Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಛತ್ರಮಠ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ವನದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿಯಾದ ನಾರಾಯಣ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮೆಕ್ಕೆ ಒಕ್ಕೂಟದ ಅಧ್ಯಕ್ಷರಾದ ಎಂ ಜೆ ಬೇಬಿ ವಹಿಸಿದ್ದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ., ಕೊಲ್ಲೂರು ವಲಯದ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ ಗುಡಿಮನೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಬೈಂದೂರು ತಾಲೂಕು ಯೋಜನಾಧಿಕಾರಿಗಳಾದ ಶಶಿರೇಖಾ ಪಿ., ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾವತಿ ಕೃಷ್ಣ ಕನ್ನಂತ, ಕೊಲ್ಲೂರು ವಲಯದ ಅಧ್ಯಕ್ಷರಾದ ಜಯರಾಮ್ ಪೂಜಾರಿ, ಚಿತ್ತೂರು ವಲಯದ ವಲಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಗೋಳಿಹೊಳೆ ವಲಯದ ವಲಯ ಅಧ್ಯಕ್ಷರಾದ ಮಂಜುನಾಥ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಾದ್ಯಂತ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ಪ್ರಕರಣ ಖಂಡಿಸಿ ಇಲ್ಲಿನ ಶಾಸ್ತ್ರೀ ವೃತ್ತದ ಎದುರು ನ್ಯಾಷನಲ್ ವಿವೆನ್ಸ್ ಫ್ರಂಟ್ ಕುಂದಾಪುರ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು. ವಿವೆನ್ಸ್ ಫ್ರಂಟ್ ವಲಯಾಧ್ಯಕ್ಷೆ ನಸೀಮ್ ಝರೈದ್ ಮಾತನಾಡಿ, ಮಹಿಳೆ ಮತ್ತು ಹೆಣ್ಣುಮಕ್ಕಳ ಪಾಲಿಗೆ ಭಾರತ ಹೆಚ್ಚು ಅಪಯಕಾರಿ ದೇಶವಾಗಿ ಮುನ್ನಡೆಯುತ್ತಿರುವುದು ದುರಂತ ಹೆಣ್ಣುೈಮಕ್ಕಳ ಸುರಕ್ಷತೆಗೆ ಸರಕಾರ ಒತ್ತು ನೀಡಬೇಕು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು ಎಂದರು. ವಲಯ ಕಾರ್ಯದರ್ಶಿ ನಾಝಿಯಾ ಇನ್ನಿತರರು ಇದ್ದರು. ಬಳಿಕ ಹೆಣ್ಣು ಮಕ್ಕಳ ಸುರಕ್ಷತೆಯ ಬೇಡಿಕೆ ಮುಂದಿಟ್ಟು ತಾಲೂಕಿನ ಸರಕಾರಿ ಅಧಿಕಾರಿಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರೈಸ್ತರ ಭಾಂಧವರ ಪವಿತ್ರ ಹಬ್ಬವಾದ ಮೊಂತಿ ಫೆಸ್ತ್ ತೆನೆ ಹಬ್ಬವನ್ನು ಸಡಗರದಿಂದ ಆಚರಿಸಿದರು. ಚರ್ಚಿನ ಧರ್ಮಗುರುಗಳಾದ ರೆ.ಪಾ. ಚೇತನ್ ಲೋಬೋ, ರೆ.ಪಾ. ವಿನ್ಸೆಂಟ್ – ಕುವೆಲ್ಲೋ ಹಾಗೂ ಬ್ರದರ್ ಸ್ಟೀವನ್ ಡಿಸೋಜಾ ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಚಿತ್ರಗಳು: ಎ ಒನ್ ಸ್ಟುಡಿಯೋ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ. ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಕಟ್ಟುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಮತ್ತು ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕ್ಷೇಮಪಾಲನಾ ಸಮಿತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ದ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಕುಂಭಾಶಿ ಎನ್ನುವವರು ತಮ್ಮ ಫೇಸ್‌ಬುಕ್‌ನಲ್ಲಿ ನಾರಾಯಣ ಗುರುಗಳ ಫೋಟೋ ಹಾಕಿ, ಅವಾಚ್ಯ ಶಬ್ದದಿಂದ ಬರೆದುಕೊಂಡು ನಾರಾಯಣ ಗುರು ಜಯಂತಿಯ ಶುಭಾಶಯ ಕೋರಿದ್ದರು. ಈ ಬಗ್ಗೆ ದೂರು ದಾಖಲಿಸಿರುವ ಕಿರಣ್ ಪೂಜಾರಿ ಎನ್ನುವವರು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಿದ್ದಾಂತವನ್ನು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗೆಗೆ ಇತ್ತೀಚೆಗೆ ಹರೀಶ್ ಕುಂಭಾಶಿ ಎನ್ನುವ ವ್ಯಕ್ತಿಫೇಸ್ ಬುಕ್ನಲ್ಲಿ ಅಸಭ್ಯ ಪೋಸ್ಟ್ ಮಾಡುವ ಮೂಲಕ ನಾರಾಯಣ ಗುರುಗಳ ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ. ಇಂತಹ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಾಗೂ ಆ ವ್ಯಕ್ತಿ ನಾರಾಯಣ ಗುರುಗಳ ಪ್ರತಿಮೆಯ ಮುಂದೆ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಈ ಬಾರಿಯ ಕೋವಿಡ್ ಹಿನ್ನಲೆಯಲ್ಲಿ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ, ಜಿಲ್ಲೆಯಲ್ಲಿ ಸರಳವಾಗಿ, ಸಾರ್ವಜನಿಕರು ಕನಿಷ್ಠ ಸಂಖ್ಯೆಯೊಂದಿಗೆ ಭಕ್ತಿ ಪೂರ್ವಕವಾಗಿ ಗಣೇಶೋತ್ಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ವರ್ಚುವಲ್ ಸಭೆಯ ಮೂಲಕ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆಯ ಮಾರ್ಗಸೂಚಿ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ 3ನೇ ಅಲೆಯ ನಿಯಂತ್ರಣ ಉದ್ದೇಶದಿಂದ ಸರ್ಕಾರ ನೀಡಿರುವ ಮಾರ್ಗಸೂಚಿಯನ್ವಯ ಗಣೇಶ ಚತುರ್ಥಿ ಆಚರಣೆ ನಡೆಸಬೇಕು. ಮಾರ್ಗಸೂಚಿಗಳ ಪಾಲನೆಯಲ್ಲಿ ಯಾವುದೇ ಗೊಂದಲ ಇರಬಾರದು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಸ್ಥಳೀಯಾಡಳಿಗಳು ಎಲ್ಲಾ ನಿಬಂದನೆಗಳ ಕುರಿತು ಆಯೋಜಕರಿಗೆ ಮನವರಿಕೆ ಮಾಡಬೇಕು ಎಂದರು. ದೇವಸ್ಥಾನದಲ್ಲಿ ಮತ್ತು ಮನೆಗಳಲ್ಲಿ ಅಥವಾ ಸರ್ಕಾರಿ /ಖಾಸಗಿ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊAದಿಗೆ ಗಣೇಶೋತ್ಸವ ಆಚರಣೆ ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಎತ್ತರ ಮತ್ತು ಮನೆಯೊಳಗೆ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.07: ಬೈಂದೂರಿನ ಖ್ಯಾತ ಮಕ್ಕಳ ತಜ್ಞ ಡಾ. ರವಿರಾಜ್ (೬೫) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೂಲತಃ ಉಡುಪಿಯವರಾದ ಡಾ. ರವಿರಾಜ್ ಅವರು, ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ವೈದ್ಯಕೀಯ ಸೇವೆ ಆರಂಭಿಸಿದ್ದರು. ಸ್ವಯಂ ನಿವೃತ್ತಿ ಹೊಂದಿ ಬೈಂದೂರು ಹೊಸ ಬಸ್ ನಿಲ್ದಾಣದ ಸಮೀಪದ ಬಾಲಕ್ಷೇಮ ಕ್ಲಿನಿಕ್ ನಡೆಸುತ್ತಿದ್ದರು. ಸುಧೀರ್ಘ ಅವಧಿಯಲ್ಲಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸಿದ್ದ ಅವರು ಬೈಂದೂರು ಹಾಗೂ ಭಟ್ಕಳದಲ್ಲಿ ಪ್ರಸಿದ್ಧಿ ಪಡೆದಿದ್ದರು. ಎಲ್‌ಐಸಿಯ ಮೆಡಿಕಲ್ ಎಕ್ಸಾಮಿನರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರಿನಿಂದ ಪತ್ನಿಯೊಂದಿಗೆ ಚೆನ್ನೈಗೆ ತೆರಳಿದ್ದ ಅವರಿಗೆ ಚೆನ್ನೈ ಎರ್‌ಪೋರ್ಟ್‌ನಲ್ಲಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ. ► ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಲ್. ಜೋಸ್ ನಿಧನ – https://kundapraa.com/?p=52147 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರು ವರ್ಷದ ಪೋರ ಆರ್ಯನ್ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ದೇಶಗಳು, ರಾಜ್ಯಗಳು, ರಾಜಧಾನಿ, ಜಿಲ್ಲೆ, ಬಣ್ಣ, ವರ್ಣಮಾಲೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಟಪಟನೆ ಉತ್ತರಿಸುವ ಹಾಗೂ ಗುರುತಿಸುವ ಆರ್ಯನ್, ಅಧಿಕ ಜ್ಞಾಪನಾ ಶಕ್ತಿಯ ಕಾರಣಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿ ಈ ದಾಖಲೆ ಮಾಡಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ತಾಲೂಕು ಕೋಡಿಯ ಕೋಟೆಮನೆ ನಾಗೆಂದ್ರ ಹಾಗೂ ಅಂಜಲಿ ದಂಪತಿಗಳ ಏಕೈಕ ಪುತ್ರ ಆರ್ಯನ್. ಇವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದ್ದು, ಆರ್ಯನ್ ಬಹಳ ಚುರುಕಾಗಿರುವುದನ್ನು ಗಮನಿಸಿ ಆತನ ತಾಯಿ ಅಂಜಲಿ ಒಂದೊಂದೇ ವಿಷಯವನ್ನು ಕಲಿಸುತ್ತಾ ಬಂದಿದ್ದಾರೆ. ಸ್ನೇಹಿತರ ಸಲಹೆಯಂತೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಅರ್ಜಿ ಸಲ್ಲಿಸಲಾಗಿತ್ತು. 2 ವರ್ಷ 11 ತಿಂಗಳು ಇರುವಾಗಲೇ ಆರ್ಯನ್‌ನ ಜ್ಞಾಪಕಶಕ್ತಿಯ ಪರೀಕ್ಷೆ ನಡೆದಿದ್ದು, ಅಂತಿಮವಾಗಿ ಆತನ ಹೆಸರಿನಲ್ಲಿ ದಾಖಲೆಯೊಂದು ದಾಖಲಾಗಿದೆ. ಆರ್ಯನ್ 2 ವರ್ಷ 11 ತಿಂಗಳ ಮಗುವಾಗಿದ್ದಾಗಲೇ ಸಾಮಾನ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮುದೂರಿನ ಪಿ. ಎಲ್ ಜೋಶ್ ಅವರು ಅಲ್ಪಕಾಲದ ಅನಾರೋಗ್ಯ ಕಾರಣದಿಂದ ನಿಧನರಾದರು. ಅವರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ , ಜಡ್ಕಲ್ ಗ್ರಾಹಕರ ಸೊಸೈಟಿಯ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಜಡ್ಕಲ್ ಗ್ರಾಮ ಪಂಚಾಯತ್ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು, ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಂತಾಪ ಸೂಚಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಆಳ್ವಾಸ್ ಸ್ನಾತಕೋತ್ತರ ಫುಡ್ ಸಯನ್ಸ್ ವಿಭಾಗದ ವತಿಯಿಂದ ಎರಡು ದಿನದ ವೆಬಿನಾರ್ ಅಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬಾಗಲಕೋಟೆಯ ಯುನಿವರ್ಸಿಟಿ ಆಫ್ ಹಾರ್ಟಿಕಲ್ಚರಲ್ ಸಯನ್ಸ್ ಪೋಸ್ಟ್ ಹಾರ್ವೆಸ್ಟ್ ಟೆಕ್ನಾಲಜಿಯ ಮುಖ್ಯಸ್ಥೆ ಡಾ. ಭುವನೇಶ್ವರಿ ಜಿ ಹಾಗೂ ಕೊಯಂಬುತ್ತೂರ್‌ನ ಅರ್‌ವಿಎಸ್ ಕಾಲೇಜಿನ ರಿಸರ್ಚ್ ಹೆಡ್ ಆಗಿರುವ ಡಾ. ಮೀರಾ ರಮಣ್ ಭಾಗವಹಿಸಿದ್ದರು. ವೆಬಿನಾರ್‌ನಲ್ಲಿ ಪೌಷ್ಟಿಕ ಆಹಾರದ ಮಹತ್ವ, ಶಿಶು ಮತ್ತು ಮಕ್ಕಳ ಆರೈಕೆಯಲ್ಲಿ ಪೌಷ್ಟಿಕಾಂಶಗಳ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಪ್ರಾಂಶುಪಾಲ ಡಾ. ಕುರಿಯನ್, ವಿಭಾಗ ಮುಖ್ಯಸ್ಥೆ ಡಾ. ಅರ್ಚನಾ ಪ್ರಭಾತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸ್ವಾತಿ ಹಾಗೂ ದಿವ್ಯ ವಂದಿಸಿದರು, ಶಿವಾನಿ ಶೆಟ್ಟಿ ಹಾಗೂ ನವ್ಯ ಕಾರ್ಯಕ್ರಮ ನಿರೂಪಿಸಿದರು. ಫುಡ್ ಸಯನ್ಸ್ ವಿಭಾಗದ ವಿದ್ಯಾರ್ಥಿಗಳು ವೆಬಿನಾರ್‌ನ ಪ್ರಯೋಜನ ಪಡೆದುಕೊಂಡರು.

Read More