ಯುವಜನತೆಗೆ ಸೇನೆಯ ಬಗ್ಗೆ ಅರಿವು ಮಾರ್ಗದರ್ಶನ ಅಗತ್ಯ: ಡಾ. ಗೋವಿಂದ ಬಾಬು ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇನೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಯುವಕರಿಗೆ ಮಾರ್ಗದರ್ಶನ ಮಾಡಿ ಅವರನ್ನು ತರಬೇತುಗೊಳಿಸುವುದು ಮತ್ತು ಜಿಲ್ಲೆಯಲ್ಲಿ ಯುವಕರು ಸೇನೆಗೆ ಸೇರಿ ದೇಶಸೇವೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸೇನಾ ಪಡೆಗಳಲ್ಲಿ ಉದ್ಯೋಗಾವಕಾಶ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಯುವಕರು ದಾರಿ ತಪ್ಪುತ್ತಿದ್ದಾರೆ ಎಂಬ ಸಮಾಜದ ಮಾತಿಗೆ ಅಪವಾದ ಎಂಬಂತೆ ನೇಷನ್ಸ್ ಲವರ್ಸ್ ತಂಡ ಸೇನೆಯ ಬಗ್ಗೆ ನಿರಂತರ ತರಬೇತಿ, ಮಾಹಿತಿ ಹಾಗೂ ಪ್ರೋತ್ಸಾಹ ನೀಡುತ್ತಿದೆ. ಇಂತಹ ಕಾರ್ಯಗಳು ಸಮಾಜದಲ್ಲಿ ಹೆಚ್ಚೆಚ್ಚು ಆಗಲಿ ಎಂದು ಹಾರೈಸಿದರು. ಇತ್ತಿಚಿಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರರ್ ಬಿಪಿನ್ ರಾವತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ದೇಶದ ಬೆನ್ನೆಲುಬು ಎಂದು ಕರೆಯುತ್ತಾರೆ. ಆದರೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸಗಳು ನಮ್ಮನ್ನಾಳುವ ಸರ್ಕಾರಗಳು ಮಾಡುತ್ತಿಲ್ಲ ಎಂದು ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಕಳವಳ ವ್ಯಕ್ತಪಡಿಸಿದರು. ಅವರು ಗುರುವಾರ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ರೈತ ಸಂಘ ತ್ರಾಸಿ ವಲಯ, ಮಹಾವಿಷ್ಣು ಯುವಕ ಮಂಡಲ, ಮಾನಸ ಯುವತಿ ಮಂಡಲ ಹಾಗೂ ಗಂಗೊಳ್ಳಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಗ್ರಾಮೀಣ ಭಾಗದ ರೈತರ ಮನೆಗೆ ತೆರಳಿ ರೈತರನ್ನು ಸನ್ಮಾನಿಸಿ ಮಾತನಾಡಿದರು. ಕೃಷಿಕರಾದ ಸರೋಜ ಮತ್ತು ಬಚ್ಚು ದೇವಾಡಿಗ ಎಲ್ಲರಿಗೂ ಮಾದರಿ. ಇದ್ದ ಭೂಮಿಯನ್ನು ಬಳಸಿಕೊಂಡು ವರ್ಷದ ಅನು ದಿನವೂ ಶ್ರಮವಹಿಸಿ ಕೃಷಿಯಲ್ಲಿ ತೊಡಗುವ ಇಂತಹ ಕೃಷಿಕರು ನಮ್ಮಹೆಮ್ಮೆ. ಓರ್ವ ಸಾಮಾನ್ಯ ಮಹಿಳೆ ತುಂಡು ಭೂಮಿಯಲ್ಲಿ ತರಕಾರಿಗಳನ್ನು ಬೆಳೆದು ಸಂತೆ ಮಾರುಕಟ್ಟೆಗೆ ತೆರಳಿ ಅಲ್ಲಿ ಮಾರಾಟ ಮಾಡಿ ತಮ್ಮ ಜೀವನವನ್ನು ನಿರ್ವಹಣೆ ಮಾಡುತ್ತಾರೆಂದರೆ ಅವರಿಂದ ನಾವೆಲ್ಲರೂ ನೋಡಿ…
ಕುಂದಾ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. ಇದರಿಂದ ಕುಂದಾಪುರ, ಬೈಂದೂರು, ಉಡುಪಿ, ಕಾರ್ಕಳ, ಬ್ರಹ್ಮಾವರ, ಕಾಪು, ಹೆಬ್ರಿಗಳಲ್ಲಿ 7,754 ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ದೊರೆಯಲೇಬೇಕು, ಸರಕಾರದಿಂದ ಸಮರ್ಪಕ ಉತ್ತರ ದೊರೆಯಬೇಕು ಎಂದು ಕಾಂಗ್ರೆಸ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪಟ್ಟು ಹಿಡಿದು ಬಾವಿಗಿಳಿದ ಘಟನೆ ವಿಧಾನ ಪರಿಷತ್ ಕಲಾಪದಲ್ಲಿ ನಡೆಯಿತು. ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಕೆ. ಪ್ರತಾಪಚಂದ್ರ ಶೆಟ್ಟಿಯ ಅವರು, ಉಡುಪಿ ಜಿಲ್ಲೆಯಲ್ಲಿ ನಮೂನೆ 50, 53ಹಾಗೂ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ಸ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. 94ಸಿ ಕಲಂ ಅಡಿ ಮಂಜೂರಾದ ಮೇಲೆ ಡೀಮ್ಸ್ ಫಾರೆಸ್ಟ್ ನಿಯಮ ಅನ್ವಯಿಸಿ ತೊಂದರೆ ನೀಡುತ್ತಿದ್ದಾರೆ. ಇವತ್ತು ನನಗೆ ಸಮಾಧಾನಕರ ಉತ್ತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಮಕ ಎಂಬುದು ಅತೀ ಪ್ರಾಚೀನ ಕಲೆ. ಕವಿ ರಚಿತ ಕಾವ್ಯಗಳ ಸಾಹಿತ್ಯದ ಅರ್ಥ ಕೆಡದಂತೆ, ಪದ ವಿಂಗಡನೆ ಮಾಡಿ, ರಾಗ-ಭಾವ, ಪದ-ಭಾವ ಸಮನ್ವಯಗೊಳಿಸಿ ಸಂಗೀತದ ವಿವಿಧ ರಾಗಗಳನ್ನು ಅಳವಡಿಸಿ ಹಾಡುವ ಕ್ರಮವೇ ಗಮಕ ಕಲೆ. ಕವಿ, ಗಮಕಿ, ವಾದಿ, ವಾಗ್ಮಿ ಇವರುಗಳು ಸಾಹಿತ್ಯ ಚತರ್ಮುಖರೆಂದೆ ಪ್ರತೀತಿ. ಕವಿಗೆ ಮೊದಲ ಸ್ಥಾನವಾದರೆ, ಗಮಕಿಗೆ ಎರಡನೆ ಸ್ಥಾನ. ರಸ ಭಾವಗಳಿಗೆ ಅನುಗುಣವಾಗಿ ರಾಗಗಳು ಸೇರಿದರೆ ಸಾಹಿತ್ಯದ ಮೌಲ್ಯ ಹೆಚ್ಚುತ್ತದೆ, ಹೃದಯಕ್ಕೆ ಹತ್ತಿರವಾಗುತ್ತದೆ. ಗಮಕ ಕಲೆ ಉಳಿದು ಬೆಳೆಯುವುದಕ್ಕೆ ಶಾಲಾ ಕಾಲೇಜುಗಳಲ್ಲಿ ಗಮಕ ಕಲೆಯ ಅಧ್ಯಯನ ಯಶಸ್ಸಿನ ಮೆಟ್ಟಿಲು ಎಂದು ಹಾಸನ ಜಿಲ್ಲೆಯ ಗಮಕಕಲಾ ಪರಿಷತ್ತಿನ ಅಧ್ಯಕ್ಷ ಕರ್ನಾಟಕ ಕಲಾಶ್ರೀ ಗಣೇಶ ಉಡುಪ ಹೇಳಿದರು. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರೌಢ ಶಾಲೆಯಲ್ಲಿ ಕುಂದಾಪುರ ಗಮಕ ಕಲಾ ಪರಿಷತ್ತು೬೬ ನೇ ರಾಜ್ಯೋತ್ಸವ ಹಾಗೂ ಸ್ವಾಂತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪಠ್ಯಾಧಾರಿತ ಗಮಕವಾಚನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗಳಲ್ಲಿ ಕೊರತೆಯಲ್ಲಿ ಆದರೆ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗುತ್ತದೆ ಅಂತಹ ಸಂದರ್ಭದಲ್ಲಿ ಸಮಾಜ ಸ್ಪಂದಿಸುವ, ಅದನ್ನು ಅಭಿವೃದ್ಧಿಪಡಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಲೇಶ್ವರ ಎಂ. ಎಸ್ ಹೇಳಿದರು. ಅವರು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಯು.ಬಿ ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಯು. ಬಿ. ಶೆಟ್ಟಿ ನೀಡುತ್ತಿರುವ ಶೈಕ್ಷಣಿಕ ಕೊಡುಗೆ ಅಭಿನಂದನೀಯ. ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ತಂಡ ಆಡಳಿತ ಮಂಡಳಿ ಸಹಕಾರ ಇಲ್ಲಿರುವುದು ತಿಳಿಯುತ್ತದೆ. ಸಾಮಾಜಿಕ ಚಿಂತನೆ ಹಾಗೂ ಕಳಕಳಿ ಇದ್ದಾಗ ಇಂತಹ ಕಾರ್ಯ ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ (ಐ.ಪಿ.