ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದ , ಹೂವಿನ ಬೆಳೆಗಾರರಿಗೆ ಉಂಟಾದ ನ?ಕ್ಕೆ ರೂ. ೨೫,೦೦೦ ಪರಿಹಾರವನ್ನು ಗರಿಷ್ಟ ಹೆಕ್ಟೇರ್ ವಿಸ್ತೀರ್ಣಕ್ಕೆ ಮುಖ್ಯಮಂತ್ರಿಯವರು ಘೋಷಿಸಿದ್ದು, ಪ್ರಸ್ತುತ ಸದರಿ ಘೋಷಿಸಿರುವ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಪರಿಹಾರವನ್ನು 2019-20ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯ ಆಧಾರದಲ್ಲಿ ಪಾವತಿಸಲಾಗುವುದು. ರೈತರು ತಾವು ಬೆಳೆದಿರುವ ಬಹು ವಾರ್ಷಿಕ ಪುಪ್ಪ ಬೆಳೆಯು 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪು? ಬೆಳೆಗಳು 2019-20ನೆ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಸಂಬಂದಿಸಿದ ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗಳಲ್ಲಿ ಪರಿಶೀಲಿಸಿಕೊಳ್ಳುವುದು. ರೈತರು ಈಗಾಗಲೇ ಇಲಾಖೆಯ FRUITS ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು, ಬೆಳೆ ಸಮೀಕ್ಷೆಯಲ್ಲಿ ಪು? ಬೆಳೆ ದಾಖಲಾಗದ ರೈತರು ಅರ್ಜಿ, ಪಹಣಿ, ಆಧಾರ್ ನ ಪ್ರತಿ , ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಹಲವೆಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿಮೀರಿದ್ದು ಇದುವೆರೆಗೆ ತಾಲೂಕು ಪಂಚಾಯತ್ ಅಥವಾ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಆಗ್ರಹಿಸಿದ್ದಾರೆ. ಬುಧವಾರ ಬೈಂದೂರು ತಹಸೀಲ್ದಾರರ ಮೂಲಕ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಬೈಂದೂರು ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ತಲೆ ದೋರಿದೆ. ಪ್ರತೀ ವರ್ಷ ಮಾರ್ಚ್ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೋರುತ್ತಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ಸ್ಪಂದಿಸುತ್ತಿತ್ತು. ಆದರೆ ಈ ವರ್ಷ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು, ಮೇ ತಿಂಗಳು ಅರ್ದ ಕಳೆದರೂ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ಸ್ಥಳೀಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದವರು ಆರೋಪಿಸಿದ್ದಾರೆ. ಕೊರೊನಾ ಮಾಹಾಮಾರಿಯಿಂದಾಗಿ ಜನರೂ ಹೊರ ಹೋಗಲು ಭಯಪಡುತ್ತಿದ್ದಾರೆ. ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂಡಿಯನ್ ಸೈಕೆಯಾಟ್ರಿಸ್ಟ್ಸ್ ಸೊಸೈಟಿ ಮತ್ತು ಶಿವಮೊಗ್ಗದ ಕ್ಷೇಮ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ಅಂತರ್ಜಾಲ ಮೂಲಕ ನಡೆಸಿದ್ದ ರಾಷ್ಟ್ರೀಯ ಮಟ್ಟದ ’Minding Our Minds During Lockdown’ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಕೇಂದ್ರದ ಹತ್ತನೆ ತರಗತಿಯ ವಿದ್ಯಾರ್ಥಿ ಮೊಗೇರಿ ಚಿನ್ಮಯ ಅಡಿಗ ಪ್ರಥಮ ಸ್ಥಾನ ಪಡೆದಿರುವನು. ಅವನು ಬೈಂದೂರು ತಾಲ್ಲೂಕು ಕೆರ್ಗಾಲು ಗ್ರಾಮದ ಮೊಗೇರಿ ಜನಾರ್ದನ ಅಡಿಗ-ಅನುಪಮಾ ಕೋಟ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನತೆ ಕೋರೋನಾ – ಲಾಕ್ಡೌನ್ನಿಂದ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ನಿಗಮಗಳು ದರ ಹೆಚ್ಚಿಸಿ ಹಾಗೂ ಹಿಂದಿನ ಮೂರು ತಿಂಗಳ ಎವರೇಜ್ ಆಧಾರದಲ್ಲಿ ಬಿಲ್ ನೀಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿದ್ದು, ಕೂಡಲೇ ಇದನ್ನು ಸರಿಪಡಿಸಿ ಇಲ್ಲವೇ ಮೂರು ತಿಂಗಳ ಬಿಲ್ ಮನ್ನಾ ಮಾಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಕೆಲಸ ಕಾರ್ಯವಿಲ್ಲದೇ ಪರದಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರು ನಾಲ್ಕು ಪಟ್ಟು ಹೆಚ್ಚಿನ ಬಿಲ್ ನೀಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಈ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ದೂರುಗಳು ಬಂದಿವೆ. ನಿರ್ದಿಷ್ಟ ಬಿಲ್ ನೀಡಿ, ಇಲ್ಲವೇ ಮೂರು ತಿಂಗಳುಗಳ ಬಿಲ್ ಮನ್ನಾ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಯುವ ಕಾಂಗ್ರೆಸ್ ಮನವಿಯಲ್ಲಿ ತಿಳಿಸಿದೆ. ಬೈಂದೂರು ಉಪ ತಹಶೀಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು ರಸ್ತೆಗಿಳಿಯಲಿವೆ. ಬಸ್ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು ಕರೆದೊಯ್ಯುವಂತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕೋವಿಡ್ 19 ಲಾಕ್ಡೌನ್ ಪ್ರಯುಕ್ತ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಘಟಕ ವ್ಯವಸ್ಥಾಪಕರು, ಕೆಎಸ್ಆರ್ಟಿಸಿ ಉಡುಪಿ ಮತ್ತು ಮಾಲಕರು, ಭಾರತಿ ಮೋಟಾರ್ಸ್, ಉಡುಪಿ ಇವರು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳಲ್ಲಿ ಬಸ್ಸು ಸಂಚಾರ ಪ್ರಾರಂಭಿಸುವ ಕುರಿತು , ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಈ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಂದ ಕಛೇರಿಗಳಿಗೆ ಬರಲು ಬಸ್ಸಿನ ವ್ಯವಸ್ಥೆ ಮಾಡುವಂತೆ ಮನವಿಗಳು ಸ್ವೀಕೃತವಾಗಿರುತ್ತವೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಕಛೇರಿಗೆ ಸಾರ್ವಜನಿಕರಿಂದ ಮನವಿಗಳು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಓಡಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್(ಟಿಟಿ) ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ಸಂದರ್ಭ, ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ ಹನ್ನೊಂದು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಮುಂಬೈನ ಭಾಂಡುಪ್ನಿಂದ ಊರಿಗೆ ಪ್ರಯಾಣ ಬೆಳಿಸಿದ್ದ ಆಲೂರು ಸಮೀಪ ಹುಯ್ಯಾಣದ ಹನ್ನೊಂದು ಮಂದಿಯಿದ್ದ ಟೆಂಪೋ ಟ್ರಾವೆಲ್ಲರ್ ಲೋನಾವಾಲಾ ಸಮೀಪಿಸುತ್ತಿದ್ದಂತೆಯೇ ಸ್ಟೇರಿಂಗ್ ಸಮೀಪದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ವಾಹನಕ್ಕೆ ವ್ಯಾಪಿಸಿತ್ತು. ಚಾಲಕನ ಸಮಯಪ್ರಜ್ಞೆಯಿಂದಾಗಿ ಟಿಟಿ ಒಳಗಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆರವಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ: ದಾರಿ ಮಧ್ಯೆಯೇ ವಾಹನ ಸುಟ್ಟು ಹೋಗಿದ್ದರಿಂದ ಅತಂತ್ರರಾದ ಕುಟುಂಬ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಪರ್ಕಿಸಿದ್ದು, ತಕ್ಷಣವೇ ಸ್ಪಂದಿಸಿದ ಅವರು ಸ್ಥಳೀಯ ಸಂಘಟನೆಗಳ ಮುಖಂಡರಿಗೆ ಕರೆ ಮಾಡಿ ನೆರವಾಗುವಂತೆ ಕೋರಿಕೊಂಡರು. ಅಲ್ಲಿನ ಪೊಲೀಸರ ಸಹಕಾರದಿಂದ ಕುಟುಂಬಿಕರನ್ನು ನಿಪ್ಪಾಣಿಯವರೆಗೆ ಬಿಡಲಾಯಿತು. ಅಲ್ಲಿಂದ ಊರಿಗೆ ಸಚಿವ ಕೋಟ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ ಪಿಂಚಣಿ ತೆಗೆದಿರಿಸಿದ್ದಾರೆ. ವಿವಿಧ ಸಂಘಟನೆಗಳು, ದಾನಿಗಳು ಅವರಿಗೆ ಆಹಾರ ಸಾಮಗ್ರಿಯ ಕಿಟ್ ವಿತರಿಸುತ್ತಿದ್ದರೆ, ಶ್ಯಾನುಭಾಗರು ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿಗೆ ನೀರಿನ ಬಾಟಲಿ ಮತ್ತು ಬಿಸ್ಕಿಟ್ ಕೊಡುತ್ತಿದ್ದಾರೆ. ಬೇಸಿಗೆಯ ಕಡು ಬಿಸಿಲಿನಲ್ಲಿ ಕರ್ತವ್ಯದ ನಿಮಿತ್ತ ಸುತ್ತಾಡಬೇಕಾಗಿರುವ ಅವರಿಗೆ ಈ ವಸ್ತುಗಳ ಅಗತ್ಯ ಹೆಚ್ಚಾಗಿದೆ ಎನ್ನುವುದು ಅವರ ನಿಲುವು. ಹತ್ತು ದಿನಗಳ ಹಿಂದೆ ವಾರಾವಧಿಗಾಗುವ ಮೊದಲ ಕಂತಿನ ವಸ್ತುಗಳನ್ನು ವಿತರಿಸಿದ್ದ ಅವರು ಎರಡು ದಿನಗಳ ಹಿಂದೆ ಎರಡನೆ ಕಂತಿನ ವಿತರಣೆ ನಡೆಸಿದರು. ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ನಿಶಾ ಜೇಮ್ಸ್ ಮತ್ತು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸಂಗೀತಾ ಅವುಗಳನ್ನು ಸ್ವೀಕರಿಸಿ, ಶ್ಯಾನುಭಾಗರಿಗೆ ಕೃತಜ್ಞತೆ ಸಲ್ಲಿಸಿದರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ, ಸಾಮಾಜಿಕ ಕಾರ್ಯಕರ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ನಡುವೆ ಸಂಚಾರಕ್ಕೆ ಅಂತರ್ಜಿಲ್ಲಾ ಪಾಸ್ ಪಡೆಯದೇ, ಆಯಾ ಸಂಸ್ಥೆಗಳ ಗುರುತು ಪತ್ರದೊಂದಿಗೆ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ಸಂಚರಿಸಬಹುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಒಂದೇ ಘಟಕವಾಗಿ ಪರಿಗಣಿಸಲಾಗಿದೆ. ಹಾಗಾಗಿ ಈಗಾಗಲೇ ಅನುಮತಿಸಲಾಗಿರುವ ಚಟುವಟಿಕೆಗಳನ್ನು ಕೈಗೊಳ್ಳಲು ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ವ್ಯಕ್ತಿಗಳು ಕೆಲಸ ಮಾಡುತ್ತಿರುವ ಸಂಸ್ಥೆಯಿಂದ ನೀಡಲಾಗುವ ಪತ್ರ, ಹಾಗೂ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದ್ದು, ಪ್ರತ್ಯೇಕ ಪಾಸ್ ಅಗತ್ಯವಿರುವುದಿಲ್ಲ. ಸಂಜೆ 7 ರಿಂದ ಬೆಳಿಗ್ಗೆ 7ರ ತನಕದ ಕರ್ಪ್ಯೂ ಅವಧಿಯಲ್ಲಿ ಈ ಹಿಂದೆ ಅಗತ್ಯ ಚಟುವಟಿಕೆಗಳಿಗೆ ನೀಡಲಾಗಿರುವ ಪಾಸ್ನ್ನೇ ಮಾನ್ಯ ಮಾಡಲಾಗಿದೆ. ಉಡುಪಿ ಮಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಸಂಚಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ►…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ಲಾಕ್ ಡೌನ್ ಸಮಸ್ಯೆಯಿಂದ , ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಗಳಿಗೆ ಕಳುಹಿಸಲು ವಾಹನ ಸಂಬಂಧಿತ ವ್ಯವಸ್ಥೆ ಮಾಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸರ್ಕಾರ ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಕ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪ?ಪಡಿಸಿದ್ದಾರೆ. ರಾಜ್ಯ ಸರಕಾರವು ಅಂತರ್ ರಾಜ್ಯ ಪ್ರಯಾಣಿಕರಿಗೆ ಸ್ವ ಊರಿಗೆ ಮರಳಲು ಸಹಾಯವಾಗುವಂತೆ ಸೇವಾ ಸಿಂಧು App ತಯಾರಿಸಿದ್ದು, ಇದರಲ್ಲಿ ಈಗಾಗಲೇ ಹಲವಾರು ಮಂದಿ ಈ App ಮೂಲಕ ನೊಂದಣಿ ಮಾಡಿಕೊಂಡಿರುತ್ತಾರೆ. ಆದರೆ ಕೆಲವು ಮಂದಿ, ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಕ್ಕೆ ತೆರಳಲು ಮತ್ತು ಅವರು ಪ್ರಯಾಣದ ವ್ಯವಸ್ಥೆಗಳನ್ನು ಮಾಡುವುದಾಗಿ ತಿಳಿಸಿ ಹಣವನ್ನು ವಸೂಲಿ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಉಡುಪಿ ಜಿಲ್ಲೆಯಲ್ಲಿರುವ ಹೊರರಾಜ್ಯದ ಪ್ರಯಾಣಿಕರು ತಮ್ಮ ಸಂಬಂಧಿತ ರಾಜ್ಯಕ್ಕೆ ತೆರಳಲು ಅಗತ್ಯ ಮಾಹಿತಿ ನೀಡಲು ಮತ್ತು ಸಂದೇಹಗಳನ್ನು ಪರಿಹರಿಸಲು , ಜಿಲ್ಲೆಯ ನೋಡಲ್…
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಸಿಂಧುವಿನ ಮೂಲಕ ಪಾಸ್ ಪಡೆದು ಹೊರ ರಾಜ್ಯಗಳಿಂದ ಮರುಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಗುರುತಿಸಲಾಗಿರುವ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕಳೆದ ಸೋಮವಾರದಿಂದ ಇಲ್ಲಿಯ ತನಕ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 306 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುಂದಾಪುರ ತಾಲೂಕಿಗೆ ಮೇ.4ರಿಂದ ತೆಲಂಗಾಣದಿಂದ 118, ಕೇರಳದಿಂದ 1, ಗುಜರಾತ್ನಿಂದ 6, ಗೋವಾದಿಂದ 1, ಮಹಾರಾಷ್ಟ್ರದಿಂದ 39 ಹಾಗೂ ತಮಿಳುನಾಡಿನಿಂದ 7 ಮಂದಿ ಬಂದಿದ್ದಾರೆ. ಬೈಂದೂರು ತಾಲೂಕಿಗೆ ತೆಲಂಗಾಣದಿಂದ 109, ಆಂಧ್ರಪ್ರದೇಶದಿಂದ 6, ಮಹಾರಾಷ್ಟ್ರದಿಂದ 15, ಗೋವಾದಿಂದ 6, ಗುಜರಾತ್ನಿಂದ 1 ಮತ್ತು ಕೇರಳದಿಂದ ಒಬ್ಬರು ಬಂದಿದ್ದಾರೆ. ಇವರೆಲ್ಲರೂ ಬೈಂದೂರು ತಾಲ್ಲೂಕಿನ ಶಿರೂರು, ಕೊಲ್ಲೂರು ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮೂಲಕ ಜಿಲ್ಲೆ ಪ್ರವೇಶಿಸಿದ್ದಾರೆ. ಅಲ್ಲಿನ ಚೆಕ್ಪೋಸ್ಟ್ಗಳಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಿದ ಅವರಿಗೆ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕುಂದಾಪುರ ಹಾಗೂ ಬೈಂದೂರಿನ ಹಿಂದುಳಿದ ಮತ್ತು ಅಲ್ಪಸಂಖ್ಯಾತರ…
