Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ / ಸಲ್ಲಿಸಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ಮಣಿಪಾಲ ಆಥವಾ ಇಲಾಖಾ ವೆಬ್ ಸೈಟ್ www.dwdsc.kar,nic.in ನಿಂದ ಪಡೆದು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574810/811 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 47 ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ ಸುಂದರವಾಗಿ ಪ್ರಸ್ತುತಪಡಿಸಿ ಜನಮನವನ್ನು ಸೆಳೆದರು. ತವಿಲ್ ನಲ್ಲಿ ಹರ್ಷವರ್ಧನ ಖಾರ್ವಿ, ತಬಲಾದಲ್ಲಿ ಸುಧೀಂದ್ರ ಆಚಾರ್ಯ ವಂಡ್ಸೆ, ಗೆಜ್ಜೆಯಲ್ಲಿ ಅಭಿಷೇಕ್ ಪೂಜಾರಿ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು. ಪ್ರಧಾನ ಪುರೋಹಿತರಾದ ಜಿ. ರಾಘವೇಂದ್ರ ನಾರಾಯಣ ಆಚಾರ್ಯು ಉಪಸ್ಥಿತರಿದ್ದರು. ಸರಸ್ವತಿ ವಿದ್ಯಾಲಯದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಶಾರದ ಮಹೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ. ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಿದ್ದು, ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್‌ಗಳ ಅಧ್ಯಯನ, ಪರೀಕ್ಷಾ ಸಿದ್ಧತೆ ಹಾಗೂ ಅದಕ್ಕಿರುವ ವಿಪುಲ ಉದ್ಯೋಗವಕಾಶಗಳ ಕುರಿತು ಚಾರ್ಟೆಡ್ ಅಕೌಂಟೆಂಟ್ ಗುರುರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಕುಮಾರ್ ಆರ್ ವಹಿಸಿದ್ದು, ಪದವಿ ಕಾಲೇಜಿನ ಮುಖ್ಯಸ್ಥರಾದ ಸತೀಶ್ ನಾಗದ್ದೆ ಪ್ರಾಸ್ತವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಅಶ್ರಿತಾ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಆಳ್ವಾಸ್ ಐ ಕೇರ್ ಯುನಿಟ್‌’ಗೆ ಅಧಿಕೃತ ಚಾಲನೆ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ರಿಬ್ಬನ್ ಕತ್ತರಿಸಿ ಕನ್ನಡಕ ವಿತರಿಸುವ ಮೂಲಕ ಉದ್ಘಾಟಿಸಿದರು. ಬೆಳಿಗ್ಗೆ 6ರಿಂದ ಸಂಜೆ 5ರ ವರೆಗೆ ಗ್ಲೌಕೋಮ ಚೆಕ್ ಅಪ್, ರೆಟಿನಾ ಇವಾಲ್ಯುಯೇಷನ್, ಡ್ರೈ ಐ ಇವಾಲ್ಯುಯೇಷನ್ ಸೇರಿದಂತೆ ಇತರ ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆಗಳ ಸೌಲಭ್ಯ ಇರಲಿದೆ. ವಿವಿಧ ರೀತಿಯ ಕನ್ನಡಕಗಳ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಟ್ರಸ್ಟಿ ಡಾ. ಹನಾ ಶೆಟ್ಟಿ, ಪ್ರಾಂಶುಪಾಲ ಡಾ. ಸಜಿತ್ ಎಂ., ಡಾ. ವಿಶಾಕ್, ಡಾ. ಅಪೇಕ್ಷ ರಾವ್, ಆಳ್ವಾಸ್ ನಿರಾಮಯದ ನಿರ್ದೇಶಕಿ ಡಾ. ಸುರೇಖಾ ಪೈ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾನು ಎನ್ನುವುದು ಅಹಂಕಾರದ ಸಂಕೇತ. ಮುಖ್ಯವಾಗಿ ಸಂಘಟನೆಗೆ ಅದು ಮಾರಕ ಮತ್ತು ವರ್ಜ್ಯವಾಗಿ ನಾವು ಎಂಬ ಪದ ಬಳಕೆಯಲ್ಲಿರಬೇಕು ಎಂದು ಬಾರಕೂರಿನ ಏಕನಾಥೇಶ್ವರಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಅಣ್ಣಯ್ಯ ಶೇರಿಗಾರ್ ಹೇಳಿದರು. ಮರವಂತೆ ದೇವಾಡಿಗ ಸಂಘದ ಆಶ್ರಯದಲ್ಲಿ ಇಲ್ಲಿನ ನೀರೋಣಿ ಮಾರಿಕಾಂಬಾ ದೇವಸ್ಥಾನದಲ್ಲಿ ನಡೆದ ಪುಸ್ತಕ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ದೇವಾಡಿಗ ಸಮುದಾಯವು ಸಮಾಜದ ಪ್ರಧಾನ ವಾಹಿನಿಗೆ ಬರಬೇಕಾದರೆ ಅದರ ಎಲ್ಲ ಮಕ್ಕಳು ಶಿಕ್ಷಣ ಪಡೆಯಬೇಕು. ಅದಕ್ಕೆ ಸೂಕ್ತ ಪ್ರೋತ್ಸಾಹ, ನೆರವು ನೀಡುವ ಹೊಣೆಯನ್ನು ಸಂಘಟನೆ ವಹಿಸಿಕೊಳ್ಳಬೇಕು ಎಂದು ಹೇಳಿದರು. ಅರಣ್ಯ ಇಲಾಖೆಯ ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕ ರಘುರಾಮ ದೇವಾಡಿಗ ಆಲೂರು ಕಾರ್ಯಕ್ರಮ ಉದ್ಘಾಟಿಸಿದರು. ಕೋಶಾಧಿಕಾರಿ ಹರೀಶ ದೇವಾಡಿಗ ಸ್ವಾಗತಿಸಿದರು. ಗೌರವಾಧ್ಯಕ್ಷ ನಾರಾಯಣ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಧರ್ ದೇವಾಡಿಗ ವಂದಿಸಿದರು. ಗೋಪಾಲ ದೇವಾಡಿಗ ನಿರೂಪಿಸಿದರು. ಸಮುದಾಯದ ಎಲ್ಲ ವಿದ್ಯಾರ್ಥಿಳಿಗೆ ನೋಟ್ ಪುಸ್ತಕ, ಪ್ರತಿಭಾನ್ವಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ, ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ ನೀಡಲು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡ ಮುಂದಾಗಿದೆ. ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡದ ಪ್ರಮುಖರು ಹಾಗೂ ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮಂಗಳವಾರ ಮೀನು ಖರೀದಿಸಿ ಮಹಿಳಾ ಮೀನುಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರಾಮದ ಹಿಂದು ಸಮಾಜದವರು ಗಂಗೊಳ್ಳಿಗೆ ಬಂದು ಮೀನು ಖರೀದಿಸುವ ಕಾರ್ಯ ಮಾಡಲಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ಮೀನುಗಾರರು ಎದೆಗುಂದಬಾರದು ಎಂದು ಮಹಿಳೆಯರಲ್ಲಿ ವಿಶ್ವಾಸ ತುಂಬಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್‌ನ ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಗಂಗೊಳ್ಳಿಯಲ್ಲಿ ನಡೆದಿರುವ ವಿದ್ಯಮಾನದ ಬಳಿಕ ಅನ್ಯಕೋಮಿನವರು ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ…

Read More

ಕುಂದಾಪರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ ಶುಭಾಶಯ ಕೋರಿ ಸರ್ವರಿಗೂ ಶಾರದಾದೇವಿಯು ಆಯುರಾರೋಗ್ಯ ನೀಡಿ ಕಾಪಾಡಲಿ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕ ಮಹೇಶ್ ನಾಯ್ಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವ ಅರಗಾ ಜ್ಞಾನೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವಳದ ಪ್ರಧಾನ ಅರ್ಚಕ ಶ್ರೀಧರ್ ಅಡಿಗ ಅವರ ನೇತ್ರತ್ವದಲ್ಲಿ ದೇವಳದ ವಿಶೇಷ ಪೂಜೆ ಚಂಡಿಕಾ ಹೋಮದಲ್ಲಿ ಭಾಗಿಯಾದರು. ದೇವಳದ ಆಡಳಿತ ಮಂಡಳಿಯಿಂದ ಸಚಿವರನ್ನು ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಹೋತ್ಸವದ 47ನೇ ವರ್ಷದ ಸಮಾರಂಭ ಆರಂಭಗೊಂಡಿತು. ಬೆಳಿಗ್ಗೆ ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಶ್ರೀ ಶಾರದಾ ವಿಗ್ರಹವನ್ನು ಮೆರವಣಿಗೆಯಲ್ಲಿ ತಂದು ಶ್ರೀ ಶಾರದಾ ಮಂಟಪದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಸತೀಶ ಜಿ., ಗೌರವಾಧ್ಯಕ್ಷ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ಎನ್.ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಮಹಿಳಾ ಮಂಡಳಿ ಪದಾಧಿಕಾರಿಗಳು, ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಿ-ಮೆಟ್ರಿಕ್( 9 ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಮತ್ತು ಪೋಸ್ಟ್-ಮೆಟ್ರಿಕ್( ಪಿಯುಸಿ ಯಿಂದ ಸ್ನಾತಕೋತ್ತರ ಪದವಿ) ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ವಿಕಲಚೇತನ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ http://disabilityaffairs.gov.in/content/ ಅಥವಾ http://www.scholarship.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ದೂ.ಸಂ. 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Read More