ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ – ದಕ್ಷಿಣ ಕನ್ನಡ ಶೇ. 90.71 ಫಲಿತಾಂಶದೊಂದಿದೆ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದು, ಮೂರನೇ ಸ್ಥಾನದಲ್ಲಿರುವ ಕೊಡಗು ಜಿಲ್ಲೆಯಲ್ಲಿ 81.53% ಉತ್ತರ ಕನ್ನಡ ಜಿಲ್ಲೆಯಲ್ಲಿ 80;97 % ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 79.11 % ಫಲಿತಾಂಶ ದಾಖಲಿಸುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕೊನೆಯ ಸ್ಥಾನದಲ್ಲಿರುವ ವಿಜಯಪುರದಲ್ಲಿ 54.22% ಫಲಿತಾಂಶ ದಾಖಲಾಗಿದೆ. ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಸ್ಥೆಯು ಲಾಭದ ಹಾದಿಯಲ್ಲಿ ಮುನ್ನಡೆದು, ಆರ್ಥಿಕ ದೃಢತೆ ಸಾಧಿಸಿ ಉತ್ತಮ ಸೇವಾ ದಾಖಲೆ ಹೊಂದಬೇಕಾದರೆ ಆಡಳಿತ ಮಂಡಳಿ, ಸಿಬ್ಬಂದಿ, ಸದಸ್ಯರ ಮತ್ತು ಸಾರ್ವಜನಿಕರ ಬೆಂಬಲ ಅಗತ್ಯ. ಇಪ್ಪತ್ತೈದು ವರ್ಷಗಳಿಂದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹುದ್ದೆಯಲ್ಲಿ ಅಂತಹ ಸಹಕಾರ ದೊರೆತ ಕಾರಣ ಅದನ್ನು ಜಿಲ್ಲೆಯ ಯಶಸ್ವೀ ಸಹಕಾರಿ ಸಂಸ್ಥೆಯಾಗಿ ರೂಪಿಸಲು ಸಾಧ್ಯವಾಗಿದೆ ಎಂದು ಎಸ್. ರಾಜು ಪೂಜಾರಿ ಹೇಳಿದರು. ಸೋಮವಾರ ನಡೆದ ಸಂಘದ ಮರವಂತೆ ಶಾಖೆಯ ನೂತನ ಕಚೇರಿ ಕಟ್ಟಡ ನಿರ್ಮಾಣದ ಶಂಕು ಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸಂಘದ ನಾವುಂದದ ಪ್ರಧಾನ ಕಚೇರಿ ಮತ್ತು ಹೇರೂರು ಶಾಖಾ ಕಚೇರಿ ಸಾಲ ಪಡೆದು ನಿರ್ವಹಿಸಿದ್ದರೆ, ಬಡಾಕೆರೆ ಕಚೇರಿ ಮತ್ತು ಮರವಂತೆ ಪ್ರಸಕ್ತ ಕಟ್ಟಡವನ್ನು ಸಂಘದ ಕಟ್ಟಡ ನಿಧಿಯಿಂದ ಮಾಡಲು ಸಾಧ್ಯವಾಗಿದೆ. ಇದು ಸಂಘ ಸಾಧಿಸಿದ ಬೆಳವಣಿಗೆ ಮತ್ತು ದೃಢತೆಯ ದ್ಯೋತಕ ಎಂದ ಅವರು ಮರವಂತೆಯ ನಿವೇಶನವನ್ನು ಉಚಿತವಾಗಿ ನೀಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ, ತಿರುಗಾಡುತ್ತಿದ್ದ ವ್ಯಕ್ತಿಯ ವಿರುದ್ಧ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ 163 ಬಾರಿ ಹೊರಗೆ ಬಂದಿರುವ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ. ಮುಂಬಯಿನಿಂದ ಕೋಟೇಶ್ವರಕ್ಕೆ ಬಂದಿದ್ದ ಸಹಬ್ ಸಿಂಗ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪಿ. ಈತ ಕುಂದಾಪುರದಲ್ಲಿ ಗ್ಲಾಸ್ ಮತ್ತು ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಜೂ.29 ರಂದು ಕೋಟೇಶ್ವರದ ಬೈಪಾಸ್ ಬಳಿಯ ಬಾಡಿಗೆ ಮನೆಗೆ ಬಂದಿದ್ದು, ಆತನಿಗೆ ಜು.13 ರವರೆಗೆ ಹೋಂ ಕ್ವಾರಂಟೈನ್ ನೀಡಲಾಗಿತ್ತು. ಆದರೆ ಆತ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್ಗಳಿಗೆ ತಿರುಗಾಡುತ್ತಿರುವ ಬಗ್ಗೆ 163 ಬಾರಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್ ಟ್ರ್ಯಾಕರ್ನಿಂದ ತಿಳಿದು ಬಂದಿದೆ. ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್.ಜಿ. ಭಟ್ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.13ರ ಸೋಮವಾರ 53 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ ತಾಲೂಕಿನ 27, ಕುಂದಾಪುರ ತಾಲೂಕಿನ 23 ಹಾಗೂ ಕಾರ್ಕಳ ತಾಲೂಕಿನ 3 ಮಂದಿ ಇದ್ದು ಒಟ್ಟು ಪ್ರಕರಣದಲ್ಲಿ 31 ಪುರುಷರು, 18 ಮಹಿಳೆಯರು ಹಾಗೂ 4 ಮಕ್ಕಳು ಇದ್ದಾರೆ. ಬೈಂದೂರು ತಾಲೂಕು ಉಪ್ಪುಂದದ 70 ವರ್ಷದ ವೃದ್ಧರೊಬ್ಬರಿಗೆ ಕಳೆದ 15 ದಿನಗಳ ಹಿಂದೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಕೆ ಕಂಡಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ. ಕುಂದಾಪುರದ ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಪಾಸಿಟಿವ್ ದೃಢವಾಗಿದೆ. 260 ನೆಗೆಟಿವ್: ಈ ತನಕ ಒಟ್ಟು 22,533 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 19,123 ನೆಗೆಟಿವ್, 1,661 ಪಾಸಿಟಿವ್ ಬಂದಿದ್ದು, 1,749 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗದ ಎಎಸ್ಪಿ ಕಚೇರಿ ಸಿಬ್ಬಂದಿ ಸೇರಿದಂತೆ ಒಟ್ಟು ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಸಿಟವ್ ಬಂದಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಸಿಬ್ಬಂದಿ, ಹೈವೇ ಪಟ್ರೋಲ್ ಕರ್ತವ್ಯದಲ್ಲಿದ್ದ ಕುಂದಾಪುರ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಐ ಹಾಗೂ ಚಾಲಕನಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಎಎಸ್ಪಿ ಕಚೇರಿ ಸಿಬ್ಬಂದಿ ಜುಲೈ 2ರಿಂದ ಹಾಗೂ ಟ್ರಾಫಿಕ್ ಠಾಣೆ ಎಎಸ್ಐ, ಸಿಬ್ಬಂದಿ ಜುಲೈ 5 ರಿಂದ ಹೋಂ ಕ್ವಾರಂಟೈನ್ನಲ್ಲಿ ಇದ್ದು ಕಛೇರಿಗೆ ಹಾಜರಾಗಿರಲಿಲ್ಲ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಿ ಸ್ಯಾನಿಟೈಸರ್ ಮಾಡಲಾಗುತ್ತದೆ. ಕುಂದಾಪುರ ಟ್ರಾಫಿಕ್ ಠಾಣೆ ಮಾಮೂಲಿಯಂತೆ ನಡೆಯಲಿದೆ. ಎಎಸ್ಪಿ ಕಚೇರಿ ಕೆಲಸಗಳು ಕುಂದಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯಲ್ಲಿ ನಡೆಯಲಿದೆ. ಕುಂದಾಪುರ ಉಪವಿಭಾಗಕ್ಕೆ ಉಡುಪಿ ಡಿವೈಎಸ್ಪಿ ಅವರನ್ನು ಪ್ರಭಾರ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಕೋವಿಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಸೋಂಕಿಗೆ 70 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಬೈಂದೂರು ತಾಲೂಕು ಉಪ್ಪುಂದದ 70 ವರ್ಷದ ವೃದ್ಧರೊಬ್ಬರಿಗೆ ಕಳೆದ 15 ದಿನಗಳ ಹಿಂದೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಕೆ ಕಂಡಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢ ಪಡಿಸಿದೆ. ರವಿವಾರ ಉಡುಪಿಯ ಕೋವಿಡ್-19 ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ ವೃದ್ಧರೊಬ್ಬರು ಮೃತಪಟ್ಟಿದ್ದರು. ಮೃತಪಟ್ಟ ವ್ಯಕ್ತಿ ದಾವಣಗೆರೆ ಮೂಲದವರಾದ ಕಾರಣ ಉಡುಪಿ ಜಿಲ್ಲೆಯ ಮೃತರ ಪಟ್ಟಿಯಲ್ಲಿ ಇದನ್ನು ಪರಿಗಣಿಸಲಾಗಿಲ್ಲ.
ಸಂದೇಶ್ ಶಿರೂರು ಈ ಜಗತ್ತು ಜೀವನವೆಂಬ ಪಯಣದ ಮೊದಲ ಘಟ್ಟ. ಪ್ರಕೃತಿಯೊಂದಿಗಿನ ಕಲಿಕೆಯಿಂದ ಪ್ರಾರಂಭವಾಗುವ ನಮ್ಮ ಬದುಕು, ಸಾವಿನೊಂದಿಗೆ ಅಂತ್ಯವಾಗುವ ಸುಂದರ ಕಥೆಯ ವ್ಯಥೆಯಾಗಿದೆ. ಈ ಬದುಕಿನ ಮೊದಲ ಪುಟದ ಅಧ್ಯಯನವು ಬಹಳ ಸೊಗಸಿನೊಂದಿಗೆ ಪ್ರಾರಂಭವಾಗುವ ಬಾಲ್ಯ, ಸ್ವಚ್ಛಂದ ಪರಿಸರದಲ್ಲಿ ವಿಹರಿಸುತ್ತಾ, ಪ್ರಕೃತಿಯ ಕೌತುಕವನ್ನು ಬೆರಗುಗಣ್ಣಿನಿಂದ ನೋಡುತ್ತಾ, ಪ್ರಕೃತಿಯೊಂದಿಗೆ ಪ್ರಕೃತಿಯಾಗಿ ಬೆರೆತು ಹೋಗುವ ಬಾಲ್ಯದ ನೆನಪು ವರ್ಣಿಸಲಸದಳ. ಹೀಗೆ ಸುಂದರ ಪುಟಗಳೊಂದಿಗೆ ಆರಂಭವಾಗುವ ಈ ಬದುಕು ನಮ್ಮ ಮುಂದಿನ ಜೀವನ ಪಯಣದ ಆಗುಹೋಗುಗಳ ಬಗ್ಗೆ ತಿಳಿಸುತ್ತದೆ. ಈ ಪ್ರಪಂಚದಲ್ಲಿ ಅದೆಷ್ಟೋ ಜನರಿಗೆ ಬದುಕನ್ನು ಕಟ್ಟಿಕೊಡುವ ನಗರಗಳು ನಮ್ಮ ಪಾಲಿನ ಆಶಾಕಿರಣ. ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ತನ್ನೆಲ್ಲಾ ಕಷ್ಟಗಳನ್ನು ಮನಸ್ಸಿನಲ್ಲೇ ಇಟ್ಟುಕೊಂಡು ಬದುಕುವ ನಿಷ್ಠಾವಂತ ಜನರ ಬದುಕಿನೊಂದಿಗೆ ಈ ಬದುಕು ಈಗ ದುರಂತದ ಕಥೆಯಾಗಿದೆ. ಮುಂದುವರಿಯುತ್ತಿರುವ ಈ ಜಗತ್ತಿನಲ್ಲಿ ಇಂದು ಕಾಣದ ಸೂಕ್ಷ್ಮ ರೋಗಾಣುಗಳು ಎಷ್ಟೋ ಜನರ ಪಾಲಿಗೆ ಮೊದಲೇ ಹೇಳಿದಂತೆ ನಿಷ್ಠಾವಂತ ಜನರ ಬದುಕಿಗೆ ಮಾರಕವಾಗಿ ಪರಿಣಮಿಸಿದೆ. ದಿನದ ದುಡಿಮೆಯನ್ನು ನಂಬಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.12ರ ಭಾನುವಾರ 41 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ 2 ಮಂದಿ ಮುಂಬೈ, ಓರ್ವ ವ್ಯಕ್ತಿ ಸೌದಿ, 6 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದು, 32 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 26 ಮಂದಿ ಉಡುಪಿ, 11 ಮಂದಿ ಕುಂದಾಪುರ ಹಾಗೂ 4 ಮಂದಿ ಕಾರ್ಕಳ ತಾಲೂಕಿಗೆ ಸೇರಿದ್ದಾರೆ. ಇಂದು 28 ಮಂದಿ ಬಿಡುಗಡೆಗೊಂಡಿದ್ದಾರೆ. ದಾವಣಗೆರೆಯಿಂದ ಚಿಕಿತ್ಸೆಗಾಗಿ ಬಂದಿದ್ದ ವ್ಯಕ್ತಿಯೋರ್ವ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದರು. ಅವರ ಕೊವೀಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ದೃಢವಾಗಿತ್ತು. 