊಂದಲಗಳು ಉಂಟಾಗಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ದೋಷರೋಪಣೆಯನ್ನು ಮಾಡುವುದನ್ನು ಬಿಟ್ಟು ರೈತರು, ಜನಸಾಮಾನ್ಯರ ಹಿತಾಸಕ್ತಿಯನ್ನು ಎತ್ತಿ ಹಿಡಿಯಬೇಕಾಗಿದೆ. ಜನರಿಗೆ ಮತ್ತೆ ಮತ್ತೆ ಸಮಸ್ಯೆಗಳು ಆಗಬಾರದು ಎಂದು ವಿಧಾನ ಪರಿಷತ್ ಸದಸ್ಯ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಹೇಳಿದರು. ವಂಡ್ಸೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಅರಣ್ಯ ಇಲಾಖೆಯ ವಿಶ್ರಾಂತಿದಾಮದಲ್ಲಿ ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶದಿಂದ ವಂಡ್ಸೆ ಗ್ರಾಮವನ್ನು ಕೈ ಬಿಡಬೇಕು ಎನ್ನುವ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಲ್ಕರ್ ಮಾತನಾಡಿ, ಈ ಹಿಂದೆ 35ಗ್ರಾಮಗಳು ಉಡುಪಿ ಜಿಲ್ಲೆಯಲ್ಲಿ ವರದಿ ವ್ಯಾಪ್ತಿಗೆ ಬಂದಿತ್ತು. ನಂತರ ಅದು 22ಕ್ಕೆ ಇಳಿದಾಗ ವಂಡ್ಸೆ ಗ್ರಾಮ ವರದಿಯ ವ್ಯಾಪ್ತಿಯಿಂದ ಹೊರಗೂಳಿಯಿತು. ಮತ್ತೆ ಹೇಗೆ ಸೇರ್ಪಡೆಗೊಂಡಿತ್ತು…
ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ ಪತ್ರಿಕೆ ಮಾಧ್ಯಮಗಳು ಶೋಷಿತರ ಪರವಾಗಿ ನಿಂತಿದೆಯೇ ಎಂದು ಖ್ಯಾತ ಪತ್ರಕರ್ತ ಜಾನ್ ಡಿ’ಸೋಜಾ ಪ್ರಶ್ನಿಸಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ನರ್ಸರಿ ಸ್ಕೂಲ್ ಹಾಲ್ನಲ್ಲಿ ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿದರು. [quote bgcolor=”#ffffff” arrow=”yes” align=”right”] ಅಭಿವೃದ್ಧಿಯ ಕಲ್ಪನೆ ಬದಲಾಗಬೇಕು: ಸಂಕೀರ್ಣ ಹಾಗೂ ಸಂಕುಚಿತವಾಗಿ ಮುನ್ನಡೆಯುತ್ತಿರುವ ದೇಶದಲ್ಲಿ ಸ್ವಾತಂತ್ರ್ಯ ದೊರೆತು 6 ದಶಕಗಳು ಕಳೆದರು ಗ್ರಾಮೀಣ ಭಾಗಗಳು ಸಮಸ್ಯೆಗಳಿಂದ ಮುಕ್ತವಾಗಿಲ್ಲ. ರಾಜಕೀಯ ಇಚ್ಚಾಶಕ್ತಿಯ ಕೊರತೆ, ಜನರಲ್ಲಿನ ಸಾಮಾಜಿಕ ಬದ್ಧತೆಯ ನಿಷ್ಕ್ರೀಯತೆ ಅಭಿವೃದ್ಧಿಯ ಹಿನ್ನಡೆಗೆ ಕಾರಣ. ಅಭಿವೃದ್ಧಿಯೆಂದರೆ ಕೇವಲ ಬಹುಮಹಡಿ ಕಟ್ಟಡ ನಿರ್ಮಾಣ, ಅಂತರ್ಜಾಲ ಅಭಿವೃದ್ಧಿ, ಡಿಜಿಟಲೀಕರಣ ಎಂದು ಮನೆ ಮಾಡಿರುವ ಭ್ರಮೆ ಎಲ್ಲರನ್ನು ಬಿಟ್ಟು ಹೋಗಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯತೆ, ಸಾಂಸ್ಕೃತಿಕ ಹಾಗೂ ಸಾಮಾಜಿಕ…
