ಕುಂದಾಪ್ರ ಡಾಟ್ ಕಾಂ ಸುದ್ದಿ. ವಿದ್ಯಾಗಿರಿ: ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನ ರೀತಿಯ ಕಲೆಗಳಿರುತ್ತವೆ. ಅದನ್ನು ಪ್ರದರ್ಶಿಸಲು ಆಸಕ್ತಿ ಮತ್ತು ಅವಕಾಶ ತುಂಬಾ ಮುಖ್ಯ. ಆಸಕ್ತಿ ಎನ್ನುವುದು ಸತತ ಪ್ರಯತ್ನದಿಂದ ಹುಟ್ಟಿಕೊಂಡರೇ, ಅವಕಾಶ ಕಲೆಗಾರನನ್ನು ಅರಸುತ್ತಾ ಬರುತ್ತದೆ ಎಂದು ಬೆಂಗಳೂರಿನ ಹಿರಿಯ ಶಿಲ್ಪಕರ್ಮಿ ಸೂರಾಲು ವೆಂಕಟರಮಣ ಭಟ್ ತಿಳಿಸಿದರು ಆಳ್ವಾಸ್ ವಿರಾಸತ್ ೨೦೧೮ರ ಅಂಗವಾಗಿ ನಡೆಯುತ್ತಿರುವ ‘ಆಳ್ವಾಸ್ ಶಿಲ್ಪ ವಿರಾಸತ್’ನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದರೆ ಶಿಲ್ಪಕಲೆಯು ಅಗತ್ಯವಾಗಿದೆ. ಆದ್ದರಿಂದ ಇದಕ್ಕೆ ಯಾವತ್ತೂ ಬೇಡಿಕೆ ಕಡಿಮೆಯಾಗುವುದಿ. ದೇವರು ದೇವಸ್ಥಾನಗಳಲ್ಲದೆ ಇನ್ನೂ ವಿಭಿನ್ನ ಶೈಲಿಯ ಶಿಲ್ಪಕಲೆಗಳಿವೆ. ಇದೆಲ್ಲವನ್ನೂ ಜನರಿಗೆ ಪರಿಚಯಿಸುವ ಪ್ರಯತ್ನವಾಗಬೇಕಿದೆ. ಶಿಲ್ಪಕಲೆ ಸಮರ್ಪಣಾ ಮನೋಭಾವ ಹಾಗೂ ನಿರಂತರ ಪರಿಶ್ರಮವನ್ನು ಬೇಡುವ ಕ್ಷೇತ್ರ. ಒಂದು ಶಿಲ್ಪವನ್ನು ಆರಂಭಿಸುವ ಮೊದಲು ಶಿಲ್ಪಿಯಲ್ಲೇ ದೃಢವಾದ ಆತ್ಮವಿಶ್ವಾಸ ಜೊತೆಗೆ ಸತತ ಪರಿಶ್ರಮವಿರಬೇಕು ಆಗ ಮಾತ್ರ ಶಿಲ್ಪಕ್ಕೆ ಒಂದು ಒಳ್ಳೆಯ ರೂಪ, ಬೆಲೆ ಬರಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಡಾ ಗ್ರಾಮದ ಪಡುಕೋಣೆ ಗ್ರೇಗರಿ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾದ ಮೂರು ದಿನಗಳ ನಾಡ ಹಬ್ಬಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಸಂಜೆ ಅದ್ದೂರಿ ಶೋಭಾಯಾತ್ರೆ, ಬಳಿಕ ಉದ್ಘಾಟನಾ ಸಮಾರಂಭ ಜರುಗಿತು. ಖ್ಯಾತ ನಿರೂಪಕಿ ಅನುಶ್ರೀ, ವಿವಿಧ ಕಿರುತೆರೆ ಕಲಾವಿದರು ಹಾಗೂ ನೃತ್ಯತಂಡಗಳು ನೆರದಿದ್ದ ಸಹಸ್ರಾರು ಮಂದಿಯನ್ನು ರಂಜಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಂಕೇಶ್ವರ ರಸ್ತೆಯಲ್ಲಿರುವ ರೈಲ್ವೆ ಎಲ್ಸಿ ಗೇಟನ್ನು ಮುಚ್ಚಿ ಅಂಡರ್ ಬ್ರಿಡ್ಜ್ ನಿರ್ಮಿಸಲು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಂಜಯ ಗುಪ್ತಾ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಬೈಂದೂರಿಗೆ ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ಈ ಬಗ್ಗೆ ತಿಳಿಸಿದ್ದಾರೆ. ರೈಲ್ವೆ ಅಂಡರ್ ಪಾಸ್ಗೆ ಸುಮಾರು ಒಂದು ಕೋಟಿ ರೂ. ಅಂದಾಜು ವೆಚ್ಚದ ತಗಲಲಿದ್ದು ಭಾಗಶಃ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಕಾಮಗಾರಿ ನಡೆಸುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ ಎಂದು ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯ ಕೆ. ವೆಂಕಟೇಶ ಕಿಣಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಕೊಂಕಣ ರೈಲ್ವೆ ಇಂಜಿನೀಯರ್ ವೆಂಕಟೇಶ್ ಇದ್ದರು.
ಕುಂದಾಪ್ರ ಡಾಟ್ ಕಾಂ’ ವರದಿ ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಪ್ರಥಮ ಬಾರಿಗೆ ವಿಭಿನ್ನ ಸಂಯೋಜನೆಯೊಂದಿಗೆ ವಿಶಿಷ್ಟ ಕಾರ್ಯಕ್ರಮವೊಂದು ಆಯೋಜನೆಗೊಂಡಿದೆ. ಕ್ರೀಡೆ, ಸಿನೆಮಾ ಮುಂತಾದ ಕ್ಷೇತ್ರದಲ್ಲಿ ವಿಶ್ವಖ್ಯಾತಿ ಗಳಿಸಿರುವ ನಾಡ ಗ್ರಾಮದ ಪಡುಕೋಣೆಯಲ್ಲಿ ಅದ್ದೂರಿ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಲಿದೆ. ನಾಡಾ ಗ್ರಾಮದ ಹೊಯ್ಸಳ ಕಲ್ಚರಲ್ ಟ್ರಸ್ಟ್ ರಿ. ಸಾರಥ್ಯದಲ್ಲಿ ನಾಡಹಬ್ಬ ೨೦೧೮ ಅದ್ದೂರಿ ಕ್ರೀಡಾ ಜಾತ್ರೆ, ಗಾನ ನೃತ್ಯ ಜಾತ್ರೆ ಹಾಗೂ ಯಕ್ಷ ಜಾತ್ರೆ ಕಾರ್ಯಕ್ರಮ ಡಿಸೆಂಬರ್ 22, 23, 24 ರಂದು ಪಡುಕೋಣೆ ಗ್ರೆಗರಿ ಪ್ರೌಢಶಾಲಾ ಮೈದಾನದಲ್ಲಿ ಜರುಗಲಿದ್ದು ಭರದ ಸಿದ್ಧತೆ ನಡೆದಿದೆ. ಡಿ. 22ರ ಬೆಳಿಗ್ಗೆ 9 ಗಂಟೆಗೆ ಹಿರಿಯ, ಕಿರಿಯ ವಿಭಾಗದಲ್ಲಿ ಪ್ರತ್ಯೇಕ ಮ್ಯಾರಾಥಾನ್ ಓಟ ನಡೆಯಲಿದೆ. ಅಂದು ಸಂಜೆ ಸಮಾಜದ ಗಣ್ಯ ವ್ಯಕ್ತಿಗಳಿಂದ ನಾಡ ದೇವತೆಯ ಅದ್ದೂರಿಯ ಪುರಮೆರವಣಿಗೆ ಉದ್ಘಾಟನೆಗೊಳ್ಳಲಿದೆ. ಸಂಜೆ 7ರಿಂದ ನಾಡ ಹಬ್ಬದ ಉದ್ಘಾಟನೆ ನಡೆಯಲಿದ್ದು ಮೆರಿಟ್ ಹಾಸ್ಪಿಟಾಲಿಟಿ ಸರ್ವಿಸಸ್ ಆಡಳಿತ ನಿರ್ದೇಶಕ ಅಶೋಕ ಎಸ್. ಶೆಟ್ಟಿ ಸಮೃದ್ಧಿ ಬೆಳ್ಳಾಡಿ ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ’ ಸುದ್ದಿ ನ್ಯೂಯಾರ್ಕ್: ಒನ್ ವರ್ಲ್ಡ್ ಟ್ರೇಡ್ ಸೆಂಟರ್ನಲ್ಲಿ ಇತ್ತೀಚೆಗೆ ನಡೆದ ಗ್ಲೋಬಲ್ ಕೆ50 ಸಮಾವೇಶದಲ್ಲಿ ವಿಶ್ವದ ಅಗ್ರ 50 ನವೋದ್ಯಮದ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಬೆಂಗಳೂರು ಮೂಲದ ಹ್ಯಾಪಿ ಇಎಂಐ ಸ್ಟಾರ್ಟಪ್ ಹಣಕಾಸು ವಿಭಾಗದಲ್ಲಿ 30ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಸುಹಾಸ್ ಗೋಪಿನಾಥ್ ಹ್ಯಾಪಿ ಇಎಂಐ ಸ್ಟಾರ್ಟಪ್ನ ಸಂಸ್ಥಾಪಕರಾಗಿದ್ದಾರೆ. ಹೊಸ ತಂತ್ರಜ್ಞಾನಗಳ ಮೂಲಕ ಸದಾ ನವೀನ ಪ್ರಯೋಗಗಳಿಗೆ ಮುಂದಾಗುವ ಯುವ ಉದ್ಯಮಿ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆಗಳ ಎಂಡಿ ಆನಂದ ಸಂಕೇಶ್ವರ ಸಂಸ್ಥೆಯ ಸಹಸಂಸ್ಥಾಪಕರಾಗಿದ್ದಾರೆ. ಎಲ್ಲರಿಗೂ ಸುಲಭವಾಗಿ ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ ದೊರಕಿಸಿಕೊಡುವುದು ಈ ಬಾರಿಯ ಕೈರೋಸ್ ಜಾಗತಿಕ ಸಮಾವೇಶದ ಧ್ಯೇಯವಾಗಿತ್ತು. ಹ್ಯಾಪಿಇಎಂಐ ನವೋದ್ಯಮ ಈ ಧ್ಯೇಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇವಲ ಒಂದು ನಿಮಿಷದಲ್ಲಿ ಸಾಲ ಸೌಲಭ್ಯ ಸಿಗಲು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಹ್ಯಾಪಿ ಇಎಂಐಗೆ ಅಗ್ರ 50 ನವೋದ್ಯಮದಲ್ಲಿ ಸ್ಥಾನ ನೀಡಿ ಗೌರವಿಸಲಾಯಿತು. ಹಣಕಾಸು, ಶಿಕ್ಷಣ, ಆರೋಗ್ಯ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಎಂಬ ವಿಭಾಗಗಳಲ್ಲಿ ಹೊಸದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಏಳಿಗೆಗಾಗಿ ತೊಡಗಿಸಿಕೊಂಡ ಉತ್ಕೃಷ್ಟ ವ್ಯಕ್ತಿಗಳನ್ನು ಸನ್ಮಾನಿಸಿದರೆ ಅವರನ್ನು ಹುರಿದುಂಬಿಸಿದಂತಾಗುವುದಲ್ಲದೇ ಮತ್ತಷ್ಟು ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಎಲ್ಲಾ ಆಯಾಮಗಳಲ್ಲಿಯೂ ತೊಡಗಿಸಿಕೊಂಡ ಅಸಾಧಾರಣ ವ್ಯಕ್ತಿಯಾಗಿದ್ದು, ಶ್ರೇಷ್ಠ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಬೆಳೆದಿದ್ದಾರೆ. ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸಿ ಬಡ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವ ಅವರು ಭಗವಂತ ಮೆಚ್ಚುವ ಕೆಲಸ ಮಾಡಿದ್ದಾರೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ| ಎನ್. ವಿನಯ್ ಹೆಗ್ಡೆ ಹೇಳಿದರು. ಅವರು ಡಿ.15ರಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಕುಂದಾಪುರ ಎಜುಕೇಶನ್ ಸೊಸೈರಿ ರಿ. ಹಾಗೂ ಅಭಿಮಾನಿ ಬಳಗದವರಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ ಅವರನ್ನು ಸನ್ಮಾನಿಸಿ ಮಾತನಾಡಿದರು. ಮಣಿಪಾಲ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಮಾತನಾಡಿ ಸುಕುಮಾರ ಶೆಟ್ಟರು ಬಹುಮುಖ ಪ್ರತಿಭೆ ವ್ಯಕ್ತಿ. ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡು ಯಶಸ್ವಿಯಾದವರು. ತಮ್ಮ ಶಿಕ್ಷಣ…
