ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಮೀನುಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಾಧನಾ ಸಮುದಾಯ ಭವನದಲ್ಲಿ ಜರುಗಿತು. ಮರವಂತೆ ಮೀನುಗಾರರ ಸಹಕಾರಿ ಸಂಘವು ಕಳೆದ ವರ್ಷ ರೂ4.23 ಕೋಟಿ ವ್ಯವಹಾರ ನಡೆಸಿ, ರೂ 3.3 ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಘದ ಕಟ್ಟಡ ನವೀಕರಣಗೊಳ್ಳಬೇಕಾದ ಕಾರಣ ಸದಸ್ಯರಿಗೆ ಡಿವಿಡೆಂಡ್ ನೀಡದಿರಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ಪ್ರವೀಣ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರತ್ನಾಕರ ಖಾರ್ವಿ, ನಿರ್ದೇಶಕರಾದ ನಾಗರಾಜ್ ಪಟ್ಗಾರ್, ಸುರೇಶ್ ಖಾರ್ವಿ, ಲೋಕೇಶ್ ಖಾರ್ವಿ, ಜನಾರ್ದನ ಕೆ ಎಂ, ಮಹಾದೇವ ಖಾರ್ವಿ, ನಾಗರಾಜ ಖಾರ್ವಿ, ಲೀಲಾವತಿ, ರಾಜೇಶ್ವರಿ, ಸಿಬ್ಬಂದಿ ಹಾಗೂ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಖಾರ್ವಿ ಇದ್ದರು. ಗಂಗಾಧರ ಖಾರ್ವಿ ಸ್ವಾಗತಿಸಿದರು. ಕಾರ್ಯದರ್ಶಿ ಚೈತ್ರಾ ವರದಿ, ಆಯವ್ಯಯ ಮಂಡಿಸಿದರು. ಅದೃಷ್ಟಶಾಲಿ ಸದಸ್ಯರಾಗಿ ಆಯ್ಕೆಯಾದ ನಾಗರತ್ನಾ, ಚಂದ್ರ ಖಾರ್ವಿ ಮತ್ತು ಪ್ರಮೋದ್ ಖಾರ್ವಿ ಅವರಿಗೆ ಬಹುಮಾನ ವಿತರಿಸಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಅಖಿಲ ಭಾರತ ಮೀನುಗಾರರ ಮತ್ತು ಮೀನು ಕಾಮಿ೯ಕರ ಫೆಡರೇಷನ್ ನವದೆಹಲಿ ಸಂಯೋಜಿಸಲ್ಪಟ್ಟ ಬೈಂದೂರು ವಲಯ ಮೀನುಗಾರರ ಮತ್ತು ಮೀನು ಕಾಮಿ೯ಕರ ಸಂಘ ಉಪ್ಪುಂದ ಘಟಕ (ಸಿಐಟಿಯು) ನೇತೃತ್ವದಲ್ಲಿ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಮೀನುಗಾರರು ಪ್ರತಿಭಟನೆ ಜರಗಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ಕೋಣಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮೀನುಗಾರರ ಪಂಜರ ಕೃಷಿ ಮೀನು ಲಕ್ಷಾಂತರ ಸಂಖ್ಯೆಯಲ್ಲಿ ಮೃತಪಟ್ಟ ಘಟನೆ ಬಗ್ಗೆ ವಿವಿಧ ಕ್ಷೇತ್ರಗಳ ವಿಷಯ ಪರಿಣತರಿಂದ ಕಾರಣ ಹುಡುಕಿ ಮೀನುಗಾರರಿಗೆ ನಷ್ಟ ಪರಿಹಾರವನ್ನು ಸರಕಾರ ಈ ಕೂಡಲೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಮೀನುಗಾರರ ಸಂಘದ ಜಿಲ್ಲಾಧ್ಯಕ್ಷ ಕೆ. ಶಂಕರ, ಮುಖಂಡರಾದ ರಾಮ ಖಾವಿ೯, ವಿಠಲ ಖಾವಿ೯,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17,641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್–19 ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕೋವಿಡ್ ಲಸಿಕೆ ಸರಬರಾಜು ನಿರೀಕ್ಷೆಯಿದ್ದು, ಲಸಿಕೆಯನ್ನು ಪ್ರಾಥಮಿಕವಾಗಿ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲಾಗುವುದು ಎಂದರು. ಗುರುತಿಸಲಾಗಿರುವ ಪ್ರತಿಯೊಬ್ಬರಿಗೂ 2 ಡೋಸ್ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ಸಂಗ್ರಹ ಕೊಠಡಿ ಸಿದ್ಧಪಡಿಸಲಾಗಿದ್ದು, ಲಸಿಕೆ ಸಾಗಾಟಕ್ಕೆ 1,324 ವಾಹನಗಳನ್ನು ಗುರುತಿಸಲಾಗಿದೆ. 100 ಮಂದಿಗೆ ಒಂದು ಸ್ಥಳದಲ್ಲಿ ಲಸಿಕೆ ಹಾಕಲಾಗುವುದು. 342 ಸರ್ಕಾರಿ ಹಾಗೂ 18 ಖಾಸಗಿ ಸ್ಥಳಗಳನ್ನು ಗುರುತಿಸಲಾಗಿದ್ದು, ಪ್ರತಿ ಲಸಿಕಾ ಕೇಂದ್ರದಲ್ಲಿ 5 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಲಸಿಕೆ ಪಡೆಯುಲು ಬರವವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರ್ಕಾರ ಹಲವು ಬಾರಿ ರೈತರೊಂದಿಗೆ ಸಭೆ ನಡೆಸಿರುವುದಲ್ಲದೇ ಮಾತುಕತೆಗೆ ಸಿದ್ದವಿರುವುದಾಗಿ ತಿಳಿಸಿದೆ. ನೂತನ ಕಾಯ್ದೆಯಲ್ಲಿ ಲೋಪದೋಷಗಳಿದ್ದರೆ ತಿದ್ದುಪಡಿ ಮಾಡುವುದಾಗಿಯೂ ಹೇಳಿದೆ. ಆದರೆ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವು ರಾಜಕೀಯ ಹೋರಾಟವಾಗಿ ಮಾರ್ಪಟ್ಟಿರುವುದರಿಂದ ಅದು ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ರೈತರೇ ಹೋರಾಟ ಮಾಡುತ್ತಿದ್ದರೆ ಸಮಸ್ಯೆ ಎಂದೋ ಬಗೆಹರಿಯುತ್ತಿತ್ತು. ಆದರೆ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ವಿದ್ರೋಹಿ ಶಕ್ತಿಗಳು ಅನಗತ್ಯವಾಗಿ ಹೋರಾಟ ಮುಂದುವರಿಯುವಂತೆ ಮಾಡಿದ್ದಾರೆ. ರೈತಪರ ಹೋರಾಟದಲ್ಲಿ ಭಯೋತ್ಪಾಕರ ಬಿಡುಗಡೆಯ ಕೂಗು ಕೇಳುತ್ತಿರುವುದು ಹೋರಾಟದ ಹಾದಿಗೆ ಹಿಡಿದ ಕನ್ನಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಅವರು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕೃಷಿ ಮಸೂದೆ 2020ರ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ರೈತರ ಹೋರಾಟದ ದಿಕ್ಕುತಪ್ಪಿಸುತ್ತಿದೆ. ಕೇಂದ್ರದಲ್ಲಿ ಅಂದು ಕೃಷಿ ಮಂತ್ರಿಯಾಗಿದ್ದ ಶರತ್ ಪವಾರ್ ಎಪಿಎಂಸಿ ರದ್ದು ಮಾಡುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೇ, ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2021-22ನೇ ಸಾಲಿನ ರಾಜ್ಯದ ಎಲ್ಲಾ ಕ್ರೀಡಾ ವಸತಿ ಶಾಲೆ/ವಸತಿ ನಿಲಯಗಳಿಗೆ ಅರ್ಹ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಯನ್ನು ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. 8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಸೇರ್ಪಡೆಗೆ ಡಿ. 30 ಮತ್ತು 31 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ. ಹಿರಿಯರ ವಿಭಾಗದ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಅಭ್ಯರ್ಥಿಗಳನ್ನು ನೇರವಾಗಿ ವಿಭಾಗ ಮಟ್ಟದಲ್ಲಿ ಆಯ್ಕೆ ಮಾಡುವುದರಿಂದ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಹಾಗೂ ಧೃಢೀಕರಿಸಿದ ಜನನ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಜನವರಿ 15 ರ ಒಳಗೆ ಸಹಾಯಕ ನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬಹುದು. ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಜನವರಿ 27 ರಂದು ಕಿರಿಯರ ವಿಭಾಗ ಮಟ್ಟದ ಹಾಗೂ ಜನವರಿ 28…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಮುಜುರಾಯಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಾಮೂಹಿಕ ವಿವಾಹದ ಸಪ್ತಪದಿ ಯೋಜನೆ ಪ್ರತಿ ತಿಂಗಳು ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಪ್ತಪದಿ ರಾಜ್ಯಸರ್ಕಾರದ ಬಹುದೊಡ್ಡ ಯೋಜನೆ ಕೋವಿಡ್ ಕಾರಣಕ್ಕೆ ಯೋಜನೆಯಲ್ಲಿ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ. ಆರ್ಥಿಕ ಸಮಸ್ಯೆ ಇರುವವರ ಪಾಲಿಗೆ ಸಪ್ತಪದಿ ಯೋಜನೆ ವರದಾನವಾಗಲಿದೆ ಎಂದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ, ಡಿಸೆಂಬರ್ 22 ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ಮೊದಲನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರ ಸಂಜೆ 5 ಗಂಟೆಯವರೆಗೆ ಹಾಗೂ ಡಿಸೆಂಬರ್ 27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 27 ರ ಸಂಜೆ 5 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಲದ ಅಗತ್ಯಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಕ್ಷೇತ್ರ ಪ್ರೇಕ್ಷಣೀಯ ಸ್ಥಳವಾಗಲಿದೆ ಎಂದು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕ್ಷೇತ್ರ ಪುರೋಹಿತರೊಂದಿಗೆ ಉಮೇಶ್ ತಂತ್ರಿ, ಮತ್ತು ಶ್ರೀಧರ್ ಪುರೋಹಿತ್ ಅವರ ಪೌರೋಹಿತ್ಯದಲ್ಲಿ ಸಂಪನ್ನವಾದ ರಂಗಪೂಜೆ, ದೀಪೋತ್ಸವದ ಅಂತ್ಯದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೊಕ್ತೇಸರ ಮಂಜುನಾಥ ಆಚಾರ್ಯ, ಬಾಬು , ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಆಚಾರ್ಯ, ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರತಿಭಾ ವಿಜೇಂದ್ರ ಆಚಾರ್ಯ, ಬಾಲ ಕಲಾವಿದೆ ಶ್ರಾವ್ಯಾ ಮರವಂತೆ, ಮಾಗಣೆ ಮೊಕ್ತೇಸರ ರಮೇಶ ಆಚಾರ್ಯ, ರತ್ನಾಕರ ಆಚಾರ್ಯ, ಮಂಜುನಾಥ ಆಚಾರ್ಯ, ಸತೀಶ ಆಚಾರ್, ಸುರೇಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ನಿರೂಪಿಸಿದರು. ಜೀಣೋದ್ಧಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನ ಐಇಸಿ/ಎಸ್ಬಿಸಿಸಿಯ ಕಾರ್ಯಕ್ರಮದಡಿ ನೆಹರು ಯುವ ಕೇಂದ್ರ ಹಾಗೂ ಯುವಸಂಘಗಳ ಪ್ರತಿನಿಧಿಗಳಿಗೆ ಉಡುಪಿ ತಾಲೂಕು ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಪೇತ್ರಿ ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿಯಲ್ಲಿ ನಡೆಯಿತು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ, ವಿಲ್ಫೆಡ್ ಡಿ’ಸೋಜ, ಕಾರ್ಯಕ್ರಮ ಉದ್ಘಾಟಿಸಿ, ಸರಕಾರದ ವತಿಯಿಂದ ಸಿಗುವ ಸವಲತ್ತುಗಳ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಚೇರ್ಕಾಡಿ ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷ ಪ್ರಸನ್ನ ಪ್ರಸಾದ್ ಭಟ್, ಉತ್ತಮ ಆಹಾರ ಪದ್ಧತಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ, ತಾಯಿ ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ರಾಷ್ಟ್ರೀಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಸಾಂಕ್ರಮಿಕ ಹಾಗೂ ಅಸಾಂಕ್ರಮಿಕ ರೋಗಗಳ ಬಗ್ಗೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಹುಬ್ಬಳ್ಳಿಯ ಸುಮಧುರ ಎಂಟರ್ಟೈನ್ಮೆಂಟ್ ಫೌಂಡೇಶನ್ ಏರ್ಪಡಿಸಿದ್ದ ಝೇಂಕಾರ ಸಂಗೀತ ಉಪಕರಣಗಳನ್ನು ನುಡಿಸುವ ಆನ್ಲೈನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಬಾಲ ಸ್ಯಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅತ್ಯಧಿಕ ವಿವ್ಸ್ ಗಳ ಜೊತೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಗಂಗೊಳ್ಳಿಯ ಮಾಧವ ದೇವಾಡಿಗ ಮತ್ತು ಸಾವಿತ್ರಿ ದಂಪತಿಯ ಪುತ್ರ.
