Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅನುದಾನಿತ ಪ್ರೌಢ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳನ್ನು ದಾಖಲಾತಿ ಮಾಡುವಂತೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಅನುದಾನಿತ ಪ್ರೌಢ ಶಾಲೆಗಳ ಪಟ್ಟಿ: ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆ, ಹೆಮ್ಮಾಡಿ ಜನತಾ ಪ್ರೌಢಶಾಲೆ, ನಾಡ ಗ್ರಗರಿ ಪ್ರೌಢಶಾಲೆ, ಕೊಲ್ಲೂರಿನ ಶ್ರೀ ಮೂಕಾಂಬಿಕಾ ಟೆಂಪಲ್ ಪ್ರೌಢಶಾಲೆ, ಮುದೂರಿನ ಭಾರತ್ ಮಾತಾ ಪ್ರೌಢಶಾಲೆ. ಅನುದಾನಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಪಟ್ಟಿ: ಮೈಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿ ಪ್ರಾ ಶಾಲೆ, ಮುದೂರು ಶ್ರೀ ಮಾತಾ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆಯ ಸೇಂಟ್ಅಂತೋನಿ ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೆ ಅಂಗಡಿಯ ಸೇಂಟ್ಅಂತೋನಿ ಕಿರಿಯ ಪ್ರಾಥಮಿಕ ಶಾಲೆ, ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ, ಮೂಡಮುಂದ ಶಾರದ ಹಿರಿಯ ಪ್ರಾಥಮಿಕ ಶಾಲೆ, ಪಡುವರಿಯ ಹೋಲಿಕ್ರಾಸ್ ಹಿರಿಯ ಪ್ರಾಥಮಿಕ ಶಾಲೆ, ತ್ರಾಸಿಯ ಕಲ್ಲಾನಿ ಹಿರಿಯ ಪ್ರಾಥಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಜೂನ್ 19: ಜಿಲ್ಲೆಯಲ್ಲಿ ತೌಖ್ತೆ ಚಂಡಮಾರುತದಿಂದ ಸಮುದ್ರ ಕೊರೆತ ಉಂಟಾಗಿ ಹಾನಿಗೊಳಗಾದ ಬೈಂದೂರು ತಾಲೂಕು ಮರವಂತೆಯ 1.5 ಕಿಮೀ ರಸ್ತೆಯ ಮರು ನಿರ್ಮಾಣಕ್ಕೆ ತಕ್ಷಣವೇ 3 ಕೋಟಿ ರೂ ಗಳನ್ನು ಬಿಡುಗಡೆಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾ ದಿಂದ ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು, ಸಂಬಂಧಿಸಿದ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ತೌಖ್ತೆ ಚಂಡಮಾರುತ ಸಂದರ್ಭದಲ್ಲಿ ಮರವಂತೆಯಲ್ಲಿ 1.5 ಕಿಮೀ ರಸ್ತೆ ಹಾನಿಯಾದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯಮಂತ್ರಿಗಳ ಗಮನಕ್ಕೆ ತಂದರು, ಪ್ರಸ್ತುತ ಹಾಳಾಗಿರುವ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿದ್ದು, ರಸ್ತೆಯನ್ನು ಪುನರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳು ಲಾಕ್ಡೌನ್ ಸಡಿಲಿಕ್ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ…

