Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪಾರಂಪರಿಕಾ ಔಷಧ ಭಂಡಾರ ಮತ್ತು ಸಂಶೋಧನಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಔಷಧ ಗಿಡ ಮೂಲಿಕಾ ಪ್ರಾಧಿಕರ ಬೆಂಗಳೂರು ಇವರ ಸಹಯೋಗದೊಂದಿಗೆ ‘ಅಶೋಕ ವನಸಿರಿ’ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಮೂಡುಬಿದಿರೆ ಪರಿಸರದಲ್ಲಿ 1500 ಅಶೋಕ ಗಿಡಗಳನ್ನು ಹಂಚಿ, ಜನರಲ್ಲಿ ಈ ಗಿಡದ ಪ್ರಾಮುಖ್ಯತೆಯನ್ನು ಇನ್ನು ಹೆಚ್ಚು ತಿಳಿಸಲಾಗುವುದು, ಇಂದು ಎಷ್ಟೋ ಗಿಡಮೂಲಿಕೆಗಳು ನಶಿಸಿ ಹೋಗುತ್ತಿದ್ದು, ಅವುಗಳ ಸಂರಕ್ಷಣೆ ಮಾಡಬೇಕಿದೆ. ನಮ್ಮ ದೇಶದ ಆಯುರ್ವೇದ ಚಿಕಿತ್ಸೆಯ ಮಹತ್ವವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದರು. ಕರ್ನಾಟಕ ರಾಜ್ಯ ಔಷಧ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ‍್ಯ ನಿರ್ವಹಣಾಧಿಕಾರಿ ಸುದರ್ಶನ ಜಿ.ಎ. ಮಾತನಾಡಿ, ಆತ್ಮ ನಿರ್ಭರ ಭಾರತದ ಕನಸನ್ನು ನನಸು ಮಾಡಲು ನಮ್ಮ ಪರಂಪರೆಯಲ್ಲಿ ಅಡಗಿದ ಆಯುರ್ವೇದ ವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿ ನಾವು ಆಳವಡಿಸಿಕೊಳ್ಳಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ಭಾಗದ ಜನರ ಭಾವನಾತ್ಮಕ ಬೆಸುಗೆ ಯಕ್ಷಗಾನವಾಗಿದ್ದು, ಪ್ರತಿಯೊಬ್ಬರ ಮನೆ-ಮನದಲ್ಲೂ ಇದು ಹಾಸು ಹೊಕ್ಕಾಗಿದೆ. ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದ ಡಾ|| ಶಿವರಾಮ ಕಾರಂತರು ದೇಶದಲ್ಲಿ ಅಲ್ಲದೇ ವಿದೇಶದಲ್ಲಿಯೂ ಯಕ್ಷಗಾನದ ಕಂಪನ್ನು ಪಸರಿಸಿದವರು. ಯಕ್ಷಗಾನಕ್ಕೆ ಕಾರಂತರ ಕೊಡುಗೆ ಅನನ್ಯವಾದುದು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರ ಆಪ್ತ ಸಹಾಯಕರಾದ ಹರೀಶ್ ಕುಮಾರ್ ಶೆಟ್ಟಿ ಅವರು ಹೇಳಿದರು. ಅವರು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ(ರಿ)ಕೋಟ ಇವರಿಂದ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಮೈಂದ ದ್ವಿವಿದ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿವೃತ್ತ ಉಪನ್ಯಾಸಕ ಕಲಾವಿದ ರಾಮಚಂದ್ರ ಐತಾಳ್ ಗುಂಡ್ಮಿ ಅವರು ಮಾತನಾಡಿ ಯಕ್ಷಗಾನವು ಕೇವಲ ಮನೋರಂಜನೆಯ ವಸ್ತುವಲ್ಲ ಅದು ನಮಗೆ ಬದುಕಿನ ಪಾಠ ಕಲಿಸುವ ಒಂದು ಮಾನದಂಡ, ಪ್ರಸ್ತುತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವಸಹಾಯ ಸಂಘಗಳು ಕೇವಲ ಲೇವಾದೇವಿ ಸಂಸ್ಥೆಗಳಾಗದೆ, ಕಾಯಕದ ಮೂಲಕ ಉತ್ಪಾದನಾ ಚಟುವಟಿಕೆ ನಡೆಸಿ ಸದಸ್ಯರ ಸ್ವಾವಲಂಬನೆ ಸಾಧಿಸುವ ಸಾಧನಗಳಾಗಬೇಕು ಎನ್ನುವುದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಶಯ. ಸಂಘದ ರೈತಸಿರಿ ಮತ್ತು ನವೋದಯ ಸ್ವಸಹಾಯ ಸಂಘಗಳಿಗೆ ಅಗತ್ಯ ಪರಿಣತಿ ಮತ್ತು ನೆರವು ನೀಡುವ ಮೂಲಕ ಅದು ಈ ಆಶಯವನ್ನು ಸಾಕಾರಗೊಳಿಸಲು ಯತ್ನಿಸುತ್ತಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದರ ಶೆಟ್ಟಿ ಹೇಳಿದರು. ಸಂಘ ಹಾಗೂ ರೈತಸಿರಿ, ರೈತಸೇವಾ ಒಕ್ಕೂಟದ ಪ್ರಾಯೋಜಕತ್ವದಲ್ಲಿ ಸಂಘದ ರೈತಸಿರಿ, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಆಸಕ್ತ ರೈತರಿಗಾಗಿ ನಾಗೂರಿನ ಶ್ರೀ ಕೃಷ್ಣಲಲಿತಾ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದರು. ಸಹಕಾರಿ ಸಂಘ ರೈತರ ಅಗತ್ಯಗಳಿಗೆ ತಕ್ಕಂತೆ ಯೋಜನೆ ರೂಪಿಸಿ, ಅನುಷ್ಠಾನಿಸುವ ಸ್ವಾತಂತ್ರ್ಯ ಹೊಂದಿದೆ. ಸಂಘದ ವ್ಯಾಪ್ತಿಯ ರೈತರು ಬೆಳೆಯುವ ಕಲ್ಲಂಗಡಿ ಹಣ್ಣಿನ ಮೂಲಕ ವಾರ್ಷಿಕ ರೂ ೪ ಕೋಟಿ ವ್ಯವಹಾರ ನಡೆಯುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಂಗೊಳ್ಳಿ ಶಾಖೆ ಆಶ್ರಯದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿವೃತ್ತ ಉಪ ಮಹಾಪ್ರಬಂಧಕ ಕೃಷ್ಣ ಬಿಲ್ಲವ ಒಂದು ಶತಮಾನದಷ್ಟು ಸುದೀರ್ಘ ಇತಿಹಾಸವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿದೆ. ವಿವಿಧ ಯೋಜನೆ ಹಾಗೂ ಸವಲತ್ತುಗಳನ್ನು ಗ್ರಾಹಕರಿಗೆ ನೀಡುತ್ತಾ, ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ರೈತಾಪಿ ವರ್ಗದ ಮತ್ತು ಗ್ರಾಹಕರ ಸೇವೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಸಹಕಾರ ಕ್ಷೇತ್ರದ ಮೂಲಕ ಆಧುನಿಕ ಬ್ಯಾಂಕಿಂಗ್ ಸೇವೆಯನ್ನು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನೀಡುತ್ತಿರುವ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಶುಭಾಶಂಸನೆಗೈದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಸಿಇಒ ಸುರೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆ ವಿರೋಧ ಪಕ್ಷದ ಸದಸ್ಯರನ್ನು ಆಹ್ವಾನಿಸದೆ ಒಳಚರಂಡಿ ಮಂಡಳಿ ನಿರ್ದೇಶಕರ ಜತೆ ಸಭೆ ನಡೆದಿದ್ದು, ಈ ಕುರಿತು ತಪ್ಪೊಪ್ಪಿಕೊಳ್ಳಬೇಕು ಎಂದು ವಿರೋಧ ಪಕ್ಷದವರ ಆಗ್ರಹಿಸಿದರು. ತಪ್ಪೊಪ್ಪಿಕೊಳ್ಳುವ ಪ್ರಸಂಗವೇ ನಡೆದಿಲ್ಲ ಎಂದು ಆಡಳಿತ ಪಕ್ಷದವರು ಸಮರ್ಥನೆ ಮಾಡಿದ ಘಟನೆ ಇಲ್ಲಿನ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಈಚೆಗೆ ಒಳಚರಂಡಿ ಅಭಿವೃದ್ಧಿ ಮಂಡಳಿ ನಿರ್ದೇಶಕ‌ರು ಕುಂದಾಪುರಕ್ಕೆ ಬಂದಿದ್ದ ವೇಳೆ ಅಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಅವರೊಂದಿಗೆ ನಡೆಸಿದ ಸಭೆಯಲ್ಲಿ ಬಿಜೆಪಿ ಮುಖಂಡರೂ ಪಾಲ್ಗೊಂಡಿದ್ದರು. ಆದರೆ ವಿರೋಧ ಪಕ್ಷದ ಸದಸ್ಯರಿಗೂ ಮಾಹಿತಿ ನೀಡದೆ ಕಡೆಗಣಿಸಲಾಗಿದೆ. ಈ ಬಗ್ಗೆ ತಪ್ಪೊಪ್ಪಿಕೊಳ್ಳಬೇಕು, ಇಲ್ಲದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ವಿರೋಧ ಪಕ್ಷದ ನಾಯಕ ಚಂದ್ರಶೇಖರ ಖಾರ್ವಿ ಹೇಳಿದರು. ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ್ಯ, ಕೆ. ಜಿ. ನಿತ್ಯಾನಂದ ಬೆಂಬಲಿಸಿದರು. ಹಿರಿಯ ಸದಸ್ಯ ಮೋಹನದಾಸ್ ಶೆಣೈ ಈ ಕುರಿತು ಮಾಹಿತಿ ನೀಡಲು ಮುಂದಾದಾಗ, ಆಕ್ಷೇಪಿಸಿದ ಚಂದ್ರಶೇಖರ ಖಾರ್ವಿ, ಅಧ್ಯಕ್ಷರೇ ಉತ್ತರಿಸುವಂತೆ ಒತ್ತಾಯಿಸಿದರು. ಆಡಳಿತ ಪಕ್ಷದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸೇವಾ ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಜರಗಿದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಮೃತ ಮಹೋತ್ಸವದ ವರ್ಷದ ಲಾಂಛನ ಬಿಡುಗಡೆಗೊಳಿಸಲಾಯಿತು ಗಂಗೊಳ್ಳಿಯ ಉದ್ಯಮಿ ಜಿ.ಭಾಸ್ಕರ ವಿಠಲ ಶೆಣೈ ಮಾತನಾಡಿ, ಆರ್ಥಿಕ ಸಂಸ್ಥೆಯ ಬೆಳವಣಿಗೆಯು ಆ ಸಂಸ್ಥೆಯ ಪ್ರಾಮಾಣಿಕತೆ, ವಿಶ್ವಾಸ ಹಾಗೂ ಸೇವೆಯ ಮೇಲೆ ಅವಲಂಬಿತವಾಗಿದೆ. ಕಳೆದ 75 ವರ್ಷಗಳ ಹಿಂದೆ ಪ್ರಾರಂಭಗೊಂಡ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರ ಅವಶ್ಯಕತೆಗಳಿಗೆ ಸ್ಪಂದಿಸಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸಿಕೊಂಡು ಸದೃಢವಾಗಿ ಬೆಳೆದು ನಿಂತಿದೆ. ಬ್ಯಾಂಕಿನ ಸಂಸ್ಥಾಪಕರ ಆಶಯಗಳಿಗೆ ಅನುಗುಣವಾಗಿ ಮುನ್ನಡೆಯುತ್ತಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರಿಗೆ ಉತ್ತಮ ಸೇವೆ ನೀಡುವ ಮೂಲಕ ಮತ್ತಷ್ಟು ಅಭಿವೃದ್ಧಿ ಹೊಂದುವಂತಾಗಲಿ ಎಂದು ಹೇಳಿದರು. ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಬ್ಯಾಂಕಿನ ಮಾಜಿ ನಿರ್ದೇಶಕ ಚಿಕ್ಕಯ್ಯ ಪೂಜಾರಿ, ನಿರ್ದೇಶಕರಾದ ಹರೀಶ ಮೇಸ್ತ, ಮಾಧವ ಖಾರ್ವಿ, ಸುಭಾಶ್ಚಂದ್ರ ಪೂಜಾರಿ, ಶ್ರೀನಿವಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ ನಡೆಯಿತು. ಅತಿಥಿಯಾಗಿ ಡಾ. ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತಾಗಿ ವಿದ್ಯಾರ್ಥಿಗಳ ಪೋಷಕರಿಗೆ ಸವಿಸ್ತಾರವಾಗಿ ತಿಳಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕೆ. ವೆಂಕಟರಮಣ ಹೆಗ್ಡೆ ಸಂಘದ ಧ್ಯೇಯೋದ್ದೇಶ ಹಾಗೂ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ನೂತನ ಸದಸ್ಯರಾಗಿ ಆಯ್ಕೆಯಾದ ಡಾ. ಅತುಲ್ ಕುಮಾರ್ ಶೆಟ್ಟಿಯವರನ್ನು ಗೌರವಿಸಲಾಯಿತು. ರಕ್ಷಕ-ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿಯಾದ ಫಾತಿಮಾ ಲೋಬೊ ಉಪಸ್ಥಿತರಿದ್ದರು ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆಯಲ್ಲಿ ಜಿ. ಎಂ. ಮುಂದಿನಮನಿ ಸಾಧಕ ಮಕ್ಕಳಿಗೆ ಪುರಸ್ಕಾರ ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಜೀವಿಸುವ, ಶಿಕ್ಷಣ ಮತ್ತು ರಕ್ಷಣೆ ಪಡೆಯುವ, ಭಾಗವಹಿಸುವ ಹಕ್ಕುಗಳಿವೆ. ಇವುಗಳಿಗೆ ಅಡ್ಡಿಯಾದಾಗ ಮಕ್ಕಳು ಪೋಷಕರ, ಶಿಕ್ಷಕರ ಅಥವಾ ಅಧಿಕಾರಿಗಳ ಗಮನಕ್ಕೆ ತಂದು ಅವುಗಳನ್ನು ಪಡೆದುಕೊಳ್ಳಬೇಕು. ಹಾಗೆಯೇ ಮಹಿಳೆಯರೂ ತಮ್ಮ ಶೋಷಣೆಯ ವಿರುದ್ಧ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ವಿಘ್ನೇಶ್ವರ, ಮಕ್ಕಳ ಮಿತ್ರೆ ಅನಿತಾ ಆರ್. ಕೆ, ಮಹಿಳಾ ಮಿತ್ರೆ ಲೋಲಾಕ್ಷಿ, ಶಾಲಾಭಿವೃದ್ಧಿ ಸಮಿತಿಗಳ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಅಬ್ದುಲ್ಲಾ, ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮದ್, ಸಂಪನ್ಮೂಲ ವ್ಯಕ್ತಿ ತಿಲೋತ್ತಮಾ, ಪಂಚಾಯಿತಿ ಸಿಬ್ಬಂದಿ ಶೇಖರ ಮರವಂತೆ ಇದ್ದರು. ಸಾಧಕ ಮಕ್ಕಳಿಗೆ ಪುರಸ್ಕಾರ ವಿತರಣೆ ನಡೆಯಿತು. ವಿದ್ಯಾರ್ಥಿನಿ ಮೇಘನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎನ್‌ಸಿಇಆರ್‌ಟಿ ನವದೆಹಲಿ ಶಾಲಾಶಿಕ್ಷಣ ಸಚಿವಾಲಯ ಭಾರತ ಸರಕಾರವು 2020-21ನೇ ಸಾಲಿನಲ್ಲಿ ಶಿಕ್ಷಣದಲ್ಲಿ ಕಲೆಯನ್ನು