ಕುಂದಾಪುರ: ಜೇಸಿಐ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ದಿನೇಶ್ ಗೋಡೆ ಅವರಿಗೆ ’ಕಮಲಪತ್ರ’ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೇಸಿ ವಲಯ ಉಪಾಧ್ಯಕ್ಷ ಸುಹಾನ್ ಸುಸ್ತಾನ, ವಲಯ ನಿರ್ದೇಶಕ ರತ್ನಾಕರ ಕೆ., ಡಾ| ಕೃಷ್ಣರಾವ್ ಎಚ್. ವಿ., ನಿವೃತ್ತ ಸೈನಿಕ ಅನಂತಪದ್ಮನಾಭ, ಜೇಸಿಐ ಕುಂದಾಪುರದ ಅಧ್ಯಕ್ಷ ಚಂದ್ರ ಇಂಬಾಳಿ, ಕಾರ್ಯದರ್ಶಿ ಅವಿನಾಶ್ ರೈ, ನಿಕಟಪೂರ್ವಾಧ್ಯಕ್ಷ ರವಿರಾಜ್ ಆಚಾರ್, ಸಪ್ತಾಹ ಸಭಾಪತಿ ವಿಷ್ಣು ಕೆ. ಬಿ, ಜೇಸಿರೆಟ್ ಅಧ್ಯಕ್ಷೆ ರೂಪಾ ಚಂದ್ರ ಇಂಬಾಳಿ, ಜೆಜೇಸಿ ಅಧ್ಯಕ್ಷೆ ದೀಕ್ಷಿತಾ ಗೋಡೆ ಇನ್ನಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪುರ: ನಾವಡರಕೇರಿ ನಿವಾಸಿ ವಿ. ಪರಮೇಶ್ವರ ನಾವಡ(80) ಸ್ವಗೃಹದಲ್ಲಿ ಅ.29ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಪರಿಸರದಲ್ಲಿ ಪೌರೋಹಿತ್ಯವನ್ನು ನಡೆಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಗೆಲಾಕ್ಸಿ ಸ್ಪೋರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ನಾವಡ ಸೇರಿದಂತೆ ನಾಲ್ವರು ಪುತ್ರರು, ಇರ್ವರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ. ಕಿಶೋರ್ಕುಮಾರ್, ಭಾರತೀಯ ಜೇಸಿಐನ ವಲಯದ ಪದಾಧಿಕಾರಿಗಳು, ಹತ್ತು ಹಲವು ಸಂಘ ಸಂಸ್ಥೆ, ಸಂಘಟನೆಯ ಪ್ರಮುಖರು ಮೃತರ ಅಂತಿಮ ದರ್ಶನ ಪಡೆದರು.
ಗಂಗೊಳ್ಳಿ: ರಾಮಾಯಣ ಮತ್ತು ಮಹಾಭಾರತ ಎರಡೂ ಕೃತಿಗಳೂ ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಯನ್ನು ಅತ್ಯಂತ ಅಮೋಘವಾಗಿ ಮತ್ತು ಸಮರ್ಥವಾಗಿ ಜಗತ್ತಿಗೆ ಸಾರಿ ಹೇಳಿದಂತಹ ಅತ್ಯಮೂಲ್ಯ ಕೃತಿಗಳು.ಅವುಗಳು ಭಾರತದ ಹೆಮ್ಮೆ. ಅವುಗಳನ್ನು ಸೃಷ್ಟಿಸಿದ ಮಹಾತ್ಮರನ್ನು ನಾವು ಸ್ಮರಿಸಿಕೊಳ್ಳಬೇಕಾದ್ದು ನಮ್ಮ ಕರ್ತವ್ಯ ಎಂದು ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ವಾಲ್ಮೀಕಿ ಜಯಂತಿಯ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಅಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾಲ್ಮೀಕಿ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ವಾಲ್ಮೀಕಿ ಮಹರ್ಷಿಗಳ ಮೂಲಗಳ ಬಗೆಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರು ರಾಮಾಯಣದಲ್ಲಿ ಪ್ರತಿಪಾದಿಸಿರುವ ಉತ್ತಮ ವಿಚಾರಗಳ ಬಗೆಗೆ ಆಸಕ್ತಿಯನ್ನು ತೋರಬೇಕಿದೆ ಜೊತೆಗೆ ಆ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರ್ವಹಿಸಬೇಕಿದೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಬೇಕಿವೆ.ವಾಲ್ಮೀಕಿಯನ್ನು ಒಂದು ನಿರ್ದಿಷ್ಠ ವರ್ಗಕ್ಕೆ ಅಥವಾ ಧರ್ಮಕ್ಕೆ ಸೇರಿದ ವ್ಯಕ್ತಿಯೆಂದು ಮಾತ್ರ ಪರಿಗಣಿಸುವುದು ನಾವು ಅವರಿಗೆ ಮಾಡುವ ಅವಮಾನ. ಎಂದು ಅವರು ಹೇಳಿದರು. ಸರಸ್ವತಿ…