ಬೈಂದೂರು: ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕ್ಕೆ ಮಾಡಿಕೊಂಡರೇ ಯಶಸ್ಸು ಸುಲಭವಾಗಿ ದೊರೆಯುತ್ತದೆ. ಕ್ರೀಡೆ ವ್ಯಕ್ತಿತ್ವನ್ನು ರೂಪಿಸುವುದರೊಂದಿಗೆ ಓದಿನಲ್ಲಿಯೂ ಆಸಕ್ತಿ ಮೂಡಿಸುತ್ತದೆಂದು ತಾ.ಪಂ ಸದಸ್ಯ ರಾಜು ಪೂಜಾರಿ ಹೇಳಿದರು ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೈಂದೂರು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಡಶಾಲಾ ಬಾಲಕ ಬಾಲಕಿಯರ ಎರಡು ದಿನಗಳ ಕಬ್ಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾಡನಾಡಿದರು. 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಮಂಡ್ಯ ಪಡೆದುಕೊಂಡರೇ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿಕ್ಕಮಂಗಳೂರು, ದ್ವಿತೀಯ ಸ್ಥಾನವನ್ನು ಮಂಡ್ಯ ಪಡೆದುಕೊಂಡಿತು. 17 ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಚಿಕ್ಕಮಂಗಳೂರು ಪಡೆದುಕೊಂಡರೇ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಉಡುಪಿ ಪಡೆದುಕೊಂಡಿತು. (ಕುಂದಾಪ್ರ…
ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರೇ ಸ್ವ ಇಚ್ಚೆಯಿಂದ ಒತ್ತುವರಿ ಮಾಡಿಕೊಂಡ ಜಾಗವನ್ನು ಬಿಟ್ಟುಕೊಡುತ್ತಿರುವಾಗ, ನಿಯಮಗಳನ್ನು ಗಾಳಿಗೆ ತೂರಿ ಸರಕಾರಿ ಕಛೇರಿಯನ್ನು ಮಾತ್ರ ರಸ್ತೆಯ ಪಕ್ಕದಲ್ಲೇ ಕಟ್ಟುತ್ತಿರುವುದು ಸಮಂಜಸವಾದುದಲ್ಲ ಎಂದು ಕುಂದಾಪುರ ಪುರಸಭಾ ಸದಸ್ಯ ರಾಜೇಶ್ ಕಾವೇರಿ ಹೇಳಿದರು. ಅವರು ಸರಕಾರಿ ಆಸ್ಪತ್ರೆಯ ಎದರು ರಸ್ತೆ ಪಕ್ಕದಲ್ಲಿ ಕಟ್ಟುತ್ತಿರುವ ಗ್ರಾಮ ಲೆಕ್ಕಿಗರ ಕಛೇರಿಯನ್ನು ಕಾನೂನು ಬಾಹಿರ ಹಾಗೂ ಅವೈಜ್ಞಾನಿಕವೆಂದು ಆರೋಪಿಸಿ, ನಿರ್ಮಾಣ ಹಂತದಲ್ಲಿರುವ ಕಛೇರಿಯ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಸಾರ್ವಜನಿಕರ ಎಲ್ಲಾ ಕೆಲಸವು ಒಂದೇ ಸೂರಿನಡಿಯಲ್ಲಿ ಆಗಬೇಕೆಂಬ ಕಾರಣದಿಂದ ಮಿನಿ ವಿಧಾನಸೌಧವನ್ನು ಕಟ್ಟಲಾಗಿದೆ. ಆದರೆ ಕುಂದಾಪುರ ಹೂವಿನ ಮಾರುಕಟ್ಟೆಯ ಬಳಿ ಇರುವ ಗ್ರಾಮಲೆಕ್ಕಿಗರ ಕಛೇರಿ ಮಾತ್ರ ಇದರಿಂದ ಹೊರತಾಗಿರುವುದು ವಿಪರ್ಯಾಸವೇ ಸರಿ. ಬೆಳೆಯುತ್ತಿರುವ ಕುಂದಾಪುರ ನಗರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು ಕಛೇರಿಯಿಂದ ಮತ್ತಷ್ಟು ಸಮಸ್ಯೆ ಉದ್ಬವಿಸಬಹುದು. ತಾಲೂಕು ಆಡಳಿತ ಶೀಘ್ರವೇ ವಾಸ್ತವವನ್ನು ಮನಗಂಡು ನಾಗರೀಕರ ಬೇಡಿಕೆಗೆ ಸ್ಪಂದಿಸಬೇಕಿದೆ ಎಂದರು. ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿಶೋರ್ ಕುಮಾರ್…
