Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಪರಿಣಿತರ ಅಗತ್ಯವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಆಸಕ್ತ ಯುವಕ / ಯುವತಿಯರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (ಪಿ.ಯು.ಸಿ ವಿಜ್ಞಾನ), ಜನರಲ್ ಡ್ಯೂಟಿ ಅಸಿಸ್ಟೆಂಟ್ (10 ನೇ ತರಗತಿ), ಜನರಲ್ ಡ್ಯೂಟಿ ಅಸಿಸ್ಟೆಂಟ್- ಕ್ರಿಟಿಕಲ್ ಕ್ಯಾರ್ (10 ನೇ ತರಗತಿ), ಹೋಮ್ ಹೆಲ್ತ್ ಏಡ್ (10 ನೇ ತರಗತಿ), ಮೆಡಿಕಲ್ ಇಕ್ಯೂಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (10 ನೇ ತರಗತಿ), ಫ್ಲೆಬೋಟೋಮಿಸ್ಟ್ (ಪಿ.ಯು.ಸಿ ವಿಜ್ಞಾನ) ಮತ್ತು ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ (ಪಿ.ಯು.ಸಿ ವಿಜ್ಞಾನ) ಜಾಬ್ ರೋಲ್ಗಳಲ್ಲಿ ತುರ್ತು ತರಬೇತಿ ನೀಡಿ, ಆರೋಗ್ಯ ಸೇವೆಯಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನು ಇ-ಮೇಲ್ udupikaushalya@gmail.comಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449943452 ಅಥವಾ 9480259790 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು, ವೈದ್ಯರು ಮತ್ತು ಸ್ವಾö್ಯಬ್ ಸಂಗ್ರಹಿಸುವ ಸಿಬ್ಬಂದಿಗಳು ಮನೆ ಮನೆಗಳಿಗೆ ಭೇಟಿ ನೀಡಿ, ಗ್ರಾಮದ ಎಲ್ಲಾ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಸೋಂಕಿನ ಲಕ್ಷಣಗಳಿದ್ದಲ್ಲಿ ಸ್ಥಳದಲ್ಲೇ ತಪಾಸಣೆ ನಡೆಸಿ, ರೋಗದ ಕುರಿತು ಅರಿವು ಮೂಡಿಸುವ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 25ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 155 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿನ 59 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ, ಮನೆ ಮನೆಗಳಿಗೆ ಭೇಟಿ ನೀಡಿ, ಮನೆಯಲ್ಲಿ ಸೋಂಕಿನ ಲಕ್ಷಣಗಳಿದ್ದವರನ್ನು ರ್ಯಾಟ್ ಪರೀಕ್ಷೆ ಮೂಲಕ ಪರೀಕ್ಷಿಸಬೇಕು. ಪಾಸಿಟಿವ್ ಕಂಡುಬಂದಲ್ಲಿ ರೋಗಿಯ ಗುಣಲಕ್ಷಣದ ಆಧಾರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳನ್ನು ಮೀಸಲಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಬೆಂಗಳೂರಿನ ವಿಕಾಸಸೌಧದಿಂದ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗದಿಂದ ಒಬ್ಬರು ಮೃತಪಟ್ಟಿದ್ದು, ಒಂದು ರೋಗಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿಯೇ ಬ್ಲಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ 10 ಹಾಸಿಗೆಯ ಕೊಠಡಿಯನ್ನು ಕೂಡಲೇ ಸಿದ್ಧಪಡಿಸುವಂತೆ ಸೂಚನೆ ನೀಡಿದ ಸಚಿವರು, ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಶೀಘ್ರದಲ್ಲಿಯೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು. ಜಿಲ್ಲೆಗೆ ಹೊರಜಿಲ್ಲೆಗಳಿಂದಲೂ ಬ್ಲಾಕ್ ಫಂಗಸ್ ಚಿಕಿತ್ಸೆಗೆ ರೋಗಿಗಳು ಆಗಮಿಸುತ್ತಿದ್ದು, ಹೆಚ್ಚಿನ ಔಷಧಿಯನ್ನು ಸರಬರಾಜು ಮಾಡಲಾಗುವುದು ಎಂದರು. ಕೋವಿಡ್ ಚಿಕಿತ್ಸೆಗೆ ದಾಖಲಾಗುವ ಎಲ್ಲಾ ರೋಗಿಗಳಿಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಚಿಕಿತ್ಸೆ ದೊರಕಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಮೇ 24: ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶವನ್ನು ಹೊರಡಿಸಿರುತ್ತದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ. ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯದ ಆದೇಶದಂತೆ ರಾಜ್ಯವೂ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂನ್ 1…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 927 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 332, ಕುಂದಾಪುರ, ಬೈಂದೂರು ತಾಲೂಕಿನ 325, ಕಾರ್ಕಳ, ಹೆಬ್ರಿ ತಾಲೂಕಿನ 267 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 927 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 906 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 56 ವರ್ಷದ ಪುರುಷ, 47 ವರ್ಷದ ಪುರುಷ, ಕುಂದಾಪುರದ 66 ವರ್ಷದ ವೃದ್ಧೆ, 72 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 845 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5851 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2692 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2849 ಮಂದಿಗೆ ಮೊದಲನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಗ್ರಾಮ, ಗುಜ್ಜಾಡಿ, ತ್ರಾಸಿ, ಮೋವಾಡಿ ಗ್ರಾಮದಲ್ಲಿ 21 ಕೊರಗ ಸಮುದಾಯದ ಕುಟುಂಬಗಳಿಗೆ ಸೋಮವಾರ ಆಹಾರ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು. ಚಿತ್ರನಟ ಚೇತನ್ ಅವರ ಚೇತನ್ ಫೌಂಡೇಶನ್ ಟ್ರಸ್ಟ್ ಹಾಗೂ ಬೆಂಗಳೂರು ಉದ್ಯಮಿಯಾದ ಕೆ.