ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಬಂಟರ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಲ್ಲಿನ ಬಂಟರ ಸಮುದಾಯ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೋಳೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ್ ಶೆಟ್ಟಿ ಮೂರೂರು, ಗೌರವಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಶಿರೂರು, ಪ್ರತಾಪ್ ಶೆಟ್ಟಿ ಹಳಗೇರಿ, ಖಜಾಂಚಿ ರವೀಂದ್ರ ಶೆಟ್ಟಿ ಉಪ್ಪುಂದ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಕುದ್ರುಕೊಡು, ಪ್ರದೀಪ್ ಶೆಟ್ಟಿ ಸೂರ್ಕುಂದ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿರಾಜ್ ಶೆಟ್ಟಿ ಉಳ್ಳೂರು ಆಯ್ಕೆಯಾಗಿದ್ದಾರೆ. ತಾಲೂಕಿನ ವಿವಿಧ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಅಧ್ಯಕ್ಷ ವಿಶ್ವನಾಥ ಶೆಟ್ಟಿ ಗಂಟಿಹೋಳೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವುದರ ಮೂಲಕ ಹಿರಿಯ ವ್ಯಕ್ತಿಗಳು ಕೋವಿಡ್ ಗೆ ಬಲಿಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಕೋವಿಡ್-19 ಜಿಲ್ಲಾ ಪರಿಣಿತರ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮೊದಲೇ ಡೋಸ್ ಪಡೆದು ಎರಡನೇ ಡೋಸ್ ಬಾಕಿಯಿರುವ ಹಿರಿಯ ನಾಗರೀಕರ ವಿವರಗಳನ್ನು ಪಡೆದು ಅವರಿಗೆ ಅವರ ವಾಸಸ್ಥಳದ ಸಮೀಪವೇ ಲಸಿಕೆಗೆ ವ್ಯವಸ್ಥೆ ಮಾಡಿ, ಖಾಸಗಿಯಾಗಿ ಈಗಾಗಲೇ ಲಸಿಕೆ ಪಡೆದಿರುವ ಹಿರಿಯ ನಾಗರೀಕರ ವಿವರಗಳನ್ನೂ ಸಹ ಪಡೆದು, ಅವರಿಗೂ ಲಸಿಕೆಗೆ ವ್ಯವಸ್ಥೆ ಮಾಡಿ, ಗ್ರಾಮಾಂತರ ಪ್ರದೇಶದಲ್ಲಿ ಸಹ ಅಲ್ಲಿಯೇ ಕ್ಯಾಂಪ್ ಏರ್ಪಡಿಸಿ ಲಸಿಕೆ ನೀಡಲು ವ್ಯವಸ್ಥೆ ಮಾಡಿ . ಜಿಲ್ಲೆಯಲ್ಲಿರುವ ಎಲ್ಲಾ ಹಿರಿಯ ನಾಗರೀಕರಿಗೆ ಎರಡೂ ಡೋಸ್ ಲಸಿಕೆ ನೀಡುವುದರ ಮೂಲಕ ಅವರು ಕೋವಿಡ್ ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ (ತನಿಕಾಧಿಕಾರಿ) ಆಗಿ ಅನಿಲ್ ಬಿ. ಎಂ. ಅವರು ಇತ್ತಿಚಿಗೆ ಅಧಿಕಾರ ಸ್ವೀಕರಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿಯವರಾದ ಅನಿಲ್ ಅವರು ಪ್ರೊಬೇಷನರಿ ಅವಧಿ ಮುಗಿಸಿ ಹೊಸದಾಗಿ ಬೈಂದೂರು ಠಾಣೆಗೆ ನೇಮಕಗೊಂಡಿದ್ದಾರೆ. ಬೈಂದೂರು ತಾಲೂಕು ಕೇಂದ್ರವಾದ ಬಳಿಕ ಬೈಂದೂರು ಠಾಣೆಗೆ ಎರಡು ಪಿಸ್ಐ ಹುದ್ದೆ ಮಂಜೂರಾಗಿದ್ದು, ಪವನ್ ನಾಯಕ್ (ಸಿವಿಲ್) ಹಾಗೂ ಅನಿಲ್ ಬಿ.ಎಂ (ತನಿಕಾಧಿಕಾರಿ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಾಗೂರಿನಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಚಾಲನೆ ನೀಡಿದರು. ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸುವುದರ ಮೂಲಕ ಗೋಪಾಲ ಪೂಜಾರಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್, ಮುಖಂಡರುಗಳಾದ ರಘುರಾಮ ಶೆಟ್ಟಿ, ವಿಜಯ್ ಶೆಟ್ಟಿ, ರಮೇಶ ಗಾಣಿಗ, ಗೌರಿ ದೇವಾಡಿಗ, ನಾಗರಾಜ ಗಾಣಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಅರವಿಂದ ಪೂಜಾರಿ, ಜಗದೀಶ ಕೊಡೇರಿ, ಪ್ರಕಾಶ್, ತಭ್ರೆಜ್ ನಾಗೂರು, ಗಣೇಶ್ ಪೂಜಾರಿ, ಈಶ್ವರ ದೇವಾಡಿಗ, ಸಿ.ಎಸ್ ಖಾರ್ವಿ, ನರಸಿಂಹ ಹಳಗೇರಿ, ರಾಜೇಶ್ ಕಂಬದಕೋಣೆ, ಬ್ಲಡ್ ಹೆಲ್ಪ್ ಕೇರ್ ನ ಫಾಯಾಜ್ ಬೈಂದೂರು, ರೆಡ್ ಕ್ರಾಸ್ನ ವಿರೇಂದ್ರ, ಡಾ. ದೀಕ್ಷಾ…
ಕುಂದಾಪ್ರ ಡಾಟಡ್ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಪ್ರವಾಸಿ ಮಂದಿರದಲ್ಲಿ ಇಬ್ಬರು ಗಾಂಜಾ ಮಾರಾಟ ಮಾಡುತಿದ್ದು, ಖಚಿತ ಮಾಹಿತಿ ಮೇರೆಗೆ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮುಳ್ಳಿಕಟ್ಟೆ ಹೊಸಾಡು ಗ್ರಾಮದ ನಿಶಾನ್(21) ಹಾಗೂ ಮರವಂತೆಯ ಪ್ರಥಮ್ (2೦)ಬಂಧಿತ ಆರೋಪಿಗಳು. ಆಪಾದಿತರ ವಶದಲ್ಲಿದ್ದ 5 ಸಾವಿರ ರೂ. ಮೌಲ್ಯದ 120 ಗ್ರಾಂ ತೂಕದ ಗಾಂಜಾ, ನಗದು 680 ರೂ ವಶಪಡಿಸಿಕೊಳ್ಳಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾ ವಿಜೇತರಿಗೆ,ತಾಲೂಕುಮಟ್ಟದಲ್ಲಿ ಪ್ರಥಮ ರೂ.15000,ದ್ವಿತೀಯ 10000 ತೃತೀಯ 5000 ,ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂ.30000,ದ್ವಿತೀಯ 25000 ತೃತೀಯ 20000 , ರಾಜ್ಯಮಟ್ಟದಲ್ಲಿ ಪ್ರಥಮ ರೂ.50000,ದ್ವಿತೀಯ 40000 ತೃತೀಯ 35000 ರೂ ಬಹುಮಾನವನ್ನು ರೈತರಿಗೆ ವಿತರಿಸಲಾಗುತ್ತದೆ. ಆಸಕ್ತ ರೈತರು ಅರ್ಜಿ ನಮೂನೆಯನ್ನು ಆಗಸ್ಟ್ 31 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಬೆಳ್ವೆ ಸತೀಶ್ ಕಿಣಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ವಂಡಬಳ್ಳಿ ಜಯರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಉದಯ ಜಿ. ಪೂಜಾರಿ ಚಿತ್ತೂರು, ವಿಕಾಸ್ ಹೆಗ್ಡೆ ಬಸ್ರೂರು, ಸಂತೋಷ್ ಶೆಟ್ಟಿ ಬಲಾಡಿ, ಪ್ರಸನ್ನ ಕುಮಾರ ಶೆಟ್ಟಿ ಕೆರಾಡಿ, ಸದಾಶಿವ ಶೆಟ್ಟಿ ಶಂಕರ ನಾರಾಯಣ, ರಮೇಶ್ ಶೆಟ್ಟಿ ವಕ್ವಾಡಿ, ಶ್ರೀನಿವಾಸ ಪೂಜಾರಿ ಕಲ್ಮಾಡಿ, ಹರ್ಜಿ ಕರುಣಾಕರ ಶೆಟ್ಟಿ, ಸುರೇಂದ್ರ ಶೆಟ್ಟಿ ಚಿತ್ತೂರು, ಸರ್ವೋತ್ತಮ ಶೆಟ್ಟಿ ಇಡೂರು, ಅರುಣ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯನ್ನು ಭಕ್ತಿ ಶ್ರದ್ಧಾಪೂರ್ವಕ ಸರಳವಾಗಿ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಮಹಿಳಾ ಸಂಘದ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವನ್ನು ಆಚರಿಸಲಾಯಿತು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಮಹಿಳಾ ಸಂಘದ ಅಧ್ಯಕ್ಷೆ ಅನಿತಾ ಎನ್.