ಉತ್ತೇಜಿಸಲು ಹಾಗೂ ದೇಶದ ಸಾಂಸ್ಕೃತಿಕ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಮೂಡಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ‘ಕಲೋತ್ಸ’ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದರಲ್ಲಿ ಒಂದಾಗಿರುವ ರಾಷ್ಟ್ರ ಮಟ್ಟದ ವಿದ್ಯಾರ್ಥಿನಿಯರ ‘ಭರತನಾಟ್ಯ ಸ್ಪರ್ಧೆ’ಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ನೆಂಪು ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಕೀಲ ವೃತ್ತಿಯಲ್ಲಿರುವ ಕುಂದಾಪುರದ ರಾಜಕುಮಾರ್ ನೆಂಪು ಮತ್ತು ಪ್ರತಿಮಾ ಇವರ ಪುತ್ರಿಯಾಗಿರುವ ಸಿಂಚನಾ ಈಗಾಗಲೇ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಹಂಸ ಭ್ರಮರಿ ಬೆಂಗಳೂರು, ಹೆಜ್ಜೆ ಗೆಜ್ಜೆ ಉಡುಪಿ, ಡ್ಯಾನ್ಸ್ ಜಾತ್ರೆ ಧಾರವಾಡ , ರವೀಂದ್ರ ಕಲಾಕ್ಷೇತ್ರಬೆಂಗಳೂರು, ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್, ಹನಿವೆಲ್ ಕಂಪನಿ ಬೆಂಗಳೂರು, ದಿಕ್ಸೂಚಿ ನಾಟ್ಯಾಲಯ ಬೆಂಗಳೂರು, ಇನ್ ಸೈಟ್ ಫೌಂಡೇಶನ್ ಯು.ಎಸ್.ಎ ನಡೆಸಿದ ನೃತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲ್ಗದ್ದೆಕೇರಿ ಸಿದ್ದುಮನೆ ಎಂಬಲ್ಲಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ವೆಂಟೆಡ್ ಡ್ಯಾಂ ಮತ್ತು ಸೇತುವೆಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಗುದ್ದಲಿಪೂಜೆ ನೇರವೆರಿಸಿದರು. ಪ್ರಾಸ್ತಾವಿಕ ಮಾತನಾಡಿದ ಮಾಜಿ ಪಂಚಾಯತ್ ಅಧ್ಯಕ್ಷರಾದ ಅಶೋಕ ಕುಮಾರ ಶೆಟ್ಟಿ, ಗ್ರಾಮೀಣ ಭಾಗದ ಬಹುದಿನದ ಬೇಡಿಕೆ ಸೇತುವೆ ಹಾಗೂ ವೆಂಟೆಡ್ ಡ್ಯಾಂ ನಿರ್ಮಾಣವಾಗುವುದರಿಂದ ಕೇರಿಸಿದ್ದುಮನೆ ಜೋಗಿಜೆಡ್ಡು ಮತ್ತು ಸ್ಥಳೀಯರಿಗೆ ಅಂತರ್ಜಲ ವೃದ್ಧಿಯಾಗುವುದರೊಂದಿಗೆ ಸಾರಿಗೆ ವ್ಯವಸ್ಥೆ ತುಂಬಾ ಅನುಕೂಲವಾಗಿದೆ ಈ ವ್ಯವಸ್ಥೆಗೆ ಅನುದಾನ ಒದಗಿಸಲು ನೆರವಾದ ಅಭಿವೃದ್ಧಿಯ ಹರಿಕಾರ ನಮ್ಮ ಹೆಮ್ಮಯ ಶಾಸಕರು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಪಂಚಾಯತ್ ಸದಸ್ಯರಾದ ಸೂಲಿಯಣ್ಣ ಶೆಟ್ಟಿ, ಶ್ರೀನಿವಾಸ ಪೂಜಾರಿ, ಬಾಬು ಆಚಾರ್ಯ, ಕಿರಣ್ ಶೆಟ್ಟಿ ಮರವಂತೆ, ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಭೋಜ ನಾಯ್ಕ,…

Read More