Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೂಂಡು ಉತ್ತಮ ಜೀವನ ನಿರ್ವಹಿಸುವತ್ತಾ ವಿದ್ಯಾರ್ಥಿಗಳು ಹೆಚ್ಚಿನ ಗಮನ ವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿ?ನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ೨೦೧೯-೨೦ ಸಾಲಿನ ಬಿಬಿಎಂ ರ‍್ಯಾಂಕ್ ವಿಜೇತರಿಗೆ ನಡೆದ ಸನ್ಮಾನ ಹಾಗೂ ಸಂವಾದ ಕಾರ‍್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಕಾರಾತ್ಮಕ ಯೋಚನೆಗಳು ಅಗತ್ಯ. ವಿದ್ಯಾರ್ಥಿಗಳ ನಡುವೆ ಜಾತಿ-ಮತಗಳ ಭಿನ್ನಾಬಿಪ್ರಾಯ ಅನಗತ್ಯ. ವಿದ್ಯಾರ್ಜನೆ ಒಂದೇ ವಿದ್ಯಾರ್ಥಿಗಳ ಗುರಿಯಾಗಿರಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಲಭಿಸಿರುವ ಸ್ವಾತಂತ್ರ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅನಗತ್ಯ ವಿಷಯಗಳಲ್ಲಿ ತಮ್ಮ ಸಮಯವನ್ನು ಕಾಲಹರಣ ಮಾಡಬಾರದು ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ೨೦೧೯-೨೦೨೦ನೇ ಸಾಲಿನ ಬಿಬಿಎಂ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಪಡೆದ ಶ್ರೇಯಾ ಕೆ ಶೆಟ್ಟಿ, ಏಳನೇ ರ‍್ಯಾಂಕ್ ಪಡೆದ ಶ್ರೀಲಕ್ಷ್ಮಿ, ಎಂಟನೇ ರ‍್ಯಾಂಕ್ ಪಡೆದ ಕೀರ್ತಿ ಎಸ್, ಹತ್ತನೇ ರ‍್ಯಾಂಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಅವಕಾಶಗಳು ಎದುರಾದಾಗ ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಯಶಸ್ಸು ಅವಲಂಬಿತವಾಗಿರುತ್ತದೆ. ಧನಾತ್ಮಕ ಚಿಂತನೆಯೊಂದಿಗೆ ಅವಕಾಶವನ್ನು ಗುರುತಿಸುವ ಹಾಗೂ ಸ್ವೀಕರಿಸುವ ಮುನ್ನಡೆಯುವ ಜಾಣ್ಮೆ ನಮ್ಮದಾಗಬೇಕಿದೆ ಎಂದು ರೋಟರಿ ಜಿಲ್ಲೆ 3182 ಜಿಲ್ಲಾ ಗವರ್ನರ್ ಎಂ. ಜಿ. ರಾಮಚಂದ್ರ ಮೂರ್ತಿ ಹೇಳಿದರು. ಅವರು ಬುಧವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಬೈಂದೂರು ರೋಟರಿ ಕ್ಲಬ್‌ಗೆ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಾವು ಮಾಡುವ ಸೇವಾ ಕಾರ್ಯದ ಮೂಲಕ ಯಾರದ್ದೋ ಬದುಕಿನಲ್ಲಿ ಬದಲಾವಣೆ ತರುವಂತಾದರೆ ಅದರಿಂದ ದೊರೆಯುವ ಸಂತೃಪ್ತಿ ದೊಡ್ಡದು. ಪ್ರಸಕ್ತ ಸಾಲಿನಲ್ಲಿ ರೋಟರಿ ಜಿಲ್ಲೆಯಲ್ಲಿ ಒಟ್ಟು 12ಕೋಟಿಗೂ ಅಧಿಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸದಸ್ಯರಿಗೆ ರೋಟರಿ ಮಾಹಿತಿ ಉತ್ತಮವಾಗಿದ್ದರೆ, ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ. ವೃತ್ತಿಯೊಂದಿಗೆ ಉತ್ತಮ ಪ್ರವೃತ್ತಿ ನಮ್ಮದಾಗಿದ್ದರೆ ಅದರಿಂದ ನೆಮ್ಮದಿಯೂ ದೊರೆಯುತ್ತದೆ ಎಂದರು. ಯಕ್ಷಗಾನ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆಗೈದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ದೇವಳದಲ್ಲಿ ತತ್ವಕಲಾ ಹೋಮ ಮತ್ತು ಕಲಶಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ ಜರುಗಿತು. ದೇವತಾ ಪ್ರಾರ್ಥನೆ ಪೂರ್ವಕ ಕಲಶಸ್ಥಾಪನೆ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ ಮೊದಲಾದವುಗಳು ದೇವಸ್ಥಾನದ ತಂತ್ರಿಗಳಾದ ವೇದಮೂರ್ತಿ ಕೋಟ ಜಿ. ಸುಬ್ರಹ್ಮಣ್ಯ ಅಡಿಗರ ಅಧ್ವರ್ಯದಲ್ಲಿ ಹಾಗೂ ಪರ್ಯಾಯ ಅರ್ಚಕರ ನೇತೃತ್ವದಲ್ಲಿ ಜರುಗಿತು. ಫೆಬ್ರವರಿ 14ರಂದು ದೇವಳದಲ್ಲಿ ವಾರ್ಷಿಕ ಮನ್ಮಹಾರಥೋತ್ಸವ ಜರುಗಲಿದ್ದು, ಫೆ.11ರಿಂದ 16ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ಮೂಡುಬಿದಿರೆಯಲ್ಲಿ ನಡೆದ 6ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಕಟಾ ವಿಭಾಗದಲ್ಲಿ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರಸ್ತುತ 4ನೇ ತರಗತಿಯಲ್ಲಿ ಕಲಿಯುತ್ತಿರುವ ತೇಜಸ್ ಕುಮಾರ್, ಈ ಹಿಂದೆ ಬೆಳ್ತಂಗಡಿಯಲ್ಲಿ ನಡೆದ 18ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್-2021ರಲ್ಲಿ 10 ವರ್ಷದ ಒಳಗಿನ ಕಟಾದಲ್ಲಿ ಬೆಳ್ಳಿ ಪದಕ ಮತ್ತು ಕಮೇಟಿಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದು, ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದ್ದು, ಮಿಜಾರಿನ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ವಿದಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಹೋಮಿಯೋಪಥಿ ವೈದ್ಯಕೀಯ ವಿಭಾಗದಲ್ಲಿ ಮೊದಲ 10 ರ್ಯಾಂಕ್‍ಗಳಲ್ಲಿ ಪ್ರಥಮ ರ್ಯಾಂಕ್ ಸಹಿತ ಆಳ್ವಾಸ್‍ಗೆ 3 ರ್ಯಾಂಕ್ ಲಭಿಸಿದೆ. ವಿದ್ಯಾರ್ಥಿ ಸಾಯಿಕಿರಣ್ ರಾಗಮ್ (ಪ್ರಥಮ ರ್ಯಾಂಕ್), ಪ್ರಣಮ್ಯ ಜೈನ್ (4ನೇ ರ್ಯಾಂಕ್), ಶ್ವೇತಾ ಸುಬಾಸ್ ಮುರಗುಂಡಿ (8ನೇ ರ್ಯಾಂಕ್) ಪಡೆದಿದ್ದಾರೆ. ಅಂತಿಮ ವರ್ಷದ ಹೋಮಿಯೋಪಥಿ ವಿಭಾಗದಲ್ಲಿ ಪ್ರಣಮ್ಯ ಜೈನ್ (1ನೇ ರ್ಯಾಂಕ್), ಸಾಯಿಕಿರಣ್ ರಾಗಮ್ (ಎರಡನೇ ರ್ಯಾಂಕ್), ಶ್ವೇತಾ ಸುಬಾಸ್ ಮುರಗುಂಡಿ (4ನೇ ರ್ಯಾಂಕ್), ಶಿಫಾ ಸಿತಾರ (6ನೇ ರ್ಯಾಂಕ್), ಕ್ಯಾರಲ್ ಪರ್ಲ್ ಡಿಸೋಜ (9ನೇ ರ್ಯಾಂಕ್), ಅಶ್ವಿನಿ ಕೆ. (10ನೇ ರ್ಯಾಂಕ್) ಗಳಿಸಿದ್ದಾರೆ. ವಿಷಯವಾರು ಹಾಗೂ ಕೋರ್ಸವಾರು ರ್ಯಾಂಕ್‍ಗಳಲ್ಲಿ ಒಟ್ಟು 99 ರ್ಯಾಂಕ್‍ಗಳನ್ನು ಆಳ್ವಾಸ್ ವಿದ್ಯಾರ್ಥಿಗಳು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಹೈಕೋರ್ಟ್ ನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದರು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ. ಹೈಕೋರ್ಟ್‌ನಲ್ಲಿ ಹಿಜಾಬ್ ಸಂಬಂಧ ತೀರ್ಪುನ್ನು