Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು. ಶಿವರಾತ್ರಿಯ ಅಂಗವಾಗಿ ಬೈಂದೂರು ವಣಕೊಡ್ಲುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಮುಟ್ಟಿ ಪೂಜಿಸುವ ಅಪೂರ್ವ ಅವಕಾಶ ಭಕ್ತರದ್ದಾಗಿತ್ತು. ಐತಿಹಾಸಿಕ ಹಾಗೂ ಐತಿಹ್ಯವಿರುವ ಶಿವಾಲಯಗಳಿಗೆ ಭಕ್ತ ದಂಡು ಹರಿದು ಬಂದಿತ್ತು. ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಬೆಳ್ವೆ ಶ್ರೀ ಶಂಕರನಾರಾಯಣ, ಆವರ್ಸೆ ಶ್ರೀ ಶಂಕರನಾರಾಯಣ, ಮಾಂಡವಿ ಶ್ರೀ ಶಂಕರನಾರಾಯಣ, ಶ್ರೀ ಕ್ರೋಢ ಶಂಕರನಾರಾಯಣ, ಶ್ರೀ ಹೊಳೆ ಶಂಕರನಾರಾಯಣ ದೇವಾಲಯಗಳು, ಆಜ್ರಿ ಶ್ರೀ ತ್ರೈಂಬಕೇಶ್ವರ ದೇವಾಲಯ, ಬೈಂದೂರು ಐತಿಹಾಸಿಕ ಶ್ರೀ ಸೇನೇಶ್ವರ ದೇವಾಲಯ, ಪಡುವರಿಯ ಶ್ರೀ ಸೋಮೇಶ್ವರ ದೇವಾಲಯ, ಕಿರಿಮಂಜೇಶ್ವರದ ಶ್ರೀ ಅಗಸ್ತೇಶ್ವರ ದೇವಾಲಯ, ಹೆರಂಜಾಲಿನ ಶ್ರೀ ಗುಡೆಮಹಾಲಿಂಗೇಶ್ವರ ದೇವಾಲಯ, ಗುಜ್ಜಾಡಿಯ ಗುಹೇಶ್ವರ ದೇವಾಲಯ, ಮರವಂತೆ ಶ್ರೀ ಗಂಗಾಧರೇಶ್ವರ ದೇವಾಲಯ, ಗಂಗೊಳ್ಳಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಪರಶುರಾಮ ಸೃಷ್ಟಿಯ ಸಪ್ತ ಮೊಕ್ಷದಾಯಕ ಕ್ಷೇತ್ರಗಳ ಪೈಕಿ ಒಂದಾದ ಧ್ವಜಪುರ ಖ್ಯಾತಿಯ ಶ್ರೀ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ಪೂಜೆ, ಶಿವನಾಮ ಸ್ಮರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಿಗೆ ರುದ್ರಾಭಿಷೇಕ – ಜಲಾಭಿಷೇಕ – ಕ್ಷೀರಾಭಿಷೇಕ – ಬಿಲ್ವಾರ್ಚನೆ-ನಂದಾದೀಪ, ಶಿವರಾತ್ರಿಯ ಅರ್ಘ್ಯಪ್ರದಾನ – ಇತ್ಯಾದಿ ಪೂಜೆಗಳನ್ನು ನಡೆದವು. ಇದನ್ನೂ ಓದಿ: ► ವಣಕೊಡ್ಲುವಿನಲ್ಲಿ ಶಿವಲಿಂಗ ಸ್ವರ್ಶಿಸಿ ಪುನೀತರಾದ ಶಿವಭಕ್ತರು – https://kundapraa.com/?p=35517 ► ಕೊಡಪಾಡಿ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35543 ► ಕುಂದಾಪುರ: ಶ್ರೀ ಕುಂದೇಶ್ವರನ ಸ್ಮರಿಸಿ ಕೃತಾರ್ಥರಾದ ಭಕ್ತರು – https://kundapraa.com/?p=35553 ► ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35569 ► ಕೋಟೇಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಐತಿಹ್ಯ – https://kundapraa.com/?p=1512 . https://kundapraa.com/?p=35553

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪ್ರಾಚೀನ ದೇವಾಲಯಗಳಲ್ಲಿ ಒಂದೆನಿಸಿರುವ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ಪೂಜೆ, ಶಿವನಾಮ ಸ್ಮರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಿಗೆ ರುದ್ರಾಭಿಷೇಕ – ಜಲಾಭಿಷೇಕ – ಕ್ಷೀರಾಭಿಷೇಕ – ಬಿಲ್ವಾರ್ಚನೆ-ನಂದಾದೀಪ, ಶಿವರಾತ್ರಿಯ ಅರ್ಘ್ಯಪ್ರದಾನ – ಇತ್ಯಾದಿ ಪೂಜೆಗಳನ್ನು ನಡೆದವು. ದೇವರ ದೀಪಕ್ಕೆ ಎಣ್ಣೆ ತಂದವರು ಅದನ್ನು ಉರಿಯುತ್ತಿರುವ ದೀಪದ ಸುರಿದು ದೇವರಿಗೆ ನಮಿಸುವುದು ಕಂಡುಬಂತು. ದೇವಾಲಯದ ಬಯಲು ರಂಗಮಂಟಪದಲ್ಲಿ ಭಜನಾ ಕಾರ್ಯಕ್ರಮ ಜರುಗಿತು. ರಾತ್ರಿ ಕಾಲದಲ್ಲಿ ಕುಂದೇಶ್ವರನ ಸನ್ನಿಧಿಯಲ್ಲಿ ನಡೆಯುವ ರಂಗಪೂಜೆ ಮತ್ತು ಮಹಾಮಂಗಳಾರತಿಯಲ್ಲಿ ಭಕ್ತಾದಿಗಳೆಲ್ಲ ಭಾಗವಹಿಸಿ, ಮಂತ್ರ ಪುಷ್ಪ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಇದನ್ನೂ ಓದಿ: ► ವಣಕೊಡ್ಲುವಿನಲ್ಲಿ ಶಿವಲಿಂಗ ಸ್ವರ್ಶಿಸಿ ಪುನೀತರಾದ ಶಿವಭಕ್ತರು – https://kundapraa.com/?p=35517 ► ಕೊಡಪಾಡಿ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35543 ► ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=35569 ► ಕುಂದಾಪುರ ಶ್ರೀ ಕುಂದೇಶ್ವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಐತಿಹಾಸಿಕ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜೆ, ಶಿವನಾಮ ಸ್ಮರಣೆ, ಭಜನಾ ಕಾರ್ಯಕ್ರಮಗಳು ಜರುಗಿದವು. ಐತಿಹ್ಯ: ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿನ ಈ ಐತಿಹಾಸಿಕ ಗುಹೇಶ್ವರ ದೇವಾಲಯದಲ್ಲಿ ಶಿವನ ಮೂಲ ಸಾನಿಧ್ಯಕ್ಕೊಂದು ಮೆರಗಿದೆ. ೨೦ ಅಡಿ ಉದ್ದದ ಕಲ್ಲಿನ ಪೊಟರೆಯ ಅಂತ್ಯದಲ್ಲಿ ಉದ್ಘವಿಸಿರುವ ಈ ಶಿವಲಿಂಗದಲ್ಲೊಂದು ಬೆರಗಿದೆ. ಈಶ್ವರನೊಂದಿಗೆ ಸ್ಕಂದ ದೇವರ ಉದ್ಭವ ಸನ್ನಿಧಿಯೂ ಇದೆ. ಈ ಮೊದಲು ಶಿವರಾತ್ರಿಯಂದು ಗುಹೆಯೋಳಗಿನ ಉದ್ಭವರೂಪಿ ಗುಹೇಶ್ವರ ದರ್ಶನಕ್ಕೆ ವಿಶೇಷ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಕಳೆದ ವರ್ಷದಿಂದ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಅರ್ಚಕರು ಪೂಜೆ ಸಲ್ಲಿಸುತ್ತಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಪ್ರಾಚಿನ ದೇವಾಲಯಗಳಲ್ಲೊಂದಾಗ ಶ್ರೀ ಗುಹೇಶ್ವರ ದೇವಾಲಯದ ಈಶ್ವರ, ಸ್ಕಂದ, ಗಣಪತಿ ಹಾಗೂ ಅಮ್ಮನವರ ಸಾನಿಧ್ಯವಿದ್ದು ಪ್ರತಿನಿತ್ಯವೂ ಪೂಜೆ ಪುನಸ್ಕಾರಗಳು ನಡೆಯುತ್ತವೆ. ಸ್ವಯಂ ಸೇವಕರು, ಗುಜ್ಜಾಡಿಯ ಯುವಕರು ಶಿವರಾತ್ರಿಯಂದು ಒಂದಾಗಿ ದೇವರ ಕಾರ್ಯದಲ್ಲಿ ಭಾಗವಹಿಸಿ ಭಕ್ತರಿಗೆ ಮಾರ್ಗದರ್ಶನ…

Read More

ಕುಂದಾಪ್ರ ಡಾಟ್ ಕಾಂ ವರದಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶಿವದೇವಾಲಯಗಳಲ್ಲಿ ಶಿವಲಿಂಗ ಸ್ಪರ್ಶಪೂಜೆಯ ಏಕೈಕ ಶಿವದೇಗುಲ ಎಂಬ ಪ್ರಸಿದ್ಧಿಗೆ ಪಾತ್ರವಾದ ಬೈಂದೂರಿನ ಗಂಗಾನಾಡು ಗ್ರಾಮದ ವಣಕೊಡ್ಲುವಿನ ಪುರಾತನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದಂದು ಸಹಸ್ರಾರು ಭಕ್ತರು ಭಕ್ತಿ-ಭಾವದೊಂದಿಗೆ ಶಿವಲಿಂಗ ಸ್ವರ್ಶಿಸಿ ಪುನೀತರಾದರು. Video ಬೆಳಿಗ್ಗೆ 7 ಗಂಟೆಯಿಂದಲೇ ಭಕ್ತಾದಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಮತ್ತು ಸ್ಪರ್ಶಪೂಜೆ ಆರಂಭಗೊಂಡಿದ್ದು ರಾತ್ರಿ 10 ಗಂಟೆಗೆ ದೇವರ ಸುತ್ತು ಉತ್ಸವ, ಕಟ್ಟೆಪೂಜೆ ಹಾಗೂ ಪ್ರಸಾದ ವಿತರಣೆ, ಮಾರ್ಚ್ 8ರಂದು ಶುದ್ಧಕಳಶ, ಕಲಾವೃದ್ಧಿಹೋಮ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ. ಕುಂದಾಪ್ರ ಡಾಟ್ ಕಾಂ ಲೇಖನ ಹಲವು ಗಣ್ಯ ಮಹನೀಯರು ಮಹಾಶಿವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಬೆಳಿಗ್ಗೆ ಹೊತ್ತಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಕುಟುಂಬ ಸಮೇತ ಆಗಮಿಸಿ ದರ್ಶನ ಪಡೆದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದಡಾ ರಾಜಮೋಹನ್ ಶೆಟ್ಟಿ ಡಾ. ಮಿಥುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದಲ್ಲಿ ಅದೆಷ್ಟೊ ಕಾಲದಿಂದ ಎಲ್ಲ ಧರ್ಮ, ಜಾತಿ, ವರ್ಗಗಳ ಜನರು