ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕ ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ರವಿವಾರ ನಡೆಯಿತು. ಬಿಜೂರು ಪ್ರಮೋದ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಕಾರ್ಯ ನೆರವೇರಿತು. ಪುರಾಣ ಪ್ರಸಿದ್ಧ ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕೋತ್ಸವ, ಏಕಾಹ ಅಖಂಡ ಭಜನೆ ಹಾಗೂ ಗೆಂಡ ಸೇವೆ ಕಾರ್ಯಕ್ರಮಗಳು ಎ.14ರಿಂದ 16ರ ವರೆಗೆ ನಡೆಯಲಿದೆ. ಎ.14ರಂದು ವೇದಮೂರ್ತಿ ಮಹಾಬಲ ಭಟ್ ಸಹಭಾಗಿತ್ವದಲ್ಲಿ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ಶ್ರೀ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ ಗಂಟೆ 9.15ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಎ.16ರಂದು 11.15ಕ್ಕೆ ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಂದು ರಾತ್ರಿ 8ಗಂಟೆಗೆ ಹಿಂದೂಸ್ತಾನಿಯ ಯುವ ಗಾಯಕ ರಜತ್ ಕುಲಕರ್ಣಿ ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದ್ದು, ಎ.16ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಯಕ್ಷಾರಾಧನ ಕಲಾ ಕೇಂದ್ರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಿರಿಮಂಜೇಶ್ವರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಾಗಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಈಶ್ವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಗದೀಶ್ ಕೊಡೇರಿ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಖರ ಖಾರ್ವಿ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಮಕ್ಕಳಿಗಾಗಿ ಬೆಂಕಿ ರಹಿತ ಅಡುಗೆ ತಯಾರಿ, ಸ್ಥಳೀಯ ಹಣ್ಣುಗಳ ಪ್ರದರ್ಶನ, ಚಿತ್ರ ಪ್ರದರ್ಶನ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಬಂಗ್ಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನ್ಯಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾಣು.ಡಿ.ಚಂದನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ, ಸರ್ವಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಪುಷ್ಪಾ ಎನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಗ್ರಾಮಾಂತರ ವರದಿಗೆ ಕೊಡಮಾಡುವ ಜಿ. ನಾರಾಯಣಸ್ವಾಮಿ ಪ್ರಶಸ್ತಿಗೆ ಪತ್ರಕರ್ತ ಅರುಣ್ ಕುಮಾರ್ ಶಿರೂರು ಅವರು ಭಾಜನರಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಸಾಹಿತ್ಯ ಹಾಗೂ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅರುಣ್ ಕುಮಾರ್ ಶಿರೂರು ಅವರು ಉಷಾಕಿರಣ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದರು. ಮಂದೆ ನಮ್ಮ ಟಿ.ವಿ, ಕರಾವಳಿ ನ್ಯೂಸ್ ಚಾನೆಲ್ಗಳಲ್ಲಿ ಸುದ್ದಿ ನಿರೂಪಕರಾಗಿ ಸೇವೆ ಸಲ್ಲಿಸಿದ್ದರು. ಉದಯವಾಣಿ ಪತ್ರಿಕೆಯ ಬೈಂದೂರು ಭಾಗದ ವರದಿಗಾರರಾಗಿ ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕಾರಂಗದಲ್ಲಿ ತೊಡಗಿಸಿಕೊಂಡಿರುವ ಅವರು, ಬೈಂದೂರಿನ ಗ್ರಾಮೀಣ ಪ್ರದೇಶಗಳ ವರದಿಗಾರಿಕೆಯಲ್ಲಿ ಆಸಕ್ತಿಯಿಂದಲೇ ತೊಡಗಿಕೊಂಡವರು. ಗೋಳಿಬೇರಿನ ಗೋಳಿನ ಕಥೆ, ದೇವರಗದ್ದೆ ಜನರ ಪರಿಸ್ಥಿತಿ ದೇವರೇ ಕಾಯಬೇಕು, ಹೇನುಬೇರು ಜಾನುವಾರು ಮರಣ ವರದಿ ಸೇರಿದಂತೆ ಅವರು ಹಲವು ವರದಿಗಳು ಆಳುವವರ್ಗದ ಗಮನಸೆಳೆದು ಸಮಸ್ಯೆಗಳಿಗೆ ಪರಿಹಾರ ದೊರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಪತ್ರಿಕೋದ್ಯಮದ ಜೊತೆ ಜೊತೆಗೆ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯರು ಕರಾವಳಿಯ ವೀರ ಪುರುಷರಾಗಿದ್ದು ಅವರು ನೆಲೆಸಿ, ನಡೆದಾಡಿದ ಸಾನಿಧ್ಯವೆಲ್ಲವೂ ಇಂದು ಶಕ್ತಿಸ್ಥಳವಾಗಿ ಮಾರ್ಪಟ್ಟಿದೆ. ಅವರ ಕೊನೆಯ ಗರಡಿಯಾಗಿರುವ ನಾಕಟ್ಟೆ ಗರಡಿಯೂ ಕೂಡ ಜೀರ್ಣೋದ್ಧಾರಗೊಳ್ಳುತ್ತಿದ್ದಂತೆ ಇಡಿ ಊರಿಗೆ ಚೈತನ್ಯ ತಂದುಕೊಡಲಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಹೇಳಿದರು. ಅವರು ಬೈಂದೂರು ತಾಲೂಕು ಯಡ್ತರೆ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಬಳಿಕ ಮಾತನಾಡಿ ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದು ಖುಷಿಯ ಸಂಗತಿಯಾಗಿದ್ದು, ಸಾರ್ವಜನಿಕರ ಸಹಕಾರದಿಂದ ದೇವತಾ ಕಾರ್ಯಗಳೆಲ್ಲವೂ ಯಶಸ್ವಿಯಾಗಿ ನಡೆಯಲಿದೆ ಎಂದರು. ಈ ಸಂದರ್ಭ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ ಕಾರ್ಕಳ, ವೃಷಭದೇವ ಅಧಿಕಾರಿ ಕಾರ್ಕಳ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಮದನಕುಮಾರ್ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ತಿಮ್ಮಪ್ಪ ಪೂಜಾರಿ, ಯಡ್ತರೆ ಬಿಲ್ಲವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ವ್ಯಂಗ್ಯಚಿತ್ರ ಕಲಾವಿದ ಪಂಜು ಗಂಗೊಳ್ಳಿಯವರು ಕುಂದಾಪ್ರ ಕನ್ನಡಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಟೀಮ್ ಅಭಿಮತ ಮತ್ತು ಜನಸೇವಾ ಟ್ರಸ್ಟ್ ವತಿಯಿಂದ ಅವರ ನಿವಾಸದಲ್ಲಿ ಗೌರವಿಸಲಾಯಿತು. ಕುಂದಾಪ್ರ ಕನ್ನಡದ ಕುರಿತಾದ ಅಂದಾಜು ಎಂಟುನೂರು ಪುಟಗಳಾಗುವಷ್ಟು ಶಬ್ದಕೋಶವನ್ನ ಸಂಗ್ರಹಿಸಿರುವ ಪಂಜು ಗಂಗೊಳ್ಳಿಯವರ ಮತ್ತು ಅವರ ಬಳಗದ ಈ ಕೆಲಸ ನಿಜಕ್ಕೂ ಅರ್ಥಪೂರ್ಣವಾಗಿದ್ದು, ಪ್ರಾದೇಶಿಕ ಭಾಷೆಯೊಂದರ ಉಳಿವಿಗಾಗಿ ನೀಡಿದ ಬಹುಮುಖ್ಯ ಕೊಡುಗೆ ಎಂದು ಸಾಂಸ್ಕೃತಿಕ ಚಿಂತಕ ಉದಯ್ ಶೆಟ್ಟಿ ಕೋಟ ಅಭಿಪ್ರಾಯ ಪಟ್ಟರು ಹೊರನಾಡ ಕನ್ನಡಿಗರಾದರೂ ತನ್ನ ಹುಟ್ಟು ನೆಲದ ಬಗ್ಗೆ ಅತೀವ ಪ್ರೀತಿ, ಕಾಳಜಿ ಇರಿಸಿಕೊಂಡಿರುವ ಗಂಗೊಳ್ಳಿಯ ತನ್ನ ಮನೆಯ ಪರಿಸರದಲ್ಲಿ ಸಾವಯವ ಕೃಷಿಯನ್ನು ಮಾಡುತ್ತಾ, ಗಂಗಾವಳಿ ನದಿಯ ಬದುವಲ್ಲಿ ಸಂಜೆ ಸೂರ್ಯನನ್ನು ದಿಟ್ಟಿಸುತ್ತಾ ಮನಸ ಕ್ಯಾನ್ವಾಸಿನಲ್ಲಿ ಭಾವನೆಯ ಚಿತ್ತಾರ ಮೂಡಿಸುವ ಪಂಜು ಗಂಗೊಳ್ಳಿ ಸಮಾಜವಾದಿ ನಿಲುವಿನೊಂದಿಗೆ ಬದುಕಿದವರು. ನಾಡು ಕಂಡ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಗರಡಿಯಲ್ಲಿ ಬೆಳೆದು ನಂತರ ಮುಂಬೈ ನಗರದಲ್ಲಿ ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ತಿಂಗಳ ಕುಟುಂಬ ಸಮ್ಮಿಲನ ಹಾಗೂ ರಾಷ್ಟ್ರಪತಿಯಿಂದ ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಹಾಗೂ ಇತ್ತೀಚಿಗಷ್ಟೆ ಹಾಡು ಕರ್ನಾಟಕದಲ್ಲಿ ಭಾಗವಹಿಸಿದ ಗೀತಾ ಬೈಂದೂರು ಇವರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ ಸಂಜೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ರೋಟರಿ ಕ್ಲಬ್ನ ಅಧ್ಯಕ್ಷ ರೋ. ಯು ಪ್ರಕಾಶ್ ಭಟ್ ರೋಟರಿ ತಿಂಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರಪತಿಯಿಂದ ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಇವರಿಗೆ ಬೈಂದೂರು ರೋಟರಿ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು. ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಾಧನೆ ಮಾಡಲು ನಮ್ಮಲ್ಲಿ ಶ್ರದ್ಧೆ, ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಪ್ರಯತ್ನ ಇದ್ದು ಇದ್ದರೆ ಯಾರು ಏನನ್ನೂ ಬೇಕಾದರು ಮಾಡಬಹುದು. ಸಾಧನೆ ಮಾಡಲು ಸಾಕಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ ಆಗಿ ಉಳಿಯದೇ ನಟನೊಬ್ಬ ತನ್ನನ್ನು ತಾನು ಅರಿತುಕೊಳ್ಳುವ ಸಮಾಜವನ್ನು ಹಾಗೂ ಸುತ್ತಲಿನ ಭೌದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ಉಡುಪಿ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಶನಿವಾರ ಆರಂಭವಾದ ’ರಂಗ ಲಾವಣ್ಯ-2020’ ಹಾಗೂ ಬಿ. ಮಾಧವ ರಾವ್ ಸ್ಮರಣೆಯ ಮೂರು ದಿನಗಳ ’ರಂಗಮಾಧವ’ ನಾಟಕೋತ್ಸವದ ಎರಡನೇ ದಿನದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಂಗಭೂಮಿ ಶ್ರಮಜೀವಿಗಳ ಲೋಕ. ವೇದನೆಯನ್ನು ಹಾಡಾಗಿಸಿ, ಸಮುದಾಯವನ್ನು ತಲುಪುವ ಪ್ರಕ್ರಿಯೆಯಲ್ಲಿ ಅದು ನಿರತವಾಗಿದೆ. ಸುಖ-ದು:ಖವನ್ನು ಚಂದವಾಗಿ ಅಭಿವ್ಯಕ್ತಿಗೊಳಿಸಲು ರಂಗಭೂಮಿಯಿಂದ ಸಾಧ್ಯ. ಇಂದು ಆರ್ಥಿಕ ಸಂಕಷ್ಟಗಳಿಂದ ಹಲವು ನಾಟಕ ಕಲಾ ಸಂಸ್ಥೆಗಳು ಮುಚ್ಚಲ್ಪಟ್ಟಿದೆ, ಆದರೆ ಬೈಂದೂರಿನ ಲಾವಣ್ಯ ಸಂಸ್ಥೆ ಇದಕ್ಕೆ ಅಪವಾದವಾಗಿದ್ದು, ನಾಲ್ಕು ದಶಕಗಳಿಂದ ನಿರಂತರವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಸೋಮವಾರ ವಿಜೃಂಭಣೆಯಿಂದ ಜರಗಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಬ್ರಹ್ಮಾವರ ಶೈಕ್ಷಣಿಕ ವಲಯಗಳಲ್ಲಿ ತಲಾ 2 ರಂತೆ ಪ್ರೌಢಶಾಲಾ ಗ್ರೇಡ್ 2 ಶ್ರೇಣಿಯ ಮತ್ತು ಉಡುಪಿ ವಲಯದಲ್ಲಿ 1 ಹುದ್ದೆ ಒಟ್ಟು 9 ಹುದ್ದೆಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಶ್ರೇಣಿಯ ತಲಾ 1 ರಂತೆ ಬೈಂದೂರು ಮತ್ತು ಉಡುಪಿ ಶೈಕ್ಷಣಿಕ ವಲಯಗಳಲ್ಲಿ ಒಟ್ಟು 2 ಹುದ್ದೆಗಳನ್ನು ಬಾಹ್ಯ ಸಂಪನ್ಮೂಲದಿಂದ ನೇರಗುತ್ತಿಗೆ ಆಧಾರದಲ್ಲಿ ವಿಶೇಷ ಸಂಪನ್ಮೂಲ ಶಿಕ್ಷಕ (ಬಿ.ಐ.ಇ.ಆರ್.ಟಿ) ರನ್ನು ನೇಮಕಮಾಡಿಕೊಳ್ಳುವರೇ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ರೆಗ್ಯುಲರ್ ಬಿ.ಇಡಿ ಜೊತೆಗೆ ವಿಶೇಷ ಬಿ.ಇಡಿ ಹಾಗೂ ಪ್ರಾಥಮಿಕ ವಿಭಾಗಕ್ಕೆ ವಿಶೇಷ ಡಿ.ಇಡಿ ತರಬೇತಿ ಪಡೆದ ಶಿಕ್ಷಕರು ಆರ್ಸಿಐ ನೋಂದಣಿ ಮಾಡಿದವರು, ಮಾರ್ಚ್ 5 ರ ಮಧ್ಯಾಹ್ನ 1.30 ರ ಒಳಗೆ ಪೂರ್ಣ ವಿವರಗಳು ಹಾಗೂ ದಾಖಲೆಗಳೊಂದಿಗೆ ತಮ್ಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಲಿಖಿತ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಸಾ. ಶಿ. ಇಲಾಖೆಯ ಉಪನಿರ್ದೇಶಕರು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ನಡೆಯುವ, ಉಡುಪಿ ಜಿಲ್ಲಾ 14 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡುವ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಅವರ ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು. ಜಿಲ್ಲಾ ಕನ್ನಡ…
