ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಎಲ್ಲಾ ತಾಲೂಕುಗಳು ತಹಸೀಲ್ದಾರುಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬಂದಪಟ್ಟ ಗ್ರಾಮ ಪಂಚಾಯತ್ನ ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್(ರಿ.) ಇವರು ಬೆಂಗಳೂರಿನ ಡಿ ಕ್ಯೂಬ್ ಈಜುಕೊಳದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ ನಾಗರಾಜ ಖಾರ್ವಿ, 50 ಮೀ ಬಟರ್ ಪ್ಲೈನಲ್ಲಿ ಚಿನ್ನದ ಪದಕ, 100 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ಯಾಕ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ನಾಗರಾಜ ಖಾರ್ವಿ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಮಂಗಳೂರಿನ ತಣ್ಣೀರು ಬಾವಿಯ ಅರಬ್ಬೀ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು ಒಂದು ಕಿ.ಮೀ. ದೂರವನ್ನು ಕೇವಲ 25 ನಿಮಿಷ 16 ಸೆಕೆಂಡಿನಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಬರೆದಿದ್ದರು. ಸಾಹಿತ್ಯದಲ್ಲೂ ಆಸಕ್ತಿ ಹೊಂದಿರುವ ಇವರು ನಾಖಾರ್ವಿ ಕಾವ್ಯನಾಮದಲ್ಲಿ ಇಬ್ಬನಿಯ ಮೆರವಣಿಗೆ, ಕಮಲ ತನಯನ ಷಟ್ಪದಿ ಎಂಬೆರಡು ಪುಸ್ತಕಗಳನ್ನು, ಪಾರ್ಥೇಶ್ವರನ ಅಂಕಿತದಲ್ಲಿ 450ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಅವರು ಬಂಟ್ವಾಳ ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಸಮಾಜದ ಏಳಿಗೆಗೆ ಸಹಕಾರಿಯಾಗಬೇಕು. ಜನಪರ ಕಾರ್ಯಕ್ರಮಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಕಳೆದ37 ವರ್ಷಗಳಿಂದ ಎಲ್ಲಾ ರಂಗದಲ್ಲೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುವುದು ಹೆಮ್ಮೆಯ ವಿಷಯ ಎಂದು ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಶಿಶಂಕರ ಎಚ್.