ಶೇಟ್ ಹಾಗೂ ಕಾರ್ಯದರ್ಶಿ ಸ್ವಾತಿ ಮಡಿವಾಳ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮಾನುಸಾರ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಕಾಳಿ ಮತ್ತು ಕಲ್ಲುಕುಟ್ಟಿಗ ದೇವಸ್ಥಾನ, ಮ್ಯಾಂಗನೀಸ್ ರಸ್ತೆಯ ಶ್ರೀ ಚಕ್ರೇಶ್ವರಿ ದೇವಸ್ಥಾನ, ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನ ಹಾಗೂ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯಲ್ಲಿ ಮುತ್ತೈದೆಯರು, ಸುಮಂಗಲಿಯರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೋದಿ ಸರಕಾರ ಉತ್ತಮ ಕಾರ್ಯ ಮಾಡುತ್ತಿದ್ದು, ವಿರೋಧ ಪಕ್ಷಗಳು ಅವರ ಹೆಸರನ್ನು ಕೆಡಿಸುವ ಕಾರ್ಯದಲ್ಲಿ ತೊಡಗಿವೆ. ಹಾಗಾಗಿಯೇ ಸರಕಾರದ ಯೋಜನೆ ಹಾಗೂ ಉತ್ತಮ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದರು. ಬಿಜೆಪಿ ಕಛೇರಿಗೆ ಗುರುವಾರ ಭೇಟಿ ನೀಡಿದ ಸಂದರ್ಭ ಭಾರತ ಮಾತೆಯ ಪೋಟೋಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿ ಕೃಷಿ ಸಚಿವಾಲಯದಲ್ಲಿ ತುಂಬಾ ಕಠಿಣವಾದ ಜವಾಬ್ದಾರಿ ಇದೆ. ಕೃಷಿಕರ ಅಭ್ಯುದಯ, ಕೃಷಿ ಕ್ಷೇತ್ರದ ಬೆಳವಣಿಗೆಯ ಬಗ್ಗೆ ಕಳೆದ 60 ವರ್ಷಗಳಿಂದ ನೀಡಲಾದ ವರದಿಯ ಆಧಾರದಲ್ಲಿ ಕೃಷಿ ಮಸೂದೆಯನ್ನು ಮಂಡಿಸಲಾಗಿದೆ. ನಮ್ಮ ಸರಕಾರ ಹೊಸದಾಗಿ ಈ ಮಸೂದೆಯನ್ನು ಜಾರಿಗೆ ತಂದಿಲ್ಲ. ಆದರೆ ಅನಗತ್ಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಬೇರೆ ಬೆಳೆಗಳಿಗೆ ಇರುವ ಬೆಂಬಲ ಬೆಲೆ ಮೊದಲಾದ ತೊಡಕುಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ತಿಳಿಸಿದರು. ಲೋಕಸಭಾ ಕ್ಷೇತ್ರದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಗಸ್ಟ್ 28 ಮತ್ತು 29 ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಉಡುಪಿ 5, ಕುಂದಾಪುರದ 3 ಮತ್ತು ಕಾರ್ಕಳ 2 ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3,624 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸಿಇಟಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್19 ಸನ್ನಿವೇಶದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ,ಆರೋಗ್ಯ ಇಲಾಖೆ ಸೂಚಿಸಿರುವ ಎಲ್ಲಾ ಎಸ್.ಓ.ಪಿ ಅಂಶಗಳನ್ನು ಪಾಲಿಸಿ ಪರೀಕ್ಷೆಯನ್ನು ಆಯೋಜಿಸಬೇಕು , ಕೆಮ್ಮು ಶೀತ,ಜ್ವರ ಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮತ್ತು ಕಂಟೈನ್ ಮೆಂಟ್ ಝೋನ್ ಗಳಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷಾ ದ್ವಾರದಲ್ಲೇ ವಿದ್ಯಾರ್ಥಿಗಳು ಥರ್ಮಲ್ ಸ್ಕಾ ಮೂಲಕ ಪರಿಶೀಲಿಸಲು ಅಗತ್ಯ ಸಿಬ್ಬಂದಿ…
