Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ನ.07: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಶಾಸಕ ಸುಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಕುಂಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ:► ಮೀನುಗಾರರು, ರೈತ ಕೂಲಿಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – https://kundapraa.com/?p=63074 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿಯಾಗಿ ನಾಲ್ಕು ಗಂಟೆಯ ಒಳಗೆ ರೈತರ ಮಕ್ಕಳಿಗಾಗಿ ಆರಂಭಿಸಿದ್ದ ವಿದ್ಯಾನಿಧಿ ಯೋಜನೆಯನ್ನು ಈ ವರ್ಷದಿಂದ ಮೀನುಗಾರರು ಹಾಗೂ ರೈತ ಕೂಲಿಕಾರರ ಮಕ್ಕಳಿಗೂ ವಿಸ್ತರಿಸಲಾಗುವುದು. ಇದರಿಂದ ಕರಾವಳಿ 2 ಲಕ್ಷ ಮೀನುಗಾರರ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು. ಅವರು ಸೋಮವಾರ ಮುಳ್ಳಿಕಟ್ಟೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮನೆ ಮನೆಗೆ ಕುಡಿಯು ನೀರು, ಮರವಂತೆ ಮೀನುಗಾರಿಕಾ ಬಂದರು, ಏತ ನೀರಾವರಿ ಯೋಜನೆ ಸಹಿತ 1591.77 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿ ದುಡಿಯುವ ವರ್ಗಕ್ಕೆ ಸ್ವಾವಲಂಭಿ ಬದುಕು ಕಟ್ಟಿಕೊಡುವುದು ನಮ್ಮ ಕನಸು. ಆ ನಿಟ್ಟಿನಲ್ಲಿ ಬಿಜೆಪಿ ಸರಕಾರ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡಿದೆ. ಬಡವರಿಗೆ ಬಾಯಿ ಮಾತಿನಿಂದ ಮಾತ್ರ ಪರಿಹಾರವಲ್ಲದೇ, ಅವರ ಕಷ್ಟಸುಖದಲ್ಲಿ ಪಾಲ್ಗೊಂಡು ಅಭಿವೃದ್ಧಿ ಮಾಡಬೇಕು ಎಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದೇ ದಾರಿಯಲ್ಲಿ ಪ್ರಸ್ತುತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.7: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆಯ ಹೆಸರಿನಲ್ಲಿ ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಲಾಗುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಆರೋಪಿಸಿದ್ದಾರೆ. ಅವರು ಸೋಮವಾರ ಕುಂದಾಪುರದಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬೈಂದೂರು ಕ್ಷೇತ್ರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಜನ ಸೇರಿಸುವ ಉದ್ದೇಶದಿಂದ ಶಾಲಾ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಬಿಇಓ ಮೂಲಕ ಸೂಚನೆ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಜನರನ್ನು ಕರೆತರುವಂತೆ ಸೂಚಿಸಲಾಗಿದೆ. ಬಹುಪಾಲು ಸರಕಾರಿ ಬಸ್ಸುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಂಚಾರಕ್ಕೂ ತೊಡಕುಂಟುಮಾಡಲಾಗಿದೆ. ಜನ ಸೇರಿಸುವುದಕ್ಕಾಗಿ ಇಂತಹ ಗಿಮಿಕ್ ಮಾಡುತ್ತಿರುವುದು ದುರದೃಷ್ಟಕರ ಎಂದು ಲೇವಡಿ ಮಾಡಿದರು. ಎರಡೆರದು ಭಾರಿ ಗುದ್ದಲಿ ಪೂಜೆ:ನಾನು ಶಾಸಕನಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಸೌಡ ಶಂಕರನಾರಾಯಣ ಸೇತುವೆ, ಕಬ್ಬಿನಾಲೆ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿಯೇ ಅನುಮೋದನೆ ದೊರೆತು ಗುದ್ದಲಿಪೂಜೆ ನೆರವೇರಿಸಲಾಗಿತ್ತು. ಚುನಾವಣೆಯ ಬಳಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.7: ಜನಸಂಕಲ್ಪ ಯಾತ್ರೆಯಿಂದ ಕಾರ್ಯಕರ್ತರಲ್ಲಿ ಹುರುಪು ಮೂಡಿದ್ದು ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಸಿಎಂ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು. ಅವರು ಕಾಪು ಹಾಗೂ ಬೈಂದೂರು ಕ್ಷೇತ್ರದಲ್ಲಿ ಆಯೋಜಿಸಲಾದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಉಡುಪಿ ಹೆಲಿಪ್ಯಾಡಿಗೆ ಆಗಮಿಸಿದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಆದರೆ ಅದರ ನಾಯಕರು ನಮ್ಮ ಮೇಲೆ ಆರೋಪ ಮಾಡುವುದರಲ್ಲಿ ಮುಳುಗಿದ್ದಾರೆ. ಸಿದ್ಧರಾಮಯ್ಯನವರು ಹೇಳಿದ್ದು ಯಾವುದೂ ನಿಜವಾಗಿಲ್ಲ. ಹಾಗಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ಈ ವೇಳೆ ಸಚಿವರುಗಳಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಗೋವಿಂದ ಕಾರಜೋಳ, ಜಿಲ್ಲಾಧಿಕಾರಿ ಕೂರ್ವರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.7: ಕುಂದಾಪುರ ಮೊದಲ ಮಕ್ಕಳ ತಜ್ಞ (Pediatrician), ಖ್ಯಾತ ವೈದ್ಯ ಡಾ. ವೆಂಕಟರಾಜ್ (67) ಅವರು ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕುಂದಾಪುರ ನಗರದಲ್ಲಿ ಸ್ವಾತಿ ಕ್ಲಿನಿಕ್ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸಿದ್ದ ಡಾ. ವೆಂಕಟರಾಜ್ ಅವರು, ಜನನುರಾಗಿ ವೈದ್ಯರೂ ಆಗಿದ್ದರು. ಕುಂದಾಪ್ರ ಡಾಟ್ ಕಾಂ. ಮೂಲತಃ ಉಪ್ಪುಂದದವರಾದ ಡಾ. ವೆಂಕಟರಾಜ್ ಅವರು, ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಮಣಿಪಾಲದ ಕೆಎಂಸಿಯಲ್ಲಿ ಎಬಿಬಿಎಸ್ ಹಾಗೂ ಡಿಸಿಎಚ್ ಮುಗಿಸಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಮೃತರು ತಂದೆ ತಿಮ್ಮಪ್ಪಯ್ಯ ಕಾರಂತ್, ಮಡದಿ ರಾಜೇಶ್ವರಿ, ಪುತ್ರ ಯುರಾಲಾಜಿಸ್ಟ್ ಡಾ. ಕಿಶನ್ ರಾಜ್, ಪುತ್ರಿ ಆಶಾಜ್ಯೋತಿ, ಸೊಸೆ ಗೌನಕಾಲಜಿಸ್ಟ್ ಡಾ. ರಜನಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ. ವೆಂಕಟರಾಜ್ ಅವರ ನಿಧನಕ್ಕೆ ಐಎಂಎ ಕುಂದಾಪುರದ ಅಧ್ಯಕ್ಷರಾದ ಡಾ. ಮಹೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾನೂನು ಎಂದರೆ ಮುನುಷ್ಯನನ್ನು ಬಿಡದಂತೆ ಹಿಂಬಾಲಿಸುವ ನೆರಳಿದ್ದಂತೆ. ಹುಟ್ಟಿನಿಂದ ಸಾವಿನ ವರೆಗೂ ಪ್ರತಿಯೊಬ್ಬ ಮಾನವನೂ ಕಾನೂನಿನ ಪರಿಧಿಯಲ್ಲಿಯೇ ಇರುತ್ತಾನೆ. ಭ್ರೂಣದಲ್ಲಿರುವ ಕೂಸಿನಿಂದ ಹಿಡಿದು ಜೀವಿತಾವಧಿವರೆಗೂ ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಇರಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಗೌರವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ್ ಶಿವಪ್ಪ ಹೇಳಿದರು. ಬೈಂದೂರು ಯಡ್ತರೆ ಜೆಎನ್‌ಆರ್ ಸಭಾಭವನದಲ್ಲಿ ಭಾನುವಾರ 75ನೇ ಸ್ವಾಂತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರೀಕರ ಸಬಲೀಕರಣ ಅಂಗವಾಗಿ ಹಮ್ಮಿಕೊಂಡಿರುವ ಕಾನೂನು ಅರಿವು ನೆರವು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವ ಪ್ರಾಧಿಕಾರದ ಆದೇಶದಂತೆ ಪ್ರತಿ ಮನೆಮನೆಗಳಿಗೂ ಉಚಿತ ಕಾನೂನು ಸೇವೆ ನೀಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಾನೂನಿನ ಅರಿವು ಪ್ರಚಾರ ಅಭಿಯಾನವನ್ನು ಆರಂಭಿಸಲಾಗಿದೆ. ಪ್ರತಿಯೊಬ್ಬರಿಗೂ ಕನಿಷ್ಠ ಕಾನೂನಿನ ಜ್ಞಾನ ಇರಬೇಕು. ಕಾನೂನಿನ ಚೌಕಟ್ಟಿನಲ್ಲಿ ವ್ಯವಹರಿಸಿದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ,ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಈ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರಾಜು ಎನ್. ಅವರು ಉದ್ಘಾಟಿಸಿ ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು ಸಂಪನ್ಮೂಲ ವ್ಯಕ್ತಿಯಾಗಿದ್ದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು “ಸಾಮಾನ್ಯ ಕಾನೂನು” ಕುರಿತು ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಯಾಗಿರುವ ಧನೇಶ್ ಮುಗಳಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಪೊಲಿಸರನ್ನು ತಳ್ಳಿ ಪರಾರಿಯಾಗಿದ್ದ ಕಳವು ಪ್ರಕರಣದ ಆರೋಪಿ ಮೊಹಮ್ಮದ್ ರಾಹೀಕ್ (22) ಎಂಬಾತನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಿಜಾಡಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ರಾಹೀಕ್ ಎಂಬುವವನನ್ನು ಕುಂದಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಅ.19ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಹಾಗೂ ಸಿಬ್ಬಂದಿ ಬಸನಗೌಡ ಅವರು ಹಿರಿಯಡ್ಕದ ಕಾರಾಗೃಹಕ್ಕೆ ಕರೆಯ್ಯುತ್ತಿದ್ದರು. ರಾತ್ರಿ 8.25ಕ್ಕೆ ಹಿರಿಯಡ್ಕ ಅಂಜಾರು ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದ ಮುಖ್ಯ ದ್ವಾರದ ಬಳಿ ವಾಹನ ನಿಲ್ಲಿಸಿ ಆರೋಪಿಯನ್ನು ಇಳಿಸುತ್ತಿದ್ದಂತೆ ಪೊಲೀಸರನ್ನು ತಳ್ಳಿ ಕಾಡಿನ ಕಡೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕುಂದಾಪುರ ಠಾಣೆ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಎಚ್. ಎನ್ನುವರು ಹಿರಿಯಡಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಮೊಹಮ್ಮದ್ ರಾಹೀಕ್ ಎಂಬಾತನ ಪತ್ತೆಗಾಗಿ ಪೊಲೀಸರ ತಂಡ ರಚಿಸಿ ತನಿಕೆ ನಡೆಸಿದ್ದು ಅಂತಿಮವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರö್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಉದ್ಘಾಟನೆ ಮಾಡುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನದ ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿ, ಮಾತನಾಡಿದರು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ ಹಿಂದೆಯೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿ, ಹಲವು ಕೆರೆಗಳನ್ನು ನಿರ್ಮಿಸಿ, ಮಾದರಿ ನಗರಗಳ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದ ಕೆಂಪೇಗೌಡರು ಎಲ್ಲಾ ಆಡಳಿತಗಾರರಿಗೆ ಸದಾ ಮಾದರಿ ಎಂದರು. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ರಾಜ್ಯ ಸರಕಾರದಿಂದ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ. ನವೆಂಬರ್ 11…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ನವೆಂಬರ್ 7ರ ವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮದಲ್ಲಿ 40ಕ್ಕೂ ಅಧಿಕ ಜಾತಿಯ ಅಲಂಕಾರಿಕಾ ಸಸ್ಯಗಳು, 15 ಕ್ಕೂ ಅಧಿಕ ಜಾತಿಯ ಹಣ್ಣಿನ ಸಸ್ಯಗಳು, ತೆಂಗು, ಕಾಳು ಮೆಣಸಿನ ಸಸಿಗಳು, 50 ಕ್ಕೂ ಹೆಚ್ಚು ತರಕಾರಿ ಮತ್ತು ಹಣ್ಣಿನ ಬೀಜಗಳ ಮಾರಾಟ ಕೃಷಿ ಮತ್ತು ತೋಟಗಾರಿಕಾ ಆಸಕ್ತರನ್ನು ಗಮನ ಸೆಳೆಯುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಖಾಸಗಿ ನರ್ಸರಿ ಮತ್ತು ಸರ್ಕಾರಿ ನರ್ಸರಿಯಲ್ಲಿ ಬೆಳೆಸಿದ ಸಸ್ಯಗಳು, ಕಸಿ ಗಿಡಗಳು, ನರ್ಸರಿ ಉಪಕರಣಗಳ ಮಾರಾಟ ನಡೆಯುತ್ತಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ನಗರ ಪ್ರದೇಶದಲ್ಲಿ ಮನೆಯ ಆವರಣದಲ್ಲಿ ಜಾಗದ ಕೊರತೆ ಇದ್ದರೂ ಸಹ ಮನೆಗಳ ಮೇಲ್ಛಾವಣಿಯಲ್ಲಿ ಹೂ ಮತ್ತು ಹಣ್ಣಿನ ಸಸ್ಯಗಳನ್ನು ಬೆಳೆಸಲು ಸಾಧ್ಯವಿದ್ದು, ಈ ಸಸ್ಯಸಂತೆಯ ಮೂಲಕ ಉತ್ತಮ ಸಸಿಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು. ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಗಿರೀಶ್ ಅಂಚನ್, ಪ್ರಭಾಕರ ಪೂಜಾರಿ,…

Read More