ಗಂಗೊಳ್ಳಿ: ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ (ರಿ),ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹನ್ನೊಂದನೆ ವರುಷದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಇತ್ತೀಚೆಗೆ ಮೇಲ್ ಗಂಗೊಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು. ಮಂಕಿ ಗುಜ್ಜಾಡಿಯ ಕೃಷ್ಣಮೂರ್ತಿ ಭಟ್ ಮತ್ತು ಶ್ರೀಧರ ಭಟ್ ಇವರುಗಳು ಪೌರೋಹಿತ್ಯ ವಹಿಸಿದ್ದರು. ಸ್ಥಳೀಯ ಭಕ್ತಾಧಿಗಳಿಂದ 26 ಕಲಶ ಪೂಜೆ ನಡೆಯಿತು. ವರದಿ : ನರೇಂದ್ರ ಎಸ್ ಗಂಗೊಳ್ಳಿ
ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ನಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ನಡೆಯಿತು. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕುಂದಾಪುರ ತಾಲೂಕು ಇದರ ಪ್ರಭಾರ ಸಹಾಯಕ ನಿರ್ದೇಶಕ, ವಂಡ್ಸೆ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್.ವಿ.ಇಬ್ರಾಹೀಂಪುರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ ಆತ್ರಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕೆ.ನಾಯ್ಕ್, ಗುಂಡು ಪೂಜಾರಿ ಹರವರಿ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ.ಕಾರ್ಯದರ್ಶಿ ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ, ವಂದಿಸಿದರು.
ಕುಂದಾಪುರ: ಚಿಕ್ಕನ್ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ವಿದಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ. ಕಿಶೋರ್ ಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲಿಜ್ದೇವಳದ ಪ್ರದಾನ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ, ಬಿಜೆಪಿ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ರವಿರಾಜ್ ರವಿರಾಜ್ ಖಾರ್ವಿ, ಕೆ. ಬಿ. ಪ್ರಕಾಶ್, ಸೀತಾರಾಮ ಹೇರಿಕುದ್ರು, ವೀಣಾ ಪ್ರಕಾಶ್, ಕೃಷ್ಣಮೂರ್ತಿ, ರಾಜಾ ಮಠದಬೆಟ್ಟು, ಶ್ರೀಧರ ಸುವರ್ಣ, ಚರಣ ಸುವರ್ಣ ಇನ್ನಿತರರು ಉಪಸ್ಥಿತರಿದ್ದರು.
ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಶ್ರೀಧರ ಶೆಣವ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಹಾಗೂ ಲಯನೆಸ್ ಕ್ಲಬ್ಗೆ ಪತ್ನಿ ಜ್ಯೋತಿ ಶೆಣವರೊಂದಿಗೆ ಅಧಿಕೃತ ಭೇಟಿ ನೀಡಿ, ಸಂಜೆ ನಾಗೂರು ಆಕಾಶ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. 210 ರಾಷ್ಟ್ರಗಳಲ್ಲಿ 14.58ಕ್ಷ ಸದಸ್ಯರನ್ನು ಹೊಂದಿದ ಸೇವಾ ಸಂಸ್ಥೆ ಈಗ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ಶೇ.೬೫ರಷ್ಟು ಯುವಜನರನ್ನು ಹೊಂದಿದ ನಮ್ಮ ದೇಶದಲ್ಲಿ ಸೇವಾ ಮನೋಭಾವನೆಯಿರುವ ಯುವಕರನ್ನು ಕ್ಲಬ್ಗೆ ಸೇರಿಸಿಕೊಂಡು ಗ್ರಾಮೀಣಾಭಿವೃದ್ಧಿಯತ್ತ ಗಮನ ಹರಿಸಬೇಕು. ಸೇವೆಯೇ ನಮ್ಮೆಲ್ಲರ ಪ್ರಮುಖ ಅಜೆಂಡವಾಗಬೇಕು. ಸಹೋದರತೆಯ ಮನೋಭಾವನೆಯಿಂದ ಎಲ್ಲರೂ ಪರಸ್ಪರ ಸಂತೋಷ ಹಂಚಿಕೊಂಡು ಜೀವನ ಸಾಗಿಸುವಂತಾಗಬೇಕು ಎಂದರು. ಘಟಕದ ಅಧ್ಯಕ್ಷ ಜಿ.ಗೋಕುಲ್ ಶೆಟ್ಟಿ ಅಧ್ಯಕ್ಷತೆವಹಿಸಿ ಸ್ವಾಗತಿಸಿದರು. ಉಪ್ಪುಂದ ಮತ್ತು ಖಂಬದಕೋಣೆ ಸರಕಾರಿ ಪ್ರೌಢಶಾಲೆಗೆ ತಲಾ ರೂ. ಒಂದು ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್…
ಬೈಂದೂರು: ಜೀವನಾನುಭವವೆಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನವಾಗಿರುತ್ತದೆ. ಏನಾದರೂ ವಿಶೇಷವಾದುದನ್ನು ಸಾಧಿಸಬೇಕೆಂಬ ಛಲ ಇದ್ದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಎಲೆಮರೆಯ ಕಾಯಿಗಳಂತೆ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಹಿರಿಯರನ್ನು ಗೌರವಿಸಿ, ಅವರ ತತ್ವ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯಲ್ಲಿ ನಾಡದ ಕೊರಗರ ಕಾಲೋನಿಯ ಕೊರಗ ಸಮುದಾಯ ಭವನದಲ್ಲಿ ನಡೆದ ’ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಸಾಪ ಬೈಂದೂರು ಹೋಬಳಿ ಘಟಕದ ಅಧ್ಯಕ್ಷ ಡಾ. ಎನ್. ಸುಬ್ರಹ್ಮಣ್ಯ ಭಟ್ ಮಾತನಾಡಿ, ಆಧುನಿಕತೆಯ ಗುಂಗಿನಲ್ಲಿ ನಮ್ಮತನವನ್ನು ಕಳೆದುಕೊಳ್ಳುವ ಆತಂಕದ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ನಮ್ಮ ಸಂಪ್ರದಾಯ, ಸಂಸ್ಕಾರಗಳು ಜೀವಂತವಾಗಿರುವುದು ಸಂತಸದ ವಿಚಾರ. ಸಾಧಕರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಅವರ ವಿಚಾರಧಾರೆ ಹಾಗೂ ಸಾಧನೆಯನ್ನು ದಾಖಲಿಸಬೇಕಾಗಿದೆ. ಇಂತಹ ಪ್ರಯತ್ನಗಳಿಂದ ಕನ್ನಡ ನಾಡು ನುಡಿಯನ್ನು ಸಂರಕ್ಷಿಸಿದಂತಾಗುತ್ತದೆ. ಮಾನವರೆಲ್ಲರೂ ಒಂದೇ ಎಂಬಂತಹ ಸರ್ವಸಮಾನತೆಯ ತಳಹದಿಯಲ್ಲಿ ನಾವೆಲ್ಲ…
ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಭಂಡಾರಿ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉಡುಪಿ ಸತೀಶ್ ಭಂಡಾರಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಬೈಂದೂರು ವಲಯ ಭಂಡಾರಿ ಸಮಾಜ ಸಂಘದ ದ್ವಿತೀಯ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಂಘಟನೆಯನ್ನು ಬಲಪಡಿಸುವುದರ ಮೂಲಕ ಸಮುದಾಯದ ಮಕ್ಕಳಿಗೆ ಶಿಕ್ಷಣ, ಉದ್ಯೋಗಗಳ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಟಿವಿ, ಮೊಬೈಲ್ಗಳಿಂದ ಇಂದು ಮಕ್ಕಳ ಶಿಕ್ಷಣ ಹಾಳಾಗುತ್ತಿದೆ. ಇದರ ಬದಲಾಗಿ ಶಿಕ್ಷಣದ ಜೊತೆ ಸಾಹಿತ್ಯ, ಕಲೆ, ಕ್ರೀಡಾ ಕ್ಷೇತ್ರಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ವಲಯದ ಅಧ್ಯಕ್ಷ ಬಾಬು ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ, ನಾಡಾ ಗ್ರಾಪಂ ಸದಸ್ಯೆ ಮನೋರಮಾ ರಾಜು ಭಂಡಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿದ ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೆಲವರನ್ನು ವಶಕ್ಕೆ ಪಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಳೆದ 2-3ತಿಂಗಳುಗಳಿಂದ ಹಿಂದೂ ಧರ್ಮಕ್ಕೆ ಸೇರಿದ ಕೆಲವು ವ್ಯಕ್ತಿಗಳನ್ನು ಕರೆದೊಯ್ದು ಕೋಡಿ ಕಿನಾರೆ ಸಮೀಪದ ಮನೆಯೊಂದರಲ್ಲಿ ಮತಾಂತರಕ್ಕೆ ಪ್ರೇರಣೆ ನಿಡುತ್ತಿದ್ದಾರೆಂಬ ಗುಮಾನಿ ಹೊಂದಿದ್ದ ಸ್ಥಳೀಯ ಕೆಲವು ಯುವಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಳೆದ ವಾರವಷ್ಟೇ ಮತಾಂತರದ ವಿಚಾರಕ್ಕೆ ಸಣ್ಣ ಗಲಾಟೆಯೂ ನಡೆದಿತ್ತೆನ್ನಲಾಗಿದೆ. ಆದರೂ ಇದನ್ನು ಲೆಕ್ಕಿಸದೇ ಇಂದು ಬೆಳಿಗ್ಗೆ ಓಮ್ನಿ ಕಾರಿನಲ್ಲಿ ಬಂದ ಕ್ರೈಸ್ತ ಧರ್ಮಕ್ಕೆ ಸೇರಿದ ಒಂದಿಬ್ಬರು ಯುವಕರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿ ವಾಸವಿರುವ ವಿಜಾಪುರದ ನಿವಾಸಿಗಳೆನ್ನಲಾದ ಕೆಲವರನ್ನು ಖಾಯಿಲೆ ಗುಣಪಡಿಸುವ ಆಮಿಷವೊಡ್ಡಿ ಕರೆದೊಯ್ಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೊಂದು ತಂಡ ರಿಕ್ಷಾದಲ್ಲಿ ಕೋಡಿಗೆ ತೆರಳಿ ಅಲ್ಲಿ ನೆರೆದಿದ್ದ ಹಿಂದೂ…
