ಘಟನೆಯಲ್ಲಿ ಪತಿ ಸಾವು, ಪತ್ನಿಗೆ ಗಂಭೀರ ಗಾಯ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೂರ್ವ ಜರ್ಮನಿಯ ಮ್ಯೂನಿಚ್ ನಗರದಲ್ಲಿ ನಡೆದ ಗಲಾಟೆಯೊಂದರಲ್ಲಿ ವಿದೇಶಿಗನೋರ್ವನಿಂದ ಕುಂದಾಪುರ ಮೂಲದ ದಂಪತಿಗಳಾದ ಪ್ರಶಾಂತ್ ಬಸ್ರೂರು (47) ಹಾಗೂ ಸ್ಮಿತಾ ಬಸ್ರೂರು ಇರಿತಕ್ಕೊಳಗಾಗಿದ್ದು, ಘಟನೆಯಲ್ಲಿ ಪ್ರಶಾಂತ್ ಬಸ್ರೂರು ದಾರುಣವಾಗಿ ಮೃತಪಟ್ಟಿದ್ದಾರೆ. ಅವರ ಪತ್ನಿ ಸ್ಮಿತಾ ಬಸ್ರೂರು ಅವರಿಗೂ ಗಂಭೀರ ಹಲ್ಲೆಯಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಶಾಂತ್ ಹಾಗೂ ಸ್ಮಿತಾ ದಂಪತಿಗಳು ಜರ್ಮನಿಯ ಹಂಬರ್ಗ್ ನಗರದಲ್ಲಿ ವಾಸಿಸುತ್ತಿದ್ದು ಅಲ್ಲಿನ ಪೌರತ್ವ ಪಡೆದಿದ್ದರು. ಸ್ಮಿತಾ ಸಿದ್ಧಾಪುರದ ಡಾ. ಚಂದ್ರಮೌಳಿ ಎಂಬುವವರ ಪುತ್ರಿಯಾಗಿದ್ದು, ಮದುವೆಯ ಬಳಿಕ ಪತಿಯೊಂದಿಗೆ ಹಂಬರ್ಗ್ ನಗರದಲ್ಲಿ ವಾಸಿಸುತ್ತಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಶಾಂತ್ ಶಿವಮೊಗ್ಗ ಜಿಲ್ಲೆಯ ಹೊಸನಗರದವರಾಗಿದ್ದು, ಹತ್ತು ವರ್ಷದ ಹಿಂದೆ ಕುಂದಾಪುರದಲ್ಲಿ ಮನೆ ಖರೀದಿಸಿದ್ದರು. ಅವರ ತಾಯಿ ಕುಂದಾಪುರದಲ್ಲಿ ನೆಲೆಸಿದ್ದರು. ಸಹೋದರ ಪ್ರಭಾತ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದೆ. ಮುಂದಿನ ತಿಂಗಳು ೯ರಂದು ಅವರು ತಮ್ಮ ಹುಟ್ಟೂರಿಗೆ ಬರುವವರಿದ್ದು ಈ ನಡುವೆ ಪ್ರಶಾಂತ್ ಅವರ ತಾಯಿಯನ್ನು ಜಪಾನಿಗೆ ಕರೆದುಕೊಂಡು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (ನಮ್ಮಭೂಮಿ) ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಲ್ಪೆ ಬಂದರಿನಲ್ಲಿ ಮೀನುಗಾರರೊಂದಿಗೆ ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಮತದಾರರ ಸ್ವಾಭಿಮಾನಿ ಆಂದೋಲನ ನಡೆಯಿತು. ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ, ನನ್ನ ಮತ – ನನ್ನ ಹಕ್ಕು ಮುಂತಾದ ಸ್ಟಿಕ್ಕರ್ಗಳನ್ನು, ಬ್ಯಾಡ್ಜ್ಗಳನ್ನು ಹಾಗೂ ಮತದಾನದ ಮಹತ್ವವನ್ನು ಸಾರುವ ಪೋಸ್ಟರ್ಗಳೊಂದಿಗೆ ಮೀನುಗಾರರನ್ನು ಭೇಟಿಯಾಗಿ ಅವರೊಂದಿಗೆ ಮತದಾನದ ಪಾವಿತ್ರ್ಯತೆ, ಅದರ ಮಹತ್ವ ಹಾಗೂ ಮತದಾನ ಹೇಗಿರಬೇಕು ಎನ್ನುವ ವಿಷಯದ ಕುರಿತು ಮಾತುಕತೆ ನಡೆಸಿದರು. ಸುಮಾರು 400ಕ್ಕೂ ಹೆಚ್ಚು ಮೀನುಗಾರರು ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ ಎನ್ನುವ ಬ್ಯಾಡ್ಜ್ಗಳನ್ನು ಪಡೆದು ಹೆಮ್ಮೆಯಿಂದ ಧರಿಸಿ, ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ ಎಂದರು. ನಮ್ಮ ವಾಹನ ಬೇರೆ ಬೇರೆ ಕಡೆ ಹೋಗುತ್ತಿರುತ್ತದೆ, ಉಳಿದವರಿಗೂ ಇದರ ಬಗ್ಗೆ ಮಾಹಿತಿ ಹಂಚುತ್ತೇವೆ ಎಂದು 100ಕ್ಕೂ ಹೆಚ್ಚು…
ಚುನಾವಣಾ ಬಹಿಷ್ಕಾರ ಮುಂದಾದ ಜನ. ಮನವೊಲಿಸಿದ ಪೌರಾಡಳಿತ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ನಾಲ್ಕೈದು ಕುಟುಂಬಗಳು ಕಳೆದ ಕೆಲವಾರು ವರ್ಷದಿಂದ ತ್ಯಾಜ್ಯದ ಕೊಂಪೆ, ವಿಪರೀತ ವಾಸನೆಯಿಂದ ಬಾಯಿಗೆ ತುತ್ತು ಇಡೋದಕ್ಕೆ ಆಗದ ಸ್ಥಿತಿಯಲ್ಲಿ ಬದುಕುತ್ತಿತ್ತು. ಮನೆಯ ಪಕ್ಕದ ರಜಾಕಾಲುವೆ ಮೇಲೊಂದು ಸ್ಲ್ಯಾಬ್ ಹಾಕಿಸಿ, ಮನೆಯ ಮುಂದೆ ನಿಲ್ಲುವ ಕೊಳಚೆ ನೀರಿಗೆ ಶಾಶ್ವತ ಪರಿಹಾರ ನೀಡಿ ಎಂಬ ಅಹವಾಲಿಗೆ ಕ್ಯಾರೆ ಎನ್ನದ ಆಡಳಿತದ ವಿರುದ್ಧ ಆಕ್ರೋಶಗೊಂಡ ಕುಟುಂಬಗಳು ತಮ್ಮ ಬೇಡಿಕೆಗೆ ಆಗ್ರಹಿಸಿ ಚುನವಾಣೆ ಬಹಿಷ್ಕಾರಕ್ಕೆ ಮುಂದಾದ ಘಟನೆ ನಡೆದಿದೆ. ಕೊನೆಗೂ ಕುಂದಾಪುರ ಪುರಸಭೆಯ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸದ್ಯದ ಮಟ್ಟಿಗೆ ಸುಖಾಂತ್ಯ ಕಂಡಿದೆ. ಕುಂದಾಪುರ ಮದ್ದುಗುಡ್ಡೆ ನಾಲ್ಕೇ ವಾರ್ಡ್ನಲ್ಲಿ ಐದು ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬ ಒಂದಕ್ಕೊಂದು ತಾಗಿಕೊಂಡು ಮನೆಗಳಿವೆ. ಜೊತೆಗೆ ಒಂದು ದೈವಸ್ಥಾನವಿದೆ. ಇದರ ಹಿಂಭಾಗವೇ ರಾಜ ಕಾಲುವೆ ಹಾದು ಹೋಗಿದೆ. ಈ ಕಾಲುವೆಯಲ್ಲಿ ತ್ಯಾಜ್ಯಗಳು ನಿಂತು ಗಬ್ಬುವಾಸನೆ ಬೀರುತ್ತಿದೆ. ಸಾಕಷ್ಟು ವರ್ಷಗಳಿಂದ ಈ ವಾಸನೆ ಸಹಿಸಿಕೊಂಡು