ಕೆರೆಮನೆ ಶಿವಾನಂದ ಹೆಗಡೆ ‘ಕುಸುಮಾಶ್ರೀ’ ಪ್ರಶಸ್ತಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಆಯೋಜಿಸುವ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕುಸುಮಾಂಜಲಿಯ ಐದನೇ ಆವೃತ್ತಿ ‘ಕುಸುಮಾಂಜಲಿ-2018’ ಡಿಸೆಂಬರ್ 22 ಹಾಗೂ 23 ರಂದು ಎರಡು ದಿನಗಳ ಕಾಲ ನಾಗೂರಿನಲ್ಲಿ ಬೆಳಗ್ಗೆ 10 ರಿಂದ ರಾತ್ರಿ 10:30 ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಸಾಂಸ್ಕೃತಿಕ ನೃತ್ಯ ವೈಭವ, ದಿಕ್ಸೂಚಿ ಭಾಷಣ, ‘ಕುಸುಮಾಶ್ರೀ’ ಪ್ರಶಸ್ತಿ ಪ್ರಧಾನ, ವಿಶೇಷ ಸಂಗೀತ ಕಾರ್ಯಕ್ರಮ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ದಿಕ್ಸೂಚಿ ಭಾಷಣಕಾರರಾಗಿ ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್. ಸಂತೋಷ ಹೆಗ್ಡೆ ಆಗಮಿಸಲಿದ್ದಾರೆ. ಈ ವರ್ಷ ನಿಸ್ವಾರ್ಥ ಸಾಮಾಜಿಕ ಸೇವೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ಕುಸುಮಾಶ್ರೀ’ ಪ್ರಶಸ್ತಿಯನ್ನು ಕೆರೆಮನೆ ಶಿವಾನಂದ ಹೆಗಡೆಯವರಿಗೆ ಯಕ್ಷಗಾನ ಕ್ಷೇತ್ರದಲ್ಲಿನ ಅವರ ಸಾಧನೆಯನ್ನು ಪರಿಗಣಿಸಿ ಪ್ರದಾನ ಮಾಡಲಾಗುವುದು. ಪ್ರಸಿದ್ದ ಕುಚಿಪುಡಿ ಪ್ರವೀಣೆ ಹಾಗೂ ನೃತ್ಯ ಕಲಾವಿದೆ ಶ್ರೀಮತಿ ವೈಜಯಂತಿ ಕಾಶಿ ಹಾಗೂ ತಂಡ ಬೆಂಗಳೂರು, ಇವರಿಂದ ವಿಶೇಷ ನೃತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. 1983 ರಿಂದ 1999ರ ವರೆಗೆ ಸತತವಾಗಿ 4ಬಾರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ ಅವರು 2003ರಿಂದ ಇಂದಿನ ತನಕವೂ ವಿಧಾನಪರಿಷತ್ ಸದಸ್ಯರಾಗಿ ಜನಸೇವೆಯಲ್ಲಿ ಸಕ್ರಿಯರು. ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ ಮತ್ತು ಕೊಳ್ಕೆಬೈಲು ಗುಲಾಬಿ ಶೆಡ್ತಿಯವರ ಸುಪುತ್ರನಾಗಿ 1949 ಸೆಪ್ಟೆಂಬರ್ 4ರಂದು ಜನಿಸಿದ ಪ್ರತಾಪ್ ಶೆಟ್ಟರು ಬಿ.