ಎಂ. ಹೇಳಿದರು. ಗಂಗೊಳ್ಳಿಯ ಕೆಎಫ್ಡಿಸಿ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ನ 37ನೇ ವಾರ್ಷಿಕೋತ್ಸವ ಮತ್ತು ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆಯ 20ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವ ಸಹಾಯ ಸಂಘದ ಅಧ್ಯಕ್ಷ ನಾರಾಯಣ ಖಾರ್ವಿ, ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2021-22ನೇ ಸಾಲಿಗೆ ತೆರಿಗೆ ದರವನ್ನು ಜನರಿಗೆ ಹೊರೆಯಾಗದಂತೆ, ಮಾರುಕಟ್ಟೆ ದರದ ಅನ್ವಯ ಪರಿಷ್ಕರಿಸಲು ಪುರಸಭೆಯ ವಿಶೇಷ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು. ತೆರಿಗೆ ಏರಿಕೆ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ ಘಟನೆಯೂ ನಡೆಯಿತು. ಸೋಮವಾರ ನಡೆದ ಸಭೆಯಲ್ಲಿ, ಸರ್ಕಾರದ ಸುತ್ತೋಲೆ, ಪುರಸಭೆ ಕೈಗೊಳ್ಳಬಹುದಾದ ನಿರ್ಧಾರಗಳ ಕುರಿತು ಮಾಹಿತಿ ನೀಡಿದ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರು, ಸುತ್ತೋಲೆಯನ್ನು ನಿರ್ಲಕ್ಷ್ಯ ಮಾಡಿದರೆ ಅನುದಾನಗಳಿಗೆ ತೊಡಕಾಗಬಹುದು ಎಂದರು. ದರ ಪರಿಷ್ಕರಣೆಯ ಸಂದರ್ಭದಲ್ಲಿ ಪ್ರಾದೇಶಿಕ ಮೌಲ್ಯಮಾಪನ ಆಧರಿಸಿ ವಾಣಿಜ್ಯ, ವಸತಿ, ಖಾಲಿ ನಿವೇಶನಗಳನ್ನು ಪ್ರತ್ಯೇಕವಾಗಿ ಪರಿಗಣಿಸಲು ಅವಕಾಶವಿದೆ ಎಂದರು. ‘ಕೋವಿಡ್ ಕಾಲಘಟ್ಟದಲ್ಲಿ ಜನರಿಗೆ ಹೊರೆಯನ್ನು ಹೇರುವುದು ಇಷ್ಟವಿಲ್ಲ’ ಎಂದ ಕೆ.ಮೋಹನ್ದಾಸ್ ಶೆಣೈ, ‘ಆಡಳಿತ ಹಾಗೂ ವಿಪಕ್ಷ ಸದಸ್ಯರು ಒಟ್ಟಾಗಿ ಚರ್ಚೆ ಮಾಡಬೇಕಿತ್ತು. ಆದರೆ, ಅವರ ಅನುಪಸ್ಥಿತಿಯಲ್ಲಿ ತೀರ್ಮಾನ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಸರ್ಕಾರದ ಸಲಹೆ ಹಾಗೂ ಜನ ಸಾಮಾನ್ಯರ ಜೀವನ ನಿರ್ವಹಣೆ ಎರಡನ್ನೂ ಗಮನದಲ್ಲಿ ಇರಿಸಿಕೊಂಡು ದರ ಪರಿಷ್ಕರಣೆ ಮಾಡಬೇಕಾಗಿದೆ’…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೊಂಬೆಯಾಟ ಟ್ರಸ್ಟ್ನ ಬೆಳ್ಳಿ ಹಬ್ಬದ ಸಂಭ್ರಮ (1995-2020) ಹಾಗೂ ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ (1921-2021)ದ ಅಂಗವಾಗಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ 64ನೇ ತಿಂಗಳ ಕಾರ್ಯಕ್ರಮ ನಡೆಯಿತು. ಡಾ. ಹೆಚ್. ಆರ್. ಹೆಬ್ಬಾರ್ ಮತ್ತು ಡಾ. ಪುಷ್ಪಗಂಧಿನಿ ಹಾಗೂ ಸದಾಶಿವ ಐತಾಳ್ರವರನ್ನೂ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್ ನ ಡಾ. ವೆಂಕಟರಾಮ ಉಡುಪ, ಡಾ. ಹೆಚ್. ಆರ್. ಹೆಬ್ಬಾರ್, ಡಾ. ಪುಷ್ಪಗಂಧಿನಿ, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಮತ್ತು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ಡಾ.