Read More

ಆಟ ಪಾಠವೆಂದು ಓಡಾಡಿಕೊಂಡಿದ್ದ ಮಕ್ಕಳು ಈಗ ಟಿವಿ ಮುಂದೆ ಕುಳಿತು, ಹಾಳುಮೂಳು ತಿಂದು ಮೈತೂಕ ಹೆಚ್ಚಿಸಿಕೊಳ್ಳುತ್ತಿರುವುದು ಸಾಮಾನ್ಯ ಆಗಿಬಿಟ್ಟಿದೆ. ಮನೆಯಲ್ಲೇ ಕುಳಿತು ಉಣ್ಣುವುದು ತಿನ್ನುವುದು, ಸಾಕಷ್ಟು ವ್ಯಾಯಾಮ ಇಲ್ಲದಿರುವುದರಿಂದ ಉಂಟಾಗುವ ಮಕ್ಕಳ ಬೊಜ್ಜು ಅತ್ಯಂತ ಹಾನಿಕರ. ಇಂಥ ಅನಗತ್ಯ ಬೊಜ್ಜಿನಿಂದ ಟೈಪ್ 2 ಡಯಾಬಿಟೀಸ್ ಬರುವ ಸಾಧ್ಯತೆ ಇದೆ. ಹಾಗಾಗಿ ಬೊಚ್ಚು ಬಾರದಂತೆ ತಡೆಯಲು ಕೆಲವೊಂದು ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳುವಂತೆ ಮಾಡುವುದು ಅಗತ್ಯ. ಆಟ-ವ್ಯಾಯಾಮ ದಿನವೂ ಇರಲಿ: ಮಗು ದಿನದಲ್ಲಿ ಕನಿಷ್ಠ ಎರಡು ಗಂಟೆ ಆಡಲಿ, ನಡೆದಾಡಲಿ, ಓಡಲಿ, ವ್ಯಾಯಾಮ ಮಾಡಲಿ. ಸುರಕ್ಷಿತವೆನಿಸಿದರೆ ಪಾರ್ಕಿಗೆ ಕರೆದೊಯ್ದು ನಡೆದಾಡಿಸಿ. ಇಲ್ಲವಾದರೆ ಮನೆಯಲ್ಲೇ ಸ್ಕಿಪ್ಪಿಂಗ್, ಜಾಗಿಂಗ್, ಜಂಪಿಂಗ್ ಮಾಡಲಿ, ನೂರು ಬಾರಿ ಮೆಟ್ಟಿಲು ಹತ್ತಿ ಇಳಿಯುವುದು ಮಾಡಲಿ. ರಾತ್ರಿಯ ಹೊತ್ತಿಗೆ ಮಗು ಸಾಕಷ್ಟು ದಣಿಯಲಿ. ಅಂದರೆ ನಿದ್ರೆ ಚೆನ್ನಾಗಿ ಬರುತ್ತದೆ. ಆಟಕ್ಕೆ ಟೈಮ್‌ಟೇಬಲ್ ನಿಗದಿಪಡಿಸಿ, ಅದನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಿ. ನಿದ್ರೆ ಸಾಕಷ್ಟಿರಲಿ: 3ರಿಂಧ 5 ವರ್ಷದ ಮಕ್ಕಳು ದಿನದಲ್ಲಿ ಕನಿಷ್ಠ 10 ಗಂಟೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸಮಾಜ ಕಲ್ಯಾಣ ಇಲಾಖೆಯು 2021/22ನೇ ಸಾಲಿನಲ್ಲಿ ಹಿರಿಯ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://www.sw.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಆಗಸ್ಟ್ 14ರವರೆಗೆ ಅವಧಿ ವಿಸ್ತರಿಸಲಾಗಿದೆ. ಇಲಾಖೆಯು ಹೊರಡಿಸಿರುವ ನಿಭಂದನೆಗಳಿಗೆ ಒಳಪಟ್ಟು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ , ರಜತಾದ್ರಿ, ಮಣಿಪಾಲ. ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಮಳೆಗಾಲದಲ್ಲಿ ಹರಡುವು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 103 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ, ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, , ಡೆಂಗ್ಯೂ ಹೆಚ್ಚಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ನಿಯಂತ್ರಣಾ ಮತ್ತು ನಾಶ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 188 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 90, ಕುಂದಾಪುರ, ಬೈಂದೂರು ತಾಲೂಕಿನ 47, ಕಾರ್ಕಳ, ಹೆಬ್ರಿ ತಾಲೂಕಿನ 47 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 188 ಪ್ರಕರಣಗಳಲ್ಲಿ 14 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 174 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 71 ವರ್ಷದ ವೃದ್ಧೆ, 70 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 73 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 330 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2167 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3473 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2877 ಮಂದಿಗೆ ಮೊದಲನೇ ಡೋಸ್, 531 ಮಂದಿಗೆ ಎರಡನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ(ಸಿವಿಲ್) ಆಗಿ ಪವನ್ ನಾಯಕ್ ಅವರು ಗುರುವಾರ ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳದಲ್ಲಿ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಇದೀಗ ಬೈಂದೂರು ಠಾಣೆಯಲ್ಲಿ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೈಂದೂರು ಪಿಎಸ್ಐ ಆಗಿದ್ದ ಸಂಗೀತಾ ಅವರನ್ನು ಉತ್ತರ ಕನ್ನಡದ ಅಂಬಿಕಾ ನಗರ ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಧರ್ಮಸ್ಥಳದಲ್ಲಿ ಪಿಎಸ್ಐ ಆಗಿದ್ದ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಜೂ.18: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಲಾಕ್ ಡೌನ್ ಜಾರಿ ಮಾಡಿ ಜೂ.12 ರಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ. ಅದರಂತೆ ಶುಕ್ರವಾರ (ಜೂ.18) ರಾತ್ರಿ 7.00 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಗ್ಯ ತುರ್ತು ಸಂದರ್ಭದಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು…