ಎ ಪದವಿದರರು. ಪದವಿ ಪಡೆದ ನಂತರ ವಿಜಯಾ ಬ್ಯಾಂಕ್ ನ ಉದ್ಯೋಗಿ ಯಾಗಿ ಪುಣೆ ಹಾಗೂ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿ ಆ ನಂತರ ತಂದೆಯವರ ಮರಣದ ತರುವಾಯ ಬ್ಯಾಂಕ್ ಉದ್ಯೋಗ ತೊರೆದು ಊರಿಗೆ ವಾಪಾಸಾಗಿ ಆ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ತನ್ನ ರಾಜಕೀಯ ಜೀವನವನ್ನು ಜನಸೇವೆಯ ಮೂಲಕ ಆರಂಬಿಸಿದ್ದರು. ಆ ನಂತರ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಂಗಕರ್ಮಿ, ಶಿಕ್ಷಕ ಕೂರಾಡಿ ಸೀತಾರಾಮ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ ೬೮ ವರ್ಷ ವಯಸ್ಸಾಗಿತ್ತು. ಕೂರಾಡಿ ಸೀತಾರಾಮ ಶೆಟ್ಟಿ ನಿವೃತ್ತ ಅಧ್ಯಾಪಕರಾಗಿದ್ದು ಬಿ.ಎಂ.ಎಂ. ಹೈಸ್ಕೂಲ್ ಕೂರಾಡಿ ಶಾಲೆಯಿಂದ ನಿವೃತ್ತರಾಗಿದ್ದರು. ಕೂರಾಡಿಯವರು ಹಲವು ನಾಟಕಗಳನ್ನು ನಿರ್ದೇಶಿಸಿದ್ದರು. ರಾಜ್ಯ ಉತಮ ಶಿಕ್ಷಕ ಪ್ರಶಸ್ತಿಯನ್ನು ಗಳಿಸಿದ್ದ ಅವರು ಕೆಲವು ಸಮಯದಿಂದ ಅನಾರೋಗ್ಯ ಹೊಂದಿದ್ದರು. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಎನರ್ಜಿಎಂಡ್ ವೆಟ್ಲ್ಯಾಂಡ್ ರಿಸರ್ಚ್ ಗ್ರೂಪ್, ಸೆಂಟರ್ ಫಾರ್ ಇಕೊಲಾಜಿಕಲ್ ಸಾಯನ್ಸಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯನ್ಸ್ ಬೆಂಗಳೂರು, ಇವರು ಮೂಡಬಿದ್ರೆಯ ಆಳ್ವಾಸ್ನಲ್ಲಿ ಏರ್ಪಡಿಸಿದ್ದ ಲೇಕ್ ಕಾನ್ಫರೆನ್ಸ್ನಲ್ಲಿ ಕೋಟೇಶ್ವರದ ಬೀಜದುಂಡೆ ಕೃಷಿ ಪ್ರಯೋಗಕ್ಕೆ ಮನ್ನಣೆ ದೊರೆತಿದೆ. ಕೋಟೇಶ್ವರದ ರಾಜಾರಾಮ ಪಾಲಿಮರ್ಸ್ನ ಮಾಲಕ ಕೆ. ಸುರೇಶ್ ಕಾಮತ್ ಅವರು ನಡೆಸಿದ ಬೀಜದುಂಡೆ (ಸೀಡ್ ಬಾಲ್) ಭತ್ತದ ಕೃಷಿ ಪ್ರಯೋಗವನ್ನೇ ಆಧಾರವಾಗಿಟ್ಟುಕೊಂಡು ಮಂಗಳೂರು ವಿ. ವಿಯ ಬಾಟನಿ ವಿಭಾಗದ ವಿದ್ಯಾರ್ಥಿನಿ ಕುಂಭಾಸಿಯ ಯು. ಸಂಗೀತಾ ಶೆಣೈ ಪ್ರಸ್ತುತ ಪಡಿಸಿದ ಪೋಸ್ಟರ್ ಪ್ರಸೆಂಟೇಶನ್ A Critical study on Seed ball Technic –An Innovative Agronomic Approa ch in Organic Farming in the Cultivation of OryzasativaL in kundapura Taluk of Udupi District ಎಂಬ ವಿವರಣೆಗೆ ತೀರ್ಪುಗಾರರು ತಲೆದೂಗಿದ್ದು, ಅವರಿಗೆ ಸಹ್ಯಾದ್ರಿ ಯಂಗ್ ಇಕಾಲಾಜಿಸ್ಟ್ (ದ್ವಿತೀಯ) ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನವಂಬರ್ ೨೨…
