ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಳಜಿತ ಶ್ರೀ ರಾಮಕೃಷ್ಣ ಕುಟೀರದ ಸ್ವಾಮಿ ಸತ್ಯಸ್ವರೂಪಾನಂದ ಅವರ ಗೀತಾ ಮಾಧುರ್ಯ ಕೃತಿ ಶನಿವಾರ ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಪುಸ್ತಕವನ್ನು ಬಿಡುಗಡೆಗೊಳಿಸಿ ಬಳಿಕ ಮಾತನಾಡಿ ಭಗವದ್ಗೀತೆಯ ಅರ್ಥವನ್ನು ಅರಿತು ಮತ್ತೆ ಮನನ ಮಾಡಿಕೊಳ್ಳುವವರಿಗೆ ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ. ಸತ್ಸಂಗಗಳ ಮೂಲಕ ಭಗವದ್ಗೀತೆಯ ಸಾರವನ್ನು ಭೋಧಿಸಿ ಅದರ ಮಹತ್ವವನ್ನು ಪ್ರಚುರ ಪಡಿಸುತ್ತಿರುವ ಸ್ವಾಮಿ ಸತ್ಯಸ್ವರೂಪಾನಂದರು ಈ ವರೆಗೆ ಹಲವು ಪುಸ್ತಕಗಳನ್ನು ಬರೆದು ಪ್ರಕಟಿಸಿರುವುದು ಶ್ಲಾಘನಾರ್ಹ ಎಂದರು. ಈ ಸಂದರ್ಭ ಕೃತಿಕಾರರಾದ ಸ್ವಾಮಿ ಸತ್ಯಸ್ವರೂಪಾನಂದರು, ಯಶೋದಾ ಎಮ್. ಅಡಿಗ ನೈಕಂಬ್ಳಿ, ಶಿಕ್ಷಕ ಹಮನುಂತ ಜಿ. ಮಯ್ಯಾಡಿ, ಶ್ರೀ ರಾಮಕ್ಷತ್ರಿಯ ಮಹಿಳಾ ಮಂಡಳಿ ಅಧ್ಯಕ್ಷೆ ಸುಂದರಿ ಗಣಪತಿ ಇದ್ದರು. ಉಪನ್ಯಾಸಕ ಕೇಶವ ನಾಯಕ್ ಬಿಜೂರು ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಾಗದ ತಕರಾರಿನ ಕಾರಣ 6 ಜನರ ತಂಡ ಶನಿವಾರ ಕಿರಿಮಂಜೇಶ್ವರದ ಮನೆಯೊಂದಕ್ಕೆ ನುಗ್ಗಿ ತಲವಾರಿನಿಂದ ಹಲ್ಲೆ ನಡೆಸಿ ಐದು ಮಂದಿಯ ಮೇಲೆ ಗಂಭೀರ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಿರಿಮಂಜೇಶ್ವರದ ಗಂಗೆಬೈಲು ಗಾಂಧಿನಗರದ ಕೋಣೆಗದ್ದೆಮನೆಯ ಶಾರದಾ(32) ಗಂಭೀರವಾಗಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಶೀಲಾ (52), ಗಣೇಶ(45), ಉಷಾ (52), ಶಾರದಾ(45) ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಣೆಗದ್ದೆ ಮನೆಯವರು ಕಿರಿಮಂಜೇಶ್ವರ ಜಾತ್ರೆಗೆ ಹೋಗಿ ಮನೆಗೆ ಬಂದು ಊಟ ಮಾಡುತ್ತಿದ್ದಾಗ ನಾಣನ ಮನೆಯ ಶೋಭಾ, ಅವರ ಸಹೋದರರಾದ ಸತೀಶ, ದಾಮೋದರ, ರತ್ನಾಕರ, ಶಿವರಾಮ ಮತ್ತು ಪತಿ ನವೀನಚಂದ್ರ ಇದ್ದ ತಂಡ ಮನೆಗೆ ನುಗ್ಗಿ ತಲವಾರ, ದೊಣ್ಣೆ, ಕತ್ತಿಯಿಂದ ದಾಳಿ ನಡೆಸಿದೆ. ಗಾಬರಿಗೊಂಡ ಮನೆಯವರು ದಿಕ್ಕುಪಾಲಾಗಿ ಓಡುತ್ತಿದ್ದಾಗ ಮಹಿಳೆಯರೆಂದು ನೋಡದೆ ತಲವಾರು ಬೀಸಿದ ಪರಿಣಾಮ ಶಾರದಾ ಅವರ ತಲೆ, ಕುತ್ತಿಗೆಗೆ ತೀವ್ರವಾದ ಗಾಯವಾಗಿದ್ದು, ಮೂಗಿನಲ್ಲಿ ರಕ್ತ ಸ್ರಾವವಾಗಿದೆ. ಸುಶೀಲಾ, ಶಾರದಾ ಅವರ ಕೈ…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಆ ದೈವ ಸನ್ನಿಧಿ ಕೊರಗ ಸಮುದಾಯಕ್ಕೇ ಮೀಸಲು. ಅಲ್ಲಿ ಪೂಜಾರಿಯೂ ಅವರೇ, ನಂಬಿ ನಡೆಯುವವರೂ ಅವರೇ. ನೂರಾರು ವರ್ಷಗಳ ಹಿಂದೆ ಇದ್ದ ದೇವಸ್ಥಾನ ಪ್ರವೇಶ ನಿಷೇಧವನ್ನು ಧಿಕ್ಕರಿಸಿದ್ದ ಕೊರಗ ಸಮುದಾಯದ ಸ್ವಾಭಿಮಾನದ ಪ್ರತೀಕವಾಗಿ ಮೂರೂರಿನಲ್ಲಿ ಪ್ರತಿಷ್ಠಾಪಿಸಲ್ಪಟ್ಟ ದೈವ ಸನ್ನಿಧಿಯೇ ಶ್ರೀ ಕಾಡ್ಯಾನಾಗ ಮತ್ತು ಪರಿವಾರ ದೈವಸ್ಥಾನ. ಐತಿಹ್ಯ: ಸುಮಾರು 700 ವರ್ಷಗಳ ಹಿಂದೆ ಮೂರೂರು ಗುಂಡ್ವಾಣದಲ್ಲಿ ಕಾಡ್ಯನಾಗ ಹಾಗೂ ಪರಿವಾರ ದೈವಸ್ಥಾನ ಸ್ಥಾಪನೆಗೊಂಡಿದೆ ಎಂದು ಹೇಳಲಾಗುತ್ತದೆ. ಮೂರೂರು ಹಾಂತಾರ ಕುಟುಂಬ ಈ ದೈವಸ್ಥಾನವನ್ನು ನಂಬಿಕೊಂಡು ಬಂದಿದೆ. ಅಂದು ಗುಂಡ್ವಾಣದ ಸುತ್ತಲು ಕಬ್ಬು ಬೆಳೆಯಲಾಗುತ್ತಿದೆ. ಪ್ರತಿ ಬೆಳೆಯ ಸಮಯದಲ್ಲಿಯೂ ಈ ದೈವಸ್ಥಾನ ಸುತ್ತಮುತ್ತ ನೆಲೆಸಿದ್ದ ಇತರೆ ಸಮುದಾಯದವರು ಸುಮಾರು ೨೦ ಕುಟುಂಬಗಳು ದೇವರಿಗೆ ಹಾಲು ಒಪ್ಪಿಸುತ್ತಿದ್ದದಲ್ಲದೇ ಪೂಜಾ ಸಾಮಾಗ್ರಿಗಳನ್ನೂ ಒದಗಿಸುತ್ತಿದ್ದರು. ವರ್ಷಕ್ಕೆ ಒಂದು ಭಾರಿ ನಡೆಯುವ ಹಬ್ಬದಲ್ಲಿ ಸ್ಥಳೀಯರು ನೀಡಿದ ಪೂಜಾ ಸಾಮಾಗ್ರಿಗಳಿಂದ ಪೂಜೆ ನೆರವೇರಿಸುತ್ತಿದ್ದರು. ಹಬ್ಬದ ಸಂದರ್ಭ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್ ಕಟ್ಟಡದಲ್ಲಿ ಪವರ್ ಮಲ್ಟಿ ಜಿಮ್ನ ನೂತನ ಶಾಖೆ ನ್ಯೂ ಪವರ್ ಮಲ್ಟಿ ಜಿಮ್ ಇತ್ತಿಚಿಗೆ ಶುಭಾರಂಭಗೊಂಡಿತು. ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರೇಮಾನಂದ ಶೆಟ್ಟಿ ನೂತನ ಶಾಖೆಯನ್ನು ಉದ್ಘಾಟಿಸಿದರು. ಸಿಟಿ ಪಾಯಿಂಟ್ನ ಪ್ರಮುಖರಾದ ಕೆ. ವೆಂಕಟೇಶ ಕಿಣಿ ದೀಪ ಬೆಳಗಿಸಿ ಶುಭಕೋರಿದರು. ಈ ಸಂದರ್ಭ ರುಪೀ ಮಾಲ್ ಎಂ.ಡಿ ಸಾಜು ಕೆ. ಎ., ಕಾರ್ಪೋರೇಷನ್ ಬ್ಯಾಂಕ್ ಕೊಲ್ಲೂರು ಶಾಖಾ ಪ್ರಬಂಧಕ ರಾಮಕೃಷ್ಣ ದೇವಾಡಿಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪವರ್ ಮಲ್ಟಿ ಜಿಮ್ನ ಮುಖ್ಯಸ್ಥ ವಿಘ್ನೇಶ್ ಪೂಜಾರಿ ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಟೇಶ್ವರ (ಹಾಲಾಡಿ- ಕೋಟೇಶ್ವರ ರಸ್ತೆ) – ಸೋಮೇಶ್ವರ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಸಬೇಕಾಗಿರುವುದರಿಂದ ಮೇ 16 ರಿಂದ ಜುಲೈ 16 ರ ವರೆಗೆ ಸೋಮೇಶ್ವರ- ಕೋಟೇಶ್ವರ (ಹಾಲಾಡಿ- ಕೋಟೇಶ್ವರ ರಸ್ತೆ) ರಸ್ತೆಯಲ್ಲಿ ಸಂಚರಿಸುವ ಭಾರೀ ವಾಹನ ಹಾಗೂ ಬಸ್ಸುಗಳ ಸಂಚಾರದ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಈ ಆದೇಶದನ್ವಯ ಕುಂದಾಪುರ ಹಾಗೂ ಉಡುಪಿ ಕಡೆಯಿಂದ ಹಾಲಾಡಿ ಕಡೆಗೆ ಹೋಗುವ ಬಸ್ಗಳು ಹಾಗೂ ಇತರೆ ವಾಹನಗಳಿಗೆ ಹಳೆ ಗೋಪಾಡಿ ಪಂಚಾಯತ್ (ಹೂವಿನಕೆರೆ ಸ್ವಾಗತ ಗೋಪುರ) ಮುಖೇನ ರಾ. ಹೆ 66 ಯಿಂದ ಪೂರ್ವ ದಿಕ್ಕಿಗೆ ಚಲಿಸಿ ಬೀಜಾಡಿ- ವಕ್ವಾಡಿ-ಕಾಳಾವರ ರಸ್ತೆಯಲ್ಲಿ ಚಲಿಸಿ, ವಕ್ವಾಡಿಯ ಗುರುಕುಲ ಶಾಲೆಗೆ ಹೋಗುವ ಕಾಂಕ್ರೀಟ್ ರಸ್ತೆಗೆ (ರಸ್ತೆ ಎಡಕ್ಕೆ) ಚಲಿಸಿದಲ್ಲಿ ಗುರುಕುಲ ಶಾಲೆಯ ಬಳಿ 2 ರಸ್ತೆಗಳು ಕವಲೊಡೆದು ಹೋಗುತ್ತಿದ್ದು, ಈ ಎರಡು ರಸ್ತೆಗಳ ಪೈಕಿ ರಸ್ತೆಯ ಎಡಕ್ಕೆ (ಪಶ್ಚಿಮ) ಚಲಿಸಿದರೆ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಇಲ್ಲಿನ ರೋಟರಿ ಲಕ್ಷ್ಮಿನರಸಿಂಹ ಕಲಾ ಮಂದಿರದಲ್ಲಿ ಮೇ. ೧೮ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ವಿಲೇಜ್ ಲೈಫ್ ಚಿತ್ರಕಲಾ ಪ್ರದರ್ಶನ ಉದ್ಘಾಟನೆಗೊಳ್ಳಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಚಿತ್ರಕಲಾ ಪ್ರದರ್ಶನವನ್ನು ಕೋಟ ಗೀತಾನಂದ ಫೌಂಡೇಶನ್ನಿನ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಲಿದ್ದಾರೆ. ಕುಂದಾಪುರ ರೋಟರಿ ಕ್ಲಬ್ನ ಅಧ್ಯಕ್ಷ ಗೋಪಾಲ್ ಶೆಟ್ಟಿ ಶೇಡಿಮನೆ ಅಧ್ಯಕ್ಷತೆ ವಹಿಸಲಿದ್ದು, ರೋಟರಿ ಜಿಲ್ಲಾ ಗವರ್ನರ್ ರೋ. ಅಭಿನಂದನ್ ಶೆಟ್ಟಿ, ಚಿನ್ಮಯಿ ಆಸ್ಪತ್ರೆಯ ವೈದಕೀಯ ನಿರ್ದೇಶಕ ಡಾ. ಉಮೇಶ್ ಪುತ್ರನ್, ಕುಂದಾಪುರ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರಾದ ಕೆ. ರತ್ನಾಕರ್ ನಾಯ್ಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕುಂದಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತ್ರಿವರ್ಣ ಕಲಾ ಕೇಂದ್ರದ ಮಾರ್ಗದರ್ಶಕ ಹರೀಶ್ ಸಾಗಾ ಮಾಹಿತಿ ನೀಡಿ ಕಲೆಯನ್ನು ಪ್ರದರ್ಶಿಸುವ ವಿಧಾನ ಮತ್ತು ಹೃದಯಿಯನ್ನು ಅರಿತುಕೊಳ್ಳುವ ರೀತಿ ಸಮನಾಗಿದ್ದರೆ ಇನ್ನಷ್ಟು ಬಲಿಷ್ಟವಾಗುತ್ತದೆ ಎನ್ನುವ ಉದ್ದೇಶದಿಂದ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗುತ್ತಿದೆ. ರೋಟರಿ ಕುಂದಾಪುರ ಸಾರಥ್ಯದೊಂದಿಗೆ ಕುಂದಾಪುರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2017-18ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆ ವರ್ಗ-1 (500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು)ರಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ ಗಳಿಸಿದೆ. ವಿ.ವಿ.ಯಲ್ಲಿ ನಡೆದ ಪ್ರಾಂಶುಪಾಲರ ಸಭೆಯಲ್ಲಿ ಪ್ರಭಾರ ಕುಲಪತಿ ಡಾ. ಕಿಶೋರಿ ನಾಯಕ್ ಕೆ. ಪ್ರಶಸ್ತಿಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮತ್ತು ನಿರ್ವಾಹಕ ಸಂಪಾದಕ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸ ಸಂ ಸ್ಪೂರ್ತಿ ಎಸ್. ಫೆರ್ನಾಂಡಿಸ್, ಪ್ರವೀಣ್ ಮೊಗವೀರ ಗಂಗೊಳ್ಳಿ, ಡಾ. ದೀಪಾ ರೇಷ್ಮಾ ಶೆಟ್ಟಿ, ರಕ್ಷಿತ್ ರಾವ್ ಗುಜ್ಜಾಡಿ, ನೂತನ್ ಎಸ್. ರವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮಂಗಳೂರು ವಿ.ವಿ.ಯ ಕುಲಸಚಿವ ಪ್ರೊ. ಎ. ಎಮ್. ಖಾನ್, ಪರೀಕ್ಷಾಂಗ ಕುಲಸಚಿವ ಡಾ. ವಿ. ರವೀಂದ್ರಾಚಾರಿ, ಹಣಕಾಸು ಅಧಿಕಾರಿ ಡಾ. ದಯಾನಂದ ನಾಯ್ಕ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣವನ್ನು ಅಂಕಗಳಿಕೆಯ ಸಾಧನವಾಗಿ ಮಾತ್ರ ಪರಿಗಣಿಸಲದೇ ಕಲೆ ಸಾಹಿತ್ಯ ಕ್ರೀಡೆಯನ್ನೂ ಒಳಗೊಂಡಂತೆ ನೋಡುವುದರಿಂದ ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಾಧ್ಯವಾಗುತ್ತದೆ. ಬೈಂದೂರು ಸುತ್ತಲಿನ ಕಲಾ ಸಂಸ್ಥೆಗಳು ಪಠ್ಯಾಧಾರಿತ ಶಿಕ್ಷಣದಲ್ಲಿನ ಕೊರತೆಯನ್ನು ನೀಗಿಸುವಲ್ಲಿ ಶ್ರಮವಹಿಸುತ್ತಿದೆ ಎಂದು ನಿವೃತ್ತ ಯೋಧ ಚಂದ್ರಶೇಖರ ನಾವಡ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಬುಧವಾರ ಲಾವಣ್ಯ ರಿ. ಬೈಂದೂರು ಇದರ ಅಂಗ ಸಂಸ್ಥೆ ರಿದಂ ನೃತ್ಯ ಶಾಲೆ ಬೈಂದೂರು ಇದರ 18ನೇ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿ ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ವಿಕಾಸಕ್ಕೆ ಪೂರಕವಾಗುವ ಶಿಕ್ಷಣ ಮಾತ್ರವೇ ಉತ್ತಮ ಶಿಕ್ಷಣ ಎಂದೆನಿಸಿಕೊಳ್ಳುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಳ್ಳದ ಶಿಕ್ಷಣ ಪರಿಪೂರ್ಣತೆಯನ್ನು ಕಂಡುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಪೂರವಾಗಿ ಇದ್ದಾಗಲೇ ಮಕ್ಕಳ ಕಲಿಕೆ ಉತ್ತಮವಾಗುತ್ತದೆ ಎಂದರು. ವೇಗದ ಹಾಗೂ ತಾಂತ್ರಿಕ ಬದುಕಿನ ನಡುವೆ ಭಾವನಾತ್ಮಕ ಸಂಬಂಧಗಳು ದೂರವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಶಾಲಾ ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ ಹಾಗೂ ಕ್ರೀಡೆಗಳನ್ನು ಒಳಗೊಂಡ ಸಂಸ್ಕಾರಯುತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 16: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಮೇ 16 ರಿಂದ ಲಘು ವಾಹನಗಳಾದ ಮಿನಿ ಬಸ್ಗಳು, ಜೀಪು, ವ್ಯಾನ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಮಾತ್ರ ಹಾಗೂ ಕ್ಯೂರಿಂಗ್ ಸಂಪೂರ್ಣವಾಗಿ ಮುಗಿದ ನಂತದ ಜೂನ್ 1 ರಿಂದ ಮಿನಿ ಬಸ್ಗಳು, ಜೀಪು, ವ್ಯಾನ್, ಕಾರುಗಳು ಹಾಗೂ ದ್ವಿಚಕ್ರ ವಾಹನಗಳೊಂದಿಗೆ ಎಲ್ಸಿವಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಅಲ್ಲಿಯವರೆಗೆ ಉಡುಪಿ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಹಾಗೂ ಮಂಗಳೂರು-ಕಾರ್ಕಳ-ಮಾಳ ಘಾಟ್-ಶೃಂಗೇರಿ-ತೀರ್ಥಹಳ್ಳಿ ಮೂಲಕ ಸಂಚರಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹಿಂದಿನ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರ ಹಾಡಿ ವಾಸ್ತವ್ಯದಿಂದ ಬೈಂದೂರು ತಾಲೂಕಿನ ಆ ಪುಟ್ಟ ಊರು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದು ಹತ್ತಾರು ಭರವಸೆಗಳನ್ನು ನೀಡಿ ಹೋಗಿದ್ದರು. ಹೌದು, ಮೂಲಭೂತ ಸೌಕರ್ಯಗಳಿಲ್ಲದೇ ಸೊರಗಿದ್ದ ಕೊರಗರ ಕಾಲೋನಿ ಇಂದು ಸ್ವಲ್ಪ ಬದಲಾಗಿದೆ. ಹಾಗಾದರೆ ಸಚಿವರು ಬಂದು ಹೋದ ಬಳಿಕ ಮುರೂರಿನಲ್ಲಿ ಆಗಿದ್ದೇನು? ಸಚಿವರು ಕೊಟ್ಟ ಭರವಸೆಗಳಲ್ಲವೂ ಈಡೇರಿದವೇ? ಈ ಬಗ್ಗೆ ಕುಂದಾಪ್ರ ಡಾಟ್ ಕಾಂ ರಿಯಾಲಿಟಿ ಚೆಕ್ ನಡೆಸಿದೆ. ಅಂದು 2016, ಡಿ. 6ರಂದು ಸಚಿವ ಹೆಚ್. ಆಂಜನೇಯ ಹೊಸವರ್ಷದ ಮುನ್ನಾದಿನ ಮುರೂರಿನಲ್ಲಿ ವಾಸ್ತವ್ಯ ಹೂಡಿ ಅಲ್ಲಿಯೇ ಹೊಸವರ್ಷ ಆಚರಿಸುವ ಬಗ್ಗೆ ಘೋಷಿಸಿದರು. ಅದಕ್ಕೂ ಮುನ್ನಾ ಮುರೂರಿಗೆ ನೆಟ್ಟಗೆ ಒಂದು ಸಂರ್ಪಕ ರಸ್ತೆಯೂ ಇರಲಿಲ್ಲ. ಅನುದಾನದ ಕೊರತೆಯಿಂದ ಕಪ್ಪಾಡಿ ಹೊಳೆ ಸೇತುವೆ ಕಾಮಗಾರಿ ಕೂಡಾ ನಿಂತು ಹೋಗಿತ್ತು. ಎರಡು ಮನೆ ಅರ್ಧಬರ್ಧ ಆಗಿದ್ದು, ಮುಂದೆ ಕಟ್ಟಲಾಗದೆ ಕೈಚೆಲ್ಲಿದ್ದರು. ಮತ್ತಿಬ್ಬರು ಮನೆ ಕಟ್ಟುವ ಕನಸು ಕಾಣುತ್ತಾ…
