ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕ್ರಿಸ್ತನ ಜನನ ಮತ್ತು ಜೀವನ ಶೋಷಿತರ ಉದ್ಧಾರಕ್ಕಾಗಿ. ಪ್ರಾಮಾಣಿಕತೆ ಮತ್ತು ಬಡ ಜನರ ಕಷ್ಟದಲ್ಲಿ ಗುರುತಿಸಿಕೊಳ್ಳುವುದೆ ನಿಜವಾದ ಆಚರಣೆ ಎಂದು ಮಂಗಳೂರಿನ ಧರ್ಮಗುರುಗಳಾದ ವಂದನೀಯ ಎಫ್. ಎಕ್ಸ್. ಗೋಮ್ಸ್ ಹೇಳಿದರು. ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ 2019 ಸಾಲಿನ ಆಳ್ವಾಸ್ ಕ್ರಿಸ್ಮಸ್ ಆಚರಣೆಯ ಪ್ರಾರ್ಥನ ಕೂಟದಲ್ಲಿ ಬೈಬಲ್ ವಾಚನ ಹಾಗೂ ಸಂದೇಶವನ್ನು ನೀಡಿದರು. ಪ್ರೀತಿಸುವ, ಹಂಚುವ, ಕ್ಷಮಿಸುವ ಮತ್ತು ನಗುವ ಪ್ರತಿ ದಿನವೂ ಹಬ್ಬವಿದ್ದಂತೆ. ಮದರ್ ತೆರೆಸಾ ಮತ್ತು ಮಹಾತ್ಮಾ ಗಾಂಧಿಯಂತ ವ್ಯಕ್ತಿತ್ವಗಳು ಹುಟ್ಟಿಕೊಂಡಾಗ ಶೋಷಿತರಿಗೆ ನೆಲೆಯಾಗಿತ್ತು. ಇಂದು ಸಮಾಜದಲ್ಲಿ ಇಂತಹ ವ್ಯಕ್ತಿತ್ವಗಳ ಸಂಖ್ಯೆ ಸಾವಿರ ಲಕ್ಷಗಳಲ್ಲಿ ಮೂಡಿಬರಲಿ. ಆಗ ಕ್ರಿಸ್ತನ ಜೀವಿತದ ಧ್ಯೇಯ ಸಾರ್ಥಕವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆಯ ಕೋರ್ಪುಸ್ ಕ್ರಿಸ್ತಿ ಚರ್ಚನ ಧರ್ಮಗುರುಗಳಾದ ಅತಿ ವಂದನೀಯ ಪಾವ್ಲ್ ಸಿಕ್ವೇರ ಕ್ರಿಸ್ಮಸ್ ಸಂದೇಶ ನೀಡುತ್ತಾ, ಕ್ರಿಸ್ಮಸ್ ಒಂದು ಸಂತೋ?ವನ್ನು ಹಂಚುವ ಹಬ್ಬ. ಈ ಆಚರಣೆಯ ಪ್ರತಿಯೊಂದು ಅಂಶಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ ಸಂಗೀತದ ಆಸ್ವಾದನೆಯಿಂದ ಮನಸ್ಸು ಉಲ್ಲಾಸಗೊಳ್ಳುವುದಲ್ಲದೇ ಸದಾ ಚಟುವಟಿಕೆಯಿಂದ ಕೂಡಿರಲು ಸಾಧ್ಯವಾಗುತ್ತದೆ. ಸೃಜನಶೀಲ ಕಲೆಗಳು ಸೂಕ್ಷ್ಮಕಾಯದ ಬೆಳವಣಿಗೆ ಪೂರಕವಾದವುಗಳು ಎಂದು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯ ಬಿ. ವಿಶ್ವೇಶ್ವರ ಅಡಿಗ ಹೇಳಿದರು. ಅವರು ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ರಂಗಮಂಟಪದಲ್ಲಿ ಬುಧವಾರ ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ, ವಿ. ಆರ್. ಬಾಲಚಂದ್ರ ಮುಂಬೈ ಅವರ ಸಹಯೋಗದೊಂದಿಗೆ ಆಯೋಜಿಸಲಾದ ರಂಗಕರ್ಮಿ ಬಿ. ಸೀತಾರಾಮ ಶೆಟ್ಟಿ ಕೂರಾಡಿ ಸಂಸ್ಮರಣೆಯ ನೀನಾಸಂ ತಿರುಗಾಟ – 2019 ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಲಾವಣ್ಯ ರಿ. ಬೈಂದೂರು ಅಧ್ಯಕ್ಷ ಎಚ್. ಉದಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾ ಜನಾರ್ದನ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಜಿ ಮೋಹನದಾಸ್ ಅವರನ್ನು ಅಭಿನಂಧಿಸಲಾಯಿತು. ಲಾವಣ್ಯದ ಗಿರೀಶ್ ಬೈಂದೂರು ಸ್ವಾಗತಿಸಿ, ಕಾರ್ಯದರ್ಶಿ ಮೂರ್ತಿ ಬೈಂದೂರು ವಂದಿಸಿದರು. ಸುಬ್ರಹ್ಮಣ್ಯ ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಸೋಡು ಪ್ರೆಂಡ್ಸ್ ಅವರು ಆಯೋಜಿಸಿದ ಪ್ರೊ. ಡಾ. ಅಸೋಡು ಅನಂತರಾಮ ಶೆಟ್ಟಿ ವೃತ್ತ ಹಾಗೂ ಹೈಮಾಸ್ಟ್ ವಿದ್ಯುತ್ ದೀಪವನ್ನು ಹಂಗಳೂರಿನ ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಕಂಟ್ರ್ಯಾಕ್ಟರ್ ಶ್ರೀ ಕೆ. ಆರ್. ನಾಯ್ಕ್ ಉದ್ಘಾಟಿಸಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎ. ಎ. ಶೆಟ್ಟಿಯವರು ಮಾತನಾಡಿ, ಹೆತ್ತವರು ಮಕ್ಕಳಿಗೆ ಓದಿನೊಂದಿಗೆ ಸಂಗೀತಾ, ಸಾಹಿತ್ಯ ಮತ್ತು ಕಲೆಗಳ ಕುರಿತು ಆಸಕ್ತಿಯನ್ನು ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಭಾಷಾ ಮಾಧ್ಯಮ ತೊಡಕಾಗುವುದಿಲ್ಲ, ಆದರೆ ಓದಿನೊಂದಿಗೆ ಸಂಸ್ಕಾರಯುತವಾದ ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಅಸೋಡಿನ ಏಕೋಪಾಧ್ಯಾಯ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ಶಿಕ್ಷಣ ಪಡೆದಿದ್ದು ನನಗೆ ಅಂತರಾಷ್ಟ್ರೀಯ ಖ್ಯಾತಿಯ ವೈದ್ಯನಾಗಲು ಸಾಧ್ಯವಾಯಿತು. ಗುರುವಿನ ಮಾರ್ಗದರ್ಶನ ಮತ್ತು ನಿರ್ದಿಷ್ಟ ಗುರಿಯಿಂದ ಯುವಜನತೆ ಮಾಹಾನ್ ಸಾಧನೆ ಮಾಡಲು ಸಾಧ್ಯ ಎಂದರು. ಕಾಳಾವಾರ ಗ್ರಾಮ ಪಂಚಾಯತ್ನ ಅಧ್ಯಕ್ಷ ಸುಖಾನಂದ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಅಸೋಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಎಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪದವಿ ಹಾಗೂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ವತಿಯಿಂದ ಖಗೋಳ ಕೌತುಕದ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಲು ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಗುರುವಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಲವಾರು ದಶಕಗಳಿಗೊಮ್ಮೆ ನಡೆಯುವ ಬಾಹ್ಯಕಾಶದ ವಿಸ್ಮಯವನ್ನು ವೀಕ್ಷಿಸಿದರು. ಪ್ರೋಜೆಕ್ಟರ್ ಡಿಸ್ಪ್ಲೇಯ ಜತೆಯಲ್ಲಿ ಸೋಲಾರ್ ನೆಬ್ಯೂಲರ್ ಕನ್ನಡಕವನ್ನು ಧರಿಸಿ ವೀಕ್ಷಿಸಿದರು. ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಡಾ.ಶಶಿಧರ್ ಭಟ್ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ನಡೆಯುವ ಪರಿಯನ್ನು ಹಂತ ಹಂತವಾಗಿ ವಿವರಿಸಿದರು. ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿಜ್ಞಾನ ನಿಖಾಯದ ಡೀನ್ ರಮ್ಯ ರೈ ಪಿ.