ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಿಸರದ ಹಸಿರು ಕ್ಷೀಣಿಸಿ ಜನರ ಬದುಕಿನ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಯಲು ಪರಿಸರ ಪ್ರೇಮಿಗಳು ನಡೆಸುತ್ತ ಬಂದಿರುವ ವಿವಿಧ ಅಭಿಯಾನಗಳ ಸಾಲಿಗೆ ಇದೀಗ ಬೀಜಗಣಪ ಸೇರ್ಪಡೆ ಆಗಲಿದೆ. ಸದ್ಯ ಮರವಂತೆ ಕೇಂದ್ರಿತವಾಗಿ ನಡೆಯುವ ಈ ಅಭಿಯಾನದ ಆರಂಭಕ್ಕೆ ಜನಪ್ರಿಯ ಹಬ್ಬವಾದ ಗಣೇಶ ಚತುರ್ಥಿಯ ಮುಹೂರ್ತ ನಿಗದಿಯಾಗಿದೆ. ಗಣೇಶ ವಿಗ್ರಹಗಳನ್ನು ನಿರ್ಮಿಸುವ ಅಲ್ಲಿನ ಕಲಾವಿದ ಸತೀಶ ಮಧ್ಯಸ್ಥ ಅದಕ್ಕಾಗಿ ಬೀಜಗಣಪತಿಯ ಮೂರ್ತಿಗಳನ್ನು ಸಿದ್ಧಪಡಿಸುವುದರಲ್ಲಿ ನಿರತರಾಗಿದ್ದಾರೆ. ಇಂತಹ ಕೆಲಸ ಆರಂಭವಾಗಿರುವ ಸುದ್ದಿ ತಿಳಿದು ಮಧ್ಯಸ್ಥರ ಮನೆಗೆ ಹೋದ ’ಪ್ರಜಾವಾಣಿ’ಗೆ ಅವರು ಬಿಡುವು ಮಾಡಿಕೊಂಡು ಅಭಿಯಾನದ ವಿವರ ನೀಡಿದರು. ಸಾಸ್ತಾನದ ವಿನಯಚಂದ್ರ ಈಗಾಗಲೆ ಹಲವೆಡೆ ಬೀಜದುಂಡೆಗಳ ಅಭಿಯಾನ ನಡೆಸಿ ಸುದ್ದಿ ಮಾಡಿದ್ದಾರೆ. ಒಂದೆರಡು ಕಡೆ ಸತೀಶ ಮಧ್ಯಸ್ಥ ಅವರ ಜತೆಯಾಗಿದ್ದರು. ಆಗ ಅವರಿಗೆ ಬೀಜಗಣಪ ಅಥವಾ ಜೀವಗಣಪ ಯೋಜನೆ ಹೊಳೆಯಿತು. ಅವರ ’ಮಿಶನ್ ಅರ್ಥ್’ ಸಂಸ್ಥೆಯ ಗೆಳೆಯರು ಈಗ ಅದರ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಬೀಜ ಗಣಪ ತಯಾರಿ ಹೇಗೆ?…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಐದು ದಿನಗಳ ಹಿಂದೆ ಸ್ಕೂಟರ್ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಹೆಮ್ಮಾಡಿಯಲ್ಲಿ ವರದಿಯಾಗಿದೆ. ಹೆಮ್ಮಾಡಿ ನಿವಾಸಿ ಸದಾನಂದ ಪೈ ಹಾಗೂ ವಿಜಯಲಕ್ಷ್ಮೀ ಪೈಯವರ ಏಕೈಕ ಪುತ್ರ ವಾಸುದೇವ ಪೈ(25) ಸಾವನ್ನಪ್ಪಿದ ದುರ್ದೈವಿ. ಮಣಿಪಾಲದ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಸುದೇವ ಪೈ ಶುಕ್ರವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳುತ್ತಿರುವಾಗ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ಲಾರಿ ಢಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ವಾಸುದೇವ್ ಅವರ ಕಾಲಿಗೆ ತೀವ್ರವಾದ ಗಾಯಗಳಾಗಿದ್ದರಿಂದ ಅವರನ್ನು ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ ಬಳಿಕ ಕೋಮಾಕ್ಕೆ ಜಾರಿದ್ದರು. ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾದಕ ವ್ಯಸನಕ್ಕೆ ಒಳಗಾಗಿರುವ ವ್ಯಕ್ತಿಗಳು ಸಮಾಜಕ್ಕೆ ಮಾರಕ. ಹಾಗಾಗಿ ಮಾದಕದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯಗಳ ಬಳಕೆಯ ಬಗ್ಗೆ ಪೊಲೀಸರ ಗಮನಕ್ಕೆ ತಂದು ಅದರ ನಿರ್ನಾಮಕ್ಕೆ ಸಹಕರಿಸುವುದು ಅಗತ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಹೇಳಿದರು. ಅವರು ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ಪೊಲೀಸ್ ಠಾಣೆ ಹಾಗೂ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಅಶ್ರಯದಲ್ಲಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡ ’ವಾಕಾಥಾನ್’ಗೆ ಚಾಲನೆ ನೀಡಿ ಮಾತನಾಡಿದರು. ಕುಂದಾಪುರ ಡಿವೈಎಸ್ಪಿ ಬಿ.ಪಿ ದಿನೇಶ್ ಕುಮಾರ್, ಲಯನ್ಸ್ ಕ್ಲಬ್ನ ಡಾ. ಶಿವಕುಮಾರ್, ನವಿನ್ಕುಮಾರ್ ಶೆಟ್ಟಿ, ಕುಂದಾಪುರ ಎಸೈ ಹರೀಶ್ ಆರ್, ಕಂಡ್ಲೂರು ಎಸೈ ಶ್ರೀಧರ್, ಬೈಂದೂರು ಎಸೈ ತಿಮ್ಮೇಶ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ತಾಲೂಕು ಅಧ್ಯಕ್ಷ ಶಶಿಧರ ಹೆಮ್ಮಾಡಿ, ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ಇದರ ಸಾತ್ ಸುರ್ ಪರಿಸರ ಸ್ನೇಹಿ ಜೆಸಿಐ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಸರಕೊಡಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಾರಂಗ ಯೂಸೂಫ್ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜೆಸಿಐ ಶಿರೂರು ಇದರ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆಯವರು ಮಾತನಾಡಿ, ಸಾರಂಗ ಯೂಸೂಫ್ ರವರು ಆದರ್ಶ ಶಿಕ್ಷಕರಾಗಿ ಜನಾನುರಾಗಿಯಾಗಿ ಬಹುಮುಖ ಪ್ರತಿಭಾ ಸಂಪನ್ನರಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದವರು, ಇಂತಹ ಸರಳ ವ್ಯಕ್ತಿತ್ವದ ಆದರ್ಶ ಶಿಕ್ಷಕರನ್ನು ಗುರುತಿಸುವುದರಿಂದ ಅವರ ಮಾರ್ಗದರ್ಶನ ಎಲ್ಲರಿಗೂ ದೊರೆಯುವಂತೆ ಆಗುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಭಾರತೀಯ ಭೂ ಸೈನ್ಯದ ಸೈನಿಕ ಉಮೇಶ ಶೆಟ್ಟಿ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದರು. ಮೋಹನ ರೇವಣ್ಕರ್, ಪ್ರಸಾದ ಪ್ರಭು , ಹರೀಶ ಶೇಟ್, ಗಿರೀಶ ಮೇಸ್ತ, ಪ್ರಕಾಶ ಮಾಕೋಡಿ, ನಾಗೇಶ ಕೆ, ನಾಗೇಂದ್ರ ಪ್ರಭು, ವಿನೋದ ಮೇಸ್ತ, ರಮೇಶ ನಾಯ್ಕ, ಹಾಲೇಶ ಇತರರು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ವತಿಯಿಂದ ವಿಶ್ವದೀಪ ಕಲಾ ಸಂಸ್ಥೆಯ ಸಭಾಭವನದಲ್ಲಿ ಜೆಸಿಐ ಶಿರೂರು ಸಪ್ತ ಸ್ವರಗಳು ಪರಿಸರ ಸ್ನೇಹಿ ಜೆಸಿಐ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೊದಲ ಕಾರ್ಯಕ್ರಮವಾಗಿ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು, ದೀಪ ಬೆಳಗುವುದರ ಮೂಲಕ ವಿಶ್ವದೀಪ ಕಲಾ ಸಂಸ್ಥೆಯ ಮುಖ್ಯಸ್ಥರಾದ ಹನುಮಂತ ನಾಯ್ಕ ಚಾಲನೆ ನೀಡಿದರು. ಶಿರೂರು ಜೆಸಿಐ ಅಧ್ಯಕ್ಷರಾದ ಪಾಂಡುರಂಗ ಅಳ್ವೆಗದ್ದೆ ಅಧ್ಯಕ್ಷತೆ ವಹಿಸಿ ಯೋಗ ಶಿಬಿರದ ಮಹತ್ವ, ದಿನನಿತ್ಯದ ಜೀವನದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಇದರ ಮಹತ್ವದ ಕುರಿತು ಸವಿವರವಾದ ಮಾಹಿತಿ ನೀಡಿ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಆರೋಗ್ಯವಂತರಾಗಿ ಎಂದು ಕರೆ ನೀಡಿದರು. ಸುರೇಶ ಮಾಕೋಡಿ ವಿನೋದ ಮೇಸ್ತ, ನಾಗೇಂದ್ರ ಪ್ರಭು ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ಉಪಸ್ಥಿತರಿದ್ದರು. ಕೃಷ್ಣ ಪೂಜಾರಿ ಸ್ವಾಗತಿಸಿದರು. ಹರೀಶ ಗವಾಳಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕುಂದಾಪುರ ಪೇಟೆ, ಬೈಂದೂರು ಪೇಟೆ ಸೇರಿದಂತೆ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಬಂದ್ ಯಶಸ್ವಿಯಾಗಿದ್ದರೇ ಗ್ರಾಮೀಣ ಭಾಗಗಳಲ್ಲಿ ಜನಜೀವನ ಎಂದಿನಂತೆಯೇ ಸಾಗಿತ್ತು. ಖಾಸಗಿ ಹಾಗೂ ಸರಕಾರಿ ಬಸ್ಗಳು ರಸ್ತೆಗಿಳಿಯಲಿಲ್ಲ. ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸಂಘಟನೆಗಳಿಗೆ ಸೇರಿದ್ದ ರಿಕ್ಷಾ ಹಾಗೂ ಇತರ ಬಾಡಿಗೆ ವಾಹನಗಳು ಬಂದ್ ಬೆಂಬಲಿಸಿ ರಸ್ತೆಗೆ ಇಳಿದಿರಲಿಲ್ಲ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿ, ಟ್ರಕ್ ಹಾಗೂ ಪ್ರವಾಸಿ ವಾಹನಗಳ ಓಡಾಟ ಎಂದಿನಂತೆ ಇರುವುದು ಕಂಡುಬಂತು. ಕುಂದಾಪುರದಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಕಂಡುಬಂತು. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ವಿದ್ಯಾರ್ಥಿಗಳ ಓಡಾಟವಿರಲಿಲ್ಲ. ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ತೆರೆದಿದ್ದರು ಜನಸಂಚಾರ ವಿರಳವಾಗಿತ್ತು. ಕುಂದಾಪುರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿ ಅಂಗಡಿ, ಮುಗ್ಗಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೆಟ್ರೋಲ್. ಡೀಸಿಲ್, ಅನಿಲ ಸೇರಿದಂತೆ ಜೀವನಾವಶ್ಯಕ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ನೀಡಲಾದ ಭಾರತ್ ಬಂದ್ ಕರೆ ಅಂಗವಾಗಿ ಬೈಂದೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸೋಮವಾರ ಕೆಲಕಾಲ ಹೆದ್ದಾರಿ ತಡೆ ನಡೆಸಿದರು. ಹೆದ್ದಾರಿ ಮೇಲೆ ಕುಳಿತು ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ಕುಮಾರ್, ಧುರೀಣರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ರಿಯಾಜ್ ಅಹಮದ್, ಎಸ್. ರಾಜು ಪೂಜಾರಿ, ಜೆಡಿಎಸ್ ನಾಯಕ ರವಿ ಶೆಟ್ಟಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿರುವುದರಿಂದ, ಅದರ ಫಲವಾಗಿ ಅನ್ಯ ಜೀವನಾವಶ್ಯಕ ವಸ್ತುಗಳ ಬೆಲೆಯೂ ಹೆಚ್ಚುತ್ತಿರುವುದರಿಂದ ಜನ ಸಾಮಾನ್ಯದ ಬದುಕು ದುಸ್ತರವಾಗಿದೆ. ದೇಶದ ಅಭಿವೃದ್ಧಿಯೊಂದಿಗೆ ಬೆಲೆ ಹತೋಟಿಯ ಭರವಸೆ ನೀಡಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಮೋದಿ ಸರ್ಕಾರ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಯಾವುದನ್ನೂ ಈಡೇರಿಸಿಲ್ಲ. ರೂಪಾಯಿ ಬೆಲೆ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಪುರಸಭೆಯಲ್ಲಿ ೨೩ ವಾರ್ಡುಗಳ ಪೈಕಿ ೧೪ ವಾರ್ಡುಗಳನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡು ಬೀಗಿದ್ದ ಬಿಜೆಪಿ ಪಕ್ಷಕ್ಕೆ ಬಹುಮತ ಬಂದಿದ್ದರೂ ಪುರಸಭೆಯ ಅಧಿಕಾರ ಹಿಡಿಯಲು ವಿಫಲವಾಗಿದೆ. ಬದಲಾದ ಮೀಸಲಾತಿಯಿಂದಾಗಿ ೮ ವಾರ್ಡುಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಯಸವಾಗಿ ಅಧ್ಯಕ್ಷ ಸ್ಥಾನ ದೊರೆಯಲಿದೆ. ಚುನಾವಣೆ ಫಲಿತಾಂಶ ಪ್ರಕಟವಾದ ದಿನವೇ ಪ್ರಕಟಗೊಂಡಿದ್ದ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿದ್ದರಿಂದಾಗಿ ಸಹಜವಾಗಿ ಬಹುಮತ ಪಡೆದಿದ್ದ ಬಿಜೆಪಿ ಪಾಳಯದಲ್ಲಿ ಅಧ್ಯಕ್ಷಗಾದಿ ಯಾರು ಏರಲಿದ್ದಾರೆ ಎಂಬ ಕುತೂಹಲ ಮೂಡಿತ್ತು. ಆರು ಮಂದಿ ಅರ್ಹರಿದ್ದರಿಂದ ಯಾರಿಗೆ ಪಟ್ಟ ಒಲಿಯಲಿದೆ ಎಂಬ ಚರ್ಚೆ ಜೋರಾಗಿಯೇ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಬಂದಿದ್ದರಿಂದಾಗಿ ಯಾವುದೇ ಅವಿರೋಧವಾಗಿ ಇದ್ದ ಒಬ್ಬರೇ ಸದಸ್ಯರು ಆಯ್ಕೆಯಾಗುತ್ತಿದ್ದರು. ಆದರೆ ಬದಲಾದ ಮೀಸಲಾತಿಯಲ್ಲಿ ಹಿಂದೂಳಿದ ವರ್ಗ ಬಿ ಮಹಿಳೆಗೆ ಅಧ್ಯಕ್ಷ ಸ್ಥಾನ ದೊರೆತಿರುವುದರಿಂದ ಬಿಜೆಪಿ ಪಕ್ಷಕ್ಕೆ ಬಹುಮತವಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ನಲ್ಲಿ ಓರ್ವ ಮಹಿಳೆ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ವಚನಗಳು