Read More

ಚೆನ್ನಾಗಿ ಕಾಣಬೇಕೆಂದು ಅಂದುಕೊಳ್ಳುವುದು ಸಹಜ. ನಮ್ಮ ದೇಹದ ಸದೃಢತೆಗಾಗಿ ನಮ್ಮ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡಿಕೊಳ್ಳಲು ನಾವು ಹೇಗೆ ಕಷ್ಟ ಪಡುತ್ತವೆಯೋ ಅದೇ ರೀತಿ ನಮ್ಮ ಸೌಂದರ್ಯ ರಕ್ಷಣೆಗೆ ಹಲವು ವಿಧಾನಗಳಲ್ಲಿ ನಾವು ಪ್ರಯತ್ನ ಪಡುತ್ತೇವೆ. ನಮ್ಮ ತ್ವಚೆಯ ಹೊಳಪನ್ನು ಈ ಕೆಳಗಿನ ಹಲವಾರು ಆರೋಗ್ಯಕರ ನೈಸರ್ಗಿಕವಾದ ಆಹಾರಗಳನ್ನು ಸೇವನೆ ಮಾಡುವುದರಿಂದ ರಕ್ಷಣೆ ಮಾಡಿಕೊಳ್ಳಬಹುದು. ಅವಕ್ಯಾಡೊ (ಬೆಣ್ಣೆ ಹಣ್ಣು): ಅವಕ್ಯಾಡೊ ಹಣ್ಣುಗಳಲ್ಲಿ ಮನುಷ್ಯನ ದೇಹಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಕೊಬ್ಬಿನ ಅಂಶಗಳು ಸಿಗುತ್ತವೆ. ಇವು ನಮ್ಮ ತ್ವಚೆಯನ್ನು ಒಳಗಿನಿಂದಲೇ ಮಾಯಿಶ್ಚರೈಸರ್ ಮಾಡುತ್ತವೆ. ಅವಕ್ಯಾಡೊಗಳಲ್ಲಿ ಕಂಡು ಬರುವ ಹೆಚ್ಚಿನ ಪ್ರಮಾಣದ ಫ್ಯಾಟಿ ಆಸಿಡ್ ಅಂಶಗಳು, ಪ್ರೋಟೀನ್ ಅಂಶಗಳು, ಮತ್ತು ವಿಟಮಿನ್ ‘ ಎ ‘, ವಿಟಮಿನ್ ‘ ಡಿ ‘, ವಿಟಮಿನ್ ‘ ಇ ‘ ಜೀವ ಸತ್ವಗಳು ದೇಹದಲ್ಲಿ ಕೊಲಾಜೆನ್ ಅಂಶವನ್ನು ಉತ್ಪತ್ತಿ ಮಾಡಲು ಸಹಾಯ ಮಾಡುತ್ತವೆ. ದೇಹದ ಮೇಲ್ಭಾಗದಲ್ಲಿ ಅಂದರೆ ಚರ್ಮದ ಯಾವುದೇ ಭಾಗದಲ್ಲಿ ಕಂಡು ಬರುವ ಸುಕ್ಕುಗಳು, ಸಣ್ಣ ಸಣ್ಣ…

Read More