Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು, ಎ.4: ರಾಜ್ಯದಲ್ಲಿ ಮೈತ್ರಿ ಸರಕಾರ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದರೇ ಬಯಲಿಗೆಳೆಯಲಿ. ಸುಮ್ಮನೆ ಬಾಯಿ ಚಲಪಕ್ಕೆ ಮಾತನಾಡುವುದಲ್ಲ ಎಂದು ಸಿಎಂ ಹೆಚ್. ಡಿ ಕುಮಾರಸ್ವಾಮಿ ಬೈಂದೂರಿನಲ್ಲಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರು ಬೈಂದೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು. ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿರುವುದು ವಂಶ ಪಾರಂಪರ್ಯವನ್ನು ಮುಂದುವರಿಸಲು ಹಾಗೂ ಭ್ರಷ್ಟಾಚಾರ ನಡೆಸಲು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯಂತೆ ಈ ಮಟ್ಟಿಗೆ ಕೀಳು ಮಟ್ಟದ ರಾಜಕೀಯ ಯಾರೂ ಮಾಡಿರಲಿಲ್ಲ. ಅಧಿಕಾರ ಹಿಡಿಯುವುದೆಂದರೆ ಆಳ್ವಿಕೆ ಮಾಡುವುದಕ್ಕಷ್ಟೇ ಅಲ್ಲ, ಒಳ್ಳೆಯ ಕೆಲಸಗಳ ಮೂಲಕ ರಾಜ್ಯದ ಜನರಿಗೆ ಒಳ್ಳೆಯದನ್ನು ಮಾಡುವ ಉದ್ದೇಶ ಇರುತ್ತದೆ. ಅಧಿಕಾರದಲ್ಲಿದ್ದಾಗಲೆಲ್ಲಾ ಹಾಗೆ ಮಾಡಿದ್ದೇವೆ ಎಂಬ ಭರವಸೆ ಇದೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಹುಮತದಿಂದ ಗೆಲ್ಲುತ್ತೇವೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳನ್ನು ಪಡೆದುಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ರಾಜ್ಯದಲ್ಲಿ ಜೆಡಿಎಸ್…

Read More

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂ ಲೇಖನ. ಪ್ರಾಚೀನ ವೈದ್ಯ ಪರಂಪರೆಯಾದ ಭಾರತೀಯ ಆಯುರ್ವೇದ ಇಂದು ವಿಶ್ವದಾದ್ಯಂತ ಜನಮನ್ನಣೆ ಗಳಿಸುತ್ತಿದೆ. ಆಯುರ್ವೇದ ಚಿಕಿತ್ಸೆಯೊಂದಿಗೆ ಧ್ಯಾನ, ಯೋಗ, ಭಜನೆ, ಸಂಗೀತ, ಕಲೆ, ಆಧ್ಯಾತ್ಮ ಮಾರ್ಗದರ್ಶನ,ಆಯುರ್ವೇದ ಪದ್ಧತಿಯ ಹಿತ-ಮಿತ ಭೋಜನವನ್ನು ಒಳಗೊಂಡ ಸಮಗ್ರ ಭಾರತೀಯ ಜೀವನ ಪದ್ದತಿಯನ್ನು ಪರಿಚಯಿಸುವ ಕೊಲ್ಲೂರಿನ ಅಭಯ ಚಿಕಿತ್ಸಾಲಯ ದೇಶ-ವಿದೇಶೀ ಸ್ವಾಸ್ಥ್ಯ ಆಕಾಂಕ್ಷಿಗಳನ್ನು ಆಕರ್ಷಿಸುತ್ತಿದೆ. ಕೊಲ್ಲೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಸದ್ದಿಲ್ಲದೇ ಋಷಿ ಮುನಿಗಳ ಕೊಡುಗೆಯ ಪ್ರಾಚೀನ ಭಾರತದ ಪಾರಂಪರಿಕ ಚಿಕಿತ್ಸಾ ಪದ್ದತಿಯನ್ನು ಪಸರಿಸುತ್ತಿರುವ ಆಯುರ್ವೇದ ವೈದ್ಯ ಡಾ. ಶ್ರೀಕಾಂತ ಕೊಡವೂರು ಅವರ ಅಭಯ ಚಿಕಿತ್ಸಾಲಯದ ಪ್ರಸಿದ್ಧಿ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಐರೊಪ್ಯ ದೇಶಗಳವರೆಗೆ ಹರಡಿದೆ. ಚಿಕಿತ್ಸಾಲಯದ ಗೋಡೆಗಳ ಮೇಲೆ ಹಿರಿಯ ಕಲಾವಿದ ಉಪ್ಪುಂದ ಮಂಜುನಾಥ ಮಯ್ಯರ ಕುಂಚದಿಂದ ಹೊಮ್ಮಿದ ಮನಮೋಹಕ ಚಿತ್ತಾರ ಕಣ್ಮನ ಸೆಳೆಯುತ್ತದೆ. Sound mind in sound body ಅರ್ಥಾತ್ ಮನಸ್ಸು ಆರೋಗ್ಯವಾಗಿದ್ದರೆ ಶರೀರ ಆರೋಗ್ಯವಾಗಿರುತ್ತದೆ ಎನ್ನುವ ಮಾತಿನಂತೆ ಈ ಸುಂದರ ಚಿತ್ರಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್-ರೇಂಜರ‍್ಸ್ ಘಟಕದ ವತಿಯಿಂದ ರೋವರ‍್ಸ್ ಲೀಡರ್ ಗಿರೀಶ್ ಕುಮಾರ್ ರವರ ನೇತೃತ್ವದಲ್ಲಿ ಹಡಿನ್ ಇಕೋ ಬೀಚ್, ಬೆಳ್ಕೆ, ಭಟ್ಕಳ. ಇಲ್ಲಿ ಶನಿವಾರದಂದು ರೋವರ್-ರೇಂಜರ‍್ಸ್ ನಡಿಗೆ ಪರಿಸರದ ಕಡೆಗೆ ಎಂಬ ಒಂದು ದಿನದ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ೨೪ ರೋವರ್-ರೇಂಜರ‍್ಸ್ ವಿದ್ಯಾರ್ಥಿಗಳು ಭಾಗವಹಿಸಿ ಹಡಿನ್ ಇಕೋ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ನಂತರ ಹಡಿನ್ ಇಕೋ ಪಾರ್ಕನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಜೆ ಅಲ್ಲಿನ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಮೋದ್ ನಾಯಕ್ ರವರು ಪರಿಸರದ ರಕ್ಷಣೆಯ ಅವಶ್ಯಕತೆಯ ಬಗೆಗೆ ಉಪನ್ಯಾಸ ನೀಡಿ, ಸಾರ್ವಜನಿಕರ ಸಹಕಾರದಿಂದ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಶಿಬಿರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಸಹ ಕೈ ಜೋಡಿಸಿದರು. ಸಹಾಯಕ ಪ್ರಾಧ್ಯಾಪಕರಾದ ನವೀನ್ ಹೆಚ್.ಜಿ. ಉಪಸ್ಥಿತರಿದ್ದರು.

Read More

ನಾಗೂರಿನ ಕುಸುಮಾ ಫೌಂಡೇಶನ್ ದಂತ ಚಿಕಿತ್ಸಾ ಶಿಬಿರದಲ್ಲಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಬಾಯಿಯು ದೇಹದ ಹೆಬ್ಬಾಗಿಲು ಎನ್ನುತ್ತಾರೆ. ಬಾಯಿ ಮತ್ತು ಹಲ್ಲುಗಳ ಆರೋಗ್ಯದ ಮೇಲೆ ದೇಹದ ಆರೋಗ್ಯ ಅವಲಂಬಿಸಿರುವುದರಿಂದ ಅದನ್ನು ಎಂದೂ ನಿರ್ಲಕ್ಷಿಸಬಾರದು ಎಂದು ಇಂಡಿಯನ್ ಡೆಂಟಲ್ ಅಸೋಸಿಯೇಶನ್‌ನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಮನೋಜ್ ಮ್ಯಾಕ್ಷಿಮ್ ಡಿಲಿಮಾ ಹೇಳಿದರು. ನಾಗೂರಿನ ಕುಸುಮಾ ಫೌಂಡೇಶನ್, ಐಡಿಎ ಜಿಲ್ಲಾ ಘಟಕ, ಮಣಿಪಾಲದ ದಂತವಿಜ್ಞಾನ ಮಹಾವಿದ್ಯಾಲಯ, ಉಡುಪಿ ಜಿಲ್ಲಾ ಆಸ್ಪತ್ರೆಯ ದಂತ ಆರೋಗ್ಯ ವಿಭಾಗ, ಕುಂದಾಪುರ ಮಿಡ್‌ಟೌನ್ ರೋಟರಿ ಕ್ಲಬ್ ಮತ್ತು ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಫೌಂಡೇಶನ್ ದತ್ತು ಪಡೆದಿರುವ ನಾಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ, ಶಿಕ್ಷಕ ಮತ್ತು ಪೋಷಕರಿಗಾಗಿ ಮಂಗಳವಾರ ನಡೆದ ಸಮಗ್ರ ಬಾಯಿಯ ಆರೋಗ್ಯ ಕಾರ್ಯಕ್ರಮ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ಹಲ್ಲು ಮತ್ತು ಬಾಯಿಯ ಆರೋಗ್ಯದ ಕುರಿತಾದ ಎಚ್ಚರ ಬಾಲ್ಯದಲ್ಲೇ ಮೂಡಬೇಕು. ಆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವ ಸಹಜ ದೌರ್ಬಲ್ಯಗಳಿಂದ ಯಾರೂ ಹೊರತಾಗಿರುವುದು ಅಸಾಧ್ಯ. ಆದರೆ ಅಂತಹ ದೌರ್ಬಲ್ಯವನ್ನು ಮುಚ್ಚುಮರೆ ಮಾಡದೆ ಬಹಿರಂಗವಾಗಿ ಪ್ರದರ್ಶಿಸುವವರನ್ನು ಸಾಮಾಜಿಕ ಕಟ್ಟುಪಾಡುಗಳ ಹೆಸರಿನಲ್ಲಿ ಮಾನವೀಯ ಪರಿಗಣನೆಯಿಂದ ಹೊರಗಿಡಬಹುದೇ ಎಂದು ’ಸಂಸ್ಕಾರ’ ಎತ್ತುವ ಪ್ರಶ್ನೆ ಎಂದಿಗೂ ಪ್ರಸ್ತುತ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಹುಲಿ ಚಂದ್ರಶೇಖರ ಹೇಳಿದರು. ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್, ಸಮುದಾಯ ಸಾಂಸ್ಕೃತಿಕ ಸಂಘಟನೆ, ಕುಂದಾಪುರ ಜೇಸಿಐ ಮತ್ತು ಗುಲ್ವಾಡಿ ಟಾಕೀಸ್ ಸಂಯುಕ್ತ ಆಶ್ರಯದಲ್ಲಿ ಶನಿವಾರ ಇಲ್ಲಿನ ಜೇಸಿಐ ಭವನದಲ್ಲಿ ನಡೆದ ಸಂಸ್ಕಾರ ಒಂದು ಮರುನೋಟ, ಸಂಸ್ಕಾರ ಚಲನಚಿತ್ರ ಐವತ್ತು ವರ್ಷ ಮತ್ತು ನಿರ್ದೇಶಕ ಪಟ್ಟಾಬಿರಾಮ ರೆಡ್ಡಿ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದರು. ಡಾ. ಯು. ಆರ್. ಅನಂತಮೂರ್ತಿ ಸಂಸ್ಕಾರ ಕಾದಂಬರಿ ಬರೆದಾಗ ಎದ್ದ ವಿವಾದಗಳು ಪಟ್ಟಾಬಿರಾಮ ರೆಡ್ಡಿ ಚಲನಚಿತ್ರ ಮಾಡಿದಾಗಲೂ ಮುಂದುವರಿದುವು. ಅದು ಹಲವು ಅತ್ಯಂತ ಸಂಕೀರ್ಣ ಸಾಮಾಜಿಕ ಪ್ರಶ್ನೆಗಳನ್ನು ಸೂಕ್ಷ್ಮ ದೃಷ್ಟಿಯಿಂದ ನೋಡಿದ ಕತೆ. ಅದರಿಂದ ಪ್ರಭಾವಿತರಾದವರಲ್ಲಿ ರಾಮಮನೋಹರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈ ಬಾರಿಯ ಲೋಕಸಭಾ ಚುನಾವಣೆ ದೇಶ ಒಂದು ಕುಟುಂಬ ಎಂಬ ನೆಲೆಯಲ್ಲಿ ಕೆಲಸ ಮಾಡುವ ಬಿಜೆಪಿಯ ನರೇಂದ್ರ ಮೋದಿ ಮತ್ತು ದೇಶ ಇರುವುದು ನಮ್ಮ ಕುಟುಂಬಗಳಿಗಾಗಿ ಎಂದು ಯೋಚಿಸುವ ಕಾಂಗ್ರೆಸ್, ಜೆಡಿಎಸ್ ನಡುವಿನ ಹೋರಾಟವಾಗಲಿದೆ. ಇದನ್ನು ಅರ್ಥಮಾಡಿಕೊಂಡಿರುವ ಮತದಾರರು ಬಿಜೆಪಿಯನ್ನು ಗೆಲ್ಲಿಸಿ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡಲಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿ. ವೈ. ರಾಘವೇಂದರ ಹೇಳಿದರು. ಸೋಮವಾರ ನಂದನವನದ ಖಾಸಗಿ ಹೋಟೆಲ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಭರವಸೆಯ ಮಾತನಾಡಿದರು. ದೇಶದ ಜನರು ಈಗ ಅಭಿವೃದ್ಧಿ ಮತ್ತು ರಕ್ಷಣೆಗೆ ಆದ್ಯತೆ ನೀಡುತ್ತಿದ್ದಾರೆ. ಈ ಕೆಲಸ ಬಿಜೆಪಿ ಮತ್ತು ಮೋದಿ ಅವರಿಂದ ಮಾತ್ರ ಸಾಧ್ಯ ಎನ್ನುವ ಭರವಸೆ ಅವರಲ್ಲಿ ಮೂಡಿದೆ. ಅದರ ಜತೆಗೆ ಮೋದಿ ನೇತೃತ್ವದ ಸರ್ಕಾರದ ಐದು ವರ್ಷಗಳ ಸಾಧನೆ ನೋಡಿ ಮತ ಹಾಕಲಿದ್ದಾರೆ. ಕ್ಷೇತ್ರದ ಎಲ್ಲ ೮ ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂತಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ಸದಾರಾಮ ಅವರ ಚೊಚ್ಚಲ ಕವನ ಸಂಕಲನ ’ಬಣ್ಣದ ಕುಡಿಕೆ’ಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿಯೂ ಹಾಗೂ ಶ್ರೀಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿಯ ಉಪಾಧ್ಯಕ್ಷರೂ ಆದ ಡಾ. ಹೆಚ್. ಶಾಂತಾರಾಮ್ ಲೋಕಾರ್ಪಣೆ ಗೊಳಿಸಿದರು. ಬದುಕಿನ ಘಟ್ಟಿ ಅನುಭವದ ವಿವಿಧ ವಸ್ತು-ವಿಷಯಗಳನ್ನು ಆಯ್ದುಕೊಂಡು ರಚಿಸಲಾಗಿರುವ ಈ ಕವನ ಸಂಕಲನವು ವಿಭಿನ್ನ ಶೈಲಿಯ ಐವತ್ತೈದು ಕವನಗಳನ್ನು ಒಳಗೊಂಡಿದ್ದು ಇಂತಹ ಇನ್ನಷ್ಟು ಕೃತಿಗಳು ಅವರಿಂದ ಹೊರ ಬರಲಿ ಎಂದು ಗಣ್ಯರು ಶುಭ ಹಾರೈಸಿದರು. ಪಾಲಕ-ಪೋಷಕರಲ್ಲಿ ಮಕ್ಕಳು ಸಾಹಿತ್ಯದ ಕುರಿತು ಒಲವನ್ನು ಬೆಳೆಸಿಕೊಂಡು ಪುಸ್ತಕ ಪ್ರೇಮಿಗಳಾಗುವಂತೆ ಪ್ರೇರೇಪಿಸಲು, ಆ ಮೂಲಕ ವಿವಿಧ ಲೇಖಕರ ಅನುಭವದ ಸಿರಿಯನ್ನು ಪಡೆಯಲು ನೆರವಾಗುವಂತೆ ವಿನಂತಿಸಿದರು. ಈ ಕೃತಿಯಲ್ಲಿನ ’ಬೆಂಕಿಯಲ್ಲಿ ಅರಳಿದ ಹಾಡು’ ಎಂಬ ಕವನ ಒಂದನ್ನು ಕೃತಿಕಾರರು ವಾಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯು.ಕೆ.ಜಿ. ಮಕ್ಕಳ ಪದವಿ ಪ್ರದಾನ ಸಮಾರಂಭ ಗುರುವಾರ ಜರುಗಿತು. ಕುಂದಾಪುರದ ಅಮೃತೇಶ್ವರಿ ಆಸ್ಪತ್ರೆಯ ಆಯುರ್ವೇದಿಕ್ ವೈದ್ಯೆ ಸೋನಿ ಪುಟಾಣಿಗಳಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು ಬಳಿಕ ಮಾತನಾಡಿದ ಅವರು ನಾವು ಶಾಲೆಗೆ ಹೋಗುವಾಗ ಈ ರೀತಿಯ ಅವಕಾಶ ಇರಲಿಲ್ಲ ಆದರೆ ಪುಟಾಣಿಗಳಿಗೆ ಇಂತಹ ಒಂದು ಅವಕಾಶ ಈ ಶಾಲೆ ಮಾಡುತ್ತಿರುವುದು ನಿಜಕ್ಕೂ ಅವಿಸ್ಮರಣೀಯ ಎಂದರು. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಹೇಗೆ ನಾಲ್ಕು ಹಂತಗಳು ಇರುತ್ತದೆಯೋ ಹಾಗೆ ಮಕ್ಕಳಿಗೆ ದೇವರಲ್ಲಿ ಭಕ್ತಿ, ಗುರುಹಿರಿಯರಲ್ಲಿ ಗೌರವ, ಶಿಸ್ತು ಮತ್ತು ವಿದ್ಯೆ ಎಂಬ ಈ ನಾಲ್ಕು ಅಂಶಗಳನ್ನು ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನದಲ್ಲಿ ನೀಡಿದಾಗ ಅವರು ಮುಂದೆ ಉತ್ತಮ ಪ್ರಜೆಗಳಾಗಿ ಯಶಸ್ವಿ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ. ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸಿದ ತಕ್ಷಣ ಪೋಷಕರ ಜವಾಬ್ಧಾರಿ ಮುಗಿಯುವುದಿಲ್ಲ. ಮಕ್ಕಳ ಅರ್ಧ ಜವಾಬ್ಧಾರಿಯ ಹೊಣೆಯನ್ನು ನೀವು ವಹಿಸಿದಾಗ ಉಳಿದರ್ಧ ಹೊಣೆಯನ್ನು ಶಿಕ್ಷಕರು ಹೊತ್ತಾಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಾಡಿಗ ಅಕ್ಷಯ ಕಿರಣದ ಸೇವಾದಾರರು ಇಂದು ಶಂಕರನಾರಾಯಣದ ಕ್ಯಾನ್ಸರ್ ಪೀಡಿತ ಪಾರ್ವತಿ ದೇವಾಡಿಗರ ಮನೆಗೆ ತೆರಳಿ ರೂ ೧೭೦೦೦/ ರೂ ವೈದ್ಯಕೀಯ ನೆರವು ನೀಡಿದರು. ಈ ಸಂಧರ್ಭದಲ್ಲಿ ಸೇವಾದಾರರಾದ ಡಾ ಮಧುಕರ್ ದೇವಾಡಿಗ ಸೌದಿ ಅರೇಬಿಯಾ, ಉಮಾವತಿ ದೇವಾಡಿಗ, ಶಂಕರ್ ದೇವಾಡಿಗ ಅಂಕದಕಟ್ಟೆ, ಪುರುಷೋತ್ತಮದಾಸ್ ನಾಗರಾಜ್ ರಾಯಪ್ಪನಮಠ, ದಿನೇಶ್ ದೇವಾಡಿಗ, ಸತೀಶ್ ದೇವಾಡಿಗ, ಪ್ರವೀಣ್ ದೇವಾಡಿಗ, ಸುರೇಶ್ ದೇವಾಡಿಗ, ಶೇಖರ್ ದೇವಾಡಿಗ, ಮಹಾಲಿಂಗ ದೇವಾಡಿಗ, ಅಭಿಷೇಕ ದೇವಾಡಿಗ, ನಾಗೇಂದ್ರ ದೇವಾಡಿಗ, ಮದುಕರ್ ದೇವಾಡಿಗ, ರಾಜ್ ದೇವಾಡಿಗ, ಜಗದೀಶ್ ದೇವಾಡಿಗ, ರಾಮಚಂದ್ರ ದೇವಾಡಿಗ ಮೊದಲಾವರು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ನಮ್ಮ ಸಂಸ್ಕೃತಿ ನಮಗೆ ಅರ್ಥವಾಗಬೇಕಾದರೆ ನಮ್ಮ ಭಾಷೆಯಲ್ಲಿ ನೆಲೆನಿಲ್ಲಬೇಕು. ಆಗ ಮಾತ್ರ ನಮ್ಮ ಪರಂಪರೆ ಸಂಸ್ಕೃತಿಯನ್ನು ನಾವು ಆಳವಾಗಿ ತಿಳಿದುಕೊಳ್ಳಲು ಸಾಧ್ಯ ಎಂದು ನಟಿ ಪದ್ಮಶ್ರೀ ಪುರಸ್ಕೃತೆ ಬಿ. ಜಯಶ್ರೀ ಹೇಳಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಿಜಾರು ಎಐಇಟಿ ಆವರಣದಲ್ಲಿ ನಡೆದ ಟ್ರಡಿಶ್‌ನಲ್ ಡೇ-೨೦೧೯’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ವೈವಿಧ್ಯತೆಯನ್ನು ನಾವು ಈ ಕಾಲೇಜಿನಲ್ಲಿ ಜೀವಂತವಾಗಿ ನೋಡಬಹುದು. ಈ ರೀತಿ ವಿವಿಧ ಸಂಸ್ಕೃತಿಗಳ ಆನಾವರಣದಿಂದ ಸಂಸ್ಕೃತಿ ಮತ್ತು ಪರಂಪರೆಯ ಕೊಡುಕೊಳ್ಳುವಿಕೆಯಾಗಿ ನಮ್ಮ ಭವ್ಯ ಪರಂಪರೆ ನೂರ್ಕಾಲ ಮುಂದುವರೆಯಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ ನಮ್ಮ ಪೂರ್ವಜರು ನಮಗೆ ನೀಡಿರುವ ಸಂಸ್ಕೃತಿಯನ್ನು ನಾವು ಜಾಗರೂಕತೆಯಿಂದ ಮುದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಮೂಲ ಕರ್ತವ್ಯ ಎಂದು ಹೇಳಿದರು. ಯುವಜನತೆ ಮೂಡನಂಬಿಕೆ ಮತ್ತು ನಂಬಿಕೆಯ ನಡುವೆ ಇರುವ ವ್ಯತ್ಯಾಸವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು.…

Read More