ಹೆಚ್. ಆರ್. ಹೆಬ್ಬಾರ್ ರವರ ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ ನಡೆಯಿತು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ರಥೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಜರಗಿದ ಗೌಡ ಸಾರಸ್ವತ ಸಮಾಜ ಬಾಂಧವರ 30 ಗಜಗಳ ಸೀಮಿತ ಓವರ್ಗಳ ಗಂಗೊಳ್ಳಿ ಜಿಎಸ್ಬಿ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ವಿ. ಕೆ. ಪೋವಾಸ್ ತಂಡ ಪ್ರಥಮ ಸ್ಥಾನಿಯಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಅಂತಿಮ ಹಣಾಹಣಿಯಲ್ಲಿ ಗಂಗೊಳ್ಳಿಯ ವಿ. ಕೆ. ಪೋವಾಸ್ ತಂಡವು ಗಂಗೊಳ್ಳಿ ಸೂಪರ್ ಆಮ್ಚಿಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಉಪಾಂತ್ಯ ಪಂದ್ಯದಲ್ಲಿ ವಿ. ಕೆ. ಪೋವಾಸ್ ತಂಡವು ರೈಸಿಂಗ್ ಸ್ಟಾರ್ ತ್ರಾಸಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರೆ ಗಂಗೊಳ್ಳಿ ಸೂಪರ್ ಆಮ್ಚಿಸ್ ತಂಡ ಅಂಕಗಳ ಆಧಾರದಲ್ಲಿ ನೇರವಾಗಿ ಫೈನಲ್ ಪ್ರವೇಶ ಪಡೆದುಕೊಂಡಿತು. ಫೈನಲ್ ಪಂದ್ಯಾಟದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ವಿ. ಕೆ. ಪೋವಾಸ್ ತಂಡದ ಎಂ.ರಮೇಶ ಪೈ ಪಡೆದುಕೊಂಡರೆ, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗಂಗೊಳ್ಳಿ ಸೂಪರ್ ಆಮ್ಚಿಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ವತಿಯಿಂದ ಪತ್ರಿಕೆಯ ಪುಟ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿಜಯ ಕರ್ನಾಟಕದ ಇನ್ಪೋಗ್ರಾಫಿಕ್ ಡಿಸೈನರ್ ಧರಣೇಶ್ ಕೆ.ಬಿ ವಿದ್ಯಾರ್ಥಿಗಳಿಗೆ ಪುಟ ವಿನ್ಯಾಸದ ಬಗ್ಗೆ ಮಾಹಿತಿ ನೀಡಿದರು. ಪುಟ ವಿನ್ಯಾಸಕಾರನಿಗೆ ಸೌಂದರ್ಯ ಪ್ರಜ್ಞೆ ಅತ್ಯಗತ್ಯ. ಸುದ್ದಿ-ಮಾಹಿತಿಗಳನ್ನು ನೀಡುವುದಷ್ಟೇ ಅಲ್ಲ; ಓದುಗರಿಗೆ ಅದು ಅಷ್ಟೇ ಆಕರ್ಷಕವಾಗಿ ಕಾಣುವಂತೆ ನೀಡಬೇಕು. ಹೊಸ ತಂತ್ರಜ್ಞಾನಕ್ಕೆ ತಕ್ಕಂತೆ ಈಗಿನ ಯುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಪ್ರಾಯೋಗಿಕ ಪತ್ರಿಕೆಯನ್ನು ವೃತ್ತಿಪರ ಪತ್ರಿಕೆಯಂತೆ ವಿನ್ಯಾಸ ಗೊಳಿಸುವುದನ್ನು ಕಲಿಯಬೇಕು’ ಎಂದರು. ಪತ್ರಿಕೆಯಲ್ಲಿ ಬಳಸುವ ಅಕ್ಷರಶೈಲಿಗಳ ಬಗ್ಗೆ ಹೇಳಿದ ಧರಣೇಶ್, ಸಾಮಾನ್ಯವಾಗಿ ಉಚಿತ ಕನ್ನಡ ಫಾಂಟ್ಗಳು ಲಭ್ಯವಿರುತ್ತವೆ. ಅವುಗಳು ಅಷ್ಟು ಆಕರ್ಷಕವಾಗಿರುವುದಿಲ್ಲ. ಆದರೆ ಪ್ರೀಮಿಯಂ ಫಾಂಟ್ಗಳನ್ನು ಬಳಸಿದಾಗ ಪುಟವು ಆಕರ್ಷವಾಗಿ ವಿನ್ಯಾಸಗೊಳ್ಳುತ್ತದೆ’ ಎಂದು ತಿಳಿಸಿದರು. ಪುಟ ವಿನ್ಯಾಸದಲ್ಲಿ ಬಳಕೆಯಾಗುವ ಬಾಡಿ ಪ್ಯಾರಾ, ರಿವರ್ಸ್ ಹೆಡ್ಡಿಂಗ್, ಮಾರ್ಜಿನ್, ಪಾಯಿಂಟರ್ ಫೋಟೋ, ಫ್ಲೈಯರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಟೇಶ್ವರದಲ್ಲಿರುವ ಭಾರತ್ ಸಿನೆಮಾಮಾಸ್ಗೆ ಸೋಮವಾರ ಸಂಜೆ ಹೀರೋ ಚಿತ್ರತಂಡ ಭೇಟಿ ನೀಡಿ ಪ್ರೇಕ್ಷಕರೊಂದಿಗೆ ಒಂದಷ್ಟು ಹೊತ್ತು ಸಂವಾದ ನಡೆಸಿದರು. ಹೀರೋ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ, ನಿರ್ದೇಶಕ ಎಂ. ಭರತ್ರಾಜ್, ನಟರಾದ ಪ್ರಮೋದ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಚಂದ್ರಶೇಖರ್, ರಕ್ಷಿತ್ ರಾಮಚಂದ್ರ, ಸಲ್ಮಾನ್ ಅಹಮ್ಮದ್, ಸುಹಾಸ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಹಲವರು ಸಂದರ್ಭ ಇದ್ದರು. ಲಾಕ್ಡೌನ್ ಬಳಿಕ ಕಡಿಮೆ ಅವಧಿಯಲ್ಲಿ ನಿರ್ಮಾಣವಾದ ಹೀರೋ ಸಿನೆಮಾ ಮಾರ್ಚ್ 5ರಂದು ಬಿಡುಗಡೆಗೊಂಡು ಯಶಸ್ವಿಯಾಗಿ ಸಾಗುತ್ತಿದ್ದು, ಪ್ರೇಕ್ಷಕವರ್ಗದಿಂದ ಉತ್ತಮ ಅಭಿಪ್ರಾಯ ಕೇಳಿಬಂದಿದೆ. ಈ ನಡುವೆ ಚಿತ್ರತಂಡ ಕೇಸ್ ಸ್ಟಡಿ ಕಂಟೆಸ್ಟ್ ಆಯೋಜಿಸಿದ್ದು ಚಿತ್ರದ ಕುರಿತಾಗಿ ನಡೆಸುವ 50 ಉತ್ತಮ ಕೇಸ್ ಸ್ಟಡಿಯನ್ನು ಆರಿಸಿ ರಿಷಬ್ ಶೆಟ್ಟಿ ಫಿಲ್ಮ್ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶ ನೀಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಜುವೆಲ್ಲರಿಯೊಂದರಲ್ಲಿ ಚಿನ್ನ ಮತ್ತು ನಗದು ಹೂಡಿಕೆ ಮಾಡಿದ ಗ್ರಾಹಕರಿಗೆ ಹಲವು ಸಮಯದಿಂದ ಹೂಡಿಕೆ ಮಾಡಿರುವ ಚಿನ್ನ ಮತ್ತು ನಗದು ಹಿಂದಿರುಗಿಸದೆ ವಂಚಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಮೊಹಮ್ಮದ್ ಇಪ್ತಿಕಾರ್ ಕಂಡ್ಲೂರು, ಮೋಮಿನ್ ಯೂಸೆಫ್ ಆಲಿ ಭಟ್ಕಳ, ಗಣೇಶ್ ಶೆಟ್ಟಿ, ಖತೀಬ್ ಅಬ್ದುಲ್ ರೆಹಮಾನ್ ಭಟ್ಕಳ, ಬಿ.