ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ವಲಯ ಶಿರೂರು ಕಾರ್ಯಕ್ಷೇತ್ರದ ಅಳ್ವೆಗೆದ್ದೆ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಶ್ರೀ ವಿನಾಯಕ ಹಾಗೂ ಪ್ರಿಯದರ್ಶಿನಿ ಜ್ಞಾನವಿಕಾಸ ಕೇಂದ್ರದಲ್ಲಿ ವರಲಕ್ಷ್ಮಿ ಪೂಜೆ ಮತ್ತು ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರಘುರಾಮ್ ಕೆ. ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದರು. ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ಕೆ ವಿನಾಯಕ್ ಪೈ, ಸಿ.ಎಸ್.ಸಿ ಸೆಂಟರಿನಲ್ಲಿ ಸಿಗುವಂತಹ ಸೌಲಭ್ಯವನ್ನು ತಿಳಿಸಿ, ಅದನ್ನು ಉಪಯೋಗಿಸಿಕೊಳ್ಳಿ ಎಂದರು. ಭೀಮಾ ಜ್ಯೋತಿ ಇನ್ಶೂರೆನ್ಸ್ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರು, ಕೇಂದ್ರದ ಸಂಯೋಕಿಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿನಿಧಿ ರೇವತಿ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೃಹ ರಕ್ಷಕ ದಳ ಬೈಂದೂರು ಘಟಕದ ವತಿಯಿಂದ ಬೈಂದೂರು ತಾಲೂಕು ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೈಂದೂರು ತಾಲ್ಲೂಕು ಜೆ ಎಮ್ ಎಫ್ ಸಿ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಜ್ಞಾನೇಶ್ ಮುಗುಳಿ ಮಾತನಾಡಿ ಗೃಹ ರಕ್ಷಕರಿಗೆ ರಾಷ್ಟ್ರ ಧ್ವಜ ನೀಡಿ ರಾಷ್ಟ್ರ ಪ್ರೇಮದೊಂದಿಗೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಗೃಹ ರಕ್ಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಎಪಿಪಿ ವರ್ಷಾ ಆರ್ ಶೆಟ್ಟಿ, ಸರ್ಕಾರಿ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳು, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕಿ ಜಯಶ್ರೀ, ಹೆಡ್ ಕಾನ್ಸ್ ಟೇಬಲ್ ರಾಮಚಂದ್ರ ಎಸ್, ಶ್ರೀ ಮಂಜುನಾಥ ಎ ಕೊಲ್ಲೂರು, ಮೌನೇಶ್ ಗಂಗೊಳ್ಳಿ, ಬೈಂದೂರು ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿ ವಸಂತಿ ಹಾಗೂ ಬೈಂದೂರು ಗೃಹ ರಕ್ಷಕ ದಳ ಘಟಕದ ಗೃಹ ರಕ್ಷಕರು ಹಾಗೂ ಗೃಹ ರಕ್ಷಕಿಯರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್ ಹಿಂಬದಿ ಸೀಟಿನಲ್ಲಿ ಕುಳಿತು ಶಾಲೆಗೆ ತೆರಳುತ್ತಿದ್ದಾಗ ದನ ಅಡ್ಡಬಂದು ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯೊಂಡಿದ್ದ ಶಿಕ್ಷಕ ಗುರುವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ (32) ಮೃತ ದುರ್ದೈವಿ. ಗುರುವಾರ ಬೆಳಿಗ್ಗೆ ಎಂದಿನಂತೆ ಮುದೂರು ಸೆಳ್ಕೋಡು ನಿವಾಸಿ, ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಪತಿ ಶ್ರೀಕಾಂತ್ ಅವರೊಂದಿಗೆ ಬೈಕಿನಲ್ಲಿ ಮನೆಯಿಂದ ಹೊರಟಿದ್ದರು. ವಂಡ್ಸೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನ ಅಡ್ಡಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ಸ್ಕಿಡ್ ಆಗಿ ಬಿದ್ದಿದ್ದಾರೆ. ಶ್ರೀಕಾಂತ್ ಅವರಿಗೆ ಸಣ್ಣಪಟ್ಟು ಗಾಯಗಳಾಗಿದ್ದರೇ, ಹಿಂಬದಿಯಲ್ಲಿ ಕುಳಿತಿದ್ದ ಅಂಬಿಕಾ ಅವರಿಗೆ ತಲೆ ಭಾಗಕ್ಕೆ ಪೆಟ್ಟು ಬಿದ್ದತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 2018ರಲ್ಲಿ ಹೆಮ್ಮಾಡಿ ಸರಕಾರಿ ಮಾದರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಅವರಿಗೆ ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಅವರು ರಾಖಿ ಕಟ್ಟಿ ಶುಭಕೋರಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಮೊಗವೀರ ಸೇರಿದಂತೆ ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಭಾಗವಹಿಸಿದ್ದರು. ಬಳಿಕ ಬೈಂದೂರು ಪೊಲೀಸ್ ಠಾಣೆ ಸೇರಿದಂತೆ ಇನ್ನಿತರ ಕಛೇರಿಗೆ ತೆರಳಿ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಕೋರಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತಿರಂಗ ಹಾರಿಸುವ ನಿಟ್ಟಿನಲ್ಲಿ ಇಂದು ಕುಂದಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜದ ಗಣ್ಯರಾದ ಎಸ್ ಎನ್ ಪಡಿಯಾರ್, ದಿನಕರ್ ಶೆಣೈ, ರಾಜೀವ್ ಶೆಟ್ಟಿ ಮನೆಗೆ ತೆರಳಿ ರಾಷ್ಟ್ರಧ್ವಜ ಹಸ್ತಾಂತರಿಸಿ, ಶುಭಕೋರಲಾಯಿತು. ಈ ಸಂದರ್ಭ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಜಯಲಕ್ಷ್ಮೀ ಗಾಣಿಗ, ಕಾರ್ಯದರ್ಶಿ ರೋಹಿಣಿ ಪೈ, ಪುರಸಭಾ ಸದಸ್ಯೆ ಪುಷ್ಪಾ ಶೇಟ್ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ವಿನಾಯಕ ನಗರದ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿನಾಯಕ ನಗರದಲ್ಲಿಯೇ ವಾಸವಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಜುಲೈ 29ರಂದು ವಿನಾಯಕ ನಗರದ ನಿವಾಸಿ ಮಂಜುನಾಥ ಜೋಗಿ ಅವರ ಕುಟುಂಬ ಸಮೇತ ಪಂಡರಾಪುರ ಮತ್ತು ಶಿರಡಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಗೆ ತೆರಳಿದ್ದರು. ಈ ವೇಳೆ ಸುಭಾಶ್ಚಂದ್ರ ಆಚಾರ್ಯ ಮನೆಯ ಬಾಗಿಲನ್ನು ಒಡೆದು ಕಪಾಟಿನಲ್ಲಿರಿಸಿದ 27 ಗ್ರಾಂ ಚಿನ್ನಾಭರಣ ಮತ್ತು 13,500 ರೂ. ನಗದು ಹಣವನ್ನು ಕಳವು ಮಾಡಿದ್ದರು. ಇದೀಗ ಆರೋಪಿಯನ್ನು ಬಂಧಿಸಿರುವ ಪೋಲೀಸರು ಆತನಿಂದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೆಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ 1,610 ರೂ. ನಗದು ಸ್ವಾಧೀನವಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಸುಭಾಶ್ಚಂದ್ರ ಆಚಾರ್ ಮನೆ ಕಟ್ಟುತ್ತಿದ್ದು ಹಣಕ್ಕಾಗಿ ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಮಹಾರಾಜ ಶ್ರೀ ವರಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಕಳವು ಮಾಡಲು ಯತ್ನಿಸಿ ಬರಿಗೈಯಲ್ಲಿ ಮರಳಿದ್ದು, ದಂಪತಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದು, ಪತಿ ಜೈಲು ಪಾಲಾದರೆ, ಪತ್ನಿ ರಿಮ್ಯಾಂಡ್ ಹೋಮ್ ಸೇರಿದ್ದಾಳೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ ಪತ್ನಿ ಆರೋಪಿತರು. ಮಂಗಳವಾರ ಮಧ್ಯಾಹ ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಬಾಗಿಲು ಹಾಕಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕರುಣಾಕರ ದೇವಾಡಿಗ ಹಾಗೂ ಆತನ ಪತ್ನಿ ದೇವಸ್ಥಾನಕ್ಕೆ ಭಕ್ತರಂತೆ ತೆರಳಿ ಕಳವು ಯತ್ನ ನಡೆಸಿದ್ದಾರೆ. ಮೊದಲು ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬ ಒಡೆಯುವ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ನಂತರ ಗರ್ಭಗುಡಿಯನ್ನೂ ಪ್ರವೇಶಿಸಿ ಬರಿಗೈಯಲ್ಲಿ ಹಿಂದಕ್ಕೆ ಮರಳಿದ್ದಾರೆ. ಈ ಕೃತ್ಯ ದೇವಸ್ಥಾನ ಸಿಸಿಟಿವಿಯಲ್ಲಿ ದಾಖಲಾಗಿದೆ. ದೇವಸ್ಥಾನ ಕಳವು ಪ್ರತ್ನ ನಡೆಸಿದ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ವ್ಯವಸಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಂ.ನಾಯಕ್ ದೂರು ನೀಡಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.11: ತಾಲೂಕಿನ ಕೊರ್ಗಿ ಗ್ರಾಮದ ದಬ್ಬೆಕಟ್ಟೆ ಕಾಡಿನಬೇರೆ ಬಳಿ ಶಾಲೆಯಿಂದ ಬಸ್ಸಲ್ಲಿ ಬರುವ ಮಗಳನ್ನು ಮನೆಗೆ ಕರೆದೊಯ್ಯಲು ನಿಂತಿದ್ದ ಮಹಿಳೆ ತಲೆಗೆ ರಾಡಿನಲ್ಲಿ ಹೊಡೆದ ಆಭರಣ ದೋಚಿದ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಹೊಸಾಡು ನಿವಾಸಿ ಪ್ರವೀಣ್ (24) ಬಂಧಿತ ಆರೋಪಿ ಹಲ್ಲೆ ನಡೆಸಿ ದೋಚಿದ ಆಭರಣ ಗುಜ್ಜಾಡಿ ಸೊಸೈಟಿಯೊಂದರಲ್ಲಿ ಗಿರವಿ ಇಟ್ಟು 41 ಸಾವಿರ ನಗದು ಪಡೆದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುವಾರ ಸಂಜೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅಗಸ್ಟ್ 25ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ. ಅಗಸ್ಟ್ 5ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ದೇವಕಿ ಪೂಜಾರಿ ಎಂಬ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ತೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡ ಮಹಿಳೆ ಇದೀಗ ಆಸ್ಪತ್ತೆಯಿಂದ ಬಿಡುಗಡೆ ಆಗಿದ್ದಾರೆ. ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಂಡ್ಕೂರು ಎಸ್ಸೈ ನಿರಂಜನ ಗೌಡ ಮತ್ತು ಸಿಬ್ಬಂದಿ ಆರೋಪಿ ಬಂಧಿಸಿದ್ದಾರೆ. ಕೃತ್ಯ ನಡೆಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.12: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಇಬ್ರಾಹಿಂ ಸಾಹೇಬ್ ಹೈಕಾಡಿ (71) ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಆವರ್ಸೆ ಗ್ರಾಮ ಪಂಚಾಯತ್ ಮಾಜಿ ಸದ್ಯಸರಾಗಿ, ಉಡುಪಿ ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾಗಿ ಹೈಕಾಡಿ ಮಸೀದಿಯ ಮಾಜಿ ಅಧ್ಯಕ್ಷರುರಾಗಿ, ಹೈಕಾಡಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಇಬ್ರಾಹಿಂ ಸಾಹೇಬ್ ಅವರು ಸೇವೆ ಸಲ್ಲಿಸಿದ್ದರು. ಮೃತರು ಐದು ಗಂಡು, ಮೂರು ಹೆಣ್ಣು ಮಕ್ಕಳುನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ ‘ಪ್ರೀತಿ ಮೊಬೈಲ್ಸ್’ನಲ್ಲಿ (Preethi Mobiles Byndoor) ಮೊಬೈಲ್ ಪೋನ್ ಖರೀದಿಯ ಮೇಲೆ ವಿವಿಧ ಕೊಡುಗೆಗಳನ್ನು ನೀಡುತ್ತಿದೆ. ಆಯ್ದ ಬ್ಯಾಂಡಿನ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಇನ್ನೊಂದು ಮೊಬೈಲ್ ಫೋನ್ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ಪ್ರತೀ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಬ್ಲೂಟೂತ್ ನೆಕ್ ಬ್ಯಾಂಡ್, ಪವರ್ ಬ್ಯಾಂಕ್, ಸ್ಮಾರ್ಟ್ ವಾಚ್ ಉಚಿತವಾಗಿ ಪಡೆಯಿರಿ. ಜೊತೆಗೆ FIRE BOLT SMART WATCH, MI SMART SPEAKER ಗಳ ಮೇಲೆ ಭರ್ಜರಿ ರಿಯಾಯಿತಿ. ಸ್ಮಾರ್ಟ್ ಫೋನ್’ಗಳನ್ನು ಸುಲಭ ಕಂತುಗಳಲ್ಲಿಯೂ ಖರೀದಿಸಬಹುದಾಗಿದೆ. ಈ ಆಫರ್ ಆಗಸ್ಟ್ 11 ರಿಂದ ಸಪ್ಟೆಂಬರ್ 30 ವರೆಗೆ ಮಾತ್ರ ಈ ಎಲ್ಲಾ ಆಫರ್ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಪ್ರೀತಿ ಮೊಬೈಲ್ಸ್ ಬೈಂದೂರುಪಂಚಾಯತ್ ಕಟ್ಟಡ, ಪೊಲೀಸ್ ಸ್ಟೇಷನ್ ಎದುರುಗಡೆ ಬೈಂದೂರುಮೊಬೈಲ್ – 8861087889
