ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.02: ತಾಲೂಕಿನ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಎಂಬ್ಯಾಕ್’ಮೆಂಟ್ ಬಳಿ ಸಂಜೆ ನಡೆದ ಇನ್ನೋವಾ ಕಾರು ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ ಆರ್. ವಿಜಯ್ ಎಂಬುವವರ ಏಕೈಕ ಪುತ್ರ ಅಕ್ಷಯ್ (23) ಮೃತ ದುರ್ದೈವಿ. ಅಪಘಾತದಲ್ಲಿ ತೇಜಸ್ (24), ಹರ್ಷ (24), ಪವನ್ (23) ಗಾಯಗೊಂಡಿದ್ದಾರೆ. ಹೊನ್ನಾವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಕಿರಿಮಂಜೇಶ್ವರ ಎಂಬ್ಯಾಕ್’ಮೆಂಟ್ ಬಳಿ ಬೈಕ್ ಸವಾರ ಏಕಾಏಕಿ ಅಡ್ಡ ಬಂದಿದ್ದರಿಂದ ಇನ್ನೋವಾ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್ ಸಮೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ಹತ್ತಿ ಮತ್ತು ರಸ್ತೆಯಲ್ಲಿ ತಿರುಗಿ ನಿಂತಿತ್ತು. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಅಕ್ಷಯ್ ತಲೆ ಹೊರಗೆ ಬಂದು ಕಂಬಕ್ಕೆ ಡಿಕ್ಕಿಯಾದ ಮುಖದ ಭಾಗಿ ಸಂಪೂರ್ಣ ಹಾನಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ನಾಲ್ವರು ಬಾಲ್ಯ ಸ್ನೇಹಿತರಾಗಿದ್ದು, ಸಹಪಾಠಿಗಳೂ ಆಗಿದ್ದರು. ತೇಜಸ್ ಎಂಬಾತನ ಇನ್ನೋವಾ ಕಾರಿನಲ್ಲಿ ಫೆ.26ರಂದು ಬೆಂಗಳೂರಿನಿಂದ ಹೊನ್ನಾವರಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.2: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂದೂರು ನೇತೃತ್ವದಲ್ಲಿ ಆಯೋಜಿಸಿದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಬುಧವಾರ ಕಾಲೇಜು ಕ್ರೀಡಾಂಗಣ ನಡೆಯಿತು. ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾ ಸ್ಪೂರ್ತಿಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿ ದೆಸೆಯಲ್ಲಿ ಅವುಗಳನ್ನು ಸದ್ಭಳಕೆ ಮಾಡಿಕೊಂಡಾಗ ಯಶಸ್ಸು ಸಾಧಿಸಲು ಸಾಧ್ಯವೆಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾ. ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ, ಮಂಗಳೂರು ವಿ.ವಿ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜೆಮ್ಸ್ ಒಲಿಪೆಯರ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಉಡುಪಿ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ವಿಶ್ವ ವಿದ್ಯಾನಿಲಯದ ಪಂದ್ಯಾಟ ವೀಕ್ಷಕಿ ಜಯಶ್ರೀ ನಾಯ್ಕ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿನಮಕ್ಕಿ ಗೋಳಿಕಟ್ಟಿನ ಸ್ವಾತಂತ್ರ್ಯ ಹೋರಾಟಗಾರ ಮಂಕಿ ರಾಮಣ್ಣ ಅವರ ಮನೆಗೆ ನಾಮಫಲಕ ಅಳವಡಿಸಲಾಯಿತು. ನಾಮಫಲಕ ಅನಾವರಣವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ಇವರು ಅನಾವರಣಗೈದರು. ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಮಂಕಿ ರಾಮಣ್ಣ ಇವರ ಸೇವೆಗೆ ಸಂಬಂಧಿಸಿದಂತೆ ಡಾ. ಕಿಶೋರ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಚೇತನ್ ಬಟ್ಟೆಕುದ್ರು ಗ್ರಾಮ ಪಂಚಾಯತ್ ಹಕ್ಲಾಡಿ ವಹಿಸಿದ್ದರು. ಕಾಯ೯ಕ್ರಮದ ಅತಿಥಿಗಳಾಗಿ ನರೇಂದ್ರ ಕುಮಾರ್ ಕೋಟ, ವಿಜಯ್ ನರಸಿಂಹ ಐತಾಳ್, ಎಮ್.ಎಮ್. ಸುವಣ೯, ಪ್ರಭಾಕರ ಸೇನಾಪುರ, ಲೋಹಿತಾಶ್ವ ಆರ್. ಕುಂದರ್, ಸುಧಾಕರ್ ಕಾಂಚನ್ ಸ್ವಾತಂತ್ರ್ಯ ಹೋರಾಟಗಾರ ಪತ್ನಿ ಗಣಪು ಯಾನೆ ಶಾರದಮ್ಮ ಉಪಸ್ಥಿತರಿದ್ದರು. ಸ್ವರಾಜ್ಯ75 ಸಂಘಟನೆ ನೇತೃತ್ವದಲ್ಲಿ ಮೊಗವೀರ ಯುವ ಸಂಘಟನೆ (ರಿ) ಉಡುಪಿ ಹೆಮ್ಮಾಡಿ ಘಟಕ,ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಹಸ್ತ ಚಿತ್ತ ಫೌಂಡೇಶನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಜರುಗಿದ ಬೈಂದೂರು ತಾಲೂಕು ಮಟ್ಟದ ಎರಡು ದಿನಗಳ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡ ‘ಯಡ್ತರೆ ಟ್ರೋಫಿ 2022’ ಗೆದ್ದುಕೊಂಡರೆ, ವಿ.ಎಫ್.ಸಿ ನಾಗೂರು ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಕ್ರೀಡಾ ಚಟುವಟಿಕೆಗಳಿಂದ ಸಂಘಟನೆ ಸಾಧ್ಯವಿದೆ. ಮಕ್ಕಳು ಹೆಚ್ಚೆಚ್ಚು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಆತ್ಮಸ್ಥೈರ್ಯ, ಮನೋಬಲ ಹೆಚ್ಚುತ್ತದೆ. ಇದರಿಂದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು, ಕಷ್ಟದ ಸಂದರ್ಭವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರೀಡೆ, ಕಲೆ ಹಾಗೂ ಇನ್ನಿತರ ಚಟುವಟಿಕೆಗಳು ಪ್ರೋತ್ಸಾಹದಿಂದ ಮಾತ್ರ ಮುಂದುವರಿಯಲು ಸಾಧ್ಯವಿದೆ. ಅಗತ್ಯ ವೇಳೆಯಲ್ಲಿ ನೀಡುವ ಪ್ರೋತ್ಸಾಹ ಮುಂದಿನ ದೊಡ್ಡ ಯಶಸ್ಸಿಗೆ ದಾರಿಯಾಗುತ್ತದೆ ಎಂದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡ ಅವರ ಕೃತಿ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಬಿಡುಗಡೆ ಸಮರಂಭ ಮಾ. 6ರ ಮಧ್ಯಾಹ್ನ 3:30ಕ್ಕೆ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಜರುಗಲಿದೆ. ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ 2021 ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ ಸಿಡಿಎಸ್ ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬೈಂದೂರು ಚಂದ್ರಶೇಖರ ನಾವಡ ಅವರು ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಬರೆದಿದ್ದು, ಮಂಗಳೂರಿನ ಅವನಿ ಪ್ರಕಾಶನ ಪ್ರಕಟಿಸಿದ್ದಾರೆ. ಕರ್ನಲ್ (ನಿವೃತ್ತ) ನಿಟ್ಟೆಗುತ್ತು ಶರತ್ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಖಂಬದಕೋಣೆ ರೈ ಸೇ ಸ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕೃತಿ ಲೋಕಾರ್ಪಣೆ ಮಾಡಲಿರುವರು. ಕುಂದಾಪುರ ಕಸಾಪ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯ ಮಾಡಲಿರುವರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಅಡಿಗರು ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗರ್ಭಿಣಿ ಪತ್ನಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡುತ್ತಿದ್ದ ಪತಿಯನ್ನು ಬಂಧಿಸಲಾಗಿದೆ. ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಪತ್ನಿ ನೀಡಿದ ದೂರಿನಂತೆ, ತಲೆಮರೆಸಿಕೊಂಡಿದ್ದ ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪತಿಯ ಕಿರುಕುಳದ ವಿರುದ್ಧ ಫೆ.26ರಂದು ಪತ್ನಿ ಪ್ರಿಯಾಂಕಾ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರೀತಿಸಿ ಮದುವೆಯಾದ ಪತಿ ನಾಲ್ಕೈದು ತಿಂಗಳಿನಲ್ಲಿ ವರದಕ್ಷಿಣೆಗಾಗಿ ಹಿಂಸೆ, ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿತ್ತು. ಪ್ರಿಯಾಂಕಾ ನೀಡಿದ ದೂರಿನಲ್ಲಿ, ಸಿಗರೇಟಿನಿಂದ ಸುಟ್ಟು ಗಾಯ ಮಾಡಿದ ಬಳಿಕ ಮಗುವನ್ನು ಕೊಲ್ಲುವುದಾಗಿ ಹೇಳಿ ಹೊಟ್ಟೆಗೆ ತುಳಿದಿದ್ದಾನೆ. ಈ ವೇಳೆಯಲ್ಲಿ ತಪ್ಪಿಸಿಕೊಂಡಿದ್ದರಿಂದ ಸೊಂಟಕ್ಕೆ ಪೆಟ್ಟು ತಗುಲಿದೆ. ಪತಿಯೇ ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿ ನನ್ನ ಪೋಷಕರಿಗೆ ಕಳುಹಿಸಿ 2ಲ್ಷಕ ರೂ ಹಣ ಹಾಗೂ 4 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ಮತ್ತು ಚಿನ್ನ ನೀಡದೇ ಇದ್ದಲ್ಲಿ ನನ್ನನ್ನು ಕೊಂದುಬಿಡುವುದಾಗಿ…
ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಲಿಂಗ ಸ್ಪರ್ಶಪೂಜೆಗೆ ಅವಕಾಶವಿರುವ ಬೈಂದೂರು ತಾಲೂಕಿನ ಗಂಗಾನಾಡು ಗ್ರಾಮದ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಮಹಾಶಿವರಾತ್ರಿ ಮಹೋತ್ಸವದಂದು ಭಕ್ತರು ಭಕ್ತಿ-ಭಾವದೊಂದಿಗೆ ಶಿವಲಿಂಗ ಸ್ವರ್ಶಿಸಿ ಪುನೀತರಾದರು. ಬೆಳಿಗ್ಗೆ 7 ಗಂಟೆಯಿಂದಲೇ ಭಕ್ತಾದಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಮತ್ತು ಸ್ಪರ್ಶಪೂಜೆ ಆರಂಭಗೊಂಡಿದ್ದು ರಾತ್ರಿ 10 ಗಂಟೆಗೆ ದೇವರ ಸುತ್ತು ಉತ್ಸವ, ಕಟ್ಟೆಪೂಜೆ ಹಾಗೂ ಪ್ರಸಾದ ವಿತರಣೆ, ಮರುದಿನ ಶುದ್ಧಕಳಶ, ಕಲಾವೃದ್ಧಿಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯುತ್ತದೆ. ಗರ್ಭಗುಡಿಯೊಳಕ್ಕೆ ಶಿವಲಿಂಗ ಸ್ವರ್ಶಿಸುವ ಭಕ್ತರಿಗೆ ದೇವಳದ ಕೆರೆಯಲ್ಲಿ ಸ್ನಾನ ಮಾಡುವುದು ಕಡ್ಡಾಯವಾಗಿತ್ತು. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸ್ನಾಹಗೃಹ ನಿರ್ಮಿಸಲಾಗಿತ್ತು. ಗರ್ಭಗುಡಿ ಪ್ರವೇಶಿಸದ ಭಕ್ತರು ನಂದಿ ಮಂಟಪದಲ್ಲಿ ಇರಿಸಲಾದ ದೇವರ ಉತ್ಸವ ಮೂರ್ತಿ ಸ್ಪರ್ಶಿಸಿ ಪುನೀತರಾದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ .ರಾಜಮೋಹನ್ ಶೆಟ್ಟಿ ಡಾ. ಮಿಥುನ್ ಶೆಟ್ಟಿ, ತಿಲಕ್ ಶೆಟ್ಟಿ ಮೊದಲಾದವರು ಭಕ್ತರಿಗೆ ದೇವರ ದರ್ಶನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನು ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೀಜಾಡಿ ನಿವಾಸಿ ಪ್ರಿಯಾಂಕ (21) ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಕೆಯ ಪತಿ ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ತಲೆಮರೆಸಿಕೊಂಡಿದ್ದಾನೆ. ಕುಂದಾಪುರ ಠಾಣೆಯಲ್ಲಿ ದೂರು ನೀಡಿರುವ ಪತ್ನಿ ಪ್ರಿಯಾಂಕ, ಸಿಗರೇಟಿನಿಂದ ಸುಟ್ಟು ಗಾಯ ಮಾಡಿದ ಬಳಿಕ ಮಗುವನ್ನು ಕೊಲ್ಲುವುದಾಗಿ ಹೇಳಿ ಹೊಟ್ಟೆಗೆ ತುಳಿದಿದ್ದಾನೆ. ಈ ವೇಳೆಯಲ್ಲಿ ತಪ್ಪಿಸಿಕೊಂಡ ಪರಿಣಾಮ ಸೊಂಟಕ್ಕೆ ಪೆಟ್ಟು ತಗುಲಿದೆ. ಪ್ರದೀಪನೇ ತಾನು ಮಾಡಿದ ಕೃತ್ಯವನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿ ನನ್ನ ಪೋಷಕರಿಗೆ ಕಳುಹಿಸಿ 2 ಲಕ್ಷ ರೂ. ಹಣ ಹಾಗೂ 4 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ಮತ್ತು ಚಿನ್ನ ನೀಡದೇ ಇದ್ದಲ್ಲಿ ಕೊಂದುಬಿಡುವುದಾಗಿ ಹೇಳಿ ಕೊಲೆ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.28: ಶ್ರೀಸಿದ್ಧಿ ವಿನಾಯಕ ಚೆಸ್ ಅಕಾಡೆಮಿ ಹಾಗೂ ಟೋರ್ಪೆಡೋಸ್ ಸ್ಪೋಟ್ಸ್೯ ಕ್ಲಬ್ ವತಿಯಿಂದ ಉಡುಪಿ ಜಿಲ್ಲಾ ಚೆಸ್ ಎಸೋಸಿಯೇಶನ್ ಸಹಯೋಗದಲ್ಲಿ ಶ್ರೀ ಸಿದ್ಧಿವಿನಾಯಕ ಟ್ರೋಫಿ ಅಂತರ್ ಜಿಲ್ಲಾ ಚದುರಂಗ ಪಂದ್ಯಾವಳಿಯು ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರದಲ್ಲಿ ನಡೆಯಿತು. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಮಕ್ಕಳನ್ನು ಡಾಕ್ಟರ್ ಇಲ್ಲಾ ಎಂಜಿನಿಯರ್ ಗಳನ್ನಾಗಿ ಮಾಡಲು ಹಗಲಿರುಳು ಹೆಣಗುವ ಹೆತ್ತವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳನ್ನು ಚದುರಂಗ ಸಹಿತ ಕ್ರೀಡೆ, ಕಲಾ ಚಟುವಟಿಕೆಗಳಲ್ಲಿ ತೊಡಗಿಸಿ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕೊಡುಗೆ ನೀಡಬೇಕು. ಕ್ರೀಡಾ ಸ್ಛೂರ್ತಿಯಿಂದ, ಒತ್ತಡ ರಹಿತ ಜೀವನ ಸಾಗಿಸಬೇಕು ಎಂದರು. ಸಂಘವು 800ಕೋಟಿ ರೂ. ವ್ಯವಹಾರ, 18,000 ರೈತರಿಗೆ ನೆರವಿನೊಂದಿಗೆ 6ಕೋಟಿ ರೂ. ಲಾಭ ಗಳಿಸಿದೆ ಎಂದು ನುಡಿದರು. ಯಶಸ್ವಿ ಸಂಘಟನೆಗಾಗಿ ಸನ್ಮಾನ ಸ್ವೀಕರಿಸಿದ ಕುಂದಾಪುರ ಟೋರ್ಪೆಡೋಸ್ ಸ್ಪೋಟ್ಸ್೯ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಮಾತನಾಡಿ, ನೀವು ಆಡುವ ಯಾವುದೇ ಆಟದ…
ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿ ಕಾರ್ಯಕ್ರಮ, ಹಲವರಿಗೆ ನೆರವು, ವೈದ್ಯಕೀಯ ಶಿಬಿರ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ಫಾರ್ಚೂನ್ ವಿಲೇಜ್ ಹೊಟೇಲ್ ಬಳಿ ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಹುಟ್ಟೂರಿನ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸುಬ್ರಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಹುಟ್ಟೂರು ಜೀವನದ ನೆಮ್ಮದಿಯ ತಾಣ. ಬದುಕಿನಲ್ಲಿ ತಾನು ಪಡೆದ ಸೌಲಭ್ಯಗಳನ್ನು ಊರಿಗೂ ವಿಸ್ತರಿಸುವ ಸಾಮಾಜಿಕ ಚಿಂತನೆಯುಳ್ಳವರು ಅಸಾಧಾರಣ ಸಾಧನೆ ಮಾಡಿದಾಗ ಸನ್ಮಾನ ಮಾಡಬೇಕಿರುವುದು ಸಮಾಜದ ಕರ್ತವ್ಯ. ಸಾವಿರಾರು ಮಂದಿ ಬದುಕನ್ನು ಏಳಿಗೆಯತ್ತ ಕೊಂಡೊಯ್ದ ಪ್ರವೀಣ ಶೆಟ್ಟಿಯವರ ಕೀರ್ತಿ ಜಗದುದ್ದಗಲಕ್ಕೂ ಹೊರಹೊಮ್ಮಿದೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ಪ್ರಸಾದ್ ನೇತ್ರಾಲಯಕ್ಕೆ ಪ್ರವೀಣ್ ಶೆಟ್ಟಿಯವರು ಕೊಡುಗೆಯಾಗಿ ನೀಡಿದ ಅಂಬುಲೆನ್ಸ್ ವಾಹನದ ಕಿಲಿಕೈ ಹಸ್ತಾಂತರಿಸಿದರು. ಪ್ರಾಥಮಿಕ…
