ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ವಿಭಾಗ ಸಹಾಯಕ ಆಯುಕ್ತ ಟಿ. ಭೂಬಾಲನ್ ಅವರು ತಾಲೂಕಿನ ವಕ್ವಾಡಿ ಹಾಗೂ ಹಕ್ಲಾಡಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಪಾಠ ಬೋಧಿಸಿದರು. ಪಾಠ ಮಾಡುತ್ತಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ದೇಶದಲ್ಲಿ ಶೇ.26ರಷ್ಟು ಅನಕ್ಷರತೆ ಇದೆ. ಆದರೆ ದ.ಕ., ಉಡುಪಿಯಲ್ಲಿ ಎಲ್ಲರೂ ಸಾಕ್ಷರರಾಗಿದ್ದಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಈ ಮೂಲಕ ಸಾಮರಸ್ಯದ ಬದುಕು, ಪ್ರಾದೇಶಿಕ ಅಸಮತೋಲನ, ಭ್ರಷ್ಟಾಚಾರ, ಕೋಮು ಸಾಮರಸ್ಯದ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂದು ಕುಂದಾಪುರ ವಿಭಾಗ ಸಹಾಯಕ ಆಯುಕ್ತ ಟಿ. ಭೂಬಾಲನ್ ಹೇಳಿದರು. ದೇಶದ ಒಗ್ಗಟ್ಟು ಒಡೆದು ಆಳುವ ಡಿವೈಡಿಂಗ್ ಪಾಲಿಸಿ ಬ್ರಿಟಿಷರ ಕೊಡುಗೆ. ಅದನ್ನೆ ಇಂದು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಭಾಷೆಗಳ ನಡುವಿನ ಕಿತ್ತಾಟ, ಪ್ರಾದೇಶಿಕ ಅಸಮಾನತೆ, ಭ್ರಷ್ಟಾಚಾರ, ಅನಕ್ಷರತೆಗಳು ದೇಶದ ಅಭಿವೃದ್ಧಿಗೆ ತೊಡಕಾಗಿವೆ ಎಂದರು. ಹಕ್ಲಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಡಾ| ಕಿಶೋರ್ ಕುಮಾರ್ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿದ್ದ ಸಾಸ್ತಾನ ಕೋಡಿ ಕನ್ಯಾಣದ ನಿವಾಸಿ ಸಂತೋಷ ಕುಂದರ್ (29) ಶವವನ್ನು ದೂರು ನೀಡಿದ್ದ ಯುವತಿ ಮನೆ ಮುಂದಿರಿಸಿ ಪ್ರತಿಭಟಿಸಿದ ಘಟನೆ ರವಿವಾರ ನಡೆದಿದೆ. ಯುವತಿ ನೀಡಿದ ದೂರಿನಲ್ಲಿ ಯಾವುದೇ ಸತ್ಯಾಂಶವಿರಲಿಲ್ಲ. ಹೀಗಾಗಿ ಆತ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಯುವತಿ ಮನೆ ಎದುರು ಪ್ರತಿಭಟನೆ ನಡೆಸಿದರು. ಮೇ 2ರಿಂದ ನಾಪತ್ತೆಯಾಗಿದ್ದ ಸಂತೋಷ್ ವಿರುದ್ಧ ಸ್ಥಳೀಯ ಯುವತಿಯೋರ್ವಳು ಮೇ 2ರಂದು ಕೋಟ ಪೊಲೀಸ್ ಠಾಣೆಗೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದು, ಅಂದಿನಿಂದ ಆತ ಕಾಣೆಯಾಗಿದ್ದ. ಶನಿವಾರ ಆತ ಕಡೂರು ಬೀರೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಸಂತೋಷ ಕುಂದರ್ ಉತ್ತಮ ನಡತೆಯ ಯುವಕನಾಗಿದ್ದ. ಯುವತಿ ಆತನ ವಿರುದ್ಧ ದುರುದ್ದೇಶದಿಂದ ಈ ದೂರು ದಾಖಲಿಸಿದ್ದಾಳೆ. ತಪ್ಪು ಮಾಡದೆ ಶಿಕ್ಷೆ ಅನುಭವಿಸಬೇಕಾಯಿತು ಎನ್ನುವ ಬೇಸರದಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಹೆದ್ದಾರಿ ಬದಿಯಲ್ಲಿದ್ದು, ಕಳೆದ ವರ್ಷ ಕೊಡೇರಿ ರಸ್ತೆಯ ಕಟ್ಟಡಕ್ಕೆ ಸ್ಥಳಾಂತರಗೊಂಡು ಅಲ್ಲಿನ ನಿವಾಸಿಗಳ ತೀವ್ರ ವಿರೋಧ ಮತ್ತು ಕಾನೂನು ಹೋರಾಟದ ವಸ್ತುವಾದ ಬಾರ್ ಎಂಡ್ ರೆಸ್ಟೊರಂಟ್ ಪ್ರಕರಣದಲ್ಲಿ ಇದೀಗ ಜಿಲ್ಲಾಧಿಕಾರಿಗಳ ನ್ಯಾಯಾಲಯ ಜನರಪರ ತೀರ್ಪು ನೀಡಿದೆ. ಹೆದ್ದಾರಿ ಬದಿಯ ಬಾರ್ಗಳನ್ನು ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ನೀಡಿದ ನಿರ್ದೇಶದನ್ವಯ ಈ ಬಾರನ್ನು ಸ್ಥಳಾಂತರಿಸಲು ಅವಕಾಶ ನೀಡಲಾಗಿತ್ತು. ಅದಕ್ಕೆ ಸ್ಥಳೀಯರಿಂದ ಪ್ರಬಲ ಪ್ರತಿರೋಧ ವ್ಯಕ್ತವಾಗಿತ್ತು. ಅದನ್ನು ಪರಿಗಣಿಸದೆ ಅಧಿಕಾರಿಗಳು ನೀಡಿದ ಅನುಮತಿಯ ವಿರುದ್ಧ ಜಿಲ್ಲಾ ಉಪ ಅಬಕಾರಿ ಆಯುಕ್ತರಿಗೆ, ಆ ಬಳಿಕ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಇವು ತಿರಸ್ಕೃತವಾದ ಹಿನ್ನೆಲೆಯಲ್ಲಿ ಬಾರ್ ಸ್ಥಳಾಂತರಗೊಂಡು, ವ್ಯವಹಾರ ಆರಂಭಿಸಿತ್ತು. ಇದರಿಂದ ನೊಂದ ಗಿರಿಜಾ ರಾಜೇಶ್ ಮತ್ತು ೪೧ ಜನರು ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯವು ’ಮೇಲ್ಮನವಿದಾರರ ಕೋರಿಕೆಯನ್ನು ಮಾನ್ಯ ಮಾಡುವುದಕ್ಕೆ ಯಾವುದೇ ಕಾನೂನಾತ್ಮಕ ತೊಡಕು ಇಲ್ಲವಾದ್ದರಿಂದ ಪ್ರಕರಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗಲ್ಫ್ ರಾಷ್ಟ್ರ ಕತಾರ್ನ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಶನ್ (ಕೆಎಂಸಿಎ)ನ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇತ್ತಿಚೆಗೆ ಸಂಘದ ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಇಬ್ರೈಜ್ ಖಾನ್, ಉಪಾಧ್ಯಕ್ಷರಾಗಿ ಇಕ್ಬಾಲ್ ಮನ್ನಾ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಅಹ್ಮದ್, ಜೊತೆ ಕಾರ್ಯದರ್ಶಿಯಾಗಿ ಝಾಕೀರ್ ಅಹ್ಮದ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಅಬೂಬಕರ್, ಕ್ರೀಡಾ ಕಾರ್ಯದರ್ಶಿಯಾಗಿ ಶಕೀಲ್ ಅಹ್ಮದ್, ಸಲಹೆಗಾರರಾಗಿ ಅಬ್ದುಲ್ಲಾ ಮೋನು ಮೊಯ್ದಿನ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಫಯಾಜ್ ಅಹ್ಮದ್ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಿರೂರು ರಾಗತರಂಗ ಟ್ರಸ್ಟ್ ನೂತನವಾಗಿ ಆರಂಭಿಸಿದ ರಾಗತರಂಗ ಸೇವಾಸಂಗಮ ಶಿಶುಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದಜೀ ಮಕ್ಕಳಿಗೆ ಬಾಲ್ಯದಲ್ಲಿ ಭಾರತೀಯ ಸಂಸ್ಕೃತಿ ಆಧಾರಿತ ಹಾಗೂ ನೈತಿಕ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಪೋಷಕರು ಸಹಕರಿಸಬೇಕು. ಗುರುಹಿರಿಯರನ್ನು ಗೌರವಿಸುವ ಪ್ರವೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು. ಬಾಲ್ಯದಲ್ಲಿ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ ಮಕ್ಕಳು ದಾರಿ ತಪ್ಪದಂತೆ ಎಚ್ಚರವಹಿಸಿ ಜತೆಗೆ ಮಕ್ಕಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಂತಹ ಮಹತ್ಕಾರ್ಯವನ್ನು ಶಿಶು ಮಂದಿರಗಳು ನಿಸ್ವಾರ್ಥತೆಯಿಂದ ಮಾಡುತ್ತಿದೆ. ಸದಾ ಕ್ರಿಯಾಶೀಲವಾಗಿ ತನ್ನ ಚಟುವಟಿಕೆಗಳನ್ನು ನಡೆಸುತ್ತಾ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಶಿಶು ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಾತಾಜಿಯವರ ಸೇವೆ ಮತ್ತು ತ್ಯಾಗ ಹಾಗೂ ಶಿಶುಮಂದಿರದ ಕಾರ್ಯ ಅವಿಸ್ಮರಣೀಯ ಎಂದು ಸ್ವಾಮೀಜಿ ಶ್ಲಾಘಿಸಿದರು. ಕುಂದಾಪುರ ಸೇವಾಸಂಗಮ ಟ್ರಸ್ಟ್ನ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ಚಂದ್ರಿಕಾ ಧನ್ಯ, ಗೋಪಾಲಕೃಷ್ಣ ಶಿರೂರು, ಕಟ್ಟಡ ಮಾಲೀಕ ರಮೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜಪಾನ್ನ ಗಿಫುನಲ್ಲಿ ಜೂನ್ 6ರಿಂದ 10ರವರೆಗೆ ನಡೆಯಲಿರುವ 18ನೇ ಏಷ್ಯನ್ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 5 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಪದಕದ ಸಾಧನೆಯನ್ನು ಮಾಡಿದ್ದು, ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿರುತ್ತಾರೆ. 100 ಮೀ.ನಲ್ಲಿ ಪ್ರಜ್ವಲ್ ಮಂದಣ್ಣ, ಶಾಟ್ಪುಟ್ನಲ್ಲಿ ಆಶಿಷ್, 400 ಮೀ.ನಲ್ಲಿ ಶುಭ ವಿ, ಶಾಟ್ಪುಟ್ನಲ್ಲಿ ಅನಾಮಿಕ ಹಾಗೂ ಎತ್ತರಜಿಗಿತದಲ್ಲಿ ಅಭಿನಯ ಶೆಟ್ಟಿ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾಪಟುಗಳ ಸಾಧನೆಗೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: 2018ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಗರಿಷ್ಠ ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ಅತ್ಯುನ್ನತ ಸಾಧನೆ ಮಾಡಿದೆ. ಇಂಜಿನಿಯರಿಂಗ್, ಬಿ.