Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಶಾಲೆಗಳು ಸಮರ್ಪಕವಾಗಿ ಮುನ್ನಡೆಯಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಆರ್ಥಿಕವಾಗಿ ಪ್ರಬಲರಾದವರು ಗಳಿಸಿದ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವುರಿಂದ ಶಾಲೆ ಹಾಗೂ ಊರು ಅಭಿವೃದ್ಧಿ ಕಾಣಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಪೂರಕ ವಾತಾವರಣ ಕಲ್ಪಿಸಿಕೊಟ್ಟಿದೆ ಎಂದು ಉಪ್ಪುಂದ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅಭಿಪ್ರಾಯಪಟ್ಟರು. ಬಿಜೂರು ಗ್ರಾಮದ ಸಾಲಿಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟ್ರಸ್ಟ್ ವತಿಯಿಂದ ಸ್ಕೂಲ್‌ಬ್ಯಾಗ್ ಹಾಗೂ ನೋಟ್‌ಬುಕ್ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತರಿಸಲಾಯಿತು. ಸಿಆರ್‌ಪಿ ಸುಬ್ರಹ್ಮಣ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೀಜಾಡಿ ಸರ್ವೀಸ್ ರೋಡ್ ಕಾಮಗಾರಿ ವಿಳಂಬ ಧೋರಣೆ ಕುರಿತು ಹಲವು ದಿನಗಳಿಂದ ಹೋರಾಟ ಸಮಿತಿ ನೇತೃತ್ವದಲ್ಲಿ ಅನೇಕ ಸಭೆಗಳಾಗಿದ್ದವು. ಇದರ ದೂರಿನಂತೆ ಫೆ.2 ರಂದು ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನಿಸ್ಸ್ ನೇತೃತ್ವದ ನವಯುಗ ತಂಡ ಸ್ಥಳ ಪರಿಶೀಲನೆ ನಡೆಸಿ ಫೆ,೪ ರಂದು ಕಾಮಗಾರಿ ಕೃಗೊತ್ತಿಕೊಳ್ಳುವಂತೆ ಡಿಸಿಯವರು ಅದೇಶಿಸಿದ್ದರು. ಸೋಮವಾರ ಸಂಜೆ ಕುಂದಾಪುರ ಪ್ರಭಾರ ಎಸಿ ಅರುಣಾಪ್ರಭಾ ನೇತೃತ್ವದಲ್ಲಿ ಎನ್‌ಎಚ್‌ಐನ ಯೋಜನಾ ನೀರ್ದೇಶಕ ಸ್ಯಾಮ್ ಸಂಗ್ ವಿಜಯಕುಮಾರ್ ಮತ್ತು ನವಯುಗ ಚೀಪ್ ಪ್ರೋಜೆಕ್ಟ್ ಮೇನೆಜರ್ ಶಂಕರರಾವ್, ಎಂಜಿನಿಯರ್ ರಾಘವೇಂದ್ರ ಇವರನ್ನೋಳಗೊಂಡ ತಂಡ ಬೇಟಿ ನೀಡಿ ಬಾಕಿ ಉಳಿದ ಕಾಮಗಾರಿಗಳ ಬಗ್ಗೆ ಸರ್ವೆ ಕಾರ್ಯ ನಡೆಸಿ ಫೆ.೧೦ರಿಂದ ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ತಿಳಿಸಿದರು. ಎನ್‌ಎಚ್‌ಐನ ಯೋಜನಾ ನೀರ್ದೇಶಕರ ಮೇಲೆ ಸ್ಥಳೀಯರ ಅಕ್ರೋಶ: ರಾಷ್ಟ್ರೀಯ ಹೆದ್ದಾರಿ ಅರೆಬರೆ ಕಾಮಗಾರಿಯಿಂದ ಅಕ್ರೋಶಗೊಂಡ ಬೀಜಾಡಿ ಸರ್ವೀಸ್ ರೋಡ್ ಹೋರಾಟ ಸಮಿತಿ ಮುಖಂಡ ನಾರಾಯಣ ಬಂಗೇರ ಬೀಜಾಡಿ ಇವರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ,ಫೆ.3: ಮಣೂರಿನ ಚಿಕ್ಕನಕೆರೆಯಲ್ಲಿ ಜ. 26ರ ರಾತ್ರಿ ನಡೆದ ಅಮಾಯಕ ಯುವಕರಿಬ್ಬರ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕೋಟ ಬಸ್ ನಿಲ್ದಾಣ ಸಮೀಪದ ಸಂತೆ ಮಾರ್ಕೆಟ್ ಹತ್ತಿರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ವಿಪಕ್ಷ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಇದುವರೆಗೂ ನಾನು ಏನು ಮಾತನಾಡಿಲ್ಲ. ನನ್ನೂರ ಇಬ್ಬರು ಹುಡುಗರ ಕೊಲೆ ನಡೆದಿದ್ದು ಬಹಳಷ್ಟು ನೋವು ನೀಡಿದೆ. ಪೊಲೀಸ್ ತನಿಖೆಗೆ ತೊಂದರೆಯಾಗಬಾರದೆಂದು ಯಾವುದೇ ಹೇಳಿಕೆ ನೀಡದೆ ಸುಮ್ಮನಿದ್ದೇನೆ. ಹೀಗಿದ್ದರೂ ಪೊಲೀಸರು ಇದುವರೆಗೂ ಆರೋಪಿಗಳನ್ನು ಹಿಡಿದಿಲ್ಲ. ಫೆ.೬ರವರೆಗೆ ನಾನು ಮಾತನಾಡಲ್ಲ. ಅಷ್ಟರವರೆಗೆ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ನಾನು ಮುಖಮಂತ್ರಿಗಳಲ್ಲಿ ಈ ಬಗ್ಗೆ ಚರ್ಚಿಸಲಿದ್ದೇನೆ ಎಂದರು. ರಾಕೇಶ್ ಮಲ್ಲಿ ಮಾತನಾಡಿ ಯತೀಶ್ ನನ್ನೊಂದಿಗಿದ್ದ ಒಳ್ಳೆಯ ಹುಡುಗ. ಇಬ್ಬರು ಹುಡುಗರ ಕೊಲೆ ಖಂಡನೀಯವಾದುದು. ಪೊಲೀಸರು ಆರೋಪಿಗಳನ್ನು ತಕ್ಷಣ ಹಿಡಿಯಬೇಕು. ನಾನು ಸರಕಾರದ ಮಟ್ಟದಲ್ಲಿ ಮಾತನಾಡಲಿದ್ದೇನೆ ಎಂದರು. ನ್ಯಾಯವಾದಿ ಶ್ಯಾಮ ಸುಂದರ ನಾರಿ, ಸಾಸ್ತಾನ ಸಿ.ಎ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ಘಟಕದಿಂದ ಫೆ. 2 ರ ರಾಷ್ಟ್ರೀಯ ಭಾವೈಕ್ಯತಾ ದಿನದ ಅಂಗವಾಗಿ ಶಿರೂರು ಪರಿಸರದ ವಿವಿಧ ಶಾಲೆಗಳು ಹಾಗೂ ಸಂಘ ಸಂಸ್ಥೆಗಳಲ್ಲಿ ಭಾವೈಕ್ಯತೆಯ ಪ್ರಮಾಣ ವಚನ ಬೋಧಿಸಲಾಯಿತು. ಸುಮಾರು ೫೪ ಶಾಲೆಗಳು ಹಾಗು ೧೬ ಸಂಘಸಂಸ್ಥೆಗಳಲ್ಲಿ ಸುಮಾರು ೩೫೦೦೦ ಜನರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಪದಾಧಿಕಾರಿಗಳು ಹಾಗೂ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಬಿಜೂರು ಸಾಲಿಮಕ್ಕಿಯ ಚಂದ್ರ ದೇವಾಡಿಗ ತೇರ್ಗಡೆಯಾಗಿದ್ದಾರೆ. ಬಿಜೂರು ಸಾಲಿಮಕ್ಕಿಯವರಾದ ಚಂದ್ರ ದೇವಾಡಿಗ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿಮಕ್ಕಿ ಬಿಜೂರು, ಪ್ರೌಢ ಶಿಕ್ಷಣವನ್ನು ಸರಕಾರಿ ಜ್ಯೂನಿಯರ್ ಕಾಲೇಜು ಉಪ್ಪುಂದ ಹಾಗೂ ಪದವಿ ಶಿಕ್ಷಣವನ್ನು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮುಗಿಸಿದ್ದು, ಇದೀಗ ಯಾವುದೇ ಕೋಚಿಂಗ್ ಇಲ್ಲದೇ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಚಂದ್ರ ದೇವಾಡಿಗ ಅವರು ಸಾಲಿಮಕ್ಕಿ ಓಣಿಮನೆ ನಾರಾಯಣ ದೇವಾಡಿಗ ಹಾಗೂ ನಾಗಮ್ಮ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಅರೆಹೊಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ನಾವುಂದ ನಾಲ್ಕನೆ ಅವಧಿಗೆ ಅವಿರೋಧವಾಗಿ ಪನರಾಯ್ಕೆಗೊಂಡಿರುತ್ತಾರೆ. ಸಂಘದ ಉಪಾಧ್ಯಕ್ಷರಾಗಿ ದೇವಕಿ ಕೆ. ಚಂದನ್ ಹಾಗೂ ನಿರ್ದೇಶಕರುಗಳಾಗಿ ವಿವೇಕಾನಂದ ಆಚಾರ್, ಸುರೇಶ್ ಪೂಜಾರಿ, ರಾಜು ಎನ್. ದೇವಾಡಿಗ, ಕಮಲಾ ದೇವಾಡಿಗ, ಬೇಬಿ ಪೂಜಾರಿ ಬೇಡಿತ್ಲು, ಶಾರದಾ ಪೂಜಾರಿ, ಬೇಬಿ ಪೂಜಾರಿ ಚೋದ್ರಿಯಂಗಡಿ, ಮುತ್ತು, ಇಂದಿರಾ ದೇವಾಡಿಗ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನಿಯುಕ್ತರಾಗಿರುವ ಕಾವ್ರಾಡಿ ಪ್ರದೀಪ್‌ಕುಮಾರ ಶೆಟ್ಟಿ ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ಧನ್ ತೋನ್ಸೆ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರ ಶಿಫಾರಾಸಿನನ್ವಯ ಈ ನೇಮಕಾತಿ ನಡೆದಿದೆ. ಹಿಂದೆ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪ್ರದೀಪ್ ಶೆಟ್ಟಿ ರಾಜಕೀಯ ಕ್ಷೇತ್ರವಲ್ಲದೆ, ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿದ್ದಾರೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಬಿ. ರಘುರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ನರಸಿಂಹಮೂರ್ತಿ, ದೇವಾನಂದ ಶೆಟ್ಟಿ ಹಳ್ನಾಡು, ಸಂತೋಷ್ ಶೆಟ್ಟಿ ಹಕ್ಲಾಡಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ ಉಪ್ಪುಂದ, ತಾಲ್ಲೂಕು ಪಂಚಾಯಿತಿ ಸದಸ್ಯ ವಾಸುದೇವ ಪೈ ಸಿದ್ದಾಪುರ, ವಾಸುದೇವ ಯಡಿಯಾಳ, ಚಂದ್ರಶೇಖರ ಪೂಜಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅರೆಹೊಳೆ ಫ್ರೆಂಡ್ಸ್ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಫೆ.೨ರ ಶನಿವಾರ ಸಂಜೆ ಏಳು ಗಂಟೆಗೆ ಚಾಲನೆ ದೊರೆಯಲಿದೆ. ಅರೆಹೊಳೆಯಲ್ಲಿ ವಾಲಿಬಾಲ್ ಪಂದ್ಯಾಟ ಅದ್ದೂರಿಯಾಗಿ ನಡೆಯಲಿದೆ, ಉದ್ಘಾಟನಾ ಸಮಾರಂಭ ನಂತರ ಪಂದ್ಯಾಟ ಜರುಗಲಿದೆ. ಅರೆಹೊಳೆ ಫ್ರೆಂಡ್ಸ್ ಪಂದ್ಯಾಟದಲ್ಲಿ ಉಳಿತಾಯವಾದ ಹಣವನ್ನು ಅರೆಹೊಳೆ ದೇವಸ್ಥಾನಕ್ಕೆ ನೀಡಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಡು ರಸ್ತೆಯಲ್ಲಿ ಹಾಡಹಗಲೇ ರಾಜಾರೋಷವಾಗಿ ಹೊಡೆದಾಟಕ್ಕೆ ನಿಂತ ವಿದ್ಯಾರ್ಥಿಗಳ ದಂಡು, ಇಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಹಲ್ಲೆಗೊಳಗಾದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಂಡಾರ್‌ಕಾರ‍್ಸ್ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಗಣೇಶ್ ಹಾಗೂ ಬೇರೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಅಂತಿಮ ಬಿಕಾಂ ವಿದ್ಯಾರ್ಥಿ ಮಿಥುನ್ ಹಾಗೂ ದ್ವಿತೀಯ ಬಿಬಿಎಂ ವಿದ್ಯಾರ್ಥಿ ಅಕ್ಷಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದು, ಇಬ್ಬರು ಗಂಭೀರ ಗಾಯಗೊಂಡು, ಹೊಡೆದಾಟ ತಪ್ಪಿಸಲು ಹೋದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯಾರ್ಥಿಗಳು ನೋಡನೋಡುತ್ತಿದ್ದಂತೆಯೇ ಸಿನಿಮೀಯ ಮಾದರಿಯಲ್ಲಿ ಗಂಭೀರ ಹಲ್ಲೆ ನಡೆಸಿದ್ದು, ಸಿಕ್ಕಸಿಕ್ಕ ಕಡೆ ಹೊಡೆದಿದ್ದಾರೆ. ಇದೇ ಸಂದರ್ಭ ಸ್ಥಳಕ್ಕೆ ಬಂದ ಕುಂದಾಪುರ ಪುರಸಭೆಯ ಸದಸ್ಯ ಗಿರೀಶ್ ಜಿ.ಕೆ ಅವರು ಹೊಡೆದಾಟ ಬಿಡಿಸಲು ಹೋದಾಗ ಅವರಿಗೂ ಹಲ್ಲೆಗೆ ಮುಂದಾದ ತಂಡ ಅವರ ಕಾರಿನ ಕೀ ಕಿತ್ತುಕೊಂಡಿದ್ದಾರೆ. ಆದರೆ ಸ್ಥಳೀಯರು ಒಟ್ಟಾಗುತ್ತಿದ್ದಂತೆ ದುಷ್ಕರ್ಮಿ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಿಥುನ್ ಅವರ ತಲೆ, ಕಾಲು ಹಾಗೂ ಮುಖಕ್ಕೆ ಗಂಭೀರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಭರತ್ ಹಾಗೂ ಯತೀಶ್ ಕಾಂಚನ್ ಆಪ್ತ ಸ್ನೇಹಿತರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಇಬ್ಬರೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಭರತ್ ಕಳೆದ ಎರಡು ವರ್ಷದಿಂದ ಆಟೋರಿಕ್ಷಾ ಓಡಿಸಿ ಜೀವನ ನಡೆಸುತ್ತಿದ್ದರೆ, ಯತೀಶ್ ಕಳೆದ ಬಾರಿ ಕುಂದಾಪುರದಿಂದ ವಿಧಾನ ಸಭೆಗೆ ಸ್ಪರ್ಧಿಸಿದ ರಾಜೇಶ್ ಮಲ್ಲಿ ಸಹಾಕಯರಾಗಿ ಕೆಲಸ ಮಾಡುತ್ತಿದ್ದು, ಚುನಾವಣೆ ನಂತರ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬ್ಯಾಂಕ್ ಒಂದರ ಉದ್ಯೋಗಿ ಆಗಿದ್ದರು ಎನ್ನಲಾಗಿದೆ. ಯತೀಶ್‌ಗೆ ತಂದೆ ತಾಯಿಯಿಲ್ಲದೆ ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದು, ಬಿಕಾಂ ಪದವೀಧರ. ಭರತ್ ಬಿಬಿಎಂ ಪದವಿಧರಾಗಿದ್ದು, ತಂದೆ ರಾಮಣ್ದ ತಾಯಿ ಪಾರ್ವತಿ ಕೂಲಿ ಕಾರ್ಮಿಕರು. ಭರತ್ ಸ್ಥಳೀಯ ಸಂಘದ ಅಧ್ಯಕ್ಷರಾಗಿದ್ದು, ಓರ್ವ ತಮ್ಮ ೭ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ. ಯತೀಶ್ ಇನ್ನೆರೆಡು ದಿನದಲ್ಲಿ ಬೆಂಗಳೂರಿಗೆ ಮರಳುವವರಿದ್ದರು. ಲೋಹಿತ್ ಪೂಜಾರಿ ಪೋನ್ ಮಾಡಿ ಕರೆಯದಿದ್ದರೆ ಸ್ಥಳಕ್ಕೆ ಬರುತ್ತಿರಲಿಲ್ಲ. ಯಾರಿಗೋ ಹಾಕಿದ ಸ್ಕೆಚ್ ಇಬ್ಬರು ಪ್ರಾಣ ಸ್ನೇಹಿತರು ಪ್ರಾಣಕ್ಕೆ ಎರವಾಗಿದ್ದು ಮಾತ್ರ ವಿಪರ್ಯಾಸ. ಮರಣೋತ್ತರ ಪರೀಕ್ಷೆ ನಂತರ ಶವ ವಾರೀಸುದಾರರಿಗೆ ಬಿಟ್ಟುಕೊಟ್ಟಿದ್ದು,…

Read More