ಬದುಕುತ್ತಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಾಧನ ಕಲಾಸಂಗಮ ಸಂಸ್ಥೆಯು ಕಲಾಸಕ್ತರ ಆಸಕ್ತಿಗಳಿಗನುಗುಣವಾಗಿ ಹೊಸತನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಹೊಸ ವಿಷಯಗಳೊಂದಿಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಏಪ್ರಿಲ್ 1 ರಿಂದ ಮೇ4 ರವರೆಗೆ ನಾಲ್ಕು ಹಂತಗಳಲ್ಲಿ ವಿಶೇಷ ಸಾಧನ ಕಿಶೋರ ವಿಕಾಸ ಶಿಬಿರಗಳನ್ನು ಹಮ್ಮಿಕೊಂಡಿದೆ. ಮೊದಲ ಬಾರಿಗೆ ‘ರಂಗಾಂತರಂಗ’ ನಾಟಕ ತರಬೇತಿ ಶಿಬಿರವು ಹಮ್ಮಿಕೊಂಡಿದ್ದು, ಎಪ್ರಿಲ್ 1ರಿಂದ ಎಪ್ರಿಲ್ 9ರವರೆಗೆ 9 ದಿನಗಳ ಕಾಲ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 3ರ ವರೆಗೆ ಶಿಬಿರ ನಡೆಯಲಿದೆ. 9 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಹಾಡು, ಹರಟೆ, ರಂಗದ ಒಳ ಮತ್ತು ಹೊರಗಣ ಮಾಹಿತಿ, ಸಂಭಾಷಣೆ, ನಿರೂಪಣೆಗಳ ಜೊತೆಗೆ ನಾಟಕ ಸಿದ್ಧಪಡಿಸಿ ಪ್ರದರ್ಶನ ನೀಡಲಾಗುತ್ತದೆ. ಗರಿಷ್ಟ 30 ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ರಂಗ ತಜ್ಞ ಸಂತೋಷ್ ಕುಮಾರ್ ನಾಯಕ್ ಪಟ್ಲ ಹಾಗೂ ಸಂಯೋಜಕಿಯಾಗಿ ಮಧುಸ್ಮಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ (ರಿ) ನೈಕಂಬ್ಳಿ ಚಿತ್ತೂರು ಇದರ ನಾಲ್ಕನೇ ಅವಧಿಗೆ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ . ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರತಾಪ ಶೆಟ್ಟಿ , ಖಜಾಂಚಿಯಾಗಿ ಅಣ್ಣಪ್ಪ ಶೆಟ್ಟಿ, ಕಾರ್ಯಕಾರಿ ಸಮಿತಿಯಲ್ಲಿ ಅಶೋಕ ಕೊಡ್ಲಾಡಿ, ಉದಯ ಆಚಾರ್ಯ , ಚಂದ್ರ ಶೆಟ್ಟಿ, ದಿನೇಶ ಶೆಟ್ಟಿ, ನಾಗೇಂದ್ರ ಆಚಾರ್ಯ, ಮಂಜುನಾಥ ಪೂಜಾರಿ, ಅಕ್ಷಯ ಕುಮಾರ್, ಸಂತೋಷ ಶೆಟ್ಟಿ, ಪ್ರಶಾಂತ ಶೆಟ್ಟಿ, ನೀಲ ಕುಮಾರ್ ಹಾಗೂ ಇನ್ನು ಅನೇಕರು ಕಾರ್ಯ ಕಾರಿಣಿಯಲ್ಲಿದ್ದಾರೆ ಎಂದು ಪ್ರೇರಣಾ ವೇದಿಕೆ ಸಂಸ್ಥಾಪಕ ಕಾರ್ಯದರ್ಶಿ ನಾಗರಾಜ್ ನೈಕಂಬ್ಳಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಭಾರತದ ವೀರನಿಧಿಗೆ (ಭಾರತ್ ಕೆ ವೀರ್ ಫಂಡ್) ರೂ ೪೬,೧೮೯ ದೇಣಿಗೆ ನೀಡುವ ಮೂಲಕ ದೇಶದ ಶೌರ್ಯಾಳುಗಳ ಅಪ್ರತಿಮ ತ್ಯಾಗವನ್ನು ಗೌರವಿಸಿದುದಕ್ಕಾಗಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಕೇಂದ್ರ ಗೃಹ ಸಚಿವಾಲಯ ಅಭಿನಂದಿಸಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಂಭವಿಸಿದ ದೇಶದ ಸೈನಿಕರ ಬಲಿದಾನದಿಂದ ರಾಷ್ಟ್ರಭಕ್ತಿ ಪ್ರೇರಿತರಾದ ಕಾಲೇಜಿನ ವಿದ್ಯಾಥಿಗಳು ಕಾಲೇಜಿನಲ್ಲಿ ಆಹಾರೋತ್ಸವ ನಡೆಸುವ ಮೂಲಕ ಮತ್ತು ಊರಿನ ವಾರದ ಸಂತೆಯಲ್ಲಿ ವಿವಿಧ ಖಾದ್ಯ ಸಾಮಗ್ರಿಗಳನ್ನು ಮಾರುವ ಮೂಲಕ ಗಳಿಸಿದ ಲಾಭವನ್ನು ಸೈನಿಕರ ನಿಧಿಗೆ ಕಳುಹಿಸಿಕೊಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಗೃಹ ಮಂತ್ರಾಲಯ ತನ್ನೆಲ್ಲ ಸಶಸ್ತ್ರಬಲ ಕುಟುಂಬದ ಪರವಾಗಿ ೨೧ರಂದು ನೀಡಿದ ದೃಢೀಕರಣ ಪತ್ರದಲ್ಲಿ ಕಾಲೇಜಿನ ಈ ಕೊಡುಗೆಯನ್ನು ಪ್ರಶಂಸಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಬಾರಿಯ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಯನ್ನು ಖ್ಯಾತ ಸಾಹಿತಿ ಡಾ. ಗಾಯತ್ರೀ ನಾವಡರಿಗೆ ನೀಡಿ ಗೌರವಿಸಿದೆ. ಸಾಹಿತ್ಯ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ೨೫,೦೦೦ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿತ್ತು. ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಒಬ್ಬ ಸ್ತ್ರೀವಾದಿ ಚಿಂತಕಿಯಾಗಿ, ಸಂಸ್ಕೃತಿ ವಿಮರ್ಶಕಿಯಾಗಿ, ಜಾನಪದ ವಿದ್ವಾಂಸರಾಗಿ ಡಾ. ಗಾಯತ್ರೀ ನಾವಡರದು ವಿಶಿಷ್ಟ ಹೆಸರು. ‘ಕಾಡ್ಯನಾಟ’. ‘ಭಾರತೀಯ ಸ್ತ್ರೀವಾದ’, ಮಹಿಳಾ ಸಾಂಸ್ಕೃತಿಕ ಸಬಲೀಕರಣ, ಸ್ತ್ರೀವಾದಿ ಜಾನಪದದಂತಹ ಹೊಸ ಶೋಧಗಳನ್ನು, ಪರಿಕಲ್ಪನೆಗಳನ್ನು ಸಂಶೋಧನ ಲೋಕಕ್ಕೆ ನೀಡಿದವರು. ಬಂಧುತ್ವ ವ್ಯವಸ್ಥೆ ಮತ್ತು ಪಠ್ಯದ ಅಂತರ್ ಸಂಬಂಧವನ್ನು