ಒಂದಾಗಿ ಜೀವಿಸುತ್ತ ಬಂದಿದ್ದಾರೆ. ಆದರೆ ಕೆಂದ್ರದ ಪ್ರಸಕ್ತ ಬಿಜೆಪಿ ಸರ್ಕಾರ ನಾಗರಿಕತೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಮೂಲಕ ಅವರ ನಡುವೆ ಭೇದ ಸೃಷ್ಟಿಸಿ ವಿಭಜಿಸುವ ಕೆಲಸಕ್ಕೆ ಮುಂದಾಗಿದೆ. ಈ ಕೃತ್ಯವನ್ನು ಎಲ್ಲ ಸೇರಿ ವಿರೋಧಿಸಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರ ಫಾ. ವಿಲಿಯಂ ಮಾರ್ಟಿಸ್ ಹೇಳಿದರು. ಕುಂದಾಪುರ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಬುಧವಾರ ನಾವುಂದದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆ ಉದ್ಘಾಟಿಸಿ ಮಾತನಾಡಿದರು. ಇಂತಹ ಒಂದು ಕರಾಳ ಕ್ರಮಕ್ಕೆ ಅಸ್ಸಾಂ ರಾಜ್ಯವನ್ನು ಪ್ರಯೋಗ ಭೂಮಿಯಾಗಿ ಆರಿಸಿಕೊಳ್ಳಲಾಗಿದೆ. ಅಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಯಲ್ಲಿ ೧೯ ಲಕ್ಷ ಜನರು ದೇಶದ ನಾಗರಿಕರಲ್ಲ ಎಂದು ಕಂಡುಕೊಳ್ಳಲಾಗಿದೆ. ಅವರಲ್ಲಿ೧೪ ಲಕ್ಷ ಜನರು ಹಿಂದುಗಳಿದ್ದಾರೆ. ಅವರೆಲ್ಲ ಈಗ ಸಂಕಷ್ಟದಲ್ಲಿದ್ದಾರೆ. ಆದರೂ ತಿದ್ದುಪಡಿ ಕಾಯಿದೆಯಿಂದ ದೇಶದ ಹಿಂದುಗಳಿಗೆ ತೊಂದರೆಯಾಗದು ಎಂದು ಸುಳ್ಳು ಹೇಳುತ್ತಿದ್ದಾರೆ. ನಿಜವಾಗಿ ಶೇ ೪೦…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೀದರಿನ ರಂಗಮಂದಿರದಲ್ಲಿ ನ್ಯೂ ಸೆಂಚುರಿ ರೋಟರಿ ಕ್ಲಬ್ ಆಯೋಜಿಸಿದ್ದ ಮಿಸ್ ಉಡಾನ್ ೨೦೨೦ ಸೌಂದರ್ಯ ಸ್ಪರ್ಧೆಯಲ್ಲಿ ಕುಂದಾಪುರ ವಂಡ್ಸೆ ಮೂಲದ ಅನುಪಮ ಹೊಳ್ಳ ಪ್ರಥಮ ಸ್ಥಾನವನ್ನು ಅಲಂಕರಿಸಿ ಪ್ರಶಸ್ತಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ದೈಹಿಕ ಸೌಂದರ್ಯದ ಜೊತೆ ಅತ್ಯುತ್ತಮ ವ್ಯಕ್ತಿತ್ವ ರೂಪಿಸುಕೊಳ್ಳುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಲೀಲಾಜಾಲವಾಗಿ ಉತ್ತರಿಸುವುದರೊಂದಿಗೆ ತನ್ನ ಹೃದಯ ಸೌಂದರ್ಯವನ್ನೂ ಮೆರೆದಿದ್ದಾರೆ. ವಿವಿಧ ಮಜಲುಗಳುಳ್ಳ ಈ ಸ್ಪರ್ಧೆಯಲ್ಲಿ ಮಹಾರಾಷ್ಟ್ರ , ಆಂಧ್ರಪ್ರದೇಶ, ತೆಲಂಗಾಣ ಕರ್ನಾಟಕ ಹಾಗೂ ಇತರ ರಾಜ್ಯಗಳ ಕಾಲೇಜು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ನ್ಯೂ ಸೆಂಚುರಿ ರೋಟರಿ ಕ್ಲಬ್ ಬೀದರ್ ಈ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಪ್ರಥಮ ಸುತ್ತಿನಲ್ಲಿ ಮೂವತ್ತು ವಿದ್ಯಾರ್ಥಿನಿಯರು ಸ್ಪರ್ಧಿಸಿದ್ದು ಎರಡನೇ ಸುತ್ತಿಗೆ ಸಂಖ್ಯೆ ಆರಕ್ಕೆ ಇಳಿಯಿತು. ದ್ವಿತೀಯ, ತೃತೀಯ ಸ್ಥಾನವನ್ನು ಬೀದರ್ ನ ಎಸ್. ಬಿ.