ಎಸ್ ಅಗ್ರಕಲ್ಚರ್, ವಟರ್ನರಿ ಸೈನ್ಸ್, ಬಿ.ಫಾರ್ಮ, ಡಿ.ಫಾರ್ಮ, ಬಿ.ಎಸ್ ಅಗ್ರಿಕಲ್ಚರ್ ಪ್ರಾಕ್ಟಿಕಲ್, ವೆಟರರ್ನರಿ ಸೈನ್ಸ್ ಪ್ರಾಕ್ಟಿಕಲ್ ವಿಷಯಗಳನ್ನು ಸೇರಿ 1ರಿಂದ 100 ಒಳಗಡೆ 99 ರ್ಯಾಂಕ್, 200 ಒಳಗಡೆ 224, 300 ಒಳಗಡೆ 312 ರ್ಯಾಂಕ್, 400 ಒಳಗಡೆ 412 ರ್ಯಾಂಕ್, 500 ಒಳಗಡೆ 498 ರ್ಯಾಂಕ್ ಗಳಿಸಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಶಶಾಂಕ್ ಡಿ. 12ನೇ ರ್ಯಾಂಕ್, ಕಾರ್ತಿಕ್ ಎಸ್.ಮರಾಠೆ 59ನೇ ರ್ಯಾಂಕ್, ಬಿ.ಎಸ್ ಅಗ್ರಿಕಲ್ಚರ್(ಪ್ರಾಕ್ಟಿಕಲ್)- ಮೆಲಿಶಾ ರೊಡ್ರಿಗಸ್ 2ನೇ ರ್ಯಾಂಕ್, ಹಲ್ಲೆಪ್ಪ ಗೌಡ 10ನೇ ರ್ಯಾಂಕ್, ವಟರ್ನರಿ ಸೈನ್ಸ್(ಪ್ರಾಕ್ಟಿಕಲ್) ದರ್ಶನ್ 4ನೇ ರ್ಯಾಂಕ್, ಬಿಎಸ್ ಅಗ್ರಿಕಲ್ಚರ್ನಲ್ಲಿ ಸೌರವ್ ಪಪತಿ 7ನೇ ಹಾಗೂ ಪ್ರಸನ್ನ ಭಟ್ 10ನೇ ರ್ಯಾಂಕ್ ಪಡೆದಿದ್ದಾರೆ. ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪುರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾರ್ವಿಕೇರಿ ವಾರ್ಡಿನಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಯಿತು. ಪುರಸಭಾ ಅಧ್ಯಕ್ಷರಾದ ವಸಂತಿ ಮೋಹನ್ ಸಾರಂಗ, ಉಪಾಧ್ಯಕ್ಷರಾದ ರಾಜೇಶ್ ಕಾವೇರಿ, ಪುರಸಭಾ ಮುಖ್ಯಾಧಿಕಾರಿಯಾದ ಶ್ರೀಮತಿ ವಾಣಿ ವಿ. ಆಳ್ವ, ಹಿರಿಯ ಆರೋಗ್ಯ ನಿರೀಕ್ಷಕರಾದ ಶರತ್ ಎಸ್ ಖಾರ್ವಿ, ಕಿರಿಯ ಆರೋಗ್ಯ ನಿರೀಕ್ಷಕರಾದ ರಾಘವೇಂದ್ರ ಮಂಜುನಾಥ ನಾಯ್ಕ, ಪೌರಕಾರ್ಮಿಕರು ಮತ್ತು ಸದ್ರಿ ವಾರ್ಡಿನ ಸಾರ್ವಜನಿಕರು ಭಾಗವಹಿಸಿ ಉತ್ತಮ ಪ್ರತಿಕ್ರಿಯೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸರತಿಯಲ್ಲಿ ಮಳೆ ಹಾಗೂ ಬಿಸಿಲಿನ ತಾಪದ ಅನುಭವವಾಗದಂತೆ ಹೊರ ಪೌಳಿಯಲ್ಲಿ ಸರತಿ ಸಾಲಿನ ನೆರಳಿಗೆ ’ಗಾಲ್ವ ನೂಮ್ ಶೀಟ್’ನ ಚಪ್ಪರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಭಕ್ತರ ಆಶ್ರಯಕ್ಕೆ ಸಮರ್ಪಣೆಯಾಗಿದೆ. ತಮಿಳುನಾಡಿನ ಭಕ್ತರೋರ್ವರ ಕಾಣಿಕೆಯ ಅನುದಾನದೊಡನೆ ಮಿಕ್ಕುಳಿದ ಹಣವನ್ನು ಕ್ರೋಢಿಕರಿಸಿ ರೂ. 