ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಡಿಸೆಂಬರ್ 2021ರಲ್ಲಿ ನಡೆದ ಸಿ.ಎ.-ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅಭೂತಪೂರ್ವ ಫಲಿತಾಂಶವನ್ನು ಪಡೆದು ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವಿದ್ಯಾರ್ಥಿಗಳಾದ ದೀಪಕ್ ಹೆಗ್ಡೆ-325(81.25%), ಎಂ. ಅಭಿಷೇಕ್ ರಾವ್-302 (75.5%), ದೀಕ್ಷಾ-301 (75.25%), ನೇಹ ನಾಯಕ್- 299(74.75%), ನಿತೀಶ್ ಕಾಮತ್ -297(74.25%), ದಶಮಿ ಎನ್ -295(73.75%), ಐಶ್ವರ್ಯ ಎಂ- 285(71.25%), ನಂದನ-281 (70.25%), ನಾಗರಾಜ್ ಎಂ 280 (70%), ಭುವನ ಶೆಣೈ -278 (69.5%) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಕಾಲೇಜಿನಿಂದ ಒಟ್ಟು 155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶಿಯ ಫಲಿತಾಂಶ 30.28% ಆಗಿದ್ದು, ಆಳ್ವಾಸ್ ಕಾಲೇಜು 66.45% ಫಲಿತಾಂಶ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದೆ. ವಿದ್ಯಾರ್ಥಿಗಳಾದ ದೀಕ್ಷಿತ ಆರ್, ಆಶ್ರಿತಾ ಎಂ. ಎಸ್, ಮಂಜೂಷ, ತನುಷ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಸಾಮಾನ್ಯ ಸಭೆಯ ನಡೆಯಿತು. ಲೋಕಾಯುಕ್ತದಲ್ಲಿ ದೂರು ಇರುವುದರಿಂದ ಯುಜಿಡಿ ಕಾಮಗಾರಿ ಮುಂದುವರಿಸಲು ತೊಡಕಾಗುತ್ತದೆ ಎಂಬ ವಿಷಯದಲ್ಲಿ ಸದಸ್ಯ ಶ್ರೀಧರ ಶೇರೆಗಾರ್ ಹಾಗೂ ಕೆ. ನಿತ್ಯಾನಂದ ಅವರು ಚರ್ಚೆ ಆರಂಭಿಸಿದರು. ಲೋಕಾಯುಕ್ತಕ್ಕೆ ದೂರು ನೀಡಲು ಪುರಸಭೆ ೨೩ ಸದಸ್ಯರು ಬೆಂಬಲ ನೀಡಿದ್ದಾರೆ. ದೂರು ನೀಡಿದ ಆಡಳಿತ ಸದಸ್ಯ ಗಿರೀಶ್ ಜಿ. ಎಸ್., ಭೂಮಿ ವಿಕ್ರಯದಲ್ಲಿ ಹೆಚ್ಚಿಗೆ ಹಣ ಹೋಗಿದೆ ಎನ್ನುವ ಆರೋಪ ಮಾಡಿದ್ದು ಅದರಂತೆ ತನಿಖೆ ಮಾಡಲು ದೂರು ನೀಡಿದ್ದು, ಕಾಮಗಾರಿ ನಿಲ್ಲಸದೇ ಕಾನೂನು ಸಲಹೆಗಾರರ ಮಾಹಿತಿ ಪಡೆದು ಮುಂದುವರಿಯಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯ ಗಿರೀಶ್ ಜಿ. ಎಸ್., ಕಾಮಗಾರಿಯಲ್ಲಿನ ಅಕ್ರಮ ಪ್ರಶ್ನಿಸಿ ದೂರು ನೀಡಿದ್ದೇನೆ. ಹಣ ಹೆಚ್ಚಿಗೆ ಹೋದ ಬಗ್ಗೆ ಅದಕ್ಕೆ ಸಂಬಂಧಪಟ್ಟವರು ಹೊಣೆಯಾಗಲಿದ್ದು, ಹೆಚ್ಚುವರಿ ಹಣ ಯಾರು ಕಾರಣರೋ ಅವರಿಂದ ವಸೂಲು ಮಾಡಲಾಗುತ್ತದೆ. ಇದಕ್ಕೂ ಕಾಮಗಾರಿ ಮುಂದುವರಿಸುವುದಕ್ಕೂ ಸಂಬಂಧಿವಿಲ್ಲ. ಆದ ಅನ್ಯಾಯದ ವಿರುದ್ಧ ದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.12: ಉಡುಪಿ ಕೇಂದ್ರೀಕೃತವಾಗಿ ರಾಜ್ಯ ವ್ಯಾಪ್ತಿಯಲ್ಲಿ ಅಶಾಂತಿ ಮೂಡಿಸಲು ಕಾರಣವಾಗಿರುವ ಹಿಜಾಬ್-ಕೇಸರು ಶಾಲು ವಿವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೂಟ್ ಮಾರ್ಚ್ (ಪಥ ಸಂಚಲನ) ನಡೆಸಿದ್ದು, ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿಯೂ ಶುಕ್ರವಾರ ಸಂಜೆ ನಡೆಯಿತು. ಶಾಸ್ತ್ರೀ ವೃತ್ತದಿಂದ ಆರಂಭಗೊಂಡ ಪಥಸಂಚಲನ ಹೊಸ ಬಸ್ ನಿಲ್ದಾಣದ ಮೂಲಕವಾಗಿ ನಗರದಲ್ಲಿ ಸಂಚರಿಸಿ ಮತ್ತೆ ಪುನಃ ಶಾಸ್ತ್ರೀ ವೃತ್ತಕ್ಕೆ ಆಗಮಿಸಿ ಸಮಾಪ್ತಿಗೊಂಡಿತು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ವೃತ್ತ ನಿರೀಕ್ಷಕ ಗೋಪಿಕೃಷ್ಣ ನೇತೃತ್ವದಲ್ಲಿ ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಗ್ರಾಮಾಂತರ ಠಾಣೆ ಪಿಎಸ್ಐ ನಿರಂಜನ್, ಟ್ರಾಫಿಕ್ ಠಾಣೆ ಪಿಎಸ್ಐ ಸುಧಾಪ್ರಭು, ಶಂಕರನಾರಾಯಣ ಠಾಣೆ ಪಿಎಸ್ಐ ಶ್ರೀಧರ್ ನಾಯ್ಕ್, ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಸೇರಿದಂತೆ ಪೊಲೀಸ್ ಸಹಾಯಕ ಉಪನಿರೀಕ್ಷಕರುಗಳು, ಸಿಬ್ಬಂದಿಗಳು ಇದ್ದರು. ಕೆ.ಎಸ್.ಆರ್.ಪಿ ಮಹಿಳಾ ವಿಭಾಗದ ಪೊಲೀಸರು, 2 ಡಿಎಆರ್ ತುಕಡಿಯ ಪೊಲೀಸರು ಪಥಸಂಚಲನದಲ್ಲಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ರವೀಂದ್ರ ನಾಯಕ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ, 800 ಮೀ ಓಟದಲ್ಲಿ ಪ್ರಥಮ ಸ್ಥಾನ, ಕಬಡ್ಡಿಯಲ್ಲಿ ದ್ವಿತೀಯ ಸ್ಥಾನದೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ತೆಕ್ಕಟ್ಟೆ ಅವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕೇರಮ್ (ಸಿಂಗಲ್ಸ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.11: ತಾಲೂಕಿನ ಕೋಡಿ ಲೈಟ್ ಹೌಸ್ ಎದುರು 55 ದಿನಗಳ ಹಿಂದೆ ಪತ್ತೆಯಾದ ಕಡಲಾಮೆ ಮೊಟ್ಟೆಯಿಂದ ಹೊರಬಂದ ಆಲೀವ್ ರಿಡ್ಲಿ ಜಾತಿಗೆ ಸೇರಿದ 74 ಕಡಲಾಮೆ ಮರಿಗಳು ಸುರಕ್ಷಿತವಾಗಿ ಕಡಲ ಸೇರಿವೆ. ಅರಣ್ಯ ಇಲಾಖೆ ಎಫ್.ಎಸ್.ಎಲ್ ಇಂಡೀಯಾ ಸ್ಥಳೀಯ ಮೀನುಗಾರರು ಮತ್ತು ರೀಫ್ ವಾಚ್ ಸಂಸ್ಥೆಯ ಕಡಲಾಮೆ ಮೊಟ್ಟೆಗಳನ್ನು ರಕ್ಷಣೆ ಮಾಡಿದ್ದು, ಗುರುವಾರ ರಾತ್ರಿ ಕಡಲು ಸೇರುವ ಪ್ರಕ್ರಿಯೆ 2 ಗಂಟೆಗಳ ಹೆಚ್ಚು ಕಾಲ ನಡೆಯಿತು. ಅರಣ್ಯ ಇಲಾಖೆ ಅಧಿಕಾರಿಗಳಾದ ಉದಯ ಬಿ, ಬಸವರಾಜ್, ರಂಜಿತ್ ಪೂಜಾರಿ ಹಾಗೂ ಎಫ್.