573 ನೆಗೆಟಿವ್: ಈ ತನಕ ಒಟ್ಟು 22,327 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 18,863 ನೆಗೆಟಿವ್, 1,608 ಪಾಸಿಟಿವ್ ಬಂದಿದ್ದು, 1,856 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 573 ನೆಗೆಟಿವ್, 41 ಪಾಸಿಟಿವ್ ಬಂದಿದೆ. ಒಟ್ಟು 1,304 ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿಯ ವತಿಯಿಂದ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ ಮತ್ತು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅವರು ಬರೆದ ‘ಚಂದು ನರಿಯ ಅರಿವಿನ ಕತೆ’ ಕತೆಗೆ ಈ ಬಹುಮಾನ ದೊರೆತಿದೆ. ನರೇಂದ್ರ ಗಂಗೊಳ್ಳಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿದ್ದು, ಅವರ ‘ಹೇಳದೆ ಹೋದ ಮಗಳಿಗೆ’ ಕೃತಿ ಸಾಹಿತ್ಯ ವಲಯದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನಲ್ಲಿ ಒಂದು ವಾರ ಲಾಕ್ಡೌನ್ ಜಾರಿಯಾಗುವ ಹಿನ್ನೆಲೆಯಲ್ಲಿ, ಅಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಗಮಿಸುವ ಜನರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗುವಂತೆ ಉಡುಪಿ ಜಿಲ್ಲಾಡಳಿತ ಮನವಿ ಮಾಡಿದೆ. ಕುಂದಾಪುರದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ರೋಗಲಕ್ಷಣ ಇರುವ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಅಗತ್ಯ ಬಿದ್ದರೆ ಹಾಸ್ಟೆಲ್ ಗಳನ್ನೂ ಕೋವಿಡ್ ಕೇರ್ ಸೆಂಟರ್ ಗಳಾಗಿ ಪರಿವರ್ತನೆ ಮಾಡಿಕೊಳ್ಳುವ ಚಿಂತನೆಯಿದೆ. ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸ್ ಕೋವಿಡ್ ಆಸ್ಪತ್ರೆಯಾಗಿ ಪುನಾರಂಭ ಮಾಡಲಿದ್ದೇವೆ ಎಂದರು. ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆ ಮನೆ ಸರ್ವೇ ಮಾಡಲಾಗುವುದು. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದ ಬಂದ ಜನರ ಸಾರಿ, ಐಎಲ್ ಐ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ಹೋಮ್ ಐಸೋಲೇಶನ್ ಬಗ್ಗೆಯೂ ಚಿಂತನೆಯಿದ್ದು, ಸೋಂಕು ಲಕ್ಷಣ ಇರದ ರೋಗಿಗಳ ಮನೆಯಲ್ಲಿ ಸೂಕ್ತ ವ್ಯವಸ್ಥೆ ಇದ್ದರೆ ಹೋಮ್ ಐಸೋಲೇಶನ್ ಮಾಡುವ ಕುರಿತು…
