ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸರಣಿ ಕಾರ್ಯಕ್ರಮ ಸ್ವಚ್ಛತಾ ಆಂದೋಲನದ 17ನೇ ದಿನ ಸ್ಥಳೀಯ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಮತ್ತು ಗ್ರಾಮಸ್ಥರು ಏಕಕಾಲದಲ್ಲಿ ಸೌಪರ್ಣಿಕಾ ನದಿತೀರ, ಸಲಗೇರಿ, ದಳಿ ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. 18ನೇ ದಿನದ ಸ್ವಚ್ಛತಾ ಆಂದೋಲನ ಇಲ್ಲಿನ ಮಾರಿಕಟ್ಟೆ, ಶ್ರೀ ಮೂಕಾಂಬಿಕಾ ಪ್ರೌಢಶಾಲಾ ಆವರಣ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರ ಸ್ವಚ್ಛಗೊಳಿಸಲಾಯಿತು. ಒಂದು ಹಂತದ ಸರಣಿ ಸ್ವಚ್ಛತಾ ಅಭಿಯಾನ ಮುಗಿದಿದ್ದು, ಮುಂದಿನ ದಿನಗಳಲ್ಲಿ ಪ್ರತೀ ಮಾತ್ರ ವಿವಿದೆಡೆ ಸ್ವಚ್ಛತಾ ಆಂದೋಲನ ಮುಂದುವರಿಯಲಿದೆ ಎಂದು ಅಭಿವೃದ್ಧಿ ಸಮಿತಿಯ ಡಾ. ಶ್ರೀಕಾಂತ್ ತಿಳಿಸಿದರು. ಅಲ್ಲದೇ ಗ್ರಾಮದ ಪ್ರತಿಯೊಬ್ಬರೂ ಕೂಡ ಈ ಅಭಿಯಾನದಲ್ಲಿ ಪಾಲ್ಗೊಂಡು ಕಸಮುಕ್ತ ಕೊಲ್ಲೂರು ನಿರ್ಮಾಣಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ , ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17ರಿಂದ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಸೇನಾ ರ್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ರ್ಯಾಲಿಯಲ್ಲಿ ಭಾಗವಹಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಂಟ್ವಾಡಿ ಬಾಲ ವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘಟನೆ, ಸೇನಾಪುರ ಗ್ರಾಮಸ್ಥರ ಆಶ್ರಯದಲ್ಲಿ ಬಂಟ್ವಾಡಿ ನಿವೃತ್ತ ಅಂಗವಾಡಿ ಶಿಕ್ಷಕಿ ಲೀಲಾವತಿ ನಾರಾಯಣ ಹೆಬ್ಬಾರ್ ಅವರಿಗೆ ಇಲ್ಲಿನ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನ ನಡೆಯಿತು. ಸನ್ಮಾನ ಸ್ವಿಕರಿಸಿ ಮಾತನಾಡಿದ ನಿವೃತ್ತ ಬಂಟ್ವಾಡಿ ಅಂಗನವಾಡಿ ಶಿಕ್ಷಕಿ ಲೀಲಾವತಿ ನಾರಾಯಣ ಹೆಬ್ಬಾರ್, ಮಾತೃಭಾಷೆ ಹಾಗೂ ಅಂಗನವಾಡಿಯಲ್ಲಿ ಕಲಿತ ಮಕ್ಕಳು ಜೀವನದಲ್ಲಿ ಎಂದೂ ಸೋಲೋದಿಲ್ಲ. ಮನೆಯ ಮಕ್ಕಳಿಗೆ ತಾಯಿಯಾಗುವ ಭಾಗ್ಯ ಎಲ್ಲರಿಗೂ ಸಿಗುತ್ತಿದ್ದು, ಸಮಾಜದ ಮಕ್ಕಳಿಗೆ ತಾಯಿಯಾಗುವ ಭಾಗ್ಯ ಅಂಗನವಾಡಿ ಕೊಡುತ್ತದೆ. ಯಾವುದೇ ಕೆಲಸವಿರಲಿ ಶ್ರದ್ಧೆ ನಿಷ್ಠೆಯಿಂದ ದುಡಿದರೆ ಸಮಾಜ ಗುರುತಿಸುತ್ತದೆ ಎಂದು ಹೇಳಿದರು. ಬಂಟ್ವಾಡಿ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಬಿ.ಅರುಣ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದ್ಮಾವತಿ ಜಗನ್ನಾಥ ಶ್ಯಾನುಭಾಗ್ ಸನ್ಮಾನಿಸಿದರು. ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನಿವೃತ್ತ ಅಂಗನವಾಡಿ ಶಿಕ್ಷಕಿ ಲೀಲಾವತಿ ಅವರಿಗೆ ಉಡಿ ತಂಬಿ ಬಾಗೀನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಭಯ ತಿಟ್ಟುಗಳ ಅಪ್ರತಿಮ ಸ್ತ್ರೀ ಪಾತ್ರದಾರಿ ವಂಡ್ಸೆ ನಾರಾಯಣ ಗಾಣಿಗ (84) ಅಲ್ಪಕಾಲದ ಅಸೌಖ್ಯದಿಂದ ವಂಡ್ಸೆಯ ಸ್ವಗೃಹದಲ್ಲಿ ಸೋಮವಾರ ನಿಧನರಾದರು. ಉತ್ತರ ಕನ್ನಡ, ದಕ್ಷಿಣ ಕನ್ನಡ, ತೆಂಕು ತಿಟ್ಟುಗಳಲ್ಲಿ ಮೆರೆದ ಏಕೈಕ ಕಲಾವಿದ ನಾರಾಯಣ ಗಾಣಿಗ 40 ವರ್ಷ ನಿರಂತರ ವೃತ್ತಿ ಕಲಾವಿದರಾಗಿ ಉತ್ತಂಗಕ್ಕೆ ಏರಿದ್ದರು. 12ನೇ ವಯಸ್ಸಿಗೆ ಬಣ್ಣಹಚ್ಚಿದ ಗಾಣಿಗ ಸ್ತ್ರೀ ಪಾತ್ರದ ಮೂಲಕ ಹಲವು ಪಾತ್ರಗಳಿಗೆ ರಂಗದಲ್ಲಿ ಜೀವ ತುಂಬಿದರು. ವಂಡ್ಸೆ ಶೇಷ ಗಾಣಿಗ ಹಾಗೂ ಪಣಿಯಮ್ಮ ಪುತ್ರನಾಗಿ 1937ರಲ್ಲಿ ಜನಿಸಿದ ಗಾಣಿಗರು ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಗಾಣಿಗ ಸಹೋದರ ಮುತ್ತ ಗಾಣಿಗ ಯಕ್ಷಗಾನ ಪ್ರವೇಶಕ್ಕೆ ಪ್ರೇರಣೆ. ಮಾರಣಕಟ್ಟೆ ಮೇಳದಲ್ಲಿ ಕೋಡಂಗಿ ವೇಷ ಮೂಲಕ ರಂಗಸ್ಥಳ ಪ್ರವೇಶಿಸಿದ ಗಾಣಿಗ ಮತ್ತೆ ಹಿಂದಕ್ಕೆ ತಿರುಗಿ ನೋಡಲಿಲ್ಲ. ವೀರಭದ್ರ ನಾಯ್ಕ್ ಮತ್ತು ಮಟ್ಪಾಡಿ ಶ್ರೀನಿವಾಸರಂತಹ ಮೇರು ಕಲಾವಿದರ ಶಿಷ್ಯರಾದ ಗಾಣಿಗರು ಉಭಯತಿಟ್ಟುಗಳ ಪ್ರಸಿದ್ಧ ಸ್ತ್ರೀ ಪಾತ್ರಧಾರಿಯಾಗಿ ರಂಗದಲ್ಲಿ ಮಿಂಚು ಹರಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ಕೃಷಿ ಇಲಾಖೆ ಮತ್ತು ಬೈಂದೂರು ರೈತ ಸಂಪರ್ಕ ಕೇಂದ್ರದ ಆಶ್ರಯದಲ್ಲಿ 2020-21ನೇ ಸಾಲಿನ ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮದಡಿ ಸೋಮವಾರ ಆರಂಭವಾದ ಎರಡು ದಿನಗಳ ರೈತ ತರಬೇತಿ ಕಾರ್ಯಕ್ರಮ ಇಲ್ಲಿನ ಮರವಂತೆ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಗೃಹದಲ್ಲಿ ನಡೆಯಿತು. ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಬಾಬು ಶೆಟ್ಟಿ, ಕೃಷಿ ಲಾಭದಾಯಕ ಅಗಬೇಕೆಂದಿದ್ದರೆ ಮಿತವ್ಯಯದಲ್ಲಿ ಹೆಚ್ಚು ಉತ್ಪಾದನೆ ಆಗಬೇಕು. ಹಾಗಾಗಬೇಕಾದರೆ ರೈತರು ಕೃಷಿ ಸಂಬಂಧಿ ಅರಿವು ಪಡೆದು ಕೃಷಿ ಮಾಡಬೇಕು. ಜಿಲ್ಲೆಯಲ್ಲಿ ಹಿಂದಿದ್ದ ಸಾಂಪ್ರದಾಯಿಕ ಜಲ ಸಂವರ್ಧನ ಮೂಲಗಳು ನಶಿಸಿರುವುದರಿಂದ ಕೃಷಿಗೆ ಮತ್ತು ಕುಡಿಯಲು ನೀರಿನ ಅಭಾವ ಕಾಡುತ್ತಿದೆ. ಜನರು ನೀರು ಪೋಲಾಗುವುದನ್ನು ತಡೆಗಟ್ಟಿ, ಮಳೆಗಾಲದಲ್ಲಿ ನೀರು ಇಂಗಿಸುವ ಮೂಲಕ ನೀರಿನ ಕೊರತೆಯನ್ನು ನಿಭಾಯಿಸಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ಪರಶುರಾಮ ಸ್ವಾಗತಿಸಿದರು. ಗಾಯತ್ರಿದೇವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಹ ಪ್ರಾಧ್ಯಾಪಕರಾದ ಗಣಪತಿ ಭಟ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಮಾತನಾಡಿ, ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಗಣಪತಿ ಭಟ್ವರನ್ನು ನಾನು ಹಿಂದಿನಿಂದಲೂ ಗಮನಿಸಿದಂತೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಕಷ್ಟಕರ ದಿನವಾದ ಕೊರೋನಾ ಸಂದರ್ಭದಲ್ಲಿಯೂ ಕೂಡ ತಂತ್ರಜ್ಞಾನದ ಆನ್ಲೈನ್ ತರಗತಿಯನ್ನು ನಿರ್ವಹಣೆ ಮಾಡಿರುವುದನ್ನು ನೆನಪಿಸಿಕೊಂಡರು. ವಿದ್ಯಾರ್ಥಿಗಳಿಗೆ ಒಳ್ಳೆಯ ಉಪನ್ಯಾಸಕನಾಗಿ ಕನ್ನಡ ಜ್ಞಾನಧಾರೆಯೆರೆಯುವಲ್ಲಿ ಪ್ರಯತ್ನಶೀಲರಾಗಿದ್ದರೆಂದು ಎಂದು ಹೇಳಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರೇಖಾ. ವಿ. ಬನ್ನಾಡಿ ಮಾತನಾಡಿ, ಸಹೋದ್ಯೋಗಿಯಾದ ಗಣಪತಿ ಭಟ್ರವರು ಪ್ರತಿದಿನ ದೂರದ ಊರಿನಿಂದ ಬರುತ್ತಿದ್ದರೂ ಕೂಡ ಹಾಗೆ 20 ವರ್ಷ ನಮ್ಮ ಜೊತೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಸಹಕಾರ ಮನೋಭಾವವನ್ನು ತೋರಿರುವುದನ್ನು ಸ್ಮರಿಸಿಕೊಂಡರು. ಸನ್ಮಾನಿತರಾದ ಗಣಪತಿ ಭಟ್ ಮಾತನಾಡಿ, ತಮ್ಮ ಕಲಿಕೆಯ ಕಾಲಘಟ್ಟವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ನೆಲ್ಲಿಕಟ್ಟೆ ಕತ್ಕೊಡು ಎಂಬಲ್ಲಿ ಕರ್ನಾಟಕ ದಲಿತ ಸಂಘ ಸಮಿತಿ ಭೀಮ ಘರ್ಜನೆಯ ನೂತನ ಗ್ರಾಮ ಶಾಖೆ ಮತ್ತು ನಮ್ಮ ಭೂಮಿ ನಮ್ಮ ಹೋರಾಟದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು, ಮನೆ, ಮನೆಯಲ್ಲೂಬಾಬಾ ಸಾಹೇಬ್ ಅವರ ಹೋರಾಟದ ಕ್ರಾಂತಿ ಜ್ಯೋತಿ ಬೆಳಗಬೇಕು, ಆ ಮೂಲಕ ಈ ಭಾಗದಲ್ಲಿ ಒತ್ತುವರಿಯಾದ ದಲಿತರ ಭೂಮಿಯನ್ನ ಕಾನೂನು ಮೂಲಕ ಮರಳಿ ಪಡೆಯಬೇಕು ಎಂದರು ಗ್ರಾಮ ಶಾಖೆಯ ಪದಾಧಿಕಾರಿಯನ್ನ ಆಯ್ಕೆ ಮಾಡಿ ಸಂಘಟನೆಯ ದ್ವಜವನ್ನ ಅವರಿಗೆ ಹಸ್ತಾಂತರಿಸಿ ಪ್ರಮಾಣ ವಚನ ನೀಡಲಾಯಿತು. ಮುಖ್ಯ ಅಥಿತಿಯಾಗಿ ಸಂಘಟನೆಯ ಕಲಾ ಮಂಡಳಿಯ ವಸಂತ ವಂಡ್ಸೆ ಅಂಬೇಡ್ಕರ್ ಬಾವ ಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಕ್ರಾಂತಿ ಗೀತೆಯ ಹಾಡಿ ಮಾತಾಡಿದರು. ಕಾರ್ಯಕ್ರಮದಲ್ಲಿ ಚಂದ್ರಮ ತಲ್ಲೂರು, ರತ್ನಾಕರ ಕುಂದಾಪುರ ಸುರೇಶ್ ಬಾಬು, ಗುರು ಜನ್ಸಾಲೆ ರಾಮ ಬೆಳ್ಳಾಲ ಹಾಗೂ ನೂತನ ಶಾಖೆಯ ಸಂಚಾಲಕರಾದ ಗುರುರಾಜ ಕತ್ಕೂಡು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋರ್ಗಿ ಗ್ರಾಮದಲ್ಲಿ ಮೇಯಲು ಬಿಟ್ಟ ಜಾನುವಾರುಗಳನ್ನು ಕದ್ದ ನಾಲ್ವರು ಗೋ ಕಳ್ಳರನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ಧಾರೆ. ಶಂಕರ ಕುಲಾಲ್, ಅಶ್ಪಕ್ ಸಿರಾಜ್, ಸನ್ನಿ ಪೌಲೋಸ್ ಹಾಗೂ ಅಶ್ವಕ್ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬೈಂದೂರು ಸಮೀಪ ಚೆಕ್ ಪೋಸ್ಟ್ ಬಳಿ ಭಾನುವಾರ ಬೆಳಿಗ್ಗೆನ ಸುಮಾರಿಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕಿನ ಕೊರ್ಗಿಯ ಶರತ್ ಶೆಟ್ಟಿ ಎಂಬವರ ಮನೆಯ ಮೂರು ಜಾನುವಾರುಗಳನ್ನು ಮೇಯಲು ಬಿಟ್ಟ ಸಂದರ್ಭ ಕಳವು ಮಾಡಿದ ಬಗ್ಗೆ ಜ.22ರಂದು ಕಂಡ್ಲೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಕಳವಾದ ದನಗಳಲ್ಲಿ ಎರಡು ಗಬ್ಬದ ಹಸುಗಳು ಸೇರಿ ಒಟ್ಟು ಮೂರು ಜಾನುವಾರುಗಳಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು ಒಂದು ವಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಪಿಎಸ್ಐ ರಾಜಕುಮಾರ್, ಸುಧಾ ಪ್ರಭು, ಸಿಬ್ಬಂದಿಗಳಾದ ಮಧು, ಆನಂದ್, ಸತೀಶ್, ನಾಗೇಶ್, ರಮೇಶ್, ಅನಿಲ್, ಶ್ರೀಕಾಂತ್, ಚಿದಾನಂದ ಮೊದಲಾದವರು ಈ…
ಕುದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮುಖ್ಯರಸ್ತೆಯ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮನುಷ್ಯನಿಗೆ ಆರೋಗ್ಯ ಮುಖ್ಯ. ಮನುಷ್ಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ದೊರೆಯುವಂತಾಗಬೇಕು ಎಂಬ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರತಿಯೊಂದು ಗ್ರಾಮೀಣ ಪ್ರದೇಶಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಸರಕಾರ ಅನುಮತಿ ನೀಡುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ, ಶಾಂತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಸರ್ವತೋಮುಖ ಅಭಿವೃದ್ದಿ ಸಾಮಾಜಿಕ ಧಾರ್ಮಿಕ, ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ, ಅಭಿವೃದ್ಧಿಯ ಮೂಲಕ ಸಾಧ್ಯವಿದೆ. ಮರಾಠಿ ಸಮುದಾಯ ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಸಮೃದ್ಧಿಯನ್ನು ಹೊಂದಿದ್ದರು, ಇದುವರೆಗೂ ಆರ್ಥಿಕವಾಗಿ ತನ್ನದೇ ಆದ ಸಂಸ್ಥೆಯನ್ನ ಕಟ್ಟಿಕೊಳ್ಳುವುದರಲ್ಲಿ ಹಿಂದುಳಿದಿದ್ದು, ಸಿದ್ಧೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಜಡ್ಕಲ್ ಸಮುದಾಯದ ಅಭಿವೃದ್ದಿಗೆ ಮತ್ತು ಗಟ್ಟಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಜಡ್ಕಲ್ನಲ್ಲಿ ಸಿದ್ಧೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಪ್ರಥಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮಾತನಾಡಿ, ಮರಾಠಿ ಸಮುದಾಯದವರ ಕನಸಿನ ಕೂಸು, ಸುಮಾರು ಮೂವತ್ತು ವ?ಗಳ ಆಶಯ, ಸಹಕಾರಿ ಸಂಸ್ಥೆಯನ್ನು ಹುಟ್ಟುಹಾಕುವುದಾಗಿತ್ತು. ಅದು ಇಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿದೆ. ತನ್ಮೂಲಕ ಮರಾಠಿಸಮುದಾಯದವರು ಒಗ್ಗಟ್ಟು ಮತ್ತು ಆರ್ಥಿಕ ಸ್ಥಿತಿಯ ಅರಿವಿನ ಅಭಿವೃದ್ಧಿಯ ಸಂಕೇತವನ್ನು ಇದು ಸಾರಿದೆ ಮತ್ತು ಸಮುದಾಯದ ಅಭಿವೃದ್ಧಿಗೆ ಇದು…