ಎಸ್) ಮಾತನಾಡಿ ವಿದ್ಯೆ ಅತ್ಯಮೂಲ್ಯ ಆಸ್ತಿ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಸಾಕಾರಗೊಳಿಸುವ ಜವಾಬ್ದಾರಿಯ ಜೊತೆಗೆ ಸಮರ್ಪಕ ಗುರಿಯೊಂದಿಗೆ ಮುನ್ನಡೆಯುವುದು ಅಗತ್ಯ. ಹೀಗಾಗಿ ಶೈಕ್ಷಣಿಕ ಬದುಕನಲ್ಲಿ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸುರಕ್ಷತಾ ಕಾರ್ಯಾಗಾರ ಜರುಗಿತು. ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನವೀನ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕಿ ಭಾಗ್ಯ ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಹಟ್ಟಿಯಂಗಡಿ ವಲಯದ ದೇವಲ್ಕುಂದ ಕಾರ್ಯಕ್ಷೇತ್ರದ ದೃಷ್ಟಿಗಣಪತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ, ಮತ್ತು ಒಕ್ಕೂಟದ ಮಹಾಸಭೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಕಟ್ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಪುತ್ರನ್ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯಿಂದ ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆ ಹೊಂದಿದ್ದಾರೆ. ಶಿಸ್ತು, ಸಮಯಪ್ರಜ್ಞೆ, ಧೈರ್ಯ, ಆತ್ಮವಿಶ್ವಾಸ ಮೂಡಿದೆ ಎಂದರು. ಧ.ಗ್ರಾ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್, ಬಿ ಅವರು, ಜ್ಞಾನವಿಕಾಸ ಕಾರ್ಯಕ್ರಮ ಉದ್ದೇಶ ಆಶಯಗಳ ಮಾಹಿತಿ ನೀಡಿದರು. ಜ್ಞಾನವಿಕಾಸ ಕಾರ್ಯಕ್ರಮ ಬೈಂದೂರು ತಾಲೂಕಿನಲ್ಲಿ ಕೇವಲ 1000 ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಗೊಳಿಸಿಕೊಳ್ಳಬೇಕು. ಜೀವನದಲ್ಲಿ ಪ್ರಗತಿ ಸಾಧಿಸಬೇಕು ಎಂದರು. ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶೋಭಾ ಜಿ ಪುತ್ರನ್, ಗ್ರಾಮ ಪಂಚಾಯಿತಿ ಸದಸ್ಯ ಶರತ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಒಕ್ಕೂಟದ ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ, ಡಿ. 21: ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳಿಸಿದರು. ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ. ೨೧ರಂದು ವಡ್ಡರ್ಸೆಯವರ ಮನೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಅವರ ಹುಟ್ಟೂರಿನ ಮನೆಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಂಘಟಿಸುತ್ತಾ ಬಂದಿರುವುದು ಶ್ಲಾಘನೀಯ. ನಿಮ್ಮ ಕಾರ್ಯಕ್ರಮಕ್ಕೆ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿರತಂತರ ಸಹಕಾರ ನೀಡಲಿದೆ ಎಂದರು. ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಅತ್ಯುತ್ತಮವಾದ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲಾ ಸಂಘಟನೆಗಳಿಗೆ ಇದು ಆದರ್ಶವಾಗಿದೆ. ನಿಮ್ಮ ಒಗ್ಗಟ್ಟು ಇದೇ ರೀತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನದಲ್ಲಿ ಮೂಡುವ ನೂರಾರು ತುಡಿತಗಳ ದಾಖಲಿಕರಣವೇ ಸಾಹಿತ್ಯ, ಸಾಹಿತ್ಯದ ಕಡೆ ಒಲವು ಇರುವವರ ಬದುಕಿನ ಅಂಗವಾಗಿ ಪುಸ್ತಕಗಳಿರುತ್ತೆ, ನಾವು ರಚಿಸಿದ ಕವನ, ಕಥೆಗಳು ನಮ್ಮೊಳಗೆ ಉಳಿಯದೆ ಇಂತಹ ಸಾಹಿತ್ಯ ಸಮ್ಮೇಳನ ಅನಾವರಣಗೊಳಿಸಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ತಮ್ಮ ಇರುವಿಕೆಯನ್ನು ತೋರಿಸಿಕೊಳ್ಳಬೇಕು ಎಂದು ಸಮ್ಮೇಳನಾಧ್ಯಕ್ಷೆ ಅಮಿತಾಂಜಲಿ ಕಿರಣ್ ಹೇಳಿದರು. ಕೋಟ ಕಾರಂತ ಥೀಂ ಪಾರ್ಕ್ನ ಹೊರಾಂಗಣದ ಸಂಗೀತ ಕಾರಂಜಿಯ ವೀಕ್ಷಣಾ ಗ್ಯಾಲರಿಯಲ್ಲಿ ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರಂತರ ೨೪ನೇ ಪುಣ್ಯ ಸ್ಮೃತಿ ದಿನಾಚರಣೆಯ ಅಂಗವಾಗಿ ಕೋಟದ ಕಾರಂತ ಥಿಂ ಪಾರ್ಕ್ನಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲೆಯ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಚಿನಂಪ-2021(ಕವಿತನದ ಹೂ ಕಂಪನ)ದಲ್ಲಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಹಾಗೂ ಉಪನ್ಯಾಸಕಿ ಅಂಬಲಪಾಡಿಯ ವಾಸಂತಿ ಶೆಟ್ಟಿ ಮಾತನಾಡಿ ಎಲ್ಲದರಲ್ಲೂ ಶಕ್ತಿ ಅಡಗಿದೆ. ವೈಜ್ಞಾನಿಕ ಯುಗದಲ್ಲಿ ಅಗೋಚರ ಶಕ್ತಿಗಳಿಂದ ಕೂಡಿದ ಪ್ರಕೃತಿಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.21: ಕೊಲ್ಲೂರು ವ್ಯಾಪ್ತಿಯ ಗ್ರಾಮ ಪಂಚಾಯತ್ಗಳ ಜನರ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳನ್ನು ರೂಪಿಸುವುದರೊಂದಿಗೆ, ನಿಗದಿತ ಕಾಲಾವಧಿಯೊಳಗೆ ಅವುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಲ್ಲಿ ಕಿರು ಉದ್ಯಮಗಳ ಸ್ಥಾಪನೆ ಕುರಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಅಭಿವೃದ್ಧಿ ಮಂತ್ರಾಲಯದ ವತಿಯಿಂದ ದೇಶದ ಪ್ರತಿಷ್ಠಿತ 6 ದೇವಸ್ಥಾನದ ನಗರಗಳಲ್ಲಿ ಸಣ್ಣ ಉದ್ದಿಮೆಗಳನ್ನು ಉತ್ತೇಜಿಸಲು ಹಾಗೂ ಮೇಲ್ವಿಚಾರಣೆ ನಡೆಸಲು ಮುಂದಾಗಿದ್ದು, ಅವುಗಳಲ್ಲಿ ಹರಿದ್ವಾರ, ಬುದ್ದಗಯಾ, ಪಂಡರಾಪುರ, ಪುರಿ, ವಾರಣಾಸಿ ದೇವಸ್ಥಾನಗಳೂ ಸೇರಿದಂತೆ, ಜಿಲ್ಲೆಯ ಕೊಲ್ಲೂರು ದೇವಸ್ಥಾನವು ಸೇರಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಕೊಲ್ಲೂರು ದೇವಸ್ಥಾನಕ್ಕೆ ಪ್ರತಿವರ್ಷವೂ ದೇಶದ ಅನೇಕ ರಾಜ್ಯಗಳಿಂದ ಅಸಂಖ್ಯಾತ ಭಕ್ತಾಧಿಗಳು ಬರುವುದರಿಂದ ಧಾರ್ಮಿಕ ಪ್ರವಾಸಿ ಕೇಂದ್ರವಾಗಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗುವ ಆರ್ಥಿಕ ಚಟುವಟಿಕೆಗಳು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಹಾಗೆ ಉತ್ತೇಜಿಸಬೇಕು…