11 ಲಕ್ಷ ವೆಚ್ಚದಲ್ಲಿ ’ಗಾಲ್ವ ಲೂಮ್ ಶೀಟ್’ನಿಂದ ಆಕರ್ಷಣೀಯ ನೆರಳಿನ ಚಪ್ಪರ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ದೇಶದ ನಾನಾ ಕಡೆಯಿಂದ ಆಗಮಿಸುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ದೇವಿ ದರ್ಶನಕ್ಕೆ ಗಂಟೆಗಟ್ಟಲೇ ಬಿಸಿಲು ಹಾಗೂ ಮಳೆಯಲ್ಲಿ ನಿಲ್ಲಬೇಕಾದ ಪ್ರಸಂಗವನ್ನು ಅರಿತ ಭಕ್ತರೋರ್ವರು ನೆರಳಿನ ಚಪ್ಪರದ ನಿರ್ಮಾಣಕ್ಕೆ ದೇಣಿಗೆ ನೀಡುವುದರ ಮೂಲಕ ಭಕ್ತರಿಗೆ ನೆರವಾಗಿರುತ್ತಾರೆ. ವರ್ಷಂಪ್ರತಿಯ ರಥೋತ್ಸವದ ಸಂದರ್ಭದಲ್ಲಿ ರಥ ಸಂಚಾರಕ್ಕೆ ನೆರಳಿನ ಚಪ್ಪರವನ್ನು ತೆಗೆಯುವ ಅನಿವಾರ್ಯತೆ ಇರುವುದರಿಂದ ಅದಕ್ಕೆ ಪೂರಕವಾದ ವ್ಯವಸ್ಥೆಯನ್ನು ’ಗಾಲ್ವ ಲೂಮ್ ಶೀಟ್’ ನಲ್ಲಿ ಅಳವಡಿಸಲಾಗಿದ್ದು ಯಾವುದೇ ಕ್ಷಣದಲ್ಲಿ ಅದನ್ನು ಬೇರ್ಪಡಿಸುವ ವ್ಯವಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪುರಸಭಾ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ವಸಂತಿ ಮೋಹನ್ ಸಾರಂಗ ಅಧ್ಯಕ್ಷತೆಯಲ್ಲಿ ಮಾಸಿಕ ಸಾಮಾನ್ಯ ಸಭೆ ಜರುಗಿತು. ಈ ಸಭೆಯನ್ನು ಉದ್ದೇಶಿಸಿ ಪುರಸಭಾ ಸದಸ್ಯೆ ಗುಣರತ್ನಾ ಅವರು ಮಾತನಾಡಿ ಪುರಸಭೆಯ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಅನುಮತಿ ನೀಡುವುದು ಪುರಸಭೆಯ ಆಡಳಿತದ ಜವಾಬ್ದಾರಿಯಾಗಿದ್ದು, ಆದರೆ ಇಲ್ಲಿ ಅವರ ಹೆಸರಲ್ಲಿ ಜಾಗವಿಲ್ಲದಿದ್ದರೂ, ಮನೆ ಕಟ್ಟಲು ಅನುಮತಿ ನೀಡಲಾಗಿದೆ. ಇಂತಹದ್ದೆ ಪ್ರಕರಣವೊಂದು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿದ್ದು, ಆದರೆ ಅವರಿಗೆ ಕಾನೂನು ಪ್ರಕಾರ ಲೈಸೆನ್ಸ್ ನೀಡಲಾಗಿಲ್ಲ. ಆದರೆ ಈಗ ಮತ್ತೂಂದು ಪ್ರಕರಣದಲ್ಲಿ ನೀಡಲಾಗಿದೆ. ಅದರಲ್ಲಿ ಮುಖ್ಯಾಧಿಕಾರಿ ಸಹಿ ಕೂಡ ಇದೆ ಎಂದು ತಿಳಿಸಿದರು. ಈ ವಿಷಯದ ಕುರಿತಂತೆ ಮಾತನಾಡಿದ ಮುಖ್ಯಾಧಿಕಾರಿ ವಾಣಿ ಬಿ. ಆಳ್ವ ಅವರು, ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎನ್ನುವ ಭರವಸೆ ನೀಡಿದರು. ಸಭೆಯಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಎಸ್ಐ ಸುದರ್ಶನ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಸ್ಥಳಾವಕಾಶ ಕಡಿಮೆಯಿದೆ ಎಂದಾಗ, ಮಧ್ಯಪ್ರವೇಶಿಸಿದ ಸದಸ್ಯರು, ಎಕ್ಸ್ಪ್ರೆಸ್…