ಎಸ್.ಎಲ್ ಸಂಸ್ಥೆಯ ದಿನೇಶ್ ಸಾರಂಗ, ನಾಗರಾಜ ಶೆಟ್ಟಿ ಸಬ್ಲಾಡಿ, ವೆಂಕಟೇಶ್ ಎಂ ಮತ್ತು ರೀಪ್ ವಾಚ್ ಸಂಸ್ಥೆಯ ಕಾರ್ಯಕರ್ತರಾದ ತೇಜಸ್ವಿನಿ, ವಿರೀಲ್ ಕುಮಾರ್ ಜೊತೆಗಿದ್ದರು. ಅಲ್ಲದೆ ಸ್ಥಳೀಯ ಮೀನುಗಾರರಾದ ಸಂತೋಷ, ಸುಬ್ರಮಣ್ಯ ಸಾರಂಗ, ಧನುಷ್ ಬಿ.ಆರ್, ಭರತ್ ಖಾರ್ವಿ, ಲಕ್ಷ್ಮಣ ಪೂಜಾರಿ, ಉದಯ ಖಾರ್ವಿ ಕೊನೆತನಕ ಇದ್ದು ಸಹಕರಿಸಿದರು. ವಿಶೇಷವಾಗಿತ್ತು. ಇನ್ನೂ 4 ಕಡಲಾಮೆ ಮೊಟ್ಟೆಯ ಗೂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಡಿಸೆಂಬರ್ 2021ರಲ್ಲಿ ನಡೆಸಿದ ಸಿ.ಎ ಪರೀಕ್ಷೆಯಲ್ಲಿ ತಾಲೂಕಿನ ಹಕ್ಲಾಡಿಯ ಉದಯ ಪುತ್ರನ್ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉಮೇಶ್ ಪುತ್ರನ್ ಹಾಗೂ ವಿನೋದಾ ದಂಪತಿಯ ಪುತ್ರನಾಗಿರುವ ಉದಯ ಪುತ್ರನ್ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಖಾಸಗಿ ಉದ್ಯೋಗವನ್ನು ನಿರ್ವಹಿಸುವ ಜೊತೆಗೆ ತಮ್ಮ ನಿರಂತರ ಸ್ವ-ಅಧ್ಯಯನ ಹಾಗೂ ಪರಿಶ್ರಮದ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪುಸ್ತಕ ಸ್ನೇಹಿ ಮನೋಭಾವನೆಯನ್ನು ರೂಡಿಸಿಕೊಂಡು ವೃತ್ತಿ ಪರತೆಯನ್ನು ಕಾಯ್ದುಕೊಳ್ಳಬೇಕೆಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಿಜಯಾ ಬಿ ಹೇಳಿದರು. ಅವರು ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಆಧ್ಯಯನ ಕೇಂದ್ರದಲ್ಲಿ ವಾಣಿಜ್ಯ ವಿಭಾಗದ ಸ್ನಾತಕೋತ್ತರ ಘಟಕದ ನೇತೃತ್ವದಲ್ಲಿ ಜರುಗಿದ ಸ್ನಾತಕೋತ್ತರ ವಿಭಾಗದ ಎಂ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಜೆಂದ್ರ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಉಷಾದೇವಿ ಜೆ.ಎಸ್., ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಶೇಖರ ಬಿ., ಐಕ್ಯೂಎಸಿ ಸಂಚಾಲಕ ನಾಗರಾಜ ಯು., ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ.ಗೀತಾ ಎಂ. ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿಗಳಾದ ಪಲ್ಲವಿ, ಪವಿತ್ರ ಹಾಗೂ ಸಂಗೀತಾ ಪ್ರಾರ್ಥಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ಗೀತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಗವನ್ನು ಪರಿಹಾರ ಮಾಡುವ ದೇವರು ಕೋಟಿಲಿಂಗೇಶ್ವರ. ಈ ಕಾರಣದಿಂದಲೇ 2 ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಬ್ರಹ್ಮಕಲಶೋತ್ಸವ ಕಾರ್ಯಗಳನ್ನು ಆ ಭಗವಂತನೇ ಬದಿಗಿಟ್ಟು ಇದೀಗ ಕೋವಿಡ್ ರೋಗವನ್ನು ಜಗತ್ತಿನಿಂದ ತೊಲಗಿಸಿ ತನಗೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಿಸಿಕೊಂಡು ಬ್ರಹ್ಮಕಲಶದ ಹೊಸ್ತಿಲಿನಲ್ಲಿದ್ದಾನೆ ಎಂದು ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು. ಕೋಟೇಶ್ವರದ ಮಹಾತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ 62 ವರ್ಷಗಳ ನಂತರ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಹಿರಿಯ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ ಕುಂದರ್, ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿದ್ವಾನ್ ಶ್ರೀಪತಿ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ ನೇರಂಬಳ್ಳಿ ಕೃಷ್ಣಮೂರ್ತಿ ರಾವ್, ಬ್ರಹ್ಮಕಲಶೋತ್ಸವ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಪ್ತ ಮೋಕ್ಷಪ್ರದ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದ ಮಹಾತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ೬೭ ವರ್ಷಗಳ ನಂತರ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸಂದರ್ಭ ಸುಮಾರು ೭೩ ಅಡಿ ಎತ್ತರದ ನೂತನ ಧ್ವಜಸ್ಥಂಭ ಪ್ರತಿಷ್ಠಾಪನೆಯನ್ನು ದೇವಳದ ಪ್ರಧಾನ ತಂತ್ರಿ ಪ್ರಸನ್ನ ಕುಮಾರ್ ಐತಾಳ್ ಇವರ ನೇತೃತ್ವದಲ್ಲಿ ಗುರುವಾರ ಕುಂಭ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ಪುಣ್ಯಾಹವಾಚನ, ಧ್ವಜಪ್ರತಿಷ್ಠಾ ಕಲಶ ಸ್ಥಾಪನೆ, ಪ್ರತಿಷ್ಠಾ ಹೋಮ, ಕಲಶಾಭಿಷೇಕ ಪೂಜಾ, ಗಣಪತಿ ಪ್ರಾರ್ಥನೆ, ಶ್ರೀ ದೇವರ ಪ್ರಾರ್ಥನೆ, ಧ್ವಜಾರೋಹಣ, ಶತರುದ್ರ ಕಲಶ ಸ್ಥಾಪನೆ, ಶತರುದ್ರ ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಬಲಿ ಉತ್ಸವ, ರಾತ್ರಿ ಗಣಪತಿ ಪ್ರಾರ್ಥನೆ, ಯಾಗಶಾಲೆಯಲ್ಲಿ ಪುಣ್ಯಾಹವಾಚನ, ಮಂಟಪ ಸಂಸ್ಕಾರ, ಅಗ್ನಿಜನನ ಹೋಮ, ದಿಶಾ ಹೋಮ, ರಜ್ಜು ಬಂಧನ, ಅಸ್ತ್ರ ಕಲಶ ಸ್ಥಾಪನೆ, ಬಿಂಬ ಶುದ್ದಿ ಕಲಶ ಸ್ಥಾಪನೆ, ಭೇರಿತಾಡನ, ಕೌತುಕ ಬಂಧನ, ದೊಡ್ಡ ರಂಗಪೂಜೆ, ಪುಷ್ಪ ರಥೋತ್ಸವ, ಪನ್ನಗ ವಾಹನೋತ್ಸವ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ…
