Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಜ್ಜಾಡಿ ಗ್ರಾಪಂ ವ್ಯಾಪ್ತಿಯ ಐದು ಕೊರಗ ಕುಟುಂಬಗಳಿಗೆ ಈ ಹಿಂದಿನ ಆರ್ಥಿಕ ವರ್ಷಗಳಲ್ಲಿ ಬೇಡಿಕೆಯಾಧಾರಿತವಾಗಿ ಅನುದಾನ ನೀಡುತ್ತಿದ್ದು ಮುಂದಿನ ಆರ್ಥಿಕ ವರ್ಷದಲ್ಲೂ ಕೊರಗ ಕುಟುಂಬಗಳ ಅಭಿವೃದ್ಧಿ ಕುರಿತು ಅನುದಾನವನ್ನು ಮೀಸಲಿಡಲಾಗುವುದು. ಕೊರಗ ಕುಟುಂಬದ ಎಲ್ಲಾ ಫಲಾನುಭವಿಗಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಸಿದ್ಧವಿದ್ದು, ಯಾವುದೇ ಗೊಂದಲಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಹೇಳಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಗುಜ್ಜಾಡಿ ಗ್ರಾಮ ಪಂಚಾಯತ್‌ನ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊರಗ ಕುಟುಂಬಗಳಿಗೆ ಯಾವುದೇ ಅನುದಾನ ಸಿಗುತ್ತಿಲ್ಲ ಮತ್ತು ಅನುದಾನದ ಸಮರ್ಪಕ ಬಳಕೆಯಾಗುತ್ತಿಲ್ಲ. ಗ್ರಾಪಂ.ನ ಶೇ.೨೫ರ ಅನುದಾನದ ದುರ್ಬಳಕೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು, ಕೊರಗ ಕುಟುಂಬಗಳಿಗೆ ಮೀಸಲಿಟ್ಟ ಅನುದಾನವನ್ನು ಸಮಾನವಾಗಿ ಹಂಚಿಕೆ ಮಾಡಲಾಗಿದೆ ಎಂದರು. ಗ್ರಾಪಂ ವತಿಯಿಂದ ೫ ಕೊರಗ ಕುಟುಂಬಗಳಿಗೆ ಸಿಗುವ ಸವಲತ್ತುಗಳು ಹಾಗೂ ಅನುದಾನದ ಮಾಹಿತಿ ನೀಡಿದ ಗ್ರಾಮ ಪಂಚಾಯತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.8: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.) ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಗಿಡಗಳನ್ನು ಖರೀದಿಸಲು ಸಂಬAಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಕಾಳುಮೆಣಸು, ನಿಂಬೆ, ಪುನರ್ಪುಳಿ, ಲವಂಗ, ಜಾಯಿಕಾಯಿ ಹಾಗೂ ಇತರೆ ಅಲಂಕಾರಿಕ ಗಿಡಗಳು ಮತ್ತು ಕಾರ್ಕಳದ ರಾಮಸಮುದ್ರ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಸಿಗೇರು, ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕೆ ನಿರ್ದೇಶಕ ವರುಣ ಕೆ.ಜೆ ಮೊ.ನಂ: 7892326323, ಬ್ರಹ್ಮಾವರದ ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಗೂರು ಉರ್ದು ಹಿ.ಪ್ರಾ.ಶಾಲೆಯ ಸಹಶಿಕ್ಷಕ ಭಾಸ್ಕರ ಬಾಡ ಅವರು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಸ್ಕರ ಬಾಡ ಅವರು ಶಟಲ್ ಬ್ಯಾಡ್ಮಿಂಟನ್ ನ ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ಡಬಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಹೃದಯಪೂರ್ವಕವಾಗಿ ಮಾಡಿದ ಸೇವೆಗಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಹೆರ್ಗ ವಿಶ್ವನಾಥ ಶೆಟ್ಟಿ ಹೇಳಿದರು. ನಾವುಂದ ಲಯನ್ಸ್ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿ, ಸಂಜೆ ಮಾಲಸಾ ಆರ್ಕೆಡ್‌ನಲ್ಲಿ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಆರಂಭಗೊಂಡ ಕೇವಲ ಎರಡು ವರ್ಷಗಳಲ್ಲಿ ನಾವುಂದ ಕ್ಲಬ್ ಕಳೆದ ಡಿಸೆಂಬರ್‌ನಲ್ಲಿ ಟಾಪ್ ೧೦ ಕ್ಲಬ್‌ಗಳಲ್ಲಿ ೫ನೇ ಸ್ಥಾನ ಪಡೆದುಕೊಂಡ ಬಗ್ಗೆ ತುಂಬಾ ಹೆಮ್ಮೆಯಾಗುತ್ತದೆ. ಸೇವಾ ಮನೋಭಾವನೆಯಿರುವ ಯುವಕರನ್ನು ಕ್ಲಬ್‌ಗೆ ಸೇರಿಸಿಕೊಂಡು ಗ್ರಾಮೀಣಾಭಿವೃದ್ಧಿಯತ್ತ ಗಮನ ಹರಿಸಬೇಕು. ಸೇವೆಯೇ ನಮ್ಮೆಲ್ಲರ ಪ್ರಮುಖ ಅಜೆಂಡವಾಗಬೇಕು. ಸಹೋದರತೆಯ ಮನೋಭಾವನೆಯಿಂದ ಎಲ್ಲರೂ ಪರಸ್ಪರ ಸಂತೋಷ ಹಂಚಿಕೊಂಡು ಜೀವನ ಸಾಗಿಸುವಂತಾಗಬೇಕು ಎಂದರು. ಲಯನ್ಸ್ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಐದು ನೂತನ ಸದಸ್ಯರಿಗೆ ಲಯನ್ಸ್ ದ್ವಿತೀಯ ಗವರ್ನರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ನಾವುಂದ: ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತರತ್ನ ಪುರಸ್ಕ್ರತ, ಗಾನ ಸಾಮ್ರಾಜ್ಞೆ ಲತಾ ಮಂಗೇಶ್ಕರ್‌ರವರ ಭಾವ ಚಿತ್ರಕ್ಕೆ ಪುಷ್ಪ ನಮನದೊಂದಿಗೆ ಶೃದ್ದಾಂಜಲಿ ಅರ್ಪಿಸಲಾಯಿತು. ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಮಾತನಾಡಿ ಏಳುವರೆ ದಶಕಗಳ ಕಾಲ ಭಾರತಿಯ ಸಿನಿಮಾ ಕ್ಷೇತ್ರದ ಅನಭಿಷಕ್ತ ರಾಣಿಯಾಗಿ, ಸ್ವರ ಸಾಮ್ರಾಜ್ಞೆಯಾಗಿ ಮೆರೆದ ಲತಾ ಮಂಗೇಶ್ಕರ್‌ರವರ ನಿಧನವು ದೇಶಕ್ಕೆ, ಸಂಗೀತ ಸಾಮ್ರಾಜ್ಯಕ್ಕೆ ತುಂಬಲಾರದ ನಷ್ಟ, ಭಾರತೀಯ ಸಂಗೀತ ಕ್ಷೇತ್ರದ ಧೀಮಂತ ಮಹಿಳೆಯಾಗಿರುವ ಲತಾಜೀ ಅವರನ್ನು ಮುಂದಿನ ಪೀಳಿಗೆಯವರು ನೆನಪಿಸಿಕೊಳ್ಳುವಂತಹ ವ್ಯಕ್ತಿತ್ವ ಹಾಗೂ ಅವರ ಮಧುರ ಧ್ವನಿ ಪ್ರಪಂಚದಾದ್ಯಂತ ಜನರನ್ನು ಮಂತ್ರ ಮುಗ್ಧಗೊಳಿಸುವ ಅಪ್ರತಿಮ ಸಾಮರ್ಥ್ಯ ಹೊಂದಿದ್ದು ಅವರ ನಿಧನದಿಂದ ದೇಶ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಿದೆ ಎಂದು ಹೇಳಿದರು. ಸಂತಾಪ ಸೂಚಕ ಸಭೆಯಲ್ಲಿ ಶುಭದಾ ಸಂಸ್ಥೆಯ ಅಧ್ಯಕ್ಷರಾದ ಡಾ. ಎನ್.ಕೆ. ಬಿಲ್ಲವ, ಸಲಹಾ ಸಮಿತಿಯ ಸದಸ್ಯರಾದ ರಾಜೀವ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಿ.ಎ/ಸಿ.ಎಸ್/ಸಿ.ಎಮ್.ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್‍ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿ.ಎ ಅಂತಿಮ ಪರೀಕ್ಷೆ ಮತ್ತು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಡಿಸೆಂಬರ್‍ನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪುನೀತ್ ಶೆಟ್ಟಿ (449) ಅಂಕಗಳನ್ನು ಪಡೆಯುವುದರ ಮೂಲಕ ಸಿ.ಎ ಪರೀಕ್ಷೆ ಎಲ್ಲಾ ಹಂತಗಳನ್ನು ತೇರ್ಗಡೆ ಹೊಂದಿ ಲೆಕ್ಕ ಪರಿಶೋಧಕನಾಗಿ ಹೊರಹೊಮ್ಮಿದ್ದಾರೆ. ಮತ್ತು ಅಂತಿಮ ಪರೀಕ್ಷೆಯ ಗ್ರೂಪ್ 2 ವಿಭಾಗದಲ್ಲಿ ಪ್ರಕಾಶ್ ಶೆಟ್ಟಿ 400 ಅಂಕಗಳಲ್ಲಿ 212 ಅಂಕ ಪಡೆಯುವುದರ ಮೂಲಕ ಸಿ.ಎ ಅಂತಿಮ ಪರೀಕ್ಷೆಯ ಎರಡನೇ ಗ್ರೂಪ್‍ನ್ನು ಉತ್ತೀರ್ಣರಾಗಿರುತ್ತಾರೆ. ಡಿಸೆಂಬರ್ 2021 ರಲ್ಲಿ ನಡೆದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಅನಿಕೇತ್ ಕೆದ್ಲಾಯ(278), ಕಾರ್ತಿಕ್ ವಿ(260), ಶ್ರೀ ನಿಧಿ ಹೆಗ್ಡೆ(237), ಅನುಷ್.ಎ.ದೇವಾಡಿಗ(236), ಶ್ಯಾವ್ಯ ಶೆಟ್ಟಿ(227),…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೂಂಡು ಉತ್ತಮ ಜೀವನ ನಿರ್ವಹಿಸುವತ್ತಾ ವಿದ್ಯಾರ್ಥಿಗಳು ಹೆಚ್ಚಿನ ಗಮನ ವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿ?ನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ೨೦೧೯-೨೦ ಸಾಲಿನ ಬಿಬಿಎಂ ರ‍್ಯಾಂಕ್ ವಿಜೇತರಿಗೆ ನಡೆದ ಸನ್ಮಾನ ಹಾಗೂ ಸಂವಾದ ಕಾರ‍್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಕಾರಾತ್ಮಕ ಯೋಚನೆಗಳು ಅಗತ್ಯ. ವಿದ್ಯಾರ್ಥಿಗಳ ನಡುವೆ ಜಾತಿ-ಮತಗಳ ಭಿನ್ನಾಬಿಪ್ರಾಯ ಅನಗತ್ಯ. ವಿದ್ಯಾರ್ಜನೆ ಒಂದೇ ವಿದ್ಯಾರ್ಥಿಗಳ ಗುರಿಯಾಗಿರಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಲಭಿಸಿರುವ ಸ್ವಾತಂತ್ರ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅನಗತ್ಯ ವಿಷಯಗಳಲ್ಲಿ ತಮ್ಮ ಸಮಯವನ್ನು ಕಾಲಹರಣ ಮಾಡಬಾರದು ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ೨೦೧೯-೨೦೨೦ನೇ ಸಾಲಿನ ಬಿಬಿಎಂ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಪಡೆದ ಶ್ರೇಯಾ ಕೆ ಶೆಟ್ಟಿ, ಏಳನೇ ರ‍್ಯಾಂಕ್ ಪಡೆದ ಶ್ರೀಲಕ್ಷ್ಮಿ, ಎಂಟನೇ ರ‍್ಯಾಂಕ್ ಪಡೆದ ಕೀರ್ತಿ ಎಸ್, ಹತ್ತನೇ ರ‍್ಯಾಂಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಅವಕಾಶಗಳು ಎದುರಾದಾಗ ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಯಶಸ್ಸು ಅವಲಂಬಿತವಾಗಿರುತ್ತದೆ. ಧನಾತ್ಮಕ ಚಿಂತನೆಯೊಂದಿಗೆ ಅವಕಾಶವನ್ನು ಗುರುತಿಸುವ ಹಾಗೂ ಸ್ವೀಕರಿಸುವ ಮುನ್ನಡೆಯುವ ಜಾಣ್ಮೆ ನಮ್ಮದಾಗಬೇಕಿದೆ ಎಂದು ರೋಟರಿ ಜಿಲ್ಲೆ 3182 ಜಿಲ್ಲಾ ಗವರ್ನರ್ ಎಂ. ಜಿ. ರಾಮಚಂದ್ರ ಮೂರ್ತಿ ಹೇಳಿದರು. ಅವರು ಬುಧವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಬೈಂದೂರು ರೋಟರಿ ಕ್ಲಬ್‌ಗೆ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಾವು ಮಾಡುವ ಸೇವಾ ಕಾರ್ಯದ ಮೂಲಕ ಯಾರದ್ದೋ ಬದುಕಿನಲ್ಲಿ ಬದಲಾವಣೆ ತರುವಂತಾದರೆ ಅದರಿಂದ ದೊರೆಯುವ ಸಂತೃಪ್ತಿ ದೊಡ್ಡದು. ಪ್ರಸಕ್ತ ಸಾಲಿನಲ್ಲಿ ರೋಟರಿ ಜಿಲ್ಲೆಯಲ್ಲಿ ಒಟ್ಟು 12ಕೋಟಿಗೂ ಅಧಿಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸದಸ್ಯರಿಗೆ ರೋಟರಿ ಮಾಹಿತಿ ಉತ್ತಮವಾಗಿದ್ದರೆ, ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ. ವೃತ್ತಿಯೊಂದಿಗೆ ಉತ್ತಮ ಪ್ರವೃತ್ತಿ ನಮ್ಮದಾಗಿದ್ದರೆ ಅದರಿಂದ ನೆಮ್ಮದಿಯೂ ದೊರೆಯುತ್ತದೆ ಎಂದರು. ಯಕ್ಷಗಾನ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆಗೈದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ದೇವಳದಲ್ಲಿ ತತ್ವಕಲಾ ಹೋಮ ಮತ್ತು ಕಲಶಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ ಜರುಗಿತು. ದೇವತಾ ಪ್ರಾರ್ಥನೆ ಪೂರ್ವಕ ಕಲಶಸ್ಥಾಪನೆ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ ಮೊದಲಾದವುಗಳು ದೇವಸ್ಥಾನದ ತಂತ್ರಿಗಳಾದ ವೇದಮೂರ್ತಿ ಕೋಟ ಜಿ. ಸುಬ್ರಹ್ಮಣ್ಯ ಅಡಿಗರ ಅಧ್ವರ್ಯದಲ್ಲಿ ಹಾಗೂ ಪರ್ಯಾಯ ಅರ್ಚಕರ ನೇತೃತ್ವದಲ್ಲಿ ಜರುಗಿತು. ಫೆಬ್ರವರಿ 14ರಂದು ದೇವಳದಲ್ಲಿ ವಾರ್ಷಿಕ ಮನ್ಮಹಾರಥೋತ್ಸವ ಜರುಗಲಿದ್ದು, ಫೆ.11ರಿಂದ 16ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ಮೂಡುಬಿದಿರೆಯಲ್ಲಿ ನಡೆದ 6ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಕಟಾ ವಿಭಾಗದಲ್ಲಿ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರಸ್ತುತ 4ನೇ ತರಗತಿಯಲ್ಲಿ ಕಲಿಯುತ್ತಿರುವ ತೇಜಸ್ ಕುಮಾರ್, ಈ ಹಿಂದೆ ಬೆಳ್ತಂಗಡಿಯಲ್ಲಿ ನಡೆದ 18ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್-2021ರಲ್ಲಿ 10 ವರ್ಷದ ಒಳಗಿನ ಕಟಾದಲ್ಲಿ ಬೆಳ್ಳಿ ಪದಕ ಮತ್ತು ಕಮೇಟಿಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದು, ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.

Read More