ಸಾರುವ ಉನ್ನತ ಜೀವನಧರ್ಮ ಸರಳ ವ್ಯಾವಹಾರಿಕ ನೀತಿಯ ಕಾರಣದಿಂದ ವಿಶ್ವ ಸಾಹಿತ್ಯದಲ್ಲಿ ಸ್ಥಾನ ಪಡೆದಿವೆ. ಭಾರತದ ಎಲ್ಲ ಭಾಷೆಗಳಿಗೆ, ಹಲವು ವಿದೇಶಿ ಭಾಷೆಗಳಿಗೆ ಅನುವಾದಗೊಂಡು ಎಲ್ಲೆಡೆಯ ಪ್ರಜ್ಞಾವಂತರ ಗಮನ ಸೆಳೆದಿವೆ ಎಂದು ಬೈಂದೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯು. ಚಂದ್ರಶೇಖರ ಹೊಳ್ಳ ಹೇಳಿದರು. ಶರಣ ಸಾಹಿತ್ಯ ಪರಿಷತ್ತು ಮತ್ತು ನಾಗೂರಿನ ಸಂದೀಪನ್ ಶಾಲೆಯ ಕನ್ನಡ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ವಚನ ದಿನಾಚರಣೆಯಲ್ಲಿ ಅವರು ’ವಚನ ಸಾಹಿತ್ಯದಲ್ಲಿ ವಿಶ್ವ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿದರು. ಬಸವಣ್ಣನವರು ಯಜ್ಞಯಾಗಗಳನ್ನು, ಜಾತಿ ವ್ಯವಸ್ಥೆ ಮತ್ತು ಅಂಧಾನುಕರಣೆಯನ್ನು ವಿರೋಧಿಸಿದರು. ಸ್ತ್ರೀಪುರುಷ ಸಮಾನತೆಯನ್ನು ಪ್ರತಿಪಾದಿಸಿದರು. ಕಾಯಕದ ಬದುಕಿಗೆ ಆದ್ಯತೆ ನೀಡಿದರು. ಎಲ್ಲರೂ ಅನುಸರಿಸಬಹುದಾದ ಬದುಕಿನ ಸರಳ ಮಾರ್ಗವನ್ನು ಜನರಿಗೆ ಬೋಧಿಸಿದರು. ಪ್ರಖರ ವೈಚಾರಿಕತೆಯನ್ನು ಮೆರೆದರು. ಇವೆಲ್ಲವೂ ಅವರ, ಅಕ್ಕ ಮಹಾದೇವಿಯ, ಅಲ್ಲಮರ ಮತ್ತು ನೂರಾರು ವಚನಕಾರರ ವಚನಗಳಲ್ಲಿ ಪ್ರಕಟಗೊಂಡಿವೆ. ಎಲ್ಲರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪದವಿ ಕಾಲೇಜು ಕೋಡಿ, ಕುಂದಾಪುರ ಇದರ ವಾಣಿಜ್ಯ ವಿಭಾಗದ ವತಿಯಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರುಗಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಠ ಶೆಟ್ಟಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬೀಡಲಾರದ ನಂಟಾಗಿದೆ, ಎಲ್ಲವೂ ಪ್ಲಾಸ್ಟಿಕ್ ಮಯಾವಾಗಿರುವ ಇಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಬಳಸುವದರ ಮೂಲಕ ಪರಸರವನ್ನು ಉಳಿಸುವ ಕೆಲಸವನ್ನು ಇಂದಿನ ಯುವ ಪೀಳಿಗೆ ಮುಂದಾಗಬೇಕು. ಪರಿಸರ ಉಳಿವಿಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕೆಂದು ಹೇಳಿದರು. ಅತಿಥಿ ಅಬ್ದುಲ್ ಕೋಟೆ, ಎಸ್.ಡಿ.ಎಂ.ಸಿ ಸದಸ್ಯ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಶಾಲೆ ಕೋಡಿ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ ವಹಿಸಿ ಪ್ಲಾಸ್ಟಿಕ್ ಬ್ಯಾಗ್ನ ಬದಲಿಗೆ ಬಟ್ಟೆ ಬ್ಯಾಗನ್ನು ಉಪಯೋಗಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರೋ. ಮಾಲತಿ ವಾಣಿಜ್ಯ…
