ಕುಂದಾಪ್ರ ಡಾಟ್ ಕಾಂ ಸುದ್ದಿ. ಕಿರಿಮಂಜೇಶ್ವರ : ಶುಭದಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ೨೦೧೮-೧೯ ನೇ ಸಾಲಿನಲ್ಲಿ ಅತ್ಯತ್ತಮ ಸರಾಸರಿ ಅಂಕಗಳೊಂದಿಗೆ ಬೈಂದೂರು ವಲಯದಲ್ಲಿ ಶೇಕಡಾ ೧೦೦ ಫಲಿತಾಂಶವನ್ನು ದಾಖಲಿಸಿರುತ್ತದೆ .ಈ ಸಂದರ್ಭದಲ್ಲಿ ಶುಭದಾ ಎಜ್ಯುಕೇಶನಲ್ ಟ್ರಸ್ಟಿನ ಸ್ಥಾಪಕ ಅಧ್ಯಕ್ಷರಾದ ಡಾ|| ಎನ್.ಕೆ. ಬಿಲ್ಲವ ಮತ್ತು ಸಲಹಾ ಸಮಿತಿಯ ಸದಸ್ಯರಾದ ರಾಜೀವ ಶೆಟ್ಟಿ ಇವರು ಶಾಲಾ ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು. ಶಾಲೆಯ ನಿರ್ದೇಶಕರಾದ ಕೆ.ಪುಂಡಲೀಕ್ ನಾಯಕ್, ಸಂಯೋಜಕಿ ಗೀತಾದೇವಿ ಅಡಿಗ, ಸಂಚಾಲಕ ಶಂಕರ ಪೂಜಾರಿ, ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಐತಿಹಾಸಿಕ ಮಹತೋಭಾರ ಶ್ರೀ ಸೇನೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಮೇ.03ರಿಂದ ಮೊದಲ್ಗೊಂಡು ಮೇ.11ರ ತನಕ ಜರುಗಲಿದ್ದು, ಆ ಪ್ರಯುಕ್ತ ಶುಕ್ರವಾರ ಮಧ್ಯಾಹ್ನ ದೇವಳದ ತಂತ್ರಿ ಕೃಷ್ಣ ಸೋಮಯಾಜಿ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು. ಬೆಳಿಗ್ಗೆ ದೇವಳದಲ್ಲಿ ಕಲಶಪ್ರತಿಷ್ಠೆ, ಕಂಕಣ ಧಾರಣೆಯ ನಂತರ ರುಜ್ಜು ಬಂಧನ ಮುಂತಾದ ಧಾರ್ಮಿಕ ವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಅಧ್ಯಕ್ಷ ಚೆನ್ನಕೇಶವ ಉಪಾಧ್ಯಾಯ, ಅರ್ಚಕ ವೃಂದ, ಸ್ಥಳೀಯ ಜನಪ್ರತಿನಿಧಿಗಳು, ದೇವಳದ ಸಿಬ್ಬಂದಿವರ್ಗ ಹಾಗೂ ಊರಿನ ಹತ್ತು ಸಮಸ್ತರು ಭಾಗವಹಿಸಿದ್ದರು. ಮೇ.೯ರಂದು ಮನ್ಮಹಾರಥೋತ್ಸವ ಜರುಗಲಿದ್ದು, ರಥೋತ್ಸವದ ಪ್ರಯುಕ್ತ ಪ್ರತಿದಿನ ಸಂಜೆ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ, ಅವಭೃತೋತ್ಸವ, ನಗರೋತ್ಸವ ನಡೆಯಲಿದೆ. ಉತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಾಸ್ತವ ಒಪ್ಪಿಕೊಂಡರೆ ವಾಸ್ತುಬೇಕಿಲ್ಲ. ಸತ್ಯ ಹೇಳುವವನಿಗೆ ಅಂಜಿಕೆ ಇಲ್ಲ. ಮನುಷ್ಯನ ಕಣ್ಣು ತಪ್ಪಿಸಿ ತಪ್ಪು ಮಾಡಿದರೂ ಭಗವಂತನ ಕಣ್ಣನ್ನು ಮುಚ್ಚಿಸಲು ಸಾಧ್ಯವಿಲ್ಲ. ಸೃಷ್ಠಿ ಇರುವುದು ಎಷ್ಟು ಸತ್ಯವೋ ಹಾಗೆ ಸೃಷ್ಠಿಕರ್ತ ಇರುವುದೂ ಅಷ್ಟೇ ಸತ್ಯ ಎಂದು ಸ್ವರ್ಣ ಪೀಠಿಕಾಪುರ ಗೌರಿಗದ್ದೆ ದತ್ತ ಆಶ್ರಮದ ಶ್ರೀ ವಿನಯ ಗುರೂಜಿ ಹೇಳಿದರು. ಗುರುವಾರ ಇಲ್ಲಿನ 11ನೇ ಉಳ್ಳೂರು ಮೇಕೋಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನರಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಎಲ್ಲರ ಹಾಗೆ ಇದ್ದು, ಎಲ್ಲರ ಹಾಗೆ ಬದುಕಿ ಪ್ರಪಂಚಕ್ಕೆ ಒಳ್ಳೆಯದನ್ನು ಕೊಟ್ಟು ಹೋಗುವವನು ಅವತಾರಿ. ಆತ ಅವದೂತನಲ್ಲ. ತನ್ನದೂ ಅದೇ ಮಾರ್ಗ. ಸಮಾಜದ ಕಟ್ಟಕಡೆಯ ಜನರಿಗೆ ಉತ್ತಮ ಜೀವನ ಕಲ್ಪಿಸುವುದು ತನ್ನು ಗುರಿ ಎಂಬುದನ್ನು ಪ್ರತಿಪಾದಿಸಿದ ಅವರು ಮೂಡನಂಬಿಕೆ, ಕಂದಾಚಾರಗಳಿಗೆ ಬಲಿ ಬೀಳಬೇಡಿ. ದೇಶ, ಸಮಾಜ, ಹಳ್ಳಿ ಜನರ ಸೇವೆ ಮಾಡಿ. ಹೊಟ್ಟೆಕಿಚ್ಚು, ಸುಳ್ಳು ಹೇಳುವುದನ್ನು ಬಿಟ್ಟು ಸಮಾಜಕ್ಕಾಗಿ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ದಂಡಾಧಿಕಾರಿಗಳ ಅಧಿಸೂಚನೆಯನ್ವಯ ಉಡುಪಿ ಹಾಗೂ ಕುಂದಾಪುರ ತಾಲೂಕು ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ (ವಲಯವಾರು) ನೀಡಲಾಗುತ್ತಿದ್ದು, ಈ ಬಗ್ಗೆ ಆಟೋರಿಕ್ಷಾ ಮಾಲಕರು ಪರವಾನಿಗೆ ಮತ್ತು ವಾಹನದ ಮೂಲ ದಾಖಲೆಗಳನ್ನು ಹಾಜರುಪಡಿಸಿ, ವಲಯವಾರು ಸ್ಟಿಕ್ಕರ್ನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಸಾರಿಗೆ ಸೌಧ, ಮಣಿಪಾಲ ಇಲ್ಲಿ ಕಚೇರಿಯ ಸಮಯದಲ್ಲಿ ಪಡೆಯುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ 30 ರ ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆದರೆ ನಿಗದಿತ ಸಮಯದಲ್ಲಿ ಕಾಮಗಾರಿ ದುರಸ್ತಿ ಆಗದ ಕಾರಣ ಹಾಗೂ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ವಾಹನ ಸಂಚಾರ ನಿಷೇಧ ಆದೇಶವನ್ನು ಮೇ 15 ರ ವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಈ ಅವಧಿಯಲ್ಲಿ ಸಾಮಾನ್ಯ ಬಸ್ಸ್ಗಳು, ಜೀಪು, ವ್ಯಾನ್, ಎಲ್.ಸಿ.ವಿ(ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ ಮಾರ್ಗವಾಗಿ ಹಾಗೂ ರಾಜಹಂಸ, ಐರಾವತ ಬಸ್ಸ್ಗಳು, ಖಾಸಗಿ ಲಕ್ಸುರಿ ಬಸ್ಗಳು, ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು ಉಡುಪಿ-ಕುಂದಾಪುರ-ಸಿದ್ಧಾಪುರ-ಹೊಸಗಂಡಿ- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮೂಲಕ ಸಂಚರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019-20 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಗೊಳಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಲಾಖಾ ವತಿಯಿಂದ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಯಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು ಸರ್ಕಾರವು ಅವಕಾಶ ಕಲ್ಪಿಸಿದೆ. 5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಒಟ್ಟು 25 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಮೇ 2 ರಿಂದ ಪಡೆದು ಭರ್ತಿ ಮಾಡಿ ಅರ್ಹ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮೇ 13 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574814 ಅನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಿಐಟಿಯು ಹಾಗೂ ವಿವಿಧ ಸಂಘಟನೆ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಪುರಮೆರವಣಿಗೆ ಹಾಗೂ ಬಹಿರಂಗ ಸಮಾವೇಶ ಜರುಗಿತು. ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್ ಮಾತನಾಡಿ ಸಾಮ್ರಾಜ್ಯಶಾಹಿ, ಬಂಡವಾಳಶಾಹಿ ಧೋರಣೆಯಿಂದ ಕಾರ್ಮಿಕರ ಶೋಷಣೆ ಇಂದಿಗೂ ನಿಂತಿಲ್ಲ. ಸಾಮಾಜ್ಯಶಾಹಿ, ಬಂಡವಾಳಶಾಹಿ ನಡುವೆ ಸಿಲುಕಿದ ಕಾರ್ಮಿಕ ಇನ್ನೂ ಕಷ್ಟ ಕೂಲಿ ಪಡೆಯಲಾಗಿಲ್ಲ ಎಂದರೆ ಅದಕ್ಕಿಂತ ದೊಡ್ಡ ದೌರ್ಭಾಗ್ಯ ಮತ್ತೊಂದಿಲ್ಲ. ಇದರೊಟ್ಟಿಗೆ ನೌಕರಶಾಹಿ ಆಡಳಿತ ಕಾರ್ಮಿಕ ವಲಯಕ್ಕೆ ದೊಡ್ಡ ಅಪಾಯ ತರಲಿದೆ ಎಂದ ಅವರು ಕಾರ್ಮಿಕ ಸಂಘಟನೆಗಳು ಕನಿಷ್ಟ ಕೂಲಿ ಸೌಲಭ್ಯಗಳ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಂಘಟನೆಗಳಲ್ಲಿ ಹೆಚ್ಚು ಹೆಚ್ಚು ಕಾರ್ಮಿಕರು ತೊಗಸಿಕೊಳ್ಳುವ ಮೂಲಕ ಕಾರ್ಮಿಕ ವಲಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು. ಸಿಐಟಿಯು ತಾಲೂಕು ಅಧ್ಯಕ್ಷ ಹೆಚ್.ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷ ವಿ.ನರಸಿಂಹ, ಕಟ್ಟಡ ಕಾರ್ಮಿಕ ಸಂಘಟನೆ ಅಧ್ಯಕ್ಷ ಯು.ದಾಸ ಭಂಡಾರಿ, ಬೀಡಿ ಕಾರ್ಮಿಕ ಸಂಘಟನೆ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳ ರಂಗ ತರಬೇತಿಯನ್ನು ಆಯೋಜಿಸುವ ಮೂಲಕ ಲಾವಣ್ಯವೇ ಹುಟ್ಟುಹಾಕಿದ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ದಾಟಿಸುವ ಕೆಲಸವನ್ನು ಹಲವು ವರ್ಷದಿಂದ ಯಶಸ್ವಿಯಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಮಂಗಳವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ರಿ. ಬೈಂದೂರು ಸಂಸ್ಥೆಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ಸಿದ್ಧಗೊಂಡ ಗುಬ್ಬಿ ಹಾಡು ಹಾಗೂ ತಾಯಿಯ ಕಣ್ಣು ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಲಾವಣ್ಯದ ನಿರ್ದೇಶಕರಾದ ಶ್ರೀನಿವಾಸ ಪ್ರಭು ಉಪ್ಪುಂದ ಉಪಸ್ಥಿತರಿದ್ದರು. ಈ ಸಂದರ್ಭ ಗುಬ್ಬಿ ಹಾಡು ನಾಟಕದ ನಿರ್ದೇಶಕ ನಾಗೇಂದ್ರ ಬಂಕೇಶ್ವರ ಹಾಗೂ ತಾಯಿಯ ಕಣ್ಣು ನಾಟಕದ ನಿರ್ದೇಶಕ ರೋಶನ್ ಕುಮಾರ್ ಅವರನ್ನು ಗೌರವಿಸಲಾಯಿತು. ಇತ್ತಿಚೆಗೆ ವಿವಾಹವಾದ ಲಾವಣ್ಯ ಕಲಾವಿದೆ ಚೈತ್ರಾ ಹಾಗೂ ಸತೀಶ್ ದಂಪತಿಗಳನ್ನು ಅಭಿನಂದಿಸಲಾಯಿತು. ಲಾವಣ್ಯ ರಿ. ಬೈಂದೂರು ಅಧ್ಯಕ್ಷ ಎಚ್. ಉದಯ ಆಚಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮೂರ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಸಂಜನಾ ಉಡುಪ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 620 ಅಂಕ ಪಡೆದ ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಳಾಗಿದ್ದಾಳೆ. ಈಕೆ ಕೋಟ ವಿವೇಕ ಕಾಲೇಜು ಪ್ರಾಂಶುಪಾಲರಾದ ಜಗದೀಶ್ ನಾವಡ ಹಾಗೂ ಸುವರ್ಣ ದಂಪತಿಗಳ ಪುತ್ರಿಯಾಗಿದ್ದು ಪಿಯುಸಿಯಲ್ಲಿ ಸೈನ್ಸ್ ವ್ಯಾಸಂಗ ಮಾಡಿ ಮುಂದೆ ವೈದ್ಯಕೀಯ ಪದವಿ ಪಡೆಯುವ ಹಂಬಲದಲ್ಲಿದ್ದಾಳೆ.