ಕುರಿತು ಸಂಕಥನವನ್ನು ಕಟ್ಟಿಕೊಟ್ಟವರು. ಕರಾವಳಿಯ ಮಾತೃರೂಪಿ ಸಂಸ್ಕೃತಿಯ ತುಳು, ಕನ್ನಡ ಮೌಖಿಕ ಪರಂಪರೆಯ ಬಗೆಗೆ ಸ್ತ್ರೀವಾದಿ ದೃಷ್ಟಿಕೋನದಿಂದ ಸಂಶೋಧನೆ ನಡೆಸಿದ ಮೊದಲಿಗರು. ಅದು ಪ್ರಕಟಿಸುವ ಸ್ತ್ರೀತ್ವದ ಶೋಧನ ಮೂಲಕ ಪಾಶ್ಚಾತ್ಯ ಸ್ತ್ರೀವಾದವನ್ನು ಮುರಿದು ಭಾರತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುದೂರು ತಪ್ಪೆಗುಡ್ಡೆಯಲಿ ಗಿರಿಜಾ ಮಂಜಯ್ಯ ಶೆಟ್ಟಿ ಮತ್ತು ಮಕ್ಕಳು ಏರ್ಪಡಿಸಿದ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಸೇವೆ ಆಟದ ಮೊದಲು ನಿವೃತ್ತ ಯೋಧ, ಅಂಕಣಕಾರ ಬೈಂದೂರು ಚಂದ್ರಶೇಖರ ನಾವಡ ಮತ್ತು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಶರ ಸಚ್ಚಿದಾನಂದ ಚಾತ್ರರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಚ್ಚಿದಾನಂದ ಚಾತ್ರ ಮಾತನಾಡಿ ದೈವಭಕ್ತಿ , ದೇಶಭಕ್ತಿ ಹಾಗೂ ಪ್ರಾಮಾಣಿಕತೆಯಿಂದ ನಡೆಸುವ ವ್ಯಾಪಾರ-ವ್ಯವಹಾರಗಳಲ್ಲಿ ಯಶಸ್ಸು ಸಿಗುತ್ತದೆ ಎಂದರು. ಯಕ್ಷಗಾನ ನಮ್ಮ ಪ್ರಾಚೀನ ಕಲೆಯಾಗಿದ್ದು ಅದನ್ನು ಪ್ರೋತ್ಸಾಹಿಸುವಂತೆ ಅವರು ಕರೆ ನೀಡಿದರು. ಬಳಿಕ ಬೈಂದೂರು ಚಂದ್ರಶೇಖರ ನಾವಡ ಮಾತನಾಡಿ ನಮ್ಮ ದೇಶದ ಸೇನೆಯಲ್ಲಿ ಇಂದಿಗೂ ಕೃಷಿ ಹಾಗೂ ಗ್ರಾಮೀಣ ಹಿನ್ನೆಲೆಯ ಯೋಧರೆ ಅಧಿಕ ಸಂಖ್ಯೆಯಲ್ಲಿದ್ದಾರೆ. ಅನ್ನ ಕೊಡುವ ರೈತ ಹಾಗೂ ಸೈನಿಕರ ತ್ಯಾಗದಿಂದಲೇ ಇಂದು ದೇಶ ಸುಭದ್ರವಾಗಿದೆ. ರೈತ ಮತ್ತು ಯೋಧರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸದಿಂದ ದೇಶ ವಿಶ್ವ ಶಕ್ತಿಶಾಲಿಯಾಗಲಿದೆ ಎಂದು ಹೇಳಿದರು. ಸಚ್ಚಿದಾನಂದ ಚಾತ್ರರು ಕುಟುಂಬದವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶುಭದಾ ಆಂಗ್ಲಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಮತದಾನ ಸಾಕ್ಷರತಾ ಕ್ಲಬ್ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಕಿರಿಮಂಜೇಶ್ವರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಆರಂಭಗೊಂಡು ಅರೆಹೊಳೆ ಮಾರ್ಗವಾಗಿ ಮೆರವಣಿಗೆಯ ಮೂಲಕ ಶಾಲೆಗೆ ಆಗಮಿಸಿದರು. ಮತದಾನದ ಕುರಿತು ವಿವಿಧ ಘೋಷಣೆಗಳ ನಾಮಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳ ಮೂಲಕ ಮತದಾನದ ಅರಿವು ಮೂಡಿಸಿದರು. ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಾಥಾದಲ್ಲಿ ಸಂಸ್ಥೆಯ ನಿರ್ದೇಶಕರು, ಸಂಚಾಲಕರು, ಶಿಕ್ಷಕರು ,ಶಾಲಾ ವಾಹನಚಾಲಕರು ಭಾಗವಹಿಸಿ ಜಾಥಾಕ್ಕೆ ಮೆರಗು ತಂದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ತಂಪು ಪಾನೀಯ ನೀಡಲಾಯತು. ಶಾಲೆಯ ಸ್ಥಾಪಕ ಅಧ್ಯಕ್ಷ ಡಾ. ಎನ್.ಕೆ.ಬಿಲ್ಲವರು ಜಾಥಾದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವೀಪ್ ಸಮಿತಿ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ವಿವಿಧ ಕಾಲೇಜುಗಳ ಸಹಯೋಗದೊಂದಿಗೆ ಮಂಗಳವಾರ ನಡೆದ ಮತದಾನ ಜಾಗೃತಿ ಜಾಥಾ ಪಕ್ಷದ ಪ್ರಚಾರ ವೇದಿಯಾಗಿ ಮಾರ್ಪಟ್ಟು, ಅಧಿಕಾರಿಗಳಿಗೆ ಇರಿಸುಮುರಿಸಾದ ಪ್ರಸಂಗವೊಂದು ನಡೆದಿದೆ. ಕುಂದಾಪುರ ಗಾಂಧಿ ಮೈದಾನಕ್ಕೆ ಬರುವಾಗಲೇ ವಿದ್ಯಾರ್ಥಿಗಳು ವಂದೇ ಮಾತರಂ ಹಾಗೂ ಮೋದಿ ಪರ ಘೋಷಣೆ ಕೂಗುತ್ತಲೇ ಆಗಮಿಸಿದ್ದರು. ಮತದಾನ ಜಾಗೃತಿ ಪ್ರತಿಜ್ಞಾವಿಧಿ ಬೋಧನೆಗೂ ಮುನ್ನಾ ಸೇರಿದ ಸಾವಿರಾರು ವಿದ್ಯಾರ್ಥಿಗಳಲ್ಲಿ ಯಾರೋ ಚಿಕ್ಕದಾಗಿ ಉಚ್ಛರಿಸಿದ ಮೋದಿ ಹೆಸರಿಗೆ ನೂರಾರು ವಿದ್ಯಾರ್ಥಿಗಳ ಸ್ವರದ ಮೂಲಕ ಶಕ್ತಿ ತುಂಬಿದರು. ಗಾಂಧಿ ಮೈದಾನದಿಂದ ಹೊರಟ ಜಾಥಾ ಉದ್ದಕ್ಕೂ ಹೌವ್ ಈಸ್ ದ ಜೋಶ್.. ಪದೇ ಪದೇ ಪುನರಾವರ್ತನೆ ಆಗಿ, ದೊಡ್ಡ ಸ್ವರದ ಪ್ರತಿಕ್ರಿಯೆ ಕೂಡಾ ಸಿಕ್ಕಿತು. ವಂದೇ ಮಾತರಂ ಉದ್ಘೋಷ ನಿರಂತರವಾಗಿ ಕೇಳಿ ಬಂತು. ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ವಂದೇ ಮಾತರಂ, ಉರಿ ಸಿನಿಮಾದ ಡೈಲಾಗ್, ಮೋದಿ ಬಗ್ಗೆ ಘೋಷಣೆ ಕೂಗಿ ಅಚ್ಚರಿ ಮೂಡಿಸಿದರು. ಕಾರ್ಯಕ್ರಮ…