ಡಿ ಹಾಗೂ ಪದವಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ನಿಶಾ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಹೆತ್ತವರು ಧನ್ಯತಾ ಭಾವವನ್ನು ಕಾಣುವಂತೆ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಪರಿವರ್ತನೆಯ ಪ್ರವರ್ಧಮಾನ ಕಾಲದಲ್ಲಿ ಮನುಷ್ಯ ತನ್ನ ತನವನ್ನು ಕಳೆದುಕೊಳ್ಳುವ ಸ್ಥಿತಿಯತ್ತ ಹೆಚ್ಚು ವಾಲುತ್ತಿದ್ದಾನೆ. ಜೀವನದ ಪ್ರಾರಂಭದಿಂದ ಕೊನೆಯ ಕ್ಷಣದವರೆಗೂ ವಿದ್ಯಾರ್ಥಿಯಾಗಿರುವವರು ಮಾತ್ರ ಸಾಧನೆ ಉತ್ತುಂಗ ತಲುಪುತ್ತಾರೆ. ಜೀವನದಲ್ಲಿ ಏರಿಳಿತಗಳು ಇದ್ದಾಗ ಮಾತ್ರ ಬದುಕು ಸಾರ್ಥಕಗೊಳ್ಳುತ್ತದೆ. ಜೀವನದಲ್ಲಿ ಕಾಣುವ ಪ್ರತಿಯೊಂದು ಏರಿಳಿತಗಳನ್ನು ಸಂಯಮ ಹಾಗೂ ಸಮಚಿತ್ತದಿಂದ ಸ್ವೀಕಾರ ಮಾಡಬೇಕು ಎಂದು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಡಾ.ಜಿ.ಭೀಮೇಶ್ವರ ಜೋಷಿ ಹೇಳಿದರು. ಇಲ್ಲಿನ ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ಮಂಗಳವಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ನಡೆದ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ೮೫ ನೇ ಹುಟ್ಟುಹಬ್ಬದ ಆಚರಣೆ, ದತ್ತಿನಿಧಿ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಡಾ.ಎಂ.ಮೋಹನ್ಆಳ್ವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ಆಳ್ವ, ಪ್ರಶಸ್ತಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೇಸ್ಬುಕ್ನಲ್ಲಿ, ಸೌದಿ ದೊರೆಯ ವಿರುದ್ಧ ಪೋಸ್ಟ್ ಮಾಡಿದ ಅರೋಪದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ, ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು. ಭಾರತೀಯ ದೂತವಾಸದ ಅಧಿಕಾರಿಗಳೊಂದಿಗೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ ಬಂಗೇರಾ ಅವರ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಕೋರಿದರು. ಈ ಪ್ರಕರಣವು ಕಾನೂನು ಮೂಲಕ ಇತ್ಯರ್ಥವಾಗಬೇಕಿದ್ದು, ಸ್ವಲ್ಪ ವಿಳಂಬವಾಗಲಿದ್ದು, ಬಂಧನದಲ್ಲಿರುವ ಅವರು ಕ್ಷೇಮವಾಗಿದ್ದಾರೆ ಎಂದು ದೂತವಾಸದ ಅಧಿಕಾರಿಗಳು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು. ಮಂಗಳವಾರ, ಹರೀಶ್ ಬಂಗೇರಾ ಅವರ ಪತ್ನಿ ಶ್ರೀಮತಿ. ಸುಮನ ಬಂಗೇರಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕಾರ್ಯದರ್ಶಿಗಳು, ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ನೀಡಿ, ಸರ್ಕಾರವು ತಮ್ಮ ಪರವಾಗಿ ನಿಂತಿದ್ದು, ಆದಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ ಕೂಲಿಕಾರರ ಕೊರತೆ, ಕಾಡು ಪ್ರಾಣಿಗಳ ಹಾವಳಿ ಹಾಗೂ ರಾಜಕಾರಣಿಗಳ ಸುಳ್ಳು ಆಶ್ವಾಸನೆಗಳ ನಡುವೆ ರೈತ ಕೃಷಿಯನ್ನು ನೆಚ್ಚಿಕೊಂಡು ಮುಂದುವರಿಯಲು ಸಾಧ್ಯವಾಗದ ಸ್ಥಿತಿ ಇದೆ. ಹಠವಿದ್ದ ರೈತರು ನಿರಂತರವಾಗಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಭಾರತೀಯ ಕಿಸಾಸ್ ಸಂಘದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯ ಬಿ. ವಿ ಪೂಜಾರಿ ಹೇಳಿದರು. ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ರೈತಸಿರಿ ಸಭಾಭವನದಲ್ಲಿ ಜರುಗಿದ ರೈತರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ರೈತ ಗೋಪಾಲ ಉಡುಪ ಮೂಡುಮಠ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ೨೦೨೦ರ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಸಂಘದ ನಿರ್ದೇಶಕರಾದ ಮೋಹನ ಪೂಜಾರಿ ಉಪ್ಪುಂದ, ಸುರೇಶ್ ಶ್ಯಾನುಭೋಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಸೌದಿಯಲ್ಲಿ ಉದ್ಯೋಗದಲ್ಲಿದ್ದ ತಾಲೂಕು ಕೋಟೇಶ್ವರ ಸಮೀಪದ ಬೀಜಾಡಿ ಗೋಯಾಡಿಬೆಟ್ಟು ನಿವಾಸಿ ಹರೀಶ್ ಬಂಗೇರ ಅಲ್ಲಿನ ಪೊಲೀಸರಿಂದ ಬಂಧಿತರಾಗಿದ ಘಟನೆ ನಡೆದಿದೆ. ಘಟನೆಯ ವಿವರ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಮರ್ಥಿಸಿ ಹರೀಶ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ ಸೌದಿ ದೇಶದ ಯುವಕರು ಹರೀಶ್ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಘಟನೆಯ ಬಗ್ಗೆ ಹರೀಶ್ ಕ್ಷಮೆ ಕೇಳಿ ವೀಡಿಯೊವೊಂದನ್ನು ಅಪ್ಲೋಡ್ ಮಾಡಿದ್ದರು. ಬಳಿಕ ಡಿ.19 ರಾತ್ರಿ ತನ್ನ ಫೇಸ್ ಬುಕ್ ಖಾತೆ ಡಿ-ಆಕ್ಟಿವೇಟ್ ಮಾಡಿದ್ದರು. ಆದರೆ ಮತ್ತೆ ಹರೀಶ್ ಬಂಗೇರ ಎನ್ನುವ ನಕಲಿ ಫೇಸ್ ಬುಕ್ ಖಾತೆಯಿಂದ ಮೆಕ್ಕಾ ಕುರಿತು, ಸೌದಿ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಅಪ್ಲೋಡ್ ಆಗಿದ್ದು ಅದು ವೈರಲ್ ಆಗಿ ಆತ ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕಳೆದ 10 ವರ್ಷಗಳಿಂದ ಕುಂದಾಪುರದಲ್ಲಿ ಶಾಸ್ತ್ರಿ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪ್ಲೈಓವರ್ ಕಾಮಗಾರಿ ಕೆಲಸ ನಡೆಯುತ್ತಿದ್ದ ಈವರೆಗೂ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ಟೀಂ ಕುಂದಾಪುರಿಯನ್ಸ್ ಸಂಘಟನೆ ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿ ಪತ್ರ ಚಳವಳಿ ನಡೆಸಿತು. ಉಡುಪಿ ಜಿಲ್ಲಾಧಿಕಾರಿಗಳು, ಉಡುಪಿ ಭಾಗದ ಶಾಸಕರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ನಾಯಕರು ಮತ್ತು ಪ್ರಧಾನ ಮಂತ್ರಿಗಳಿಗೂ ಪತ್ರ ಕಳುಹಿಸಲಾಯಿತು. ಜೊತೆಗೆ ಕಾಮಗಾರಿ ವಹಿಸಿಕೊಂಡ ನವಯುಗ ಕಂಪೆನಿಗೂ ಪತ್ರ ರವಾನಿಸಲಾಯಿತು. ಇದನ್ನೂ ಓದಿ: ► ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಈವರೆಗೂ ಅಪೂರ್ಣ – https://kundapraa.com/tag/nh66/ ಕುಂದಾಪುರದ ಶಾಸ್ತ್ರಿ ಸರ್ಕಲ್ನಲ್ಲಿ ಫ್ಲೈ ಓವರ್ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವಾಹನ ಸವಾರರಿಗೆ ಅಡಚಣೆ ಉಂಟಾಗಿ ಅಪಘಾತಗಳು ಸಂಭವಿಸುತ್ತಿದೆ. ಅಲ್ಲದೇ ಸ್ಥಳದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ಚರಂಡಿ ನೀರು ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಲವು ವರ್ಷಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ (ರಿ,) ಆಶ್ರಯದಲ್ಲಿ ನಡೆಯುವ ಅಭಿಮತ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಶತಾಯುಷಿ, ಹಿರಿಯ ಕೃಷಿಕರೂ ಆದ ಮಿಜಾರುಗುತ್ತು ಆನಂದ ಆಳ್ವ ಅವರು ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಉತ್ಸವ, ಸಂಭ್ರಮ, ಮಹೋತ್ಸವಗಳಲ್ಲಿ ಏರ್ಪಡಿಸುವ ಸಾಂಸ್ಕೃತಿಕ ವೈಭವಗಳು ಕೇವಲ ಮನೋರಂಜನಗಷ್ಟೇ ಸೀಮಿತವಾಗಿರದೆ ಮನೋವಿಕಾಸಕ್ಕೂ ಪ್ರೇರಣೆಯಾಗಬೇಕು. ಮೊದಲು ದಣಿವ ಮರೆಯಲು ಮನೋರಂಜನೆಗಾಗಿ ಜನಪದ ನಡೆಗಳು ಸಾಗಿ ಬಂದವು, ಅದರಲ್ಲಿ ನೈತಿಕ ಶಿಕ್ಷಣವೂ ಅಂತರ್ಗತವಾಗಿದ್ದವು. ಇಂದು ಅದರ ಮೂಲ ಗಂಧವನ್ನ ಉಳಿಸಿಕೊಂಡು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಾದ ಅಗತ್ಯ, ಅನಿವಾರ್ಯತೆ ಇದೆ ಎಂದರು. ಫೆಬ್ರವರಿ 8ನೇ ತಾರೀಕಿನಂದು ನಡೆಯುವ ಅಭಿಮತ ಸಂಭ್ರಮದಲ್ಲಿ ಚಿತ್ರನಿರ್ದೇಶಕ ಯೋಗರಾಜ್ ಭಟ್ ರಿಗೆ ಕೀರ್ತಿಕಳಶ ಪುರಸ್ಕಾರ ಮತ್ತು ಶ್ರಮಜೀವಿ ಕೂಸ ಪೂಜಾರಿ, ಕ್ರೀಡಾ ಸಾಧಕ ಸೀತಾರಾಮ ಶೆಟ್ಟಿ, ಕರಕುಶಲ ಕಲೆಯ ಸಾಧಕಿ ಲಲಿತಾ ಪೂಜಾರಿ ಯವರಿಗೆ ಯಶೋಗಾಥೆ ಗೌರವಾರ್ಪಣೆ ನಡೆಯಲಿದ್ದು ಆ ಸಂಧರ್ಭದಲ್ಲಿ ಆಳ್ವಾಸ್ ವಿಧ್ಯಾರ್ಥಿಗಳ ಸಾಂಸ್ಕೃತಿಕ ವೈಭವ, ಜೀವನ್…