ನಾಳೆಗೆ ಮುಂದೂಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಸ್ಥಾನಿಕ ಬ್ರಾಹ್ಮಣರ ಸಂಘದ 27ನೇ ವಾರ್ಷಿಕೋತ್ಸವ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನ ನಾಯ್ಕನಕಟ್ಟೆ ಕೆರ್ಗಾಲ್‌ನಲ್ಲಿ ಜರುಗಿತು. ಅಧ್ಯಕ್ಷರಾದ ಎಮ್. ಸತ್ಯನಾರಾಯಣ ಹೆಬ್ಬಾರ್ ಮಾತನಾಡಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಸಹಕರಿಸಿದಾಗ ಮಾತ್ರ ಉತ್ತಮ ರೀತಿ ಸಂಘಟನೆ ಬೆಳೆಯಲು ಸಾಧ್ಯ ಎಂಬುದಾಗಿ ತಿಳಿಸಿದರು. ಆನಂದ ರಾವ್ ಹೊಸ್ಕೋಟೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. 2021ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿ ಪಡೆದವರ ಸನ್ಮಾನದಲ್ಲಿ ಎಮ್. ಸತ್ಯನಾರಾಯಣ ಹೆಬ್ಬಾರ್ ಮರೂರು. ಕೃಷ್ಣಮೂರ್ತಿ, ಪಿ.ಕೆ ಕೋಟೇಶ್ವರ, ಉಷಾ ಶೀಧರ ಹೆಬ್ಬಾರ್, ಅಲ್ಬಾಡಿ ಮಂಜುನಾಥ ಹೆಬ್ಬಾರ್ ಇವರುಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಗರತ್ನ ಹೆಬ್ಬಾರ್ ಅಬ್ಲಾಕಟ್ಟೆ ಸೂರಾಲು ಶ್ರೀ ಗುರುಪ್ರಸಾದ ರಾವ್ ಕಮಲಶಿಲೆ, ವಿಜಯ ಎಸ್. ರಾವ್ ಹೆರಂಜಾಲು, ಲೋಕೇಶ ಶ್ಯಾನುಬೋಗ್ ಇವರುಗಳನ್ನು ಸನ್ಮಾನಿಸಲಾಯಿತು. ಉದರಕುಮಾರ್ ಹೆಬ್ಬಾರ್ ಮ್ಯಾನೇಜಿಂಗ್ ಡೈರೆಕ್ಟ್ರರ್ ಕ್ರೆಡಿಟ್ ಗ್ರಾಮೀಣ ಲಿ. ಬೆಂಗಳೂರು ಇವರು ಕೊಡ ಮಾಡಿದ ವಿದ್ಯಾರ್ಥಿತಿ. ವೇತನವನ್ನು ವಿತರಿಸಲಾಯಿತು. ಉಮೇಶ ಶ್ಯಾನುಭೋಗ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.8: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಹೆಚ್ಚುವರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ಜಿಲ್ಲೆಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಹೊರಡಿಸಲಾದ ಆದೇಶದಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮAದಿರ, ಆಡಿಟೋರಿಯಂ, ಜಿಮ್ ಮತ್ತು ಯೋಗ ಕೇಂದ್ರ ಹಾಗೂ ಈಜುಕೊಳಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100 ಸಾಮರ್ಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯಾಚರಿಸಲು ಅನುಮತಿ ನೀಡಲಾಗಿದ್ದು, ನಿಗಧಿತ ಆಸನ ಸಾಮರ್ಥ್ಯವನ್ನು ಮೀರಿರಬಾರದು. ಎರಡು ಡೋಸ್ ಲಸಿಕೆ ಪ್ರಮಾಣ ಪತ್ರ ಹೊಂದಿರುವ, ರೋಗ ಲಕ್ಷಣರಹಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಪ್ರವೇಶ ಸಮಯದಲ್ಲಿ ಥರ್ಮಲ್ ಸ್ಕಾö್ಯನ್ ಬಳಸಿ ಜ್ವರ ಲಕ್ಷಣಗಳ ಕುರಿತು ತಪಾಸಣೆ ನಡೆಸುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿರುತ್ತದೆ. ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮAದಿರ, ಆಡಿಟೋರಿಯಂಗಳಲ್ಲಿ ಸಾರ್ವಜನಿಕರು ಪ್ರದರ್ಶನ ಸಮಯ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಕಡ್ಡಾಯವಾಗಿ ಮಾಸ್ಕ್ ಧರಿಸಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.8: ಮಹಿಳೆಯರ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಬದಲು ಆ ಸಮಸ್ಯೆಗಳಿಗೆ ಕಾರಣ ಏನೆಂದು ಪತ್ತೆ ಹಚ್ಚುವ ಕೆಲಸವಾಗಬೇಕು ಎಂದು ರಾಷ್ಟಿçÃಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಹೇಳಿದರು. ಅವರು ಬ್ರಹ್ಮಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ ಉಡುಪಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಮತ್ತು ಕಾರ್ಕಳ ಇವರ ಸಹಯೋಗದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ದೌರ್ಜನ್ಯಕ್ಕೊಳಗಾದ ಯಾವುದೇ ಮಹಿಳೆ ಸಂಬAಧಪಟ್ಟ ವ್ಯಾಪ್ತಿಯ ಸಖೀ ಒನ್ ಸ್ಟಾಪ್ ಸೆಂಟರ್ನ ಮೂಲಕ ನೆರವು ಪಡೆದುಕೊಳ್ಳಬಹುದು. ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುವುದು ತಪ್ಪೆಂಬ ಕೀಳರಿಮೆಯಿಂದ ಹೊರಬಂದು ತಮಗಾದ ಅನ್ಯಾಯದ ವಿರುದ್ಧ ನ್ಯಾಯ ಪಡೆಯಬಹುದಾಗಿದ್ದು, ಸಂಬAದಪಟ್ಟ ಅಧಿಕಾರಿಗಳು ಕೂಡ ಮಹಿಳೆಯರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಮತ್ತು ಮಹಿಳಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಳಗೇರಿ ಕೈಗಾರಿಕಾ ವಲಯ ಅಭಿವೃದ್ಧಿ ಪಡಿಸುವ ಸಂದರ್ಭ ಪರಂಭೂಕು ಜಾಗವನ್ನು ವಿರಹಿತಗೊಳಿಸುವ ಸಂದರ್ಭದಲ್ಲಿ ರೈತರ ಹಿತಾಸಕ್ತಿಗಳನ್ನು ಮರೆಮಾಚಿ ಏಪಕ್ಷಿಯ ನಿರ್ಣಯ ಕೈಗೊಳ್ಳಲಾಗಿದೆ. ಇದು ಲ್ಯಾಂಡ್ ರೆವೆನ್ಯೂ ಆಕ್ಟ್ ಉಲ್ಲಂಘನೆಯಾಗಿದೆ ಎಂದು ರೈತ ಮುಖಂಡ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಹಳಗೇರಿಯ ಸರ್ವೆ ನಂ. 166/ಪಿ1ರ 53 ಎಕರೆ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಸೀ ಪುಡ್ ಪಾರ್ಕ್ ಮಾಡುವುದನ್ನು ವಿರೋಧಿಸಿ ನಾಗೂರಿನಲ್ಲಿ ಭಾನುವಾರ ಹಮ್ಮಿಕೊಂಡ ಖಂಡನಾ ಸಭೆ ಉದ್ದೇಶಿಸಿ ಮಾತನಾಡಿದರು. ಹೋರಾಟದ ನೇತೃತ್ವ ವಹಿಸಿರುವ ನಳೀನ ಕುಮಾರ್ ಶೆಟ್ಟಿ ಮಾತನಾಡಿ ಕೈಗಾರಿಕಾ ವಲಯ ಮಾಡುವ ಹಿಂದೆ ಕೆಲವೇ ಉದ್ಯಮಿಗಳ ಹಿತಾಸಕ್ತಿ ಅಡಗಿದೆ. ಕೈಗಾರಿಕಾ ವಲಯದಿಂದ ಆಗುವ ತೊಂದರೆಗಳ ಬಗ್ಗೆ ಈಗಾಗಲೇ ಸರಕಾರಕ್ಕೆ ತಿಳಿಸಲಾಗಿದೆ. ಸ್ಥಳೀಯನ್ನು ವಿಶ್ವಾಸಕ್ಕೆ ಪಡೆಯದೇ ಕೈಗಾರಿಕಾ ವಲಯ ಮಾಡಿರುವುದು ಸರಿಯಾದ ಕ್ರಮವಲ್ಲ. ಊರಿಗೆ ಇದರಿಂದ ತೊಂದರೆಯೇ ಹೆಚ್ಚಿದೆ. ಕೈಗಾರಿಕಾ ವಲಯ ನಿರ್ಮಾಣದಿಂದ ಹಳಗೇರಿ, ತೆಂಕಬೆಟ್ಟು, ಗುಮ್ಮಿತೋಟ, ಕಂಬದಕೋಣೆ, ನಾಗೂರು, ಚಿತ್ರಾಡಿ, ಗುಂಜಾನುಗುಡ್ಡೆ…

Read More