ವಿ ನಾಗರಾಜ್, ಉದ್ಯಮಿ ದಿನೇಶ್ ಮಂಗಳೂರು ಹಾಗೂ ಮುಳ್ಳಿಕಟ್ಟೆ ಸಂಕಲ್ಪ ಕ್ಲಿನಿಕ್ ಮಾಲಕ ಪುಷ್ಪರಾಜ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಗಂಗೊಳ್ಳಿ ಶಾಖೆ ಸಹಯೋಗದೊಂದಿಗೆ ಕಿಟ್ ವಿತರಿಸಲಾಯಿತು. ಈ ಸಂದರ್ಭ ನಟ ವಜ್ರಾಂಗ್ ಶೆಟ್ಟಿ (ಮಣಿ ಶೆಟ್ಟಿ), ದ.ಸಂ.ಸ ಗಂಗೊಳ್ಳಿ ಶಾಖೆ ಮುಖಂಡರಾದ ಜಗದೀಶ್ ಗಂಗೊಳ್ಳಿ, ಸದಸ್ಯರಾದ ಸಂಪತ್, ಸಚಿನ್, ವಿಶ್ವನಾಥ್, ರಾಘವೇಂದ್ರ, ಸತೀಶ್, ಮಿಥುನ್ ಮೊದಲಾದವರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಂದಾಗಿ ಕೋವಿಡ್ ಪ್ರಕರಣಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ.25ರಿಂದ ಜೂನ್.7ರ ತನಕ ಯಾವುದೇ ಮದುವೆ ಕಾರ್ಯಕ್ರಮ ನಡೆಸಲು ಹೊಸತಾಗಿ ಅನುಮತಿ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ. ಸೋಮವಾರ ಉಡುಪಿಯಲ್ಲಿ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಕಾರ್ಯಕ್ರಮಗಳಿಗೂ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈಗಾಗಲೇ ಅನುಮತಿ ನೀಡಲಾಗಿರುವ ಮದುವೆ ಕಾರ್ಯಕ್ರಮಗಳನ್ನು 40 ಜನರ ಮಿತಿಯಲ್ಲಿ ನಡೆಸಬಹುದಾಗಿದ್ದು, ಹೊಸದಾಗಿ ಯಾವುದೇ ಮದುವೆ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಆಯಾ ತಾಲೂಕುಗಳ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಕೋವಿಡ್ ನಿಷೇಧಾಜ್ಞೆ ಜಾರಿ ಇರುವ ಸಂದರ್ಭ ಮೆಹಂದಿ, ಎಂಗೆಜ್‌ಮೆಂಟ್ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅನಗತ್ಯವಾಗಿ ಗುಂಪುಗೂಡಿ ಆಟವಾಡುವುದು ಕಂಡಬರುತ್ತಿದ್ದು, ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು. ಬೇಕರಿಗಳಲ್ಲಿರುವ ಕೆಲವು ಉತ್ಪನ್ನಗಳು ಹಾಳಾಗುತ್ತಿದ್ದು ಬೇಕರಿ ತೆರೆಯಲು ಅನುಮತಿ ನೀಡುವಂತೆ ಮನವಿ ಬಂದಿದ್ದು, ಅದರಂತೆ ಬುಧವಾರ ಒಂದು ದಿನ ಮಾತ್ರ ಬೆಳಿಗ್ಗೆ…

Read More

ರಾತ್ರಿಯೂ ಮೊಬೈಲ್‌ನಲ್ಲಿ ಚಾಟ್. ಬೆಳಗ್ಗೆ ಎದ್ದೂ ಮೊಬೈಲ್ ವೀಕ್ಷಣೆ. ಈ ಮಧ್ಯೆ ಎಲ್ಲಿಯೋ ತುಸು ನಿದ್ದೆ. ಈ ಜಂಜಾಟದಲ್ಲಿ. ದಣಿದ ದೇಹಕ್ಕೆ ಅಗತ್ಯ ವಿಶ್ರಾಂತಿಯೇ ಸಿಗೋಲ್ಲ. ದೇಹ ದಣಿದಿದೆ ಎಂದರೆ, ಬಾಯಿಗೆ ಏನೂ ರುಚಿಸೋಲ್ಲ. ಸಿಕ್ಕಿದ್ದು ತಿಂದು ಹೊರಟಿರೋ, ದೈಹಿಕ ಆರೋಗ್ಯಕ್ಕೂ ಕುತ್ತು, ಮಾನಸಿಕ ಆರೋಗ್ಯಕ್ಕೂ ಅಪಾಯ./ಕುಂದಾಪ್ರ ಡಾಟ್ ಕಾಂ/ ದಿನಪೂರ್ತಿ ಆರೋಗ್ಯವಾಗಿರಬೇಕೆಂದರೆ ಅಗತ್ಯದಷ್ಟು ಪೋಷಕಾಂಶಗಳು ನಮ್ಮ ದೇಹ ಸೇರಬೇಕು. ಅಗತ್ಯದಷ್ಟು ಪೌಷ್ಟಿಕಾಂಶಗಳು ನಮ್ಮ ದೇಹ ಸೇರುತ್ತಿಲ್ಲವೆಂದರೆ ಕೋಪ-ತಾಪ ಹೆಚ್ಚುತ್ತೆ. ಆತಂಕ, ಸಂತೋಷಗಳನ್ನು ತಹಬದಿಗೆ ತಂದುಕೊಳ್ಳಲು ಹೆಣಗಾಡಬೇಕು. ಈ ಸಮಸ್ಯೆಯಿಂದ ದೂರವಾಗಲು ಸಾಧ್ಯವಾದಷ್ಟು ಈ ಆಹಾರ ಸೇವಿಸಿ./ಕುಂದಾಪ್ರ ಡಾಟ್ ಕಾಂ/  ಆತಂಕ ದೂರ ಮಾಡಲು ಸೇಬು ಮತ್ತು ದಾಳಿಂಬೆ  ಶಾಂತ ಮನಸ್ಸಿಗೆ ಕಿತ್ತಲೆ ಶಕ್ತಿ ಹೆಚ್ಚಿಸಲು ಬಾಳೆಹಣ್ಣು ದುಃಖ ಕಡಿಮೆ ಮಾಡಲು ಸೊಪ್ಪು ಸುಳ್ಳು ಹೇಳಬಾರದೆಂದರೆ ಕಪ್ಪು ದ್ರಾಕ್ಷಿ  ಕಣ್ಣಿನ ದೃಷ್ಟಿ ಹೆಚ್ಚಿಸಲು ಪ್ಲಮ್

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಡಲ್ಕೊರೆತ ಮತ್ತು ಚಂಡಮಾರುತದ ಕಾರಣದಿಂದ ಕಡಿದುಹೋದ ಮರವಂತೆ ಕರಾವಳಿ ಮಾರ್ಗದ ಸಂಪರ್ಕವನ್ನು ತಾತ್ಕಾಲಿಕ ನೆಲೆಯಲ್ಲಿ ಮರುಸ್ಥಾಪಿಸುವ ಕಾಮಗಾರಿ ಈಗ ಭರದಿಂದ ಸಾಗಿದೆ. ಇನ್ನು ಒಂದು ವಾರದಲ್ಲಿ ಕೆಲಸ ಮುಗಿದು, ಜನ, ವಾಹನ ಸಂಚಾರ ಸುಗಮವಾಗಲಿದೆ. ಮರವಂತೆಯಲ್ಲಿ ಅರ್ಧದಲ್ಲಿ ಸ್ಥಗಿತವಾಗಿರುವ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರ ದಿಕ್ಕಿನ ತೀರದಲ್ಲಿ ಬಿಟ್ಟುಬಿಟ್ಟು ಕಡಲ್ಕೊರೆತ ಸಂಭವಿಸಿತ್ತು. ಅದರಿಂದ ಒಂದಷ್ಟು ಭೂಭಾಗ, ತೆಂಗಿನ ಮರಗಳು ಸಿಲುಕಿ ಸಮುದ್ರ ಸೇರಿದ್ದುವು. ಅದರ ಬೆನ್ನಲ್ಲಿ, ಉರಿಯುವ ಬೆಂಕಿಗೆ ತೈಲ ಸುರಿದಂತೆ ಕಳೆದ ವಾರ ಅಪ್ಪಳಿಸಿದ ತೌತೆ ಚಂಡಮಾರುತ ಸಮುದ್ರದ ಮಟ್ಟವನ್ನು ಹೆಚ್ಚಿಸಿತು. ತೆರೆಗಳು ರುದ್ರನರ್ತನ ನಡೆಸಿದುವು. ಅದರ ಪರಿಣಾಮವಾಗಿ ಸುಮಾರು 350 ಮೀಟರು ಉದ್ದ, 50 ಮೀಟರು ಅಗಲದ ಭೂಭಾಗ, ನೂರಾರು ತೆಂಗಿನ ಮರಗಳು, ಹತ್ತಾರು ಮೀನುಗಾರಿಕಾ ಶೆಡ್‌ಗಳು ನೋಡನೋಡುತ್ತಿದ್ದಂತೆ ಕಡಲು ಪಾಲಾದುವು. ಅಷ್ಟೇ ಉದ್ದದ ಕಾಂಕ್ರೀಟ್ ರಸ್ತೆ ತುಂಡಾಗಿ, ಛಿದ್ರಗೊಂಡಿತು. ಅದರೊಂದಿಗೆ ಮೀನುಗಾರರ ವಸತಿ ಪ್ರದೇಶದ ಏಕೈಕ ಸಂಪರ್ಕದ ಕೊಂಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 486, ಕುಂದಾಪುರ, ಬೈಂದೂರು ತಾಲೂಕಿನ 273, ಕಾರ್ಕಳ, ಹೆಬ್ರಿ ತಾಲೂಕಿನ 148 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 909 ಪ್ರಕರಣಗಳಲ್ಲಿ 20 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 889 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 65 ವರ್ಷದ ವೃದ್ಧ, 53 ವರ್ಷದ ಪುರುಷ, 53 ವರ್ಷದ ಪುರುಷ, ಕುಂದಾಪುರದ 79 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 772 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5773 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 4018 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು…

Read More