Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ವಿದೇಶದಲ್ಲಿ ನೆಲೆಸಿ ಕನ್ನಡ ಹಾಗೂ ಕನ್ನಡಿಗರ ಪರವಾಗಿ ಹತ್ತು ಹಲವು ಸಂಘಟನೆಗಳ ಮೂಲಕ ನಿರಂತರವಾಗಿ ಶ್ರಮಿಸಿದ ಬಿ. ಜಿ. ಮೋಹನದಾಸ್ ಅವರಿಗೆ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಸ್ನೇಹಿತರ ವಲಯದದಲ್ಲಿ ಬೀಜಿ ಎಂದೇ ಪರಿಚಿತರಾಗಿರುವ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಜನರ ಸೇವೆಯೇ ಜನಾರ್ಧನ ಸೇವೆ ಎಂಬ ತತ್ವವನ್ನು ಬಲವಾಗಿ ನಂಬಿದವರು. ಎಂಭತ್ತರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ವಲಸೆ ಹೋದ ಬೀಜಿಯವರು, ಫಾರ್ಮಸಿಯ ವಿವಿಧ ಸಂಸ್ಥೆಗಳಲ್ಲಿ ಅವಿರತವಾಗಿ ದುಡಿದಿದ್ದು ತಮ್ಮ ಬಿಡುವಿನ ವೇಲೆಯಲ್ಲಿ ಅಧಿಕ ಸಮಯವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದಾರೆ. ಮಣಿಪಾಲದಿಂದ ಫಾರ್ಮಸಿ ವಿಭಾಗದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಬೀಜಿಯವರು ಗಲ್ಫ್ನಾಡಿಗೆ ವಲಸೆ ಬರುವ ಮುನ್ನ ಮಣಿಪಾಲದಲ್ಲಿ ಫಾರ್ಮಸಿ ವಿಭಾಗದ ಸಹಾಯಕ ಪ್ರೊಪೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1985ರಲ್ಲಿ ದುಬೈ ಕರ್ನಾಟಕ ಸಂಘದ ಸಂಸ್ಥಾಪಕರ ಬಳಗ ಸೇರಿ ಮುಂದೆ 1988 ರಲ್ಲಿ ಸಂಘದ ಸಂವಿಧಾನ ರೂಪಿಸಿದ ರೂವಾರಿಗಳಲ್ಲೊಬ್ಬರಾದರು. 1989…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಂಟರಯಾನೆ ನಾಡವರ ಸಂಘ (ರಿ.) ಬಂದೂರು ಹಾಗೂ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್ ಕುಂದಾಪುರ ಇದರ ಸಹಯೋಗದಲ್ಲಿ ಯಡ್ತರೆ ಮಂಜಯ್ಯ ಶೆಟ್ಟಿ ೧೦೬ನೇ ಜಯಂತಿ ಉತ್ಸವ ಹಾಗೂ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ. ಜಗನ್ನಾಥ ಶೆಟ್ಟಿ ಸಭಾವನದಲ್ಲಿ ನಡೆಯಿತು. ಮೂಡಬಿದಿರೆಯ ಆಳ್ವಾಸ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರಿಗೆ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ| ಎಂ. ಮೋಹನ ಆಳ್ವ ಅವರು ಬದುಕಿನಲ್ಲಿ ಆದರ್ಶವಿದ್ದಾಗ ಗೌರವ ದೊರೆಯುತ್ತದೆ. ಹೊಗಳಿಕೆ ಹಾಗೂ ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಸತ್ಯ ಮರೆಮಾಚಿ ಸುಳ್ಳು ವೈಭವೀಕರಿಸುವ ಇಂದಿನ ಕಾಲ ಘಟ್ಟದಲ್ಲಿ ಭಾವನಾತ್ಮಕ ಸಂಬಂಧಗಳು ದೂರಾಗುತ್ತಿದೆ. ಮೌಲ್ಯಾಧಾರಿತ ಬದುಕು ಸಾಗಿಸಬೇಕಾದರೆ ನಾವು ಸ್ಥಿತ ಪ್ರಜ್ಞರಾಗಿರಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂದೂರು ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ಯಡ್ತರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂದಿರುಗಿಸುವಂತೆ ಈಗಾಗಲೇ ಬಹಳಷ್ಟು ಬಾರಿ ತಿಳುವಳಿಕೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ ಸಹ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 665 ಅನರ್ಹ ಕಾರ್ಡುದಾರರು ಮಾತ್ರ ಸ್ವ-ಇಚ್ಛೆಯಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಿದ್ದು, ರದ್ದುಪಡಿಸಲಾಗಿದೆ. ಸ್ವಂತ ನಾಲ್ಕು ಚಕ್ರದ ವಾಹನ ಹೊಂದಿರುವ 256 ಅನರ್ಹ ಕಾರ್ಡುದಾರರನ್ನು ಸಾರಿಗೆ ಇಲಾಖೆ ಸಹಕಾರದೊಂದಿಗೆ ಪತ್ತೆ ಹಚ್ಚಿ, ರದ್ದುಪಡಿಸಿ ಸದ್ರಿಯವರ ಮೇಲೆ ಕಾನೂನು ಕ್ರಮ ಜಾರಿಗೊಳಿಸಲಾಗುತ್ತಿದೆ. ಇನ್ನೂ ಬಹಳಷ್ಟು ಅನರ್ಹ ಕಾರ್ಡುದಾರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಅಂತಹ ಅನರ್ಹ ಕಾರ್ಡುದಾರರು ಸ್ವ-ಇಚ್ಛೆಯಿಂದ ಪಡಿತರ ಚೀಟಿಗಳನ್ನು ಇಲಾಖೆಗೆ ಹಿಂದಿರುಗಿಸಲು ಅಕ್ಟೋಬರ್ 31 ರ ವರೆಗೆ ಅವಕಾಶವನ್ನು ನೀಡಲಾಗಿದೆ. ನಂತರದ ದಿನಗಳಲ್ಲಿ ಇಲಾಖೆಯ ಮುಖಾಂತರ ಪತ್ತೆ ಹಚ್ಚಿದಾಗ ಕಂಡು ಬರುವ ಅನರ್ಹ ಪಡಿತರ ಚೀಟಿದಾರರಿಂದ ಅವರು ಪಡೆದಿರುವ ಪಡಿತರ ವಸ್ತುಗಳ ಮೌಲ್ಯವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ದಂಡವಾಗಿ ವಸೂಲಿ ಮಾಡಲಾಗುವುದು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ರಸ್ತೆಯ ವಿಜಯಪರದಲ್ಲಿ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಕುಂದಾಪುರದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಬಾಲಕಿಯರು ಪ್ರತಿನಿಧಿಸಿದ್ದ ಉಡುಪಿ ತಂಡ ಪ್ರಥಮ ಸ್ಥಾನ ಗಳಿಸಿದೆ. ಸೌಮ್ಯ , ರಕ್ಷಿತಾ ಖಾರ್ವಿ, ಮನಿಷಾ, ಅನುಷಾ ಮತ್ತು ಗೌತಮಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎನ್ ರಮೇಶ್ ಟ್ರೋಫಿ ನೀಡಿದರು. ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನಾ೯ಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮನೆ, ನಿವೇಶನ ರಹಿತರಿಗೆ ಸರಕಾರಿ/ಖಾಸಗಿ ಜಾಗ ಕರೀದಿಸಿ ಹಕ್ಕು ಪತ್ರ ಮಂಜೂರು ಮಾಡಬೇಕೆಂದು ಒತ್ತಾಯಿಸಿ, ದಿನಾಂಕ ೧೮ ನವಂಬರ್ ೨೦೧೯ ಸೋಮವಾರದಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜರಗುವ ನಿವೇಶನ ರಹಿತರ ಭೂಮಿ ಹಕ್ಕಿನ ಬೃಹತ್ ಹೋರಾಟ, ಧರಣಿ ಮುಷ್ಕರಕ್ಕೆ ಸಿಐಟಿಯು ಜಿಲ್ಲಾ ಸಮಿತಿಗೆ ಸಂಯೋಜಿಸಲ್ಪಟ್ಟ ಎಲ್ಲಾ ಕಾಮಿ೯ಕ ಸಂಘಗಳ ಸಂಪೂಣ೯ ಬೆಂಬಲ ಕೊಡಲಾಗುವುದು ಎಂದು ಸಿಐಟಿಯು ಜಿಲ್ಲಾ ಕಾಯ೯ದಶಿ೯ ಎಚ್. ನರಸಿಂಹ ಹೇಳಿದರು. ತಲ್ಲೂರು ಮೂತೆ೯ದಾರರ ಸಭಾಭವನದಲ್ಲಿ ತಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆ, ನಿವೇಶನ ರಹಿತರ ಸಮಾವೇಶದಲ್ಲಿ ಜರುಗಿದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್ ನಿವೇಶನ ರಹಿತರ ಈ ನಿಣಾ೯ಯಕ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ನಿವೇಶನ ರಹಿತ ಫಲಾನುಭವಿಗಳಿಗಳು ಭಾಗವಹಿಸಬೇಕು ಎಂದು ಕರೆ ಕೊಟ್ಟರು. ಕೃಷಿಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಭಾರಿಯ ದೀಪಾವಳಿಗೆ ಕುಂದಾಪುರದ ಪ್ರತಿಷ್ಠಿತ ಮೊಬೈಲ್ ಮಾರಾಟ ಸಂಸ್ಥೆ ಮೊಬೈಲ್ ಎಕ್ಸ್ ತನ್ನ ಗ್ರಾಹಕರಿಗೆ ಮೊಬೈಲ್ ಎಕ್ಸ್ ಉತ್ಸವದ ಮೂಲಕ ವಿಶೇಷ ಕೊಡುಗೆ ನೀಡುತ್ತಿದ್ದು, ಎಲ್ಲಾ ಮೊಬೈಲ್‌ಗಳು ಹಾಗೂ ಮೊಬೈಲ್ ಎಕ್ಸಸರೀಸ್ ಮೇಲೆ ಹೆಚ್ಚಿನ ರಿಯಾಯಿತಿ ಪ್ರಕಟಿಸಿದೆ. ಎಲ್ಲಾ ಮೊಬೈಲ್ ಕಂಪೆನಿಯ ಎಲ್ಲಾ ಮಾಡೆಲ್‌ನ ಮೊಬೈಲ್‌ಗಳನ್ನು ಆನ್‌ಲೈನ್ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇಎಂಐ ಮೂಲಕ ಮೊಬೈಲ್ ಕೊಂಡುಕೊಳ್ಳುವವರಿಗೆ 0% ಡೌನ್ ಪೇಮೆಂಟ್, ಆನ್‌ಲೈನ್ ಮೂಲಕವೇ ಇಎಂಐ ಲೋನ್ ಅಪ್ರೋವ್, ತ್ವರಿತ ಸರ್ವಿಸ್, ಲೈಫ್‌ಟೈಮ್ ಸಾಫ್ಟ್‌ವೇರ್ ಅಪ್‌ಡೇಟ್, ಗ್ರಾಹಕರ ಮಾಹಿತಿ ಸೇವೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿಕೊಡಲಿದೆ. ಮೊಬೈಲ್ ಎಕ್ಸ್‌ನಲ್ಲಿ ಮಾಡುವ ಎಲ್ಲಾ ಖರೀದಿಗೂ ಖಚಿತವಾಗಿ ಉಡುಗೊರೆ ಇರಲಿದೆ. ಕುಂದಾಪುರದ ಹಳೆ ಬಸ್ ನಿಲ್ದಾಣದ ಸಮೀಪದ ಪನ್ನೀರ್ ಜ್ಯುವೆಲ್ಲರ‍್ಸ್ ಕಾಂಪೆಕ್ಸ್‌ನಲ್ಲಿರುವ ಮೊಬೈಲ್ ಎಕ್ಸ್ ಶೋರೂಮ್‌ನಲ್ಲಿ ಈ ಎಲ್ಲಾ ಆಫರ್‌ಗಳು ಲಭ್ಯವಿರಲಿದ್ದು, ದೀಪಾವಳಿಗೆ ಮೊಬೈಲ್ ಕೊಂಡುಕೊಳ್ಳಬೇಕೆನ್ನುವವರು ಆಫರ್‌ನ್ನು ಸದಪಯೋಗಪಡಿಸಿಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದಿದ್ದ ವಿಶ್ವ ಯೋಗ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗಳಿಸಿ ಸಾಧನೆ ಮಾಡಿದ ಮರವಂತೆಯ ಬಾಲ ಯೋಗಪಟು ಧನ್ವಿ ಪೂಜಾರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಧನ್ವಿ ಪೂಜಾರಿಗೆ ಅಭಿನಂದಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಭೋಜ ನಾಯ್ಕ್, ಜಗದೀಶ್ ಪಿ. ಪೂಜಾರಿ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ನಾಗಮ್ಮ, ಮಂಜು ಪೂಜಾರಿ, ಮುಖಂಡ ಮದನ್‌ಕುಮಾರ್ ಉಪ್ಪುಂದ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಹಾಗೂ ಸಿಬ್ಬಂಧಿಗಳು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ಪೊಲೀಸ್ ಠಾಣೆಯ ಪಿಎಸೈ ತಿಮ್ಮೇಶ್ ಬಿ. ಎನ್., ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್ ನಾಯ್ಕ್, ಅಮಾಸೆಬೈಲು ಪೊಲೀಸ್ ಠಾಣೆಯ ಪಿಎಸೈ ಸುದರ್ಶನ್ ಅವರನ್ನು ವರ್ಗಾವಣೆ ಮಾಡಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯ ಪಿಎಸೈ ತಿಮ್ಮೇಶ್ ಬಿ. ಎನ್ ಅವರನ್ನು ಕಾರ್ಕಳ ನಗರ ಠಾಣೆಗೆ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸೈ ಶ್ರೀಧರ್ ನಾಯ್ಕ್ ಅವರನ್ನು ಶಂಕರನಾರಾಯಣ ಪೊಲೀಸ್ ಠಾಣೆಗೆ, ಅಮಾಸೆಬೈಲು ಪೊಲೀಸ್ ಠಾಣೆಯ ಎಸೈ ಸುದರ್ಶನ್ ಬಿ. ಎಸ್ ಅವರನ್ನು ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಪೆ ಠಾಣೆಯ ಮಧು ಬಿ. ಇ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪಶ್ಚಿಮ ವಲಯ ಪೊಲೀಸ್ ಸಿಬ್ಬಂಧಿ ಮಂಡಳಿಯ ನಡಾವಳಿಯ ಸರ್ವಾನುಮತದ ನಿರ್ಣಯದಂತೆ ಚಿಕ್ಕಮಗಳೂರು, ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಟ್ಟು ೪೭ ಮಂದಿ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿಯನ್ನು ೩ನೇ ಅವಧಿಗೆ ಪುನರ್ ರಚಿಸಲಾಗಿದ್ದು, ಸುಮಿತ್ ಶೆಟ್ಟಿ ಕೌಡೂರು ಇವರನ್ನು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಪ್ರತಾಪ ಹೆಗ್ಡೆ ಮಾರಾಳಿ ಇವರನ್ನು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಶೋಭಾ ಜಿ. ಪುತ್ರನ್ ಇವರನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ಮಡಿಕಲ್ ಕಡಲತೀರದಲ್ಲಿ ಸ್ಥಳೀಯ ಮೀನುಗಾರರು ನಡೆಸಿದ ಒಂದು ದಿನದ ಸ್ವಚ್ಛತಾ ಅಭಿಯಾನದಲ್ಲಿ ಎಫ್‌ಎಸ್‌ಎಲ್ ಇಂಡಿಯ ಸರ್ಕಾರೇತರ ಸಂಘಟನೆಯ ಆಶ್ರಯದಲ್ಲಿ ಭಾರತದಲ್ಲಿ ಅನುಭವಾತ್ಮಕ ಕಲಿಕೆ ನಡೆಸುತ್ತಿರುವ ವಿದೇಶಿ ವಿದ್ಯಾರ್ಥಿಗಳು ಕೈಜೋಡಿಸಿ ಗಮನ ಸೆಳೆದರು. ಉಪ್ಪುಂದ ರಾಣಿಬಲೆ ಒಕ್ಕೂಟ ಮಂಗಳವಾರ ಈ ಅಭಿಯಾನ ಏರ್ಪಡಿಸಿತ್ತು. ಅದರ ಅಂಗವಾಗಿ ಮಡಿಕಲ್ ಕಡಲತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಕರಾವಳಿ ಕಾವಲು ಪಡೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಮೀನುಗಾರರು ಸೇರಿ ಸಂಗ್ರಹಿಸಿದ ತ್ಯಾಜ್ಯವನ್ನು ವರ್ಗೀಕರಿಸಿ ಗ್ರಾಮ ಪಂಚಾಯಿತಿಯ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಹಸ್ತಾಂತರಿಸಿದರು. ಅಗತ್ಯ ಕೈಗವಸುಗಳನ್ನು ಸ್ಥಳೀಯ ಸುಮುಖ ಸರ್ಜಿಕಲ್ಸ್ ಸಂಸ್ಥೆಯ ಬಿ. ಎಸ್. ಸುರೇಶ ಶೆಟ್ಟಿ ಒದಗಿಸಿದ್ದರು. ರಾಣಿಬಲೆ ಒಕ್ಕೂಟ ಉಪಾಹಾರದ ವ್ಯವಸ್ಥೆ ಮಾಡಿತ್ತು. ರಾಣಿಬಲೆ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಎಫ್‌ಎಸ್‌ಎಲ್ ಇಂಡಿಯ ಕ್ಷೇತ್ರ ಯೋಜನಾಧಿಕಾರಿ ಮಂಜೇಶ್ ಬಿ. ಎಂ, ಸಂಯೋಜಕ ಮಂಜುನಾಥ ಬಿ, ಕರಾವಳಿ ಕಾವಲು…

Read More