ಎಂ.ಜಾಫರ್, ಫರಾಜ್ ಆಶೀಪ್, ನಜೀರ್ ಅಹಮ್ಮದ್, ಮೊಹಮ್ಮದ್ ಮುಶ್ರಫ್, ಮೊಹಮ್ಮದ್ ಆಸೀಪ್, ಮೊಹಮ್ಮದ್ ನೂರೈಸ್, ಎಸ್.ಜೀವನ್, ಬೆಟ್ಟಿ ಭಾಷಾ, ಬೆಟ್ಟಿ ಅಕ್ಬರ್, ಬಶೀರ್ ಅಹ್ಮದ್, ಕೆ.ಮುನೀರ್, ಅರ್ಫಾದ್ ಮೊಹಮ್ಮದ್, ಮೊಹಮ್ಮದ್ ಪಾಮೀಝಾ, ಸರ್ದಾರ್ ಸವೀದ್ ಅಕ್ಬರ್, ನೌಶಾದ್, ಮೊಹಮ್ಮದ್ ಫಾರೀಸ್, ಬಿ.ಭಾನು, ನಾಸೀಯಾ, ವಾಹಿದಾ ಆಪಾದಿತರು. ಕುಂದಾಪುರ ನಿವಾಸಿ ಇರ್ಷಾದ್ ಗುಲ್ಜಾರ್ ಸೇರಿ 24 ಜನ ಗ್ರಾಹಕರು ಚಿನ್ನ ಹಾಗೂ ನಗದು ಕಳೆದುಕೊಂಡವರು. ಕುಂದಾಪುರ ಮುಖ್ಯರಸ್ತೆಯಲ್ಲಿ 2000ರಲ್ಲಿ ಆರಂಭವಾದ ಜುವೆಲ್ಲರಿಯಲ್ಲಿ ಗ್ರಾಹಕರು ಹೆಚ್ಚಿನ ಬಡ್ಡಿಯಾಸೆಗೆ ಚಿನ್ನ ಹಾಗೂ ನಗದನ್ನು ಠೇವಣಿ ಇರಿಸಿದ್ದರು. 2500 ರೂನಂತೆ ನಗದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಮಕ್ಷತ್ರಿಯ ಸಮಾಜವನ್ನು ಸಾಮಾಜಿಕವಾಗಿ ಸಂಘಟಿಸುವ ಸಲುವಾಗಿ ಇಪ್ಪತ್ತಾರು ವರ್ಷಗಳ ಹಿಂದೆ ಅಖಿಲ ಕರ್ನಾಟಕ ರಾಮಕ್ಷತ್ರಿಯ ಸಂಘ ಸ್ಥಾಪಿಸಿದ್ದು, ಬಳಿಕ ಅದು ವಿಶ್ವ ರಾಮಕ್ಷತ್ರಿಯ ಮಹಾ ಸಂಘವಾಗಿ ಕಾರ್ಯನಿರ್ವಹಿಸುತ್ತಿದ್ದು ಸಮಾಜದ ಸಂಘಟನೆ ಹಾಗೂ ಉನ್ನತಿಗಾಗಿ ಶ್ರಮಿಸಲಾಗುತ್ತಿದೆ ಎಂದು ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಎಚ್. ಆರ್. ಶಶಿಧರ್ ನಾಯಕ್ ಹೇಳಿದರು. ಅವರು ಕುಂದಾಪುರ ಪಾರಿಜಾತ ಸಭಾಭವನದಲ್ಲಿ ನಡೆದ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ನೂತನ ಪಧಾದಿಕಾರಿಗಳ ಸಭೆ ಹಾಗೂ ಪಧಾದಿಕಾರಿಗಳ ವಿಳಾಸ ಕೈಪಿಡಿ ಬಿಡುಗಡೆಗೋಳಿಸಿ ಮಾತನಾಡಿದರು. ಸುಮಾರು 500 ವರ್ಷಗಳ ಹಿಂದೆ ಉತ್ತರದ ಮದ್ಯ ಪ್ರದೇಶ, ಗೋವಾದಲ್ಲಿ ನೆಲೆಸಿದ್ದ ವಿಶ್ವ ರಾಮಕ್ಷತ್ರಿಯರು ಪೋರ್ಚುಗೀಸರ ಆಳ್ವಿಕೆಯ ನಂತರ ದಕ್ಷಿಣಕ್ಕೆ ಬಂದು ಉತ್ತರ ಕನ್ನಡ, ಉಡುಪಿ, ದ.ಕ ಜಿಲ್ಲೆ ಹಾಗೆಯೇ ಕೇರಳದ ಬೇಕಲ್ ವರೆಗೆ ವಾಸ್ತವ್ಯ ಹೂಡಿದ್ದಾರೆ. ರಾಜ್ಯದ ಮಲೆನಾಡು, ಬಯಲುಸೀಮೆ, ಬೆಂಗಳೂರು, ಮೈಸೂರಿನಲ್ಲೂ ಭಾಗಗಳಲ್ಲಿಯೂ ಉದ್ಯೋಗಕ್ಕಾಗಿ ವಾಸವಾಗಿದ್ದಾರೆ.ಇತ್ತೀಚಿನ ದಿನಗಳಲ್ಲಿ ರಾಮಕ್ಷತ್ರಿಯ ಸಮಾಜ ಬಹಳ ಶ್ರಮವಹಿಸಿ ಆರ್ಥಿಕವಾಗಿ,…