ಪಾಟೀಲ್ ಡೆಂಟಲ್ ಕಾಲೇಜು ಹಾಗೂ ತೆಲಂಗಾಣದ ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿಯರು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಬಹಳಷ್ಟು ಗಣ್ಯರು, ಕಲಾವಿದರು ಹಲವಾರು ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಕೆಲಸವಿರಲಿ ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುವುದು, ಅದನ್ನು ಮತ್ತಷ್ಟು ಉತ್ತಮಗೊಳಿಸುವುದು ಮತ್ತು ನ್ಯಾಯಸಮ್ಮತವಾಗಿರುವಂತೆ ನೋಡಿಕೊಳ್ಳುವುದು ಬಹುಮುಖ್ಯವಾಗಿದ್ದು, ಈ ಮೂರು ಅಂಶಗಳು ಸಸೂತ್ರವಾಗಿ ನಡೆದರೆ ಮಾಡುವ ಕಾರ್ಯ ಸಾರ್ಥಕತೆ ಕಂಡುಕೊಳ್ಳುವುದಲ್ಲದೇ, ಆತ್ಮತೃಪ್ತಿಯೂ ದೊರೆಯುತ್ತವೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರು ಹಾಗೂ ಸ್ನೇಹ ತರಂಗ ಬೈಂದೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕಾಲೇಜಿನ ಎ.ವಿ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ’ವಿಷಯಾಧಾರಿತ ಶಿಕ್ಷಣ & ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು. ಮಾಡುವ ಕೆಲಸವನ್ನು ಭಿನ್ನವಾಗಿಯೂ, ಆತ್ಮಸಾಕ್ಷಿಗೆ ತಕ್ಕುದಾಗಿಯೂ ಮಾಡಿದರೆ ಯಾರನ್ನೂ ಮೆಚ್ಚಿಸುವ, ಓಲೈಸುವ ಸಂದರ್ಭ ಬರುವುದಿಲ್ಲ. ಮಾತು ಮತ್ತು ಕೃತಿಯಲ್ಲಿ ಸಾಮ್ಯತೆ ಇರಬೇಕಾದರೆ ಅಂತಹದ್ದೊಂದು ಬದ್ಧತೆ ನಮ್ಮಲ್ಲಿರಬೇಕು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್‌ಫ್ರೆಡ್ ಡಿಸೋಜಾ ಅಧ್ಯಕ್ಷತೆ ವಹಿಸಿ ಮಾತನಾಡಿ ನೆಹರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇವರ ಸಾಮಿಪ್ಯ ಸಾಧಿಸಲು ಅನುಸರಿಸುವ ನವವಿಧ ಭಕ್ತಿಮಾರ್ಗಗಳಲ್ಲಿ ಭಜನೆಯೂ ಒಂದು. ಅನ್ಯ ಮಾರ್ಗಗಳ ಅನುಸರಣೆ ಸಾಮಾನ್ಯರಿಗೆ ಕಷ್ಟವೆನಿಸುವುದರಿಂದ ಭಜನೆ ಸುಲಭದ ಮಾರ್ಗವೆನಿಸಿ, ನಮ್ಮ ಕಾಲಕ್ಕೆ ತುಂಬ ಪ್ರಶಸ್ತವೆನಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಹೇರಂಜಾಲು ಗ್ರಾಮದ ಗುಡೇ ಮಹಾಲಿಂಗೇಶ್ವರ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಅಖಂಡ ಭಜನಾ ಸಪ್ತಾಹದ ನಡುವೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಂದಾಜು ಒಂದು ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ ರಾಜಗೋಪುರ ಕಾಮಗಾರಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿ ಕೀರ್ತನೆಯ ಮೂಲಕ ದೇವರನ್ನು ಒಲಿಸಿಕೊಂಡ ಹಲವು ದೃಷ್ಟಾಂತಗಳಿವೆ. ಅದು ಸಾಧ್ಯವಾಗಬೇಕಾದರೆ ದುಶ್ಚಟಗಳಿಂದ ದೂರರಾಗಿ, ದೀಕ್ಷಾಬದ್ಧರಾಗಿ ಅದನ್ನು ಅನುಸರಿಸಬೇಕು. ದೇವರನ್ನು ತನ್ನೊಳಗೆ ಆಹ್ವಾನಿಸಿಕೊಳ್ಳಬೇಕು ಎಂದರು. ಭಜನೆಯ ಮಹತ್ವ ಅರಿತ ಕಾರಣ ಧರ್ಮಸ್ಥಳ ಕ್ಷೇತ್ರ ಸಾಮೂಹಿಕ ಭಜನೆಗೆ ತರಬೇತಿಯ ಮೂಲಕ ಜನರನ್ನು ಅಣಿಗೊಳಿಸುತ್ತಿದೆ. ಭಜನೆಯಲ್ಲಿ ಎಲ್ಲ ವರ್ಗದ ಜನರು ಭೇದ ಮರೆತು ಒಂದಾಗುತ್ತಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ನಾಕಟ್ಟೆಯಿಂದ ಯಡ್ತರೆ ಜಕ್ಷನ್ ಮೂಲಕ ಹೊರಟ ಶ್ರೀನಿವಾಸ ಪದ್ಮಾವತಿಯರ ಮದುವೆ ದಿಬ್ಬಣ ವತ್ತಿನಕಟ್ಟೆ ಕಲಾಣ್ಯೋತ್ಸವ ಸ್ಥಳಕ್ಕೆ ಆಗಮಿಸಿದ ಬಳಿಕ ಕಲ್ಯಾಣೋತ್ಸವದ ಪ್ರಕ್ರಿಯೆಗಳು ಆರಂಭಗೊಂಡವು. ಆರಂಭದಲ್ಲಿ ದೀಪಿಕಾ ಪಾಂಡುರಂಗಿ ಅವರ ದಾಸರ ಪದಗಳ ಗಾಯನ ಜರುಗಿತು. ತಿರುಪತಿ ಆಚಾರ್ಯರು, ದಾಸ ಶೈಲಿಯಲ್ಲಿ ಬೆಂಗಳೂರಿನ ಶ್ರೀ ವಾರಿ ಫೌಂಡೇಶನ್ ನಿರೂಪಣೆಯಲ್ಲಿ ಕಲ್ಯಾಣೋತ್ಸವವನ್ನು ನಡೆಸಿದರು. ಸಂಪೂರ್ಣ ಕಾರ್ಯಕ್ರಮದ ವೀಡಿಯೋ ನೋಡಿ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಸೇವಾ ಸಮಿತಿಯ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ, ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರುಗಳಾದ ಶ್ರೀನಿವಾಸ ಕುಮಾರ್, ಶಂಕರ ಮೊಗವೀರ, ಸತ್ಯಪ್ರಸನ್ನ, ಅಣ್ಣಪ್ಪ ಪೂಜಾರಿ, ದೊಟ್ಟಯ್ಯ ಪೂಜಾರಿ, ನಾಗರಾಜ ಗಾಣಿಗ ಬಂಕೇಶ್ವರ, ಕೃಷ್ಣಯ್ಯ ಮದ್ದೋಡಿ, ರವೀಂದ್ರ ಶ್ಯಾನುಭಾಗ್, ಉದಯ ಆಚಾರ್ಯ…

Read More